Author: kannadanewsnow05

ಮೈಸೂರು : ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಗೆ ನಿಷೇಧವಿದ್ದರೂ ಸಹ ಇದೀಗ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಸಮಿತಿಯ 5 ಸದಸ್ಯರನ್ನು ಪೊಲೀಸರೆ ಕರೆದೋಯ್ದು ಪುಷ್ಪರ್ಚನೆ ಸಲ್ಲಿಸಿರುವ ಘಟನೆ ನಡೆದಿದ್ದು, ಇದೀಗ ಪೊಲೀಸರೆ ಕಾನೂನು ಉಲ್ಲಂಘಿಸಿರುವ ಘಟನೆ ನಡೆದಿದೆ. ಹೌದು ಮಹಿಷ ದಸರಾ ಆಚರಣೆಯ ಸಮಿತಿ ಸದಸ್ಯರನ್ನು ಕರೆದೋಯ್ದ ಪೊಲೀಸರು ಕದ್ದು ಮುಚ್ಚಿ ಕರೆದೋಯ್ದು ಪುಷ್ಪಾರ್ಚನೆ ಮಾಡಿಸಿದ್ದಾರೆ.ಆ ಮೂಲಕ ಪೊಲೀಸರಿಂದಲೇ ಕಾನೂನು ಉಲಂಘನೆ ಆಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹೇಶಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗಿದೆ. ತಾವೇ ಹಾಕಿದ ನಿಷೇಧಾಜ್ಞೆಗೆ ಪೊಲೀಸರು ಎಳ್ಳು ನೀರು ಬಿಟ್ಟಿದ್ದಾರೆ. ಟೌನ್ ಹಾಲ್ ಹೊರತುಪಡಿಸಿ ಮೈಸೂರಲ್ಲಿ ಮಹಿಷ ಆಚರಣೆಗೆ ನಿಷೇಧಜ್ಞೆ ಹೇರಲಾಗಿತ್ತು. ಪೊಲೀಸ್ ಕಮಿಷನರ್ ನಿಷೇಧಾಜ್ಞೆ ಜಾರಿ ಮಾಡಿದ್ದರು. ಹೀಗಿದ್ದರೂ ಪೊಲೀಸರು ಇವರನ್ನು ಕರೆದುಕೊಂಡು ಹೋಗಿ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಆ ಮೂಲಕ ಪೊಲೀಸರಿಂದಲೇ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.

Read More

ಮೈಸೂರು : ಮನುಸ್ಮೃತಿಯಲ್ಲಿ ಶೂದ್ರರು ಅಂದರೆ ವೇಶ್ಯೆಗೆ ಹುಟ್ಟಿದವನು ಅಂತಿದೆ. ಮನುಸ್ಮೃತಿಯಲ್ಲಿ ಹೇಳಿರುವಂತೆ ನಾವು ಶೂದ್ರರೆಂದು ಒಪ್ಪಿಕೊಳ್ಳಬೇಕಾ? ಎಂದು ಮೈಸೂರಿನ ಮಹಿಷ ದಸರಾದಲ್ಲಿ ಸಾಹಿತಿ ಪ್ರೊಫೆಸರ್ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದರು. ಹಿಂದೂ ಧರ್ಮ ನಮ್ಮದಲ್ಲ ನಮಗೆ ಹಿಂದೂ ಧರ್ಮ ಬೇಕಾಗಿಲ್ಲ. ಎಲ್ಲರೂ ಬುದ್ಧ ಗುರುಗಳನ್ನು ನಂಬಿ. ನಾನು ಹೇಳಿದ್ದನ್ನು ನಂಬಿ ಎಂದು ಗೌತಮ ಬುದ್ಧ ಹೇಳಲ್ಲ. ನಾನು ಹೇಳಿದ್ದು ಕೇಳದಿದ್ದರೆ ಸ್ವರ್ಗ ಸಿಗಲ್ಲವೆಂದು ಏಸು ಹೇಳುತ್ತಾರೆ. ನನ್ನ ಮಾತು ಕೇಳದಿದ್ದರೆ ಮೋಕ್ಷ ಸಿಗಲ್ಲವೆಂದು ಪ್ರವಾದಿ ಹೇಳುತ್ತಾರೆ. ನಾನು ಹೇಳಿದ್ದರೂ ಕೇಳದಿದ್ದರೆ ನರಕಕ್ಕೆ ಹೋಗುತ್ತೀರೆಂದು ಕೃಷ್ಣ ಹೇಳುತ್ತಾನೆ. ಶೂದ್ರರು ವೇಶ್ಯೆಗೆ ಹುಟ್ಟಿದವರೆಂದು ಹೇಳುವ ಧರ್ಮದಲ್ಲಿ ಇರಬಾರದು. ನಾವು ಬೌದ್ಧ ಧರ್ಮಕ್ಕೆ ಹೋಗಬೇಕು ಎಂದು ಪ್ರೊಫೆಸರ್ ಭಗವಾನ್ ತಿಳಿಸಿದರು. ಶೂದ್ರರು ವೇಶ್ಯೆ ಮಕ್ಕಳೆಂದು ಹೇಳುವ ಧರ್ಮಕ್ಕೆ ಎಕ್ಕಡಲ್ಲಿ ಹೊಡಿಬೇಕು. ಶೂದ್ರರು ಎಂಬ ಗುಲಾಮರನ್ನು ಎಚ್ಚರಿಸಬೇಕು. ಯಾರು ಹೀನನೂ ಆಗಿದ್ದಾನೆ, ಅವನು ಹಿಂದೂ. ಯಾರೂ ಹಿಂದೂ ಆಗಬಾರದು. ಜ್ಞಾನದ ಹಸಿವು ಇಲ್ಲದ ಕಾರಣ…

Read More

ಜಮ್ಮು ಕಾಶ್ಮೀರ : ಇಂದು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದ ಭಾಷಣದ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದಿರುವ ಘಟನೆ ನಡೆದಿತ್ತು. ಬಳಿಕ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ನನಗೆ 83 ವರ್ಷ, ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವವರೆಗೂ ನಾನು ಬದುಕುತ್ತೇನೆ ಎಂದು ತಿಳಿಸಿದರು. ಜಮ್ಮು ಕಾಶ್ಮೀರದ ಕಥುವಾದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ನನಗೆ ಈಗ 83 ವರ್ಷ. ನಾನು ಇಷ್ಟು ಬೇಗ ಸಾಯುವುದಿಲ್ಲ ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವವರೆಗೂ ನಾನು ಬದುಕುತ್ತೇನೆ. ಚುನಾವಣಾ ರ‍್ಯಾಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು. ಜಮ್ಮು ಕಾಶ್ಮೀರದ ಕಥುವಾದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಮರು ಸ್ಥಾಪಿಸಲು ಹೋರಾಡುತ್ತೇವೆ ಎಂದು ತಿಳಿಸಿದರು. ಭಾಷಣದ ವೇಳೆ ಅಸ್ವಸ್ಥ! ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಜಮ್ಮು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಈ…

Read More

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ಅವರ ವಾಕ್ಸಮರ ತಾರಕಕ್ಕೆ ಏರಿದ್ದು, ಈ ಒಂದು ವಿಚಾರವಾಗಿ ಹೆಚ್‍ಡಿ ಕುಮಾರಸ್ವಾಮಿ ಕೆಪಿಸಿಸಿ ಕಚೇರಿಯಲ್ಲಿ ಲೆಟರ್ ಲೀಕ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಒಂದು ಆರೋಪಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕುಮಾರಸ್ವಾಮಿ ಅವರ ಹತ್ತಿರ ಏನು ದಾಖಲೆ ಇದೆಯೋ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಪತ್ರ ಬರೆದ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಲೆಟರ್ ಲಿಕ್ ಮಾಡಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು. ಇದೀಗ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಅವರು ಏನು ಮಾತನಾಡುತ್ತಿದ್ದಾರೆ ಎಂದು ಅವರಿಗೆ ಗೊತ್ತಿಲ್ಲ. ಕೆಪಿಸಿಸಿಗೂ ಎಡಿಜಿಪಿ ಚಂದ್ರಶೇಖರ್ ಗೂ ಏನು ಸಂಬಂಧ? ಎಂದು ಪ್ರಶ್ನಿಸಿದರು. ನಾನು ನಿನ್ನೆ ಬೆಂಗಳೂರಿನಲ್ಲಿ ಇರಲಿಲ್ಲ. ನಾನು ಸಾತನೂರು ಹಾಗೂ…

Read More

ದಾವಣಗೆರೆ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ವಿಪಕ್ಷಗಳು ಅಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಹೊಸ ಬಾಂಬ್ ಒಂದನ್ನು ಸಿಡಿಸಿದ್ದು, ಕೆಲವರು ಸಿಎಂ ಸ್ಥಾನಕ್ಕಾಗಿ ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಇಂದು ದಾವಣಗೆರೆಯಲ್ಲಿ ಮಜಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವರು ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ.ಇದರಲ್ಲಿ ಕಾಂಗ್ರೆಸ್​ನವರೂ ಇದ್ದಾರೆ, ಬೇರೆ ಪಕ್ಷದವರೂ ಇದ್ದಾರೆ. ಸಾವಿರ ಕೋಟಿ ಹಣ ಇಟ್ಟುಕೊಂಡು ಸಿಎಂ ಆಗಲು ಸಿದ್ಧರಿದ್ದಾರೆ ಎಂದು ಸ್ಪೋಟಕ ವಾದಂತಹ ಹೇಳಿಕೆಯನ್ನು ನೀಡಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತ ಇದೆ. ಪಕ್ಷದ ಗೊಂದಲಗಳ ಬಗ್ಗೆ ಹೈಕಮಾಂಡ್​ಗೆ ಮಾಹಿತಿ ರವಾನೆ ಮಾಡಲಾಗಿದೆ. ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ನಾವು ಹೆಚ್ಚು ಮಾತಾಡಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಯಿಸುವ ಅಧಿಕಾರ ನಮಗಿಲ್ಲ. ಹೈಕಮಾಂಡ್​ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ಟೆನ್ಶನ್ ಆಗಿದ್ದಾರೆ ಎಂದು ಹೇಳಲಾಗುತ್ತಿತ್ತು ಆದರೆ ಅವರಿಗೆ ಯಾವುದೇ ಭಯವಿಲ್ಲದೆ, ಮೈಸೂರು ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಇದೀಗ ಜಾತಿ ಗಣತಿ ವರದಿಯ ಕುರಿತು ಮಾತನಾಡಿದ್ದು, ಜಾತಿಗಣತಿ ವರದಿ ನಮ್ಮ ಪಕ್ಷದ ಅಜೆಂಡವಾಗಿದ್ದು, ಅದನ್ನು ಮುಂದೆ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಜಾತಿ ಗಣತಿ ವರದಿ ನನ್ನ ಕೈ ಸೇರಿದೆ. ನಾನು ಇನ್ನು ಸಂಪೂರ್ಣವಾಗಿ ನೋಡಿಲ್ಲ. ಮುಂದೆ ಜಾತಿಗಣತಿ ವರದಿ ಸಂಪುಟದ ಮುಂದೆ ಇಟ್ಟು ಜಾರಿಗೊಳಿಸುತ್ತೇನೆ ಜಾತಿಗಣತಿ ಜಾರಿ ನಮ್ಮ ಪಕ್ಷದ ಅಜೆಂಡವಾಗಿದೆ. ಹಾಗಾಗಿ ಅದನ್ನು ಜಾರಿಗೆ ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ..

Read More

ಮೈಸೂರು : ಈ ಬಾರಿ ಮೈಸೂರು ದಸರಾಗೆ ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ಎಲ್ಲಾ ಹಂತದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಇದೀಗ ಇಂದು ದಸರಾ ಮಹೋತ್ಸವದ ವೇಳೆ ಭಾಗವಹಿಸುವ ಆನೆಗಳಿಗೆ ಕುಶಾಲು ತೋಪು ಸಿಡಿಸಿ ತಾಲಿಮು ನಡೆಸುವ ವೇಳೆ ಭಾರಿ ಅನಾಹುತ ಒಂದು ನಡೆದಿದೆ. ಹೌದು ವಿಶ್ವವಿಖ್ಯಾತ ಮೈಸೂರು ದಸರಾ ಗಜಪಡೆಗೆ ಕುಶಾಲತೋಪು ಸಿಡಿಸಿ ತಾಲಿಮು ಮೂಡಿಸಲಾಗುತ್ತಿತ್ತು. ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಈ ಒಂದು ತಾಲಿಮು ನಡೆಸಲಾಗುತ್ತಿತ್ತು. ಸದ್ದಿಗೆ ಬೆದರಿ ಕಾವಾಡಿಯನ್ನೇ ದಂತದಿಂದ ಹೆಣ್ಣಾಣೆ ಒಂದು ಎತ್ತಿದೆ. ಈ ವೇಳೆ ಹರಸಾಹಸ್ಪಟ್ಟು ಕಾವಾಡಿ ಹೆಣ್ಣಾಣೆಯನ್ನು ನಿಯಂತ್ರಿಸಿದ್ದಾನೆ.ಸ್ವಲ್ಪ ಹೊತ್ತಿನ ನಂತರ ಹೆಣ್ಣಾನೇ ಶಾಂತವಾಗಿದೆ.

Read More

ಶ್ರೀನಗರ : ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವೇದಿಕೆ ಮೇಲೆ ಬಾಷಣ ಮಾಡುತ್ತಿದ್ದಾಗ ಏಕಾಏಕಿ ಅಸ್ವಸ್ಥರಾಗಿ ಕುಸಿದಿರುವ ಘಟನೆ ನಡೆದಿದೆ. ಹೌದು ಇಂದು ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಿದ್ದಾರೆ.ಇಂದು ಪ್ರಚಾರ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬೀಳುತ್ತಿದ್ದರು. ಕೂಡಲೇ ಅಕ್ಕಪಕ್ಕದಲ್ಲಿದ್ದವರು ಅವರನ್ನು ತಡೆದು ನಿಲ್ಲಿಸಿದ್ದಾರೆ. ಕೂಡಲೇ ಅವರಿಗೆ ನೀರು ಕುಡಿಸಿದ್ದಾರೆ.ಈ ವೇಳೆ ಸಾವರಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ನಂತರ ಕುರ್ಚಿಯ ಮೇಲೆ ಕುಳಿತುಕೊಂಡು ಭಾಷಣ ಮುಂದುವರಿಸಿದರು.

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ಉದೇಶ ನೇತೃತ್ವದಲ್ಲಿ ನಾಲ್ಕು ತಂಡಗಳು ರಚನೆಯಾಗಿದ್ದು, ಈ ಕುರಿತಾಗಿ ಲೋಕಾಯುಕ್ತ ತನಿಖೆಯಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು. ಲೋಕಾಯುಕ್ತ ಎಡಿಜಿಪಿ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ನಡುವಿನ ಗುದ್ದಾಟದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಎಚ್‌ಡಿ ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Read More

ನವದೆಹಲಿ : ಚುನಾವಣಾ ಬಾಂಡ್ ಹೆಸರಲ್ಲಿ ವಸೂಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಮೇಲೆ ಎಫ್ಐಆರ್ ದಾಖಲಾಗಿದೆ. ಹಾಗಾಗಿ ಕೂಡಲೇ ಅವರು ರಾಜಿನಾಮೆ ನೀಡಲೇಬೇಕು ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನುಸಿಂಘ್ವಿ ಆಗ್ರಹಿಸಿದರು. ನವದೆಹಲಿಯಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಅನ್ನೋದು ಬಿಜೆಪಿಯ ವಸೂಲಿಯ ಒಂದು ಮಾರ್ಗ. ಮಹಾ ಷಡ್ಯಂತ್ರದ ಹಿಂದೆ 8,000 ಕೋಟಿ ರೂಪಾಯಿ ವಸೂಲಿ ಕಥೆ ಇದೆ. ಎಫ್ಐಆರ್ ದಾಖಲಾಗಿದೆ. ನಿರ್ಮಲಾ ಸೀತಾರಾಮನ್ ವಿರುದ್ಧ ಸಮನ್ಸ್ ಜಾರಿ ಆಗಲೇಬೇಕು. ಅದಾದ ಮೇಲೆ ವಿಚಾರಣೆ ಬಳಿಕ ಬಂಧನ ಆಗಲೇಬೇಕು. ಇದಕ್ಕಿಂತ ಫಿಟ್ ಕೇಸ್ ಇನ್ನೊಂದು ಇಲ್ಲ. ಹೀಗಾಗಿ ಈ ಕೇಸ್ ನಲ್ಲಿ ಸಚಿವೆ ನಿರ್ಮಲ ಸೀತಾರಾಮನ್ ರಾಜೀನಾಮೆ ಕೊಡಲೇಬೇಕು ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನುಸಿಂಘ್ವಿ ಆಗ್ರಹಿಸಿದರು. ಹಣಕಾಸು ಸಚಿವರು ಒಬ್ಬರೇ ಮಾಡಲು ಅವರಿಗೆ ಧೈರ್ಯ ಇಲ್ಲ. ಯಾರ ಆದೇಶ ಮತ್ತು ನಿರ್ದೇಶನ ಮೇಲೆ ಆಗಿದೆ ಎಲ್ಲರಿಗೂ ಗೊತ್ತಿದೆ. RBI ಪತ್ರ ಬರೆದರೆ ಸರ್ಕಾರ ಅದನ್ನು…

Read More