Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಕಲಬುರ್ಗಿಯಲ್ಲಿ ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಗಳ ವಿರುದ್ಧ FIR ದಾಖಲಾಗಿದೆ. ಸಿಬ್ಬಂದಿಗಳಾದ ಶರಣಗೌಡ ಮತ್ತು ಗಣೇಶ್ ವಿರುದ್ಧ ಪರೀಕ್ಷಾರ್ಥಿ ಶ್ರೀಪಾದ ಪಾಟೀಲ್ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ ಎಂದು ಕಲ್ಬುರ್ಗಿ ನಗರ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಹೇಳಿಕೆ ನೀಡಿದರು. ನಿನ್ನೆ ಕಲಬುರ್ಗಿಯ ಸೆಂಟ್ ಮೇರಿ ಶಾಲೆಯಲ್ಲಿ ನೀಟ್ ಪರೀಕ್ಷೆ ಇತ್ತು ಈ ವೇಳೆ ಅಧಿಕಾರಿಗಳು ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಗೆ ಶನಿವಾರ ತೆಗೆದು ಒಳಗಡೆ ಹೋಗು ಎಂದು ಸೂಚನೆ ನೀಡಿದರು ಬ್ರಾಹ್ಮಣ ಸಂಘಟನೆ ಪರೀಕ್ಷಾ ಕೇಂದ್ರದ ಮುಂದೆ ಬೃಹತ್ ಪ್ರತಿಭಟನೆ ನಡೆಸಿತು ವಿದ್ಯಾರ್ಥಿ ಪರೀಕ್ಷೆ ಬರೆದ ಬಳಿಕ ಆತನಿಗೆ ಅಲ್ಲಿಯೇ ಶಾಸ್ತ್ರೋಕ್ತವಾಗಿ ಮತ್ತೆ ಜನಿವಾರ ಧಾರಣೆ ಮಾಡಲಾಯಿತು. ಪರೀಕ್ಷೆ ಬರೆದು ಬಂದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶ್ರೀಪಾದ್ ಪಾಟೀಲ್ ಅಧಿಕಾರಿಗಳ ಸೂಚನೆಯ ಮೇರೆಗೆ ನಾನು ಜನಿವಾರ ತೆಗೆದು ಪರೀಕ್ಷೆ ಬರೆಯಲು ತೆರಳಿದ್ದೇ ಆದರೆ ಇದರಿಂದ ಮಾನಸಿಕವಾಗಿ ನೊಂದಿದ್ದು ಪರೀಕ್ಷೆಯಲ್ಲಿ ರೂಲ್…
ಬೆಂಗಳೂರು : ಕನ್ನಡಿಗರ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಇಂದು ಬೆಂಗಳೂರಿನ ಫಿಲಂ ಕೆಂಬರ್ ನಲ್ಲಿ ಮಹತ್ವದ ಸಭೆ ನಡೆಯಿತು. ಈ ಒಂದು ಸಭೆಯಲ್ಲಿ ಇನ್ಮುಂದೆ ಸೋನು ನಿಗಮ್ ಅವರಿಂದ ಯಾವುದೇ ಕನ್ನಡ ಹಾಡು ಹಾಡಿಸದಿರುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಹಾಗಾಗಿ ಸೋನು ನಿಗಮ್ ಗೆ ಬಹುತೇಕ ಕನ್ನಡ ಚಿತ್ರರಂಗದಿಂದ ನಿಷೇಧಿಸಲಾಗಿದೆ. ಈ ಕುರಿತು ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಸಭೆಯ ಬಳಿಕ ಮಾತನಾಡಿ, ಯಾವುದೇ ಚಟುವಟಿಕೆಗಳಲ್ಲಿ ಸೋನು ಜೊತೆ ಭಾಗಿಯಾಗಬಾರದು. ಸೋನು ನಿಗಮ್ ರಿಂದ ಕನ್ನಡ ಹಾಡುಗಳನ್ನು ಹಾಡಿಸದಿರಲು ನಿರ್ಧರಿಸಲಾಗಿದ್ದು, ಇನ್ಮುಂದೆ ಸೋನು ನಿಗಮ ಅವರಿಂದ ಮ್ಯೂಸಿಕಲ್ ಮಾಡಿಸಲ್ಲ ಎಂದು ಬೆಂಗಳೂರಿನಲ್ಲಿ ಫಿಲಂ ಅಧ್ಯಕ್ಷ ನರಸಿಂಹಲು ಹೇಳಿಕೆ ನೀಡಿದರು ಕಾರ್ಯಕ್ರಮ ಒಂದರಲ್ಲಿ ಕನ್ನಡಿಗರ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಸೋನು ನಿಗಮ್, ಘಟನೆ ಬಳಿಕ ಇದುವರೆಗೂ ಸೋನು ನಿಗಮ್ ಕನ್ನಡಿಗರಿಗೆ ಕ್ಷಮೆ ಹೇಳಿಲ್ಲ. ಈ ಕ್ಷಣದಿಂದಲೇ ಸೋನುಗೆ ಅಸಹಕಾರ ತೋರಿಸಬೇಕೆಂದು ಫಿಲಂ ಚೇಂಬರ್ ನಿರ್ಧಾರ ಕೈಗೊಂಡಿದೆ ಗಾಯಕ…
ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರವಾದ ದುರಂತ ನಡೆದಿದ್ದು, ಏಕಾಏಕಿ ನಾಡಕಚೇರಿಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಾಡಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ. ಮೇಲ್ಛಾವನಿ ಏಕಾಏಕಿ ಕುಸಿದು ಬೀಳುತ್ತಿದ್ದಂತೆ ಕಚೇರಿಯಲಿದ್ದ ಅಧಿಕಾರಿಗಳು ಮತ್ತು ಪತಿಗಳು ಕಚೇರಿಯಿಂದ ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ನಾಡ ಕಚೇರಿಯಲ್ಲಿದ್ದ ಉಪಕರಣಗಳು ಮತ್ತು ಕಂಪ್ಯೂಟರ್ ಸಂಪೂರ್ಣವಾಗಿ ಪೀಸ್ ಪೀಸ್ ಗಳಾಗಿವೆ. ಕಚೇರಿ ಒಳಗಿನ ಹೆಂಚುಗಳು ಎಲ್ಲಾ ಚೆಲ್ಲಾ ಪಿಲ್ಲಿಯಾಗಿ ಬಿದ್ದಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಜಯಪುರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ರಾಮನಗರ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮರಕ್ಕೆ ಕಾರುಡಿಕೆಯಾಗಿ ಮಧು ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬುವವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಮೃತರು ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಚಿರು ಎಂಬಾತನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಬ್ಬಾಳು ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆM KA 03 NA 4031 ಸಂಖ್ಯೆಯ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೋಂಡಿದೆ ಅಕ್ಕುರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಗೌರವದ ದುರಂತ ಒಂದು ಸಂಭವಿಸಿದ್ದು ನೀರು ಕುಡಿಯಲು ಹೊಂಡಕ್ಕೆ ತೆರಳಿದ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದು ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಅಂಚೋಲಾ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಅಂಚೋಲಾ ತಂಡದ ನಿವಾಸಿಗಳಾದ ಅಮರ್ (12) ಜಯ ರಾಠೋಡ್ (14) ಮತ್ತು ಕೃಷ್ಣ ರಾಠೋಡ್ (10) ಮೃತ ಬಾಲಕರು ಎಂದು ತಿಳಿದುಬಂದಿದೆ. ಕುರಿ ಕಾಯಲು ಹೋಗಿದ್ದಾಗ ನೀರು ಕುಡಿಯಲು ಹೊಂಡಕ್ಕೆ ಹೋಗಿದ್ದರು ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಂಡಕ್ಕೆ ಬಿದ್ದು ಮೂವರು ಬಾಲಕರು ಸಾವನಪ್ಪಿದ್ದಾರೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿದ್ದು ಸುಳ್ಳಾಗ ಕಾರಣಕ್ಕೆ ದಂಪತಿಗಳ ನಡುವೆ ಗಲಾಟೆ ನಡೆದಿದೆ ಈ ವೇಳೆ ಗಲಾಟೆ ವಿಕೋಪಕ್ಕೆ ಹೋದಾಗ ಅತಿ ಕೋಪದಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಮ್ಮಿಗೆಪುರದ ಗಾಣಪ್ಪ ಲೇಔಟ್ ನಲ್ಲಿ ಒಂದು ಕೊಲೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ಭಾಗ್ಯ ಎಂದು ತಿಳಿದುಬಂದಿದ್ದು, ಪತಿ ಶ್ರೀ ರಾಮ ಕೊಲೆ ಆರೋಪಿಯಾಗಿದ್ದಾನೆ. ಭಾಗ್ಯ ಹಾಗು ಶ್ರೀ ರಾಮನ ನಡುವೆ ಇಂದು ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಪತ್ನಿ ಭಾಗ್ಯಾಳನ್ನು ಪತಿ ಶ್ರೀರಾಮ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಹಾಗೂ ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ ಕೊಲೆ ಕುರಿತಂತೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಇಂಡಿಗೋ ವಿಮಾನದಲ್ಲಿ ಗಗನಸಖಿಗೆ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ದೆಹಲಿ ಮತ್ತು ಶಿರಡಿ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ವಿಮಾನ ಲ್ಯಾಂಡ್ ಆದ ತಕ್ಷಣ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಇಂಡಿಗೋ ವಿಮಾನದಲ್ಲಿ ಗಗನಸಖಿಗೆ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಅನುಚಿತವಾಗಿ ವರ್ತಿಸಿದ್ದು ಅಲ್ಲದೇ ಅಸಭ್ಯವಾಗಿ ಗಗನಸಖಿಯನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಫ್ಲೈಟ್ ಲ್ಯಾಂಡ್ ಆಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾರತ್ತಹಳ್ಳಿ ಠಾಣೆ ಪೋಲಿಸರು ಆರೋಪಿ ಶ್ರೀಕಾಂತ್ ಎನ್ನುವವನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಶ್ರೀಕಾಂತ್ (32) ಎಂಬಿಎ ಪದವೀಧರನಾಗಿದ್ದು ದೇವರಬೀಸನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಏಪ್ರಿಲ್ 30ರಂದು ರಾತ್ರಿ 11:30ರ ಸುಮಾರಿಗೆ ಇಕೋ ವರ್ಲ್ಡ್ ಮೇನ್ ಗೇಟ್ ಬಳಿ ಯುವತಿಯನ್ನು ಆರೋಪಿ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಈ ಕುರಿತು 23 ವರ್ಷದ ಯುವತಿ ನೀಡಿದ್ದ ದೂರಿನನ್ವಯ ಮಾರತ್ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಹಿನ್ನೆಲೆ? ಏಪ್ರಿಲ್ 30 ರಂದು ಇಕೋ ವರ್ಲ್ಡ್ ಮೇನ್ ಗೇಟ್ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿ ಹಿಂಭಾಗ ಸ್ಪರ್ಶಿಸಿ ಹೋಗಿದ್ದ. ಕೆಲವೇ ನಿಮಿಷಗಳಲ್ಲಿ ಪುನಃ ಹಿಂದಿನಿಂದ ಬಂದು ಮತ್ತದೇ ರೀತಿಯ ಅನುಚಿತ ವರ್ತನೆ ತೋರಿದ್ದಾನೆ. ಈ ಸಂದರ್ಭದಲ್ಲಿ ಸಮೀಪದಲ್ಲಿದ್ದ ಕೆಲವರ ಸಹಾಯ ಕೇಳಿದರೂ ಯಾರೂ ನೆರವಿಗೆ ಬರಲಿಲ್ಲ ಎಂದು ನೊಂದ ಯುವತಿ ದೂರಿನಲ್ಲಿ ಆರೋಪಿಸಿದ್ದರು.
ನವದೆಹಲಿ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಗೆ ಇಬ್ಬರು ಕನ್ನಡಿಗರು ಸೇರಿ 26 ಜನ ಬಲಿಯಾಗಿದ್ದಾರೆ. ಇದೀಗ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕವಾದ ಮಾಹಿತಿ ಹೊರಬಿದ್ದಿದ್ದು, ಪಹಲ್ಗಾಮ್ ದಾಳಿಗೂ ಮೊದಲೇ ಉಗ್ರರ ದಾಳಿ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು ಎಂದು ತಿಳಿದುಬಂದಿದೆ. ಹೌದು ಈ ಕುರಿತಂತೆ ಅಧಿಕಾರಿಯೊಬ್ಬರು ಹೇಳಿಕೆ ನೀಡಿರುವುದನ್ನು ಮಾಧ್ಯಮವೊಂದು ಸುದ್ದಿ ಪ್ರಕಟಿಸಿದೆ. ಶ್ರೀನಗರ ಮತ್ತು ಸುತ್ತಮುತ್ತಲಿನ ಹೋಟೆಲ್ಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಮತ್ತು ಸರ್ಕಾರಕ್ಕೆ ಗುಪ್ತಚರ ಮಾಹಿತಿ ನೀಡಲಾಗಿತ್ತು.ದಾಳಿಯ ಬೆದರಿಕೆಯನ್ನು ಪರಿಗಣಿಸಿ ಶ್ರೀನಗರದ ದಾಲ್ ಸರೋವರ ಮತ್ತು ಮೊಘಲ್ ಉದ್ಯಾನವನದ ಮೇಲಿರುವ ಜಬರ್ವಾನ್ ಶ್ರೇಣಿಯ ತಪ್ಪಲಿನಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿತ್ತು. ಕಾತ್ರಾದಿಂದ ಶ್ರೀನಗರವನ್ನು ಸಂಪರ್ಕಿಸುವ ಮೊದಲ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏ.19 ರಂದು ಚಾಲನೆ ನೀಡಬೇಕಿತ್ತು. ಈ ದಿನವೇ ಉಗ್ರರು ಕೃತ್ಯ…
ಕಲಬುರ್ಗಿ : ಕಳೆದ ಏಪ್ರಿಲ್ 16 ರಂದು ರಾಜ್ಯದ ಬೀದರ್ ಶಿವಮೊಗ್ಗ ಹಾಗೂ ಧಾರವಾಡದಲ್ಲಿ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಇಂದು ಕಲಬುರ್ಗಿಯಲ್ಲಿ ಕೂಡ ನೀಟ್ ಪರಿಕ್ಷೆ ವೇಳೆ ಅಧಿಕಾರಿಗಳು ವಿದ್ಯಾರ್ಥಿಯೋರ್ವನ ಜನಿವಾರ ತೆಗೆಸಿದ ಪ್ರಕರಣ ನಡೆದಿದೆ. ಹೌದು ಇಂದು ಕಲ್ಬುರ್ಗಿಯ ಸೇಂಟ್ ಮೇರಿ ಶಾಲೆಯಲ್ಲಿ ನೀಟ್ ಪರೀಕ್ಷೆ ಇತ್ತು ಈ ವೇಳೆ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಗೆ ಅಧಿಕಾರಿಗಳು ಶನಿವಾರ ತೆಗೆದಿಟ್ಟು ಒಳಗಡೆ ಹೋಗು ಎಂದು ಸೂಚನೆ ನೀಡಿದ್ದಾರೆ ಈ ಹಿನ್ನೆಲೆ ಆದ ಜನಿವಾರ ತೆಗೆದು ತನ್ನ ತಂದೆಗೆ ಕೊಟ್ಟು ಪರೀಕ್ಷೆಗೆ ತೆರಳಿದ್ದಾನೆ ಈ ವಿಚಾರ ತಿಳಿದು, ಬ್ರಾಹ್ಮಣ ಸಮಾಜದವರು ಕಲ್ಬುರ್ಗಿಯ ಸೆಂಟ್ ಮೇರಿ ಶಾಲೆಯ ಎದುರುಗಡೆ ಪ್ರತಿಭಟನೆ ಮಾಡಿದರು. ಪರೀಕ್ಷೆಯ ಬಳಿಕ ಹೊರಬಂದ ಶ್ರೀಪಾದ್ ಪಾಟೀಲ್ ಗೆ ಶಾಸ್ತ್ರೋಕ್ತವಾಗಿ ಅಲ್ಲೇ ಜನಿವಾರ ಧಾರಣೆ ಮಾಡಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್, ಅಧಿಕಾರಿಗಳ ಸೂಚನೆ ಹಿನ್ನೆಲೆ…












