Author: kannadanewsnow05

ಮಂಡ್ಯದಲ್ಲಿ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಅನಾಥಶ್ರಮದಲ್ಲಿ ಪುಡ್ ಪಾಯಿಸನ್ ನಿಂದಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 6ನೇ ತರಗತಿ ವಿದ್ಯಾರ್ಥಿ ಕೇರ್ಲಾಂಗ್ (13) ಮೃತ ಬಾಲಕ ಎಂದು ತಿಳಿದುಬಂದಿದೆ. ಇದೀಗ ಈ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದ ಪೊಲೀಸರು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ ಕಾಗೆಪುರದಲ್ಲಿ ಈ ಒಂದು ಘಟನೆ ನಡೆದಿತ್ತು. ಗೋಕುಲ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಲಂಕೇಶ್, ಊಟ ಸಪ್ಲೈ ಮಾಡುತ್ತಿದ್ದ ಹೋಟೆಲ್ ಮಾಲೀಕ ಸಿದ್ದರಾಜು, ಮದನ್ ಕಲ್ಯಾಣ ಮಂಟಪದ ಮ್ಯಾನೇಜರ್ ಕೃಷ್ಣ ಎನ್ನುವವರನ್ನು ವಶಕ್ಕೆ ಪಡೆಯಲಾಗಿದೆ ಮೂರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮಳವಳ್ಳಿಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ವೃದ್ಧ ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿದ್ದ ವೈದ್ಯೆಗೆ ಇದೀಗ ಶೋಕಾಶ್ ನೋಟಿಸ್ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮೊಹ್ಸಿನ್ ಮೇರೆಗೆ ಕಾರಣ ಕೇಳಿ ಇದೀಗ ನೋಟಿಸ್ ನೀಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಡಿಎಂಇ ಡಾ. ಸುಜಾತ ರಾಥೋಡ್ ಅವರಿಂದ ವೈದ್ಯೆ ಪ್ರಿಯದರ್ಶಿನಿಗೆ ನೋಟಿಸ್ ನೀಡಲಾಗಿದೆ ನೋಟಿಸ್ ಗೆ ಲಿಖಿತ ಉತ್ತರ ನೀಡುವಂತೆ ಸೂಚಿಸಲಾಗಿಸೆ. ಹೌದು ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ ಪ್ರಿಯದರ್ಶಿನಿ ಎನ್ ಗೆ ಶೋಕಾಶ್ ನೋಟಿಸ್ ನೀಡಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶನಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೊಹಮ್ಮದ್ ಮೊಹ್ಸಿನ್ ಸೂಚನೆಯ ಮೇರೆಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ನೋಟಿಸ್ ಗೆ ಲಿಖಿತ ಉತ್ತರ ನೀಡುವಂತೆ ಪ್ರಿಯದರ್ಶಿನಿ ಎನ್ ಗೆ ಸೂಚಿಸಲಾಗಿದೆ.ತಪ್ಪಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ.…

Read More

ಮಂಗಳೂರು : ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಒಬ್ಬ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧಿನ ಕೈದಿಯನ್ನು ಪ್ರಕಾಶ್ ಮೂಲ್ಯ (48) ಎಂದು ತಿಳಿದುಬದಿದೆ. ಜೈಲಿನ ಶೌಚಾಲಯದಲ್ಲಿ ನೇಣಿಗೆ ಶರಣಾಗಿರುವ ಪ್ರಕಾಶ್ ಮೂಲ್ಯ ಮದ್ಯದ ವ್ಯಸನಿಯಾಗಿದ್ದ. ಪ್ರಕಾಶ್ ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್ ನಲ್ಲಿ ಜೈಲು ಸೇರಿದ್ದ. 12 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಪ್ರಕಾಶ್ ಅತ್ಯಾಚಾರ ಎಸಗಿದ್ದ. ಮೂಡಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಬೀಗ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Read More

ಚಾಮರಾಜನಗರ : ಇತ್ತೀಚಿಗೆ ಪತ್ನಿಯರ ಕಾಟಕ್ಕೆ ಗಂಡಂದಿರು ತಮ್ಮ ಜೀವ ಕಳೆದುಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಚಾಮರಾಜನಗರದಲ್ಲಿ ಅಂತದ್ದೇ ಘಟನೆ ವರದಿಯಾಗಿದ್ದು, ತಲೆಯಲ್ಲಿ ಕೂದಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಪತಿಯನ್ನು ಹೀಯಾಳಿಸಿ ಕಿರುಕುಳ ನೀಡಿದ್ದಾಳೆ ಇದರಿಂದ ಮನನೊಂದು ಪ್ರತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹೌದು ಗಂಡನ ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಕಿರುಕುಳ ನೀಡಿದ್ದಾಳೆ. ಇದರಿಂದ ಮನನೊಂದು ಗಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಗುಡಿಗಾಲದಲ್ಲಿ ಈ ಒಂದು ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪರಶಿವಮೂರ್ತಿ (30) ಎಂದು ತಿಳಿದು ಬಂದಿದೆ.ಎರಡು ವರ್ಷದ ಹಿಂದೆ ಕಳಕಿಪುರದ ಮಮತಾ ಜೊತೆಗೆ ಮದುವೆ ಆಗಿತ್ತು. ಮದುವೆ ಹಳಿಕ ಪರಶಿವಮೂರ್ತಿ ತಲೆಕೂದಲು ಉದುರಿತ್ತು. ಹೊರಗೆ ಹೋದರೆ ನನಗೆ ನಾಚಿಕೆ ಆಗುತ್ತದೆ ಎಲ್ಲರೂ ಅಪಹಾಸ್ಯ ಮಾಡುತ್ತಾರೆ ನನ್ನ ಗಂಡ ಎಂದು ಹೇಳೋಕೆ ಮುಜುಗರ ಆಗುತ್ತದೆ ಎಂದು ಕಿರುಕುಳ ನೀಡಿದ್ದಳು. ಇದೀಗ ಪರಶಿವಮೂರ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದಕ್ಕೂ ಮೊದಲು…

Read More

ವಿಜಯಪುರ : ಸಿದ್ದರಾಮಯ್ಯ ಇರುವವರೆಗೂ ನಮ್ಮನ್ನು ಯಾರಿಂದಲೂ ಏನೂ ಮಾಡಲಾಗದು ಎಂಬ ಧೈರ್ಯ ಮುಸ್ಲಿಮರಿಗೆ ಬಂದಿದೆ. ಇದನ್ನೆಲ್ಲ ವಿರೋಧಿಸಿ ಹೋರಾಟ ಮಾಡುವಲ್ಲಿ ಬಿಜೆಪಿಯೂ ವಿಫಲವಾಗಿದೆ. ಈ ಮೊದಲೇ ಸರಿಯಾಗಿ ಹೋರಾಟ ಮಾಡಿಕೊಂಡು ಬಂದಿದ್ದರೆ ಇದೆಲ್ಲಾ ಹೇಗೆ ಆಗುತ್ತಿತ್ತು. ನಮ್ಮ ರಾಜ್ಯಾಧ್ಯಕ್ಷ ವಿಜಯೇಂದ್ರ ಅಡ್ಜೆಸ್ಟ್ಮೆಂಟ್ ಗಿರಾಕಿ ಎಂದು ಶಾಸಕ  ಬಸನಗೌಡ ಪಾಟೀಲ್ ವಾಗ್ದಾಳಿ ನಡೆಸಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ನಮ್ಮವರು ಕೂಡ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಹಿಂದೆ ಕೆಜೆ ಹಳ್ಳಿ ಡಿಜೆ ಹಳ್ಳಿ, ಹುಬ್ಬಳ್ಳಿ ಗಲಾಟೆಗಳ ಸಂದರ್ಭಗಳಲ್ಲಿ ನಾಲ್ಕಾರು ಎನ್​ಕೌಂಟತರ್ ಮಾಡಿದ್ದರೆ ಸರಿಯಾಗಿರುತ್ತಿತ್ತು. ಇಂತಹ ಘಟನೆಗಳಲ್ಲಿ ನಮ್ಮವರು ದೊಡ್ಡದೇನೂ ಮಾಡಿಲ್ಲ. ನಮ್ಮವರು ಮಾಡಿದ ತಪ್ಪಿನಿಂದಲೇ ಹಿಂದೂ ಜನರು ಬೇಜಾರಾದರು. ಹಾಗಾಗಿ ಕೆಟ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು. 136 ಸ್ಥಾನಗಳು ಬರಲು ನಮ್ಮ ಮೇಲಿನ ಹಿಂದುಗಳ ಬೇಸರವೇ ಪ್ರಮುಖ ಕಾರಣ ಎಂದರು. ಸಾಮಾನ್ಯ ಶಿಕ್ಷಣ ಕಾಯ್ದೆ ಮದರಸಾಗಳಿಗೆ ಅನ್ವಯವಾಗಬೇಕು. ಅಲ್ಲಿ ರಾಷ್ಟ್ರಗೀತೆ ಹಾಡಿ ಗಣಿತ, ವಿಜ್ಞಾನ. ಸಮಾಜದಂತಹ ವಿಷಯಗಳ ಬೋಧನೆ ಆಗಬೇಕು. ಮದರಸಾಗಳಲ್ಲಿ…

Read More

ವಿಜಯಪುರ : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾರಾವ್ ಸದ್ಯ ಬೆಂಗಳೂರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈ ಒಂದು ಪ್ರಕರಣದಲ್ಲಿ ಸಚಿವರ ಹೆಸರು ಕೇಳಿ ಬರುತ್ತಿದೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿತ್ತು. ಆದರೆ ಇದಕ್ಕೆ ಮತ್ತಷ್ಟು ಪುಷ್ಟಿ ನೀಡುವಂತೆ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಟಿ ರನ್ಯಾ ಜೊತೆಗೆ ಸಂಪರ್ಕದಲ್ಲಿದ್ದ ಇಬ್ಬರು ಸಚಿವರ ಹೆಸರನ್ನು ನಾಳೆ ಸದನದಲ್ಲಿ ಬಹಿರಂಗಪಡಿಸುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣ ಕುರಿತು ಸೋಮವಾರ ಸದನದಲ್ಲಿ ಮಾತನಾಡುವೆ. ಆಕೆಯೊಂದಿಗೆ ಸಂಪರ್ಕವಿರುವ ಇಬ್ಬರು ಸಚಿವರ ಹೆಸರನ್ನು ಸದನದಲ್ಲಿ ಹೇಳುವೆ. ಈಗ ಆ ಬಗ್ಗೆ ಮಾಧ್ಯಮಗಳ ಮುಂದೆ ಹೇಳುವುದಿಲ್ಲ. ಇದು ಸದನದ ರಹಸ್ಯ ಎಂದರು. ಆಕೆಗೆ ಪ್ರೊಟೋಕಾಲ್ ಕೊಟ್ಟವರ ಮಾಹಿತಿ ಸಂಗ್ರಹ ಮಾಡಿದ್ದೇವೆ. ಚಿನ್ನ ಎಲ್ಲಿಂದ ತಂದಿದ್ದಾರೆ? ಎಲ್ಲಿಟ್ಟು ತಂದಿದ್ದಾರೆ ಎಂಬುದು ಗೊತ್ತಿದೆ ಎಂದು ಯತ್ನಾಳ್ ಹೇಳಿದರು. ರನ್ಯಾಗೆ ಕೆಐಎಡಿಬಿಯಿಂದ 12 ಎಕರೆ ಜಮೀನು…

Read More

ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಸುಮಾರು 75 ಕೋಟಿಗೂ ಅಧಿಕ ಮೌಲ್ಯದ MDMA ಅನ್ನು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿಕೊಂಡಿದ್ದಾರೆ. ಮಂಗಳೂರು ಪೊಲೀಸರ ಈ ಒಂದು ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಮಂಗಳೂರು ಪೋಲಿಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ. ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ…

Read More

ವಿಜಯಪುರ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ರಾಜ್ಯ ಪಾಕಿಸ್ತಾನದ ಒಂದು ಭಾಗದಂತಾಗಿದೆ. ಮದರಸಾಗಳಿಗೆ ಹಣ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉರ್ದು ಶಾಲೆಗಳಿಗೆ 100 ಕೋಟಿ ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಮದರಸಾದಲ್ಲಿ ದೇಶದ್ರೋಹಿ ವಿಚಾರಗಳನ್ನು ಕಲಿಸುತ್ತಾರೆ. ಇಸ್ಲಾಂ ಎಂದರೆ ಅನ್ಯ ಧರ್ಮಗಳನ್ನು ನಾಶಪಡಿಸುವುದು ಎಂದರ್ಥ ಎಂದು ಶಾಸಕ ಬಚನಗೌಡ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅನ್ಯಕೋಮಿನವರಿಗೆ ಸರ್ಕಾರದ ಬಗ್ಗೆ ಸ್ವಲ್ಪವೂ ಭಯ ಇಲ್ಲದಂತಾಗಿದೆ. ಅವರು ಸ್ವೇಚ್ಛಾಚಾರದಿಂದ ರಾಜ್ಯದಲ್ಲಿ ಜೀವನ ಮಾಡುತ್ತಿದ್ದಾರೆ. ಸಚಿವರು ಕೂಡ ಏನನ್ನು ಮಾಡುತ್ತಿಲ್ಲ ಅವರೆಲ್ಲ ಜೀರೋ ಆಗಿದ್ದಾರೆ. ತಮ್ಮ ಸ್ಥಾನಕ್ಕೆ ಡಾ.ಜಿ ಪರಮೇಶ್ವರ್ ರಾಜೀನಾಮೆ ನೀಡುತ್ತಿಲ್ಲ. ಸಿಎಂಗೆ ಹೇಳಿ ಬೇರೆ ಇಲಾಖೆಯನ್ನಾದರೂ ತೆಗೆದುಕೊಳ್ಳಲಿ ಎಂದು ಗ್ರಹದ ಚಿವರ ವಿರುದ್ಧ ಶಾಸಕ ಯತ್ನಾಳ್ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಇರೋವರ್ಗು ಮುಸ್ಲಿಮರಿಗೆ ನಮ್ಮನ್ನು ಏನು ಮಾಡೋಕೆ ಆಗಲ್ಲ ಎಂಬ ಧೈರ್ಯ ಬಂದಿದೆ. ಇದನ್ನೆಲ್ಲ ವಿರೋಧಿಸಿ ಹೋರಾಟ ಮಾಡಲು ಬಿಜೆಪಿಯು ಕೂಡ…

Read More

ಮಂಡ್ಯ : ಕಳೆದ 3 ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆಯು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಿಂಡಬೋಗನಹಳ್ಳಿಯಲ್ಲಿ ನಡೆದಿದೆ. ಮೃತಳನ್ನು ದಾವಣಗೆರೆ ಮೂಲದ ರಾಧಿಕಾ (23) ಎಂದು ತಿಳಿಬಂದಿದೆ. ರಾಧಿಕಾ 3 ತಿಂಗಳ ಹಿಂದೆ ಮಂಡ್ಯದ ಅಜೇಯನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಅಜೇಯ್ ಮನೆಯವರು ಇಬ್ಬರನ್ನು ಮನೆಗೆ ಸೇರಿಸಿಕೊಳ್ಳಲಿಲ್ಲ. ಹಾಗಾಗಿ ಅಜೇಯ್ ಹಾಗು ರಾಧಿಕಾ ಇಬ್ಬರು ಅಜೇಯ್ ಚಿಕ್ಕಪ್ಪನ ಮನೆಯಲ್ಲಿ ವಾಸ ಮಾಡುತ್ತಿದ್ದರು. ಆದರೆ ಅದೇನಾಯ್ತೋ ಗೊತ್ತಿಲ್ಲ ಇಂದು ಅಜೇಯ್ ಚಿಕ್ಕಪ್ಪನ ಮನೆಯಲ್ಲಿ ರಾಧಿಕಾಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆ ಕುರಿತು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೀದರ್ : ಬೀದರ್ ನಲ್ಲಿ ಘೋರವಾದಂತಹ ದುರಂತ ನಡೆದಿದ್ದು, ಸ್ನೇಹಿತರ ಜೊತೆಗೆ ಬಾವಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಬೀದರ್ ಜಿಲ್ಲೆಯ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಿಠಲಪುರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರೂ ಯುವಕರು ನೀರು ಪಾಲಾಗಿದ್ದಾರೆ. ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಿಠಲಪುರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ವಿಠಲಪುರ ನಿವಾಸಿ ಆದಂತಹ ಪ್ರಶಾಂತ ಯಲಗುರ್ತಿ ಹಾಗೂ ಶಿವಾಜಿ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ದಾಸರವಾಡಿ ಗ್ರಾಮದ ನಿವಾಸಿ ಶಿವಾಜಿ ಹಾಗು ಪ್ರಶಾಂತ್ ನಿನ್ನೆ ಸ್ನೇಹಿತರ ಜೊತೆಗೆ ಈಜಲು ಹೋಗಿದ್ದಾಗ ಈ ಒಂದು ದುರಂತ ನಡೆದಿದೆ. ಘಟನೆ ಕುರಿತಂತೆ ಭೀಮನಖೇಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More