Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ನಿನ್ನೆ ವಿಜಯಪುರ ನಗರದ ಗಣಪತಿ ಚೌಕ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗಾಂಧಿಚೌಕ ಪೊಲೀಸರು ಕೇವಲ 10 ಗಂಟೆಯಲ್ಲೇ ಪ್ರಕರಣವನ್ನ ಭೇದಿಸಿದ್ದಾರೆ. ಈ ಸಂಬಂಧ ಸೊಹೇಲ್ ಜಮಾದಾರ್ (21) ಎಂಬಾತನನ್ನ ಬಂಧಿಸಿದ್ದಾರೆ. ಹೌದು ನಿನ್ನೆ ನಗರದ ಗಣಪತಿ ಚೌಕ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ಎಸೆದು ಕೋಮು ಗಲಭೆ ಸೃಷ್ಟಿಸಲು ಯೋಜನೆ ಮಾಡಿದ್ದರು.ನಿನ್ನೆ ರಾತ್ರಿ 1 ಗಂಟೆ ಸುಮಾರಿಗೆ ಗಣಪತಿ ಚೌಕ್ ಮೇಲೆ ಆರೋಪಿ ಸೊಹೇಲ್ ಜಮಾದಾರ್ ಕಲ್ಲು ಎಸೆದಿದ್ದ. ಕುಡಿದ ನಶೆಯಲ್ಲಿದ್ದ ಖದೀಮರು ಕಲ್ಲು ತೂರಿ, ಸ್ಥಳದಲ್ಲಿದ್ದ ಹೋಮ್ಗಾರ್ಡ್ಗೆ ಅವಾಚ್ಯವಾಗಿ ನಿಂದಿಸಿದ್ದರು. ಘಟನೆ ನಡೆದ ಬೆನ್ನಲ್ಲೇ ಎಸ್ಪಿ ಹೃಷಿಕೇಶ್ ಸೋನಾವಣೆ ಅವರು ಸಿಪಿಐ ತಳಕೇರಿ ನೇತೃತ್ವದಲ್ಲಿ ತಂಡವೊಂದನ್ನ ರಚಿಸಿದ್ದರು. ಸಿಸಿಟಿವಿ ದೃಶ್ಯಾವಳಿ ಹಾಗೂ ಕೃತ್ಯದ ವೇಳೆ ಬಳಸಿದ್ದ ಆಟೋ ನಂಬರ್ ಮೂಲಕ ಆರೋಪಿಯನ್ನ ಪತ್ತೆ ಮಾಡಿದ್ದಾರೆ.ಗಾಂಧಿ ಚೌಕ ಸಿಪಿಐ ಪ್ರದೀಪ ತಳಕೇರಿ ಹಾಗೂ ತಂಡ ಸೊಹೇಲ್ ನನ್ನ ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿ ಸೊಹೇಲ್…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಸದ್ಯ SIT ವಶದಲ್ಲಿ ಇರುವ ಆರ್ಆರ್ ನಗರ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ದೂರಿನಲ್ಲಿ ಉಲ್ಲೇಖಿತ ಎಚ್ಐವಿ ಸೋಂಕಿತೆ ಎನ್ನಲಾದ ಮಹಿಳೆಯನ್ನು ಪತ್ತೆ ಹಚ್ಚಿರುವ ಎಸ್ಐಟಿ, ಈಗ ಆಕೆಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಹೌದು ಶಾಸಕ ಮುನಿರತ್ನ ತಮ್ಮ ರಾಜಕೀಯ ವಿರೋಧಿಗಳನ್ನು ಎಚ್ಐವಿ ಸೋಂಕಿತೆಯನ್ನು ಬಳಸಿಕೊಂಡು ಏಡ್ಸ್ ಟ್ರ್ಯಾಪ್ ಮಾಡಿದ್ದರು ಎಂದು ಗಂಭೀರ ಆರೋಪ ಮಾಡಲಾಗಿತ್ತು. ಇನ್ನು ಅತ್ಯಾಚಾರ ಕುರಿತ ದೂರಿನಲ್ಲಿ ಓರ್ವ ಎಚ್ಐವಿ ಸೋಂಕಿತೆ ಎಂದೂ ಮಹಿಳೆ ಹೆಸರು ಸಹ ಉಲ್ಲೇಖವಾಗಿತ್ತು. ಆದರೆ ಪ್ರಕರಣ ದಾಖಲಾದ ಬಳಿಕ ಭೂಗತವಾಗಿದ್ದ ಎಚ್ ಐವಿ ಸೋಂಕಿತೆ ಎನ್ನಲಾದ ಮಹಿಳೆಯನ್ನು ಪತ್ತೆ ಹಚ್ಚಿದ ಎಸ್ಐಟಿ, ಆಕೆ ಎಚ್ಐವಿ ಸೋಂಕಿತಳೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಲು ವೈದ್ಯಕೀಯ ಪರೀಕ್ಷೆಗೆ ನಡೆಸಿ ವರದಿ ಪಡೆಯಲು ಯೋಚಿಸಿದೆ. ಈ ಬಗ್ಗೆ 2-3 ದಿನಗಳಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ ಎಂದು ಮೂಲಗಳು…
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ. ಹಾಗೂ ವೈವಾಹಿಕ ಅತ್ಯಾಚಾರದ ವಿಷಯವು ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು ಅಪರಾಧೀಕರಣ ಗೊಳಿಸಿದರೆ ಸಮಾಜದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಸ್ಪಷ್ಟಪಡಿಸಿದೆ. ವೈವಾಹಿಕ ಅತ್ಯಾಚಾರ ಅಪರಾಧವೇ ಎಂದು ಸುಪ್ರೀಂ ಕೋರ್ಟ್ನಲ್ಲಿ ವ್ಯಾಜ್ಯ ನಡೆಯುತ್ತಿದ್ದು, ಈ ಬಗ್ಗೆ ಕೋರ್ಟಿಗೆ ಸರ್ಕಾರ ತನ್ನ ಅಭಿಪ್ರಾಯವನ್ನು ಅಫಿಡವಿಟ್ ಮುಖಾಂತರಸಲ್ಲಿಸಿದೆ. ಗಂಡನು ಹೆಂಡತಿಯ ಸಮ್ಮತಿ ಪಡೆದೇ ಸಂಬಂಧ ಬೆಳೆಸಬೇಕು ನಿಜ. ಇದನ್ನು ಉಲ್ಲಂಘಿಸುವ ಮೂಲಭೂತ ಹಕ್ಕು ಆತನಿಗಿಲ್ಲ. ಆದಾಗ್ಯೂ ಒಂದುವೇಳೆ ಗಂಡನು ಹೆಂಡತಿಯೊಂದಿಗೆ ನಡೆಸುವ ಲೈಂಗಿಕ ಕ್ರಿಯೆಯನ್ನೂ ಅಪರಾಧ ವ್ಯಾಪ್ತಿಗೆ ತಂದರೆ ವೈವಾಹಿಕ ಜೀವನದ ಮೇಲೆ ದೂರಗಾಮಿ ಪರಿಣಾಮ ಬೀರುತ್ತದೆ ಎಂದು ಹೇಳಿದೆ. ಇದು ಕೋರ್ಟ್ ಅಧಿಕಾರ ವ್ಯಾಪ್ತಿಗೆ ಒಳಪಡುವುದಿಲ್ಲ. ಎಲ್ಲಪಾಲುದಾರರೊಂದಿಗೆ, ಹಾಗೂ ರಾಜ್ಯಗಳ ಜತೆ ಸರಿಯಾದ ಸಮಾಲೋಚನೆ ಮಾಡದೇ ವೈವಾಹಿಕ ಅತ್ಯಾಚಾರ ನಿರ್ಧರಿಸಲು ಆಗದು ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ…
ಬೆಂಗಳೂರು: ಬೆಂಗಳೂರಿಗರಿಗೆ ನಮ್ಮ ಮೆಟ್ರೋ ಸಿಹಿಸುದ್ದಿಯೊಂದು ನೀಡಿದ್ದು, ಸಂಚಾರ ದಟ್ಟನೆ ನಿಯಂತ್ರಣಕ್ಕಾಗಿ ಇದೀಗ ನಮ್ಮ ಮೆಟ್ರೋ ಹಸಿರು ಕಾರಿಡಾರ್ ವಿಸ್ತರಿತ ನಾಗಸಂದ್ರ ಮಾದಾವರ ಮಾರ್ಗದಲ್ಲಿ ಗುರುವಾರ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್ಎಸ್) ತಪಾಸಣೆ ಪೂರ್ಣ ಗೊಳಿಸಿದೆ.ಹಾಗಾಗಿ ಇನ್ನೆರಡು ವಾರದಲ್ಲಿ ವರದಿ ನೀಡುವ ನಿರೀಕ್ಷೆಯಿದ್ದು, ಶೀಘ್ರವೇ ಇಲ್ಲಿ ಪ್ರಯಾಣಿಕರ ಸಂಚಾರ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಮೋಟಾರ್ ಟ್ರಾಲಿ ಮೂಲಕ ಮಾರ್ಗದಲ್ಲಿ ಸಂಚರಿಸಿದ ಸಿಎಂಆರ್ ಎಸ್ ತಂಡದವರು ಪರಿಶೀಲನೆ ನಡೆಸಿದರು. ಮಾರ್ಗದ ತಿರುವು, ಪ್ರಾಯೋಗಿಕ ಸಂಚಾರದ ವೇಳೆಯಲ್ಲಿ ರೈಲಿನ ವೇಗ, ನಿಲ್ದಾಣಗಳಲ್ಲಿ ನಿಲ್ಲಬೇಕಾದಾಗ ನಿಧಾನಗತಿ, ಬ್ರೇಕ್ ಸಿಸ್ಟಂ, ವಿದ್ಯುತ್ ಪೂರೈಕೆ ಸೇರಿ ಇತರೆ ಅಂಕಿ ಅಂಶಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗ ಮದ ಅಧಿಕಾರಿಗಳಿಂದ ಪಡೆದರು ಎನ್ನಲಾಗಿದೆ. ಜೊತೆಗೆ ಮಂಜುನಾಥನಗರ, ಚಿಕ್ಕಬಿದ ರಕಲ್ಲು ಹಾಗೂ ಬೆಂಗಳೂರು ಅಂತಾ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ನಿಲ್ದಾಣಗಳನ್ನು ತಪಾಸಣೆ ಮಾಡಿ ದರು. ಸಿಎಂಆರ್ಎಸ್ ತಂಡ 15 ದಿನ ಗಳಲ್ಲಿ ವರದಿ ನೀಡುವ ಸಾಧ್ಯತೆಯಿದೆ. ಅವರು…
BREAKING : ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆ.10ರಿಂದ 5 ದಿನಗಳ ಕಾಲ ‘ಏರೋ ಇಂಡಿಯಾ-2025’ ವೈಮಾನಿಕ ಪ್ರದರ್ಶನ ಆಯೋಜನೆ
ಬೆಂಗಳೂರು: 2 ವರ್ಷಗಳಿಗೊಮ್ಮೆ ಬೆಂಗಳೂರಿನ ಯಲಹಂಕ ಏರ್ಫೋರ್ಸ್ ಸ್ಟೇಷನ್ನಲ್ಲಿ ನಡೆ ಯುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ-2025’ ಫೆ. 10ರಿಂದ 14ರವರೆಗೆ5 ದಿನಗಳಕಾಲ ನಡೆಯಲಿದೆ ಎಂದು ರಕಣಾ ಇಲಾಖೆ ಗುರುವಾರ ಘೋಷಿಸಿದೆ. 13 ರಕ್ಷಣಾ ಇಲಾಖೆ, ಎಚ್ಎಎಲ್, ಭಾರತೀಯ ವಾಯುಸೇನೆ, ಡಿಆರ್ ಡಿಒ, ನಾಗರಿಕ ವಿಮಾನ ಯಾನ ಸಚಿವಾಲಯಗಳು ಜಂಟಿಯಾಗಿ ಆಯೋ ಜಿಸುವ ಈ ಪ್ರದರ್ಶನದಲ್ಲಿ ದೇಶ-ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸುತ್ತವೆ ಎಂದು ತಿಳಿದುಬಂದಿದೆ. ಯುದ್ಧ ವಿಮಾನ, ಹೆಲಿಕಾಪ್ಟರ್, ನಾಗರಿಕ ವಿಮಾನ, ಸಣ್ಣ ವಿಮಾನಗಳು, ಕ್ಷಿಪಣಿಗಳು, ಶಸ್ತ್ರಾಸ್ತ್ರಗಳು, ರಾಡಾರ್ ವ್ಯವಸ್ಥೆ ಸೇರಿ ದಂತೆ ರಕ್ಷಣಾ ವಲಯ ಮತ್ತು ನಾಗರಿಕ ವಿಮಾನ ಯಾನಕ್ಕೆ ಸಂಬಂಧಿಸಿದ ಉತ್ಪನ್ನಗಳು, ಬಿಡಿ ಭಾಗಗಳು, ಮಾಹಿತಿ ತಂತ್ರಜ್ಞಾನ, ಕೃತಕ ಬುದ್ದಿಯ ಉತ್ಪನ್ನಗಳು ಪ್ರದರ್ಶನಕ್ಕೆ ಇರುತ್ತವೆ. ಏರೋ ಇಂಡಿಯಾದಲ್ಲಿ ಕಂಪನಿಗಳು ಭಾಗವಹಿಸಲು ಮತ್ತು ನಾಗರಿಕರು ಪ್ರದರ್ಶನ ವೀಕ್ಷಣೆಗೆ ನೋಂದಣಿ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ಆರಂಭವಾಗಲಿದೆ.
ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ಅವರ ವಿರುದ್ಧ ಉದ್ಯಮಿ ವಿಜಯ್ ತಾತಾ ಅವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಇದರ ಬೆನ್ನಲ್ಲೆ ಮಾಜಿ ಎಂಎಲ್ಸಿ ರಮೇಶ್ ಗೌಡ ಉದ್ಯಮಿಯ ವಿರುದ್ಧ ಪ್ರತಿ ದೂರನ್ನು ದಾಖಲಿಸಿದ್ದಾರೆ. ಹೌದು ಕಳೆದ ಆಗಸ್ಟ್ 24ರಂದು ವಿಜಯ್ ತಾತ ತಮ್ಮ ಮನೆಗೆ ಕರೆದಿದ್ದರು. ಊಟಕ್ಕೆ ಎಂದು ಕರೆದಿದ್ದಾಗ ನನಗೆ 100 ಕೋಟಿ ರೂಪಾಯಿ ಹಣ ಬೇಕು ಎಂದು ಹೇಳಿದ್ದರು ಆಗ ನಾನು ನನ್ನ ಹತ್ತಿರ ಇಲ್ಲ ಎಂದಾಗ ನನಗೆ ಧಮ್ಕಿ ಹಾಕಿದ್ದಾರೆ ಎಂದು ರಮೇಶ್ ಗೌಡ ದೂರು ಸಲ್ಲಿಸಿದ್ದಾರೆ. ನಾನು ಈಗ ತುಂಬಾ ಲಾಸ್ ನಲ್ಲಿ ಇದ್ದೇನೆ ನನಗೆ ಈಗ 100 ಕೋಟಿ ರೂಪಾಯಿ ಅವಶ್ಯಕತೆ ಇದೆ. ಒಂದು ವೇಳೆ ನನಗೆ 100 ಕೋಟಿ ರೂಪಾಯಿ ಕೊಡದೆ ಹೋದರೆ ನಿಮ್ಮನ್ನು ಮತ್ತು ಕುಮಾರಸ್ವಾಮಿ ಅವರನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಮುಡಾದಲ್ಲಿ ಸುಮಾರು 5000 ಕೋಟಿಗೂ ಹೆಚ್ಚು ಹಗರಣ ನಡೆದಿದೆ ಎಂದು ಹೊಸ ಬಾಂಬ್ ಸಿಡಿಸಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಡಾ ಹಗರಣ ಸಂಬಂಧ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿದ್ದೇನೆ. ನಾನು ನೀಡಿದ ದಾಖಲೆ ಸಂಬಂಧ ಇಡಿ ಅಧಿಕಾರಿಗಳು ನನಗೆ ಸ್ಪಷ್ಟನೆ ಕೇಳಿದ್ದರು.ಮುಡಾದಲ್ಲಿ ಸುಮಾರು 5000 ಕೋಟಿಗೂ ಹೆಚ್ಚು ಹಗರಣ ನಡೆದಿದೆ ಎಂದು ತಿಳಿಸಿದರು. ಬೆಳಗ್ಗೆಯಿಂದ ಸಂಜೆವರೆಗೂ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಯಾವ ಕ್ಲಾರಿಫಿಕೇಷನ್ ಬೇಕೋ ಅದೆಲ್ಲಾ ಕೊಟ್ಟಿದ್ದೀನಿ. ದಾಖಲೆ, ಸಾಕ್ಷಿಗಳ ಬಗ್ಗೆ ಮಾಹಿತಿ ಕೇಳಿದ್ರು, ಅದೆಲ್ಲವನ್ನೂ ಕೊಟ್ಟಿದ್ದೇನೆ. ಇಡಿ ಅಧಿಕಾರಿಗಳು ಮತ್ತೆ ಕರೆದರೆ ವಿಚಾರಣೆಗೆ…
ಬಳ್ಳಾರಿ : ಈಗಾಗಲೇ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದ್ದು ಇದರ ಮಧ್ಯೆ ಶಾಸಕ ಜನಾರ್ಧನ ರೆಡ್ಡಿ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ಸ್ಪೋಟಕವಾದ ಆರೋಪ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 5,000 ಕೋಟಿ ರೂಪಾಯಿಯ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಬೇನಾಮಿ ಆಸ್ತಿಯ ಬಾಂಬ್ ಸಿಡಿಸಿದ್ದಾರೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಜಿಲ್ಲಾ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರು ಬಹಳ ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ. ಜಿಲ್ಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿಯ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ ಅವರು,ಸಿದ್ದರಾಮಯ್ಯ ಹಿಂದೆ ಮಾಡಿದ್ದಕ್ಕೆ ಈಗ ಅನುಭವಿಸುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ 14 ಸೈಟು 62 ಕೋಟಿ ರೂಪಾಯಿ ಈ ವಿಚಾರ ಅಲ್ಲ ಸಿದ್ದರಾಮಯ್ಯ, ಅವರ ಕುಟುಂಬಸ್ಥರು ಮತ್ತು ಸಂಬಂಧಿಕರ ಮೂಲಕ 5,000…
ಮೈಸೂರು : ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಅವರು ರಾಜ್ಯದ ಎಲ್ಲಾ ಜನತೆಗೆ ಒಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದ್ದಾರೆ. ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾದ ಹಾರ್ದಿಕ ಶುಭಾಶಯಗಳು. ಈ ವರ್ಷ ಅಕ್ಟೋಬರ್ ಮೂರರಿಂದ ಅಕ್ಟೋಬರ್ 12ರವರೆಗೆ ಮೈಸೂರು ದಸರಾ ಹಬ್ಬಕ್ಕೆ ನಿಮ್ಮೆಲ್ಲರಿಗೂ ಆತ್ಮೀಯವಾಗಿ ಸ್ವಾಗತ ಕೋರಲು ಹರ್ಷಿಸುತ್ತೇನೆ. ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ದಸರಾ ಹಬ್ಬ, ದುಷ್ಟ ಶಕ್ತಿಗಳ ವಿರುದ್ಧ ವಿಜಯ ಸಾಧಿಸಿದ ವಿಜಯದ ಸಂಕೇತವು ಹೌದು. ಸಾಂಪ್ರದಾಯಿಕವಾದ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಕಲೆ ಸಾಹಿತ್ಯ ಸಂಗೀತ ಕ್ರೀಡಾಕ್ಷೇತ್ರ ಗಳಲ್ಲಿನ ಸಾಧನೆಗಳ ವಿಜಯೋತ್ಸವವಾಗಿಯೂ ನಾಡಹಬ್ಬವನ್ನು ಆಚರಿಸುತ್ತಾ ಬಂದಿದ್ದೇವೆ.ಕಳೆದ ಬಾರಿ ಅನಿವಾರ್ಯವಾಗಿ ದಸರಾ ಹಬ್ಬದ ಸಾಂಪ್ರದಾಯಕ್ಕೆ ಒಂದಿಷ್ಟು ಚ್ಯುತಿ ಬಾರದಂತೆ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಿದ್ದೆವು. ಈ ಬಾರಿ ನಾಡಿನ ಅಧಿದೇವತೆಯಾದ ಚಾಮುಂಡೇಶ್ವರಿ ತಾಯಿಯ ಆಶೀರ್ವಾದದಿಂದ ಪ್ರಕೃತಿ ಒಲಿದು…
ಬೆಂಗಳೂರು : ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹಗೆ ಅಯೋಗ್ಯ ಎಂಬ ಪದ ಬಳಸಿದ್ದರಿಂದ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ವಿರುದ್ಧ ಕೇಸ್ ದಾಖಲಾಗಿತ್ತು. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಹೈಕೋರ್ಟ್ ಇದೀಗ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಹಾಗಾಗಿ ಶಾಸಕ ಪ್ರದೀಪ್ ಈಶ್ವರ್ ಗೆ ಇದೀಗ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹೌದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಕುರಿತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಪ್ರತಾಪ್ ಸಿಂಹ ಒಬ್ಬ ಅಯೋಗ್ಯ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಾಗಿತ್ತು. ಇಂದು ಹೈಕೋರ್ಟ್ ಅಲ್ಲಿ ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ. ಪ್ರದೀಪ್ ಈಶ್ವರ್ ಹೇಳಿದ್ದೇನು? ಅಯೋಧ್ಯಾ ಶ್ರೀ ರಾಮ ದೇವಸ್ಥಾನ ಉದ್ಘಾಟನೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್,…