Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಎಂದಿಗೂ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ ಯಾವಾಗಲೂ ಆಪರೇಷನ್ ಕಮಲದ ಮೂಲಕವೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ತೀವ್ರವಾದ ವಿರೋಧ ವ್ಯಕ್ತಪಡಿಸಿತು. ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಬಿಜೆಪಿ ಯಾವಾಗಲು ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಬಹುಮತ ಪಡೆದು ಎಂದಿಗೂ ಅಧಿಕಾರಕ್ಕೆ ಬಂದಿಲ್ಲ. 600 ಭರವಸೆಗಳನ್ನು ಕೊಟ್ಟು ಶೇಕಡ 10ರಷ್ಟು ಕೂಡ ಭರವಸೆಗಳನ್ನು ಈಡೇರಿಸಿಲ್ಲ.ಸಾಲ ಮನ್ನಾ ಮಾಡಲು ಹಣ ಪ್ರಿಂಟ್ ಮಾಡಲ್ಲ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು. ಮೋದಿ ಸಾಲ ಮನ್ನಾ ಮಾಡಿದ್ದು ಆದಾನಿ ಮತ್ತು ಅಂಬಾನಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.ಇದರಿಂದ ಬಿಜೆಪಿ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಈ ವೇಳೆ ಪರಿಷತ್ ಸದಸ್ಯ ಸಿಟಿ ರವಿ ಕ್ರಿಯಾಲೋಪ ಎತ್ತಿದರು. ಆಗ ಉತ್ತರ ಕೊಡುವಾಗ ಕ್ರಿಯಾಲೋಪ ಬರಲ್ಲ…

Read More

ಚಾಮರಾಜನಗರ : ಮದುವೆಯಾಗುವುದಕ್ಕೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದಿದ್ದ ಯುವಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಇದರಿಂದ ಕುಡಿತದ ಚಟಕ್ಕೂ ದಾಸನಾಗಿದ್ದ, ಇಂದು ತಾಯಿಯ ಕಣ್ಣು ಎದುರೇ ಹೈಟೆನ್ಷನ್ ವಿದ್ಯುತ್ ಕಂಬ ಏರಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಟಿಸಿ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಸಣಶೆಟ್ಟಿಗೆ 27 ವರ್ಷವಾದರೂ ಮದುವೆಗಾಗಿ ಹೆಣ್ಣು ಸಿಕ್ಕಿರಲಿಲ್ಲ ಎಂದು ತಿಳಿದುಬಂದಿದೆ. ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಮಸಣಶೆಟ್ಟಿ ಕುಡಿತದ ದಾಸನಾಗಿದ್ದ. ಮಸಣಶೆಟ್ಟಿಯದ್ದು ಚಿಕ್ಕ ಮನೆ ಮಾತ್ರ ಇದ್ದು, ಯಾವುದೇ ಜಮೀನು, ಆಸ್ತಿ ಪಾಸ್ತಿ ಇರಲಿಲ್ಲ. ಎರಡು ಬಾರಿ ಹಣ್ಣು ನೋಡಿಕೊಂಡು ಬಂದಿದ್ದರು ಸಹ ರಿಜೆಕ್ಟ್ ಚೆಕ್ ಮಾಡಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಮಸಣಶೆಟ್ಟಿ ಒಳಗಾಗಿದ್ದ ಇಂದು ಬೆಳಿಗ್ಗೆ ಹೈ ಟೆನ್ಶನ್ ವಿದ್ಯುತ್ ಟವರ್ ಏರಿದ್ದ ಮಸಣಶೆಟ್ಟಿ ತನ್ನ ತಾಯಿಯ ದೊರೆ ವಿದ್ಯುತ್ ವೈರ್ ಸ್ಪರ್ಶಿಸಿ ಸಾವನಪ್ಪಿದ್ದಾನೆ.ಮಗನ ಸಾಮನು ಕನ್ನಡ ತಾಯಿ ದಿಗ್ಭ್ರಾಂತಕ್ಕೆ ಒಳಗಾಗಿದ್ದಾರೆ. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶಿವಾಗರದಲ್ಲಿ ಸದ್ಯ ಮಸಣಶೆಟ್ಟಿಯ…

Read More

ಬೆಂಗಳೂರು : ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ಎಮ್ ರೇವಣ್ಣ ಅವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲ್ಲೆಗೆ ಒಳಗಾದಂತಹ ಕಾಂಗ್ರೆಸ್ ಕಾರ್ಯಕರ್ತ ಇದೀಗ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರಿಗೆ ದೂರು ನೀಡಿದ್ದಾರೆ. ಹೌದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ರಾಜ್ಯ ಮಹಿಳಾ ಆಯೋಗಕ್ಕೆ ಹಲ್ಲೆಗೆ ಒಳಗಾದ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜು ದೂರು ನೀಡಿದ್ದಾರೆ. ನಿನ್ನೆ ಕುಮಾರ ಕೃಪಾ ಗೆಸ್ಟ್ ಹೌಸ್ ನಲ್ಲಿ HM ರೇವಣ್ಣ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರಿಗೆ ದೂರು ನೀಡಿದ್ದಾರೆ. ನಂದಿನಿ ಅವರು ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೇ ನಾಗಲಕ್ಷ್ಮಿ ಚೌದರಿ ಅವರು, ಹೆಣ್ಣು ಮಕ್ಕಳ ಮೇಲೆ ಯಾರೂ ದೌರ್ಜನ್ಯ ಮಾಡಂಗಿಲ್ಲ. ಹೆಚ್ ಎಂ ರೇವಣ್ಣ ಆಗಲಿ ಬೇರೆ ಯಾರೇ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಇದೀಗ ಏಪ್ರೀಲ್ 2 ರಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ್ದು, ಈ ಜಾಮೀನು ರದ್ದು ಮಾಡುವಂತೆ ಪೊಲೀಸರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಏಪ್ರಿಲ್ 2 ರಂದು ನಟ ದರ್ಶನ್ & ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ ಆದರೆ ಗೃಹ ಇಲಾಖೆ ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಅನುಮತಿ ನೀಡಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

Read More

ದಾವಣಗೆರೆ : ವರದಕ್ಷಿಣೆಗಾಗಿ ಪಾಪಿ ಗಂಡನೊಬ್ಬ ತನ್ನ ಪತ್ನಿಯ ಕುತ್ತಿಗೆಗೆ ಸೀರೆಯಿಂದ ಬಿಗಿದು ಉಸಿರುಗಟ್ಟಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾವತಿ (26) ಎಂದು ತಿಳಿದುಬಂದಿದೆ. ಕಳೆದ 7 ವರ್ಷದ ಹಿಂದೆ ಕುಟುಂಬಸ್ಥರು ಹರಳಹಳ್ಳಿ ಗ್ರಾಮದ ದೇವೇಂದ್ರಪ್ಪನ ಜೊತೆ ನೇತ್ರಾವತಿಯವರನ್ನು ಮದುವೆ ಮಾಡಿಕೊಟ್ಟಿದ್ದರು. ಮದುವೆ ಸಂದರ್ಭದಲ್ಲಿ ಕುಟುಂಬಸ್ಥರು ವರದಕ್ಷಿಣೆಯಾಗಿ 10 ತೊಲ ಬಂಗಾರ 1 ಲಕ್ಷ ರೂ. ನಗದು ಹಾಗೂ ಬೈಕ್ ಕೊಡಿಸಿದ್ದರು. ಆದರೂ ದೇವೇಂದ್ರಪ್ಪ ನೇತ್ರಾವತಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

Read More

ಬೆಂಗಳೂರು : ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ, ಇದೇ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕನ್ನಡ ಸಂಘಟನೆಗಳ ಸಭೆ ನಡೆದಿದ್ದು ಈ ಒಂದು ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಬಹುತೇಕ ಫಿಕ್ಸ್ ಆದಂತಾಗಿದೆ. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ 22ರಂದು ಕರ್ನಾಟಕ ರಾಜ್ಯ ಬಂದ್ ಮಾಡುತ್ತಿದ್ದೇವೆ. ನೆರೆ ರಾಜ್ಯ ಮತ್ತು ಸಂಸತ್ ಗಮನ ಸೆಳೆಯಲು ಬಂದ್ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಹೊಡೆಯುತ್ತಿದ್ದಾರೆ. ಬಿಹಾರಿಗಳು, ಪಂಜಾಬಿಗಳು, ಬಂಗಾಳದವರು ಹೊಡೆಯುತ್ತಿದ್ದಾರೆ. ಮಹಾರಾಷ್ಟ್ರದವರು ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಬಿಹಾರಿಗಳು ಪಂಜಾಬಿಗಳು ಬಂಗಾಳದವರು ಹೊಡೆಯುತ್ತಿದ್ದಾರೆ. ಮಹಾರಾಷ್ಟ್ರದವರು ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ತಮಿಳು ತೆಲುಗು ಮರಾಠಿಗರು ಮಾರ್ವಾಡಿಗಳು, ರಾಜ್ಯದಲ್ಲಿ ವ್ಯವಹಾರ ನಡೆಸಿ ಕೋಟಿ ಕೋಟಿ ರೂಪಾಯಿ ಸಂಪಾದಿಸುತ್ತಿದ್ದಾರೆ. ಪರಭಾಷಿಕರು ಕನ್ನಡ ಭಾಷೆ ಕಲಿಯಲ್ಲ ವ್ಯವಹಾರ ಮಾಡುತ್ತಾರೆ. ಕರ್ನಾಟಕದಲ್ಲಿ…

Read More

ಬೆಂಗಳೂರು : ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಆಗಿರುವುದರಿಂದ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕ ಹುದ್ದೆ ಮುಂಬಡ್ತಿ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು. ವಿಧಾನಪರಿಷತ್‍ನ ಪ್ರಶೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ಸದಸ್ಯ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರೊ.ಎಲ್.ಆರ್ ವೈದ್ಯನಾಥನ್ ವರದಿ ಆಧರಿಸಿ ದೈಹಿಕ ಶಿಕ್ಷಕರಿಗೆ ಮುಂಬಡ್ತಿ ನೀಡುವುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು. ದೈಹಿಕ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿದ್ದು, ಇವರ ಪ್ರಾವೀಣ್ಯತೆ ಹಾಗೂ ಅನುಭವ ಆಧಾರದ ಮೇಲೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು, (ದೈಹಿಕ ಶಿಕ್ಷಣ), ಸಹ ನಿರ್ದೇಶಕರು (ದೈಹಿಕ ಶಿಕ್ಷಣ) ಹುದ್ದೆಗಳಿಗೆ ಮುಂಬಡ್ತಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕ ಹುದ್ದೆಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ…

Read More

ಮೈಸೂರು : ಇಂದು ಮೈಸೂರಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆ ಆಯಿತು. ಹೆಬ್ಬಾಳು, ಬ್ಯಾಡರಹಳ್ಳಿ, ಕಗ್ಗರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಮಳೆಯಾಗಿದೆ. ಬಿರುಗಾಳಿ ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಈ ವೇಳೆ ಆಲಿಕಲ್ಲು ಮಳೆ ಜೋರಾಗಿದ್ದರಿಂದ ವಾಹನ ಸವಾರರು ಪರದಾಡಿದರು. ಈ ವೇಳೆ ತಕ್ಷಣ ರಸ್ತೆ ಬದಿಯಲ್ಲಿ ವಾಹನ ಸವಾರರು ಆಲಿಕಲ್ಲು ಮಳೆಯಿಂದ ಆಶ್ರಯ ಪಡೆದುಕೊಂಡರು. ಅಲ್ಲದೆ ಇನ್ನೂ ಕೆಲವು ಸಾರ್ವಜನಿಕರು ಆಲಿಕಲ್ಲುಗಳನ್ನು ಪಾತ್ರೆ ಪಗಡೆಗಳಲ್ಲಿ ಸಂಗ್ರಹಿಸುತ್ತಿರುವುದು ಕಂಡುಬಂದಿತು

Read More

ಉತ್ತರಕನ್ನಡ : ಕಫದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ತಾಯಿಯ ಜೊತೆಗೆ ಆಸ್ಪತ್ರೆಗೆ ತೆರಳುವಾಗ ಬಸ್ ನಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿ ನಡೆದಿದೆ. ಮಾಜಾಳಿ ಗ್ರಾಮದ ಸ್ನೇಹ ಸಾಗರ್ ಕೋಠಾರಿಕರ (8) ಸಾವನ್ನಪ್ಪಿದ ಬಾಲಕಿ ಎಂದು ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ನಿವಾಸಿಯಾಗಿರುವ ಸ್ನೇಹಾ ಕಳೆದ ಮೂರು ದಿನದಿಂದ ಕಫದ ಸಮಸ್ಯೆಯಿಂದ ಬಳಲುತ್ತಿದ್ದಳು. ತಾಯಿ ಮಂಗಳ ಜೊತೆಗೆ ಬಸ್ನಲ್ಲಿ ಸ್ನೇಹ ಕುಮಟಾಗೆ ತೆರಳುತ್ತಿದ್ದಳು. ಅಮದಳ್ಳಿ ಬಳಿ ತಲೆನೋವು ಹಾಗೂ ವಾಂತಿಯಿಂದ ಸ್ನೇಹ ಅಸ್ವಸ್ಥಳಾಗಿದ್ದಳು. ಕೊಡಲೇ ಹಟ್ಟಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ನೇಹಳನ್ನು ದಾಖಲಿಸಿದರು. ಅಲ್ಲಿಂದ ಅಂಕೋಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸ್ನೇಹ ಸಾವನಪ್ಪಿದ್ದಾಳೆ ಘಟನೆಯ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಕೋಲಾರ : ಡ್ರಿಲ್ ಮಾಡುವ ಸಂದರ್ಭದಲ್ಲಿ ಕಲ್ಲು ಬಂಡೆ ತಗೊಂಡು ಕಲ್ಲು ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಕಾರಹಳ್ಳಿಯಲ್ಲಿರುವ ಸ್ನೇಹ ಕ್ರಷರ್ ತಾತ್ಕಾಲಿಕವಾಗಿ ಬಂದ್ ಮಾಡಲು ಆದೇಶಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕರು ಈ ಕುರಿತು ಆದೇಶಿಸಿದ್ದಾರೆ. ಉಪ ನಿರ್ದೇಶಕ ಕೋದಂಡರಾಮಯ್ಯ ಅವರಿಂದ ಆದೇಶ ಹೊರಡಿಸಲಾಗಿದೆ. ಡ್ರಿಲ್ಲಿಂಗ್ ವೇಳೆ ಕಲ್ಲು ಬಿದ್ದು ಕಾರ್ಮಿಕ ವೆಂಕಟೇಶ್ ಸಾವನ್ನಪ್ಪಿದ್ದರು. ಆಂಧ್ರಪ್ರದೇಶ ಮೂಲದ ಕಾರ್ಮಿಕ ವೆಂಕಟೇಶ್ ಕಲ್ಲು ಬಿದ್ದು ಮೃತಪಟ್ಟಿದ್ದರು. ಕೆಲವು ಗಣಿ ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ನಿಯಮ ಸರಿಪಡಿಸಿಕೊಳ್ಳುವವರೆಗೆ ಕೆಲಸ ನಿಲ್ಲಿಸಲು ಆದೇಶ ಹೊರಡಿಸಿದ್ದಾರೆ.

Read More