Subscribe to Updates
Get the latest creative news from FooBar about art, design and business.
Author: kannadanewsnow05
ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ. ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ…
ಜಮ್ಮು ಕಾಶ್ಮೀರ : ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಭಾರತೀಯ ಸೇನೆ ಕಾಶ್ಮೀರದಲ್ಲಿರುವ ಹಲವು ಉಗ್ರರ ಮನೆಗಳನ್ನು ದ್ವಂಸಗೊಳಿಸಿದೆ. ಇದರ ಪ್ರತಿಕಾರಕ್ಕಾಗಿ ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತೆ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಇದೀಗ ಜಮ್ಮು ಕಾಶ್ಮೀರದ 48 ಪ್ರವಾಸಿ ತಾಣಗಳ ಪ್ರವೇಶಕ್ಕೆ ಕೇಂದ್ರ ಸರ್ಕಾ ನಿಷೇಧ ಹೇರಿದೆ. ಹೌದು ಉಗ್ರರ ಮನೆಗಳನ್ನು ನೆಲಸಮ ಮಾಡಿದ್ದಕ್ಕೆ ಪ್ರತಿಕಾರಕ್ಕೆ ಸಂಚು ರೂಪಿಸಿದ್ದು, ಕಾಶ್ಮೀರ ಪ್ರವಾಸಿ ತಾಣಗಳನ್ನು ಗುರುಯಾಗಿಸಿಕೊಂಡು ಉಗ್ರರು ದಾಳಿಗೆ ಮತ್ತೆ ಸ್ಕೆಚ್ ಹಾಕಿದ್ದಾರೆ ಎನ್ನಲಾಗಿದೆ. ಸ್ಲೀಪರ್ ಸೆಲ್ ಮೂಲಕ ಮಾಹಿತಿ ಪಡೆದು ದಾಳಿಗೆ ಉಗ್ರರು ಸಂಚು ರೂಪಿಸಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಕೇಂದ್ರ ಸರ್ಕಾರ ಇದೀಗ ಅಲರ್ಟ್ ಆಗಿದೆ. ಹಾಗಾಗಿ ಜಮ್ಮು ಕಾಶ್ಮೀರದ 84 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ಸ್ಥಾನಗಳಲ್ಲಿ ಪ್ರವೇಶ ನಿಷೇಧಿಸಿದೆ.
ಶಿವಮೊಗ್ಗ : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಬಲಿಯಾಗಿದ್ದಾರೆ.ಇತ್ತೀಚಿಗೆ ಅವರ ಅಂತ್ಯಕ್ರಿಯೆ ಕೂಡ ನೆರೆವೆರಿದ್ದು, ಸರ್ಕಾರ ಸಹ ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದೆ. ಇದಿಗ ಮೃತ ಮಂಜುನಾಥ್ ಪತ್ನಿ ಪಲ್ಲವಿ ಅವರು ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಹಲ್ಲಾಂನಲ್ಲಿ ಭಯೋತ್ಪಾದಕರು ನನ್ನ ಪತಿಯನ್ನು ಕೊಂದಾಗ, ನಮ್ಮನ್ನು ಸಾಯಿಸಿ ಎಂದು ನಾನು ಮತ್ತು ನನ್ನ ಮಗ ಕೂಗಿ ಭಯೋತ್ಪಾದಕರನ್ನು ಕೇಳಿದ್ದು ಹೌದು. ಆಗ ಆ ಉಗ್ರರು ‘ಮೋದಿಗೆ ಹೋಗಿಹೇಳಿ’ ಎಂದಿದ್ದೂ ಹೌದು. ಆದರೆ, ನಾನು ಈ ಮಾತುಗಳನ್ನು ಹೇಳಿದ್ದಕ್ಕೆ ಅನೇಕ ನೆಗೆಟಿವ್ ಕಾಮೆಂಟ್ಸ್ ಬರುತ್ತಿದೆ ಎಂದು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಪತ್ನಿ ಪಲ್ಲವಿ ಹೇಳಿದ್ದಾರೆ. ನಾನು ಈ ಮಾತುಗಳನ್ನೆಲ್ಲಾ ವಿಡಿಯೋ ಮಾಡಿಟ್ಟುಕೊಳ್ಳಬೇಕಿತ್ತೇನು ಎಂದು ಪ್ರಶ್ನಿಸಿದ್ದಾರೆ. ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಾರೆ. ಅಂತಹ ಸನ್ನಿವೇಶದಲ್ಲಿ…
ನವದೆಹಲಿ : ಪಾಕಿಸ್ತಾನ ಸೇನೆಯ ಕರಾಳ ಮುಖ ಮತ್ತೊಮ್ಮೆ ಬಯಲಾಗಿದ್ದು ಪಹಲ್ಗಾಮ್ ನಲ್ಲಿ , ಪ್ರವಾಸಿಗರ ಮೇಲೆ ಉಗ್ರರ ಗುಂಡಿನ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ ಇರುವುದು ಮತ್ತೊಮ್ಮೆ ಬಯಲಾಗಿದೆ. ಹೌದು ಪಲ್ಗಾಂ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನ್ ಸೇನಾಧಿಕಾರಿ ಕೈವಾಡ ದೃಢವಾಗಿದೆ. ಅರೆಸೇನಾಪಡೆ ಕಮಾಂಡೊ ಹಾಶಿಂ ಮುಸಾ ಉಗ್ರರ ಗುಂಡಿನ ದಾಳಿಯ ಹಿಂದೆ ಆತನ ಕೈವಾಡ ಇರುವುದು ಇದೀಗ ದೃಢವಾಗಿದೆ. ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ಮಾಡುವ ಮುನ್ನ ಉಗ್ರರಿಗೆ ಹಾಶೀಂ ಮುಸಾ ತರಬೇತಿ ನೀಡಿದ್ದ ಎನ್ನಲಾಗಿದೆ. ದಾಳಿಯ ಬಳಿಕ ಉಗ್ರರು ತಪ್ಪಿಸಿಕೊಳ್ಳಲು ರೂಟ್ ಮ್ಯಾಪ್ ಸಹ ಹಾಶಿಮ್ ಮುಸಾ ನೀಡಿದ ಎನ್ನಲಾಗಿದೆ. ಪಾಕಿಸ್ತಾನ ಮೂಲದ ಎಲ್ಇಟಿ ಜೊತೆ ಕೆಲಸ ಮಾಡುತ್ತಿರುವ ಕಟ್ಟಾ ಭಯೋತ್ಪಾದಕ ಮೂಸಾನನ್ನು, ಸ್ಥಳೀಯರಲ್ಲದವರು ಮತ್ತು ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಲು ಸಂಘಟನೆಯ ಮಾಸ್ಟರ್ಮೈಂಡ್ಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಿದ್ದಾರೆ.ವಿಶೇಷ ಸೇವಾ ಗುಂಪು (SSG) ನಂತಹ ಪಾಕಿಸ್ತಾನದ ವಿಶೇಷ ಪಡೆಗಳು ಅವನನ್ನು ಎಲ್ಇಟಿಗೆ ಎರವಲು…
ಉಡುಪಿ : ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಉದ್ಯಮಿ ಎನ್ಆರ್ ದಿಲೀಪ್ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ಈ ಒಂದು ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದ ಉದ್ಯಮಿ ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಸಹೋದರ ಎಂದು ತಿಳಿದುಬಂದಿದೆ. ಕಾರಿನಲ್ಲೇ ಎನ್ ಆರ್ ದಿಲೀಪ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ದಿಲೀಪ್ ಕುಮಾರ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ ಕಾರು ನಿಲ್ಲಿಸಿ ಕಾರಿನೊಳಗೆ ಕುಳಿತು ಸ್ವಯಂ ತಾನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉದ್ಯಮ ನಷ್ಟ ಹಾಗೂ…
ಚಾಮರಾಜನಗರ : ಮಹಿಳಾ ಪಿಎಸ್ಐ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಮದ್ಯದಲ್ಲಿ ಡೊಮ್ಯಾಕ್ಸ್ ಮಿಕ್ಸ್ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲ ಠಾಣೆಯ ಪಿಎಸ್ಐ ವರ್ಷವಿರುದ್ದ ಈ ಒಂದು ಕಿರುಕುಳ ಆರೋಪ ಕೇಳಿ ಬಂದಿದೆ. ಪದೇ ಪದೇ ಠಾಣೆಗೆ ಕರೆಸುವುದು ಪಿಎಸ್ಐ ವರ್ಷ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಿವಾಸಿ ದುಷ್ಯಂತ ಎನ್ನುವ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಿನ್ನೆಯೂ ಕೂಡ ದುಷ್ಯಂತ ಮನೆಗೆ ಹೋಗಿ ಪಿಎಸ್ಐ ವರ್ಷ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಪಿ ಎಸ್ ಐ ವರ್ಷ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಣ ನೀಡದಿದ್ದರೆ ರೌಡಿ ಓಪನ್ ಮಾಡುವುದಾಗಿ ಪಿಎಸ್ಐ ವರ್ಷ ದಮ್ಕಿ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಈ ಹಿಂದೆ ಯುವಕರ ಜೊತೆಗೆ ದೃಶ್ಯಂತ ಗಲಾಟೆ ಮಾಡಿಕೊಂಡಿದ್ದ. ಇದನ್ನೇ ಅಸ್ತ್ರ ಮಾಡಿಕೊಂಡು ದುಷ್ಯಂತಗೆ ನಿರಂತರವಾಗಿ ಪಿಎಸ್ಐ ವರ್ಷ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಮದ್ಯದ…
ಮಂಗಳೂರು : ಮಂಗಳೂರಿನ ಯುವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಹಾಗೂ ದೇಶದ್ರೋಹಿ ಪೋಸ್ಟ್ ಹಂಚಿಕೊಳ್ಳಲಾಗಿದ್ದು, ಹೈಲ್ಯಾಂಡ್ ಆಸ್ಪತ್ರೆಯ ವೈದ್ಯ ಅಸಿಫಾ ಫಾತಿಮಾ ಎಂಬ ವೈದ್ಯೆ ಧರ್ಮ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಇದೀಗ ಆಸ್ಪತ್ರೆಯ ಎಚ್ ಆರ್ ಅವರ ದೂರು ಆಧರಿಸಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ವೈದ್ಯೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೋಸ್ಟ್ ನಲ್ಲಿ ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ.ಹೌದು ನಾನು ಭಾರತೀಯಳು ಆದರೆ ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವೈದ್ಯೆ ಅಸಿಫಾ ಫಾತಿಮಾ. ಇದೀಗ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಫಾತಿಮಾ ವಿರುದ್ಧ ಇದೀಗ ತೀವ್ರ ಅಕ್ರೋಶ ವ್ಯಕ್ತವಾಗುತ್ತಿದೆ. ಆಕ್ರೋಶ ಭುಗಿಲೆಳುತ್ತಿದಂತೆ ಆಡಳಿತ ಮಂಡಳಿ ವೈದ್ಯೆ ಅಸಿಫಾ ಫಾತಿಮಾ ಅವರನ್ನು ಆಸ್ಪತ್ರೆಯಿಂದ ವಜಾಗೋಳಿಸಿದೆ. ಸದ್ಯ ಅಸಿಫಾ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಐಲ್ಯಾಂಡ್ ಆಸ್ಪತ್ರೆ ಎಚ್ ಆರ್ ಮೊಹಮ್ಮದ್ ಅಸ್ಲಾಂ ದೂರು…
ಬೆಂಗಳೂರು : ಬೆಂಗಳೂರಲ್ಲಿ ಟಿಪ್ಪರ್ ಇಂದು ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭಾವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಪೌರಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶಿವನಗರ ಫ್ಲೈ ಓವರ್ ಬಳಿ ಈ ಒಂದು ದುರಂತ ನಡೆದಿದೆ. ಮೃತ BBMP ಪೌರ ಕಾರ್ಮಿಕ ಮಹಿಳೆಯನ್ನು ಸರೋಜಾ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಶವ ರವಾನಿಸಲಾಗಿದೆ. ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು ವಿಚಾರವಾಗಿ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರಿಗೆ ರಾಜ್ಯಪಾಲರು ಬಿಜೆಪಿ ಶಾಸಕರ ಅಮಾನತು ವಾಪಸ್ ತೆಗೆದುಕೊಳ್ಳುವ ಸಂಬಂಧ ಪತ್ರ ಬರೆದಿದ್ದಾರೆ. ಹೌದು ಶಾಸಕರ ಅಮಾನತು ವಾಪಸ್ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಸ್ಪೀಕರ್ಗೆ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ ಸಲ್ಲಿಸಿತ್ತು. ನಿನ್ನೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿತ್ತು. ಈಗ ಬಿಜೆಪಿ ನಿಯೋಗದ ಮನವಿಯ ಬೆನ್ನೆಲೆ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಂಡು ಅಮಾನತು ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸ್ಪೀಕರ್ ಯುಟಿ ಖಾದರ್ ಹಾಗೂ ಎಚ್ ಕೆ ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ಒಂದು ವಿಡಿಯೋ ಸೃಷ್ಟಿಸಿ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಆದರೆ ಇದು AI ತಂತ್ರಜ್ಞಾನ ಬಳಸಿ ರಚಿಸಲಾದ ವಿಡಿಯೋ ಎನ್ನಲಾಗಿದೆ. ಹೌದು ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ಒಂದು ವಿಡಿಯೋ ಸೃಷ್ಟಿಸಿ ʼನಮ್ಮ ಮೋದಿʼ ಎಂಬ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿ ವಿಕೃತಿ ಮೆರೆಯಲಾಗಿದೆ. ರಾಜ್ಯದ ಮುಖ್ಯಮಂತ್ರಿಯೋರ್ವರ ಕೈಗೆ ಪಾಕಿಸ್ತಾನದ ಧ್ವಜ ಕೊಟ್ಟಿರುವಂತೆ AI ವೀಡಿಯೊ ಸೃಷ್ಟಿಸಿರುವುದಕ್ಕೆ ಸಾರ್ವಜನಿಕರು ಖಂಡಿಸಿದ್ದು, ರಾಜ್ಯದ ಮುಖ್ಯಮಂತ್ರಿಗಳನ್ನು ಗುರಿಪಡಿಸಿ ಹೀಗೆ ವಿಕೃತ ನಕಲಿ ವಿಡಿಯೋಗಳನ್ನು ನಡೆಸುತ್ತಿರುವವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆ, ಸೈಬರ್ ಅಪರಾಧ ವಿಭಾಗಕ್ಕೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.













