Subscribe to Updates
Get the latest creative news from FooBar about art, design and business.
Author: kannadanewsnow05
ವಾಸ್ತುವಿನ ಪ್ರಕಾರ ನಿಮ್ಮ ಮನೆ ಮತ್ತು ಕಚೇರಿಯಲ್ಲಿ ಕನ್ನಡಿಯ ಸೂಕ್ತ ದಿಕ್ಕನ್ನು ನಿರ್ಧರಿಸುವ ಮೂಲಕ ವಾಸ್ತುವಿನ ಶಕ್ತಿಯನ್ನು ಅರ್ಥಮಾಡಿಕೊಳ್ಳಿ. ವಾಸ್ತು ತತ್ವಗಳ ಪ್ರಕಾರ ಕನ್ನಡಿಗಳನ್ನು ಸರಿಯಾಗಿ ಇರಿಸಿದಲ್ಲಿ ಧನಾತ್ಮಕತೆ ಮತ್ತು ಸಮೃದ್ಧಿಯನ್ನು ಸುಲಭವಾಗಿ ಹೆಚ್ಚಿಸಿಕೊಳ್ಳಬಹುದು. ಇದರಿಂದ ತಿಳಿಯಬಹುದಾದ ಪ್ರಮುಖ ಅಂಶಗಳೆಂದರೆ ಕನ್ನಡಿಗಳನ್ನು ವಾಸ್ತು ಶಾಸ್ತ್ರಕ್ಕೆ ಅನುಗುಣವಾಗಿ ಇರಿಸಿದಾಗ, ನಿಮ್ಮ ಮನೆ ಮತ್ತು ಕಚೇರಿಯ ಧನಾತ್ಮಕ ಶಕ್ತಿಯನ್ನು ವರ್ಧಿಸಬಹುದು ಮತ್ತು ಆಕರ್ಷಿಸಬಹುದು. ಉತ್ತಮ ಆರೋಗ್ಯಕ್ಕಾಗಿ ವಾಸ್ತುವಿನೊಂದಿಗೆ ಹೊಂದಿಸಲು ಹಾಗೂ ತೊಂದರೆ ಮತ್ತು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಹಾಸಿಗೆಯ ಎದುರು ಕನ್ನಡಿಗಳನ್ನು ನೇರವಾಗಿ ಇಡುವುದನ್ನು ತಪ್ಪಿಸಿ. ಲಿವಿಂಗ್ ರೂಮ್ನ ಉತ್ತರ ಅಥವಾ ಪೂರ್ವದ ಗೋಡೆಗಳ ಮೇಲೆ ಕನ್ನಡಿಗಳನ್ನು ಇರಿಸುವುದರಿಂದ ಅನುಗ್ರಹದ ಸಂಕೇತಗಳನ್ನು ಪ್ರತಿಬಿಂಬಿಸುತ್ತವೆ. ಇದು ನಿಮಗೆ ಸಂಪತ್ತು ಮತ್ತು ಅದೃಷ್ಟವನ್ನು ತರಬಲ್ಲದು. ಕಚೇರಿಯ ಉತ್ತರ ಅಥವಾ ಪೂರ್ವ ಗೋಡೆಯ ಮೇಲೆ ಕನ್ನಡಿಯನ್ನು ಇರಿಸಿದಲ್ಲಿ, ಅದು ಮುಕ್ತ ಸ್ಥಳಗಳು ಅಥವಾ ಬಾಗಿಲುಗಳ ಮೂಲಕ ಬರುವ ಹೊಸ ಅವಕಾಶಗಳು ಮತ್ತು ಬೆಳವಣಿಗೆಯನ್ನು ಸಂಕೇತಿಸುತ್ತದೆ. ಹಾಸಿಗೆಗೆ ಎದುರಾಗಿರುವ ಕನ್ನಡಿಗಳು…
ಬೆಳಗಾವಿ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಭಾನುವಾರ ಸಂಜೆ ನಿಧನರಾದರು. ವಯೋಸಹಜ ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇವರ ನಿಧನಕ್ಕೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಶಾಮನೂರು ಶಿವಶಂಕರಪ್ಪ ಅಗಲಿಕೆ ತುಂಬಾ ನೀವು ತಂದಿದೆ.ಅವರನ್ನು ಯಾವಾಗಲು ಗೌರವಿಸುವೆ. ಸದನದಲ್ಲಿ ಸಂತಾಪ ಸೂಚನೆಗೆ ಅವಕಾಶ ನೀಡಲಾಗುತ್ತೆ. ಅಂತ್ಯಕ್ರಿಯೆಗೆ ಹೋಗುವ ಸದಸ್ಯರಿಗೆ ಅನುವು ಮಾಡಿಕೊಡುತ್ತೇವೆ. ನಾನು ಸಹ ಶಾಮನೂರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸುತ್ತೇನೆ ಎಂದು ಯುಟಿ ಖಾದರ್ ತಿಳಿಸಿದರು.
ನವದೆಹಲಿ : ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನ ಹರಾಟದಲ್ಲಿ ತೀವ್ರ ಸಮಸ್ಯೆ ಎದುರಾಗಿತ್ತು. ಇದೀಗ ನವದೆಹಲಿಯಲ್ಲಿ ಮತ್ತೆ ಇಂಡಿಗೋ ವಿಮಾನ ಹಾರಾಟದಲ್ಲಿ ಸಮಸ್ಯೆ ಆಗಿದ್ದು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಹಾರಾಟಕ್ಕೆ ತಡವಾಗಿದೆ. ಹಾಗಾಗಿ ದೆಹಲಿಯಲ್ಲಿಯೇ ಕಾಂಗ್ರೆಸ್ ನಾಯಕರು ಲಾಕ್ ಆಗಿದ್ದಾರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ತಡವಾಗಿದೆ. ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ನಾಯಕರು ಹೊರಟಿದ್ದರು. ಸುಮಾರು 20 ಕ್ಕೂ ಹೆಚ್ಚು ಶಾಸಕರು ಇಂಡಿಗೋ ವಿಮಾನದಲ್ಲಿ ಲಾಕ್ ಆಗಿದ್ದಾರೆ. ಇಂದು ಬೆಳಿಗ್ಗೆ 6:45 ಕ್ಕೆ ಇಂಡಿಗೋ ವಿಮಾನ ಟೇಕ್ ಆಫ್ ಆಗಬೇಕಾಗಿತ್ತು. ಆದರೆ ಇನ್ನೂ ಆಗಿಲ್ಲ. ವಿಮಾನದಲ್ಲಿ ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್ಕೆ ಪಾಟೀಲ್, ಲಕ್ಷ್ಮೀ ಹೆಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ…
ತುಮಕೂರು : ಗ್ರೇಟರ್ ತುಮಕೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಬೆಂಗಳೂರು ಮಾದರಿಯಲ್ಲಿ ತುಮಕೂರು ಪಾಲಿಕೆ ಬದಲಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗು ಗೃಹ ಸಚಿವ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ಈ ಕುರಿತು ಸುಳಿವು ನೀಡಿದ್ದಾರೆ. ಈಗಾಗಲೇ ಬೆಂಗಳೂರಲ್ಲಿ ಬಿಬಿಎಂಪಿಯನ್ನು ಐದು ಮಹಾನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ ತುಮಕೂರಿನ ಹತ್ತಿರದ ವರೆಗೂ ಬೆಂಗಳೂರು ಬೆಳೆದಿದೆ ಅದೇ ರೀತಿಯಾಗಿ ಗ್ರೇಟರ್ ತುಮಕೂರು ಮಾಡಲು ಮುಂದಾಗಿದ್ದೇವೆ. ಸದ್ಯದಲ್ಲೇ ಈ ವಿಚಾರವಾಗಿ ತೀರ್ಮಾನ ಆಗಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರು ತುಮಕೂರಿನಲ್ಲಿ ತಿಳಿಸಿದರು.
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಶೀತಗಾಳಿ ಆರಂಭವಾಗಿದ್ದು, ಇನ್ನು ಎರಡು ದಿನಗಳ ಕಾಲ ಶೀತಗಾಳಿ ಮುಂದುವರಿಯಲಿದೆ ಹಾಗಾಗಿ, ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 9 ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಶೀತಗಾಳಿ ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.ಈ 9 ಜಿಲ್ಲೆಗಳಲ್ಲಿ ತಾಪಮಾನ (Temperature) ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ. ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಜನ ಜೀವನ ತತ್ತರಗೊಂಡಿದೆ. ಕಳೆದ ಹತ್ತು ವರ್ಷಗಳಲ್ಲಿ ಎರಡನೆಯ ಬಾರಿಗೆ ತಾಪಮಾನ ಕನಿಷ್ಠ ಮಟ್ಟ ತಲುಪಿದೆ. 2023ರಲ್ಲಿ ವಿಜಯಪುರದಲ್ಲಿ 6.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಎರಡೂ ದಿನಗಳ ಕಾಲ…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕಲ್ಲು ಗಣಿಗಾರಿಕೆಯ ವೇಳೆ ಕಲ್ಲು ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಕನೂರು ಗ್ರಾಮದ ಬಳಿ ಈ ಒಂದು ಘಟನೆ ಸಂಭವಿಸಿದೆ. ಅರಣ್ಯ ಇಲಾಖೆಯ ಜಾಗದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ. ಚಿನಗುಡಿಯ ಹನುಮಂತ ಮೆಡಿಗೇರಿ (28) ಮೃತ ಕಾರ್ಮಿಕ ಎಂದು ತಿಳಿದು ಬಂದಿದ್ದು, ಸದ್ಯ ಘಟನಾ ಸ್ಥಳಕ್ಕೆ ಜಮಖಂಡಿಯ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನ ಪರಪ್ಪನ ಆಗ್ರಹಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಮಾಡಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಒಬ್ಬರಿಗೆ ಠಾಣೆಯ ಎಲ್ಲ ಸಿಬ್ಬಂದಿಗಳು ಸೇರಿಕೊಂಡು ಸೀಮಂತ ಕಾರ್ಯಕ್ರಮ ನಡೆಸಿದ್ದಾರೆ. ಬಳೆ ತೊಡಿಸಿಸಿಬ್ಬಂದಿಗಳು ರೇಷ್ಮೆಸೀರೆ, ಅಕ್ಕಿ ಮತ್ತು ಫಲ ತಾಂಬೂಲ ನೀಡಿ ಶುಭ ಹಾರೈಸಿದ್ದಾರೆ. ಇನ್ಸ್ಪೆಕ್ಟರ್ ಸತೀಶ್ ಅವರ ನೇತೃತ್ವದಲ್ಲಿ ಎಲ್ಲಾ ಸಿಬ್ಬಂದಿಗಳು ಈ ಒಂದು ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಈ ವೇಳೆ ಮಹಿಳಾ ಸಿಬ್ಬಂದಿಗಳು ಆರತಿ ಬೆಳಗಿ ಭಾವನಾತ್ಮಕ ಕ್ಷಣಕ್ಕೆ ಕಾರಣರಾದರು.
ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಈಗಾಗಲೇ ಎರಡುವರೆ ವರ್ಷ ಪೂರ್ಣಗೊಳಿಸಿದೆ ಆದರೂ ಕೂಡ ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸದೆ ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸಲಾಗುತ್ತಿದೆ. ಇದೀಗ ಈ ಒಂದು ಗ್ಯಾರಂಟಿ ಯೋಜನೆಗಳ ಕುರಿತು ವಿಪಕ್ಷಗಳ ಟೀಕೆಗೆ ಜಿ. ಪರಮೇಶ್ವರ್ ರಸ್ತೆ ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗುತ್ತಾರ? ಹಾಗಾದರೆ ನಾಳೆಯಿಂದ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸೋಣ ಎಂದು ಟಾಂಗ್ ನೀಡಿದರು. ತುಮಕೂರಿನ ಬಂಜಾರ ಸಮುದಾಯದ ಕಾರ್ಯಕ್ರಮದಲ್ಲಿ ಗ್ರಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದು, ರಸ್ತೆ ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗುತ್ತಾರಾ ? ಗ್ಯಾರಂಟಿ ಯೋಜನೆಯ ಟೀಕೆ ಮಾಡುವವರಿಗೆ ನಾನು ಒಂದು ಪ್ರಶ್ನೆ ಕೇಳುತ್ತೇನೆ ಆಯ್ತು ಗ್ಯಾರಂಟಿ ಕೊಡಲ್ಲ ನಾಳೆಯಿಂದ ನಿಲ್ಲಿಸಿ ಬಿಡೋಣ 58,000 ಕೋಟಿ ಖರ್ಚಿನ ಗ್ಯಾರಂಟಿಯನ್ನು ನಿಲ್ಲಿಸುತ್ತೇವೆ . ಆದರೆ ರಸ್ತೆ ಮಾಡುವುದರಿಂದ ಚರಂಡಿ ಮಾಡುವುದರಿಂದ ಅಥವಾ ಇನ್ನೇನೋ ಮಾಡಿದರೆ ಜೀವನ ಉದ್ಧಾರ ಆಗುತ್ತಾ ಎಂದು ಪ್ರಶ್ನಿಸಿದರು. ಹಾಗಂತ ನಾವು ರಸ್ತೆ ಮನೆಗಳನ್ನು ಕಟ್ಟುವುದನ್ನು…
ಬೆಂಗಳೂರು : ಈಗಾಗಲೇ ಮೆಟ್ರೋ ಸೇರಿದಂತೆ ಬಸ್ ಟಿಕೆಟ್ ಪ್ರಯಾಣದ ದರ ಏರಿಕೆ ಮಾಡಿದ್ದು, ರಾಜ್ಯದ ಜನತೆಗೆ ಸರ್ಕಾರ ಶಾಕ್ ನೀಡಿದೆ. ಇದರ ಮಧ್ಯ ಮೆಟ್ರೋ ದರ ಇಳಿಕೆಗೆ ಒತ್ತಾಯ ಹೆಚ್ಚಾಗುತ್ತಿದೆ. ದರ ಕಡಿಮೆ ಮಾಡಬೇಕು ಎಂದು ಮೆಟ್ರೋ ಪ್ರಯಾಣಿಕರು ಆಗ್ರಹ ಮಾಡುತ್ತಿದ್ದಾರೆ. ಆದರೆ, ಮೆಟ್ರೋ ದರ ನಿಗದಿ ಸಮಿತಿಯು ಪ್ರಯಾಣಿಕರಿಗೆ ಶಾಕ್ ನೀಡಿದೆ. ದರ ಇಳಿಕೆ ಮಾಡೋದಿಲ್ಲ ಅಂತ ನಿರ್ಧಾರ ಮಾಡಿದೆ. ಜೊತೆಗೆ ಸ್ಟುಡೆಂಟ್ ಪಾಸ್ ಬಗ್ಗೆ BMRCL ಮಹತ್ವದ ಅಪ್ಡೇಟ್ ನೀಡಿದೆ.ನಮ್ಮ ಮೆಟ್ರೋ ದರ ಏರಿಕೆ ಆದ ದಿನದಿಂದ ಇಳಿಕೆ ಮಾಡಬೇಕು ಅಂತ ಒತ್ತಾಯಿಸಿ ಹೋರಾಟಗಳು ಹೆಚ್ಚಾಗುತ್ತಿವೆ. ಆದರೆ, ದರ ಇಳಿಕೆ ಮಾಡೋದಿಲ್ಲ ಅಂತ ಮೆಟ್ರೋ ದರ ನಿಗದಿ ಸಮಿತಿ ಮೆಟ್ರೋ ಪ್ರಯಾಣಿಕರಿಗೆ ಉತ್ತರ ನೀಡಿದೆ. ದರ ನಿಗದಿ ಸಮಿತಿಗೆ ಮೆಟ್ರೋ ಪ್ರಯಾಣಿಕರಿಗೆ ಸಲಹೆ ಜೊತೆಗೆ ಪ್ರಶ್ನೆಗಳನ್ನ ಕೂಡ ಕೇಳಿದ್ದರು. ಇದಕ್ಕೆ ಉತ್ತರ ನೀಡಿರುವ ಸಮಿತಿ, ದರ ಇಳಿಕೆ ಸಾಧ್ಯವೇ ಇಲ್ಲ ಎಂದು ತಿಳಿಸಿದೆ. ಮೆಟ್ರೋ ತಿಂಗಳ ಪಾಸ್…
ಬೆಂಗಳೂರು : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. ಮೊಟ್ಟೆಗಳನ್ನು ಲ್ಯಾಬ್ ನಲ್ಲಿ ಪರೀಕ್ಷಿಸುವಂತೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ಒಂದು ವೇಳೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣವಾದ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಕ್ಕೆ ಸೂಚನೆ ನೀಡಿದ್ದಾರೆ. ಈ ಮೊಟ್ಟೆಯಲ್ಲಿ ನೈಟ್ರೋಫ್ಯೂರನ್ ನಿಷೇಧಿತ ಔಷಧದ ಅಂಶ ಪತ್ತೆಯಾಗಿದೆ. ಇದು ಮನುಷ್ಯರ ದೇಹದ ಜೀವಕೋಶಹಾನಿ ಮಾಡುತ್ತದೆ. ರೋಗ ನಿರೋಧಕ ಶಕ್ತಿ ಕುಂದಿಸುವ ನೈಟ್ರೋಫುರಾನ್ ಅಂಶ ಮೊಟ್ಟೆಯಲ್ಲಿ ಪತ್ತೆಯಾಗಿದೆ. ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆಗೆ ಈ ಒಂದು ಅಂಶ ಕಾರಣವಾಗುತ್ತೆ ಎಂದು ಆಹಾರ ತಜ್ಞ ಡಾ. ಕೀರ್ತಿ ಹಿರೀಸಾವೆ ಅವರು ಮಾಹಿತಿ ನೀಡಿದ್ದಾರೆ.













