Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ ಇಬ್ಬರು ಪ್ರವಾಸಿಗರು ನೀರು ಪಾಲಾಗಿ ಸಾವನಪ್ಪಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಜಗದೀಶ್ ಹಾಗು ಛೋಟಾ ಎಂದು ತಿಳಿದುಬಂದಿದೆ. 7 ಸ್ನೇಹಿತರು ಸೇರಿ ಚಿಕ್ಕಮಂಗಳೂರು ಜಿಲ್ಲಾ ಪ್ರವಾಸಕ್ಕೆ ಬಂದಿದ್ದಾಗ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ, ಬೆಂಗಳೂರಿನಿಂದ ಸ್ನೇಹಿತರ ಜೊತೆಗೆ ಜಗದೀಶ್ ಮತ್ತು ಚೋಟ ಎನ್ನುವ ಯುವಕರು ಪ್ರವಾಸಕ್ಕೆ ಬಂದಿದ್ದರು. ಘಟನೆ ಕುರಿತಂತೆ ಕಳಸ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮಂಗಳಮುಖಿಯನ್ನು ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ ನಡೆಸಲಾಗಿದೆ. ಮಂಗಳಮುಖಿಯರಿಂದಲೇ ಮಂಗಳಮುಖಿಯ ಮೇಲೆ ಈ ಒಂದು ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಹೌದು ಕಲ್ಬುರ್ಗಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಈ ಒಂದು ಘಟನೆ ನಡೆದಿದ್ದು, ಕಲ್ಬುರ್ಗಿ ಜನತೆಯನ್ನು ಬೆಚ್ಚಿ ಬೀಳಿಸಿದೆ. ಘಟನೆ ನಡೆದಿದ್ದು ಇಷ್ಟೇ. ಹಲ್ಲೆಗೆ ಒಳಗಾದ ಅಂಕಿತಾ ಎನ್ನುವ ಮಂಗಳಮುಖಿ ಬಿಕ್ಷಾಟನೆ ಮಾಡಿದ್ದಳು. ಆದರೆ ಬಿಕ್ಷಾಟನೆ ಮಾಡಿದ್ದ ಪಾಲು ಕೊಡದಿದ್ದಕ್ಕೆ ಉಳಿದ ಮಂಗಳಮುಖಿಯರು ಅಂಕಿತಾಳ ಮೇಲೆ ಈ ರೀತಿ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ತಲೆ ಕೂದಲು ಬೋಳಿಸಿ ಬೆತ್ತಲೆ ಮಾಡಿ ಹಲೆ ಮಾಡಿದ್ದಾರೆ. ಹಾಡ ಹಗಲೇ ಈ ಘಟನೆ ನಡೆದಿದ್ದು ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆ ಕುರಿತು ಅಶೋಕ್ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವಿಜಯನಗರ : ಸಮರ್ಪಕವಾದ ಉತ್ತರ ನೀಡದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವಿರುದ್ಧ ಲೋಕಾಯುಕ್ತ ಇದೀಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ನಿನ್ನೆ ಕಚೇರಿಗೆ ಭೇಟಿ ನೀಡಿದ ವೇಳೆ ಸಮರ್ಪಕವಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಉಪ ಲೋಕಾಯುಕ್ತ ಬಿ ವೀರಪ್ಪ, ಹೊಸಪೇಟೆ ನಗರದಲ್ಲಿರುವ ಇಲಾಖೆ ಕಚೇರಿಗೆ ಬಿ.ವಿರಪ್ಪ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದರು. ಇಲಾಖೆ ಕಚೇರಿಗೆ ಉಪಲೋಕಾಯುಕ್ತ ಬಿ ವೀರಪ್ಪ ನೆನ್ನೆ ಭೇಟಿ ನೀಡಿದ್ದರು. 107 ಬಾಲ್ಯ ವಿವಾಹ ಪ್ರಕರಣಗಳ ಪೈಕಿ 49 FIR ದಾಖಲಿಸಲಾಗಿದೆ. ಕಚೇರಿ ಅಧಿಕ್ಷಕ ನಾಗಭೂಷಣ ಫೋನ್ ಪೇ ಹಾಗೂ ಯುಪಿಐ ಪರಿಶೀಲನೆ ಮಾಡಿದ್ದಾರೆ. ಫೋನ್ ಪೇ ಮತ್ತು ಯುಪಿಐ ಪರಿಶೀಲನೆ ಮಾಡಿದಾಗ ಅದು ಡಿಲೀಟ್ ಮಾಡಿದ್ದು ಗೊತ್ತಾಗಿದೆ. ಉಪನಿರ್ದೇಶಕಿ ಶ್ವೇತಾ ಮೊಬೈಲ್ ಫೋನ್ ಪೆ ವಹಿವಾಟು ತಪಾಸಣೆ ಮಾಡಿದ್ದಾರೆ. ಗನ್ ಮ್ಯಾನ್ ಮೂಲಕ…
ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ ಹಾಗೂ ಹಲ್ಲೆ ಕೊಲೆ ಪ್ರಕರಣಗಳು ಹೆಚ್ಚುತ್ತಿವೆ ಈ ನೆಲೆಯಲ್ಲಿ ಕುರಿಗಾಹಿಗಳ ರಕ್ಷಣೆಗಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು ಕುರಿಗಾಹಿಗಳ ರಕ್ಷಣೆಗಾಗಿ ಪ್ರತ್ಯೇಕ ಕಾನೂನು ರಚನೆ ಮಾಡಲು ಇದೀಗ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಹೌದು ಕುರಿಗಾಹಿಗಳ ದೌರ್ಜನ್ಯ ತಡೆಗಾಗಿ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಸಾಂಪ್ರದಾಯಿಕ ಕುರಿಗಾಹಿಗಳ ರಕ್ಷಣೆಗೆ ಪ್ರತ್ಯೇಕ ವಿಧೇಯಕ ತರಲು ಚಿಂತನೆ ನಡೆಸಲಾಗುತ್ತಿದೆ. ಪಶು ಸಂಗೋಪನ ಇಲಾಖೆಯಿಂದ ವಿಧೇಯಕ ಮಂಡನೆಗೆ ತಯಾರಿ ಮಾಡಲಾಗುತ್ತಿದ್ದು, ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ವಲಸೆ ಕುರಿಗಾಹಿಗಳ ಆಸ್ತಿಪಾಸ್ತಿಗಳ ಒತ್ತುವರಿ ಕೂಡ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕುರಿಗಾಹಿಗಳ ರಕ್ಷಣೆಗೆ ಪ್ರತ್ಯೇಕ ಕಾನೂನು ರಚಿಸಲು ಚಿಂತನೆ ನಡೆಸುತ್ತಿದೆ. ಅಲ್ಲದೆ ಇತ್ತೀಚೆಗೆ ಅಷ್ಟೇ ಬಾಗಲಕೋಟೆ ಜಿಲ್ಲೆಯ ಕೆರೂರು ಗ್ರಾಮದ ಬಳಿ, ರಾತ್ರಿಯ ವೇಳೆ ಕುರಿಗಳನ್ನು ಕಳ್ಳತನ ಮಾಡಲು ದುಷ್ಕರ್ಮಿಗಳು ಬಂದಿದ್ದರು. ಇವಳೆ ಕುರಿಗಾಹಿ ಓರ್ವನನ್ನು ಹಿಡಿದಿದ್ದ, ಆದರೆ ಉಳಿದವರು ಬಂದು…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದ ಕೊಲೆಯಾಗಿದ್ದು ಸ್ನೇಹಿತರು ಸೇರಿ ಇನ್ನೊಬ್ಬ ಸ್ನೇಹಿತನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಲೆಯ ಭೀಕರತೆ ಯಾವ ರೀತಿ ಇತ್ತು ಎಂದರೆ, 12 ಬಾರಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹೌದು ಕಲಬುರ್ಗಿಯಲ್ಲಿ ಸ್ನೇಹಿತನನ್ನೇ ಹತ್ಯೆಗೈದ ಫ್ರೆಂಡ್ಸ್. ಕಲ್ಲು ಎತ್ತು ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಸುಮಾರು 12 ಬಾರಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಯಾದ ಯುವಕನನ್ನು ರೇವಣಸಿದ್ದಪ್ಪ ಎಂದು ತಿಳಿದುಬಂದಿದ್ದು ಮನೆಯಲ್ಲಿದ್ದ ಈತನನ್ನು ಫೋನ್ ಮಾಡಿ ಮನೆಯಿಂದ ಹೊರಗಡೆ ಕರೆಸಿಕೊಂಡಿದ್ದಾರೆ. ಬಳಿಕ ಬೈಕ್ ನಲ್ಲಿ ಸ್ನೇಹಿತ ರೇವನಸಿದ್ದಪ್ಪನನ್ನು ಕರೆತಂದು ನಡು ರಸ್ತೆಯ ಮೇಲೇನೆ 12 ಬಾರಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಕೊಲೆಯ ಭಯಾನಕ ದೃಶ್ಯ ಸೆರೆಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂಬುವುದರ ಕುರಿತು ತನಿಖೆ ಕೈಗೊಂಡಿದ್ದಾರೆ.
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಾಮರಾಜನಗರದಲ್ಲಿ ವೇಗವಾಗಿ ಬಂದಂತಹ ಕಾರು ಒಂದು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೆ ಸಾವನ್ನಪ್ಪಿದ್ದರೆ, ಉಳಿದ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಮೃತರನ್ನು ನಂದನ್ ಹಾಗೂ ಜೀವನ್ ಎಂದು ಗುರುತಿಸಲಾಗಿದೆ. ಸುನೀಲ್, ಧನುಷ್ ಮತ್ತು ಶಶಾಂಕ್ ತೀವ್ರವಾಗಿ ಗಾಯಗೊಂಡಿದ್ದಾರೆ.ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದಾಗ ಚೆಕ್ಪೋಸ್ಟ್ ಸಮೀಪ ಮರಕ್ಕೆ ಡಿಕ್ಕಿಯಾಗಿ ಅವಘಡ ಉಂಟಾಗಿದೆ. ಎಲ್ಲರೂ ವಿದ್ಯಾರ್ಥಿಗಳಾಗಿದ್ದು, ಮದುವೆಗೆ ಬಂದಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡ ಸುನೀಲ್, ಧನುಷ್ ಮತ್ತು ಶಶಾಂಕ್ ನನ್ನು ತಕ್ಷ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಚಾಮರಾಜನಗರ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಯಾದಗಿರಿ : ಯಾದಗಿರಿಯಲ್ಲಿ ಭೀಕರವಾದಂತಹ ಕೊಲೆಯಾಗಿದ್ದು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ನಡು ರಸ್ತೆಯಲ್ಲೇ ಇಬ್ಬರನ್ನು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸದ್ಯಾಪುರ ಎಂಬ ಗ್ರಾಮದ ಬಳಿ ನಡೆದಿದೆ. ಇಂದು ಸಾದ್ಯಾಪುರ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸಾದ್ಯಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮದ್ದರಿಕಿ ಗ್ರಾಮದ ಮಾಪಣ್ಣ ಹಾಗೂ ಅಲಿಸಾಬ್ ಎನ್ನುವವರ ಕೊಲೆ ಆಗಿದೆ ಎಂದು ತಿಳಿದುಬಂದಿದೆ. ಬೈಕ್ನಲ್ಲಿ ತೆರಳುವಾಗ ದುಷ್ಕರ್ಮಿಗಳು ಮಾರಕಾಸ್ತ್ರರಗಳಿಂದ ದಾಳಿ ಮಾಡಿದ್ದಾರೆ. ಓರ್ವ ವ್ಯಕ್ತಿ ರಸ್ತೆಯಲ್ಲಿ ನರಳಾಡಿ ಸಾವನಪ್ಪಿದ್ದರೆ, ಮತ್ತೊರ್ವ ವ್ಯಕ್ತಿ ಆಸ್ಪತ್ರೆ ದಾಖಲಿಸಿದಾಗ ಚಿಕಿತ್ಸೆ ಫಲೀಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಆಗಾಗ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಬೆಂಗಳೂರಿನ ತಿಗಳರಪಾಳ್ಯದಲ್ಲಿರುವ ಶನೇಶ್ವರ ನಗರದಲ್ಲಿ ಹಳೆ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾವಿನಲ್ಲಿ ಆಕಸ್ಮಿಕ ಅಗ್ನಿ ಸಂಭವಿಸಿದೆ. ಬೆಂಗಳೂರಿನ ತಿಗಳರಪಾಳ್ಯ ಮುಖ್ಯ ರಸ್ತೆಯ ಶನೇಶ್ವರ ನಗರದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನೆ ಕುರಿತು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ : ಹಿಂದುತ್ವದಿಂದ ದೂರ ಸರಿದ ಪಕ್ಷವನ್ನು ಹಿಂದುತ್ವದತ್ತ ತರುತ್ತೇವೆ. ನಮಗೆ ಪ್ರಧಾನಿ ನರೇಂದ್ರ ಮೋದಿ ಮೇಲೆ ಮತ್ತು ಬಿಜೆಪಿ ಮೇಲೆ ವಿಶ್ವಾಸವಿದೆ. ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಮೇಲೆ ನಮಗೆ ಯಾವುದೇ ವಿಶ್ವಾಸವಿಲ್ಲ. ಮಹಾರಾಷ್ಟ್ರ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ ಹಾಗೂ ರಾಜಸ್ಥಾನ, ದೆಹಲಿಯಲ್ಲಿ ಹಿಂದುತ್ವದ ಮೂಲಕ ಪಕ್ಷ ಗೆದ್ದಿದೆ. ಕರ್ನಾಟಕದಲ್ಲೂ ಹಿಂದುತ್ವದ ಆಧಾರದ ಮೇಲೆ ಪಕ್ಷ ಗೆಲ್ಲುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಹೊಸ ಪಕ್ಷ ಕಟ್ಟಲ್ಲ. ಈಗಿರುವ ಪಕ್ಷದಲ್ಲೇ ರಿಪೇರಿ ಮಾಡಬೇಕಾಗಿದೆ. ಯಾವ ಕಾಲಕ್ಕೂ ಬಿಜೆಪಿ ಬಿಡಲ್ಲ. ಹಿಂದುತ್ವದ ನಾಯಕರನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಅಸ್ಸಾಂ,ಮಧ್ಯಪ್ರದೇಶ ಹಾಗೂ ರಾಜಸ್ಥಾನ, ದೆಹಲಿಯಲ್ಲಿ ಹಿಂದುತ್ವದ ಮೂಲಕ ಪಕ್ಷ ಗೆದ್ದಿದೆ. ಕರ್ನಾಟಕದಲ್ಲೂ ಹಿಂದುತ್ವದ ಆಧಾರದ ಮೇಲೆ ಪಕ್ಷ ಗೆಲ್ಲುತ್ತದೆ ಎಂದು ತಿಳಿಸಿದರು. ಹೈಕಮಾಂಡ್ ಖಡಕ್ ಸೂಚನೆ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೈಲೆಂಟಾಗಿದ್ದ ವಿಜಯಪುರ ನಗರ…
ಬೆಂಗಳೂರು : ಹೋಳಿ ಹಬ್ಬದ ಅಂಗವಾಗಿ ಎಲ್ಲೆಡೆ ರಂಗುರಂಗಿನ ಹೋಳಿ ಹಬ್ಬ ಆಚರಿಸಲಾಗುತ್ತಿದ್ದು, ಬೆಂಗಳೂರಿನ ಸರ್ಜಾಪುರದಲ್ಲಿ ಹೋಳಿ ಹಬ್ಬದ ದಿನದಂದೆ ಘೋರವಾದ ದುರಂತ ಸಂಭವಿಸಿದೆ. ಹೋಳಿ ಹಬ್ಬ ದಿನದಂದೇ ಮಾರಾಮಾರಿ ನಡೆದು ಗಲಾಟೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ. ಹೌದು ಹೋಳಿ ಹಬ್ಬದ ವೇಳೆ ಮಾರಾಮಾರಿ ನಡೆದು ಈ ಒಂದು ಗಲಾಟೆಯಲ್ಲಿ ಮೂವರು ಸಾವನ್ನಾಪ್ಪಿದ್ದರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮೃತ ಮೂವರನ್ನು ಬಿಹಾರ್ ಮೂಲದವರು ಎಂದು ತಿಳಿದುಬಂದಿದೆ.ಕುಡಿದ ನಶೆಯಲ್ಲಿ ಕಾರ್ಮಿಕರ ನಡುವೆ ಮಾರಮಾರಿ ನಡೆದಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ, ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.














