Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಹಣದಿಂದ ಬೋರ್ವೆಲ್ ಕೊರೆಸಿದ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಅತ್ತೆ-ಸೊಸೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ತಿಳಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಟೀಕೆಗಳು ಸಾಯ್ತವೆ, ಕೆಲಸಗಳು ಉಳಿತವೆ! ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆಯಾಗಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.…
ಬೆಂಗಳೂರು : ಬೈಯಪ್ಪನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ತಿಪ್ಪಣ್ಣ (33) ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ಅವರು ಪಾಳಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಮತ್ತು ಅವರ ಹೆಂಡತಿಯ ನಡುವೆ ಬಿಸಿಯಾದ ವಾಗ್ವಾದ ಪ್ರಾರಂಭವಾಯಿತು ಎಂದು ವರದಿಯಾಗಿದೆ. ಇದು ಅವರನ್ನು ತೀವ್ರ ಕ್ರಮ ತೆಗೆದುಕೊಳ್ಳಲು ಕಾರಣವಾಯಿತು ಎಂದು ನಂಬಲಾಗಿದೆ. ಈ ಹಿನ್ನಲೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ತಿಪ್ಪಣ್ಣ ತಂದೆ ನೀಡಿದಂತ ದೂರನ್ನು ಆಧರಿಸಿ, ಅವರ ಪತ್ನಿ, ಮಾವ ಹಾಗೂ ಬಾಮೈದನ ವಿರುದ್ಧ ಜೀವ ಬೆದರಿಕೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ತಿಪ್ಪಣ್ಣ ಅವರು ಕನ್ನಡದಲ್ಲಿ ಬರೆದಿರುವ ಒಂದು ಪುಟದ ಡೆತ್ ನೋಟ್ ನಲ್ಲಿ ಪತ್ನಿ ಮತ್ತು ಮಾವನ ಮೇಲೆ ಚಿತ್ರಹಿಂಸೆ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ. ಡಿಸೆಂಬರ್ 12 ರಂದು ತನ್ನ ಮಾವ ತನಗೆ ಬೆದರಿಕೆ ಹಾಕಿದ್ದರು, ನಿಮ್ಮ ಮಗಳು ಶಾಂತಿಯಿಂದ ಬದುಕಲು ಸಾಯಬೇಕು ಅಥವಾ ಕೊಲ್ಲಬೇಕು…
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕು ಹಲವೆಡೆ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಇಂದು ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 15.12.2024 ರ ಭಾನುವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.ಹೀಗಾಗಿ ಈ ಕೆಳಗಿನ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನಾಳೆ ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ದಿನಾಂಕ 15.12.2024 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-II ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ…
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನಲ್ಲಿ ವ್ಯಕ್ತಿಯೊಬ್ಬ ಭಿಕ್ಷೆ ಬೇಡುತ್ತಿರುವ ಈ ಘಟನೆ ಶನಿವಾರ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು ಈ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಹೌದು ನಾವು ರೇಲ್ವೆ ಸ್ಟೇಷನ್, ಬಸ್ ಸ್ಟಾಂಡ್, ಸಿಗ್ನಲ್ ಬಳಿ ಸಾಮಾನ್ಯವಾಗಿ ಭಿಕ್ಷುಕರನ್ನು ನೋಡುತ್ತೇವೆ. ಆದರೆ ಇಲ್ಲೊಬ್ಬ ವಿಶೇಷ ಚೇತನ ವ್ಯಕ್ತಿ ಕ್ಯೂ ಆರ್ ಕೋಡ್ ನಿಂದ ಟಿಕೆಟ್ ಪಡೆದು ಮೆಟ್ರೋ ಟ್ರೈನ್ ಅಲ್ಲಿ ಭೀಕ್ಷಾಟನೆ ಮಾಡಿದ್ದಾನೆ. ಸ್ಕಲ್ ಕ್ಯಾಪ್ ಧರಿಸಿದ ವಿಕಲಚೇತನ ವ್ಯಕ್ತಿಯೊಬ್ಬ ರೈಲಿನೊಳಗೆ ಒಬ್ಬ ಪ್ರಯಾಣಿಕನಿಂದ ಇನ್ನೊಬ್ಬನಿಗೆ ಭಿಕ್ಷೆ ಬೇಡುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಪ್ರಯಾಣಿಕರೊಬ್ಬರು ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು ಇದೀಗ ವೈರಲ್ ಆಗಿದೆ. BMRCL ಮೂಲಗಳ ಪ್ರಕಾರ, ಇದು ಶನಿವಾರದ ಘಟನೆ ಎಂದು ಹೇಳಲಾಗಿದೆ. ಆದರೆ ನಿಖರವಾದ ದಿನಾಂಕ ಮತ್ತು ಸಮಯವನ್ನು ಖಚಿತಪಡಿಸಿಕೊಳ್ಳಲು ತನಿಖೆ ಇನ್ನೂ ನಡೆಯುತ್ತಿದೆ ಎಂದು ವರದಿಗಳು ಉಲ್ಲೇಖಿಸಿವೆ.ಈ ವ್ಯಕ್ತಿ ಎಲ್ಲಿ ಹತ್ತಿದ್ದಾನೆ ಎಂದು…
ಹಾವೇರಿ : ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿಗೆ ಬೆಂಕಿ ತಗುಲಿ ಪಟಾಕಿ ಸಿಡಿದ ಪರಿಣಾಮ, ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರಿನ ಮಾಲತೇಶ್ ನಗರದ ಮನೆಯಲ್ಲಿ ಒಂದು ಘಟನೆ ನಡೆದಿದೆ. ಪಟಾಕಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬೆಂಕಿಯಲ್ಲಿ ಷಣ್ಮುಖಪ್ಪ ದೇವಗಿರಿ (55)ಎನ್ನುವ ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ ಎಂದು ಬಂದಿದೆ. ಗಣೇಶ ಹಬ್ಬ ಹಾಗೂ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡಿ ಉಳಿದಿದ್ದ ಪಟಾಕಿಯನ್ನು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದರು ಎನ್ನಲಾಗಿದೆ. ಪಟಾಕಿಗೆ ಲೈಸೆನ್ಸ್ ಪಡೆಯದೆ ಅಕ್ರಮವಾಗಿ ಸಂಗ್ರಹಿಸಿದ್ದರು ಎನ್ನಲಾಗಿದೆ. ಪಟಾಕಿ ಸಂಗ್ರಹಿಸಿ ಇಟ್ಟಿದ್ದ ಜಾಗದಲ್ಲಿ ಷಣ್ಮುಖಪ್ಪ ದೇವಗಿರಿ ಮಲಗಿದ್ದರು. ಈ ವೇಳೆ ಬೆಂಕಿ ತಗೊಳ್ಳಿ ಪಟಾಕಿ ಸಿಟಿದು ಷಣ್ಮುಖಪ್ಪ ಸ್ಥಳದಲ್ಲಿ ಸಾವನಪ್ಪಿದ್ದಾರೆ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ತಮ್ಮ ಸ್ಕೂಟರ್ಗೆ ಬಸ್ ಡಿಕ್ಕಿಯಾಗಿದೆ ಎಂದು ಆರೋಪಿಸಿ ಬಿಎಂಟಿಸಿ ಬಸ್ ಚಾಲಕನ ಮೇಲೆ ಮಹಿಳೆ ಹಾಗೂ ಆಕೆಯ ಸೋದರ ಹಲ್ಲೆ ನಡೆಸಿರುವ ಘಟನೆ ಮಾಗಡಿ ರಸ್ತೆಯ ಸುಮನಹಳ್ಳಿ ಮೇಲೇತುವೆ ಬಳಿ ಶನಿವಾರ ನಡೆದಿದೆ. ಕಾಮಾಕ್ಷಿಪಾಳ್ಯದ ಸವಿತಾ ಹಾಗೂ ಆಕೆಯ ಸೋದರ ಚಂದ್ರಶೇಖರ್ಮೇಲೆ ಆರೋಪ ಬಂದಿದ್ದು, ಈ ಘಟನೆ ಸಂಬಂಧ ಬಸ್ ಚಾಲಕ ಅಮರೇಶ್ ನೀಡಿದ ದೂರಿನ ಮೇರೆಗೆ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತನ್ನ ಇಬ್ಬರು ಮಕ್ಕಳ ಜತೆ ಸುಮನಹಳ್ಳಿ ಮೇಲೇತುವೆ ಕಡೆಯಿಂದ ಸವಿತಾ ಮನೆಗೆ ಮರಳುವಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಮಹಿಳೆಯಿಂದ ಚಾಲಕನ ಮೇಲೆ ಹಲ್ಲೆ ಆರೋಪ ಕೇಳಿಬಂದಿದ್ದು, ಬಿಎಂಟಿಸಿ ಬಸ್ ಡಿಪೋ 27ರ ಎಲೆಕ್ಟ್ರಿಕ್ ವಾಹನ ಕೆ 51 ಎಕೆ 4215 ಬಸ್ ಚಾಲಕ ಅಮರೇಶ್ ಮೇಲೆ ಮಹಿಳೆ ಹಲ್ಲೆ ಮಾಡಿದ್ದಾಳೆ. ಜಾಲಹಳ್ಳಿ ಕ್ರಾಸ್ನಿಂದ ಕೆಆರ್ ಮಾರ್ಕೆಟ್ ಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು. ಬಲಭಾಗದಲ್ಲಿ ಬಿಎಂಟಿಸಿ…
ಬೆಂಗಳೂರು : ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ .ವೈ ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು BY ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ. ‘’ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ದುರಂತ ಸಂಭವಿಸಿದ್ದು ಕಟ್ಟಡದ ಕಾಮಗಾರಿ ನಡೆಸುತ್ತಿದ್ದ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ, ಬೆಂಗಳೂರಿನ ಜಿ ಎನ್ ಆರ್ ಕಲ್ಯಾಣ ಮಂಟಪದ ಬಳಿಯ ಕಟ್ಟಡದಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಕಲ್ಬುರ್ಗಿ ಮೂಲದ ಶರಣಪ್ಪ (42) ಮೃತಪಟ್ಟಿರುವ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ. ಇನ್ನು ಈ ಒಂದು ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಕಾರ್ಮಿಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದ್ದು, ಕೂಡಲೇ ಅವರನ್ನು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಟ್ಟಡದ ಮೇಲಿದ್ದ ಈ ಇಬ್ಬರು ಕಾರ್ಮಿಕರು ಬಿದ್ದಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಟೂರಿಸ್ಟ್ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಸಂಪೂರ್ಣವಾಗಿ ವಾಹನಕ್ಕೆ ಬೆಂಕಿ ವ್ಯಾಪಿಸಿದ ಪರಿಣಾಮ, ಪೂರ್ತಿಯಾಗಿ ವಾಹನ ಸುಟ್ಟು ಕರಕಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಅದೃಷ್ಟವಶಾತ್ ಟೂರಿಸ್ಟ್ ವಾಹನದಲ್ಲಿ ಸಂಚರಿಸುತ್ತಿದ್ದ 11 ಜನರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ.ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ. ಕೂಡಲೇ ಅಗ್ನಿಶಾಮಕ ದಳದವರಿಗೆ ಘಟನೆ ಕುರಿತು ಮಾಹಿತಿ ನೀಡಿದ್ದು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಟೂರಿಸ್ಟ್ ವಾಹನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದರು.ಬಳಿಕ ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.
ಬೆಂಗಳೂರು : ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಪಟ್ಟಂತೆ ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ತೀವ್ರವಾಗುವ ನಡೆದಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಬಾಂಬನ್ನು ಸಿಡಿಸಿದ್ದು, ವಕ್ಫ್ ಆಸ್ತಿ ಕಬ್ಬಳಿಕೆಯ ಬಗ್ಗೆ ಮೌನವಾಗಿರಲು ಬಿವೈ ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು BY ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ.…













