Author: kannadanewsnow05

ಮೈಸೂರು: ಅಮೆರಿಕದಲ್ಲಿ ಮೈಸೂರಿನ ಉದ್ಯಮಿಯೊಬ್ಬ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಹತ್ಯೆ ಮಾಡಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಶ್ವೇತಾ, ಹಿರಿಯ ಪುತ್ರನನ್ನು ಕೊಲೆ ಮಾಡಿದ ಬಳಿಕ ಹರ್ಷ ಕಿಕ್ಕೇರಿ ಅಲಿಯಾಸ್ ಹರ್ಷವರ್ಧನ್ (57) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಮೆರಿಕ ಕಾಲಮಾನದ ಪ್ರಕಾರ ಗುರುವಾರ ರಾತ್ರಿ ಅನಾಹುತ ಸಂಭವಿಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹರ್ಷ ತಮ್ಮ ಪತ್ನಿ ಶ್ವೇತಾ, ಇಬ್ಬರು ಪುತ್ರರೊಂದಿಗೆ ಅಮೆರಿಕದ ನ್ಯೂ ಕ್ಯಾಸಲ್‌ನಲ್ಲಿ ವಾಸವಿದ್ದರು. ಗುರುವಾರ ರಾತ್ರಿ ಹರ್ಷ, ಪತ್ನಿ ಹಾಗೂ ಹಿರಿಯ ಪುತ್ರನಿಗೆ ಗುಂಡಿಕ್ಕಿ, ನಂತರ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವೇಳೆ ಏಳು ವರ್ಷದ ಕಿರಿಯ ಪುತ್ರ ಮನೆಯಿಂದ ಹೊರಹೋಗಿದ್ದರಿಂದ ಎಂಬುದು ತಿಳಿದುಬಂದಿದೆ. ಬದುಕುಳಿದಿದ್ದಾನೆ. ಕಿಂಗ್ ಕೌಂಟಿ ಶೆರಿಫ್ ಕಚೇರಿ (KCSO) ಪ್ರಕಾರ, ಈ ಘಟನೆ ವಾಷಿಂಗ್ಟನ್‌ನ ನ್ಯೂಕ್ಯಾಸಲ್‌ನಲ್ಲಿರುವ ಟೌನ್‌ಹೋಮ್‌ನಲ್ಲಿ ಸಂಭವಿಸಿದೆ. 911 ಕರೆಯ ನಂತರ 129 ನೇ ಬೀದಿಯ 7,000 ಬ್ಲಾಕ್‌ಗೆ ಡೆಪ್ಯೂಟಿಗಳನ್ನು ಕರೆಯಲಾಯಿತು. ಮೊದಲು ಪ್ರತಿಕ್ರಿಯಿಸಿದವರು ನಿವಾಸದೊಳಗೆ ಮೂವರು ಮೃತಪಟ್ಟಿರುವುದನ್ನು ಕಂಡುಕೊಂಡರು.…

Read More

ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿಗೆ ಅಧಿವೇಶನದಲ್ಲಿ ‘ಹನಿ ಟ್ರ್ಯಾಪ್’ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ನಡೆದಿದೆ ಎನ್ನಲಾಗಿದ್ದು, ಬಳಿಕ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ CID ಗೆ ವಹಿಸಿತ್ತು. ಇದೀಗ CID ವಿಚಾರಣೆ ವೇಳೆ ನನ್ನ ಕೈ ಹಿಡಿದು ಹನಿಟ್ರ್ಯಾಪ್ ಗೆ ಯತ್ನಿಸಿದ್ದ ಯುವತಿಗೆ ಕಪಾಳಿಗೆ ಬಾರಿಸಿ ಕಳಿಸಿದ್ದೆ ಎಂದು ಹೇಳಿಕೆ ನೀಡಿದ್ದಾರೆ. 3 ದಿನಗಳ ಹಿಂದೆ ಬೆಂಗಳೂರಿನ ಜಯಮಹಲ್ ರಸ್ತೆಯ ಸಚಿವರ ಸರ್ಕಾರಿ ನಿವಾಸದಲ್ಲಿ ರಾಜಣ್ಣರನ್ನು ವಿಚಾರಣೆಗೊಳಪಡಿಸಿ ಸಿಐಡಿ ಹೇಳಿಕೆ ದಾಖಲಿಸಿದೆ. ಆದರೆ ಹನಿಟ್ರ್ಯಾಪ್ ಯತ್ನ ಕೃತ್ಯದ ಬಗ್ಗೆ ಖಚಿತ ವಾದ ಮಾಹಿತಿ ನೀಡದೆ ಸಚಿವರು ಅಸ್ಪಷ್ಟ ಹಾಗೂ ಗೊಂದಲ ಮಯ ವಿವರ ನೀಡಿದ್ದಾರೆ ಎನ್ನಲಾಗಿದೆ. ಎರಡು ಬಾರಿ ತಮ್ಮನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಲಾಗಿತ್ತು. ಬೆಂಗಳೂರಿನ ಸರ್ಕಾರಿ ನಿವಾಸಕ್ಕೆ ಯುವತಿ ಜತೆ ಗಡ್ಡಧಾರಿ ಯುವಕನೊಬ್ಬ ಬಂದಿದ್ದ. ಆದರೆ ಅವರಾರೂ ನನಗೆ ಪರಿಚಿತರಲ್ಲ, ನನ್ನ ಗೃಹ ಕಚೇರಿಯಲ್ಲಿ ಏಕಾಏಕಿ ಕೈ ಹಿಡಿದು ಎಳೆದು…

Read More

ನವದೆಹಲಿ: ಇತ್ತೀಚಿಗೆ ರಾಜ್ಯದಲ್ಲಿ ಪನ್ನೀರ್, ಐಸ್ ಕ್ರೀಮ್, ತುಪ್ಪ, ಖೋವಾ ಸೇರಿದಂತೆ ಹಲವು ವಸ್ತುಗಳಲ್ಲಿ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಅಂಶಗಳು ಪತ್ತೆಯಾಗಿದ್ದವು. ಇದೀಗ ಗ್ರಾಹಕರಿಗೆ ಪೂರೈಸುವ ಊಟ- ತಿನಿಸುಗಳಲ್ಲಿ ‘ಅನಲಾಗ್ ಪನೀರ್’ ಬಳಸಿದ್ದರೆ ಅದನ್ನು ಹೋಟೆಲ್‌ಗಳು ಸ್ಪಷ್ಟವಾಗಿ ನಮೂದಿಸಬೇಕು ಎಂಬುದನ್ನು ಕಡ್ಡಾಯಗೊಳಿಸಲು ಕೇಂದ್ರ ಗ್ರಾಹಕರ ವ್ಯವಹಾರಗಳ ಸಚಿವಾಲಯ ಮುಂದಾಗಿದೆ. ಅನಲಾಗ್ ಪನೀರ್‌ನ ಪ್ಯಾಕೆಟ್ ಮೇಲೆ ಉತ್ಪಾದಕರು ‘ಡೈರಿಯೇತರ (ನಾನ್-ಡೈರಿ)’ ಎಂಬುದಾಗಿ ನಮೂದಿಸುವುದನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಈಗಾಗಲೇ ಕಡ್ಡಾಯಗೊಳಿಸಿದೆ. ಆದರೆ ಈ ನಿಯಮವು ಪ್ರಸ್ತುತ ಹೋಟೆಲ್‌ಗಳಲ್ಲಿ ಬಡಿಸುವ ಸಿದ್ಧಪಡಿಸಿದ ಆಹಾರಕ್ಕೆ ಅನ್ವಯಿಸುವುದಿಲ್ಲ. ಅನಲಾಗ್ ಪನೀರ್ ಕೂಡ ನೋಡುವುದಕ್ಕೆ ಮತ್ತು ರುಚಿಯಲ್ಲಿ ನೈಜ ಪನೀರನ್ನೇ ಹೋಲುತ್ತದೆ. ಸೋವಿಯಾದ್ದರಿಂದ ಅದನ್ನು ಹೋಟೆಲ್‌ಗಳು ಗ್ರಾಹಕರೆದುರು ಬಹಿರಂಗಪಡಿಸುವುದಿಲ್ಲ. ಇನ್ನು ಮುಂದೆ ಅಡುಗೆಯಲ್ಲಿ ಅನಲಾಗ್ ಪನೀರ್ ಬಳಸಿರುವುದನ್ನು ಗ್ರಾಹಕರಿಗೆ ಹೋಟೆಲ್‌ಗಳು ಮೊದಲೇ – ತಿಳಿಸಬೇಕು ಎಂಬುದನ್ನು ಕಡ್ಡಾಯ ಮಾಡಲಾಗುವುದು ಎಂದು – ಗಾಹಕ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖಾರೆ ತಿಳಿಸಿದ್ದಾರೆ.…

Read More

ಬೆಳಗಾವಿ : ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರ ಮೇಲೆ ಕೈ ಎತ್ತಿರುವ ಪ್ರಸಂಗ ನಡೆದಿದೆ. ಸಿಎಂ ಭಾಷಣ ಮಾಡುತ್ತಿರುವಾಗ, ಸಮಾವೇಶದಲ್ಲಿ ಕೆಲ ಬಿಜೆಪಿಗರು ಎನ್ನಲಾದವರಿಂದ ಕಾಂಗ್ರೆಸ್ ​ವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಿಎಂ ಭಾಷಣದ ವೇಳೆ ಗದ್ದಲ ಸೃಷ್ಟಿಸಲು ಕೆಲ ಗುಂಪು ಮುಂದಾದಾಗ ಸಿಎಂ ಪೊಲೀಸರು ಏನು ಮಾಡುತ್ತಿದ್ದೀರಿ? ಯಾವನೋ ಅವನು ಎಸ್ಪಿ? ಬಾ ಇಲ್ಲಿ ? ಅಲ್ಲಿ ಏನು ನಡೆಯುತ್ತಿದೆ ಗೊತ್ತಾಗಲ್ವಾ ಎಂದು ಏಕವಚನದಲ್ಲಿ ಗದರಿದ ಸಿಎಂ, ಸಿಟ್ಟಿನಿಂದ ಹೊಡೆಯುವಂತೆ ಕೈ ಎತ್ತಿದ್ದಾರೆ. ನಿನ್ನೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆಯೇ ಕಪ್ಪು ಬಟ್ಟೆ ಪ್ರದರ್ಶನ ಮಾಡಲಾಗಿದೆ. ಕಪ್ಪು ಬಟ್ಟೆ ಹಿಡಿದು ವೇದಿಕೆಯತ್ತ ನುಗ್ಗಲು ಬಿಜೆಪಿ ಮಹಿಳಾ ಕಾರ್ಯಕರ್ತರು ಯತ್ನಿಸಿದ್ದಾರೆ. ಕಪ್ಪು ಬಟ್ಟೆ ಪ್ರದರ್ಶಿಸಿ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇವರ ಸ್ಥಾನಕ್ಕೆ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದಂತ ಮಹೇಶ್ವರ ರಾವ್. ಎಂ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ತುಷಾರ್ ಗಿರಿ ನಾಥ್, ಐಎಎಸ್ (ಕೆಎನ್: 1993), ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಬೆಂಗಳೂರು ಆಗಿ ವರ್ಗಾವಣೆ ಮಾಡಲಾಗಿದೆ. ಉಮಾಶಂಕರ್ ಎಸ್ ಆರ್., ಐಎಎಸ್ ಅವರನ್ನು 30.04.2025 ರಂದು ನಿವೃತ್ತಿ ಹೊಂದುವ ಸಮಕಾಲೀನ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ. ತುಷಾರ್ ಗಿರಿ ನಾಥ್, ಐಎಎಸ್ ಅವರನ್ನು 30.04.2025 ರಂದು ನಿವೃತ್ತಿ ಹೊಂದುವ ಉಮಾಶಂಕರ್ ಎಸ್ ಆರ್., ಐಎಎಸ್ ಅವರನ್ನು 30.04.2025 ರಂದು ನಿವೃತ್ತಿ ಹೊಂದುವ ಸರಕಾರದ…

Read More

ಬೆಳಗಾವಿ : ರಾಜ್ಯದ ಯಜಮಾನಿ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಹಣವನ್ನು ತಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಎಂದು ಸಚಿವರು ಹೇಳಿದರು. ಮುಂದಿನ ತಿಂಗಳು 20 ನೇ ತಾರೀಖಿಗೆ ನಮ್ಮ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿದೆ. ಈವರೆಗೆ 80 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಜೇಬಿಗೆ ಹಾಕಿದ್ದೇವೆ. ಇದು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ ಸಾಮಾನ್ಯರ ಮೇಲಿರುವ ಬದ್ಧತೆ ಎಂದು ಸಚಿವರು ಹೇಳಿದರು. 2023 ರಲ್ಲಿ ಜನರ ವಿಶ್ವಾಸ ಗಳಿಸಿ ಕರ್ನಾಟದಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿದ್ದೇವೆ. ಸರ್ಕಾರ ಬಂದು 100 ದಿನಗಳ ಒಳಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು…

Read More

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದ ಅನುಷ್ಠಾನವನ್ನು ಮಾಡಲಾಗಿದೆ. ಈ ಮೂಲಕ ಹಾವು ಕಡಿತ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲಾಗಿದೆ.ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡವಳಿಯನ್ನು ಹೊರಡಿಸಲಾಗಿದ್ದು, ಕರ್ನಾಟಕದಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮವನ್ನು 2023-24 ರಲ್ಲಿ ಪ್ರಾರಂಭಿಸಿ, ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಇದರ ಯಶಸ್ವಿ ಅನುಷ್ಠಾನಕ್ಕಾಗಿ, ಮೇಲಿನ ಉಲ್ಲೇಖ (1) ರಲ್ಲಿ ಓದಲಾದ ಅಧಿಸೂಚನೆಯಲ್ಲಿ ಸರ್ಕಾರವು ಹಾವು ಕಡಿತದ ಪ್ರಕರಣಗಳು ಮತ್ತು ಹಾವು ಕಡಿತದಿಂದ ಸಂಭವಿಸುವ ವ್ಯಕ್ತಿಗಳ ಮರಣಗಳನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ, 2020 ರ ಪ್ರಕರಣ 3 ರ ಅಡಿಯಲ್ಲಿ “ಅಧಿಸೂಚಿತ ಕಾಯಿಲೆ” ಎಂದು ಘೋಷಿಸಿದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು, ಇವರು ವಿಷಪೂರಿತ ಹಾವು ಕಡಿತಕ್ಕೆ ತುತ್ತಾದವರಿಗೆ ಸಕಾಲಿಕ ಮತ್ತು ಸೂಕ್ತ ಚಿಕಿತ್ಸೆಯನ್ನು ನೀಡದಿದ್ದಲ್ಲಿ ಮರಣ ಅಥವಾ ಶಾಶ್ವತ ಅಂಗವೈಕಲ್ಯಗಳಂತಹ ವೈದ್ಯಕೀಯ ಸಮಸ್ಯೆಗಳು ಉಂಟಾಗುತ್ತವೆ ಎಂದು ತಿಳಿಸುತ್ತಾ, ಮೇಲಿನ ಉಲ್ಲೇಖ…

Read More

ಬೆಂಗಳೂರು : ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ ಎಂದು ಹಜ್ ಯಾತ್ರಿಕರಲ್ಲಿ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದೇ , ಸಮಾಜಕ್ಕೆ ನೀಡುವ ಉತ್ತಮ ಕೊಡುಗೆ ಎಂದು ತಿಳಿಸಿದರು. ಅವರು ಇಂದು ಕರ್ನಾಟ ರಾಜ್ಯ ಹಜ್ ಸಮಿತಿ ಆಯೋಜಿಸಿರುವ 2025 ನೇ ಸಾಲಿನಹಜ್ ಯಾತ್ರಿಕರ ವಿಮಾನಯಾನವನ್ನು ಉದ್ಘಾಟಿಸಿ ಮಾತನಾಡಿದರು. ಹಜ್ ಯಾತ್ರಿಕರಿಗೆ ಶುಭ ಹಾರೈಕೆ ಈ ವರ್ಷ ಸುಮಾರು 8635 ಜನ ಯಾತ್ರಿಕರು ಹಜ್ ಯಾತ್ರೆಗೆ ಹೊರಟಿದ್ದು, ಮುಂದಿನ ತಿಂಗಳ 15ರವರೆಗೆ ಸುಮಾರು 27 ವಿಮಾನಗಳಲ್ಲಿ ಪ್ರಯಾಣ ಕೈಗೊಳ್ಳಲಿದ್ದಾರೆ. ಪ್ರತಿಯೊಬ್ಬ ಮುಸಲ್ಮಾನ ತಮ್ಮ ಜೀವತಾವಧಿಯಲ್ಲಿ ಒಮ್ಮೆಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕೆಂಬುದು ಅವರ ಪವಿತ್ರ ಆಚರಣೆಗಳಲ್ಲಿ ಒಂದಾಗಿದೆ. ಹಜ್ ಯಾತ್ರಿಕರೆಲ್ಲರಿಗೂ ಅವರ ಪ್ರಯಾಣ ಸುಖಕರವಾಗಿಲಿ ಎಂದು ಹಾರೈಸಿದರು. ಪವಿತ್ರ ಮೆಕ್ಕಾದಲ್ಲಿ ದೇಶದ ಒಳಿತಿಗೆ ಭಾರತೀಯರ ಅದರಲ್ಲಿಯೂ ಕನ್ನಡಿಗರ ಪರವಾಗಿ ಪ್ರಾರ್ಥನೆ ಮಾಡಲೆಂದು ಮುಖ್ಯಮಂತ್ರಿಗಳು ಕೋರಿದರು. ಸರ್ಕಾರ ಒಂದು ಧರ್ಮದ ಓಲೈಕೆ ಮಾಡುವುದಿಲ್ಲ ನಮ್ಮ…

Read More

ಹಾವೇರಿ : ಹಾವೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ಇ-ಸ್ವತ್ತು ಉತಾರ ಪೂರೈಸಲು ಲಂಚ ಸ್ವೀಕಾರ ಮಾಡುತ್ತಿದ್ದ ಗ್ರಾಮ ಪಂಚಾಯತ್​ ಪಿಡಿಒ ಸಹಿತ ಗ್ರಾಮ ಪಂಚಾಯತ್​ ಉಪಾಧ್ಯಕ್ಷ ಹಾಗೂ ಗ್ರಾಮ ಪಂಚಾಯತ್​ನ ಮೂವರು ಸದಸ್ಯರನ್ನು ಬಂಧಿಸಿದ್ದಾರೆ. ನವೀನ್ ಅಂದನೂರು ಲೇಔಟ್ ಮಾಲೀಕನಿಗೆ ಆರೋಪಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನವೀನ್​ ಅವರಿಂದ ಲಂಚ ಪಡೆಯುತ್ತಿದ್ದ ವೇಳೆ ಆರೋಪಿಗಳು ಲೋಕಾಯುಕ್ತ ಬಲೆಗ ಬಿದ್ದಿದ್ದಾರೆ. 60 ಪ್ಲಾಟ್ ಗಳ ಎನ್.ಎ ಇ-ಸ್ವತ್ತು ಉತಾರ ಪೂರೈಸಲು 4 ಲಕ್ಷದ 50 ಸಾವಿರ ರೂಪಾಯಿ ಲಂಚಕ್ಕೆ ಆರೋಪಿಗಳು ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮ ಪಂಚಾಯತ್ ಪಿಡಿಒ, ಉಪಾಧ್ಯಕ್ಷ ಹಾಗೂ ಗ್ರಾಮ ಪಂಚಾಯತ್​ನ ಮೂವರು ಸದಸ್ಯರು ಲೋಕಾಯುಕ್ತದಿಂದ‌ ಬಂಧಿತರಾದ ಆರೋಪಿಗಳು ಎಂದು ತಿಳಿದುಬಂದಿದೆ.ಪಿಡಿಒ ಕೆ.ಮಂಜುನಾಥ, ಉಪಾಧ್ಯಕ್ಷ ಮಲ್ಲಪ್ಪ ಬೂದಿಹಾಳ, ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ್, ಪ್ರಸನ್ನ ಮತ್ತು ಸೈಯದ್ ರೆಹಮಾನ್ ಬಂಧಿತರು ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭಿಸಿದ ಗುತ್ತಿಗೆದಾರರಿಗೆ ಇದೀಗ ಬಿಬಿಎಂಪಿ ದಂಡ ವಿಧಿಸಿದೆ. 2 ಕಂಪನಿಗಳಿಗೆ ಕಾಮಗಾರಿ ಆರಂಭಿಸಲು ವಿಳಂಬ ಮಾಡಿದಕ್ಕೆ ಜೆಎಂಸಿ ಹಾಗು ಒಯಾಸಿನ್ ಕಂಪನಿಗಳಿಗೆ ತಲಾ 5 ಲಕ್ಷ ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ. ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬರುವ WOC ರೋಡ್, ಹೊಸಕೆರೆಹಳ್ಳಿ ಕಾಮಗಾರಿ ಶುರುವಾಗದ ಹಿನ್ನೆಲೆಯಲ್ಲಿ ಇದೀಗ ಬಿಬಿಎಂಪಿ ದಂಡ ವಿಧಿಸಿದೆ. ಅಲ್ಲದೆ ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸುವಂತೆ ಬಿಬಿಎಂಪಿ ಎಚ್ಚರಿಕೆ ನೀಡಿದೆ.

Read More