Author: kannadanewsnow05

ಚೈನ್ನೈ : ಹೃದಯ ಸಂಬಂಧಿ ಕಾಯಿಲೆಗೆ ಸಂಬಂಧಪಟ್ಟಂತೆ ತಮಿಳು ನಟ ರಜನಿಕಾಂತ್ ಅವರು ಸೆಪ್ಟೆಂಬರ್ 30ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಪಡೆದುಕೊಂಡ ಬಳಿಕ ಇಂದು ನಟ ರಜನಿಕಾಂತ್ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 30ರ ತಡರಾತ್ರಿ ಆಸ್ಪತ್ರೆಗೆ ನಟ ರಜನಿಕಾಂತ್ ದಾಖಲಾಗಿದ್ದರು.ಬಳಿಕ ನುರಿತ ವೈದ್ಯರಿಂದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಅವರ ರಕ್ತನಾಳದಲ್ಲಿ ಊತ ಕಾಣಿಸಿಕೊಂಡಿತ್ತು. ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಹಿರಿಯ ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್​ ಅವರಿಗೆ ಸ್ಟೆಂಟ್​ ಹಾಕಿದ್ದಾರೆ. ಅಂದುಕೊಂಡ ರೀತಿಯೇ ಚಿಕಿತ್ಸೆ ಫಲಕಾರಿ ಆಗಿದೆ. ರಜನಿಕಾಂತ್​ ಅವರಿಗೆ ಈಗ 73 ವರ್ಷ ವಯಸ್ಸು. ವಯೋ ಸಹಜವಾಗಿ ಅವರು ಒಂದಷ್ಟು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ದಿಢೀರ್​ ಅಂತ ಆಸ್ಪತ್ರೆಗೆ ದಾಖಲಾಗಿದ್ದರಿಂದ ಎಲ್ಲರಿಗೂ ಆತಂಕ ಹೆಚ್ಚಿತ್ತು. ಸದ್ಯ ಕೆಲವು ದಿನಗಳ ಕಾಲ ರಜನಿಕಾಂತ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್​ ನೀಡಲಿದ್ದಾರೆ. ಸಂಪೂರ್ಣ ಗುಣಮುಖರಾದ ನಂತರವೇ…

Read More

ಉತ್ತರಪ್ರದೇಶ : ಉತ್ತರ ಪ್ರದೇಶದಲ್ಲಿ ಭೀಕರವಾದಂತಹ ಅಪಘಾತ ನಡೆದಿದ್ದು ಟ್ರಕ್ ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಹೌದು ಮಿರ್ಜಾಪುರದ ಕಚ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಕಾ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಲ್ಲಿಯವರೆಗೆ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ನಂತರ, ಗಾಯಾಳುಗಳನ್ನು ಚಿಕಿತ್ಸೆಗಾಗಿ ವಾರಣಾಸಿಯ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ. ಮಾಹಿತಿ ಪ್ರಕಾರ ಟ್ರ್ಯಾಕ್ಟರ್ ನಲ್ಲಿ ಒಟ್ಟು 13 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಅವರು ಔರಾಯ್‌ನ ತಿವಾರಿ ಗ್ರಾಮದಿಂದ ಎರಕಹೊಯ್ದ ನಂತರ ವಾರಣಾಸಿಗೆ ಮನೆಗೆ ಮರಳುತ್ತಿದ್ದರು. ಅಪಘಾತದಲ್ಲಿ 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

Read More

ದಾವಣಗೆರೆ : ಇಂದು ದಾವಣಗೆರೆಯಲ್ಲಿ ಘೋರ ದುರಂತ ಒಂದು ನಡೆದಿದ್ದು, ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡು, 6 ಜನರಿಗೆ ಗಾಯವಾಗಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ತುರ್ಚಗಟ್ಟೆ ಎಂಬ ಗ್ರಾಮದಲ್ಲಿ ಈ ಒಂದು ಅನಾಹುತ ನಡೆದಿದೆ. ಹೌದು ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ಒಂದು ಅನಾಹುತ ಸಂಭವಿಸಿದ್ದು,ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆ ಮೇಲ್ಚಾವಣಿ ಸಂಪೂರ್ಣವಾಗಿ ಕುಸಿತಗೊಂಡಿದೆ. ಬೆಳಿಗ್ಗೆ ಸಿಲಿಂಡರ್ ಆನ್ ಮಾಡಲು ಹೋದಾಗ ಏಕಾಏಕಿ ಸ್ಪೋಟವಾಗಿದೆ. ಈ ಒಂದು ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸಿಲಿಂಡರ್ ಸ್ಪೋಟಗೊಂಡ ಬಳಿಕ ಕೂಡಲೇ ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಘಟನೆ ಕುರಿತಂತೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಈ ವೇಳೆ ಅವರಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಎರಡು FIR ದಾಖಲಾಗಿತ್ತು. ಈ ಒಂದು ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಅಲ್ಲಿನ ವ್ಯವಸ್ಥೆ ನೋಡಿ ದಂಗಾಗಿದ್ದಾರೆ. ಹೌದು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು, ಜೈಲಿನಲ್ಲಿ ನಟ ದರ್ಶನ್ ಒಂದು ಕೈಯಲ್ಲಿ ಕಾಫಿ ಕುಡಿಯುತ್ತಾ, ಮತ್ತೊಂದು ಕೈಯಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿರುವುದು ಹಾಗೂ ವಿಡಿಯೋ ಕಾಲ್ ನಲ್ಲಿ ವ್ಯಕ್ತಿಯ ಜೊತೆ ಮಾತನಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿದ್ದಾರೆ. ಈ ಎರಡು ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ವಿಸ್ತೃತ ಆರೋಪ ಪಟ್ಟಿ ತಯಾರಿಸಿದ್ದಾರೆ. ಸದ್ಯ ಈ ಆರೋಪ ಪಟ್ಟಿ ಅಂತಿಮ ಹಂತದ ತಯಾರಿಯಲ್ಲಿದ್ದು,ಕಾನೂನು ತಜ್ಞರ ಅಭಿಪ್ರಾಯ ಪಡೆದು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗ! ದರ್ಶನ್ ಗೆ…

Read More

ರಾಯಚೂರು : ಮುಡಾ ಹಗರಣದ ಮಧ್ಯೆಯು ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅದಾದ ಬಳಿಕ ಇಂದಿನಿಂದ ಎರಡು ದಿನಗಳ ಕಾಲ ಅವರು ರಾಯಚೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ಹೌದು ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ರಾಯಚೂರು ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ರಾಯಚೂರು, ಸಿಂಧನೂರು, ಮಾನ್ವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮೈಸೂರಿನಿಂದ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್ ಸ್ಟ್ರಿಪ್ ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮೂಲಕ ಸಿಂಧನೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ ಒಂದು 45ಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರಿಗೆಸಿಎಂ ಆಗಮಿಸಲಿದ್ದು ಮಧ್ಯಾಹ್ನ 3 ಗಂಟೆಗೆ ಸಿಂಧನೂರು ದಸರಾ ಉತ್ಸವಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಕಲ್ಯಾಣ ಸೌಹಾರ್ದ ನಡೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಸಿಂಧನೂರು ಪಟ್ಟಣದ ಪದವಿ ಕಾಲೇಜು ಮೈದಾನದಲ್ಲಿ ಈ ಒಂದು…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇಂದು ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ 9ಗಂಟೆಗೆ ವಿಚಾರಣೆಗೆ ಹಾಜರಾಗಿ ಎಂದು ಸೂಚನೆ ನೀಡಿದ್ದಾರೆ. ನಿನ್ನೆ ED ಅಧಿಕಾರಿಗಳು ಸ್ನೇಹಮಯಿ ಕೃಷ್ಣ ಅವರನ್ನು ವಿಚಾರಣೆ ನಡೆಸಿತ್ತು. ಅಧಿಕಾರಿಗಳು ಕೇಳಿರುವ ಎಲ್ಲ ದಾಖಲೆಗಳನ್ನು ನೀಡಿದ್ದೇನೆ ಎಂದು ವಿಚಾರಣೆಯ ಬಳಿಕ ತಿಳಿಸಿದ್ದರು. ಇದೀಗ ಇಂದು ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ 9 ಗಂಟೆಗೆ ವಿಚಾರಣೆಗೆ ಕರೆದಿದ್ದಾರೆ ಎಂದು ತಿಳಿದುಬಂದಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ಅವರಿಗೆ ಇಡಿ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಡಾ ಹಗರಣ ಸಂಬಂಧ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿದ್ದೇನೆ. ನಾನು ನೀಡಿದ ದಾಖಲೆ ಸಂಬಂಧ ಇಡಿ ಅಧಿಕಾರಿಗಳು ನನಗೆ ಸ್ಪಷ್ಟನೆ ಕೇಳಿದ್ದರು.ಮುಡಾದಲ್ಲಿ ಸುಮಾರು 5000 ಕೋಟಿಗೂ ಹೆಚ್ಚು ಹಗರಣ ನಡೆದಿದೆ ಎಂದು…

Read More

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಗೆ ನಿನ್ನೆ ಸಾಹಿತಿ ಹಂ.ಪ ನಾಗರಾಜಯ್ಯ ವಿದ್ಯುಕ್ತವಾದಂತ ಚಾಲನೆ ನೀಡಿದ್ದರು. ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಿದ್ದರು. ಇಂದು ಈ ಒಂದು ದಸರಾ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದಿನ ವಿಶ್ವ ವಿಖ್ಯಾತ ಮೈಸೂರು ದಸರಾದ ಎರಡನೇ ದಿನದ ಕಾರ್ಯಕ್ರಮದಲ್ಲಿ ಜಾವಾ ಬೈಕ್ ರ್‍ಯಾಲಿ ಆಯೋಜನೆ ಮಾಡಲಾಗಿದೆ. ಕೆಲವೇ ಹೊತ್ತಿನಲ್ಲಿ ಪಾರಂಪರಿಕ ಜಾವಾ ಬೈಕ್ ರ್‍ಯಾಲಿಗೆ ಸಚಿವ ಎಚ್.ಕೆ ಪಾಟೀಲ್ ಚಾಲನೆ ನೀಡಲಿದ್ದಾರೆ. ಟೌನ್ ಹಾಲ್ ಬಳಿ ಸಚಿವ ಪಾಟೀಲ್ ಈ ಒಂದು ಬೈಕ್ ರ್‍ಯಾಲಿ ಚಾಲನೆ ನೀಡಲಿದ್ದಾರೆ. ಇನ್ನು ಬೆಳಗ್ಗೆ 7:30ಕ್ಕೆ ಅರಮನೆ ಒಳ ಆವರಣದಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಈ ಒಂದು ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ. ನಂತರ ಬೆಳಗ್ಗೆ 9:30ಕ್ಕೆ ಮಕ್ಕಳ ದಸರಾ ಕಲಾಥನ್ ಪ್ರದರ್ಶನ ಆಯೋಜನೆ ಮಾಡಲಾಗಿದೆ.ಅರಮನೆ ಕೋಟೆ ಆಂಜನೇಯ ದೇಗುಲದ ಬಳಿ ಕಲಾಥನ್…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A2 ಆರೋಪಿ ಆಗಿರುವಂತಹ ನಟ ದರ್ಶನ್ ಅವರ ಜಾಮೀನು ಭವಿಷ್ಯ ಎಂದು ನಿರ್ಧಾರವಾಗಲಿದೆ. ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹಾಗಾಗಿ ನಟ ದರ್ಶನ್ ಅವರಿಗೆ ಇಂದು ಜಾಮೀನು ಸಿಗುತ್ತಾ ಎಂದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇನ್ನು ನಿನ್ನೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪುತ್ರ ವಿನೇಶ್ ಭೇಟಿ ನೀಡಿದ್ದರು. ಈ ವೇಳೆ ವಿನೀಶ್ ದರ್ಶನ್ ಅವರನ್ನು ತಬ್ಬಿಕೊಂಡು ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಕ್ಕಿ ಬಿಕ್ಕಿ ಅತ್ತಿರುವ ಪ್ರಸಂಗ ನಡೆಯಿತು.ನಿನ್ನೆ ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್ ಭೇಟಿಯಾದರು. ಅಪ್ಪನ ಮುಖ ನೋಡುತ್ತಿದ್ದಂತೆ ಪುತ್ರ ವಿನೇಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವೇಳೆ ಮಗನನ್ನು ತಬ್ಬಿ ದರ್ಶನ್ ಸಂತೈಸಿದ್ದಾರೆ. ಇದೆ ಸಂದರ್ಭದಲ್ಲಿ ಸೆಂಟ್ರಲ್ ಜೈಲಿನಲ್ಲಿರುವ ಅಪ್ಪನ…

Read More

ಮಂಡ್ಯ : ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಶ್ರೀರಂಗಪಟ್ಟಣಕ್ಕೆ ದಸರಾ ಆನೆಗಳು ಆಗಮಿಸಿವೆ. ಈ ಬಾರಿಯ ಶ್ರೀರಂಗಪಟ್ಟಣ ದಸರಾದ ಅಂಬಾರಿಯನ್ನು ಮಹೇಂದ್ರ ಆನೆ ಹೊರಲಿದ್ದಾನೆ. ಮಹೇಂದ್ರ ಆನೆಗೆ ಲಕ್ಷ್ಮಿ ಮತ್ತು ಹಿರಣ್ಯ ಆನೆಗಳು ಸಾಥ್ ನೀಡಲಿವೆ ಎಂದು ತಿಳಿದುಬಂದಿದೆ. ಹೌದು ಇಂದು ಶ್ರೀರಂಗಪಟ್ಟಣ ಪಟ್ಟಣದಲ್ಲಿ ನಡೆಯುವ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಪ್ರಮುಖ ಆಕರ್ಷಣೆ ಚಾಮುಂಡೇಶ್ವರಿ ದೇವಿಯ ಮೆರವಣಿಗೆ. ಕಳೆದ ವರ್ಷದಂತೆ ಈ ವರ್ಷವೂ ಮಹೇಂದ್ರ ಆನೆಯು 400 ಕೆ.ಜಿ. ತೂಕದ ಮರದ ಅಂಬಾರಿ ಸೇರಿ ಒಟ್ಟು 650 ಕೆ.ಜಿ. ತೂಕದ ಸರ್ವಾಲಂಕೃತ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗಲಿದೆ. ಈ ಬಾರಿ ಪಟ್ಟಣದಲ್ಲಿ ಮಧ್ಯಾಹ್ನ ನಡೆಯುವ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಮೂರು ಆನೆಗಳು ಪಾಲ್ಗೊಳ್ಳಲಿವೆ. ಹಾಗಾಗಿ ಮಹೇಂದ್ರ, ಹಿರಣ್ಯ ಮತ್ತು ಲಕ್ಷ್ಮಿ ಹೆಸರಿನ ಆನೆಗಳು ನಿನ್ನೆ ಸಂಜೆನೇ ಮೈಸೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿವೆ.

Read More

ಬೆಂಗಳೂರು : ಕುಡಿದ ಮತ್ತಿನಲ್ಲಿ ತಮ್ಮ ಸಹೋದ್ಯೋಗಿಯನ್ನೇ ಭೀಕರವಾಗಿ ಕೊಂದಿರುವ ಘಟನೆ ಬೆಂಗಳೂರಿನ ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯ ಬರ್ಬರ ಹತ್ಯೆ ನಡೆದಿದೆ. ಸಜಿತ್ (34) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.  ಎಣ್ಣೆಯ ನಶೆಯಲ್ಲಿ ಗಲಾಟೆ ಮಾಡಿ ಸಹೋದ್ಯೋಗಿಯನ್ನು ಕೊಂದಿದ್ದಾರೆ. ಮೈಕೋಲೇಔಟ್ ಬಳಿಯ ಪುಟ್ಟಪ್ಪ ಗಾರ್ಡನ್ನಲ್ಲಿ ಈ ಒಂದು ಕೊಲೆ ನಡೆದಿದೆ. ನಿನ್ನೆ ರಾತ್ರಿ ಎಣ್ಣೆಯ ಮತ್ತಿನಲ್ಲಿ ದೊಣ್ಣೆಗಳಿಂದ ಹೊಡೆದು ಸಹೋದ್ಯೋಗಿ ಸಜಿತ್ ಎನ್ನುವವನನ್ನು ಕೊಲೆ ಮಾಡಿದ್ದಾರೆ. ಇಂಟರಿಯರ್ ಡಿಸೈನ್ ಗೌಡನಲ್ಲಿ ಸಜಿತ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದ್ದೂ, ಕೊಲೆ ಕುರಿತಂತೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More