Author: kannadanewsnow05

ಮೈಸೂರು : ಮೈಸೂರು ಜಿಲ್ಲೆಗೆ ಪ್ರವಾಸ ಮಾಡುತ್ತಿರುವ ಪ್ರವಾಸಿಗರಿಗೆ ಇದೀಗ ಭಾರಿ ನಿರಾಸೆಯಾಗಿದೆ. ಕಾರಣ ಮೈಸೂರು ಅರಮನೆಯಲ್ಲಿರುವ ಚಿನ್ನದ ಅಂಬಾರಿ ವೀಕ್ಷಣೆಗೆ ಇದೀಗ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ ಹಾಗಾಗಿ ಮೈಸೂರು ಜಿಲ್ಲೆ ಪ್ರವಾಸ ಕೈಗೊಂಡವರಿಗೆ ಸಹಜವಾಗಿ ನಿರಾಸೆಯಾಗಿದೆ. ಹೌದು ಬಲ್ಲ ಮೂಲಗಳ ಮಾಹಿತಿಗಳ ಪ್ರಕಾರ ಅಂಬಾರಿ ವೀಕ್ಷಣೆಗೆ ನಿರ್ಬಂಧ ಹೇರಿದ್ದು ಪ್ರವಾಸಿಗರಲ್ಲಿ ನಿರಾಸೆ ಉಂಟು ಮಾಡಿದೆ. ಅಂಬಾರಿ ಕೆಳಗೆ ಹಾಗೂ ಹಿಂಭಾಗ ಮರದ ಕೆಲಸ‌, ಸೇರಿದಂತೆ ವಿವಿಧ ಕಾಮಗಾರಿ ಕೆಲಸ ಇರವುದರಿಂದ ವೀಕ್ಷಣೆಗೆ ಬ್ರೇಕ್ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಅಂಬಾರಿ ವೀಕ್ಷಣೆಗೆ ಅವಕಾಶವಿಲ್ಲ. ಆದ್ದರಿಂದ ಸಹಜವಾಗಿ ಮೈಸೂರು ಅರಮನೆಗೆ ಭೇಟಿ ನೀಡುವ ಪ್ರವಾಸಿಗರಿಗೆ ನಿರಾಸೆಯಾಗಿದೆ.

Read More

ಕಲಬುರ್ಗಿ : ಆನ್ಲೈನ್ ಗೇಮ್ ಚಟ ಹತ್ತಿಸಿಕೊಂಡ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಅದರಿಂದ ಹೊರಬರಲಾರದೆ, ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ವೀರಶೈವ ವಸತಿ ನಿಲಯದ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರದ ಸೋಮನಾಥ ಚಿದ್ರೆ(22) ಎಂದು ಹೇಳಲಾಗುತ್ತಿದೆ. ಈತ ಜಿಮ್ಸ್ ಆಸ್ಪತ್ರೆಯ ನರ್ಸಿಂಗ್ ಕೋರ್ಸ್‌ ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಆನ್ ಲೈನ್ ನಲ್ಲಿ ಗೇಮ್ ಗಳನ್ನು ಆಡುವುದರಲ್ಲೇ ಬ್ಯುಸಿಯಾಗಿದ್ದ ಎನ್ನಲಾಗಿದೆ. ಆನ್‌ಲೈನ್ ವಿಡಿಯೋ ಚಟದಲ್ಲೇ ಮಗ ನಮ್ಮನ್ನು ಬಿಟ್ಟು ಅಗಲಿದ್ದಾನೆ. ಇದರಿಂದ ಹೊರಬಾರಲಾಗದೆ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ತಂದೆ ಸತೀಶಕುಮಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು, ನಿಧಿಯ ಆಸೆಗಾಗಿ ಮನೆಯ ಸೊಸೆಯನ್ನೇ, ತೋಟದ ಮನೆಯಲ್ಲಿ ಗುಂಡಿ ತೋಡಿ ಜೀವಂತ ಸಮಾಧಿಗೆ ಆಕೆಯ ಅತ್ತೆ ಮಾವ ಸಂಚು ರೂಪಿಸಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಯಂಡಿಗೇರಿ ಗ್ರಾಮದ ತೋಟದ ಮನೆಯಲ್ಲಿ ಈ ಒಂದು ಆಘಾತಕಾರಿ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಯಂಡಿಗೇರಿ ಗ್ರಾಮ ಸೊಸೆ ಮುತ್ತಕ್ಕ ಪೂಜಾರ ಸಮಾಧಿ ಮಾಡಲು ಮನೆಯಲ್ಲಿಯೇ ಗುಂಡಿ ತೋಡಿದ್ದಾರೆ. ಸುಮಾರು 5 ಅಡಿ ಅಗಲ 5 ಅಡಿ ಆಳದ ಗುಂಡಿ ತೋಡಿದ್ದ ಆರೋಪ ಕೇಳಿ ಬರುತ್ತಿದೆ. ಅತ್ತೆ, ಮಾವ,ನಾದಿನಿ, ವಿರುದ್ಧ ಸೊಸೆ ಮುತ್ತಕ್ಕ ಸಂಬಂಧಿಕರು ಈ ಒಂದು ಆರೋಪ ಮಾಡಿದ್ದಾರೆ. ಸೊಸೆ ಮುತ್ತಕ್ಕ ಪೂಜಾರಗಳನ್ನು ಬಲಿಕೊಡಲು ಸಂಚು ರೂಪಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಈ ವೇಳೆ ಸಂಬಂಧಿಕರು ಊರಿಗೆ ಬರುವ ವಿಚಾರ ತಿಳಿದ್ದು ಗುಂಡಿ ಮುಚ್ಚಿದ್ದಾರೆ. ಮೂರ ವಿರುದ್ಧ ಮುಟ್ಟಕ್ಕ ಸಹೋದರ ನಾಗರೆಡ್ಡಿ ಈ ಒಂದು ಆರೋಪ ಮಾಡುತ್ತಿದ್ದಾರೆ.…

Read More

ಬೆಂಗಳೂರು : ಮಾಜಿ ಸ್ಕೂಲ್ ಲವರ್ ಗೆ ಖಾಸಗಿ ವೀಡಿಯೋ ತೋರಿಸಿ ಹಣ ಪೀಕುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮೋಹನ್ ಕುಮಾರ್ ಬಂಧಿತ ಆರೋಪಿ. ಬೆಂಗಳೂರಿನ ಚಾಮರಾಜಪೇಟೆಯ 19 ವರ್ಷದ ಯುವತಿಗೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿ ಚಾಮರಾಜಪೇಟೆಯ 19 ವರ್ಷದ ಯುವತಿಗೆ ಬ್ಲ್ಯಾಕ್‌ಮೇಲ್ ಮಾಡಿ 2019ರಿಂದ 2.57 ಕೋಟಿ ರೂ.ಸುಲಿಗೆ ಮಾಡಿದ್ದಾನೆ ಎಂಬುದು ಗೊತ್ತಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.ದೇವನಹಳ್ಳಿಯ ಖಾಸಗಿ ಶಾಲೆಯಲ್ಲಿ ಸಂತ್ರಸ್ತೆ ಓದುತ್ತಿದ್ದ ವೇಳೆ ಆರೋಪಿಯ ಪರಿಚಯವಾಗಿದೆ. ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಅಲ್ಲದೆ, ಸಂತ್ರಸ್ತೆಯನ್ನು ಪುಸಲಾಯಿಸಿ ಪ್ರವಾಸಿ ತಾಣಗಳಿಗೆ ಕರೆದೊಯ್ದ ಆರೋಪಿ, ಮದುವೆಯಾಗುವುದಾಗಿ ನಂಬಿಸಿ ಆಕೆ ಜತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಆರೋಪಿಯು ಯುವತಿಯನ್ನು ಶಾಲೆಯಲ್ಲಿ ಓದುವಾಗಲೇ ರೆಸಾರ್ಟ್, ಪಬ್, ಪಾರ್ಟಿ, ಸಿನಿಮಾ ಹಾಗೂ ಪಾರ್ಕ್‌ ಎಂದೆಲ್ಲಾ ಕರೆದುಕೊಂಡು ಸುತ್ತಾಡಿದ್ದಾನೆ. ಇನ್ನು ಹುಡುಗಿ ಮನೆಯವರು ಕೋಟಿ ಕುಳ ಎಂಬುದನ್ನು ಅರಿತು ಹುಡುಗಿ ಕಡೆಯಿಂದಲೇ ಹಣ ಖರ್ಚು ಮಾಡಿಸಿದ್ದಾನೆ. ಇನ್ನು ಯುವತಿ ಅಪ್ರಾಪ್ತೆ…

Read More

ಮೈಸೂರು : ಮುಡಾ ಹಗರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದ್ದು, ಮುಡಾದ ಅಧಿಕಾರಿಗಳೇ ಭೂಗಳ್ಳರ ಜೊತೆ ಕೈಜೋಡಿಸಿರುವ ಶಂಕೆ ವ್ಯಕ್ತವಾಗಿದೆ.ಸೈಟ್ ಕ್ರಯ ಆಗುವ ಮುನ್ನವೇ ಸದಸ್ಯರಿಂದ ಸೇಲ್ ಅಗ್ರಿಮೆಂಟ್ ಆಗಿದೆ. ತನ್ನ ಹೆಸರಿಗೆ ಭೂಮಿ ಬರುವ ಒಂದು ತಿಂಗಳ ಮುನ್ನ ಸೆಲ್ ಅಗ್ರಿಮೆಂಟ್ ಆಗಿದೆ ಎಂದು ತಿಳಿದುಬಂದಿದೆ. ಚಾಮುಂಡಿ ನಗರದ ಸರ್ವೋದಯ ಸಂಘದ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡಲಾಗಿದ್ದು, ಸದಸ್ಯರ ಸೈಟ್ ಹಂಚಿಕೆಯಲ್ಲಿ ಬೇನಾಮಿ ವ್ಯಕ್ತಿಗಳ ಕೈವಾಡ ಇರುವುದು ಶಂಕೆ ವ್ಯಕ್ತವಾಗಿದೆ. 48 ನಿವೇಶನಗಳ ಪೈಕಿ ಹಲವು ನಿವೇಶನಗಳ ಅಗ್ರಿಮೆಂಟ್ ಆಗಿದೆ. ಮಂಜುನಾಥ್ ಎನ್ನುವ ವ್ಯಕ್ತಿ ಇದರಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಕಾರ್ತಿಕ ಬಡಾವಣೆ ಮಂಜುನಾಥ್ ನನ್ನು 50:50 ಅನುಪಾತದಲ್ಲಿ ಈಗಾಗಲೇ ಇಡಿ ವಿಚಾರಣೆಗೆ ಒಳಪಡಿಸಿದೆ. ಆದರೆ ಇದೀಗ ಸೈಟ್ ಹಂಚಿಕೆ ಮುನ್ನವೇ ಸೇಲ್ ಕುರಿತು ಮೊದಲೇ ಅಗ್ರಿಮೆಂಟ್ ಮಾಡಿಕೊಳ್ಳಲಾಗಿತ್ತು ಎನ್ನುವ ಸ್ಪೋಟಕ ವಿಷಯ ಬಯಲಾಗಿದೆ. ಸುನಿಲ್ ಕುಮಾರ್ ಎನ್ನುವವರಿಗೆ 2023 ನವೆಂಬರ್ 29 ರಲ್ಲಿ ಸೈಟ್ ಕ್ರಯ ಮಾಡಿಕೊಡಲಾಗಿತ್ತು. ನಿವೇಶನ…

Read More

ಧಾರವಾಡ : ಧಾರವಾಡದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗಿರೀಶ್ ಕರಡಿಗುಡ್ಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಧಾರವಾಡ ತಾಲೂಕಿನ ಗರಗ ಠಾಣೆಯ ಪೊಲೀಸರು ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಗಿರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಗರಗ ಠಾಣೆಯ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಖಂಡೊಬಾ ಪಟದಾರಿ (26), ಆಕಾಶ್ ಮಾದಪ್ಪನವರ (19), ಪ್ರಜ್ವಲ್ ವಡ್ಡರ್ (19) ಹಾಗೂ ಮಂಜುನಾಥ್ ಚಿಕ್ಕೋಪ್ಪ (20) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.ಡಿಸೆಂಬರ್ 3 ರಂದು ಧಾರವಾಡ ತಾಲೂಕಿನ ಗ್ರಾಮದಲ್ಲಿ ಉದ್ಯಮಿಯ ಕೊಲೆ ನಡೆದಿತ್ತು. ರಿಯಲ್ ಎಸ್ಟೇಟ್ ಉದ್ದಮಿ, ಗಿರೀಶ್ ಕರಡಿಗುಡ್ಡ ಅವರನ್ನು ಈ ನಾಲ್ವರು ಆರೋಪಿಗಳು ಮನೆಗೆ ನುಗ್ಗಿ ಭೀಕರವಾಗಿ ಹಲ್ಲೆ ಮಾಡಿದ್ದರು. A1 ಆರೋಪಿ ಖಂಡೊಬಾ ಗಿರೀಶ್ ಕರಡಿಗುಡ್ಡ ಅವರ ಪತ್ನಿಯ ಬೆನ್ನು ಬಿದ್ದಿದ್ದ, ಇದನ್ನು ತಿಳಿದು ಆರೋಪಿ ಖಂಡೋಭಾಗೆ ಗಿರೀಶ್ ಕರಡಿಗುಡ್ಡ ಥಳಿಸಿ ಬುದ್ಧಿ ಹೇಳಿದ್ದ. A2 ಆಕಾಶ್ A3 ಪ್ರಜ್ವಲ್…

Read More

ಚಿಕ್ಕಬಳ್ಳಾಪುರ : ಈ ಹಿಂದೆ ಬಿಜೆಪಿಯು ನನಗೆ ಸಚಿವ ಸ್ಥಾನದ ಆಫರ್ ನೀಡಿತು ಆದರೆ ನಾನು ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದೇನೆ ಹಾಗಾಗಿ ನನಗೆ ಸಂಪುಟ ಪುಣ ರಚನೆಯ ಸಂದರ್ಭದಲ್ಲಿ ಸಚಿವ ಸ್ಥಾನ ಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಕೇಳಲು ನನಗೆ ಹಕ್ಕಿದೆ. ನನಗೂ ಸಚಿವ ಸ್ಥಾನ ಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಶಾಸಕ ಸುಬ್ಬರಡ್ಡಿ ಹೇಳಿಕೆ ನೀಡಿದ್ದು, ಈ ಹಿಂದೆ ಬಿಜೆಪಿಯವರು ನನಗೆ ಸಚಿವ ಸ್ಥಾನದ ಆಫರ್ ಕೊಟ್ಟಿದ್ದರು. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಇದ್ದೆ ಎಂದು ಅವರು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. ಸಂಪುಟ ಪುಣೆ ನನಗೆ ಸಚಿವ ಸ್ಥಾನ ಕೊಡಲೇಬೇಕು ಸಿಎಂ ಹಾಗೂ ಡಿಸಿಎಂ ನನಗೆ ಸಚಿವ ಸ್ಥಾನ ನೀಡುವ ಭರವಸೆ ಇದೆ. ನಾನು ಎರಡು ಬಾರಿ ನಿಗಮ ಮಂಡಳಿ ಸ್ಥಾನ ತಿರಸ್ಕಾರ ಮಾಡಿದ್ದೇನೆ. ಚಿಕ್ಕಬಳ್ಳಾಪುರ, ಶಿಡ್ಲಘಟ್ಟ,…

Read More

ಕಲಬುರಗಿ : ಎರಡು ಕೋಮುಗಳ ನಡುವೆ ಕೋಮು ಭಾವನೆಗೆ ಧಕ್ಕೆ ಉಂಟು ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಲಬುರ್ಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಯಡ್ರಾಮಿಯಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರದ ಸುದ್ದಿಗೋಷ್ಠಿಯಲ್ಲಿ ಎರಡು ಕೋಮುಗಳ ನಡುವೆ ದ್ವೇಷ ಭಾವನೆ ಮೂಡಿಸುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಕಾರಣಕ್ಕೆ ಮಣಿಕಂಠ ರಾಠೋಡ ವಿರುದ್ದ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿರುವ ಮಣಿಕಂಠ ರಾಠೋಡನ ವಿರುದ್ದ ಕ್ರಮ ಕೈಗೊಳ್ಳುವಂತೆ ರಜಾ ಅಕಾಡೆಮಿಯ ಕಾರ್ಯದರ್ಶಿ ಮುಹಮ್ಮದ್ ಖಯಾಮ್ ಅಲಿ ಅವರು, ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Read More

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ಸಿನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್ ನವರಿಗೆ ಯಾವ ನೈತಿಕತೆಯೂ ಇಲ್ಲ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ. ಹಾಸನದಲ್ಲಿ ಗುರುವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ಜನಕಲ್ಯಾಣ ಸಮಾವೇಶದಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಉದ್ದೇಶಿಸಿ ಸಚಿವರು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಕಳೆದ ನಾಲ್ಕು ದಶಕಗಳಿಂದ ಕಳಂಕರಹಿತ ರಾಜಕಾರಣ ಮಾಡುತ್ತಿದ್ದಾರೆ. ಆದರೆ, ಇಂತಹ ಮುಖ್ಯಮಂತ್ರಿಯವರಿಗೆ ಮುಡಾ ಹಗರಣದ ಹೆಸರಿನಲ್ಲಿ ಕಳಂಕ ತರಲು ವಿರೋಧ ಪಕ್ಷದವರು ಯತ್ನಿಸುತ್ತಿದ್ದಾರೆ. ಇದರ ಒಳಸಂಚೇನು ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು ಕಿಡಿಕಾರಿದರು. ಮಹಿಳೆಯರಿಗೆ ಜೆಡಿಎಸ್ ಅಗೌರವ ಬಿಜಿಪಿ, ಜೆಡಿಎಸ್ ನವರಿಗೆ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಬಗ್ಗೆ ಮಾತಾಡುವುದಕ್ಕೆ ಯಾವುದೇ ನೈತಿಕತೆ ಇಲ್ಲ. ಮುಖ್ಯಮಂತ್ರಿ ಸ್ಥಾನ ಎರಡುವರೆ ಸಾವಿರ ಕೋಟಿಗಳಿಗೆ ಮಾರಾಟವಾಗಿತ್ತೆಂದು ಅವರ ಪಕ್ಷದ…

Read More

ಹಾಸನ : “ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಶಿವಕುಮಾರ್ ಅವರು ಮಾತನಾಡಿ “ಮೊದಲು ಹಾಸನಾಂಬೆ ತಾಯಿಯ ಪಾದಗಳಿಗೆ ಸಾಷ್ಟಾಂಗ ನಮನಗಳು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅದಿಕಾರಕ್ಕೆ ಬಂದಂತೆ. 25 ವರ್ಷಗಳ ನಂತರ ಹಾಸನದ ಮಹಾಜನತೆ ಕಾಂಗ್ರೆಸಿಗನನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದೀರಿ. ಈ ಭಾಗದ ಧ್ವನಿಯಾಗಲು, ನೊಂದ ತಾಯಂದಿರಿಗೆ ರಕ್ಷಣೆ ನೀಡಲು ಶ್ರೇಯಸ್ ಪಟೇಲ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ನಿಮಗೆ ನಮನಗಳು. ಸರ್ಕಾರದ ಶಕ್ತಿ ನೂರೆಂಟು, ಐದು ಗ್ಯಾರಂಟಿಗಳು ಪರ್ಮನೆಂಟು, 2028ರಲ್ಲಿ ನಾವೇ ಅಧಿಕಾರಕ್ಕೆ ಬರುವುದು ಹಂಡ್ರೆಡ್…

Read More