Author: kannadanewsnow05

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನರದೃಷ್ಟಿ ಬಿದ್ದರೆ ಕಲ್ಲೂ ಕೂಡಾ ಒಡೆಯುತ್ತದೆಮದು ಹೇಳುತ್ತಾರೆ. ಇದು ಅಕ್ಷರಶಃ ಸತ್ಯ. ಒಬ್ಬ ಮನುಷ್ಯ ಯಾವುದಾದರೂ ಒಂದು ನಿರ್ಮಾಣವನ್ನಾಗಲೀ,ಒಬ್ಬ ಮನುಷ್ಯನನ್ನಾಗಲೀ,ಗರ್ಭಧರಿಸಿದ ಸ್ತ್ರೀಯನ್ನಾಗಲೀ, ಏಕಾಗ್ರತೆಯಿಂದ ಕೆಲವು ಘಳಿಗೆ ನೋಡಿದರೆ ಆ ಮನುಷ್ಯನ ಮೇಲೆ ನಿರ್ಮಾಣದ ಮೇಲೆ ಆಮನುಷ್ಯನ ದೃಷ್ಟಿ ಪ್ರಭಾವ ಬೀರುತ್ತದೆ, ಮನಸ್ಸಿನಲ್ಲಿ ಒಳ್ಳೆಯ ಯೋಚನೆಯೊಂದಿಗೆ ನೋಡುವ ಮನುಷ್ಯನ ನೋಡದಿಂದ ಬರುವ ವೈಬ್ರೇಷನ್ಗೆ ಎಂತಹಾ ದೋಷವೂ ಉಂಟಾಗುವುದಿಲ್ಲ. ಅದೇ ಯಾರಾದರು ಮನಸ್ಸಿನಲ್ಲಿ ಕೆಟ್ಟ ಯೋಚನೆಯೊಂದಿಗೆ ನೋಡಿದರೆ ಆ ನೋಟದಿಂದ ಹೊರಬರುವ ವೈಬ್ರೇಷನ್ ಮನುಷ್ಯನನ್ನು ಅಥವಾ ಆ ನಿರ್ಮಾಣವನ್ನು ಹಾಳುಗೆಡವುತ್ತದೆ. ಇದನ್ನೇ ನರದೃಷ್ಟಿ ಎನ್ನುತ್ತಾರೆ, ಮನುಷ್ಯನಿಗೆ ತಗುಲಿದ ಈ ನರದೃಷ್ಟಿಯನ್ನು ತೊಲಗಿಸಿಕೊಳ್ಳಬೇಕೆಂದರೆ ಒಂದು ಸಣ್ಣ ಉಪಾಯವನ್ನು ಮಾಡಬೇಕು. ಸಾಸಿವೆ,ಬೆಳ್ಳುಳ್ಳಿ ಹಳಕುಗಳು, ಈರುಳ್ಳಿ ಸಿಪ್ಪೆ ಉಪ್ಪು,ಒಣಮೆಣಸಿನಕಾಯಿ ಈ ಎಲ್ಲಾ ಪದಾರ್ಥಗಳನ್ನು ಒಂದು ಪಾತ್ರೆಯಲ್ಲಿ ಹಾಕಿ ಒಲೆಯ ಮೇಲೆ ಇರಿಸಿ ಅವು ಸೀಯುವವರೆಗೂ ಬಿಡಬೇಕು. ನಂತರ ಆ…

Read More

ಬೆಂಗಳೂರು : ಕಳೆದ 2 ದಿನಗಳ ಹಿಂದೆ ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ ಬಳಿ ಸಹಾಯ ಕೇಳಿದ್ದಳು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ತಾನೇ ಆತ್ಮಹತ್ಯೆ ಮಾಡಿಕೊಳ್ಳಲು ಸೊಸೆ ವೈದ್ಯರ ಬಳಿ ಮಾತ್ರೆ ಕೇಳಿದ್ದಳು ಎಂದು ತಿಳಿದುಬಂದಿದೆ. ಹೌದು ಅತ್ತೆ ಸಾಯಿಸಲು ಮಾತ್ರೆ ಕೊಡಿ ಎಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಾನೇ ಸಾಯಲು ವೈದ್ಯರ ಬಳಿ ಮಾತ್ರ ಕೇಳಿದಳಂತೆ ಮಹಿಳೆ. ಮಾತ್ರೆ ಕೇಳಿದ ಮಹಿಳೆಯನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದೀಗ ಆಕೆ ವಿಚಾರಣೆ ನಡೆಸಿದಾಗ ವೈದ್ಯರಿಗೆ ಮೆಸೇಜ್ ಕಳಿಸಿದ್ದ ಕೊಳ್ಳೇಗಾಲ ಮೂಲದ ಸಹನ ಎಂದು ತಿಳಿದು ಬಂದಿದೆ. ಬೆಂಗಳೂರಿನ ಚೌಟ್ರಿಪಾಳ್ಯದಲ್ಲಿ ಸಹನ ವಾಸವಾಗಿದ್ದಳು.ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾಳೆ ಎಂಬುದರ ಕುರಿತು ಮಾಹಿತಿ ಸಿಕ್ಕಿದೆ. ಘಟನೆ ಹಿನ್ನೆಲೆ? ನನ್ನ ಅತ್ತೆ ದಿನ ನನಗೆ ಹಿಂಸೆ ನೀಡುತ್ತಿದ್ದಾರೆ, ಅವರಿಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಪುಟ್ಟ ಪುಟ್ಟ ಬಾಲಕಿಯರ ಮೇಲೆ ಮದರಸದಲ್ಲಿ ಪಾಪಿ ಒಬ್ಬ ಹಲ್ಲೆ ನಡೆಸಿದ್ದಾನೆ. ಬೆಂಗಳೂರಿನ ಮದರಸಾದಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಹೆಗಡೆ ನಗರದಲ್ಲಿರುವ ಮದರಸದಲ್ಲಿ ಈ ಒಂದು ಘಟನೆ ನಡೆದಿದೆ. ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ಕಚೇರಿಗೆ ಕರೆದು ಬಾಲಕಿಯರ ಮೇಲೆ ಹಲ್ಲೆ ನಡೆಸಲಾಗಿದೆ. ಅನ್ವರ್ ಅಲಿ ರಶೀದ್ ತಂದೆ ಹಸನ್ ಅಲಿ ನಡೆಸುತ್ತಿರುವ ಈ ಒಂದು ಮದರಸದಲ್ಲಿ ಬಾಲಕಿಯರ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ದೃಶ್ಯ ಕಂಡು ಪೋಷಕರಿಂದ ಮದರಸ ಮುಂದೆ ಗಲಾಟೆ ಮಾಡಿದ್ದು, ಮದರಸ ಪ್ರಿನ್ಸಿಪಲ್ ಸಹೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ. ಘಟನೆ ಸಂಭಂದ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯರ ಮೇಲೆ ಹಲ್ಲೆ ಮಾಡಿದ ಆರೋಪಿಯನ್ನು ಇದೀಗ ಕೊತ್ತನೂರು ಕಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಭೀಕರವಾದಂತಹ ಕೊಲೆಯಾಗಿದ್ದು, ಪ್ರೇಮಿಗಳಿಬ್ಬರು ಪ್ರವಾಸಕ್ಕೆ ಎಂದು ಚಿಕ್ಕಮಂಗಳೂರಿಗೆ ಬಂದಿದ್ದರು.ಈ ವೇಳೆ ಯುವಕ ಪ್ರೇಯಸಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಬಂದಿದ್ದ ಯುವಕ, ಯವತಿಯನ್ನು ಕಾರಿನಲ್ಲೇ ಸಾಯಿಸಿ ನಂತರ ಕಾಫಿತೋಟವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರಿನ ಪೂರ್ಣಿಮಳನ್ನು ಭದ್ರಾವತಿಯ ಮಧು ಎಂಬ ಪ್ರಿಯಕರ ಕೊಲೆಗೈದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇಂದು ಧಾರವಾಡ ಹೈಕೋರ್ಟ್ ಪೀಠದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಜಾರಿ ನಿರ್ದೇಶನಲಯ ಸಮಂತ್ ಚಾರಿ ಮಾಡಿದ್ದು ಈ ಒಂದು ಸಮಾಂತರದ್ದುಗೊಳಿಸುವಂತೆ ಸಿಎಂ ಪತ್ನಿ ಪಾರ್ವತಿ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಇಂದು ಧಾರವಾಡ ಹೈಕೋರ್ಟ್ ಪೀಠದಲ್ಲಿ ಸಿಎಂ ಪತ್ನಿ ಪಾರ್ವತಿ ಅವರ ರಿಟ್ ಅರ್ಜಿ ವಿಚಾರಣೆ ನಡೆಯಲಿದೆ. ಹೌದು ಮುಡಾ ಕೇಸ್ ಕುರಿತು ಇಡಿ ಸಮನ್ಸ್ ನೀಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ರಿಟ್ ಅರ್ಜಿ ಸಲ್ಲಿಸಿದ್ದರು. ಧಾರವಾಡದ ಹೈಕೋರ್ಟ್ ಪೀಠದಲ್ಲಿ ಇಂದು ಈ ಒಂದು ಅರ್ಜಿಯ ವಿಚಾರಣೆ ನಡೆಯಲಿದೆ ಸಚಿವ ಭೈರತಿ ಸುರೇಶ್ ಅರ್ಜಿಯೂ ಕೂಡ ಇಂದೇ ವಿಚಾರಣೆ ನಡೆಯಲಿದೆ. ಮುಡಾ ಸೈಟ್ ಹಂಚಿಕೆ ಸಂಬಂಧ ಚಾರಿ ನಿರ್ದೇಶನಲಯ ಇಬ್ಬರಿಗೂ ಸಮನ್ಸ್ ನೀಡಿತ್ತು. ಇಡಿ ಸಮನ್ಸ್ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅರ್ಜಿ ಸಲ್ಲಿಸಿದರು. ಕಳೆದ ವಿಚಾರಣೆಯ…

Read More

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಚಿಂದಿ ಆಯುತ್ತಿದ್ದ ಯುವತಿ ಹಾಗೂ ಬಾಲಕಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಇಬ್ಬರ ಮೇಲೆ ಅತ್ಯಾಚಾರ ಆಗಿ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಹೌದು ಚಿಂದಿ ಆಯುತಿದ್ದ ಯುವತಿ ಹಾಗೂ ಅಪ್ರಾಪ್ತ ಬಾಲಕಿ ಸಂಶಯಾಸ್ಪದವಾಗಿ ಸಾವನಪ್ಪಿದ್ದಾರೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ.ಯುವತಿ ಹಾಗೂ ಅಪ್ರಾಪ್ತ ಬಾಲಕಿಯ ಮೇಲೆ ರೇಪ್ ಮಾಡಿ ಕೊಲೆ ಗೈದಿರುವ ಶಂಕೆ ವ್ಯಕ್ತವಾಗಿದೆ. ಫೆಬ್ರವರಿ 12ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರವಾದ ದುರಂತ ಸಂಭವಿಸಿದ್ದು ಎರಡು ಅಂತಸ್ತಿನ ಮನೆ ಒಂದು ಏಕಾಏಕಿ ಕುಸಿದಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ತಿಪ್ಪಸಂದ್ರದಲ್ಲಿ ನಡೆದಿದೆ. ಪಕ್ಕದಲ್ಲಿ ಕಟ್ಟಡದ ಪಾಯ ತೆಗೆಯುವಾಗ ಈ ಒಂದು ಘಟನೆ ಸಂಭವಿಸಿದೆ ಮನೆಯಲ್ಲಿದ್ದವರನ್ನು ತಕ್ಷಣ ಪೊಲೀಸರು ಹೊರ ಕಳುಹಿಸಿದ್ದಾರೆ. ಮನೆಯಲ್ಲಿ ಯಾರಾದರೂ ಸಿಲುಕಿದ್ದಾರಾ ಎಂದು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಬಿಡು ಬಿಟ್ಟಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಯಾದಗಿರಿ : ಜಾತ್ರೆಯಲ್ಲಿ ಬ್ಯಾನರ್ ಹಾಕಿದಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನ ಬೀರನಕಲ್ ಗ್ರಾಮದಲ್ಲಿ ನಡೆದಿದೆ. ಬೀರನಕಲ್ ಗ್ರಾಮದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ಆಗಿದೆ. ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನ ಗ್ರಾಮ ದ್ಯಾಮವ್ವ ಜಾತ್ರೆಯLLI ಶುಭಾಶಯ ಕೋರಿ ಯುವಕರು ಬ್ಯಾನರ್ ಹಾಕಿದ್ದರು. ಬ್ಯಾನರ್ ಹಾಕಿದನ್ನು ಮತ್ತೊಂದು ಯುವಕರ ಗುಂಪು ಪ್ರಶ್ನಿಸಿದೆ. ಆಗ 2 ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಯುವಕರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಕಲ್ಲು ದೊಣ್ಣೆಗಳಿಂದ ಪರಸ್ಪರ ಬಡಿದಾಡಿಕೊಂಡಿದ್ದಾರೆ. 10 ಕ್ಕೂ ಹೆಚ್ಚು ಗಾಯಾಳುಗಳನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಪ್ಪಳ : ಕೊಪ್ಪಳದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ರಜೆಯ ಹಿನ್ನೆಲೆಯಲ್ಲಿ ಹೈದರಾಬಾದ್ ಮೂಲದ ವೈದ್ಯೆ ತನ್ನ ಸ್ನೇಹಿತರೊಂದಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಆಗಮಿಸಿದ್ದಳು. ಈ ವೇಳೆ ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.ನೀರಿನಲ್ಲಿ ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ ಮೋಹನ್ ರಾವ್ ಎಂದು ಗುರುತಿಸಲಾಗಿದೆ. ಅನನ್ಯ ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಕಳೆಯಲು ತಮ್ಮ ಸ್ನೇಹಿತರೊಂದಿಗೆ ಸಣಾಪುರ ಸಮೀಪ ಇರುವ ಖಾಸಗಿ ಗೆಸ್ಟ್​ ಹೌಸ್​ಗೆ ಮಂಗಳವಾರ ಸಂಜೆ ಬಂದಿದ್ದರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 8.30 ಗಂಟೆಗೆ ಈ ಗೆಸ್ಟ್ ಹೌಸ್ ಹಿಂಭಾಗದಲ್ಲಿರುವ ತುಂಗಭದ್ರಾ ನದಿಗೆ ಮೂವರು ಈಜಾಡಲು ಹೋಗಿದ್ದು, ಇದರಲ್ಲಿ ಡಾ. ಅನನ್ಯ ರಾವ್, ಎತ್ತರದ ಕಲ್ಲಿನ ಮೇಲಿಂದ ನೀರಿಗೆ ಜಿಗಿದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು ನಾಪತ್ತೆಯಾಗಿದ್ದಾರೆ. ಈ ಜಾಗ ಕಲ್ಲು-ಗುಂಡುಗಳಿಂದ ಕೂಡಿದ್ದು, ನೀರು ಕಲ್ಲುಗಳ ಮಧ್ಯೆ ಒಂದು ಕಿ.ಮೀ. ಗೂ ಅಧಿಕ ದೂರ…

Read More

ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಾಕ್ಷಾಧಾರಗಳ ಕೊರತೆ ಇದೆ ಎಂದು ತಿಳಿಸಿರುವ ಲೋಕಾಯುಕ್ತ ಪೊಲೀಸರು ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರು ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದೆ. ಇದೆ ವಿಚಾರಕ್ಕೆ ಸಂಬಂಧಪಟ್ಟಂತೆ ತನಿಖಾ ವರದಿಯನ್ನು ನಾಳೆ ಲೋಕಾಯುಕ್ತ ಪೊಲೀಸರು ಕೋರ್ಟಿಗೆ ಸಲ್ಲಿಸಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖಾ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿಗೆ, ಅದೇ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ಎನ್ನುವಂತೆ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ಬಗ್ಗೆ ಬಿ-ರಿಪೋರ್ಟ್ ಸಲ್ಲಿಸಲಿದ್ದಾರೆ ಎಂಬುದಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.ಬಿ ರಿಪೋರ್ಟ್ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು…

Read More