Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಮಲೆ ಆರ್ಭಟಿಸಲಿದೆ. ಬಿರುಗಾಳಿ, ಆಲಿಕಲ್ಲು ಸಹಿತ, ಗುಡುಗು ಮಿಂಚಿನೊಂದಿಗೆ ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಮಳೆ ಆರ್ಭಟಿಸಲಿದೆ. ಏಪ್ರಿಲ್ 5 ರಿಂದ ಬೆಂಗಳೂರು ನಗರ ಸುತ್ತಮುತ್ತಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಲಿಕಲ್ಲು ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಕರಾವಳಿ ಕರ್ನಾಟಕ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮೈಸೂರು, ಮಡಿಕೇರಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆ, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ…
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಲಿದೆ. ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ 4 ರೂ.ಗೆ ಏರಿಕೆ ಮಾಡಿ ಅನುಮೋದನೆ ನೀಡಲಾಗಿತ್ತು. ಅದರ ಬೆನ್ನಲ್ಲಿ ಮೊಸರು, ವಿದ್ಯುತ್ ದರ ಹೆಚ್ಚಳವಾಗಿದೆ. ಹಾಗಾಗಿ ಇಂದಿನಿಂದ ಹೋಟೆಲ್ ಗಳಲ್ಲೂ ಸಹ ಟೀ ಕಾಫಿ ದರ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ಹಾಲು, ಮೊಸರಿನ ದರ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಹೋಟೆಲ್ಗಳಲ್ಲಿ ಚಹ, ಕಾಫಿ ಸೇರಿದಂತೆ ಹಾಲಿನ ಖಾದ್ಯ, ಸಿಹಿ ತಿನಿಸುಗಳ ಬೆಲೆಯಲ್ಲೂ ಏರಿಕೆಯಾಗಲಿದೆ. ಸದ್ಯ ನಗರದಲ್ಲಿ ಟೀ, ಕಾಫಿ ಬೆಲೆ 15- 20 ಇದೆ. ಇದನ್ನು ಎಷ್ಟರ ಪ್ರಮಾಣದಲ್ಲಿ ಏರಿಕೆ ಮಾಡಬಹುದು ಎಂಬ ಬಗ್ಗೆ ಬೆಂಗಳೂರು ಹೋಟೆಲ್ಗಳ ಸಂಘ, ಕರ್ನಾಟಕ ಹೋಟೆಲ್ಗಳ ಸಂಘಗಳು ಸಭೆ ಸೇರಿ ನಿರ್ಧರಿಸಲಿವೆ. ನಂದಿನಿ ಹಾಲಿನ ಬೆಲೆಯೂ ಲೀ.ಗೆ 4ರೂ. ಹೆಚ್ಚಳವಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ಕಾಫಿ-ಟೀ ದರದಲ್ಲಿ ಶೇ.10-15ರಷ್ಟು ಹೆಚ್ಚಳವಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ಗೌರವಾಧ್ಯಕ್ಷ…
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಲಿದೆ. ಏಕೆಂದರೆ ಹಾಲು, ಮೊಸರು, ವಿದ್ಯುತ್ ಸೇರಿದಂತೆ ಸರ್ಕಾರ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದೆ. ಅಲ್ಲದೇ ಟೋಲ್ ಗಳಲ್ಲಿ ಶುಲ್ಕ ಹೆಚ್ಚಿಸಿ ಕೇಂದ್ರ ಸರ್ಕಾರ ಕೂಡ ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಿದೆ. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಇಂದಿನಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಬೆಲೆ ಏರಿಕೆ ಹಾಗೂ ವಾರ್ಷಿಕ ಹಣದುಬ್ಬರ ಆಧರಿಸಿ ಟೋಲ್ ದರ ಹೆಚ್ಚಿಸಲಾಗಿದ್ದು, ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಮಂಗಳವಾರದಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಟೋಲ್ ಗುತ್ತಿಗೆ ಅವಧಿ ಆಧರಿಸಿ ದರಗಳು ಬದಲಾಗಲಿದ್ದು, ಕನಿಷ್ಠ ಶೇಕಡಾ 3 ರಷ್ಟು ಮತ್ತು ಗರಿಷ್ಠ ಶೇ.5 ರಷ್ಟು ಹೆಚ್ಚಳ-ವಾಗಲಿದೆ. ಈ ಹೆಚ್ಚುವರಿ ಶುಲ್ಕವನ್ನು ಗ್ರಾಹಕರಿಗೆ ವರ್ಗಾಯಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳ ನಿರ್ಣಯ ಮತ್ತು ಸಂಗ್ರಹ) ನಿಯಮ-ಗಳು-2008ರ ಪ್ರಕಾರ ಸಗಟು ಬೆಲೆ ಸೂಚ್ಯಂಕದ ಆಧಾರದಲ್ಲಿ ಟೋಲ್ ಶುಲ್ಕ ಹೆಚ್ಚಿಸಲಾಗಿದೆ. ಈ ಹೆಚ್ಚುವರಿ…
ಬೆಂಗಳೂರು : ರಾಜ್ಯದಲ್ಲಿ ಸಚಿವ ಕೆ.ಎನ್ ರಾಜಣ್ಣ ಮೇಲೆ ಹನಿಟ್ರ್ಯಾಪ್ ಗೆ ಯತ್ನಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆದರೆ ಹನಿಟ್ರ್ಯಾಪ್ ಬದಲಾಗಿ ಕೊಲೆಗೆ ಸಂಚು ರೂಪಿಸಿದ್ದರು ಎನ್ನುವ ಆಡಿಯೋ ಇದೀಗ ಸೋರಿಕೆಯಾಗಿದೆ. ಹತ್ಯೆ ಸುಪಾರಿಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ರಾಜೇಂದ್ರ ಅವರ ಭೇಟಿಗೆ ಯತ್ನಿಸಿದ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ, ರಾಜೇಂದ್ರ ಅವರ ಸುಪಾರಿಗೆ ಸಂಬಂಧಿಸಿದಂತೆ 18 ನಿಮಿಷಗಳ ಟೆಲಿಫೋನ್ ಸಂಭಾಷಣೆಯೊಂದು ಲೀಕ್ ಆಗಿತ್ತು. ಅತ್ತ, ರಾಜೇಂದ್ರ ಅವರು ತಮಗೆ ಸಿಕ್ಕಿರುವ ಕೆಲವು ಸಾಕ್ಷ್ಯಾಧಾರಗಳನ್ನು ಸೇರಿಸಿಕೊಂಡು ತುಮಕೂರು ಎಸ್ಪಿಯವರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ, ತನಿಖೆ ನಡೆಸಿರುವ ಪೊಲೀಸರು ಒಬ್ಬ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು : ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿನ ದರ 4 ರೂ.ಏರಿಕೆ ಮಾಡಿ ಸಂಪುಟ ಅನುಮೋದನೆ ನೀಡಿತ್ತು. ಅಲ್ಲದೇ ಮೊಸರು, ವಿದ್ಯುತ್ ದರ ಏರಿಕೆ ಮಾಡಲಾಗಿದ್ದು, ಇಂದಿನಿಂದ ಇವೆಲ್ಲದರ ಮೇಲಿನ ಪರಿಕೃತ ದರ ಜಾರಿಯಾಗಲಿದೆ. ಹೌದು ಈಗಾಗಲೇ ರಾಜ್ಯದಲ್ಲಿ ಬಸ್ಸು, ಮೆಟ್ರೋ ಪ್ರಯಾಣ ದರ ಹೆಚ್ಚಳ ಬೆನ್ನಲ್ಲೇ ರಾಜ್ಯದ ಜನತೆಗೆ ಇಂದಿನಿಂದ ಹಾಲಿನ ದರ, ವಿದ್ಯುತ್ ಶುಲ್ಕ, ವಿದ್ಯುತ್ ಸಂಪರ್ಕದ ನಿಗದಿತ ಶುಲ್ಕ, ಇವಿ ಕಾರುಗಳ ಮೇಲಿನ ತೆರಿಗೆ ಹೆಚ್ಚಳದ ಶಾಕ್ ತಟ್ಟಲಿದೆ. ಬಳಕೆದಾರರ ಸೆಸ್ ಹೆಸರಿನಲ್ಲಿ ಹೊಸ ಹೊರೆ ಹೆಗಲೇರಲಿದ್ದು, ಜನಸಾಮಾನ್ಯರ ದುನಿಯಾ ಮತ್ತಷ್ಟು ದುಬಾರಿ ಆಗಲಿದೆ. ಜತೆಗೆ, ಕೇಂದ್ರ ಸರ್ಕಾರ ರಾಜ್ಯದಲ್ಲಿನ 66 ಟೋಲ್ ರಸ್ತೆಗಳಿಗೂ ಅನ್ವಯಿಸುವಂತೆ ಟೋಲ್ ದರವನ್ನು ಶೇ.2ರಿಂದ 5ರಷ್ಟು ಹೆಚ್ಚಳ ಮಾಡಿದೆ. ಹೀಗಾಗಿ, ರಾಜ್ಯದ ಬಡವರು ಮಾಧ್ಯಮವರ್ಗದವರಿಗೆ ಯುಗಾದಿ ಹಬ್ಬಕ್ಕೆ ಸಿಹಿಗಿಂತ ಕಹಿನೆ ರಾಜ್ಯ ಸರ್ಕಾರ ನೀಡಿದೆ. ಬೆಲೆ ಏರಿಕೆ ಸಂಬಂಧ ಈಗಾಗಲೇ ರಾಜ್ಯದ…
ಶಿವಮೊಗ್ಗ : ನಿನ್ನೆ ಇಡೀ ರಾಜ್ಯಾಧ್ಯಂತ ರಂಜಾನ್ ಹಬ್ಬ ಆಚರಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ರಾಜ್ಯದ ಈ ಜಿಲ್ಲೆಗಳಲ್ಲಿ ರಂಜಾನ್ ಪ್ರಾರ್ಥನೆ ವೇಳೆ, ಪ್ಯಾಲಿಸ್ತಾನಿ ಪರವಾಗಿ ಘೋಷಣೆ ಕೂಗಿರಿವ ಘಟನೇ ವರದಿಯಾಗಿದೆ.ಹೌದು ಶಿವಮೊಗ್ಗ, ಕೊಪ್ಪಳ ಜಿಲ್ಲೆಗಳಲ್ಲಿ ರಂಜಾನ್ ಪ್ರಾರ್ಥನೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರದ ಈದ್ಗಾ ಮೈದಾನದಲ್ಲಿ ನಮಾಜ್ ಬಳಿಕ ಎಸ್ಡಿಪಿಐ ‘ಪ್ಯಾಲೆಸ್ತೀನ್ ಫ್ರೀ’ ನಾಮಫಲಕ ಪ್ರದರ್ಶನ ಮಾಡಿತು. ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಮರು ಸಾಗರದ ಕೆಳದಿ ರಸ್ತೆಯ ಈದ್ಗಾ ಮೈದಾನದಲ್ಲಿ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ ಬಳಿಕ ಎಸ್ಡಿಪಿಐ ಸಂಘಟನೆ ಕಾರ್ಯಕರ್ತರು ‘ಪ್ಯಾಲೆಸ್ತೀನ್ ಫ್ರೀ’, ಪ್ಯಾಲೆಸ್ತೀನ್, ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ ನಿಲ್ಲಿಸುವಂತೆ ಫಲಕ ಪ್ರದರ್ಶಿಸಿದರು. ಇದೆ ರೀತಿ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲೂ ನಡೆಯಿತು.ಗಂಗಾವತಿಯಲ್ಲಿ ಬೆಳಗ್ಗೆ ಪ್ರಾರ್ಥನೆ ವೇಳೆ ಪ್ಯಾಲೆಸ್ತೀನ್ ಪರ…
BREAKING : ಪತ್ನಿ ಕೊಂದು ಶವ ಸೂಟ್ಕೇಸ್ ನಲ್ಲಿ ಇಟ್ಟಿದ್ದ ಕೇಸ್ : ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಸೂಟ್ಕೇಸ್ ನಲ್ಲಿ ಶವವನ್ನ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ರಾಕೇಶ್ ಕಡೇಕರ್ಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶಿಸಲಾಗಿದೆ. ನಿನ್ನೆ ರಾತ್ರಿ ಆರೋಪಿಯನ್ನು ಬೆಂಗಳೂರಿಗೆ ಕರೆತಂದಿದ್ದ ಪೊಲೀಸರು ಇಂದು ಕೋರಮಂಗಲ ಎನ್ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದ್ದರು. ಹೌದು ಆರೋಪಿಯನ್ನು ಪೊಲೀಸರು ಇಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ಬಳಿಕ ಆರೋಪಿ ರಾಕೇಶ್ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ನಿನ್ನೆ ರಾತ್ರಿ ಆರೋಪಿಯನ್ನು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದರು. ಪುಣೆಯಿಂದ ಬೆಂಗಳೂರಿಗೆ ಆರೋಪಿ ರಾಕೇಶನನ್ನು ಪೊಲೀಸರು ಕರೆತಂದಿದ್ದರು. ಸದ್ಯ ರಾಕೇಶ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ. ಪ್ರಕರಣ ಹಿನ್ನೆಲೆ? ಪತ್ನಿಯ ಕೊಲೆ ಮಾಡಿದ ರಾಕೇಶ್, ಶವದ ಕಾಲುಗಳನ್ನ ಮುರಿದು ಶವವನ್ನ ಟ್ರ್ಯಾಲಿ ಬ್ಯಾಗ್ಗೆ ತುಂಬಿದ್ದ. ಅದೇ ಬ್ಯಾಗ್ನನ್ನ ಎಳೆಯುವಾಗ ಹ್ಯಾಂಡಲ್ ಕಟ್ ಆಗಿದೆ. ಹೀಗಾಗಿ ಶವವನ್ನ ಅಲ್ಲೇ ಬಿಟ್ಟು ಕಾರ್ನಲ್ಲಿ ಎಸ್ಕೇಪ್ ಆಗಿದ್ದ. ಮಾರ್ಚ್ 27ರಂದು ಮಧ್ಯಾಹ್ನ ಗೌರಿ…
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಯುಗಾದಿ ಹಬ್ಬದ ದಿನದಂದು ಘೋರವಾದ ದುರಂತ ಒಂದು ಸಂಭವಿಸಿದೆ. ಯುಗಾದಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ನದಿಗೆ ಇಳಿದಿದ್ದ ಬಾಲಕ ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆದಿದೆ. ಮೃತ ಬಾಲಕನನ್ನು ಶರಣ್ (13) ಎಂದು ತಿಳಿದುಬಂದಿದೆ. ಮೃತ ಶರಣ್ ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿದ್ದು, ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಬಂದಿದ್ದ. ಇವಳೇ ಸ್ನಾನಕ್ಕೆ ಎಂದು ನದಿಗೆ ಹೇಳಿದಾಗ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಶವವನ್ನು ಹೊರ ತೆಗೆದಿದ್ದಾರೆ. ಕುಟುಂಬಸ್ಥ ಆಕ್ರಂದನ ಮುಗಿಲು ಮುಟ್ಟಿದೆ.
ರಾಯಚೂರು : ರಾಯಚೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಬಹಿರ್ದೆಸೆಗೆ ಹೋದ ಸಂದರ್ಭದಲ್ಲಿ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಈ ವೇಳೆ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾ ಎಂಬ ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾ ಗ್ರಾಮದಲ್ಲಿ ಸಿದ್ದಪ್ಪ (6) ಎನ್ನುವ ಬಾಲಕ ನಿನ್ನೆ ಸಂಜೆ ಬಹಿರ್ದೆಸೆಗೆ ಎಂದು ತೆರಳಿದ್ದ ಈ ವೇಳೆ ಬೀದಿ ನಾಯಿ ಏಕಾಏಕಿ ದಾಳಿ ಮಾಡಿದೆ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇದೀಗ ಬಾಲಕ ಸಿದ್ದಪ್ಪ ಸಾವನಪ್ಪಿದ್ದಾನೆ.
ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2025-26ನೇ ಶೈಕ್ಷಣಿಕ ವರ್ಷಕ್ಕೆ 10 ಮತ್ತು 12ನೇ ತರಗತಿಯ ಪಠ್ಯಕ್ರಮವನ್ನು ಬಿಡುಗಡೆ ಮಾಡಿದೆ. ಹೊಸದಾಗಿ ಪ್ರಕಟವಾದ ಪಠ್ಯಕ್ರಮವು ಶೈಕ್ಷಣಿಕ ವಿಷಯ, ಕಲಿಕೆಯ ಫಲಿತಾಂಶಗಳು ಮತ್ತು 2026 ರ CBSE ಮಂಡಳಿ ಪರೀಕ್ಷೆಗಳಿಗೆ ಮಾರ್ಗಸೂಚಿಯ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಒದಗಿಸುತ್ತದೆ. CBSE ಪರೀಕ್ಷಾ ಪ್ರಕ್ರಿಯೆಯ ಪ್ರಮುಖ ಕೂಲಂಕಷ ಪರೀಕ್ಷೆಯನ್ನು ಘೋಷಿಸಿದೆ. 2025-26ರ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ 10 ನೇ ತರಗತಿ ವಿದ್ಯಾರ್ಥಿಗಳು ಈಗ ಪ್ರತಿ ವರ್ಷ ಫೆಬ್ರವರಿ ಮತ್ತು ಏಪ್ರಿಲ್ನಲ್ಲಿ ಎರಡು ಬೋರ್ಡ್ ಪರೀಕ್ಷೆಗಳನ್ನು ಬರೆಯಲು ಅವಕಾಶವನ್ನು ಹೊಂದಿರುತ್ತಾರೆ.ಆದಾಗ್ಯೂ, 12 ನೇ ತರಗತಿ ಪರೀಕ್ಷೆಗಳನ್ನು ವರ್ಷಕ್ಕೊಮ್ಮೆ ನಡೆಸುವುದನ್ನು ಮುಂದುವರಿಸಲಾಗುತ್ತದೆ. 2026 ರ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 17 ರಂದು ಪ್ರಾರಂಭವಾಗಲಿದ್ದು, ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗುವ ನಿರೀಕ್ಷೆಯಿದೆ. CBSE 10ನೇ ತರಗತಿಯ ಪಠ್ಯಕ್ರಮ 2025: ಹೊಸ ಫಲಿತಾಂಶ ಕ್ಯಾಲ್ಕುಲೇಷನ್ ವ್ಯವಸ್ಥೆ 2025-26ನೇ ಶೈಕ್ಷಣಿಕ ವರ್ಷದ CBSE…