Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದು ನಿಮ್ಮ ರಾಜ್ಯಗಳಲ್ಲಿನ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ ಅವರನ್ನು ವಾಪಸ್ ಕಳುಹಿಸಿ ಎಂದು ಸೂಚನೆ ನೀಡಿದ್ದರು. ಇದರ ಬೆನ್ನಲ್ಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ ವಾಪಸ್ ಕಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಇದೀಗ ಕಲ್ಬುರ್ಗಿಯಲ್ಲಿ ಒಟ್ಟು 9 ಜನ ಪಾಕಿಸ್ತಾನಿ ಪ್ರಜೆಗಳು ಇದ್ದಾರೆ ಎಂದು ಕಲ್ಬುರ್ಗಿಗೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಮಾಹಿತಿ ನೀಡಿದರು. ಕಳೆದ 20 ವರ್ಷದಿಂದ ಕಲ್ಬುರ್ಗಿಯಲ್ಲಿ ಪಾಕಿಸ್ತಾನ ಪ್ರಜೆಗಳು ಇದ್ದಾರೆ. 9 ಜನ ಪಾಕಿಸ್ತಾನ ಪ್ರಜೆಗಳ ಪೈಕಿ ಇಬ್ಬರು ದೀರ್ಘಾವಧಿ ವೀಸಾದಲ್ಲಿ ಕಲ್ಬುರ್ಗಿಯಲ್ಲೆ ನೆಲೆಸಿದ್ದಾರೆ. ಉಳಿದವರು ವಿಜಿಟರ್ ವಿಸಾದ ಅಡಿ ಇದ್ದಾರೆ. ಇನ್ನು ಒಬ್ಬರು ಮಾತ್ರ ಅಮೇರಿಕಾದಲ್ಲಿದ್ದಾರೆ ಎಂದು ಕಲ್ಬುರ್ಗಿಯಲ್ಲಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಹೇಳಿಕೆ…
ನವದೆಹಲಿ : ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪಹಲ್ಗಾಮ್ ನಲ್ಲಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಇದೀಗ NIA ಹಿರಿಯ ಅಧಿಕಾರಿಯೊಬ್ಬರು ದಾಳಿ ನಡೆಸಿದ ಉಗ್ರರಿಗೆ ಹಮಾಸ್ ನಿಂದ ಬಂದಂತಹ ಮೂವರು ಕಮಾಂಡರ್ ಗಳು ತರಬೇತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ ಹೌದು ಕಳೆದ ಆರು ತಿಂಗಳ ಹಿಂದೆ ಈ ಮೂವರು ಹಮಾಸ್ ಕಮಾಂಡರ್ ಗಳು ಪಾಕಿಸ್ತಾನಕ್ಕೆ ಬಂದಿದ್ದಾರೆ. ಸಿದ್ಧತೆ ಮತ್ತು ವಿಧಾನ ಹಮಾಸ್ ನಂತೆಯೇ ಇತ್ತು. ಹಮಾಸ್ ಕಮಾಂಡರ್ ಗಳಾದ ಡಾ. ಖಾಲಿದ್ ಖಾಧುನಿ, ಡಾ.ಅನಾಜಿ ಜಹೀರ್ ಹಾಗೂ ಮಫ್ತಿ ಅಜಂ ಪಾಕಿಸ್ತಾನದಲ್ಲಿ ಪಿತೂರಿ ನಡೆಸಿದ್ದರು. ಲಷ್ಕರ್ ಎ ತೊಯ್ಬಾ, ಸಂಘಟನೆಗಳೊಂದಿಗೆ ಹಮಾಸ್ ಕಮಾಂಡರ್ ಗಳು ನಿರಂತರ ಸಂಪರ್ಕ ಹೊಂದಿದ್ದರು. ಎನ್ನಲಾಗಿದೆ. ಭಾರತ ವಿರೋಧಿ ರ್ಯಾಲಿಯಲ್ಲಿ ಖಾಲಿದ್, ಜಹೀರ್ ಮತ್ತು ಅಜಂ ಭಾಗಿಯಾಗಿದ್ದರು. ಫೆಬ್ರವರಿ 6ರಂದು ಪಿಓಕೆಯ ರಾವಲಕೋಟ್ ನಲ್ಲಿ ರಾಲಿ ನಡೆದಿದ್ದು, ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಸಹೋದರ, ಕಮಾಂಡರ್…
ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು. ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ? ಇನ್ನು ಪಾಕಿಸ್ತಾನದ ಜೊತೆ ಯುದ್ಧ ಮಾಡಲೇಬೇಕಾದ ಅನಿವಾರ್ಯತೆ ತಲೆದೋರಿದೆಯಾ? ಯುದ್ಧ ಮಾಡಲೇಬೇಕಾದ ಸ್ಥಿತಿ ಎದುರಾದರೆ ನಿಮ್ಮ ನಿಲುವೇನು l ಅಂತ ಪತ್ರಕರ್ತರು…
ಕಲಬುರ್ಗಿ : ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು ಸೇರಿ 30ಕ್ಕೂ ಅಧಿಕ ಅಮಾಯಕರು ಬಲಿಯಾಗಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ವ್ಯಾಪಕ ಆಕೋಶ ವ್ಯಕ್ತವಾಗುತ್ತಿತ್ತು, ಕಲ್ಬುರ್ಗಿಯಲ್ಲಿ ಕೂಡ ಬಜರಂಗದಳ ಕಾರ್ಯಕರ್ತರು ರಸ್ತೆಯ ಮೇಲೆ ಪಾಕಿಸ್ತಾನ ಧ್ವಜ ಅಂಟಿಸಿ ಆಕ್ರೋಶ ಹೊರಹಾಕಿದ್ದಾರೆ. ಹೌದು ಕಲ್ಬುರ್ಗಿ ನಗರದ ಜಗತ್ ವೃತ ಸಾರ್ವಜನಿಕ ಶೌಚಾಲಯ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪಾಕಿಸ್ತಾನ ಧ್ವಜ ಆಂಟಿಸಿ ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗುಪ್ತಚರ ಇಲಾಖೆ ಸಿಬ್ಬಂದಿ, ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ಅಂಟಿಸಿದ ಧ್ವಜವನ್ನು ತೆರವುಗೊಳಿಸಿದ್ದಾರೆ. ಬಳಿಕ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನವದೆಹಲಿ : ಪಹಲ್ಗಾಮ್ ನಲ್ಲಿ ಭೀಕರ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪಾಕಿಸ್ತಾನಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು ಪಾಕಿಸ್ತಾನದ ಎಲ್ಲಾ 17 ರೀತಿಯ ವಿಸಾಗಳನ್ನು ರದ್ದುಗೊಳಿಸಿ, ಕೇಂದ್ರ ಗ್ರಹ ಸಚಿವಾಲಯ ಆದೇಶ ಹೊರಡಿಸಿದೆ. ಹೌದು ಈ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು ಪಾಕಿಸ್ತಾನದಿಂದ ಭಾರತಕ್ಕೆ ಆಗಮಿಸುವ ಪಾಕಿಸ್ತಾನ ಪ್ರಜೆಗಳು 17 ರೀತಿಯ ವಿಸ ಬಳಸುತ್ತಾರೆ ಈ 17 ರೀತಿಯ ಎಲ್ಲಾ ವಿಸಾಗಳನ್ನು ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಇನ್ನೊಂದು ಕಡೆಗೆ ಕೇಂದ್ರ ಸಚಿವ ಅಮಿತ್ ಶಾ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ ವಾಪಾಸ್ ಕಳುಹಿಸಿ ಎಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೀಗ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದು, ನಿಮ್ಮ ರಾಜ್ಯಗಳಲ್ಲಿ ಯಾವ ಪಾಕಿಸ್ತಾನ…
ನವದೆಹಲಿ : ಪಹಲ್ಗಾಮ್ ನಲ್ಲಿ ಭೀಕರವಾದ ಉಗ್ರರ ಗುಂಡಿನ ದಾಳಿಗೆ ಸಂಬಂಧಪಟ್ಟಂತೆ ಇದೀಗ ಕೇಂದ್ರ ಸಚಿವ ಅಮಿತ್ ಶಾ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ ವಾಪಾಸ್ ಕಳುಹಿಸಿ ಎಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೀಗ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದು, ನಿಮ್ಮ ರಾಜ್ಯಗಳಲ್ಲಿ ಯಾವ ಪಾಕಿಸ್ತಾನ ಪ್ರಜೆಗಳು ಇದ್ದಾರೋ ಅವರೆಲ್ಲ ಗುರುತಿಸಿ ಯಾರನ್ನು ಉಳಿಸಬಾರದು ಎಲ್ಲರನ್ನು ವಾಪಸ್ ಕಳುಹಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷರಾಗಿದ್ದ ಕೆ.ಕಸ್ತೂರಿ ರಂಗನ್ ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ಬೆಂಗಳೂರಿನಲ್ಲಿ ನಿವಾಸದಲ್ಲಿ ಕೆ. ಕಸ್ತೂರಿ ರಂಗನ್ (84) ನಿಧನರಾಗಿದ್ದಾರೆ 1994 ರಿಂದ 2003 ರ ವರೆಗೆ ಇಸ್ರೋ ಅಧ್ಯಕ್ಷರಾಗಿದ್ದರು. ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಕೃಷ್ಣಸ್ವಾಮಿ ಕಸ್ತೂರಿರಂಗನ್ ಇದೀಗ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಅವರು ಬೆಳಿಗ್ಗೆ 10.43 ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು.ಡಾ. ಕೆ. ಕಸ್ತೂರಿರಂಗನ್ ಅವರು ಆಗಸ್ಟ್ 27, 2003 ರಂದು ತಮ್ಮ ಹುದ್ದೆಯನ್ನು ತ್ಯಜಿಸುವ ಮೊದಲು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಬಾಹ್ಯಾಕಾಶ ಆಯೋಗದ ಅಧ್ಯಕ್ಷರು ಮತ್ತು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮವನ್ನು ಅದ್ಭುತವಾಗಿ ಮುನ್ನಡೆಸಿದ್ದರು.
ಬೆಂಗಳೂರು : ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 30ಕ್ಕೂ ಅಧಿಕ ಪ್ರವಾಸಿಗರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜ್ಯದಾದ್ಯಂತ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಕಾಶ್ಮೀರದಲ್ಲಿ ಸಂಭವಿಸಿದ ದಾಳಿಯಲ್ಲಿ ಬೃಹತ್ ಗುಪ್ತಚರ ವೈಫಲ್ಯ ನಡೆದಿರುವುದು ಸ್ಪಷ್ಟವಾಗಿದೆ. ಉಗ್ರರು ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಮುನ್ನಡೆದು ಬಂದಿರುವುದು ಈ ವೈಫಲ್ಯವನ್ನು ತೋರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜಾಗೃತತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಪ್ರಮುಖ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ದೇವಸ್ಥಾನಗಳು, ಮಾರುಕಟ್ಟೆಗಳು ಮತ್ತು ಜನಸಂದಣಿಯಿರುವ ಸ್ಥಳಗಳಲ್ಲಿ ಭದ್ರತೆ ಕಠಿಣಗೊಳಿಸಲಾಗಿದೆ. ರಾಜ್ಯದಲ್ಲಿ ಎಚ್ಚರಿಕೆಯ ವಾತಾವರಣ ನಿರ್ಮಾಣವಾಗಿದೆ. ಯಾವುದೇ ತುರ್ತು ಪರಿಸ್ಥಿತಿಗೆ ತಯಾರಾಗಿರಬೇಕು ಎಂದು ಡಿಜಿಪಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ರಾಯಚೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯನ್ನು ಬರ್ಬರವಾಗಿ ಕೊಂದು ಬಳಿಕ ನೇಣು ಹಾಕಲಾಗಿ ಎಂದು ಶಂಕಿಸಲಾಗಿದ್ದು, ಗಂಡ ಸೇರಿ ಅವರ ಮನೆಯ 6 ಜನರ ವಿರುದ್ಧ FIR ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅನುಪಮ (20) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಚೆಂಗಡಿ ಗ್ರಾಮದ ಬಸವರಾಜ ಒಕ್ಕಲಿಗ ಅವರ ಪುತ್ರಿ ಅನುಪಮಾ ಮತ್ತು ಸಿಂಧನೂರು ತಾಲ್ಲೂಕಿನ ಬೂದಿಹಾಳ ಗ್ರಾಮದ ನಾಗರಾಜ ಚನ್ನಬಸಪ್ಪ ಛಲವಾದಿ ಅವರು ಇನ್ಸ್ಟಾಗ್ರಾಮ್ನಲ್ಲಿ ಪರಿಚಯರಾಗಿ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನಾಗರಾಜ್ ಹಾಗು ಅನುಪಮಾ ಓಡಿ ಹೋಗಿ ಮದುವೆಯಾಗಿ ಗಂಡನ ಸ್ವಗ್ರಾಮ ಬೂದಿಹಾಳದಲ್ಲಿಯೇ ಅನ್ಯೊನ್ಯವಾಗಿದ್ದರು. ನಂತರ ಹುಡುಗಿಯ ಜಾತಿ ಬೇರೆಯಾಗಿದ್ದರಿಂದ ಹುಡುಗನ ಕುಟುಂಬಸ್ಥರು ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ಬುಧವಾರ ರಾತ್ರಿ ಅನುಪಮಾ ಗಂಡನ ಮನೆಯಲ್ಲಿಯೇ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾಳೆ. ತಕ್ಷಣವೇ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ಮೃತಪಟ್ಟಿರುವದನ್ನು ವೈದ್ಯರು ಖಚಿತ…
ಬೆಂಗಳೂರು : ಡಿಕೆ ಸಹೋದರಿ ಎಂದು ಹೇಳಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯ ಗೌಡಳನ್ನು 14 ದಿನ ಜಾರಿ ನಿರ್ದೇಶನಾಲಯ (ED) ಕಸ್ಟಡಿಗೆ ನೀಡಿ ಇದೀಗ ಕೋರ್ಟ್ ಆದೇಶ ಹೊರಡಿಸಿದೆ. ಹೌದು 9.82 ಕೋಟಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದರು. ನಡೆಸಿದರು. ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ, ಫೋನ್ ಕರೆ ವಿವರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಪ್ರಕರಣದ ಪ್ರಮುಖ ಆರೋಪಿ ಐಶ್ವರ್ಯ ಗೌಡ ಅವರ ಆರ್.ಎಂ.ಸಿ. ಯಾರ್ಡ್ನಲ್ಲಿರುವ ನಿವಾಸದ ಮೇಲೆಯೂ ದಾಳಿ ನಡೆಸಿ, ನಿನ್ನೆ ಸಂಜೆವರೆಗೂ ಪರಿಶೀಲಿಸಿದರು. ಬಳಿಕ ಐಶ್ವರ್ಯಳನ್ನು ವಶಕ್ಕೆ ಪಡೆದು ಶಾಂತಿನಗರ ಇ.ಡಿ. ಕಚೇರಿಗೆ ಅಧಿಕಾರಿಗಳು ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು ಇದೀಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಐಶ್ವರ್ಯ ಗೌಡಳನ್ನು 14 ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.













