Author: kannadanewsnow05

ವಿಜಯಪುರ : ವಿಜಯಪುರದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಹಾಡಹಗಲೇ ಬ್ಲೇಡ್ ನಿಂದ ಕತ್ತಿಗೆ ಹೊಡೆದು ಆಟೋ ಚಾಲಕನ ಹತ್ಯೆಗೆ ಯತ್ನಿಸಲಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಅಂಬರೀಶ ಕೂಡಗಿ ಹಲ್ಲೆಗೆ ಒಳಗಾದ ಆಟೋ ಚಾಲಕ ಎಂದು ತಿಳಿದುಬಂದಿದೆ. ಅಂಬರೀಷ್ ಆಟೋ ಏರಿದ್ದ ಅಪರಿಚಿತ ವ್ಯಕ್ತಿ ಒಬ್ಬ ಅಂಬರೀಶ್ ಹತ್ಯೆಗೆ ಯತ್ನಿಸಿದ್ದಾನೆ. ಆಟೋ ಚಾಲನೆ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬ್ಲೇಡ್ ಯಿಂದ ಕತ್ತಿಗೆ ಹೊಡೆದು ಅಪರಿಚಿತ ವ್ಯಕ್ತಿ ಸ್ಥಳದಿಂದ ಪರಾರಿ ಯಾಗಿರುವ ಘಟನೆ ವರದಿಯಾಗಿದೆ. ಕೂಡಲೆ ಗಾಯಾಳು ಅಂಬರೀಶ್ ನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಾವಣಗೆರೆ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಹೊನ್ನೆಬಾಗಿ ಗ್ರಾಮದಲ್ಲಿ ಮಾರಾಕಾಸ್ತ್ರಗಳನ್ನ ಹಿಡಿದು ಮಾರಮಾರಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಹೊನ್ನೇಬಾಗಿ ಎಂಬ ಗ್ರಾಮದಲ್ಲಿ ಶಾಸಕ ಶಿವಗಂಗಾ ಬಸವರಾಜ ಬೆಂಬಲಿಗರ ಮಾರಾಮಾರಿ ನಡೆದಿದೆ. ಎರಡು ದಿನ ಹಿಂದೆ ವಾಹನ ನಿಲ್ಲಿಸುವ ವಿಚಾರಕ್ಕೆ ಜಗಳವಾಗಿತ್ತು. ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ಸಂತೆಯಲ್ಲಿ ಜಗಳವಾಗಿತ್ತು. ಇದೇ ಕಾರಣಕ್ಕೆ ಸ್ವಗ್ರಾಮ ಹೊನ್ನೇಬಾಗಿಯಲ್ಲಿ ಪರಸ್ಪರ ಹೊಡೆದಾಟ ನಡೆದಿದೆ ಒಂದು ಗುಂಪಿನ ಇರ್ಫಾನ್ ಬೇಗ್ (28), ಇಫ್ತಾರ್ ಅಲಿ, (22) ಮಲಿಕ್ (30), ನೌಶಾದ್ (41) ಸೇರಿದಂತೆ ಐವರಿಗೆ ಗಂಭೀರವಾದ ಗಾಯಗಳಾಗಿವೆ. ಮತ್ತೊಂದು ಗುಂಪಿನ ಸಯ್ಯದ್ ಗನಿ (26), ಸೈಯದ್ ತನ್ವೀರ್ (30), ಸೈಯದ್ ಅಬ್ರಹಾಂ (37) ನ್ಯಾಮತ್ (34) ಸೇರಿದಂತೆ ಐವರಿಗೆ ಗಂಭೀರವಾದ ಗಾಯಗಳಾಗಿವೆ.ತಕ್ಷಣ ಗಾಯಾಳುಗಳನ್ನು ಚೆನ್ನಗಿರಿ ಮತ್ತು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ.

Read More

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಕೆಲ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತೆ ಅಂತ ವದಂತಿ ಹರಡಿತ್ತು. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅದಕ್ಕೆ ತೆರೆಯೆಳೆದಿದ್ದಾರೆ. ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೌದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್‌ ನ್ಯೂಸ್‌ ನೀಡಿದ್ದಾರೆ.ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಪರಿಷ್ಕರಣೆ ಅಥವಾ ಕಡಿತಗೊಳಿಸುವಿಕೆ ಇಲ್ಲ. ಕೆಲವು ವದಂತಿಗಳು ಫಲಾನುಭವಿಗಳ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಹಬ್ಬಿದ್ದವು, ಆದರೆ ಈ ವದಂತಿ ಸುಳ್ಳು ಎಂದು ತಳ್ಳಿಹಾಕಿದ್ದಾರೆ. ಪ್ರತಿ ತಿಂಗಳು ಸರಾಸರಿ 10,000 ರಿಂದ 15,000 ಹೊಸ ಫಲಾನುಭವಿಗಳು ಈ ಯೋಜನೆಗೆ ಸೇರ್ಪಡೆಯಾಗುತ್ತಿದ್ದಾರೆ. ಇದರಿಂದಾಗಿ ಯೋಜನೆಯ ವ್ಯಾಪ್ತಿಯು ಇನ್ನಷ್ಟು ವಿಸ್ತರಿಸುತ್ತಿದೆ. ಮತ್ತು ಹೆಚ್ಚಿನ ಮಹಿಳೆಯರಿಗೆ ಆರ್ಥಿಕ ಸಹಾಯ ದೊರೆಯುತ್ತಿದೆ. ಈ ಯೋಜನೆಯ ಹಣವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ಮೂಲಕ ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Read More

ಕಲಬುರ್ಗಿ : ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ. ತಮ್ಮ ಭ್ರಷ್ಟಾಚಾರ ತಪ್ಪಿಸಿಕೊಳ್ಳಲು ಗ್ರಾಮ ಪಂಚಾಯತಿ ಅಧ್ಯಕ್ಷರ ಮೇಲೆ ಹಾಕುತ್ತಿದ್ದಾರೆ ಎಂದು ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಗಂಭೀರವಾಗಿ ಆರೋಪಿಸಿದರು. ಇಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ. ತಮ್ಮ ಭ್ರಷ್ಟಾಚಾರ ತಪ್ಪಿಸಿಕೊಳ್ಳಲು ಗ್ರಾಮ ಪಂಚಾಯತಿ ಅಧ್ಯಕ್ಷರ ಮೇಲೆ ಹಾಕುತ್ತಿದ್ದಾರೆ. ಅವರು ಹೇಳಿದ ಎಲ್ಲಾ ಗ್ರಾಂಪಂ ಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರೇ ಇದ್ದಾರೆ ಅಲ್ಲದೇ ಶಾಸಕ ಬಿ.ಆರ್ ಲೆಟರ್ ಹೆಡ್ ನಲ್ಲೆ ಮನೆಗಳು ಮಂಜೂರಾಗಿವೆ. ಇಲಾಖೆಯಿಂದ ಮನೆಗಳನ್ನು ಮಂಜೂರು ಮಾಡಿಕೊಂಡು ಬಂದಿದ್ದಾರೆ. ಆದರೆ ಈಗ ಶಾಸಕರು ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ತಾನು ಮಾತ್ರ ಸರಿ ಎಂದು ಬಿಂಬಿಸೋಕೆ ಈ ರೀತಿ ಮಾಡ್ತಿದ್ದಾರೆ. ಸಚಿವ ಸಂಪುಟ ಬದಲಾವಣೆ ಆಗ್ತಿದೆ ಅದಕ್ಕೆ ಈ ರೀತಿ ಮಾಡುತ್ತಿರಬಹುದು.ಬ್ಲ್ಯಾಕ್ ಮೇಲ್ ಮಾಡಿ ಹುದ್ದೆ ಪಡೆದುಕೊಳ್ಳುವುದಕ್ಕೆ ಮಾಡ್ತಿರಬಹುದು ಈ ಹಿಂದೆಯೂ ಬಿ.ಆರ್ ಪಾಟೀಲ್…

Read More

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮಿಕ್ಸ್ ಚರ್ ತಯಾರಿಸುವ ಶೆಡ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಗಳೂರಿನ ಅಂದ್ರಳ್ಳಿಯ ಗಣಪತಿ ದೇಗುಲ ರಸ್ತೆಯಲ್ಲಿರುವ ಶೆಡ್ ನಲ್ಲಿ ಮಿಕ್ಸ್ ಚರ್ ತಯಾರಿಸುವ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಈ ಒಂದು ಅಗ್ನಿ ಅವಘಡದಲ್ಲಿ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದೆ.ಘಟನೆ ಕುರಿತಂತೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಾನು ಮತ್ತೆ ಬಿಜೆಪಿಗೆ ಹೋಗುವ ಬೆಳವಣಿಗೆ ಆಗಿಲ್ಲ ಹಾಗಾಗಿ ಸದ್ಯಕ್ಕಂತು ಬಿಜೆಪಿಗೆ ನಾನು ವಾಪಸ್ ಹೋಗಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವ ತಟಸ್ಥ ಬಣವು ಸಹ ನನ್ನನ್ನು ಇದುವರೆಗೂ ಸಂಪರ್ಕ ಮಾಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪರವಾಗಿ ಕೆಲಸ ಮಾಡಿದ್ದೇವೆ. ನಿಮ್ಮನ್ನು ಕೈ ಬಿಡಲ್ಲ ಯಾವಾಗಲೂ ನಿಮ್ಮ ಜೊತೆಗೆ ಇರುತ್ತೇವೆ ಅಂತ ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಏನಾಗುತ್ತದೆಯೋ ಗೊತ್ತಿಲ್ಲ. ಬಿಜೆಪಿಯಲ್ಲಿ ಆಗಬೇಕಿರುವ ಶುದ್ಧೀಕರಣದ ಬಗ್ಗೆ ಹೇಳುತ್ತೇನೆ. ನಾನು ಹೈಕಮಾಂಡ್ ನಾಯಕರ ಗಮನಕ್ಕೆ ಬಿಜೆಪಿಯಲ್ಲಿರುವ ಆಗುವ ಶುದ್ಧಿಕರಣ ಕುರಿತು ಗಮನಕ್ಕೆ ತರುತ್ತೇನೆ. ಕೇಂದ್ರದ ನಾಯಕರು ಮುಂದೆ ಬಂದರೆ ಈ ವಿಚಾರವಾಗಿ ಚರ್ಚಿಸುತ್ತೇನೆ. ಮನಸ್ಸಿಗೆ ಸಮಾಧಾನ ಆದರೆ ಮಾತ್ರ ಬಿಜೆಪಿಗೆ ಹೋಗುತ್ತೇನೆ ಎಂದು ಬೆಂಗಳೂರಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದರು.

Read More

ಮಂಗಳೂರು : ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಗಂಭೀರವಾದ ಆರೋಪ ಕೇಳಿ ಬಂದ ಹಿನ್ನೆಲೆ ಇಂದು ಮಂಗಳೂರು ಪಾಲಿಕೆ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂದಾಯ ಇಂಜಿನಿಯರಿಂಗ್ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಮೇಲು ದಾಳಿ ಮಾಡಿದ್ದಾರೆ. ಹೌದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಂದಾಯ, ಇಂಜಿನಿಯರಿಂಗ್ ಹಾಗು ಆರೋಗ್ಯ ವಿಭಾಹ ಸೇರಿದಂತೆ ಎಲ್ಲಾ ವಿಭಾಗಗಳ ಮೇಲು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಧಿಕಾರಿಗಳ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಬಿ ಕುಮಾರಚಂದ್ರ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ. ಪಾಲಿಕೆ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ತುಮಕೂರು ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಕುರಿತು ಹಲವು ಚರ್ಚೆ ನಡೆದಿತ್ತು. ಇದೇ ವಿಚಾರವಾಗಿ ಸಿದ್ದಗಂಗಾ ಮಠದ ಶ್ರೀಗಳು ಸಹ ತುಮಕೂರು ಜಿಲ್ಲೆಯ ಹೆಸರು ಬದಲಾವಣೆ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ ಹೆಸರನ್ನು ಬದಲಾಯಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಹುಟ್ಟು ಹಬ್ಬದಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ ಹೆಸರು ಬದಲಾಯಿಸುವುದಿಲ್ಲ. ಬೆಂಗಳೂರು ವ್ಯಾಪ್ತಿಗೆ ಸೇರಿಸುವ ಪ್ರಶ್ನೆಗೆ ನಾನು ಉತ್ತರಿಸಿದ್ದೆ ಆದರೂ ಆಗಬಹುದು ಎಂದಿದ್ದೆ ಆದರೆ ತುಮಕೂರು ಹೆಸರು ಬದಲಾಯಿಸುತ್ತೇವೆ ಅಂತ ಹೇಳಿಲ್ಲ ಜಿಲ್ಲೆಯ ಹೆಸರು ಯಾವುದೇ ಕಾರಣಕ್ಕೂ ಬದಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ತುಮಕೂರು ಬೆಂಗಳೂರಿನ ದಕ್ಷಿಣ ಆಗಬಹುದು ಅಂತ ಕೇಳಿದಾಗ ನಾನು ಆದರೂ ಆಗಬಹುದು ಅಂತ ಹೇಳಿದ್ದೆ. ಆದರೆ ತುಮಕೂರಿನ ಜಿಲ್ಲೆಯ ಹೆಸರು ಬದಲಾಯಿಸುತ್ತೇವೆ ಅಂತ ನಾನು ಹೇಳಿರಲಿಲ್ಲ. ತುಮಕೂರಿನ…

Read More

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರ ಅಮೆರಿಕ ಪ್ರವಾಸಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರವಾಸದ ನಿರ್ಬಂಧ ತೆರವು ಮಾಡಿ ಕೇಂದ್ರ ಸರ್ಕಾರ ಮರು ಅದೇಶ ಹೊರಡಿಸಿದೆ. ಈ ವಿಚಾರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಈ ಮೊದಲು ನನ್ನನ್ನು ಅಮೆರಿಕಕ್ಕೆ ಹೋಗದಂತೆ ತಡೆದುದ್ದಕ್ಕೆ ಕಾರಣ ಕೊಡಬೇಕು ಇಲ್ಲವಾದರೆ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟ್ರೈನ್ ಹೋದ ಮೇಲೆ ತಾತ್ಕಾಲಿಕ ಟಿಕೆಟ್ ಇಶ್ಯೂ ಮಾಡಿದ್ದಾರೆ. ಅನುಮತಿ ಕೊಟ್ಟಂತೆ ಆಗಬೇಕು ತಡೆದಂತೆಯೂ ಆಗಬೇಕು. ಇದು ಕರ್ನಾಟಕಕ್ಕೆ ಮಾಡಿರುವ ಅವಮಾನ. ಕರ್ನಾಟಕ ರಾಜ್ಯಕ್ಕೆ ಬಂಡವಾಳ ಹೂಡಿಕೆ ಆಕರ್ಷಿಸಲು ಹೋಗುತ್ತಿದ್ದೆ. ರಾಜಕ್ಕೆ ಬಂಡವಾಳ ತರುವುದನ್ನು ಕೇಂದ್ರ ಸರ್ಕಾರ ತಡೆಹಿಡಿದಿದೆ. ನನ್ನನ್ನು ಮೊದಲು ತಡೆದಿದ್ದು ಯಾಕೆ ಅದಕ್ಕೆ ಕಾರಣ ಕೊಡಲಿ. ಈಗಾಗಲೇ ಕಾರಣ ಕೇಳಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಅಮೆರಿಕಕ್ಕೆ ಹೋಗದಂತೆ ತಡೆದಿದ್ದರ ಬಗ್ಗೆ ಸ್ಪಷ್ಟವಾದ ಕಾರಣ ಬೇಕು. ಸರಿಯಾದ ಕಾರಣ ಕೊಡದಿದ್ದರೆ ಕಾನೂನು ಹೋರಾಟ…

Read More

ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಇರಾನ್ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಸರ್ಕಾರ ಸಿಂಧು ಕಾರ್ಯಾಚರಣೆಯನ್ನು ಪ್ರಾರಂಭಿಸಿತು.ಇದೀಗ ಇರಾನ್ ಅಲ್ಲಿ ಸಿಲುಕಿದ್ದ 16 ಜನ ಕನ್ನಡಿಗರು ಇಂದು ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಾರೆ. ಹೌದು ಇರಾನ್ ಅಲ್ಲಿ ಸಿಲುಕಿದ್ದ ಕನ್ನಡಿಗರು ಇಂದು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. 16 ಜನ ಕನ್ನಡಿಗರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 16 ಜನ ಕನ್ನಡಿಗರು ಸುರಕ್ಷಿತವಾಗಿ ಬಂದಿಳಿದಿದ್ದಾರೆ. ಸಂಜೆ ಮತ್ತೆರಡು ವಿಮಾನಗಳು ದೆಹಲಿಗೆ ಆಗಮಿಸಲಿವೆ ಎಂದು ತಿಳಿದುಬಂದಿದೆ.

Read More