Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮದೀನಾ ಅಗ್ನಿ ದುರಂತದಲ್ಲಿ ಮೃತಪಟ್ಟ ಹುಬ್ಬಳ್ಳಿ ಮೂಲದ ಅಬ್ದುಲ್ ಗನಿ ಶಿರಹಟ್ಟಿ ಅವರ ಕುಟುಂಬಕ್ಕೆ ಸಚಿವ ಜಮೀರ್ ಅಹಮದ್ ಖಾನ್ ನೆರವಾಗಿದ್ದಾರೆ. ಮೃತ ಅಬ್ದುಲ್ ಗನಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಸಲು ಅವರ ಕುಟುಂಬದ ಮೂವರು ಸದಸ್ಯರು ಮದೀನಾ ಗೆ ತೆರಳಲು ವೀಸಾ ಸೇರಿದಂತೆ ವಿಮಾನ ಟಿಕೆಟ್, ಅಲ್ಲಿ ಉಳಿದುಕೊಳ್ಳಲು ಹೋಟೆಲ್ ಹಾಗೂ ಇತರೆ ವ್ಯವಸ್ಥೆ ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಬ್ದುಲ್ ಗನಿ ಅವರ ಕುಟುಂಬ ಸದಸ್ಯರಾದ ಉಮರ್ ಸಾಬ್, ಮೌಲಾ ಅಲಿ,ಮೈನುದ್ದಿನ್ ಮಖಂದರ್ ಅವರು ಮಂಗಳವಾರ ಬೆಂಗಳೂರಿಂದ ಮದೀನಾ ಗೆ ತೆರಳಿದರು. ಅಂತ್ಯಕ್ರಿಯೆ ನಂತರ ಮೂವರು ಉಮ್ರಾ ಯಾತ್ರೆ ಮಾಡಿ ವಾಪಸ್ ಬರಲು ಸಚಿವರು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಮಾರ್ಗ ಮಧ್ಯೆ ವೆಚ್ಚಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಘಟನೆ ಹಿನ್ನಲೆ ಯಲ್ಲಿ ಅಬ್ದುಲ್ ಗನಿ ಕುಟುಂಬ ಸದಸ್ಯರು ಮದೀನಾ ಗೆ ತೆರಳಲು ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಚಿವರು ಖುದ್ದು ಬೆಂಗಳೂರಿಗೆ ಕರೆಸಿಕೊಂಡು ವ್ಯವಸ್ಥೆ…
ಬೆಂಗಳೂರು: ಸಾರಕ್ಕಿ ಉಪಕೇಂದ್ರ ನಿರ್ಹವಣಾ ಕಾಮಗಾರಿ ನಿಮಿತ್ತ (ನವೆಂಬರ್ 19) ಬುಧವಾರ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗಾರ್ಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು. 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನಸರಿ ರಸ್ತೇ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದಶð ರೆಸಿಡೆನ್ಸಿ ಅಪಾಟ್ðಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾಟ್ðಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್…
ಚಾಮರಾಜನಗರ : ಚಿಕ್ಕಮಗಳೂರಲ್ಲಿ ಕಾಡಾನೆಗಳ ದಾಳಿ ಮುಂದುವರೆದಿದ್ದು ಕಾಡಾನೆ ಒಂದು ಬೈಕ್ ಸವಾರನ ಮೇಲೆ ದಾಳಿ ನಡೆಸಿದ್ದು ಬೈಕ್ ಸವಾರ ಪ್ರಾಣಾಯಾಪಾಯದಿಂದ ಜಸ್ಟ್ ಮಿಸ್ ಆಗಿದ್ದಾನೆ. ಹೌದು ಕಾಡಾನೆ ದಾಳಿಯಿಂದ ಬೈಕ್ ಸವಾರ ಪಾರಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ಕಾಡಾನೆ ದಾಳಿ ನಡೆಸುವಾಗ ಬೈಕ್ ಸವಾರ ಬೈಕ್ ಬಿಟ್ಟು ಓಡಿದ್ದಾನೆ ಈ ಒಂದು ಘಟನೆ ಮೊಬೈಲ್ ನಲ್ಲಿ ಸರಿಯಾಗಿದೆ.
ಬೆಂಗಳೂರು : ಸೌದಿ ಬಸ್ ದುರಂತದಲ್ಲಿ ಇಬ್ಬರು ಕನ್ನಡಿಗರು ಸಾವನ್ನಪ್ಪಿದ್ದಾರೆ ಎಂದು ಇದೀಗ ಮಾಹಿತಿ ತಿಳಿದು ಬಂದಿದೆ. ಬೀದರ್ ಮೂಲದ ಮಹಿಳೆ ರಹಮತ್ ಸಾವನಪ್ಪಿದ್ದಾರೆ ಮೈಲೂರಿನ ಸಿಎಂಸಿ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ. ರಹಮತ್ ಹೈದರಾಬಾದ್ ಮೂಲಕ ಸೌದಿಗೆ ತೆರಳಿದ್ದರು ಸೌದಿಯಿಂದ ತೆರಳುವಾಗ ಈ ಒಂದು ದುರಂತ ಸಂಭವಿಸಿದ್ದು ಸಾವನಪ್ಪಿದ್ದಾರೆ. ಸೌದಿ ಬಸ್ ದುರತದಲ್ಲಿ ಒಟ್ಟು 45 ಪ್ರಯಾಣಿಕರು ಸಾವನ್ನಪ್ಪಿದ್ದು, ಅದರಲ್ಲಿ ಇಬ್ಬರು ಕನ್ನಡಿಗರು ಕೂಡ ಸಾವನಪ್ಪಿದ್ದಾರೆ. ಧಾರ್ಮಿಕ ಕ್ಷೇತ್ರಕ್ಕೆ ತೆರಳಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹುಬ್ಬಳ್ಳಿ ಮೂಲದ ಅಬ್ದುಲ್ ಒಬ್ರು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬೆಳಗಾವಿಯ ಭೂತ ರಾಮನ ಹಟ್ಟಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿವೆ ಈ ಕುರಿತು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಈಗಾಗಲೇ ಈ ಕುರಿತು ತನಿಖೆ ನಡೆಯುತ್ತಿದ್ದು ವರದಿಯಲ್ಲಿ ಲೋಪ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಲ್ಲಿ ಮಾತನಾಡಿದ ಅವರು, ಉನ್ನತ ಮಟ್ಟದ ತನಿಖಾ ಸಂಸ್ಥೆ ರಚನೆ ಮಾಡಲಾಗಿದೆ. ಬದುಕುಳಿದ 7 ಕೃಷ್ಣಮೃಗಗಳನ್ನು ಸಹ ರಕ್ಷಣೆ ಮಾಡುತ್ತಿದ್ದೇವೆ, ಕೋರೋಣ ರೀತಿಯಲ್ಲಿ ಸೋಂಕು ತಗುಲಿದ್ದು ಹೀಗಾಗಿ 31 ಕೃಷ್ಣಮೃಗಗಳು ಮೃತಪಟ್ಟಿವೆ. ಕೃಷ್ಣಮೃಗಗಳ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ ಈ ಕುರಿತು ವರದಿ ಬರಲಿ ವರದಿಯಲ್ಲಿ ಏನಾದರೂ ಲೋಪ ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ನೀಡಿದರು.
ಬೆಂಗಳೂರು: ಆಧುನಿಕ ಬಗೆಯ ಕೈಗಾರಿಕೋದ್ಯಮಗಳ ಮಹತ್ತ್ವವನ್ನು ಅರಿತಿರುವ ರಾಜ್ಯ ಸರಕಾರವು 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಪಡಿಸಲಿದೆ. ಇಲ್ಲಿ ಈ ತರಹದ ಕಂಪನಿಗಳಿಗೆ ಬೇಕಾಗುವ ಸಕಲ ಸೌಕರ್ಯಗಳನ್ನೂ ಕಲ್ಪಿಸಲಾಗುವುದು. ಇದು ದೇಶ ಮತ್ತು ರಾಜ್ಯ ಮಟ್ಟದಲ್ಲಿ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನಾವೀನ್ಯತಾ ಕೇಂದ್ರವಾಗಿ ಕೆಲಸ ಮಾಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭವಾದ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮುಂಚೂಣಿ ತಂತ್ರಜ್ಞಾನ ಕಂಪನಿಗಳಿಂದ ಮತ್ತು ಪ್ರಮುಖ ಆ್ಯಂಕರ್ ಹೂಡಿಕೆದಾರರಿಂದ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಆದ್ಯತೆ ನೀಡಿದೆ. ಇಂತಹ ಹೂಡಿಕೆಯು ಕೈಗಾರಿಕೋದ್ಯಮದ ವಿವಿಧ ವಲಯಗಳಿಗೆ ಹರಿದು ಬರಬೇಕು ಎನ್ನುವುದು ಸರಕಾರದ ಗುರಿಯಾಗಿದೆ. ಇಂತಹ ವಲಯಗಳಲ್ಲಿ ಡ್ರೋನ್, ಸೆಮಿಕಂಡಕ್ಟರ್ ಸಾಧನಗಳು ಮತ್ತು ಸೌರ ವಿದ್ಯುತ್ ಎಲ್ಲವನ್ನೂ ಪರಿಗಣಿಸಲಾಗಿದೆ. ಇದರ…
ನವದೆಹಲಿ : ದುಷ್ಕರ್ಮಿಗಳಿಂದ ದೆಹಲಿಯ ನಾಲ್ಕು ಕೋರ್ಟ್ ಗಳಿಗೆ ಹಾಗೂ ಎರಡು ಸಿಆರ್ಪಿಎಫ್ ಶಾಲೆಗಳಿಗೆ ಬಾಂಬ್ ಸಂದೇಶ ಬಂದಿದೆ. ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ.ಜೈಶ್ ಉಗ್ರ ಸಂಘಟನೆ ಹೆಸರಲ್ಲಿ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ನಾಲ್ಕು ಕೋರ್ಟ್ ಗಳಿಗೆ ಹಾಗೂ ಎರಡು ಸಿಆರ್ ಪಿಎಫ್ ಶಾಲೆಗಳಿಗೆ ಬಾಂಬ್ ಸಂದೇಶ ಬಂದಿದೆ.ಕೂಡಲೇ ತಕ್ಷಣ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಶಿ ಪರಿಶೀಲನೆ ಮಾಡುತ್ತಿದ್ದು, ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತಿದೆ.
ತಮಿಳುನಾಡು : ಪಟ್ಟಿವೀರನಪಟ್ಟಿ ಬಳಿ ಅಯ್ಯಪ್ಪ ಭಕ್ತರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ಗೆ ಹಾಲಿನ ವ್ಯಾನ್ ಡಿಕ್ಕಿ ಹೊಡೆದು ಅಯ್ಯಪ್ಪ ಭಕ್ತರೊಬ್ಬರು ಮೃತಪಟ್ಟು ಇಬ್ಬರಿಗೆ ಗಾಯವಾಗಿರುವ ಘಟನೆ ತಮಿಳುನಾಡಿನ ದಿಂಡುಗಲ್ ಎಂಬಲ್ಲಿ ನಡೆದಿದೆ. ಸುಂದರರಾಜಪುರಂ ಪೆಟ್ರೋಲ್ ಪಂಪ್ ಹತ್ತಿರ, ಪಟ್ಟಿವೀರನ್ಪಟ್ಟಿ ಪಕ್ಕ, ದಿಂಡುಗಲ್ ಜಿಲ್ಲೆಯಲ್ಲಿ ಶಬರಿಮಲೆ ದರ್ಶನ ಮುಗಿಸಿ ಕರ್ನಾಟಕಕ್ಕೆ ತೆರಳುತ್ತಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರು ತೆರಳುತ್ತಿದ್ದ ವ್ಯಾನ್ಗೆ ಹಾಲಿನ ವ್ಯಾನ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕರ್ನಾಟಕದ ಅಯ್ಯಪ್ಪ ಭಕ್ತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಅಯ್ಯಪ್ಪ ಭಕ್ತರು ಗಂಭೀರ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ವಟ್ಟಲಕುಂದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಾಸನ : ಮನೆಯಲ್ಲಿ ಅಡುಗೆ ಮಾಡುವಾಗ ಅನೀಲ ಸೋರಿಕೆಯಾಗಿ ಅವಘಡ ಸಂಭವಿಸಿದ್ದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೇಂಟಗೆರೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ. ದೊಡ್ಡೇಗೌಡ ಎಂಬ ವರ ಮನೆಯಲ್ಲಿ ಕಾರ್ಮಿಕರು ವಾಸವಿದ್ದರು. ಮನೆಯಲ್ಲಿದ್ದ ಅಲೀಮ್ ಬೇಗಮ್ (23) ರೋಹಿತ್ ಕಥನ್ (19) ಇಸ್ತರ್ ಉಲ್ಲಾ (23) ಹಾಗೂ ಅಹಿಸ್ಲಂ (25) ಎಂಬವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಳುಗಳನ್ನು ಅರಕಲಗೂಡು ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು, ನ.18: “ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ನಡೆಯುತ್ತಿರುವ ಬಗ್ಗೆ ಕೇಳಿದಾಗ “ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರೆಲ್ಲರ ಬೆಂಬಲಕ್ಕೆ ನಿಂತಿದ್ದೇವೆ. 60 ದೇಶಗಳ ಪ್ರತಿನಿಧಿಗಳು, ದೇಶದ ಎಲ್ಲಾ ರಾಜ್ಯಗಳ ಪ್ರಮುಖರು ಸುಮಾರು 50 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 1,500 ದೊಡ್ದ ಕಂಪೆನಿಗಳು ಭಾಗವಹಿಸುತ್ತಿವೆ. ಇವರುಗಳು ಉದ್ಯೋಗ ನೀಡಬೇಕು, ಸಂಪಾದನೆ ಮಾಡಬೇಕು. ಅದಕ್ಕೆ ನಮ್ಮ ಪ್ರೋತ್ಸಾಹ” ಎಂದರು. “ಪ್ರೋತ್ಸಾಹ ನೀಡಿದರೆ ಇಲ್ಲಿನ ಪ್ರತಿಭೆಗಳು, ಹೊಸ ಆವಿಷ್ಕಾರ, ತಂತ್ರಜ್ಞಾನ, ಸ್ಟಾರ್ಟ್ ಅಪ್ ಗಳು ಕರ್ನಾಟಕವನ್ನು ಹೊಸ ದಿಕ್ಕಿನೆಡೆಗೆ…














