Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಮತ್ತು ಟಿಟಿ ವಾಹನದ ಮಧ್ಯ ಭೀಕರವಾದ ಅಪಘಾತ ಸಂಭವಿಸಿ ಕಾರಿನಲ್ಲಿ ಚಲಿಸುತ್ತಿದ್ದ ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಕೇರಳ ಮೂಲದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಕುರಿತು ಪೊಲೀಸರು ಇದೀಗ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಾಜ್ಯದಲ್ಲಿ ಸಚಿವ ಕೆ.ಎನ್ ರಾಜಣ್ಣ ಮೇಲೆ ಹನಿಟ್ರ್ಯಾಪ್ ನಡೆಸಿದ ಪ್ರಕರಣ ಸದ್ದು ಮಾಡುತ್ತಿರುವಾಗಲೇ ಬೆಂಗಳೂರಿನಲ್ಲಿ ಮತ್ತೊಂದು ಹನಿಟ್ರ್ಯಾಪ್ ಜಾಲ ಪತ್ತೆಯಾಗಿದೆ. ಪ್ರಿಸ್ಕೂಲ್ ನಡೆಸುತ್ತಿದ್ದ ಶಿಕ್ಷಕಿ ಒಬ್ಬಳು ಪೋಷಕರನ್ನೆ ಟಾರ್ಗೆಟ್ ಮಾಡಿ ಹನಿಟ್ಯಾಪ್ ಬಲೆಗೆ ಬೀಳಿಸಿ ಲಕ್ಷ ಲಕ್ಷ ಹಣ ಪ್ರೀತಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಶಿಕ್ಷಕಿ ಸೇರಿ ಮೂವರನ್ನು ಇದೀಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಆರೋಪಿ ಶಿಕ್ಷಕಿಯನ್ನು ಶ್ರೀದೇವಿ ಎಂದು ತಿಳಿದುಬಂದಿದ್ದು, ಮಹಾಲಕ್ಷ್ಮೀ ಲೇಔಟ್ ಬಳಿ ಪ್ರಿಸ್ಕೂಲ್ ನಡೆಸುತ್ತಿದ್ದಳು. ಇಲ್ಲಿಗೆ ತನ್ನ ಮಕ್ಕಳನ್ನು ಬಿಡಲು ರಾಕೇಶ್ ಬರುತ್ತಿದ್ದರು. 2023 ರಲ್ಲಿ ರಾಕೇಶ್ ಶ್ರೀದೇವಿ ನಡುವೆ ಆದ ಪರಿಚಯ ಕ್ರಮೇಣ ಸಲುಗೆಗೆ ತಿರುಗಿ ಡೇಟಿಂಗ್ ಹಂತಕ್ಕೂ ತಲುಪಿತ್ತು. ರಾಕೇಶ್ ಗೆ ಒಂದು ಬಾರಿ ಚುಂಬಿಸಲು 50 ಸಾವಿರ ರೂ. ಹಣಕ್ಕೆ ಬೇಡಿಕೆ ಇಡುತ್ತಿದ್ದ ಶ್ರೀದೇವಿ, ಅದರ ಫೋಟೋಗಳನ್ನೂ ತೆಗೆದಿರಿಸಿಕೊಳ್ಳುತ್ತಿದ್ದಳು. ರಾಕೇಶ್ ನಿಂದ 4 ಲಕ್ಷ ರೂ. ಹಣ ಸಾಲ ಎಂದು ಪಡೆದು ಬಳಿಕ ವಾಪಸ್…
ತುಮಕೂರು : ತ್ರಿವಿಧ ದಾಸೋಹಿ ತುಮಕೂರಿನ ಲಿಂಗೈಕ್ಯ ಪೂಜ್ಯ ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಶ್ರೀಗಳ ಗದ್ದುಗೆ ದರ್ಶನ ಪಡೆದು ಹೊರ ಬರುವಾಗ ಬಿಜೆಪಿ ಕಾರ್ಯಕರ್ತರು ಮುಂದಿನ ಸಿಎಂ ವಿಜಯೇಂದ್ರ ಸಿದ್ದಗಂಗಾ ಮಠದಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಘೋಷಣೆ ಕೂಗಲಾಯಿತು. ಈ ವೇಳೆ ಸುಮ್ಮನೆ ಇರುವಂತೆ ಕಾರ್ಯಕರ್ತರಿಗೆ ತಾಕೀತು ಮಾಡಿದರು. ಶ್ರೀಗಳ ಗದ್ದುಗೆ ಪೂಜೆ ಸಲ್ಲಿಸಿ ವಾಪಸ್ ಆಗುವ ವೇಳೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಚಿತ್ರದುರ್ಗ : ರಾಜ್ಯದಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದರೆ, ಇನ್ನುಳಿದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಳುಗಳಿಗೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಅಪಘಾತದ ಕುರಿತು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಗೃಹಿಣಿ ಒಬ್ಬರ ಶವ ಅನುಮಾನಾಸ್ಪದ ರೀತಿಯಾಗಿ ಪತ್ತೆಯಾಗಿದ್ದು, ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾಳೆ ಎಂಬ ಕಾರಣದಿಂದ ಪತಿಯೇ ಪತ್ನಿಯನ್ನು ಹೊಂದಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರು ನಗರದ ಆಡುಗೋಡಿಯ ನಂಜಪ್ಪ ಲೇಔಟ್ನಲ್ಲಿ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಪತಿಯ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಮೃತ ಮಹಿಳೆಯನ್ನು ಹೇಮಾ (44) ಎಂದು ಗುರುತಿಸಲಾಗಿದೆ. ಪತಿಗೆ ಅಕ್ರಮ ಸಂಬಂಧ ಇದೆ, ಮನೆ ಸಮೀಪವೇ ಬೇರೆ ಮಹಿಳೆಗೂ ಮನೆ ಮಾಡಿಕೊಟ್ಟಿದ್ದ ಎಂದು ಮಹಿಳೆ ತನ್ನ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಳಂತೆ. ಇನ್ನೂ ಜನವರಿಯಲ್ಲಿ ಹೇಮಾ ವಿಷ ಕುಡಿದು ಆತ್ಮಹತ್ಯೆಗೂ ಯತ್ನಿಸಿದ್ದಳಂತೆ. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕಳೆದ ಶನಿವಾರ ಹೇಮಾ ಸಾವನ್ನಪ್ಪಿದ್ದು, ಮಗಳ ವಿದ್ಯಾಭ್ಯಾಸದ ವಿಚಾರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗಂಡ ಹೇಳಿದ್ದ. ಆದರೆ ಹೇಮಾ ನೇಣು ಬಿಗಿದ ಸ್ಥಿತಿಯಲ್ಲಿರೋದನ್ನು ಯಾರು ನೋಡಿಲ್ಲ. ಹೇಮಾ ಮೃತದೇಹವನ್ನು ಆಸ್ಪತ್ರೆಯಲ್ಲಿ ನೋಡಿರೋ ಕುಟುಂಬಸ್ಥರು ಪತಿಯೇ…
ರಾಯಚೂರು : ಯುಗಾದಿ ಹಬ್ಬದ ಅಂಗವಾಗಿ ಕಾಡು ಪ್ರಾಣಿಗಳನ್ನು ಬೇಟಿಯಾಡಿ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿರುವ ಆರೋಪ ಇದೀಗ ಕಾಂಗ್ರೆಸ್ ಶಾಸಕನ ಪುತ್ರ ಮತ್ತು ಸಹೋದರ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಯುಗಾದಿ ಹಬ್ಬದ ಅಂಗವಾಗಿ ಶಾಸಕರ ಪುತ್ರ, ಸಹೋದರ ಕಾಡು ಪ್ರಾಣಿಗಳ ಬೇಟೆಯಾಡಿ, ಮೆರವಣಿಗೆ ಮಾಡಿರುವ ಆರೋಪ ಕೇಳಿ ಬಂದಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪ ಶಾಸಕರ ಪುತ್ರ ಮತ್ತು ಸಹೋದರ ಮೇಲೆ ಬಂದಿದ್ದು, ಮಸ್ಕಿ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರುವಿಹಾಳ ಪುತ್ರ ಮತ್ತು ಸಹೋದರ ಮೊಲಗಳ ಬೇಟೆಯಾಡಿ ಅವುಗಳನ್ನು ಕಟ್ಟಿಗೆ ಕಟ್ಟಿ ಮೆರವಣಿಗೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಶಾಸಕರ ಪುತ್ರ ಮತ್ತು ಸಹೋದರನ ನೇತೃತ್ವದಲ್ಲಿ ಮೂಲಗಳ ಭೇಟಿ ಮತ್ತು ಮೆರವಣಿಗೆ ನಡೆದಿದೆ. ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮೊಲಗಳನ್ನು ಬೇಟೆಯಾಡಿ ಕಟ್ಟಿಗೆ ಕಟ್ಟಿ ಮೆರವಣಿಗೆ ನಡೆಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮೊಲಗಳನ್ನು ಬೇಟೆಯಾಡಿದ್ದು ಅಲ್ಲದೆ ಅವುಗಳನ್ನು ಕಟ್ಟಿಗೆಗೆ…
ಬೆಂಗಳೂರು : ರಾಜ್ಯದಲ್ಲಿ ಸದ್ಯ ಹಾನಿಟ್ರ್ಯಾಪ್ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಆದೇಶ ಹೊರಡಿಸಿತ್ತು. ಇದೀಗ ಸಿಐಡಿ ಅಧಿಕಾರಿಗಳು ಇಂದು ಸಚಿವ ರಾಜಣ್ಣ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೌದು ಯುಗಾದಿ ಹಾಗೂ ರಂಜಾನ್ ಹಬ್ಬಗಳ ರಜೆ ಹಿನ್ನೆಲೆಯಲ್ಲಿ ತುಸು ವಿರಾಮ ಕೊಟ್ಟಿದ್ದ ಸಿಐಡಿ ಅಧಿಕಾರಿಗಳು, ಇಂದಿನಿಂದ ಸಹಕಾರ ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್ ಯತ್ನ ಪ್ರಕರಣದ ವಿಚಾರಣೆಗೆ ಮತ್ತೆ ಚುರುಕು ನೀಡಲಿದ್ದಾರೆ. ಈ ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ಸಚಿವರನ್ನು ಮಂಗಳವಾರ ಅಥವಾ ಬುಧವಾರ ವಿಚಾರಣೆಗೊಳಪಡಿಸಲು ಯೋಜಿಸಿದ್ದಾರೆ. ಸಚಿವರಿಂದ ಹೇಳಿಕೆ ಪಡೆಯಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದರು. ಆದರೆ, ಹಬ್ಬದ ಕಾರಣಕ್ಕಾಗಿ ಸಚಿವರು ಕಾಲಾವಕಾಶ ಕೋರಿದ್ದರು. ಹೀಗಾಗಿ, ದೂರುದಾರರಾಗಿರುವ ಸಚಿವರ ಹೇಳಿಕೆ ಇಲ್ಲದೆ ವಿಚಾರಣೆ ಮುಂದುವರಿಸಲು ತಾಂತ್ರಿಕ ಸಮಸ್ಯೆ…
ಬೆಳಗಾವಿ : ಜಮೀನನ್ನು ಅಕ್ರಮವಾಗಿ ಬೇರೆಯವರಿಗೆ ಪರಭಾರೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಹಶೀಲ್ದಾರ್ ಮೋಹನ ಭಸ್ಮೆ ವಿರುದ್ಧ FIR ದಾಖಲಾಗಿದೆ. ಗೋಕಾಕ್ ತಾಲೂಕಿನ ಮಮದಾಪುರ ಗ್ರಾಮದ ಸಂಗೀತ ಬನ್ನೂರ್ ಎನ್ನುವವರಿಗೆ ಸೇರಿದ 4 ಎಕರೆ ಜಮೀನಲ್ಲಿ 20 ಗುಂಟೆ ಭೂಮಿಯನ್ನು ಗುಲಾಬ್ ಓಸ್ವಾಲ್ ಎನ್ನುವ ಆರೋಪಿಗೆ ಪರಭಾರೆ ಮಾಡಿದ ಆರೋಪ ಕೇಳಿ ಬಂದಿದೆ. ಹೌದು ಸಂಗೀತ ಬನ್ನೂರು ಎಂಬವರಿಗೆ ಸೇರಿದ 20 ಗುಂಟೆ ಜಾಗವನ್ನು ತಹಸಿಲ್ದಾರ್ ಪರಭಾರೆ ಮಾಡಿದ್ದಾರೆ. ಮಮದಾಪುರ ಗ್ರಾಮದಲ್ಲಿ ಸಂಗೀತ ಬನ್ನೂರು ಎಂಬವರಿಗೆ 20 ಗುಂಟೆ ಜಮೀನು ಸೇರಿತ್ತು. ಸರ್ವೇ ನಂಬರ್ 122/1 (1) 4 ಎಕರೆ ಪೈಕಿ 20 ಗುಂಟೆ ಜಾಗ ಪರಭಾರೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗ್ರಾಮದಲ್ಲಿ ಅಧಿಕಾರಿಗಳು ಗುಲಾಬ್ ಓಸ್ವಾಲ್ ನೀಡಿದ ಆಮಿಷಕ್ಕೆ ಒಳಗಾಗಿ ಪರಭಾರೆ ಮಾಡಿದ್ದಾರೆ. ಪ್ರಕರಣ A1 ಆರೋಪಿ ಗುಲಾಬ್ ಓಸ್ವಾಲ್ ಹೆಸರಿಗೆ ಜಮೀನು ಪರಭಾರೆ ಮಾಡಲಾಗಿದೆ. ಗೋಕಾಕ್ ತಾಸಿಲ್ದಾರ್ ಮೋಹನ್ ಭಸ್ಮೆ…
ತುಮಕೂರು : ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ 118ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಇಂದು ನೆರವೇರಲಿದೆ. ಗುರುವಿಗೆ ನುಡಿನಮನ ಸಲ್ಲಿಸಲು ಸಿದ್ಧಗಂಗಾ ಮಠ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಮೆಸೇಜ್ ಅವರು ಭಾಗವಹಿಸಲಿದ್ದು ಇಂದು ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಒಂದು ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಲಾಗಿತ್ತು. ಅವರು ಬೇರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಭಾಗವಹಿಸುತ್ತಿಲ್ಲ. ಅವರ ಬದಲಾಗಿ ರಾಜನಾಥ್ ಸಿಂಗ್ ಭಾಗವಹಿಸುತ್ತಿದ್ದಾರೆ.ಗುರುವಂದನೆ ಮತ್ತು ಜಯಂತಿ ಪ್ರಯುಕ್ತ ಇಂದು ಮುಂಜಾನೆಯಿಂದಲೇ ಮಠದಲ್ಲಿ ಧಾರ್ಮಿಕ ಚಟುವಟಿಕೆ ಆರಂಭವಾಗಲಿವೆ.ಗೋಸಲ ಸಿದ್ದೇಶ್ವರ ರಂಗಮಂದಿರದಲ್ಲಿ ಬೆಳಗ್ಗೆ 10:30 ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಬಂದಿಳಿಯುವ ರಾಜನಾಥ ಸಿಂಗ್ ಮೊದಲಿಗೆ ಸ್ವಾಮೀಜಿ ಗದ್ದುಗೆಗೆ ಭೇಟಿ ನೀಡಿ ನಮಿಸಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮಠದ ಕಿರಿಯ ಸ್ವಾಮೀಜಿ ಸಿದ್ದೇಶ್ವರ ಶ್ರೀ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ…
ಬೆಂಗಳೂರು : ಇಂದಿನಿಂದ ಹಾಲು, ಮೊಸರು ವಿದ್ಯುತ್ ದರ ಹೆಚ್ಚಳವಾಗಲಿದ್ದು, ಜನತೆ ದರ ಹೆಚ್ಚಳದಿಂದ ತತ್ತರಿಸಿ ಹೋಗಿದ್ದಾರೆ. ಸಂಪುಟ ಸಭೆಯಲ್ಲಿ ನಿರ್ಧರಿಸಿದಂತೆ ಇಂದಿನಿಂದ ನಂದಿನಿ ಹಾಲಿನ ದರ 4 ರೂ ಏರಿಕೆ ಮಾಡಿ ಪರಿಷ್ಕೃತ ದರ ಜಾರಿಯಾಗಿದೆ. ಆದರೆ ಬೆಂಗಳೂರಿನ ಜನತೆಗೆ ತ್ರಿಬಲ್ ಶಾಕ್ ಎದುರಾಗಿದ್ದು, ಹಾಲು, ವಿದ್ಯುತ್ ಜೊತೆಗೆ ಇಂದಿನಿಂದ ಅವರು ಕಸಕ್ಕೂ ತೆರಿಗೆ ಕಟ್ಟಬೇಕು. ಹೌದು ಹಾಲು ಕರೆಂಟ್ ದರ ಏರಿಕೆ ಜೊತೆ ಕಸಕ್ಕೂ ತೆರಿಗೆ ಕಟ್ಟಬೇಕಾಗಿದೆ. ಇಂದಿನಿಂದ ಬಿಬಿಎಂಪಿ ಕಸ ಸಂಗ್ರಹಕ್ಕೂ ಸೆಸ್ ಹೇರಲಿದೆ. ಇಂದಿನಿಂದ ಮನೆ, ಅಂಗಡಿ ಮುಂಗಟ್ಟಿನ ಕಸಕ್ಕೂ ತೆರಿಗೆ ಕಟ್ಟಬೇಕು. ಅಂಗಡಿ ಮುಂಗಟ್ಟುಗಳಲ್ಲಿ ಪ್ರತಿ ಕೆಜಿ ಕಸಕ್ಕೆ 12 ರೂಪಾಯಿ ತೆರಿಗೆ ವಸೂಲಿ ಮಾಡಲಿದೆ.ಕಸದ ತೆರಿಗೆ ಮೂಲಕ 600 ಕೋಟಿ ರೂಪಾಯಿ ಆದಾಯದ ನಿರೀಕ್ಷೆ ಹೊಂದಲಾಗಿದೆ. ಪ್ರತಿ ತಿಂಗಳು ಕಸ ಸಂಗ್ರಹ ಮತ್ತು ವಿಲೇವಾರಿ ವೆಚ್ಚ ಅಂತ ಬಿಬಿಎಂಪಿ ಸೆಸ್ ಸಂಗ್ರಹಕ್ಕೆ ಮುಂದಾಗಿದೆ. ಆಸ್ತಿ ತೆರಿಗೆ ಜೊತೆಗೆ ಕಸದ ಸೆಸ್ ವಸೂಲಿ ಮಾಡಲಿದೆ.