Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎನ್.ವಿ ಅಂಜಾರಿಯ, ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದು, ಅಲ್ಲದೇ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದರು. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಆರಂಭವಾದ ವೇಳೆ ಮೇಲ್ಮನವಿಯಲ್ಲಿ ನೋಟಿಸ್ ಇನ್ನೂ ಜಾರಿಯಲಿಲ್ಲ. ಮೊದಲು ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ ವಾದಿಸುತ್ತಿದ್ದು, ಏಕ ಸದಸ್ಯ ಪೀಠದ ಆದೇಶದಲ್ಲಿನ ಲೋಕವನ್ನು ತೋರಿಸುತ್ತೇನೆ 17ಎ ನಿಯಮವನ್ನು ಸಂಪೂರ್ಣವಾಗಿ ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ಪೊಲೀಸ್ ಅಧಿಕಾರಿ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎನ್.ವಿ ಅಂಜಾರಿಯ, ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯ ಅಭಿಪ್ರಾಯ ತಿಳಿಸಿದರು. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಆರಂಭವಾದ ವೇಳೆ ಮೇಲ್ಮನವಿಯಲ್ಲಿ ನೋಟಿಸ್ ಇನ್ನೂ ಜಾರಿಯಲಿಲ್ಲ. ಮೊದಲು ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರ ವಕೀಲರು, ಹೈಕೋರ್ಟ್ ಏಕ ಸದಸ್ಯ ಪೀಠ ಕೇವಲ ನೋಟಿಸ್ ಜಾರಿಗೊಳಿಸಿದೆ. ಅಲ್ಲಿನ ವಿಚಾರಣೆಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ…
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಕೊಲೆ ಆರೋಪಿ ನೌಷದ್ ಮನೆಯ ಮೇಲೆ ಐವರು NIA ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಧಿಕಾರಿಗಳ ದಾಳಿಯ ಮಾಹಿತಿಯನ್ನು ತಿಳಿದ ಆರೋಪಿಯ ಕುಟುಂಬಸ್ಥರು ಮನೆ ಲಾಕ್ ಮಾಡಿ ಪರಾರಿಯಾಗಿದ್ದಾರೆ. ಹೌದು ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ನೌಷದ್ ಮನೆಯ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಮನೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐವರು ಅಧಿಕಾರಿಗಳಿಂದ ಮನೆಯ ಮೇಲೆ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ದಾಳಿ ವಿಚಾರ ತಿಳಿದು ಮನೆಯನ್ನು ಲಾಕ್ ಮಾಡಿಕೊಂಡು ಕುಟುಂಬ ಪರಾರಿಯಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯಾಗಿರುವ ನೌಷದ, ಬೆಳ್ತಂಗಡಿ ಠಾಣೆಯ ಇಬ್ಬರು ಪೊಲೀಸರ ಜೊತೆಗೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲದೇ ಆರೋಪಿ ನೌಷದ್ ಪತ್ತೆಗಾಗಿ 2 ಲಕ್ಷ ರಿವಾರ್ಡ್ ಘೋಷಿಸಿದ್ದಾರೆ.
ಬೆಂಗಳೂರು : ಇಂದು ಹಾಸನದ ಎಸ್ಎಮ್ ಕೃಷ್ಣ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ವೇದಿಕೆ ಮುಂಭಾಗ ಜಮಾಯಿಸಿದ್ದಾರೆ. ಇದರ ಮಧ್ಯ ಇಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನಲ್ಲಿ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಿದ ವಿಚಾರಣೆ ಕೂಡ ನಡೆಯಲಿದೆ. ಹೌದು ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಯಲಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನದ ಜನ ಕಲ್ಯಾಣ ಸಮಾವೇಶಕ್ಕೂ ತೆರಳುವ ಮುಂಚೆ ಆಪ್ತ ಸಚಿವರ ಜೊತೆಗೆ ಹಾಗೂ ಕಾನೂನು ತಜ್ಞರ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಇಂದು ಬೆಂಗಳೂರಿನ ತಾಜ್ ವೆಸ್ಟ್ ಹೋಟೆಲ್ ನಲ್ಲಿ…
ಬೆಂಗಳೂರು : ಡಿಕೆ ಶಿವಕುಮಾರ್ ಅವರ ಅಧಿಕಾರ ಹಂಚಿಕೆ ಒಪ್ಪಂದದ ಹೇಳಿಕೆ ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ಚರ್ಚೆ ಹುಟ್ಟುಹಾಕಿದೆ. ಯಾವುದೇ ಒಪ್ಪಂದವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಒಪ್ಪಂದ ಹೇಳಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಪ್ಪಂದ ಇದ್ದರೆ ಅವರಿಬ್ಬರೇ ಸರ್ಕಾರ ನಡೆಸಲಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಒಪ್ಪಂದ ಆಗಿದೆ ಎಂದು ಡಿಕೆ ಶಿವಕುಮಾರ್ ಯಾವ ಅರ್ಥದಲ್ಲಿ ಹೇಳಿದರು ನನಗೆ ಗೊತ್ತಿಲ್ಲ. ದೆಹಲಿಯಲ್ಲಿ ಮೂರ್ನಾಲ್ಕು ಜನರಿಗೆ ನಾನು ಕೇಳಿದೆ ಹಾಗೂ ಇಲ್ಲೂ ಕೇಳಿದೆ ಯಾವುದೇ ಒಪ್ಪಂದ ಆಗಿಲ್ಲ ಎಂದು ಹೇಳಿದ್ದಾರೆ. ಒಪ್ಪಂದ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಣೆ ನೀಡಿದ್ದಾರೆ. ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಲಿ ಬಿಡಿ. ಬೇರೆಯವರು ಇರುವುದೇ ಬೇಡವಾ ಎಂದು ಪ್ರಶ್ನಿಸಿದ್ದಾರೆ. ಜನ ಕಲ್ಯಾಣ ಸಮಾವೇಶ ವಿಚಾರವಾಗಿ ಮಾತನಾಡಿದ ಅವರು, ಜನ ಸ್ವಾಭಿಮಾನಿ ಒಕ್ಕೂಟಗಳನ್ನು ಮಾಡಿಕೊಂಡಿದ್ದಾರೆ. ಅವರು…
ಬೆಂಗಳೂರು : ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಒಡೆದು ಹಾಕಲು ಕನಸಿನಲ್ಲಿ ಯೇಸು ಹೇಳಿದ್ದ ಎಂದು ಕಿಡಿಗೇಡಿಯೊಬ್ಬ ಸ್ವಾಮೀಜಿಯವರ ಪುತ್ಥಳಿಯನ್ನು ಒಡೆದು ವಿರೂಪಗೊಳಿಸಿದ್ದ, ಇದೀಗ ಆರೋಪಿಯನ್ನು ಬೆಂಗಳೂರಿನ ಗಿರಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಾಜ್ ಶಿವು ಎಂದು ಗುರುತಿಸಲಾಗಿದ್ದು, ಕಳೆದ ಶನಿವಾರ ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ.ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ. ಏಸು ಹೇಳಿದ್ದಕ್ಕೆ ಶಿವಕುಮಾರ್ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. 7 ವರ್ಷಗಳ ಹಿಂದೆ ರಾಜ್ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ಹಿಂದೂ ದೇವತೆಗಳು, ಹಿಂದೂ ಧರ್ಮದ ಸಂತರು, ಸನ್ಯಾಸಿಗಳ ಮೇಲೆ ದ್ವೇಷ ಸಾಧಿಸುತ್ತಿದ್ದ. ಶನಿವಾರ ರಾತ್ರಿ ಸುತ್ತಿಗೆ ಸಮೇತ ಆರೋಪಿ ಬಂದು, ರಾತ್ರಿ ಯಾರು ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಎಸ್ಕೇಪ್ ಆಗಿದ್ದ. ಅಲ್ಲದೆ ಇದರ…
ನವದೆಹಲಿ : ಹಾಸನದಲ್ಲಿ ಕಾಂಗ್ರೆಸ್ ಪಕ್ಷದಿಂದ ಜನಕಲ್ಯಾಣ ಸಮಾವೇಶ ಮಾಡುತ್ತಿರುವ ವಿಚಾರವಾಗಿ, ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದು,ಕಾಂಗ್ರೆಸ್ನವರು ಎಷ್ಟು ಸಮಾವೇಶಗಳನ್ನು ಮಾಡುತ್ತಾರೋ ಮಾಡಲಿ ಆದರೆ 2028 ರಲ್ಲಿ ಎಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು 10 ಸಮಾವೇಶ ಮಾಡಲಿ ನಾವು ಹೆದರುವುದಿಲ್ಲ. ಹಾಸನ ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಏನು? ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗಲೂ ಕ್ಷೇತ್ರಕ್ಕೆ ಏನು ಮಾಡಿಲ್ಲ. ಕಾಂಗ್ರೆಸ್ ನವರಿಗೆ ಹಾಸನದಲ್ಲಿ ಒಂದು ಫ್ಲೈ ಓವರ್ ಮಾಡಲು ಆಗಿಲ್ಲ. ಹಾಸನಕ್ಕೆ ಮಂಜೂರಾಗಿದ್ದ ರೈಲ್ವೆ ಯೋಜನೆಯನ್ನು ಸಹ ತಡೆದಿದ್ದಾರೆ ಅಧಿಕಾರದಲ್ಲಿರುವ ಕಾಂಗ್ರೆಸ್ ಹಾಸನದ ಅಭಿವೃದ್ಧಿಗೆ ಕೆಲಸ ಮಾಡಲಿ ಎಂದರು. ಅಧಿಕಾರ ಇಲ್ಲದಾಗ ಕೈಕಾಲು ಹಿಡಿದುಕೊಳ್ಳುತ್ತಾರೆ. ಕಳೆದ 2018 ರಲ್ಲಿ ನಮ್ಮ ಪಕ್ಷದ ಶಾಸಕರನ್ನು ಕರೆದುಕೊಂಡು ಹೋದರು. ಆಮೇಲೆ ಬಂದು ಕಾಂಗ್ರೆಸ್ನವರು ನಮ್ಮ ಕೈ ಕಾಲು ಹಿಡಿದರು.…
ಹಾಸನ : ವಿಪಕ್ಷಗಳಿಗೆ ಕೌಂಟರ್ ನೀಡಲು, ಇಂದು ಹಾಸನದಲ್ಲಿ ಕಾಂಗ್ರೆಸ್ ಪಕ್ಷದಿಂದ ಅರಸಿಕೆರೆ ರಸ್ತೆಯಲ್ಲಿರುವ ಎಸ್ಎಂ ಕೃಷ್ಣ ನಗರದಲ್ಲಿ ಜನಕಲ್ಯಾಣ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಒಂದು ಸಮಾವೇಶಕ್ಕೆ ಈಗಾಗಲೇ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಸುಮಾರು ಮೂರು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ಈಗಾಗಲೇ ಉತ್ತರ ಕರ್ನಾಟಕ ಜಿಲ್ಲೆಗಳಿಂದ ಸಿದ್ದರಾಮಯ್ಯ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಬೆಳಗಾವಿ, ಯಾದಗಿರಿ, ರಾಯಚೂರು, ಕಲ್ಬುರ್ಗಿ, ಸೇರಿದಂತೆ ಅನೇಕ ಕಡೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅಪ್ಪಟ ಅಭಿಮಾನಿಗಳು ಮುಂದಿನ 5 ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯನವರೇ ಸಿಎಂ ಎಂದು ಘೋಷಣೆ ಕೂಗಿದರು. ಜೈ ಸಿದ್ದರಾಮಯ್ಯ, 5 ವರ್ಷಗಳವರೆಗೆ ಸಿಎಂ ಆಗಿ ಸಿದ್ದರಾಮಯ್ಯರೆ ಮುಂದುವರೆಯಲಿದ್ದಾರೆ ಎಂದು ಘೋಷಣೆ ಕೂಗಿದರು.ಈಗಾಗ್ಲೇ ಸಿದ್ದರಾಮೋತ್ಸವದ ವೇದಿಕೆ ಬಳಿ ಜನರು ಜಮಾಯಿಸುತ್ತಿದ್ದಾರೆ. ಸುಮಾರು 3 ಲಕ್ಷಕ್ಕೂ ಹೆಚ್ಚು ಜನರು ಅಧಿಕ ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಸಮಾವೇಶ ವೇದಿಕೆಯಲ್ಲಿ ಕಲಾವಿದ ರಿಂದ ಚಂಡೆ ಪ್ರದರ್ಶನವಾಗುತ್ತಿದ್ದು ಪ್ರಧಾನ ವೇದಿಕೆಯಲ್ಲಿ ಕಲಾವಿದರು ಚಂಡೆ…
ಬೆಳಗಾವಿ : ಪ್ರೀತಿ ಮಾಡಿದ ಜೋಡಿಗಳಿಗೆ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ, ಪ್ರಿಯತಮೆಯ ತಾಯಿ ಹಾಗೂ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದಲ್ಲಿ ಈ ಒಂದು ಬರ್ಬರ ಕೊಲೆ ನಡೆದಿದೆ. ಹೌದು ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಕೊಚ್ಚಿ ತಾಯಿ ಮಗನ ಭೀಕರ ಕೊಲೆಯಾಗಿದ್ದು, ಮಂಗಲಾ ನಾಯಕ (45) ಪುತ್ರ ಪ್ರಜ್ವಲ್ ನಾಯಕ್ (18)ಕೊಲೆಯಾದ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮಂಗಲಾ ಪುತ್ರಿ ಪ್ರಾಜಕ್ತಾ ಮತ್ತು ಆರೋಪಿ ರವಿ ಪ್ರೀತಿಸುತ್ತಿದ್ದರು. ಪ್ರಾಜಕ್ತಾ ರವಿ ಲವ್ ಮ್ಯಾರೇಜ್ ಗೆ ತಾಯಿ ಮಂಗಲ ವಿರೋಧಿಸಿದ್ದರು. ಈ ಹಿನ್ನೆಲೆ ಸಿಟ್ಟಿಗೆದ್ದ ರವಿ ಮದುವೆಗೆ ನಿರಾಕರಿಸಿದ್ದಕ್ಕೆ ಮಗಳ ಪ್ರಿಯಕರ ರವಿಯಿಂದ ಈ ಒಂದು ಕೃತ್ಯ ನಡೆದಿದೆ.ಕೊಲೆಗೆ ಸಂಬಂಧಿಸಿದಂತೆ ರವಿ ಮತ್ತು ಪ್ರೇಯಸಿ ಪ್ರಾಜಕ್ತ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಭಂದಿಸಿದಂತೆ ನಿಪ್ಪಾಣಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಎಷ್ಟೇ ಸಂಚಾರಿ ಕಠಿಣ ನಿಯಮಗಳನ್ನು ತಂದರು, ಅಪಘಾತಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ಬಳಿ ಹಿಟ್ ಅಂಡ್ ರನ್ ಗೆ ಪಾದಚಾರಿ ಸಾವನ್ನಪ್ಪಿದ್ದಾರೆ. ಹೌದು ಕೆಸ್ತೂರು ಗೇಟ್ ಬಳಿ ಹಿಟ್ ಅಂಡ್ ರನ್ನಿಗೆ ನರಸಿಂಹಮೂರ್ತಿ (63) ಎನ್ನುವ ಪಾದಾಚಾರಿ ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











