Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದರು. ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು.…
ಬೆಂಗಳೂರು : ಭೂಗತ ಲೋಕದ ಮಾಜಿ ಡಾನ್ ದಿ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಗನ್ ಮ್ಯಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿಸಿದ ಬಳಿಕ ವಿಚಾರಣೆ ನಡೆಸಿದ ಪೊಲೀಸರು ಗನ್ ಮ್ಯಾನ್ ಸ್ಪೋಟಕವಾದ ಹೇಳಿಕೆ ನೀಡಿದ್ದು ರಿಕ್ಕಿ ರೈ ತನ್ನನ್ನು ತಾನೇ ಶೂಟ್ ಮಾಡಿಕೊಂಡಿದ್ದಾನೆ ಎಂದು ಹೇಳಿಕೆ ನೀಡಿದ್ದಾನೆ. ಹೌದು ಗನ್ ಮ್ಯಾನ್ ವಿಠ್ಠಲ್ ನನ್ನು ರಾಮನಗರ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಬಳಿಕ ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ವೇಳೆ ಪೊಲೀಸರು ಗನ್ ಮ್ಯಾನ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಅದಕ್ಕೆ ಮಾಡಿಕೊಂಡಿದ್ದಾನೆ ಎಂದು ಹೇಳಿಕೆ ನೀಡಿದ್ದು, ಪೊಲೀಸರು ಆತನಿಂದ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ಹಾಗೂ ಉದ್ಯಮಿ ರಿಕ್ಕಿ ರೈ ಅವರ ಮೇಲೆ ಕಳೆದ ಶುಕ್ರವಾರ ರಾತ್ರಿ (ಏಪ್ರಿಲ್ 18) ರಾಮನಗರದ ಬಿಡದಿ…
ಬೆಂಗಳೂರು : ಕಳೆದ ಏಪ್ರಿಲ್ 16ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತಿತ್ತು ಈ ವೇಳೆ ಶಿವಮೊಗ್ಗ ಬೀದರ್ ಹಾಗೂ ಧಾರವಾಡದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡಿ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದು ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಹೌದು ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಹಕ್ಕುಗಳಿಗೆ ಚ್ಯುತಿ ತಂದ ಆರೋಪದ ಹಿನ್ನೆಲೆ ರಾಜ್ಯ ಸರ್ಕಾರದ ನಡೆಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ದೂರು ಸಲ್ಲಿಸಿದ್ದಾರೆ. ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಲಿಖಿತ ದೂರು ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರ್. ಅಶೋಕ್ ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ,…
ಚಾಮರಾಜನಗರ : ಅದೊಂದು ಕಾಲವಿತ್ತು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ ಯಾವುದೇ ರಾಜಕಾರಣಿ ಅಧಿಕಾರ ಕಳೆದುಕೊಳ್ಳುತ್ತಿದ್ದರು ಎಂಬ ಮಾತಿತ್ತು. ಅದಕ್ಕೆ ಸಾಕಷ್ಟು ಉದಾಹರಣೆಗಳು ಕೂಡ ಇವೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ ಬಳಿಕ ನನ್ನ ಅಧಿಕಾರ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮರಾಜನಗರಕ್ಕೆ ಬಂದಿರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿಯಾಗುತ್ತಿದೆ. ನಾನು ಸಿಎಂ ಆದ ಮೇಲೆ 20ಕ್ಕೂ ಹೆಚ್ಚು ಸಲ ಚಾಮರಾಜನಗರಕ್ಕೆ ಬಂದಿದ್ದೇನೆ. ಇದರಿಂದ ನಮಗೆ ಅಧಿಕಾರ ಗಟ್ಟಿಯಾಗುತ್ತಿದೆ ಎಂದು ತಿಳಿಸಿದರು. ED ದಾಳಿ ರಾಜಕೀಯ ಪ್ರೇರಿತ ಮಾಜಿ ಸಂಸದ ಡಿಕೆ ಸುರೇಶ ಸಹೋದರಿ ಎಂದು ಹೇಳಿ ಐಶ್ವರ್ಯ ಗೌಡ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಒಂದು ದಾಳಿ ಕುರಿತಂತೆ…
ಪ್ರಾಕ್ ಶಿರಾ ಶಯನೇ ವಿಂದ್ಯಾತ್ ಧನಮಾಯುಶ್ಚ ದಕ್ಷಿಣೇ || ಪಶ್ಚಿಮೇ ಪ್ರಬಲಾ ಚಿಂತಾ ಹಾನಿಮೃತ್ಯುರಥೋತ್ತರೇ || ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ ರಾತ್ರಿಯಲ್ಲಿ ಮಲಗುವಾಗ ತಲೆಯನ್ನು ಹಾಕಬಹುದು. ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಆಯುಸ್ಸು, ಮಾನಸಿಕ ನೆಮ್ಮದಿ, ಶಾಂತಿ ಹೆಚ್ಚುತ್ತದೆ. ಪಶ್ಚಿಮಕ್ಕೆ ತಲೆ ಮಾಡಿ ಮಲಗಿದರೆ,ಪ್ರಬಲವಾದ ಚಿಂತೆಗಳು ಯಾವಾಗಲೂ ಎಲ್ಲಾ ವಿಭಾಗಗಳಲ್ಲಿಯೂ ಬರುತ್ತಲೇ ಇರುತ್ತವೆ. ಉತ್ತರಕ್ಕೆ ತಲೆ ಇಟ್ಟು ಮಲಗಿದರೆ,ಧನ ನಷ್ಟ ಮತ್ತು ಮರಣ ಸಂಭವಿಸುತ್ತದೆ, ಅಂದರೆ ಆಯುಷ್ಯ ಹಾನಿಯಾಗುತ್ತದೆ. ಪೂರ್ವ ದಿಕ್ಕು ಸೂರ್ಯೋದಯದ ದಿಕ್ಕು. ಆರೋಗ್ಯಂ ಭಾಸ್ಕರಾದಿಚ್ಛೇತ್, ಸೂರ್ಯನಿಂದ ಆರೊಗ್ಯವನ್ನು ಬಯಸಿ, ಎಂಬುದು ಸ್ಮೃತಿ ವಾಕ್ಯ. ಸೂರ್ಯನು ಐಶ್ವರ್ಯಕ್ಕೆ, ಆರೋಗ್ಯಕ್ಕೆ ಪ್ರಧಾನ ದೇವತೆ. ಪೂರ್ವಕ್ಕೆ ತಲೆ ಮಾಡಿ ಮಲಗಿದರೆ, ಐಶ್ವರ್ಯ ಮತ್ತು ಆರೋಗ್ಯ ಸಿದ್ಧಿಸುತ್ತದೆ. ದಕ್ಷಿಣವು ಪಿತೃದೇವತೆಗಳು ಮತ್ತು ಯಮನ ದಿಕ್ಕು. ದಕ್ಷಿಣಕ್ಕೆ ತಲೆಮಾಡಿ ಮಲಗಿದರೆ ಆಯುಸ್ಸು ವೃದ್ಧಿಯಾಗುತ್ತದೆ. ಪಶ್ಚಿಮಕ್ಕೆ ತಲೆ ಇಟ್ಟು ಮಲಗಿದರೆ ನಮ್ಮೊಳಗೆ…
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ ನಡೆದ ಭೀಕರ ನರಮೇಧಕ್ಕೆ ಇದೀಗ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದ್ದು, ಕಾಶ್ಮೀರದಲ್ಲಿ ಬಂಡಿಪುರದಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಹೌದು ಜಮ್ಮು ಕಾಶ್ಮೀರದ ಬಂಡಿಪೋರ ಬಳಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಇದೀಗ ಭಾರತೀಯ ಸೇನೆ ಲಷ್ಕರ್-ಎ-ತೊಯ್ಬಾ ಕಮಾಂಡರನ್ನು ಹತ್ಯೆ ಮಾಡಿದೆ. ಲಷ್ಕರ್-ಎ-ತೊಯ್ಬಾ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಸೇನೆ ಹೊಡೆದುರುಳಿಸಿದೆ. ಯೋಧರು ಮತ್ತು ಉಗ್ರರ ನಡುವೆ ಭಾರಿ ಗುಂಡಿನ ಕಾಳಗ ನಡೆದಿತ್ತು. ಕಾರ್ಯಾಚರಣೆಯ ವೇಳೆ ಒಬ್ಬ ಯೋಧ ಹಾಗೂ ಇಬ್ಬರು ಪೊಲೀಸರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪ್ರವಾಸಿಗರ ಮೇಲೆ ನಡೆದ ಗುಂಡಿನ ದಾಳಿಗೆ ಪ್ರತಿಕಾರ ತೀರಿಸಿಕೊಂಡಿದೆ.
ನವದೆಹಲಿ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಐವರು ಪಾಕಿಸ್ತಾನಿ ಉಗ್ರರ ಹೆಸರುಗಳನ್ನು ಬಹಿರಂಗಪಡಿಸಲಾಗಿದೆ. ಇದರಲ್ಲಿ ಮೂವರು ಪಾಕಿಸ್ತಾನದವರಾದರೆ ಇನ್ನುಳಿದ ಇಬ್ಬರು ಜಮ್ಮು-ಕಾಶ್ಮೀರದವರು ಇದ್ದಾರೆ ಎಂದು ತಿಳಿದುಬಂದಿದೆ. ಪಾಕಿಸ್ತಾನ ಮೂಲದ ಆಸಿಫ್ ಹೌಜಿ, ಅಲಿಬಾಯ್ ಹಾಗು ಹಾಸಿಂ ಪಾಕಿಸ್ತಾನದವರಾದರೆ, ಉಳಿದಿಬ್ಬರು ಜಮ್ಮು ಕಾಶ್ಮೀರದ ಪುಲ್ವಾಮಾ ಮೂಲದ ಅಲ್ಸಾನ್ ಹಾಗು ಅನಂತನಾಗ್ ಜಿಲ್ಲೆಯ ಆದಿಲ್ ಹುಸೈನ್ ತೊಕರ್ ಎಂದು ತಿಳಿದುಬಂದಿದೆ. ಸದ್ಯ ಇವರು ಪೀರ್ ಪಂಜಾಲ್ ಪರ್ವತ ಶ್ರೇಣಿಯಲ್ಲಿ ಅಡಗಿ ಕುಳಿತಿದ್ದಾರೆ ಎಂದು ತಿಳಿದುಬಂದಿದೆ.
ಕೊಡಗು : ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿ ಗೆ ಇಬ್ಬರು ಕನ್ನಡಿಗರು ಸೇರಿದಂತೆ ಪ್ರವಾಸಿಗರು ಬಲಿಯಾಗಿದ್ದಾರೆ. ಇದೀಗ ಈ ಒಂದು ನರಮೇಧವನ್ನು ಸಮರ್ಥಿಸಿ ಕೊಡಗಿನಲ್ಲಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ FIR ದಾಖಲಾಗಿದೆ. ಹೌದು ನಿಚ್ಚು ಮಂಗಳೂರು ಎಂಬ ಫೇಸ್ಬುಕ್ ಪೇಜ್ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್ ಹಾಕಲಾಗಿದೆ. ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ಬುಕ್ ಪೇಜ್ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ…
ಮಡಿಕೇರಿ : ಕಾಂಗ್ರೆಸ್ಸಿನ ಹಿರಿಯ ನಾಯಕ ಮಿಟ್ಟು ಚಂಗಪ್ಪ ಅವರು ಇಂದು ನಿಧನರಾಗಿದ್ದಾರೆ. ಕೊಡಗು ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಬಿಟ್ಟು ಚಂಗಪ್ಪ ಅವರು ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗು ಆರ್. ಗುಂಡೂರಾವ್ ಸೇರಿದಂತೆ ಹಲವು ನಾಯಕರ ಆಪ್ತರಾಗಿದ್ದರು ಎನ್ನಲಾಗಿದ್ದು, ಮಡಿಕೇರಿಯ ಗಾಂಧೀ ಮೈದಾನದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಡಿಕೇರಿ ನಗರದಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಂಗಳೂರು : ಯುವ ವಕೀಲೆ ಹಾಗೂ ಆಕೆಯ ಮನೆಯಲ್ಲಿದ್ದ ಇನ್ನೊಬ್ಬ ವ್ಯಕ್ತಿ ಸಹ ಶವವಾಗಿ ಪತ್ತೆಯಾಗಿರುವ ಘಟನೆ ಇದೀಗ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಶ್ರೀನಿವಾಸಪುರದ ತೋಟದ ಮನೆಯಲ್ಲಿ ಯುವ ವಕೀಲೆ ರಮ್ಯಾ (27) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಾಗು ಆಕೆಯ ಮನೆಯಲ್ಲಿ ಇದ್ದಂತಹ ಪುನೀತ್ ಎನ್ನುವ ವ್ಯಕ್ತಿ ಕೂಡ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.












