Author: kannadanewsnow05

ಬೆಳಗಾವಿ : ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದವರು ಕಳೆದ ಹಲವು ವರ್ಷಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇದೀಗ ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಪಂಚಮಸಾಲಿ ಸಮುದಾಯದ ಪ್ರಮುಖರು ಬೆಳಗಾವಿ ಅಧಿವೇಶನ ನಡೆಯುವ ವೇಳೆ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಸರ್ಕಾರ ಅವರಿಗೆ ಶಾಕ್ ನೀಡಿದ್ದು ಹೋರಾಟದ ವಾಹನ ಬೆಳಗಾವಿ ಪ್ರವೇಶಿಸಿದಂತೆ ನಿರ್ಬಂಧಿಸಲಾಗಿದೆ. ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಶಾಕ್ ನೀಡಿದ ಸರ್ಕಾರ ಡಿಸೆಂಬರ್ 9, 10 ಹೋರಾಟದ ವಾಹನ ಬೆಳಗಾವಿ ಪ್ರವೇಶಕ್ಕೆ ನಿಷೇಧಿಸಿದೆ. 2 ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಸಲಾಗುತ್ತಿದ್ದು, ಹೋರಾಟಕ್ಕೆ ಬರೋ ಟ್ರ್ಯಾಕ್ಟರ್, ಕ್ರೂಜರ್ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬಸವ ಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಿಸೆಂಬರ್ 10ರಂದು ಸುವರ್ಣ ಸೌಧಕ್ಕೆ ಟ್ರ್ಯಾಕ್ಟರ್ ಮುತ್ತಿಗೆಗೆ ನಿರ್ಧರಿಸಿದ್ದರು. ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ. ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರು ಶಾಲಾ ಮಕ್ಕಳು ಆಗಮಿಸಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ…

Read More

ಬಾಗಲಕೋಟೆ : ಕಲ್ಯಾಣ ಮಂಟಪದಲ್ಲಿ ಮದುವೆಯ ಸಂಬಂಧಿಕರೆಲ್ಲರೂ ಸಂತೋಷದಿಂದ ಇದ್ದರು. ಆದರೆ ಈ ವೇಳೆ ಕಳ್ಳ ಬೆಕ್ಕಿನಂತೆ ಬಂದ ಖತರ್ನಾಕ್ ಕಳ್ಳನೊಬ್ಬ ಮದುವೆ ಮಂಟಪಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ನೆಕ್ಲೆಸ್ ಅನ್ನು ಕದ್ದು ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹೌದು ಕಲ್ಯಾಣ ಮಂಟಪದಲ್ಲಿ ಕಳ್ಳನೊಬ್ಬ ಚಿನ್ನದ ನೆಕ್ಲೇಸ್ ಎಗರಿಸಿ ಪರಾರಿ ಆಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಇದೀಗ ಬಿಗ್ ಶಾಕ್ ಎದುರಾಗಿದೆ. ಕಳ್ಳ ಬೆಕ್ಕಿನಂತೆ ಮದುವೆ ಮಂಟಪಕ್ಕೆ ನುಗ್ಗಿದ ಖತರ್ನಾಕ್ ಕಳ್ಳನೊಬ್ಬ ರಾಜಾರೋಷವಾಗಿ ಕಲ್ಯಾಣ ಮಂಟಪದಲ್ಲಿ ಓಡಾಟ ನಡೆಸಿದ್ದಾನೆ. ರಾಜಾರೋಷವಾಗಿ ಕಲ್ಯಾಣ ಮಂಟಪದಲ್ಲಿ ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರರೆಯಾಗಿದೆ. ಈ ವೇಳೆ ಯಾವುದೇ ಭಯವಿಲ್ಲದೆ ಕಲ್ಯಾಣ ಮಂಟಪದಲ್ಲಿರುವ ರೂಮ್ ಗೆ ಹೋಗಿ ನೆಕ್ಲೇಸ್ ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ಈ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಗೆ ಮದುವೆ ಸಂಬಂಧಿಕರು ದೂರು ನೀಡಿದ್ದಾರೆ ದೂರು ದಾಖಲಿಸಿಕೊಂಡು ಪೊಲೀಸರು ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.

Read More

ಬೆಂಗಳೂರು : ಗೋಡೆ ಕುಸಿದು ಎರಡು ಬೈಕ್, ಕಾರು ಜಖಂಗೊಂಡಿದ್ದು, ಅದೃಷ್ಟವಶಾತ್ ಅಲ್ಲಿಯೇ ಆಟವಾಡುತ್ತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಸುಧಾಮ್ ನಗರದ ಸಿಕೆಸಿ ಗಾರ್ಡನಲ್ಲಿ ಒಂದು ಘಟನೆ ನಡೆದಿದೆ.  ನೆನ್ನೆ ಸಂಜೆನೆ ಸರ್ಕಾರಿ ಫಾರ್ಮಸಿ ಕಾಲೇಜಿನ ಗೋಡೆ ಕುಸಿದು ಅವಘಡ ಸಂಭವಿಸಿತ್ತು. ಗೋಡೆ ಶಿಥಿಲಾವಸ್ಥೆಯಲ್ಲಿದ್ದ ಕುರಿತು ಬಿಬಿಎಂಪಿಗೆ ಮಾಹಿತಿ ನೀಡಲಾಗಿತ್ತು, ಸ್ಥಳೀಯರು ಈ ಹಿಂದೆಯೂ ಮಾಹಿತಿ ನೀಡಿದ್ದರೂ ಬಿಬಿಎಂಪಿ ಯಾವುದೇ ಕ್ರಮ ಕೈಗೊಂಡಿಲ್ಲ. ಅರ್ಧದಷ್ಟು ಸರ್ಕಾರಿ ಫಾರ್ಮಸಿ ಕಾಲೇಜಿನ ಕಾಂಪೌಂಡ್ ಕುಸಿದಿದೆ. ಯಾವುದೇ ಕ್ಷಣದಲ್ಲಾದರೂ ಪೂರ್ತಿ ಗೋಡೆ ಕುಸಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. .

Read More

ಬಳ್ಳಾರಿ : ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ.ಈ ಹಿನ್ನೆಲೆಯಲ್ಲಿ ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾರಂಭಕ್ಕೆ ಬಂದಿರುವ ಜನರಿಗೆ ಕಾಂಗ್ರೆಸ್ ಮುಖಂಡರು 200 ರೂಪಾಯಿ ಹಂಚಿರುವ ಆರೋಪ ಇದೀಗ ಕೇಳಿಬರುತ್ತಿದೆ. ಹೌದು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣ ಇ ತುಕಾರಾಂ ಅವರು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರ ವಿರುದ್ಧ ಭಾರಿ ಜಯ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಡೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು ಈ ಒಂದು ಸಮಾರಂಭದಲ್ಲಿ, ಸಮಾವೇಶಕ್ಕೆ ಬಂದಿದ್ದವರಿಗೆ ಕಾಂಗ್ರೆಸ್ ಮುಖಂಡರು 200 ರೂಪಾಯಿ ಹಂಚಿದ ಆರೋಪ ಕೇಳಿಬಂದಿದೆ. ಸಂಡೂರಿನ ಅಭಿನಂದನಾ ಸಮಾವೇಶದ ವೇದಿಕೆ ಎಡಭಾಗದಲ್ಲಿ ಸಮಾವೇಶಕ್ಕೆ ಬಂದಿದ್ದವರಿಗೆ ಹಣ ಹಂಚಿಕೆ ಮಾಡಲಾಗಿದೆ. ವೇದಿಕೆಯಿಂದ ಸಿಎಂ ಸಿದ್ದರಾಮಯ್ಯ ಅವರು ನಿರ್ಗಮಿಸುತ್ತಿದ್ದಂತೆ ಹಣ ಹಂಚಿದ್ದಾರೆ. ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆಯಲ್ಲಿ ಸಂಡೂರಿನಲ್ಲಿ…

Read More

ರಾಯಚೂರು : ಚಾಮರಾಜನಗರದಲ್ಲಿ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವ ಎನ್.ಎಸ್ ಬೋಸರಾಜು,78 ವರ್ಷ ವಯಸ್ಸಾಗುತ್ತಿದೆ ಎನ್ನುವ ಕಾರಣಕ್ಕೆ ರಾಜಕೀಯ ಕೊನೇ ಹಂತ ತಲುಪಿದ್ದೇನೆ ಎಂದು ಹೇಳಿದ್ದಾರೆ ಅಷ್ಟೇ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯುತ್ತದೆ ಎಂದು ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜಕೀಯ ಬಿಡಲ್ಲ. 78 ವರ್ಷ ವಯಸ್ಸಾಗುತ್ತಿದೆ ಎನ್ನುವ ಕಾರಣಕ್ಕೆ ರಾಜಕೀಯ ಕೊನೇ ಹಂತ ತಲುಪಿದ್ದೇನೆ ಎಂದು ಹೇಳಿದ್ದಾರೆ ಅಷ್ಟೇ.ಪವರ್ ಶೇರಿಂಗ್ ವಿಚಾರ ಆವತ್ತು ಇಲ್ಲ, ಇವತ್ತೂ ಬಂದಿಲ್ಲ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯುತ್ತದೆ ಎಂದು ಹೇಳಿದರು. ಯಾರು ರಾಜಕಾರಣದಲ್ಲಿ ಜನರ ಪ್ರೀತಿ ವಿಶ್ವಾಸ ಹೊಂದಿರುತ್ತಾರೋ, ಪಕ್ಷ, ಜನರ ಅಭಿಪ್ರಾಯದ ಮೇಲೆ ಹಾಗೂ ಸರ್ವೇ ಮೇಲೆ ನಡೆಯುತ್ತದೆ. ಸಿಎಂ ಬದಲಾಗಲ್ಲ, ಎಲ್ಲರೂ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅಂತಹ ಯಾವುದೇ ಪ್ರಸಂಗ ಬಂದಿಲ್ಲ. ಯಾವುದೇ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಚಲಿಸುತ್ತಿದ್ದ ಟ್ಯಾಂಕರ್ ಗೆ ವಿದ್ಯುತ್ ತಂತಿ ತಗುಲಿ ಕ್ಯಾಂಟರ್​​ ಚಾಲಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಮೃತ ಕ್ಯಾಂಟರ್ ಚಾಲಕನನ್ನು ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್​ ಈಶಾಮ್​ (32) ಎಂದು ತಿಳಿದುಬಂದಿದೆ. ಡಿ.5ರಂದು ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಿಂದ ಸೊರಬ ತಾಲೂಕಿನ ಸುತ್ತಕೋಟೆಗೆ ತೆರಳುವ ರಸ್ತೆಮಾರ್ಗದಲ್ಲಿ ಸಾಸರಹಳ್ಳಿ ಸಮೀಪ ಜೋತು ಬಿದ್ದ ವಿದ್ಯುತ್ ತಂತಿ ಕ್ಯಾಂಟರ್​ಗೆ ತಗುಲಿದೆ. ಈ ಒಂದು ದುರ್ಘಟನೆಗೆ ಮೆಸ್ಕಾಂ ಸಿಬ್ಬಂದಿ ಮತ್ತು ಅಧಿಕಾರಿಗಳೇ ಕಾರಣ ಎಂದು ಗ್ರಾಮದ ಜನರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೊರಬ ಪೊಲೀಸ್ ಠಾಣೆಯಲ್ಲಿ ಮೃತ ಮೊಹಮ್ಮದ್ ಈಶಮ್ ಅವರ ತಂದೆ ರಿಯಾಜ್ ಮೆಸ್ಕಾಂ ವಿರುದ್ಧ ದೂರು ನೀಡಿದ್ದಾರೆ.

Read More

ಗದಗ : ಇತ್ತೀಚಿಗೆ ಮಕ್ಕಳ ಮೇಲೆ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕೆ ಎಷ್ಟೇ ಪ್ರಯತ್ನಿಸಿದರು ಕೂಡ ಅವುಗಳ ಕಾಟ ತಪ್ಪಿಲ್ಲ ಇದೀಗ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅಂಬಾಭವಾನಿ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು, 3 ವರ್ಷದ ಬಾಲಕನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್ ಮಾಡಿದೆ. ಬಾಲಕನ ತುಟಿ, ಹಣೇ ಹಾಗೂ ಗಲ್ಲವನ್ನು ಬೀದಿ ನಾಯಿ ಕಚ್ಚಿ ತಿಂದಿದೆ. ರುದ್ರಪ್ರಿಯ ದೊಡ್ಡಕಾಶಿ (3) ಎನ್ನುವ ಬಾಲಕನಿಗೆ ಗಂಭೀರವಾದ ಗಾಯಗಳಾಗಿವೆ, ಆಟವಾಡುತ್ತಿದ್ದ ಬಾಲಕನ ಮೇಲೆ ದಿಢೀರ್ ಆಗಿ ಬೀದಿನಾಯಿ ಎಗರಿದೆ. ಸದ್ಯ ಬಾಲಕನಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೀಗತನದ ಹೋಳಿಗೆ ಊಟಕ್ಕೆ ಬಾಲಕನ ಕುಟುಂಬಸ್ಥರು ಬಂದಿದ್ದರು.ಈ ವೇಳೆ ಈ ಒಂದು ಘಟನೆ ನಡೆದಿದೆ.

Read More

ಬಳ್ಳಾರಿ : ಇತ್ತೀಚಿಗೆ ಬಳ್ಳಾರಿಯಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೃತರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಮಾತನಾಡಿದ ಅವರು ಬಳ್ಳಾರಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಐದು ಬಾಣಂತಿಯರ ಸಾವಾಗಿದೆ.ಈ ಕುರಿತಂತೆ ಕ್ಯಾಬಿನೆಟ್ ಸಭೆಯಲ್ಲಿ ಕಳಪೆ ಔಷಧ ನೀಡಿದ್ದರಿಂದ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೊದಲು ಎರಡು ಲಕ್ಷ ಪರಿಹಾರ ಘೋಷಿಸಿದ್ದೆ. ಈಗ ಪರಿಹಾರದ ಮೊತ್ತ ಹೆಚ್ಚಿಸಿದ್ದು, ಮೃತ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ನೀಡಲಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

Read More

ಬೆಂಗಳೂರು: 220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 08.12.2024 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 03:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಪೀಣ್ಯ ಗ್ರಾಮ, ಎಸ್ ಆರ್ ಎಸ್ ರಸ್ತೆ, 4ನೇ ಬ್ಲಾಕ್, ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜೆಕೆಡಬ್ಲೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, 1ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಅಡ್ಡರಸ್ತೆ, ಎಸ್ ಎಸ್ ಟ್ರೇಜ್ ಏರಿಯಾ 1ನೇ ಕ್ರಾಸ್, ಅನುಸೋಲಾರ್ ರಸ್ತೆ, ಚೇರದ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಮೈಸೂರು ಇಂಜಿನಿಯರ್ ರಸ್ತೆ, ಸನ್ ರೈಸ್ ಕಾಸ್ಟಿಂಗದ ರಸ್ತೆ, 3ನೇ ಹಂತ, ವೈಷ್ಣವಿ ಮಾಲ್+ ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Read More

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ನಿರ್ವಾಹಕ ಹುದ್ದೆಯ ನೇಮಕಾತಿ ಸಂಬಂಧ 371-ಜೆ (ಕಲ್ಯಾಣ ಕರ್ನಾಟಕ) ಮೀಸಲಾತಿಯಡಿ 212 ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿದ್ದು, ಇಂದು ಸದರಿ ಅಭ್ಯರ್ಥಿಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸುವ ಮೂಲಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದರು. ಜಾಹೀರಾತುಪಡಿಸಿದ ಹುದ್ದೆಗಳ ಸಂಖ್ಯೆ 214 ಅದಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂಖ್ಯೆ 5410, ಶೇ. 30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳ ಸಂಖ್ಯೆ 1334 ಅದರಲ್ಲಿ ಮೂಲ ದಾಖಲೆ/ದೇಹದಾರ್ಢ್ಯತೆ ಪರಿಶೀಲನೆ ನಡೆಸಿ, ಅಂತಿಮವಾಗಿ 212 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸರ್ಕಾರವು 9000 ಹೊಸ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ್ದು, ಅದರಂತೆ ಈಗಾಗಲೇ 2500 ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಿಎಂಟಿಸಿ ಯಲ್ಲಿ ಕೊನೆಗೊಂಡಿದ್ದು, ನೇಮಕಾತಿ ಆದೇಶ ನೀಡುವುದು ಬಾಕಿಯಿದೆ. 2000 ಚಾಲಕ-ಕಂ- ನಿರ್ವಾಹಕ ಹುದ್ದೆಗಳ ನೇಮಕಾತಿ ಕೆ‌ಎಸ್ ಆರ್ ಟಿ ಸಿ ಯಲ್ಲಿ, 1000 ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಡೆಯುತ್ತಿದೆ.…

Read More