Author: kannadanewsnow05

ದಾವಣಗೆರೆ : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ, ಅದರಲ್ಲೂ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಇನ್ನು ಮುಂದೆ ಕನ್ನಡದಲ್ಲೂ ಪರೀಕ್ಷೆ ಬರೆಯಬಹುದು ಎಂದು ಕೇಂದ್ರ ಸಚಿವರಾದಂತಹ ವಿ.ಸೋಮಣ್ಣ ಅವರು ಘೋಷಣೆ ಮಾಡಿದರು. ದಾವಣಗೆರೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆಗಳನ್ನು ಇಲಾಖೆ ನಡೆಸಲಿದೆ. ಕಳೆದ 40 ವರ್ಷಗಳಿಂದ ಇದ್ದಂತಹ ಬೇಡಿಕೆಯನ್ನು ಇಂದು ಈಡೇರಿಸಲಾಗಿದೆ ಎಂದು ತಿಳಿಸಿದರು. ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು,15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

Read More

ಉಡುಪಿ : ಉಡುಪಿ ಮಾರುಕಟ್ಟೆಯಲ್ಲಿ ಇಂದು ಚೀನಾ ಬೆಳೆದಿರುವ ಬೆಳ್ಳುಳ್ಳಿ, ದೇಶಿಯ ಉತ್ಪನ್ನಕ್ಕೆ ಪರ್ಯಾಯವಾಗಿ ಮಾರಾಟವಾಗುತ್ತಿತ್ತು. ಇದನ್ನು ಅರಿತ ವರ್ತಕರು ನಗರಸಭೆಗೆ ದೂರು ನೀಡಿದ್ದು, ಸಗಟು ವ್ಯಾಪಾರದ ಮಳಿಗೆಯೊಂದರ ಮೇಲೆ ನಗರಸಭೆ ಆಯುಕ್ತರು ದಾಳಿ ನಡೆಸಿ, ಐದು ಕ್ವಿಂಟಲ್ ಚೀನಾ ಬೆಳ್ಳುಳ್ಳಿಯನ್ನು ಜಪ್ತಿ ಮಾಡಿದ್ದಾರೆ. ಹೌದು ಎಲೆಕ್ಟ್ರಾನಿಕ್ ವಸ್ತುಗಳ ಅಗ್ಗದ ಬೆಲೆಯಲ್ಲಿ ಮಾರಾಟದಲ್ಲಿ ಚೀನಾ ಅಕ್ಕಪಕ್ಕದ ದೇಶಗಳಿಗೆ ಭಾರಿ ಹೊಡೆತವನ್ನು ನೀಡಿದೆ.ಆದರೆ ಇದೀಗ ಎಲೆಕ್ಟ್ರಾನಿಕ್ ವಸ್ತುಗಳ ಜೊತೆಗೆ ಅಡುಗೆಗೆ ಬಳಸುವ ಹಲವು ವಸ್ತುಗಳನ್ನು ಮಾರಾಟ ಹಾಗೂ ಸರಬರಾಜು ಮಾಡುವ ಮೂಲಕ ಭಾರತೀಯರಲ್ಲಿ ಆತಂಕ ಸೃಷ್ಟಿ ಮಾಡಿದೆ. ನಮ್ಮ ದೇಶದಲ್ಲಿ ಬೆಳೆಯುವ ಬೆಳ್ಳುಳ್ಳಿಗೂ, ಚೀನದಿಂದ ಬರುವ ಬೆಳ್ಳುಳ್ಳಿಗೂ, ರುಚಿ ವಾಸನೆ ಹಾಗೂ ದರದಲ್ಲು ಬಹಳ ವ್ಯತ್ಯಾಸವಿದೆ. ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಕೆ.ಜಿ.ಗೆ 160 ರಿಂದ 320 ರೂ. ನಂತೆ ಮಾರಾಟವಾಗುತ್ತಿದೆ. ಆದರೆ, ಚೀನಾದ ಬೆಳ್ಳುಳ್ಳಿ ಕೇವಲ 50 ರಿಂದ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಭಾರತವು ತನ್ನ ಆಮದನ್ನು 2014 ರಲ್ಲಿ…

Read More

ಹಾವೇರಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಹಾಗೂ ತನ್ನ ವಿಪರೀತ ಕಾಮತೃಷೆಗಾಗಿ ತಾಳಿ ಕಟ್ಟಿದ್ದ ಗಂಡನನ್ನೇ ಹೆಂಡತಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಭೀಕರವಾಗಿ ಕೊಂದಿರುವ ಘಟನೆ ಹಿರೆಕೇರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಹೌದು, ಸಾಧಿಕ್ ಮತ್ತೂರು(30) ಕೊಲೆಯಾದ ದುರ್ದೈವಿ ಎಂದು ಹೇಳಲಾಗುತ್ತಿದ್ದು, ಇನ್ನೂ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿಯನ್ನು ಸಲ್ಮಾ (26) ಹಾಗೂ ಪ್ರಿಯಕರ ಜಾಫರ್ (28) ಆರೋಪಿಗಳು ಎಂದು ತಿಳಿದುಬಂದಿದೆ.ಕಳೆದ ಸೆಪ್ಟೆಂಬರ್ 25 ರಂದು ಈ ಒಂದು ಕೊಲೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಲ್ಮಾ ಜಾಫರ್ ಎಂಬುವವನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಸಲ್ಮಾ – ಜಾಫರ್ ಸರಸ ಸಲ್ಲಾಪ ನೋಡಿ ಸಾಧಿಕ್ ಬೇಸತ್ತಿದ್ದನು. ಪತ್ನಿ ಸಲ್ಮಾಗೆ ಸಾಕಷ್ಟು ಸಲ ಸಾಧಿಕ್ ವಾರ್ನಿಂಗ್ ಕೂಡ ಮಾಡಿದ್ದನಂತೆ. ನಿಮ್ಮಿಬ್ಬರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಸಾಧಿಕ್ ವಾರ್ನಿಂಗ್ ಮಾಡಿದ್ದನು. ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರೆ ನಮಗೆ ಸಂಕಷ್ಟ ಎಂದು ತಿಳಿದು ಪತ್ನಿ ಸಲ್ಮಾ, ಪ್ರಿಯಕರನೊಂದಿಗೆ ಸೇರಿ ಸೆ.…

Read More

ರಾಯಚೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಈ ಒಂದು ಪ್ರಕರಣ ತನಿಖೆಯಲ್ಲಿ ಇರುವಾಗಲೇ, ಇದೀಗ ರಾಯಚೂರು ಜಿಲ್ಲೆಯಲ್ಲಿ ಸಹಕಾರ ಇಲಾಖೆಯ ಬ್ಯಾಂಕ್ನಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ಹೌದು RDCC ಯ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದ್ಗಲ್ ಪಟ್ಟಣದ ಶಾಖೆಯ ಬ್ಯಾಂಕ್ ಮ್ಯಾನೇಜರ್ ಸ್ವತಃ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಅಕ್ರಮ ಹಣವನ್ನು ವರ್ಗಾವಣೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.ಒಟ್ಟು 22 ಗ್ರಾಹಕರಿಗೆ 2.20 ಕೋಟಿ ರೂಪಾಯಿ ಆಕ್ರಮ ವರ್ಗಾವಣೆ ಆಗಿರುವ ಆರೋಪ ಕೇಳಿ ಬಂದಿತ್ತು. ಆರೋಪ ಬಂದ ಕೂಡಲೇ ಸ್ವತಃ ಇಲಾಖೆಯೇ ತನಿಖೆ ನಡೆಸಿದ್ದು ಬ್ಯಾಂಕ್ ಮ್ಯಾನೇಜರನ ವಂಚನೆ ಬಯಲಾಗಿದೆ. ಬ್ಯಾಂಕ್ ಮ್ಯಾನೇಜರ್ ನನ್ನು ಶಿವಪುತ್ರಪ್ಪ ಎಂದು ಹೇಳಲಾಗುತ್ತಿದ್ದು, ಬ್ಯಾಂಕ್​ನ 11 ಜನ ಸಿಬ್ಬಂದಿಯ ಐಡಿ ಬಳಸಿ, ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆಯಾಗಿದ್ದು ಇಲಾಖಾ ತನಿಖೆಯಲ್ಲಿ ಗೊತ್ತಾಗಿದೆ. 2017 ಜೂನ್​ನಿಂದ…

Read More

ಬೆಂಗಳೂರು : ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ 1924 ಡಿಸೆಂಬರ್ 24 ರಂದು, ಕರ್ನಾಟಕ ರಾಜ್ಯದ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಇದೀಗ ಮುಂಬರುವ ಡಿಸೆಂಬರ್ 24ಕ್ಕೆ ನೂರು ವರ್ಷ ಪೂರೈಸುವ ಹಿನ್ನೆಲೆಯಲ್ಲಿ ಡಿಸೆಂಬರ್ 24 ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಆಚರಿಸಲಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಸಾಧನೆ ಮಾಡಿದಂತಹ ಸಾಧಕರಿಗೆ ಗಾಂಧಿಜಿ ಸೇವಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೆಳಗಾವಿಯಲ್ಲಿ 1924ರ ಡಿಸೆಂಬರ್​ 24ರಂದು ಕಾಂಗ್ರೆಸ್ ಅಧಿವೇಶ ನಡೆಯಿತು. ಇದರ ಶತಮಾನೋತ್ಸವ ಆಚರಣೆ ಮಾಡುತ್ತಿದ್ದೇವೆ. ಮೊದಲ ಶತಮಾನೋತ್ಸವ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತದೆ. ಸಚಿವ ಹೆಚ್.ಕೆ ಪಾಟೀಲ್ ಅವರು ಇದಕ್ಕೆ ಅಧ್ಯಕ್ಷರಾಗಿರುತ್ತಾರೆ. ಮಹಾತ್ಮ ಗಾಂಧಿಜಿಯವರು ಶಾಂತಿಯುತವಾಗಿ, ಸತ್ಯಗ್ರಹದಿಂದ ಬ್ರಿಟಿಷರನ್ನು ದೇಶದಿಂದ ಓಡಿಸಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಹೇಳಿದರು.

Read More

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೈಲು ಸೇರಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಇತ್ತೀಚಿಗೆ SIT ಅಧಿಕಾರಿಗಳು ದಾಳಿ ಮಾಡಿ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಹೌದು ವಿರೋಧಿಗಳನ್ನು ಹತ್ತಿಕ್ಕಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಹನಿಟ್ರ್ಯಾಪ್‌ಗೆ ಶಾಸಕ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಇದೀಗ, ಶಾಸಕನ ಮನೆಯಲ್ಲಿ ಸಿಕ್ಕ ಲ್ಯಾಪ್‌ಟಾಪ್‌ ಮತ್ತು ಪೆನ್‌ಡ್ರೈವ್‌ನಲ್ಲಿ ಬಿಜೆಪಿ ಸೇರಿ ವಿವಿಧ ರಾಜಕೀಯ ನಾಯಕರ ಅಶ್ಲೀಲ ವಿಡಿಯೊ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿದ SIT ಅಧಿಕಾರಿಗಳು ಶಾಸಕ ಮುನಿರತ್ನ ಮನೆ ಮೇಲೆ ಸೆ.28ರಂದು ದಾಳಿ ನಡೆಸಿ, ಲ್ಯಾಪ್‌ಟಾಪ್‌ ಮತ್ತು ಪೆನ್‌ಡ್ರೈವ್‌ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಅವುಗಳನ್ನು ಪರಿಶೀಲನೆ ಮಾಡಿದ ವೇಳೆ ಹಲವು ಅಧಿಕಾರಿಗಳು ಹಾಗೂ ರಾಜಕಾರಣಿಗಳ ಖಾಸಗಿ ವಿಡಿಯೊಗಳು ಸಿಕ್ಕಿವೆ ಎನ್ನಲಾಗಿದೆ. ಹನಿಟ್ರ್ಯಾಪ್‌ ಮಾಡಲು ಈ ವಿಡಿಯೊಗಳನ್ನು ಚಿತ್ರೀಕರಣ ಮಾಡಿರಬಹುದು ಎಂದು ಶಂಕಿಸಲಾಗಿದೆ.…

Read More

ಚಿತ್ರದುರ್ಗ : ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನ ಎದುರಿಸಲಿ. ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಲಿ ನಮ್ಮ ಅಭ್ಯಂತರ ಇಲ್ಲ. ಸಿದ್ದರಾಮಯ್ಯ ಎಲ್ಲರಂತಲ್ಲ ಎಂಬ ಮಾತಿನಂತೆ ಇರಲಿ ಎಂದು ಹೇಳುವ ಮೂಲಕ ಆತ್ಮಸಾಕ್ಷಿಗೆ ಅನುಗುಣವಾಗಿ‌ ನಡೆಯುವೆ ಎಂದ‌ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಟಾಂಗ್ ಕೊಟ್ಟಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಒಂದು ತಪ್ಪು‌ ಮಾಡಲು ಹೋಗಿ ಹತ್ತಾರು ‌ತಪ್ಪು ಮಾಡುತ್ತಿದ್ದಾರೆ. ತಮ್ಮ ಕಾಲ ಮೇಲೆ ತಾವೇ‌ ಕಲ್ಲು ಹಾಕಿಕೊಂಡು ಗಾಯ ಮಾಡಿಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿ‌ ಅನ್ನೋದಕ್ಕಿಂತ ನೈತಿಕತೆ ಸಹ ದೊಡ್ಡದು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನ ಎದುರಿಸಲಿ. ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಲಿ ನಮ್ಮ ಅಭ್ಯಂತರ ಇಲ್ಲ ಎಂದು ಅವರು ತಿಳಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ಶೀಘ್ರ ಬಿಡುಗಡೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ…

Read More

ಬೆಂಗಳೂರು : ಸೀರಿಯಲ್ ನಟಿಯ ಮದುವೆಯ ಪ್ರಸ್ತಾಪಕ್ಕೆ ಬೆದರಿದ ಯುವಕನೊಬ್ಬ ಬೆಂಗಳೂರಿನಲ್ಲಿ ಇಂದು ಸೊಸೈಡ್ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇದೀಗ ಕನ್ನಡತಿ ಸೀರಿಯಲ್ ಕಿರುತೆರೆ ನಟಿ ವೀಣಾ ಆಮೇಲೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ಹುಳಿಮಾವು ಠಾಣೆಯಲ್ಲಿ ಕಿರುತೆರೆ ನಟಿ ವೀಣಾ ವಿರುದ್ಧ FIR ದಾಖಲಾಗಿದೆ. ಕಿರುತೆರೆ ನಟಿ ವೀಣಾ, ಮದನ್ ಸ್ನೇಹಿತನನ್ನು ಪ್ರೀತಿ ಮಾಡುತ್ತಿದ್ದಳು. ಆದರೂ ಮದನ್ ಪ್ರೀತಿಸುವಂತೆ ವೀಣಾ ಒತ್ತಾಯಿಸುತ್ತಿದ್ದಳು. ವೀಣಾ ಎಷ್ಟೇ ಒತ್ತಾಯಿಸಿದ್ದರು ಮದನ್ ಇಷ್ಟವಿಲ್ಲ ಎಂದು ಹೇಳಿದ್ದ. ಬಳಿಕ ಆಗಾಗ ನಮ್ಮ ಮನೆ ಹತ್ತಿರ ಕಿರುತೆರೆ ನಟಿ ವೀಣಾ ಬರುತ್ತಿದ್ದಳು. ಮಾನ ಹರಾಜು ಹಾಕ್ತಿನಿ ಎಂದು ವೀಣಾ ಬೆದರಿಕೆ ಹಾಕುತ್ತಿದ್ದಳು ಎಂದು ಮದನ್ ತಾಯಿ ತಿಳಿಸಿದ್ದಾರೆ. ಈ ಹಿಂದೆ ಬ್ಲೇಡ್ನಿಂದ ಕೈ ಕೊಯ್ದುಕೊಂಡಿದ್ದಳು. ಆಗಾಗ ಕರೆ ಮಾಡಿ ಹೇಳಿದ ಜಾಗಕ್ಕೆ ಬರಲು ಒತ್ತಾಯ ಮಾಡುತ್ತಿದ್ದಳು. ನಿನ್ನೆ ಸಂಜೆ 4ಗಂಟೆಗೆ ಸಿಕೆ ಪಾಳ್ಯದ ಮನೆಗೆ ಕರೆಸಿಕೊಂಡಿದ್ದಳು. ಕುಡಿದ ಮರಿನಲ್ಲಿ ಗಲಾಟೆ ಮಾಡಿ ಮಾನಸಿಕ…

Read More

ಬೀದರ್ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ವಾಪಸ್ಸು ನೀಡಿದ್ದಾರೆ. ಈ ವಿಚಾರವಾಗಿ ಬೀದರ್ ನಲ್ಲಿ ಬಿಜೆಪಿ ಶಾಸಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು,ಇಡೀ ದೇಶದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ. ಹಾಗಾಗಿ ಎಲ್ಲಿ ಅವರು ರಾಜೀನಾಮೆ ಕೊಟ್ಟರೆ ಕಾಂಗ್ರೆಸ್ ಮುಳುಗುತ್ತದೆ ಎಂದು ಭಯದಲ್ಲಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಅಧಿಕಾರದ ವ್ಯಾಮೋಹ ಹೆಚ್ಚಾಗಿದೆ ಎಂದು ಬೀದರ್ ನಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗಾರ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಗೆ ಮುಳುಗುವ ಭಯ ಶುರುವಾಗಿದೆ. ಇಡೀ ದೇಶದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಬೆನ್ನೆಲುಬು ಆಗಿದ್ದಾರೆ ಎಂದು ತಿಳಿಸಿದರು. ಮಾನ, ಮರ್ಯಾದೆ, ಇಲ್ಲದವರು, ನೀತಿಗೆಟ್ಟವರು ಸಿದ್ದರಾಮಯ್ಯ ಬೆನ್ನಿಗಿದ್ದಾರೆ. 65 ಕೋಟಿ ಕೊಟ್ರೆ ಸೈಟ್ ವಾಪಸ್ ಕೊಡ್ತೀನಿ ಅಂತ ಸಿಎಂ ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಜನರಿಗೆ ಎಮೋಷನಲ್ ಬ್ಲಾಕ್ ಮೇಲ್ ಮಾಡಲು ಪತ್ನಿಯವರಿಂದ…

Read More

ದಾವಣಗೆರೆ : ಇತ್ತೀಚಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಒಟ್ಟು ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದರು. ಇದೀಗ ದಾವಣಗೆರೆಯಲ್ಲೂ ಕೂಡ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅವರ ಹಿನ್ನೆಲೆ ತಿಳಿದುಕೊಂಡು ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಹೌದು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಅಲ್ತಾಫ್ ಪತ್ನಿ ಫಾತಿಮಾ ಪಾಕಿಸ್ತಾನ ಪ್ರಜೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಹಿಂದೂಗಳ ಹೆಸರಲ್ಲಿ ವಾಸ! ನಾಲ್ವರು ಪಾಕಿಸ್ತಾನಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಬೆಚ್ಚಿ ಬೀಳಿಸುವಂತಹ ಮಾಹಿತಿ ಬಹಿರಂಗವಾಗಿದೆ. ಈ ನಾಲ್ವರು ಹಿಂದೂಗಳ ಹೆಸರುಗಳನ್ನು ಇಟ್ಟುಕೊಂಡು ಹಲವು ವರ್ಷಗಳಿಂದ ಈ ಒಂದು ಬಡಾವಣೆಯಲ್ಲಿ ವಾಸಿಸುತ್ತಿದ್ದರು ಎನ್ನುವ ಆತಂಕಕಾರಿ ವಿಷಯ ತಿಳಿದುಬಂದಿದೆ. ಪಾಕಿಸ್ತಾನ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ನನ್ನು ವಿವಾಹವಾಗಿದ್ದಳು.ಮೊಹಮ್ಮದ್ ಹನೀಫ್ ಕೂಡ ಪಾಕಿಸ್ತಾನದವನಾಗಿದ್ದಾನೆ.…

Read More