Author: kannadanewsnow05

ಮಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಚಿವ ಶಿವಾನಂದ್ ಪಾಟೀಲ್ ಅವರಿಗೆ ಅಪ್ಪನಿಗೆ ಹುಟ್ಟಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಸವನ ಬಾಗೇವಾಡಿಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿ ನಾನು ರಾಜೀನಾಮೆ ಕೊಟ್ಟು ಸ್ಪರ್ಧಿಸುತ್ತೇನೆ ಎಂದು ಸವಾಲು ಹಾಕಿದ್ದರು. ಈ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ್ ಇಂದು ಸ್ಪೀಕರ್ ಯುಟಿ ಖಾದರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಯತ್ನಾಳ್ ಅವರ ರಾಜೀನಾಮೆ ಅಂಗೀಕಾರವಾದ ಬಳಿಕ ನನ್ನ ರಾಜೀನಾಮೆ ಅಂಗೀಕರಿಸಿ ಎಂದು ಕಂಡೀಷನ್ ಹಾಕಿದ್ದಾರೆ. ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಂಡಿಷನ್ ಹಾಕಿ ರಾಜೀನಾಮೆ ಕೊಡುವವರು ಮಾನ ಮರ್ಯಾದೆ ಇಲ್ಲದವರು ಎಂದು ಮತ್ತೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಾನಂದ್ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವಾಗಿ ನಾನು ಕೊಟ್ಟಿರುವ ಹೇಳಿಕೆಯೇ ಬೇರೆ ಇದೆ. ಅವರು ಇಂದು ಹಾಕಿರುವ ಸವಾಲು ಬೇರೆ ಇದೆ. ರಾಜೀನಾಮೆ…

Read More

ಕೇರಳ : ಸುಳ್ಳು ಆರೋಪ ಸೇರಿದಂತೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕೇರಳ ಕ್ರಿಕೆಟ್ ಸಂಸ್ಥೆಯಿಂದ ಭಾರತದ ಮಾಜಿ ಕ್ರಿಕೆಟ್ ಆಟಗಾರ ಎಸ್ ಶ್ರೀಶಾಂತ್ ಅವರನ್ನು ಕೇರಳ ಕ್ರಿಕೆಟ್ ಸಂಸ್ಥೆಯಿಂದ ಮೂರು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ. ಶ್ರೀಶಾಂತ್‌ ಅವರು ಕೇರಳದ ಸ್ಥಳೀಯ ಮಾಧ್ಯಮ ನಡೆಸಿದ್ದ ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಸಂಜು ಸ್ಯಾಮ್ಸನ್‌ ಅವರು ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಆಯ್ಕೆಯಾಗದಿರಲು ಕೆಸಿಎ ನೇರ ಕಾರಣ ಎಂದಿದ್ದರು. ವಿಜಯ್ ಹಜಾರೆ ಟ್ರೋಫಿಗೆ ಕೇರಳ ತಂಡದಿಂದ ಸ್ಯಾಮ್ಸನ್ ಅವರನ್ನು ಕೈಬಿಟ್ಟ ಕಾರಣದಿಂದ ಸಂಜುಗೆ ಚಾಂಪಿಯನ್ಸ್‌ ಟ್ರೋಫಿ ಆಡುವ ಅವಕಾಶ ಸಿಗಲಿಲ್ಲ. ಕೆಸಿಎ ಇಲ್ಲಿನ ಕ್ರಿಕೆಟಿಗರಿಗೆ ಯಾವುದೇ ಬೆಂಬಲ ನೀಡುವುದಿಲ್ಲ ಎಂದು ಶ್ರೀಶಾಂತ್‌ ಹೇಳಿದ್ದರು. ಈ ಹಿಂದೆ, ಶ್ರೀಶಾಂತ್‌ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ, ಶ್ರೀಶಾಂತ್ ಜತೆಗೆ ಫ್ರಾಂಚೈಸ್ ತಂಡಗಳಾದ ಕೊಲ್ಲಂ ಏರೀಸ್, ಅಲಪ್ಪುಳ ಟೀಮ್ ಲೀಡ್ ಮತ್ತು ಅಲಪ್ಪುಳ ರಿಪ್ಪಲ್ಸ್‌ಗೆ ಶೋ-ಕಾಸ್ ನೋಟಿಸ್ ನೀಡಲಾಗಿತ್ತು.ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೆಸಿಎ ಇದೀಗ ಶ್ರೀಶಾಂತ್‌ ಅವರನ್ನು ಮೂರು ವರ್ಷಗಳ…

Read More

ಮುಂಬೈ : ನವೆಂಬರ್ 1 ಬಂದ್ರೆ ಸಾಕು ಇತ್ತ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಜೋರಾಗಿರುತ್ತದೆ. ಅತ್ತ ಬೆಳಗಾವಿಯ ಗಡಿ ಭಾಗದಲ್ಲಿ MES ಪುಂಡರು ಸೇರಿದಂತೆ ಮರಾಠಿಗರು ಪ್ರತಿಭಟನೆ, ಕರಾಳ ದಿನ ಆಚರಣೆಗೆ ಮುಂದಾಗುತ್ತಾರೆ. ಇದೀಗ ಬೆಳಗಾವಿ ಮತ್ತು ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವರ್ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳು ಇನ್ನೂ ಮಹಾರಾಷ್ಟ್ರ ಭಾಗವಾಗಿಲ್ಲ. ಮಹಾರಾಷ್ಟ್ರ ರಚನೆಯಾಗಿ 65 ವರ್ಷಗಳ ನಂತರವೂ, ಪಕ್ಕದ ಕರ್ನಾಟಕದ ಬೆಳಗಾವಿ ಮತ್ತು ಕಾರವಾರ ಇನ್ನೂ ಪಶ್ಚಿಮ ಮರಾಠಿ ಮಾತನಾಡುವ ರಾಜ್ಯದೊಂದಿಗೆ ವಿಲೀನಗೊಂಡಿಲ್ಲ ಎಂಬುದು ವಿಷಾದದ ಸಂಗತಿ ಎಂದಿದ್ದಾರೆ. ಮಹಾರಾಷ್ಟ್ರವು ತನ್ನ ಅಸ್ತಿತ್ವಕ್ಕೆ 65 ವರ್ಷಗಳನ್ನು ಪೂರೈಸಿದ್ದರೂ, ನಮ್ಮ ಹೃದಯದಲ್ಲಿ ಒಂದು ವಿಷಾದವಿದೆ. ಇಂದಿಗೂ, ಬೆಳಗಾವಿ ಮತ್ತು ಕಾರವಾರದ ಮರಾಠಿ ಜನರು ನಮ್ಮೊಂದಿಗೆ ಇಲ್ಲ ಎಂದಿದ್ದಾರೆ. ಪ್ರಕರಣವು ಸುಪ್ರೀಂ ಕೋರ್ಟ್‌ ನಲ್ಲಿದೆ. ಅವರು ಮಹಾರಾಷ್ಟ್ರದೊಂದಿಗೆ ವಿಲೀನಗೊಂಡ ದಿನ, ಮಹಾರಾಷ್ಟ್ರ ಈಗ ಪೂರ್ಣಗೊಂಡಿದೆ ಎಂದು ನಾವು…

Read More

ಬೆಂಗಳೂರು : ರೌಡಿಶೀಟರ್ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿಯವರು ಆರೋಪಿಸಿದ ವಿಚಾರವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಹದಗೆಟ್ಟಿದೆ? ದೇಶದಲ್ಲಿ ಏನಾಗಿದೆ ಎಂಬುದನ್ನು ಬಿಜೆಪಿಗರು ಮೊದಲು ಹೇಳಬೇಕು ಎಂದು ಪ್ರಶ್ನಿಸಿದರು. ಬಿಜೆಪಿಯವರ ಅವಧಿಯಲ್ಲಿ ಎಲ್ಲವನ್ನು ಮಾಡಿದ್ದಾರೆ. ಈಗ ನಮಗೆ ಮೂತಿ ಒರೆಸುವುದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಮಂಗಳೂರಿನ ಘಟನೆಯ ಬಗ್ಗೆ ಪೊಲೀಸರು ತನಿಖೆ ಮಾಡುತ್ತಾರೆ. ಸುಹಾಸ್ ಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವರು ಉತ್ತರ ಕೊಡುತ್ತಾರೆ. ಬಿವೈ ವಿಜಯೇಂದ್ರ ರಾಜಕೀಯ ಬಿಟ್ಟು ಇನ್ನೇನು ಮಾಡುತ್ತಾರೆ? ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪದ ವಿಚಾರವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಹದಗೆಟ್ಟಿದೆ? ದೇಶದಲ್ಲಿ ಏನಾಗಿದೆ ಎಂಬುದನ್ನು ಬಿಜೆಪಿಗರು ಮೊದಲು ಹೇಳಬೇಕು ಎಂದು ಆನೇಕಲ್ ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು.

Read More

ಮೈಸೂರು : ಚಾಮರಾಜನಗರ ಮತ್ತು ರಾಯಚೂರು ಜಿಲ್ಲಾಡಳಿತಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆತಂಕವನ್ನುಂಟು ಮಾಡಿದೆ. ಚಾಮರಾಜನಗರ ಜಿಲ್ಲಾಡಳಿತ ಭವನವನ್ನು ಸ್ಫೋಟಿಸುವುದಾಗಿ ಇಂದು ಮುಂಜಾನೆ 2.40!ಕ್ಕೆ ಇ-ಮೇಲ್ ಸಂದೇಶ ಬಂದಿದೆ. ಇದರ ಬೆನ್ನಲ್ಲೇ ಮೈಸೂರಿನ ವಿವಿಧ ಭಾಗಗಳಲ್ಲಿ ಬಾಂಬ್ ಬಿಟ್ಟಿರುವದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ಹೌದು ಇಂದು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಇದರ ಬೆನ್ನಲ್ಲೆ ಮೈಸೂರಿನ ವಿವಿಧ ಭಾಗಗಳಲ್ಲಿ ಬಾಂಬ್ ಇಟ್ಟಿರುವುದಾಗಿದೆ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.ಪೊಲೀಸ್ ಆಯುಕ್ತರ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಈ ಕುರಿತು ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Read More

ಬೆಂಗಳೂರು : ಕಳೆದ ವರ್ಷ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಟಿ ರವಿ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿದ ಹೈಕೋರ್ಟ್ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿಟಿ ರವಿ ಅವಾಚ್ಯ ಪದ ಬಳಕೆ ಮಾಡಿದ್ದರು. ಈ ಪ್ರಕರಣವನ್ನು ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಜಾ ಗೊಳಿಸಲಾಗಿದೆ. ಆರೋಪಿಸಿದ ಪದ ಉಚ್ಚರಿಸಿದ್ದರೆ, ಅದು ಮಹಿಳೆಯ ಘನತೆಗೆ ಹಾನಿ ಉಂಟಾಗುತ್ತದೆ ಇದು ಶಾಸನ ಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

Read More

ಕಲಬುರ್ಗಿ : ಇತ್ತೀಚಿನ ದಿನಗಳಲ್ಲಿ ಈ ಅನೈತಿಕ ಸಂಬಂಧದಿಂದ ಅದೆಷ್ಟೋ ಕೊಲೆಗಳು ನಡೆಯುತ್ತಿವೆ. ಇದರಿಂದ ಕೊಲೆಗೋಳಗಾದವರ ಮಕ್ಕಳು ಅನಾಥರಾಗಿದ್ದಾರೆ. ಇದೀಗ ಕಲ್ಬುರ್ಗಿಯಲ್ಲೂ ಇಂತಹದ್ದೇ ಘಟನೆ ನಡೆದಿದ್ದು ಪ್ರಿಯಕರನ ಜೊತೆ ಪತ್ನಿಯನ್ನು ಕಂಡು ಕುಪಿತಗೊಂಡ ಪತಿ, ಇಬ್ಬರನ್ನು ಕೊಂದು ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳ ತಾಲೂಕಿನ ಮಾದನ ಹಿಪ್ಪರಗ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು, ಅನೈತಿಕ ಸಂಬಂಧ ಶಂಕೆಯಿಂದ ಪತ್ನಿ, ಆಕೆಯ ಪ್ರಿಯಕರನನ್ನು ಪತಿಯ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಕೊಲೆಯಾದವರನ್ನಯ ಪ್ರಿಯಕರ ಕಾಜಪ್ಪ(22), ಪತ್ನಿ ಸೃಷ್ಟಿ (22) ಎಂದು ಗುರುತಿಸಲಾಗಿದೆ. ಅವರನ್ನು ಪತಿ ಶ್ರೀಮಂತ್ ಕೊಲೆ ಮಾಡಿದ್ದಾನೆ. ಪತ್ನಿಯ ಜೊತೆಗೆ ಕಾಜಪ್ಪ ಇದ್ದುದನ್ನು ಕಂಡು ಕೆಂಡಕಾರಿದ ಶ್ರೀಮಂತ್ ಇಬ್ಬರನ್ನು ಹತ್ಯೆಗೈದು, ನಂತರ ಪೋಲಿಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಎರಡು ವರ್ಷಗಳ ಹಿಂದೆಯಷ್ಟೇ ಸೃಷ್ಟಿಯನ್ನು ಶ್ರೀಮಂತ್ ಮದುವೆಯಾಗಿದ್ದ. ಆದರೆ ಸೃಷ್ಟಿ ಪರ ಪುರುಷನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು.…

Read More

ಬಾಗಲಕೋಟೆ : ಯಾವುದೇ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡುವ ಹಿಂದಿನ ಉದ್ದೇಶ ಬಹಳ ದೊಡ್ಡದಾಗಿರುತ್ತದೆ. ಆದರೆ ಬಾಗಲಕೋಟೆಯಲ್ಲಿ ಕೇವಲ ಪಲ್ಯ ಮತ್ತು ಸಾಂಬಾರ್ ಮಾಡಲು ಬರಲ್ಲ ಎಂಬ ಕ್ಷುಲಕ ಕಾರಣಕ್ಕೆ ಪತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡದಲ್ಲಿ ನಡೆದಿದೆ. ಹೌದು ಬಾಗಲಕೋಟೆಯಲ್ಲಿ ಭೀಕರವಾದ ಕೊಲೆಯಾಗಿದ್ದು ಪತ್ನಿ ಸಾಕ್ಷಿತಾಳನ್ನು ಪತಿ ಬೀರಪ್ಪ ಕೊಲೆ ಮಾಡಿದ್ದಾನೆ. ಪ್ರೀತಿ ಮಾಡಿ ಓಡಿ ಹೋಗಿದ್ದ ಅಂತರ್ಜಾತಿಯ ಜೋಡಿಯನ್ನು ಬಳಿಕ ಹಿರಿಯರು ಸೇರಿಕೊಂಡು ಸಾಕ್ಷಿತ ಮತ್ತು ಬೀರಪ್ಪನ ಮದುವೆ ಮಾಡಿದ್ದರು. ಸದ್ಯ ಆರೋಪಿ ಬೀರಪ್ಪ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಲ್ಯ ಸಾಂಬಾರ್ ಚೆನ್ನಾಗಿಲ್ಲ ಎಂದು ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಪತಿ ಪತ್ನಿ ಸಾಕ್ಷಿತಾಳ ಜೊತೆ ಜಗಳ ಮಾಡಿ ಪತ್ನಿಯ ಕತ್ತು ಹಿಸುಕಿ ಕೊಂದಿದ್ದಾನೆ. ಇದೀಗ ಆರೋಪಿ ಬೀರಪ್ಪನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಬಾಗಲಕೋಟೆ ಜಿಲ್ಲೆಯ ಎಸ್ ಪಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ.

Read More

ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿಗಳ ಅವ್ಯವಹಾರ ಪ್ರಕರಣದ ಆರೋಪಿಯಾಗಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 24ನೇ ಎಸಿಎಂ ನ್ಯಾಯಾಲಯಕ್ಕೆ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಿದೆ. ತನಿಖೆಯ ಬೆಳೆ ಚಿತ್ರೀಕರಿಸಿದ ವಿಡಿಯೋ, ಎಫ್ಎಸ್ಎಲ್ ರಿಪೋರ್ಟ್ ಎಲ್ಲವನ್ನು ಉಲ್ಲೇಖಿಸಿ ಎಸ್ಐಟಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಜೀವಾ ಆತ್ಮಹತ್ಯೆ ತನಿಖೆಗೆ ಹೈಕೋರ್ಟ್ ಎಸ್ಐಟಿ ರಚನೆ ಮಾಡಿತ್ತು. ಸಿಬಿಐ ಎಸ್ಪಿ ವಿನಾಯಕ್ ವರ್ಮ, ಸಿಸಿಬಿ ಡಿಸಿಪಿ ಅಕ್ಷಯ್ ಮಚ್ಚೀಂದ್ರ, ISD ಎಸ್ ಪಿ ನಿಶಾ ಜೇಮ್ಸ್ ಒಳಗೊಂಡ ಎಸ್ಐಟಿ ತಂಡ ರಚನೆಯಾಗಿತ್ತು. ತನಿಖೆ ನಡೆಸಿ 90 ದಿನದಲ್ಲಿ ಎಸ್ಐಟಿ ಹೈಕೋರ್ಟಿಗೆ ವರದಿ ಸಲ್ಲಿಸಿತ್ತು. ವರದಿಯನ್ನು ಪರಿಶೀಲನೆ ನಡೆಸಿ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿತು. ಬಳಿಕ ವಿಚಾರಣಾ ನ್ಯಾಯಾಲಯಕ್ಕೆ ಜಾರಿ ಶೀಟ್ ಸಲ್ಲಿಕೆಗೆ ಅನುಮತಿ ನೀಡಿತು. ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿ, ಇದೀಗ ಎಸ್ಐಟಿ ಜಾರಿ ಶೀಟ್ ಸಲ್ಲಿಸಿದೆ. ವಕೀಲೆ ಜೀವಾ…

Read More

ದಕ್ಷಿಣಕನ್ನಡ : ಮಂಗಳೂರಿನಲ್ಲಿ ನಿನ್ನೆ ರಾತ್ರಿ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿಯನ್ನು ಲಾಂಗು, ಮಚ್ಚುಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಈಗ ಮೃತ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಭೇಟಿ ನೀಡಿ ಉತ್ತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಇದೇ ವೇಳೆ ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುತ್ತೇವೆ ಎಂದು ಬಿವೈ ವಿಜಯೇಂದ್ರ ಘೋಷಿಸಿದರು. ಸುಹಾಸ್ ಶೆಟ್ಟಿ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ, ಮೇಲ್ನೋಟಕ್ಕೆ ಪೊಲೀಸ್ ಇಲಾಖೆಯ ವೈಫಲ್ಯ ಕಂಡುಬರುತ್ತದೆ. ಸುಹಾಸ ಶೆಟ್ಟಿ ಹತ್ಯೆ ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೆ ಗ್ರಾಮದಲ್ಲಿ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ ವಿಶ್ವಾಸ ಇಲ್ಲದಂತಾಗಿದೆ.…

Read More