Author: kannadanewsnow05

ಕೋಲಾರ : ನಿನ್ನೆ ತಾನೇ ಯಾದಗಿರಿಯಲ್ಲಿ ನೀರು ಕುಡಿಯಲು ಹೊಂಡಕ್ಕೆ ತೆರಳಿದ ಮೂವರು ಬಾಲಕರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಘಟನೆ ನಡೆದಿದ್ದು, ಇದೀಗ ಕೋಲಾರದಲ್ಲಿ ಕೂಡ 10 ವರ್ಷದ ಬಾಲಕಿಯೋರ್ವಳು ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಮೀನಾಕ್ಷಿ (10) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಬಾಲಕಿಯಾಗಿದ್ದು, ತೋಟದಲ್ಲಿ ‌ಆಟವಾಡುತ್ತಿದ್ದ ಮಗು ಪಕ್ಕದ ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇತ್ತೀಚಿಗೆ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸುಹಾಸ್ ಶೆಟ್ಟಿ ಓರ್ವ ರೌಡಿ ಶೀಟರ್. ಈ ವ್ಯಕ್ತಿ ಈ ಹಿಂದೆ ಓರ್ವ ಹಿಂದೂ ಹಾಗೂ ಓರ್ವ ಮುಸ್ಲಿಮ್‌ ಯುವಕನನ್ನು ಕೊಲೆ ಮಾಡಿದ್ದಾನೆ ಎಂದು ಅವರು ಆರೋಪಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ರೌಡಿ ಶೀಟರ್, ಒಬ್ಬ ಹಿಂದೂ ಹಾಗೂ ಓರ್ವ ಮುಸ್ಲಿಮ್ ವ್ಯಕ್ತಿಯನ್ನು ಕೊಲೆ ಮಾಡಿದ್ದಾನೆ. ಇದರ ಬಗ್ಗೆ ಯಾರೂ ಮಾತನಾಡುವುದಿಲ್ಲ. ಹಿಂದೂ ಕಾರ್ಯಕರ್ತ ಅಂದ್ರೆ ಏನರ್ಥ? ಹಿಂದೂ ಎನ್ನುವುದು ಸಂಘಟನೆ ಅಲ್ಲ ಹಿಂದೂ ಒಂದು ಧರ್ಮ. ಹಿಂದೂ ಪರ ಸಂಘಟನೆ ಎಂದು ಹೇಳಿ. ನಾನೂ ಹಿಂದೂವೇ, ಸುಹಾಸ್ ನನ್ನ ಕಾರ್ಯಕರ್ತನಾ? ಎಂದು ಪ್ರಶ್ನಿಸಿದರು. ರೌಡಿ ಶೀಟರ್ ಕ್ರಿಮಿನಲ್ ಎಲಿಮೆಂಟ್ಸ್ ಗಳು ಕೆಲ ಹಿಂದೂ ಸಂಘಟನೆಗಳನ್ನು ಸೇರಿಕೊಂಡಿದ್ದಾರೆ. ದಂಧೆ ಮಾಡಲು ಬೆಟ್ಟಿಂಗ್ ಮಾಫಿಯಾ ಸ್ಯಾಂಡ್ ಮಾಫಿಯಾ ಮಟ್ಕಾ ದಂಧೆ ನಡೆಸಲು ಸಂಘಟನೆ ಸೇರಿಕೊಂಡಿದ್ದಾರೆ. ಧರ್ಮದ ಹೆಸರು ದುರುಪಯೋಗ ಮಾಡಿಕೊಂಡು…

Read More

ಬೆಂಗಳೂರು : ಕಲಬುರ್ಗಿಯಲ್ಲಿ ನೀಟ್ ಪರೀಕ್ಷೆಯ ವೇಳೆ ವಿದ್ಯಾರ್ಥಿಯಿಂದ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವು ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆ ಮಾಡಿದೆ ಎಂದು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಟ್ ಪರೀಕ್ಷೆ ವೇಳೆ ಪರೀಕ್ಷಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬ್ರಾಹ್ಮಣ ಸಭಾ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಈ ಕುರಿತು ಮಾಹಿತಿ ನೀಡಿದರು. ಜನಿವಾರ ತೆಗೆದಿದ್ದರಿಂದ ಧಾರ್ಮಿಕ ಹೀಗೆ ಧಕ್ಕೆಯಾಗಿದೆ. ಅಧಿಕಾರಿಗಳು ಎಲ್ಲ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳ ಜನಿವಾರ ಒತ್ತಗಿಸುತ್ತಿದ್ದಾರೆ. ಇದರಿಂದ ಬ್ರಾಹ್ಮಣ ಧಾರ್ಮಿಕ ಆಚರಣೆಗೆ ತಕ್ಕಂತೆ ಆಗಿದೆ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಅವರು ಹೇಳಿಕೆ ನೀಡಿದರು.

Read More

ಬೆಂಗಳೂರು : ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣ ಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದರು. ಈ ಆರೋಪಕ್ಕೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರ ಹಾಕಿದ್ದು ಇವರ ರಾಜಕೀಯ ಬೇಳೆ ಬೇಯಿಸಿಕೊಳ್ಳೋದಕ್ಕೆ ಯಾರ್ಯಾರು ಸಾಯ್ತಿದ್ದಾರೆ ಎಂದು ಆಕ್ರೋಶ ಅವರ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಛಲವಾದಿ ನಾರಾಯಣ ಸ್ವಾಮಿ ಏನೇನೋ ಮಾತಾಡ್ತಾರೆ. ನಿಮ್ಮ ರಾಜಕೀಯ ಲಾಭಕ್ಕೋಸ್ಕರ ಉಪಯೋಗಿಸಲು ಹೋದ್ರೆ ಕೊನೆಯಲ್ಲಿ ಸಮಸ್ಯೆ ಅನುಭವಿಸುವವರು ಯಾರು? ಇವರ ರಾಜಕಾರಣ ಬೇಳೆ ಬೇಯಿಸಿಕೊಳ್ಳಲು ಕೊನೆಗೆ ಯಾರು ಯಾರೋ ಸಾಯ್ತಿದ್ದಾರೆ. ಅಧಿಕಾರ ರಾಜಕಾರಣಕ್ಕೋಸ್ಕರ ಯಾರು ಯಾರೋ ತ್ಯಾಗ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಆ್ಯಂಟಿ ಕಮ್ಯುನಲ್ ಫೋರ್ಸ್ ಕೂಡ ಅನುಷ್ಟಾನಕ್ಕೆ ತರುತ್ತೇವೆ. ದಕ್ಷಿಣ ಕನ್ನಡ ಹೀಗೇ ಆದರೆ ಯಾರು ಬಂಡವಾಳ ಹೂಡಿಕೆ ಬರುತ್ತಾರೆ? ಈ ರೀತಿ ಹೇಳಿಕೆ ಈ ತರಹ ರಾಜಕಾರಣ ಮಾಡಿದರೆ ಇವರ ಉದ್ದೇಶ ಏನು? ಇದೇ ತರಹ…

Read More

ಕಲಬುರ್ಗಿ : ನಿನ್ನೆ ಕಲಬುರ್ಗಿಯಲ್ಲಿ ನೀಟ್ ಪರೀಕ್ಷೆಯ ವೇಳೆ ಅಧಿಕಾರಿಗಳು ವಿದ್ಯಾರ್ಥಿಯಿಂದ ಜನಿವಾರ ತೆಗೆಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈ ಕುರಿತು ಈಗಾಗಲೇ ಇಬ್ಬರೂ ಸಿಬ್ಬಂದಿಗಳನ್ನು ಅರೆಸ್ಟ್ ಮಾಡಿ ವಿಚಾರಣೆಗೊಳಪಡಿಸಲಾಗಿದೆ. ವಿಚಾರಣೆ ವೇಳೆ ಸಿಬ್ಬಂದಿಗಳು ನಾವು ಯಾವುದೇ ವಿದ್ಯಾರ್ಥಿಗೂ ಜನಿವಾರ ತೆಗೆಯಿರಿ ಎಂದು ಹೇಳಿಯೇ ಇಲ್ಲ ಎಂದು ತಿಳಿಸಿದ್ದಾರೆ. ಸಿಬ್ಬಂದಿಗಳು ಹೇಳುವ ಪ್ರಕಾರ, ಪರೀಕ್ಷೆ ಬರೆಯಲು ಬಂದ ಎಲ್ಲ ವಿದ್ಯಾರ್ಥಿಗಳನ್ನು ಸಾಲಾಗಿ ನಿಲ್ಲಿಸಿ ನೀಟ್​ ಪರೀಕ್ಷಾ ನಿಯಮಗಳನ್ನು ತಿಳಿಸಿದೆವು. ಬಳಿಕ, ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಡಿಸಿದೆವು. ಈ ವೇಳೆ, ವಿದ್ಯಾರ್ಥಿಗಳು ತಮ್ಮ ಕೈ ಯಲ್ಲಿ ಕಟ್ಟಿರುವ ದಾರ, ಕೊರಳಲ್ಲಿನ ತಾಯತಗಳನ್ನು ತೆಗೆದರು. ಎಲ್ಲ ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಚಿಹ್ನೆಗಳನ್ನು ತೆಗೆಯುತ್ತಿದ್ದಾರೆ. ಈ ವೇಳೆ ಎಲ್ಲ ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಚಿಹ್ನೆಗಳನ್ನು ತೆಗೆಯುತ್ತಿದ್ದಂತೆ ಶ್ರೀಪಾದ ಪಾಟೀಲ್​ ಕೂಡ ಜನಿವಾರ ತೆಗೆದಿದ್ದಾನೆ. ನಾವು ಜನಿವಾರ ತೆಗೆದಿಡು ಅಂತ ಹೇಳಿಲ್ಲ. ತಾನಾಗಿಯೇ ತೆಗೆದಿದ್ದಾನೆ. ಬೇರೆ ಯಾವ ಬ್ರಾಹ್ಮಣ ವಿದ್ಯಾರ್ಥಿ ಕೂಡ ಜನಿವಾರ ತೆಗೆದಿಲ್ಲ. ನಾವು ಜನಿವಾರ ತೆಗೆಸುತ್ತಿರಲಿಲ್ಲ.…

Read More

ಉಡುಪಿ : ಇತ್ತೀಚಿಗೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ ಶೆಟ್ಟಿ ಮತ್ತೆ ಇಡೀ ರಾಜ್ಯದ ಭಾರಿ ಆಗ್ರೋಹಕ್ಕೆ ಕಾರಣವಾಗಿದೆ ಇನ್ನು ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ, ಸಿಎಂ ಸಿದ್ದರಾಮಯ್ಯನನ್ನು ಕೊಂದರೆ ಹಿಂದುಗಳಿಗೆ ನೆಮ್ಮದಿ ಇರುತ್ತದೆ ಎಂದು ಕಮೆಂಟ್ ಹಾಕಿದ್ದ ಸದ್ಯ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪೊಲೀಸರು ಕಮೆಂಟ್ ಹಾಕಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಸಂಪತ್ ಸಾಲಿಯಾನ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳ ಟೌನ್ ಠಾಣೆ ಪೋಲಿಸರು ಇದೀಗ ಕಮೆಂಟ್ ಹಾಕಿದ್ದ ಸಂಪತ್ ನನ್ನು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಸಂಪತ್ ಹೋಂ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಕಾರ್ಕಳದಲ್ಲಿ ಹೋಂ ಗಾರ್ಡ್ ಸಂಪತ್ ಸಾಲಿಯಾನ ಅರೆಸ್ಟ್ ಮಾಡಿ ಇದೀಗ ಪೊಲೀಸರ ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) ದಿಂದ ಆಗಾಗ ಯಡವಟ್ಟುಗಳು ಆಗುತ್ತಿರುತ್ತವೆ. ಇದೀಗ ಇಂದು ಕೆಎಎಸ್ ಪರೀಕ್ಷೆಯ ವೇಳೆ, ಪರೀಕ್ಷಾ ಕೊಠಡಿಗೆ ಬರುವ ಮೊದಲೇ ಪ್ರಶ್ನೆ ಪತ್ರಿಕೆಗಳ ಬಂಡಲ್ ಓಪನ್ ಆಗಿರಬೇಕು ಅಭ್ಯರ್ಥಿಗಳು ಗಂಭೀರವಾದ ಆರೋಪ ಮಾಡಿದ್ದಾರೆ. ಹೌದು ಕೆಪಿಎಸ್‌ಸಿ ಇಂದ ಮತ್ತೆ ಯಡವಟ್ಟು ಆಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಆರೋಪ ಕೇಳಿ ಬಂದಿದೆ. ಇಂದು ನಡೆದಿರುವ ಎರಡನೇ ದಿನದ KAS ಮುಖ್ಯ ಪರೀಕ್ಷೆ ವೇಳೆ ಪರೀಕ್ಷೆಯ ಪ್ರಬಂಧ ಬರವಣಿಗೆ ಪತ್ರಿಕೆ ಓಪನ್ ಆಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಪರೀಕ್ಷೆಯ ಕೊಠಡಿಗೆ ಬರುವ ಬಂಡಲ್ ಓಪನ್ ಆಗಿರುವ ಆರೋಪ ಇದೀಗ ಕೇಳಿಬರುತ್ತಿದೆ. ಕೊಠಡಿಗೆ ಬರುವ ಮೊದಲೇ ಪ್ರಶ್ನೆ ಪತ್ರಿಕೆಯ ಬಂಡಲ್ ಓಪನ್ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಕೆಪಿಎಸ್ಸಿ ಅಭ್ಯರ್ಥಿಗಳು ಗಂಭೀರವಾದ ಆರೋಪ ಮಾಡಿದ್ದಾರೆ. ಬೆಂಗಳೂರಿನ ಕಸ್ತೂರಬಾ ನಗರದ ಬಿಬಿಎಂಪಿ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು ರೂಮ್ ನಂಬರ್ 6 ರಲ್ಲಿ ಒಂದು ಬಂಡಲ್ ಓಪನ್ ಮಾಡಲಾಗಿದೆ.…

Read More

ಬೆಂಗಳೂರು : ಬೆಂಗಳೂರಿನಲ್ಲಿ ಏಕಾಏಕಿ ನಿಗೂಢವಾದ ಸ್ಪೋಟದಿಂದ ಸ್ಥಳೀಯ ನಿವಾಸಿಗಳು ಬೆಚ್ಚಿ ಬಿದ್ದಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಬನಹಳ್ಳಿ ಎಂಬಲ್ಲಿ ನಿಗೂಢವಾದ ಸ್ಪೋಟ ಸಂಭವಿಸಿದೆ. ಹೌದು ಚಂದಾಪುರ ಸಮೀಪದ ಬನಹಳ್ಳಿಯಲ್ಲಿ ಸ್ಪೋಟಗೊಂಡಿದ್ದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನಹಳ್ಳಿ ಎಂಬಲ್ಲಿ ನಿಗೂಢ ಸ್ಫೋಟದಿಂದ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಸ್ಪೋಟದ ತೀವ್ರತೆಗೆ ಕಾಂಕ್ರೀಟ್ ರಸ್ತೆ ಪೀಸ್ ಆಗಿದೆ. 100 ಮೀಟರ್ ದೂರಕ್ಕೆ ಕಾಂಕ್ರೀಟ್ ಮತ್ತು ಜಲ್ಲಿಕಲ್ಲು ಸಿಡಿದು ಬಿದ್ದಿದೆ. ನೀರಿನ ಟ್ಯಾಂಕರ್ ಹೋದ ಕೆಲ ಹೊತ್ತಿನಲ್ಲಿಯೇ ಈ ಒಂದು ಸ್ಪೋಟ ಸಂಭವಿಸಿದೆ. ನಿಗೂಢ ಸ್ಫೋಟದ ತೀವ್ರತೆಗೆ ಬೆಂಕಿ ಸಹ ಹೊತ್ತಿಕೊಂಡಿದೆ. ಆತಂಕಗೊಂಡು ಮನೆಯ ಒಳಗಡೆ ಸ್ಥಳೀಯರು ಓಡಿದ್ದಾರೆ. ಈ ನಿಗೂಢವಾದ ಸ್ಪೋಟಕ್ಕೆ ಇದುವರೆಗೂ ಕಾರಣ ತಿಳಿದು ಬಂದಿಲ್ಲ.

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಎಂದು ದಾಖಲಾಗಿದ್ದ ವಿಚಾರಣಾಧೀನ ಕೈದಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ತುಮಕೂರಿನ ಬಸ್ ನಿಲ್ದಾಣದಲ್ಲಿ ಪೊಲೀಸರು ವಿಚಾರಣಾಧಿನ ಕೈದಿಯನ್ನು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ನಿನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ನಲ್ಲಿ ವಿಚಾರಣಾಧೀನ ಕೈದಿ ಚಂದ್ರಶೇಖರ್ ಚಿಕಿತ್ಸೆಗೆ ಎಂದು ದಾಖಲಾಗಿದ್ದ ಈ ವೇಳೆ ಪೊಲೀಸರ ಕಣ್ತಪ್ಪಿಸಿ ಕೈದಿ ಚಂದ್ರಶೇಖರ್ ಆಸ್ಪತ್ರೆಯಿಂದ ಪರಾರಿಯಾಗಿದ್ದ.ಇದೀಗ ಆಸ್ಪತ್ರೆಯಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಚಂದ್ರಶೇಖರ್ ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತುಮಕೂರಿನ ಚಂದ್ರಶೇಖರ್ ನನ್ನು ಪೋಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ ನಿನ್ನೆ ರಾತ್ರಿ 8:30 ಸುಮಾರಿಗೆ ವಿಚಾರಣಾಧಿಕಾರಿ ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದಾನೆ. ಚಂದ್ರಶೇಖರನನ್ನು ತುಮಕೂರಿನಿಂದ ಬೆಂಗಳೂರಿಗೆ ಪೊಲೀಸರು ಕರೆ ತಂದಿದ್ದು ವಿವಿ ಪುರಂ ಠಾಣೆಯಲ್ಲಿ ಕೈದಿಯನ್ನು ಇರಿಸಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಕೊಲೆಯಾಗಿದ್ದು ಪತಿ-ಪತ್ನಿಯ ನಡುವೆ ಕೇವಲ ಮೊಬೈಲ್ ಸ್ಪೀಕರ್ ಆನ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ ಪತ್ನಿ ತನ್ನ ಪತಿಗೆ ಮೊಬೈಲ್ ಸ್ಪೀಕರ್ ಆನ್ ಮಾಡಲು ಹೇಳಿದ್ದಾಳೆ ಇದೇ ವಿಚಾರಕ್ಕೆ ಗಲಾಟೆ ನಡೆದು ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪತ್ನಿಯ ಕತ್ತು ಹಿಸುಕಿ ಕೊಂದ ಆರೋಪಿಯನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ನಮಿತಾ ಸಾಹು (43) ಕೊನೆಯಾದವರು. ಲೋಕೇಶ್ ಕುಮಾರ್ ಗೆಹ್ಲೋಟ್ ಎಂಬಾತ ಬಂಧಿತ ಕೊಲೆ ಆರೋಪಿ ಎಂದು ತಿಳಿದುಬಂದಿದೆ. ರಾಜಸ್ಥಾನದ ಲೋಕೇಶ್ ಕುಮಾರ್, ಕಬ್ಬನ್ ಪೇಟೆಯಲ್ಲಿ ಫೋಟೋ ಸ್ಟುಡಿಯೋ ಹೊಂದಿದ್ದ. ಐದು ವರ್ಷಗಳ ಹಿಂದೆ ಮ್ಯಾಟ್ರಿಮೋನಿ ಮೂಲಕ ಪರಿಚಯವಾದ ನಮಿತಾ ಸಾಹು ಜೊತೆ ಮದುವೆಯಾಗಿ ಮಹಾಗಣಪತಿ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ಏಪ್ರಿಲ್ 24ರಂದು ಮನೆಯಲ್ಲಿದ್ದ ಲೋಕೇಶ್ ಕುಮಾರ್‌ಗೆ ಪತ್ನಿ ನಮಿತಾ ಸಾಹು ಸಹೋದರ ಕರೆ ಮಾಡಿದ್ದರು. ಈ ವೇಳೆ…

Read More