Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಚಾಮರಾಜನಗರದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಚಾಮರಾಜನಗರದಲ್ಲಿ ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಒಬ್ಬರು, ಗ್ರಾಹಕರಿಗೆ ಏನನ್ನೋ ತಿಂಡಿ ಕಟ್ಟಿ ಕೊಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಅವರಿಗೆ ಹೃದಯಸ್ತಂಬನವಾಗಿದೆ. ಕೂಡಲೇ ಬೇಕರಿಯಲ್ಲಿ ಆ ವ್ಯಕ್ತಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಹಾಸನ : ಒಂದು ಕಡೆ ಕಾಂಗ್ರೆಸ್ ನ ಹಲವು ನಾಯಕರು ಮುಂದಿನ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದು ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಕೆಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಇದೆಲ್ಲದರ ಮಧ್ಯ ವಿಪಕ್ಷ ನಾಯಕ ಆರಶೋಕ್ ಮುಂಬರುವ ನವೆಂಬರ್ 15 ತಾರೀಕಿನ ಒಳಗೆ ಸಿಎಂ ಬದಲಾಗಲಿದ್ದು ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಪೋಟಿಸಲಿದೆ ಎಂದು ಭವಿಷ್ಯ ನುಡಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ನವೆಂಬರ್15-16ರೊಳಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಯಾಗುವುದು ನಿಶ್ಚಿತವಾಗಿದ್ದು, ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸಿಡಿಯಲಿದೆ ಎಂದು ಅವರು ಭವಿಷ್ಯ ನುಡಿದರು. ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ನನಗೆ ಖಚಿತ ಮಾಹಿತಿ ಇದೆ. ಆ ಬಳಿಕ ಕಾಂಗ್ರೆಸ್ನಲ್ಲಿ ಉಂಟಾಗುವ ಜ್ವಾಲಾ ಮುಖಿ ನಂದಿಸಲು ಈಗಲೇ ಅಗ್ನಿಶಾಮಕವಾಹನಗಳನ್ನು ಬುಕ್ ಮಾಡಿಕೊಳ್ಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದರಿದ್ರ ಸರ್ಕಾರ. ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು…
ಮೈಸೂರು : ಪ್ರಕರಣ ಒಂದನ್ನು ಇತ್ಯರ್ಥ ಪಡಿಸಲು ಪಿಎಸ್ಐ ಅಧಿಕಾರಿ ಒಬ್ಬ 80,000ಕ್ಕೆ ಬೇಡಿಕೆ ಇಟ್ಟಿದ್ದು ಈ ವೇಳೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರದಲ್ಲಿ ನಡೆದಿದೆ. ಹೌದು ಬೆಟ್ಟದಪುರ ಠಾಣೆಯಲ್ಲಿ ಪಿಎಸ್ಐ ಶಿವಶಂಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಠಾಣೆಯ ಪಿಎಸ್ಐ 80,000 ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಗಳ ಬಲೆಗೆ ಬಿದ್ದಿದ್ದಾರೆ. ಪ್ರಕರಣ ಒಂದನ್ನು ಇತ್ಯರ್ಥ ಗೊಳಿಸಲು ಲಂಚಕ್ಕೆ ಶಿವಶಂಕರ್ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾ ಯುಕ್ತ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. 80,000 ಹಣ ಪಡೆಯುವ ವೇಳೆ ಪಿಎಸ್ಐ ಶಿವಶಂಕರ್ ರೆಡ್ ಹ್ಯಾಂಡ್ ಆಗಿ ಸಿಗಿಬಿದ್ದಿದ್ದಾರೆ. ಸದ್ಯ ಪಿಎಸ್ಐ ಶಿವಶಂಕರ್ ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ನವದೆಹಲಿ : ಬೆಂಗಳೂರಿನ ಅರಮನೆ ಜಾಗದ ವಿಚಾರವಾಗಿ ಮೈಸೂರು ರಾಜ ಮನೆತನದವರಿಗೂ ಹಾಗೂ ರಾಜ್ಯ ಸರ್ಕಾರದ ಮಧ್ಯ ಸಂಘರ್ಷಕ್ಕೆ ಇದೀಗ ಸುಪ್ರೀಂ ಕೋರ್ಟ್ ಅಂತ್ಯ ಹಾಡಿದ್ದು, ರಸ್ತೆ ನಿರ್ಮಾಣ ಉದ್ದೇಶಕ್ಕೆ ಕರ್ನಾಟಕ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜ ವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದೆ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ. ಈ ಕುರಿತ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸುಪ್ರೀಂಕೋರ್ಟ್ ಕರ್ನಾಟಕ ಸೂಚಿಸಿದೆ. ರಾಜ್ಯ ಸರ್ಕಾರಕ್ಕೆ ನಾವು ಈಗಾಗಲೇ ಈ ಕುರಿತು ಆದೇಶ ಹೊರಡಿಸಿದ್ದೇವೆ. ಇದನ್ನು ನಿಮ್ಮ ಅಧಿಕಾರಿಗಳು ಪಾಲಿಸಲೇಬೇಕು. ಇಲ್ಲದೇ ಹೋದಲ್ಲಿ ಅವರು ಸಂಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಸುಪ್ರೀಂಕೋರ್ಟ್ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮೈಸೂರು ರಾಜ ವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ಪಾವತಿಸುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ ನ ಈ ಒಂದು ಸೂಚನೆಗೆ ಸಹಸ್ರಾರು ಕೋಟಿರು. ಮೊತ್ತದ ಟಿಡಿಆರ್ ಪರಿಹಾರ…
ಉತ್ತರಕನ್ನಡ : ಜಲಪಾತ ವೀಕ್ಷಿಸಲು ಆಗಮಿಸಿದ್ದ ಆರು ಜನ ಯುವಕರ ತಂಡದಲ್ಲಿ ಇಬ್ಬರು ಯುವಕರು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ವಾಟೆಹೊಳೆ ಜಲಪಾತದಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ಯುವಕರನ್ನು ಶಿರಸಿಯ ಸುಹಾಸ್ (22) ಹಾಗೂ ಅಕ್ಷಯ (22) ನೀರು ಪಾಲಾಗಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೌದು ಸಿದ್ದಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಜಲಪಾತ ನೋಡಲು ಯುವಕರು ಅಲ್ಲಿಗೆ ಆಗಮಿಸಿದ್ದರು. 6 ಜನ ಯುವಕರು ಫಾಲ್ಸ್ ನೋಡಲು ಬಂದಾಗ ಇಬ್ಬರು ಯುವಕರು ಕಾರು ಜಾರಿ ಬಿದ್ದು ಸಾವನಪ್ಪಿದ್ದಾರೆ. ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಇಂದು ತಮಿಳುನಾಡು ಸರ್ಕಾರಕ್ಕೆ ಮಾಜಿ ಸಿಎಂ ಜಯಲಲಿತಾ ರೇಷ್ಮೆಸೀರೆ, ಒಡವೆ, ಸೇರಿ ಹಲವು ವಸ್ತುಗಳು ಹಸ್ತಾಂತರ
ಬೆಂಗಳೂರು : ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, ಅಪಾರ ಒಡವೆ ಮತ್ತು ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂಧ ಈಗಾಗಲೇ ತಮಿಳುನಾಡು ಪೊಲೀಸರು ಮತ್ತು ಅಧಿಕಾರಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಇಂದು ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, 11,344 ರೇಷ್ಮೆ ಸೀರೆಗಳು, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲಾಗುತ್ತದೆ. ಜಯಲಲಿತಾ ಆಸ್ತಿ ಎಷ್ಟು? 7 ಕೆಜಿ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು, 700 ಕೆ.ಜಿ ತೂಕದ ಬೆಳ್ಳಿ ಆಭರಣಗಳು, 740 ಐಷಾರಾಮಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 VCR, 1 ವಿಡಿಯೊ ಕ್ಯಾಮೆರಾ, 4 ಸಿಡಿ ಪ್ಲೇಯರ್,…
ಬೆಂಗಳೂರು : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಇಂದು ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ವಿವಿಧ ಕಾರ್ಯಕ್ರಮಗಳಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭಾಗಿಯಾಗಲಿದ್ದಾರೆ.ಬೆಳಗ್ಗೆ ಕೋಲಾರದ ಅರಸಪುರಕ್ಕೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಲಿದ್ದಾರೆ. ವೇಮಗಲ್ ನ ಟಾಟಾ ಕ್ಯಾಂಪಸ್ ಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂಜೆ ಖಾಸಗಿ ಹೋಟೆಲ್ ನಲ್ಲಿ ಸಂವಾದದಲ್ಲಿ ಸಚಿವ ಅಶ್ವಿನಿ ವೈಷ್ಣವ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು : ಮೈಸೂರಿನ ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು.ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದೆ.ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು…
ವಿಜಯಪುರ : ಜಿಲ್ಲೆಯ ಭೀಮಾತೀರದಲ್ಲಿ ನಡೆದ್ದಂತ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ್ನು ಬಂಧಿಸಲಾಗಿತ್ತು. ಇದೀಗ ನಾಲ್ವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರ 2ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಆದೇಶಿಸಿದೆ. ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಈ ಹತ್ಯೆ ಸಂಬಂಧ ಪೊಲೀಸರು ಆರೋಪಿ ಪಿಂಟ್ಯಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನ ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಎಂದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದರು. ಬಂಧಿತ ಆರೋಪಿಗಳನ್ನು ವಿಜಯಪುರದ 2ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಅಲ್ಲದೇ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ…
ಉತ್ತರಕನ್ನಡ : ಜಲಪಾತ ವೀಕ್ಷಿಸಲು ಆಗಮಿಸಿದ್ದ ಆರು ಜನ ಯುವಕರ ತಂಡದಲ್ಲಿ ಇಬ್ಬರು ಯುವಕರು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ವಾಟೆಹೊಳೆ ಜಲಪಾತದಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ಯುವಕರನ್ನು ಶಿರಸಿಯ ಸುಹಾಸ್ (22) ಹಾಗೂ ಅಕ್ಷಯ (22) ನೀರುಪಾಲಾಗಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೌದು ಸಿದ್ದಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಜಲಪಾತ ನೋಡಲು ಯುವಕರು ಅಲ್ಲಿಗೆ ಆಗಮಿಸಿದ್ದರು. 6 ಜನ ಯುವಕರು ಫಾಲ್ಸ್ ನೋಡಲು ಬಂದಾಗ ಇಬ್ಬರು ಯುವಕರು ಕಾರು ಜಾರಿ ಬಿದ್ದು ಸಾವನಪ್ಪಿದ್ದಾರೆ. ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.