Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದ ಎಲ್ಲಾ ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಇನ್ನು ಮುಂದೆ ಸೋಪು ಹಾಗೂ ಶಾಂಪೂ ಮಾರಾಟ ಮಾಡದಂತೆ ನಿಷೇಧಿಸಿ ಅರಣ್ಯ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಹಾಗಾಗಿ ಇನ್ಮುಂದೆ ಪುಣ್ಯಕ್ಷೇತ್ರಗಳ ನದಿ ದಡದಲ್ಲಿ ಭಕ್ತರು ಯಾವುದೇ ರೀತಿಯಾಗಿ ಶಾಂಪು ಸೋಪು ಹಾಗೂ ಇತರೆ ಪರಿಸರ ಮಾಲಿನ್ಯಕಾರಕ ವಸ್ತುಗಳನ್ನು ಬಳಸುವಂತಿಲ್ಲ ಇವುಗಳ ಮಾರಾಟ ನಿಷೇಧ ಮಾಡಿ ಇದೀಗ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ಆದೇಶ ಹೊರಡಿಸಿದ್ದು, ನದಿ ದಡಗಳಲ್ಲಿ ಸೋಪು, ಶಾಂಪು ಮಾರಾಟ ಮಾಡದಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಅಲ್ಲಸದೆ ಭಕ್ತರಿಗೆ ಮಾಲಿನ್ಯಕಾರಕ ವಸ್ತುಗಳನ್ನು ನದಿಗಳಲ್ಲಿ ವಿಸರ್ಜನೆ ಮಾಡದಂತೆ ಸೂಚನೆ ನೀಡಲಾಗಿದೆ. ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಅರಣ್ಯ ಮತ್ತು ಪರಿಸರ ಇಲಾಖೆ, ಈ ಕುರಿತು ಆದೇಶ ಹೊರಡಿಸಿದ್ದು, ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ…
ಬೆಳಗಾವಿ : ಬೆಳಗಾವಿಯಲ್ಲಿ ಇಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು ಸಕ್ಕರೆ ಸಾಗಿಸುತ್ತಿದ್ದ ಲಾರಿ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದರೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗುತ್ತಿ ಎಂಬಲ್ಲಿ ನಡೆದಿದೆ. ಹೌದು ಸಕ್ಕರೆ ಸಾಗಿಸುತ್ತಿದ್ದ ಲಾರಿ ಪಾಲ್ಟಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಬಳಿ ಈ ಒಂದು ಘಟನೆ ನಡೆದಿದೆ. ಮೃತರು ಬಾಲಪ್ಪ ಮುದಕವಿ (28) ಮತ್ತು ಯಲ್ಲವ್ವ ಚೆನ್ನವವರ್ (35) ಎಂದು ತಿಳಿದುಬಂದಿದೆ. ಇನ್ನು ಲಾರಿ ಚಾಲಕ ಸೇರಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳಕ್ಕೆ ಇಡೀ ದೇಶದ ಹಲವಾರು ಭಾಗಗಳಿಂದ ಭಕ್ತರು ಭೇಟಿ ನೀಡಿದ್ದರು. ಇದೀಗ ಕುಂಭಮೇಳದ ಹೆಸರಿನಲ್ಲಿ ಅನೇಕ ಅಮಾಯಕ ಜನರಿಗೆ ಸುಮಾರು 70 ಲಕ್ಷ ರೂಪಾಯಿ ಪಡೆದು ವಂಚನೆ ಎಸೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಆರೋಪಿ ರಾಘವೇಂದ್ರ ರಾವ್ ನನ್ನು ಇದೀಗ ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಆರೋಪಿ ರಾಘವೇಂದ್ರ ರಾವ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಜನರಿಗೆ ಆರೋಪಿ ರಾಘವೇಂದ್ರರಾವ್ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಫೇಸ್ಬುಕ್ ನಲ್ಲಿ ಜಾಹಿರಾತು ಮೂಲಕ ಅಮಾಯಕರನ್ನು ಸಂಪರ್ಕ ಮಾಡುತ್ತಿದ್ದ. ಪಾಂಚಜನ್ಯ ಟೂಲ್ಸ್ ಅಂಡ್ ಟ್ರಾವೆಲ್ಸ್ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಅಯೋಧ್ಯೇ, ಕಾಶಿ ಮತ್ತು ಪ್ರಯಾಗ್ ರಾಜ್ ಪ್ರವಾಸದ ಪ್ಯಾಕೇಜ್ ಬಗ್ಗೆ ತಿಳಿಸುತ್ತಿದ್ದ. ಏಳು ದಿನಗಳ ಪ್ಯಾಕೇಜ್ ಗೆ ತಲಾ 49 ಸಾವಿರ ರೂಪಾಯಿಯನ್ನು ರಾಘವೇಂದ್ರ ರಾವ್ ಪಡೆಯುತ್ತಿದ್ದ ಎನ್ನಲಾಗಿದೆ.ಆದರೆ ಪ್ರವಾಸದ ಹೆಸರಿನಲ್ಲಿ ಸುಮಾರು 70ಲಕ್ಷ…
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು,ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಉರುಳಿ ಬಿದ್ದು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಹನೂರು ತಾಲೂಕಿನ ಬಂಡಳ್ಳಿ ಹೊರ ವಲಯದ ತೆಳ್ಳನೂರು ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ನಿಶ್ಚಿತಾರ್ಥ ಕಾರ್ಯಕ್ರಮದ ಅಂಗವಾಗಿ ಖಾಸಗಿ ಬಸ್ನಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಯೊಂದಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಶಾಗ್ಯ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಬಂಡಳ್ಳಿ ತೆಳ್ಳನೂರು ಮಾರ್ಗದ ಕಾಯಿ ಒಡೆಯುವ ಕಲ್ಲಿನ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಬಸ್ ಕ್ಲೀನರ್ ಬಸ್ಸಿನ ನವೀನ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ತಕ್ಷಣ ಸ್ಥಳೀಯರು ಗಾಯಗೊಂಡ ಜನರನ್ನು ಆಸ್ಪತ್ರೆಗೆ ದಾಖಳಿಸಿದರು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯಪುರ : ಇತ್ತೀಚಿಗೆ ಈ ಒಂದು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಜನರು ಸಕ್ರಿಯವಾಗುತ್ತಿದ್ದಾರೆ.ಅದರಲ್ಲೂ ಕೂಡ ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಪ್ರತಿಭೆಗಳು ಒಂದು ಸೋಶಿಯಲ್ ಮೀಡಿಯಾ ದಿಂದ ಬೆಳಕಿಗೆ ಬಂದಿವೆ. ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಗೋಡಂಬಿ ಕಾಕಾ ಎಂದೇ ಪ್ರಸಿದ್ಧಿ ಪಡೆದಿದ್ದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಬಸಲಿಂಗಯ್ಯ ಹಿರೇಮಠ ಅನಾರೋಗ್ಯದಿಂದ ಸಾವನ್ನಪ್ಪಿದ್ದು ಅವರ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಹೌದು ಬಸಲಿಂಗಯ್ಯ ಹಿರೇಮಠ ಅವರಿಗೆ ವಯಸ್ಸಾಗಿದ್ದರು ಕೂಡ ಇನ್ಸ್ಟಾಗ್ರಾಮ್, ಫೇಸ್ ಬುಕ್ ಹಾಗೂ ಯೂಟ್ಯೂಬ್ ಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಅದರಲ್ಲೂ ಯೂಟ್ಯೂಬ್ ನಲ್ಲಿ ಅವರು ಹಾಸ್ಯ ಬರಿತ ಕೆಲವು ಶಾರ್ಟ್ ಫಿಲಂ ಗಳ ಮೂಲಕ ಖ್ಯಾತಿ ಪಡೆದಿದ್ದರು. ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಗೋಡಂಬಿ ಕಾಕಾ ಇಂದು ನಿಧನರಾಗಿದ್ದಾರೆ. ಬಸಲಿಂಗಯ್ಯ ಚೆನ್ನಬಸಯ್ಯ ಹಿರೇಮಠ ಮೂಲತಃ ರಂಗಭೂಮಿ ಕಲಾವಿದರು. 19 ವಯಸ್ಸಿನಲ್ಲಿ ಬಣ್ಣ ಹಚ್ಚಿದ ಇವರು 40 ವರ್ಷಗಳ ಕಾಲ ರಂಗಭೂಮಿ ಕಲಾವಿದರಾಗಿ…
ಹಾಸನ : ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ, ಯಾರು ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದ್ದಾರೆ. ಹೊಳೆನರಸೀಪುರದ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ದನು ಸ್ಮರಣಾರ್ಥ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದ ಅವರು, ಈ ವೇಳೆ ಪ್ರಜ್ವಲ್ ರೇವಣ್ಣ ಈ ಗ್ರಾಮಕ್ಕೆ ಕೊಡುಗೆ ಕೊಟ್ಟಿದ್ದಾರೆ. ಅವರು ಶೀಘ್ರದಲ್ಲೇ ಬಿಡುಗಡೆಯಾಗುತ್ತಾರೆ. ನಾವು, ನೀವು ಎಲ್ಲರೂ ಒಟ್ಟಿಗೆ ಸ್ವಾಗತ ಮಾಡೋಣ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ. ಮುಂದಕ್ಕೂ ರಾಜಕೀಯ ಏನು ಅನ್ನೋದು ನನಗೂ ಗೊತ್ತಿದೆ ಎಂದಿದ್ದಾರೆ. ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ ಆಗುತ್ತೆ ಮುಂದಿನ ನಾಲ್ಕೈದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬದಲಾವಣೆ ಆಗುತ್ತದೆ. ಎಂದು ಜೆಡಿಎಸ್ ಎಂ ಎಲ್ ಸಿ ರೇವಣ್ಣ ಸ್ಪೋಟಕವಾದ ಹೇಳಿಕೆ ನೀಡಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅವರು ಮಾತನಾಡಿದರು. ಚಾಕೇನಹಳ್ಳಿಕಟ್ಟಿ ಗ್ರಾಮದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದು, ನಾಲ್ಕೈದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ…
ಬೆಂಗಳೂರು : ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು ನನಗೆ ಬಹಳ ಇಷ್ಟ. ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು? ಎಂದು ನಟ ಕಿಶೋರ್ ಹೇಳಿಕೆ ನೀಡಿದ್ದಾರೆ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರಧಾನ ಹಾಗೂ ಸಮಾರೋಪ ಸಮಾರಂಭದಲ್ಲಿ ನಟ ಕಿಶೋರ್ ಈ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಮಾಂಸ ಸೇವಿಸಿ ದೇವಸ್ಥಾನಕ್ಕೆ ಹೋಗುತ್ತೇನೆ ಅಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು ನನಗೆ ಬಹಳ ಇಷ್ಟ ಆಯಿತು. ಬೆಂಗಳೂರಿನ ಸುಲೋಚನಾ ಸಭಾಂಗಣದಲ್ಲಿ ನಟಕಿಶೋರ್ ಹೇಳಿಕೆ ನೀಡಿದರು. ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತೆರೆ ಬಿದ್ದಿದ್ದು, ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಟ ಕಿಶೋರ್ ಮಾತನಾಡಿದರು.ಸಿಎಂ ಸಿದ್ದರಾಮಯ್ಯ ಅವರಂತಹ ವ್ಯಕ್ತಿತ್ವ ಇರುವುದು ಬಹಳ ಮುಖ್ಯ ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು? ಎಂದು ನಟಕಿಶೋರ್ ಇದೆ ವೇಳೆ ಹೇಳಿಕೆ ನೀಡಿದರು.
ಹಾಸನ : ಮುಂದಿನ ನಾಲ್ಕೈದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬದಲಾವಣೆ ಆಗುತ್ತದೆ. ಎಂದು ಜೆಡಿಎಸ್ ಎಂ ಎಲ್ ಸಿ ರೇವಣ್ಣ ಸ್ಪೋಟಕವಾದ ಹೇಳಿಕೆ ನೀಡಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅವರು ಮಾತನಾಡಿದರು. ಚಾಕೇನಹಳ್ಳಿಕಟ್ಟಿ ಗ್ರಾಮದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದು, ನಾಲ್ಕೈದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬದಲಾಗುತ್ತದೆ. ಆಗ ಕಾಂಗ್ರೆಸ್ ಪಕ್ಷದ ಕಡೆ ಹೋಗಿರುವ ಅವರ ಕಥೆ ಏನಾಗಬಹುದು? ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ ಆಯ್ತು ಅಂದುಕೊಳ್ಳೋಣ ಆಗ ಬಂದು ಎಚ್ ಡಿ ರೇವಣ್ಣ ಅವರಿಗೆ ಜೈ ಅಂತಾರೆ ಇದೇ ಕಥೆ. ಕೆಲವೇ ತಿಂಗಳಲ್ಲಿ ಸರ್ಕಾರ ಬದಲಾಗುತ್ತದೆ. ಎಂದು ಸ್ಪೋಟಕವಾದ ಹೇಳಿಕೆ ನೀಡಿದರು.
ಬೆಂಗಳೂರು : ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಈ ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಲತಾಣ ಎಕ್ಸ್ ನಲ್ಲಿ ಘಟನೆಯನ್ನು ತೀವ್ರವಾಗಿ ಖಂಡಿಸಿ ಟ್ವೀಟ್ ಮಾಡಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.…
ತುಮಕೂರು : ತುಮಕೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಮನೆಯಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಸೈಕೋ ಆರೋಪಿಯನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ತುಮಕೂರಿನ NEPS ಠಾಣೆ ಪೊಲೀಸರು ಶರತ್ ಇರುವ ಸೈಕೋ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಬಂಧಿತ ಶರತ್ ತುಮಕೂರಿನ ಖಾಸಗಿ ಕಾಲೇಜಿನಲ್ಲಿ ಶರತ್ ಇಂಜಿನಿಯರಿಂಗ್ ಓದುತ್ತಿದ ಎನ್ನಲಾಗಿದೆ. ಇಂಜಿನಿಯರಿಂಗ್ ವಿದ್ಯಾರ್ಥಿ ಶರತ್ ಎಸ್ಐಟಿ ಬ್ಯಾಕ್ ಗೇಟ್ ನಲ್ಲಿ ಶರತ್ ರೂಮ್ ಮಾಡಿಕೊಂಡಿದ್ದ ಅತಿಯಾಗಿ ಬ್ಲೂ ಫಿಲಂ ನೋಡುತ್ತಿದ್ದ ಎಂದು ತಿಳಿದು ಬಂದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿ ಬ್ಲೂ ಫಿಲಂ ನೋಡಿ ಶರತ್ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಎನ್ನಲಾಗಿದೆ. ಮೂಲತಃ ವಿದ್ಯಾರ್ಥಿ ಶರತ್ ಚಿಕ್ಕನಾಯಕನಹಳ್ಳಿ ಮೂಲದವನು ಎಂದು ತಿಳಿದುಬಂದಿದೆ.












