Author: kannadanewsnow05

ರಾಯಚೂರು : ಯಾದಗಿರಿಯಲ್ಲಿ ಘೋರ ದುರಂತ ನಡೆದಿದ್ದು, ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯ ಹಿರೇನಗನೂರು ಗ್ರಾಮದ ಹೊರವಲಯದ ಕ್ಯಾಸರ್ ಹಾಳ ಕರೆಯಲ್ಲಿ, ಮೌನೇಶ್ ಶಿವಣ್ಣ (18) ಎಂಬ ಯುವಕ ಕುರಿಗಳನ್ನು ಕಾಯುತ್ತಾ ಕೆರೆ ಬಳಿ ತೆರಳಿದ್ದ ಇತರ ಕುರಿಗಾಹಿ ಯುವಕರು ಈಜಲು ಇಳಿದಿದ್ದರು. ಮೌನೇಶ್ ಕೂಡ ನೀರಿನಲ್ಲಿ ಈಜಲು ಇಳಿದಿದ್ದ. ಈ ವೇಳೆ ಮೌನೇಶ್ ಕೆರೆಯಲ್ಲಿ ಒಮ್ಮೆಲೇ ಮುಳುಗಿದ್ದಾನೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದರು. ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಕುರಿತಂತೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಕೇವಲ ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಕಸ್ತ್ರಗಳಿಂದ, ದೊಣ್ಣೆ ಹಾಗೂ ಹಾಕಿ ಸ್ಟಿಕ್ ಗಳಿಂದ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹೊಸಪೇಟೆ ನಗರದಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ಹೌದು ಬಾಗಲಕೋಟೆಯಲ್ಲಿ ಎರಡು ಗುಂಪುಗಳ ಮಧ್ಯ ಮಾರಾಮಾರಿ ನಡೆದಿದೆ. ಮಾರಕಾಸ್ತ್ರ, ದೊಣ್ಣೆ ಹಾಗು ಹಾಕಿ ಸ್ಟಿಕ್ ಹಿಡಿದುಕೊಂಡು ಗಲಾಟೆ ಮಾಡಿದ್ದಾರೆ. ರಸ್ತೆಗೆ ಅಡ್ಡಲಾಗಿ ನಿಂತಿದ್ದ ವಾಹನದ ವಿಚಾರವಾಗಿ ಗಲಾಟೆ ನಡೆದಿದೆ. ವಾಹನ ಸೈಡಿಗೆ ಹಾಕಿ ಅಂತ ಹೇಳಿದ್ದಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಇಳಕಲ್ ನಗರದ ಹೊಸಪೇಟೆ ಗಲ್ಲಿಯಲ್ಲಿ ಈ ಒಂದು ಘಟನೆ ನಡೆದಿದೆ. ದಾದಾಪೀರ್ ಜಕ್ಕಲಿ, ಶಾಮಿದ್ ರೇಷ್ಮೆ, ರಂಜಾನ್ ಬನ್ನು ಎಂಬ ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಇದೀಗ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Read More

ವಿಜಯಪುರ : ವಿಜಯಪುರದಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳ್ಳಭಟ್ಟಿ ನಡೆಸುತ್ತಿದ್ದ ಅಡ್ಡೆಗಳಮೇಲೆ ಏಕಕಾಲಕ್ಕೆ ಅಬಕಾರಿ ಪೊಲೀಸರು ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಮೇರೆಗೆ ಅಬಕಾರಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಕುರುಬರದಿನ್ನಿ ತಾಂಡ, ಮುಳವಾಡ ತಾಂಡದಲ್ಲಿ ಈ ಒಂದು ದಾಳಿ ನಡೆದಿದೆ. ಕುರುಬರದಿನಿ ತಾಂಡಾದಲ್ಲಿ 35 ಬಿಂದಿಗೆಗಳಲ್ಲಿ ಕಳಬಟ್ಟಿ ತುಂಬಿ ಇಡಲಾಗಿತ್ತು. ಮುಳುವಾಡ ಎಲ್‌ಟಿ 2 ಬಳಿ ಜಮೀನಿನಲ್ಲಿ ಕಳ್ಳಬಟ್ಟಿ ತಯಾರಿಸುತ್ತಿದ್ದರು. ಕಳ್ಳಬಟ್ಟಿ ಯನ್ನು ಬಸವನಬಾಗೇವಾಡಿ ಅಬಕಾರಿ ಪೊಲೀಸ್ ಸರು ನಾಶಪಡಿಸಿದ್ದಾರೆ. ಅಕ್ರಮವಾಗಿ ಜಮೀನಿನಲ್ಲಿ ಕಲಬಟ್ಟಿ ದಂಧೆ ನಡೆಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಜಮೀನು ಮಾಲೀಕರನ್ನು ಸಧ್ಯಾಬಕಾರಿ ಪೊಲೀಸರ ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಹೆರಿಗೆ ಮಾಡಿಸುವುದರಲ್ಲಿ ವಿಳಂಬ ಮಾಡಿದ್ದರಿಂದ ಮಗು ಸಾವನಪ್ಪಿದೆ. ಬೆಂಗಳೂರಿನ ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ಸಂಗೀತಂ ಜೋಸ್ನಾ ಹಾಗು ಸುನೀಲ್ ದಂಪತಿಗಳ ಮಗು ಇದೀಗ ಸಾವನಪ್ಪಿದೆ. ಬೆಂಗಳೂರಿನ ಕಮಲಾನಗರದ ನಿವಾಸಿಯಾಗಿರುವ ಸಂಗೀತಂ ಮತ್ತು ಸುನಿಲ್ ಹೆರಿಗೆ ವಿಳಂಬ ಮಾಡಿಸಿದಕ್ಕೆ ಮಗು ಸಾವನ್ನಪ್ಪಿದೆ ಎಂದು ಆಸ್ಪತ್ರೆಯ ವಿರುದ್ಧ ಆರೋಪ ಮಾಡಿದ್ದಾರೆ. ಹೆರಿಗೆ ನೋವು ಹಿನ್ನೆಲೆ, ಆಸ್ಪತ್ರೆಗೆ ಕರೆತಂದಿದ್ದರು ಸೋಮವಾರ ನೋವು ಕಂಡು ಬಂದರೂ ಕೂಡ ಹೆರಿಗೆ ಮಾಡಿಸಿಲ್ಲ. ನೋವು ಬಂದು ವಿಪರೀತ ವಾಟರ್ ಡಿಸ್ಚಾರ್ಜ್ ಆಗಿದೆ ಡೆಲಿವರಿ ಮಾಡಿಸಿ ಅಂತ ಹೇಳಿದರು ಕೂಡ ಹೆರಿಗೆ ಮಾಡಿಸಿಲ್ಲ. ಮಂಗಳವಾರ ಬೆಳಿಗ್ಗೆ ಮಾಡಿದ್ದಾರೆ. ಮಗು ಸ್ಯಾನಿಟರಿ ನೀರು ಕುಡಿದಿದೆ ಅಂತ ಐಸಿಯುನಲ್ಲಿ ಇಟ್ಟಿದ್ದಾರೆ. ಆದರೆ ಇವತ್ತು ಮಗು ಮೃತಪಟ್ಟಿದೆ. ಮಧ್ಯಾಹ್ನದಿಂದ ಆಸ್ಪತ್ರೆಯಲ್ಲಿ ಯಾವ ಡಾಕ್ಟರ್ ಸಹ ಇರಲಿಲ್ಲ ಎಂದು ಸಂಬಂಧಿಕರು ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು ಇದರ ಮಧ್ಯ ಕೊರೋನಾ ಆರ್ಭಟವು ಜೋರಾಗಿದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮತ್ತೆ 72 ಹೊಸ ಕರೋನಾ ಪ್ರಕರಣಗಳು ಪತಿಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕುರಿತು ಮಾಹಿತಿ ನೀಡಿದೆ. ಹೌದು ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 72 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 287 ಕ್ಕೆ ಏರಿಕೆಯಾಗಿದ್ದು, ಇದುವರೆಗೂ ರಾಜ್ಯದಲ್ಲಿ ಕೊರೊನ ಆಕ್ಟಿವ್ ಪ್ರಕರಣಗಳ ಸಂಖ್ಯೆ 27 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Read More

ಯಾದಗಿರಿ : ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಬಲವಂತವಾಗಿ ತಡೆದು ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ರಸ್ತೆಯಲ್ಲಿ ತೆರಳುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಸವರ್ಣೀಯರು ಅಡ್ಡಗಟ್ಟಿ ಜಾತಿನಿಂದನೆ ಮಾಡಿದ್ದು ಅಲ್ಲದೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ರಸ್ತೆಯಲ್ಲಿ ಹೋಗುವಾಗ ಕಾನೂನು ವಿದ್ಯಾರ್ಥಿಯಾದ ದುರ್ಗಪ್ಪನನ್ನು ತಡೆದು ಜಾತಿನಿಂದನೆ ಮಾಡಿದ್ದಾರೆ. ಯಾವುದೇ ಕಾರಣವಿಲ್ಲದೆ ದಾರಿಯಲ್ಲಿ ತಡೆದು ಸವರ್ಣೀಯರು ಜಾತಿ ನಿಂದನೆ ಮಾಡಿದ್ದಾರೆ. ಮಲ್ಲಯ್ಯ ಹುಲಕಲ್ ಮತ್ತು ಅರ್ಜುನಪ್ಪ ದೇವಡಿಯಿಂದ ಈ ಒಂದು ಕೃತ್ಯ ನಡೆದಿದೆ. ಜಾತಿ ನಿಂದನೆ ಮಾಡಿದ್ದು ಅಲ್ಲದೆ ದುರ್ಗಪ್ಪನ ಮೇಲೆ ಹಲ್ಲೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿರುವ ವಿಡಿಯೋ ವೈರಲ್ ಆಗಿದೆ ಈ ಕುರಿತಂತೆ, SC, ST…

Read More

ಬೆಂಗಳೂರು : ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್ ಬರುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ. ನಿರ್ಮಾಪಕ ನಿರ್ದೇಶಕ ಮತ್ತು ನಟರ ಹೇಳಿಕೆಯಿಂದ ಬೇಜಾರಾಗಿದೆ. ಅವರು ನನ್ನ ಬಗ್ಗೆ ಹೇಳಿದ ಮಾತುಗಳಿಂದ ನನಗೆ ಬಹಳ ಬೇಜಾರಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತಾ ರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ. ಸಂಜು ವೆಡ್ಸ್ ಗೀತಾ-2 ಪ್ರಚಾರಕ್ಕೆ ನಟಿ ರಚಿತಾ ರಾಮ್ ಪ್ರಚಾರಕ್ಕೆ ಬರುತ್ತಿಲ್ಲ ಎಂದು ಇತ್ತೀಚಿಗೆ ಆರೋಪಿಸಲಾಗಿತು. ನಟಿ ರಚಿತ ವಿರುದ್ಧ ನಟ ಶ್ರೀನಗರ ಕಿಟ್ಟಿ ನಿರ್ದೇಶಕ ನಾಗಶೇಖರ್ ಆರೋಪಿಸಿದ್ದರು. ಅಲ್ಲದೆ ರಚಿತರಾಮ್ ವಿರುದ್ಧ ಫಿಲಂ ಚೇಂಬರ್ಗು, ದೂರು ನೀಡಲಾಗಿತ್ತು. ಇದೀಗ ಈ ವಿಚಾರವಾಗಿ ನಟಿ ರಚಿತಾ ರಾಮ್ ಅವರು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸುಧೀರ್ಘವಾಗಿ ಮಾತನಾಡಿದ್ದು, ನಟ ಶ್ರೀನಗರ ಕಿಟ್ಟಿ ನಿರ್ದೇಶಕ ನಾಗಶೇಖರ್ ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಚಿತಾ ರಾಮ್ ಹೇಳಿದ್ದೇನು? ಈ ಒಂದು ಚಿತ್ರದ ತಂಡದ ಜೊತೆ ಒಂದು ಮುಕ್ಕಾಲು ವರ್ಷಗಳ ಕಾಲ…

Read More

ಬೆಂಗಳೂರು : ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ ಹಲವಾರು ಜನರಿಗೆ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ್ದಾರೆ ಎನ್ನುವ ಗಂಭೀರವಾದ ಆರೋಪ ಕೇಳಿಬಂದಿದೆ. ಹೌದು ಸರ್ಕಾರಿ ಕೆಲಸ ಕೊಡಿಸುವುದಾಗಿ ಸಾಕಷ್ಟು ಜನರಿಗೆ ವಂಚನೆ ಎಸಗಿದ್ದು, ವಸಂತ ಮುರಳಿ ಅವರಿಂದ ಇದೀಗ ಸಾಕಷ್ಟು ಜನರು ಮೋಸ ಹೋಗಿದ್ದಾರೆ. ನನಗೆ ಮುಖ್ಯಮಂತ್ರಿ ಗೊತ್ತು, ಮಿನಿಸ್ಟರ್ ಗೊತ್ತು ಎಂದು ವಸಂತ ಮುರುಳಿ ಅನೇಕರಿಗೆ ವಂಚನೆ ಎಸಗಿದ್ದಾರೆ. ಈ ಕುರಿತು ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ ಇಂದು ವಸಂತ ಮುರುಳಿ ಅವರ ಕಾರ್ಯಕ್ರಮಕ್ಕೆ ಮೋಸ ಹೋದವರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಪರಸ್ಪರ ಗುಂಪುಗಳು ಕೈ ಕೈ ಮಿಲಾಯಿಸಿಸಿಕೊಂಡು ಗಲಾಟೆ ನಡೆಸಿವೆ. ವಿಶ್ವಕರ್ಮ ಸಮಾಜದ ಕಾರ್ಯಕ್ರಮದ ವೇಳೆ ಭಾರೀ ಗಲಾಟೆ ನಡೆದಿದೆ. ವಿಶ್ವಕರ್ಮ…

Read More

ಹಾವೇರಿ : ಹಾವೇರಿಯಲ್ಲಿ ಎಂದು ಘೋರ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿರುವ ವರದಾ ನದಿಯಲ್ಲಿ ಕಾಲು ಜಾರಿ ಬಿದ್ದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಕಾಲು ಜಾರಿ ನದಿಗೆ ಬಿದ್ದು ಕಲ್ಲಪ್ಪ ಹುರಳಿಕುಪ್ಪಿ (80) ಎನ್ನುವವರು ಸಾವನಪ್ಪಿದ್ದಾರೆ. ಮೃತರು ಹಾನಗಲ್ ತಾಲೂಕಿನ ಜಾಕ್ಕನಾಯಕನ ಕೊಪ್ಪ ನಿವಾಸಿ ಆಗಿದ್ದು, ಇಂದ್ ನದಿಯಲ್ಲಿ ಕಾಲು ತೊಳೆಯಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿ ಬಂದು ಮೃತ ದೇಹಕ್ಕಾಗಿ ಶೋಧಕ ಕಾರ್ಯ ಮುಂದುವರಿಸಿದ್ದಾರೆ ಘಟನೆ ಕುರಿತಂತೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಾವಣಗೆರೆ : ನಿವೇಶನದ ಹಕ್ಕು ಪತ್ರ ನೀಡಲು ಐದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು ಆ ಲಂಚದ ಹಣ ಪಡೆಯುವ ವೇಳೆ ಗ್ರಾ.ಪಂ ಬಿಲ್ ಕಲೆಕ್ಟರ್ ಹಾಗೂ ನೀರುಗಂಟಿ ಇಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ದೇವರಹಳ್ಳಿಯಲ್ಲಿ ನಡೆದಿದೆ. ದೇವರಹಳ್ಳಿ ಗ್ರಾ.ಪಂ ಹಂಗಾಮಿ ಬಿಲ್ ಕರೆಕ್ಟರ್ ಲೋಕೇಶ ಹಾಗೂ ನೀರುಗಂಟಿ ಶೇಖರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಇಂದಿರಾ ಗ್ರಾಮೀಣ ವಸತಿ ನಿವೇಶನದಡಿ 2016ನೇ ಸಾಲಿನಲ್ಲಿ ಮಂಜೂರಾಗಿದ್ದ ವಸತಿ ಯೋಜನೆಯ ನಿವೇಶನದ ಹಕ್ಕುಪತ್ರ ನೀಡಲು 5 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಈ ಘಟನೆ ನಡೆದಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವರಹಳ್ಳಿ ಗ್ರಾಮದ ಆರ್.ಲಕ್ಷ್ಮಿದೇವಿ ಲಕ್ಷ್ಮೀಪತಿ ಎಂಬುವದು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇಂದಿರಾ ಗ್ರಾಮೀಣ ವಸತಿ ನಿವೇಶನ ಯೋಜನೆಯಡಿ 2016ನೇ ಸಾಲಿನಲ್ಲಿ ವಸತಿ ನಿವೇಶನ ಮಂಜೂರಾಗಿತ್ತು.ಬಿಲ್ ಕಲೆಕ್ಟರ್ ಲೋಕೇಶ ಹಕ್ಕುಪತ್ರ ನೀಡಲು 5 ಸಾವಿರ ರೂ. ಲಂಚದ ಬೇಡಿಕ…

Read More