Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಧಿಕಾರವು (KEA) ಸಿಹಿ ಸುದ್ದಿ ನೀಡಿದ್ದು, ಮಾಸ್ಟರ್ ಆಫ್ ಆರ್ಕಿಟೆಕ್ಚರ್ ಗೆ ಪ್ರವೇಶ ಪಡೆಯಲು, ಯಾವುದೇ ಪ್ರತ್ಯೇಕವಾಗಿ ಪರೀಕ್ಷೆ ಇಲ್ಲ. ರಾಷ್ಟ್ರಮಟ್ಟದಲ್ಲಿ ನಡೆಸುವ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಅರ್ಹತಾ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಸ್ನಾತಕೋತರ ಆರ್ಕಿಟೆಕ್ಚರ್ ಪದವಿಗೆ ಪ್ರವೇಶ ಒಡೆಯಬಹುದು ಎಂದು ತಿಳಿಸಿದೆ. ಹೌದು ಇದುವರೆಗೂ ಪ್ರಾಧಿಕಾ ರವೇ ಪ್ರವೇಶ ಪರೀಕ್ಷೆ (PG CET) ಮಾಡಿ, ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತಿತ್ತು. ಆದರೆ ಈ ವರ್ಷದಿಂದ ನಿಯಮ ಬದಲಿಸಿದ್ದು, ಆಸಕ್ತರು ರಾಷ್ಟ್ರಮಟ್ಟದ ಪರೀಕ್ಷೆ ತೆಗೆದುಕೊಂಡು, ಇಲ್ಲಿನ ಸೀಟುಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಾಧಿಕಾರ ಯಾವುದೇ ಪ್ರವೇಶ ಪರೀಕ್ಷೆ ನಡೆಸು ವುದಿಲ್ಲ. ಹೀಗಾಗಿ ಆಸಕ್ತರು ರಾಷ್ಟ್ರಮಟ್ಟದ ಪರೀಕ್ಷೆ ತೆಗೆದು ಕೊಳ್ಳಲು ಕೋರಲಾಗಿದೆ ಎಂದು ಅವರು ವಿವರಿಸಿದ್ದಾರೆ. ಕಳೆದ ವರ್ಷ ಈ ಕೋರ್ಸ್ ನಲ್ಲಿ 136…
ಬೆಂಗಳೂರು : ಬೆಂಗಳೂರಲ್ಲಿ ನಿವೃತ್ತ ಡಿಜಿ-ಐಜಿಪಿ ಓಂಪ್ರಕಾಶ್ ಭೀಕರ ಕೊಲೆ ಪ್ರಕರಣದ ಆರೋಪಿ ಅವರ ಪತ್ನಿ ಪಲ್ಲವಿಯನ್ನು ಸಿಸಿಬಿ ಪೊಲೀಸರು 7 ದಿನ ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಿಸಿಬಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದ್ದು,ಪಲ್ಲವಿಯನ್ನುವಿಚಾರಣೆಗೆ ಒಳಪಡಿಸಲಾಗಿದೆ. ಈಗಾಗಲೇ ಆರೋಪಿ ಪಲ್ಲವಿ ತಾನೇ ಪತಿ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಿದ್ದಾಗಿ ತಪ್ರೊಪ್ಪಿಕೊಂಡಿದ್ದಾರೆ. ಆದರೆ, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಾರಣ ಅಥವಾ ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಕೊಲೆಗೆ ಕಾರಣ ಕುರಿತು ಆಕೆಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಎಚ್ಎಸ್ಆರ್ ಲೇಔಟ್ನ ನಿವಾಸದಲ್ಲಿ ಏ.20ರಂದು ಮಧ್ಯಾಹ್ನ ಓಂ ಪ್ರಕಾಶ್ ಅವರು ಊಟ ಮಾಡುತ್ತಿದ್ದರು. ಆಗ ಪತ್ನಿ ಪಲ್ಲವಿ ಚಾಕುವಿನಿಂದ ಇರಿದು ಅವರನ್ನು ಕೊಲೆ ಮಾಡಿದ್ದರು. ಬಳಿಕ ಪಲ್ಲವಿ ತನ್ನ ಸ್ನೇಹಿತೆಗೆ ವಿಡಿಯೋ ಕಾಲ್ ಮಾಡಿ ಪತಿಯ ಕೊಲೆ ವಿಚಾರ ತಿಳಿಸಿದ್ದರು. ಸುದ್ದಿತಿಳಿದ ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು…
ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಮ್ ನಲ್ಲಿ ನಡೆದ ಭೀಕರ ಉಗರ ದಾಳಿಗೆ ಇಬ್ಬರು ಕನ್ನಡಿಗರು ಸೇರಿದಂತೆ 30 ಪ್ರವಾಸಿಗರು ಸಾವನಪ್ಪಿದ್ದಾರೆ ಘಟನೆಯನ್ನು ಖಂಡಿಸಿದ ಭಾರತವು ಪಾಕಿಸ್ತಾನ ವಿರುದ್ಧ ಹಲವು ಕ್ರಮ ಕೈಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಜಮ್ಮು ಕಾಶ್ಮೀರದಲ್ಲಿ ‘LET’ ಸಂಪರ್ಕದಲ್ಲಿದ್ದ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಇದೀಗ ಅರೆಸ್ಟ್ ಮಾಡಿದ್ದಾರೆ. ಹೌದು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, LET ಸಂಪರ್ಕದಲ್ಲಿದ್ದ ಮೂವರು ಭಯೋತ್ಪಾದಕರನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಮೂವರು ಭಯೋತ್ಪಾದಕರನ್ನು ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಅರೆಸ್ಟ್ ಮಾಡಲಾಗಿದೆ.
ನವದೆಹಲಿ : ಇಂದು ಇತ್ತೀಚೆಗೆ ಪಹಲ್ಗಾಮ್ ನಲ್ಲಿ ನಡೆದ ಮುಚ್ಚಿದ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರತಾ ಲೋಪವನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಬುಧವಾರ ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ. ನಿನ್ನೆ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಕುರಿತಂತೆ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಏನೂ ತಪ್ಪಾಗಿಲ್ಲದಿದ್ದರೆ, ನಾವು ಇಲ್ಲಿ ಏಕೆ ಕುಳಿತುಕೊಳ್ಳುತ್ತಿದ್ದೆವು? ನಾವು ಕಂಡುಹಿಡಿಯಬೇಕಾದ ಎಲ್ಲೋ ಲೋಪಗಳು ನಡೆದಿವೆ ಎಂದು ಅಮಿತ್ ಶಾ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ. ಸಭೆಯ ಸಮಯದಲ್ಲಿ, ಹಲವಾರು ವಿರೋಧ ಪಕ್ಷಗಳು ಭದ್ರತಾ ಶಿಷ್ಟಾಚಾರಗಳ ಸ್ಪಷ್ಟ ವೈಫಲ್ಯದ ಬಗ್ಗೆ ಪ್ರಶ್ನೆಗಳನ್ನು ಕೇಳಿದವು. ಭದ್ರತಾ ಪಡೆಗಳು ಎಲ್ಲಿದ್ದವು? ಕೇಂದ್ರ ಮೀಸಲು ಪೊಲೀಸ್ ಪಡೆ ಎಲ್ಲಿತ್ತು? ಎಂದು ಹಲವಾರು ನಾಯಕರು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಜೂನ್ನಲ್ಲಿ ಅಮರನಾಥ ಯಾತ್ರೆಯವರೆಗೆ ಸಾಂಪ್ರದಾಯಿಕವಾಗಿ ನಿರ್ಬಂಧಿತವಾಗಿರುವ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಬೈಸರನ್ ಪ್ರದೇಶವನ್ನು ತೆರೆಯುವ ಮೊದಲು ಸ್ಥಳೀಯ ಅಧಿಕಾರಿಗಳು…
ನವದೆಹಲಿ : ಪಹಾಲ್ಗಾಮ್ ಉಗ್ರರ ದಾಳಿ ನಡೆದ ಬೆನ್ನಲ್ಲೆ, ನಿನ್ನೆ 182ನೇ ಬಿಎಸ್ಎಫ್ ಬೆಟಾಲಿಯನ್ನ ಯೋಧ ಪಿ.ಕೆ ಸಿಂಗ್ ಅವರು ಆಕಸ್ಮಿಕವಾಗಿ ಪಂಜಾಬ್ ಗಡಿ ದಾಟಿದ್ದಾರೆ. ಇನ್ನೂ ಇದನ್ನು ಕಂಡ ಪಾಕಿಸ್ತಾನ ರೇಂಜರ್ಸ್ ಪಿ.ಕೆ ಸಿಂಗ್ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಅವರ ಸುರಕ್ಷಿತ ಬಿಡುಗಡೆಗಾಗಿ ಎರಡೂ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದೆ. 182ನೇ ಬಿಎಸ್ಎಫ್ ಬೆಟಾಲಿಯನ್ನ ಕಾನ್ಸ್ಟೆಬಲ್ ಪಿಕೆ ಸಿಂಗ್ ಎಂದು ಗುರುತಿಸಲಾದ ಯೋಧ ಭಾರತ ಹಾಗೂ ಪಾಕ್ ಗಡಿಯ ಸಮೀಪವಿರುವ ಕೃಷಿಭೂಮಿಯ ಬಳಿ ಕರ್ತವ್ಯದಲ್ಲಿದ್ದರು. ದಿನನಿತ್ಯದ ಚಲನೆಯ ಸಮಯದಲ್ಲಿ, ಸಿಂಗ್ ಅಜಾಗರೂಕತೆಯಿಂದ ಭಾರತೀಯ ಗಡಿ ಬೇಲಿಯನ್ನು ಮೀರಿ ಪಾಕಿಸ್ತಾನಿ ಪ್ರದೇಶವನ್ನು ಪ್ರವೇಶಿಸಿದ್ದಾರೆ. ಆ ಸಂದರ್ಭದಲ್ಲಿ ಅವರನ್ನು ಪಾಕಿಸ್ತಾನಿ ರೇಂಜರ್ಗಳು ಬಂಧಿಸಿದ್ದಾರೆ. ಸಿಂಗ್ ಅನ್ನು ಬಂಧಿಸುವಾಗ ಅವರು ಸಮವಸ್ತ್ರದಲ್ಲಿದ್ದರು ಮತ್ತು ಅವರ ಕೈಯಲ್ಲಿ ಸರ್ವಿಸ್ ರೈಫಲ್ ಅನ್ನು ಹಿಡಿದಿದ್ದರು ಎಂದು ಹೇಳಲಾಗಿದೆ. ನೆರಳಿನಲ್ಲಿ ವಿಶ್ರಾಂತಿ ಪಡೆಯಲು ರೈತರೊಂದಿಗೆ ಹೋಗುತ್ತಿದ್ದಾಗ ಪಾಕಿಸ್ತಾನಿ ಸೈನಿಕರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾಗಿ ತಿಳಿದು ಬಂದಿದೆ. ಇನ್ನೂ…
ಬೆಂಗಳೂರು : ಶಕ್ತಿ ಯೋಜನೆಯಡಿ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಈ ವರ್ಷ 2000 ಹೊಸ ಬಸ್ ಖರೀದಿ ಮಾಡಲಾಗುತ್ತಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಸಕ್ತ ವರ್ಷ 2,000 ಬಸ್ಗಳನ್ನು ಖರೀದಿಸಿ ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ತಲಾ 700 ಬಸ್ಗಳನ್ನು ನೀಡಲಾಗುವುದು. ಉಳಿದ ಬಸ್ಗಳು ಕೆಎಸ್ಆರ್ಟಿಸಿಗೆ ಸೇರಲಿವೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1915331899838583248?t=iq-i7P8KiedsUggkkZ7rbw&s=19
ಬೆಂಗಳೂರು : ಇತ್ತೀಚಿಗೆ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಹಲವು ವಿಧೇಯಕ ಮಂಡನೆ ಮಾಡಿತ್ತು. ಬಳಿಕ ರಾಜ್ಯಪಾಲರು ಅನೇಕ ವಿಧೇಯಕಕ್ಕೆ ಅಂಕಿತ ಹಾಕದೆ ವಾಪಾಸ್ ಕಳಿಸಿದ್ದರು. ಅದರಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಕೂಡ ಒಂದು ಇದೀಗ ರಾಜ್ಯಪಾಲರು ಈ ಒಂದು ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ನಿರ್ಮಾಣಕ್ಕಾಗಿ ಮಂಡಿಸಲಾಗಿರುವ ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅಂಕಿತ ಹಾಕಿದ್ದಾರೆ ಎಂದು ತಿಳಿದುಬಂದಿದೆ. ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಕಳುಹಿಸಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿತ್ತು. ಆ ವಿಧೇಯಕಕ್ಕೆ ಅಂಕಿತ ಹಾಕದೇ ಕಳೆದ ತಿಂಗಳು ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. ಗ್ರೇಟರ್ ಬೆಂಗಳೂರು ವಿಧೇಯಕದಲ್ಲಿನ ಅಂಶಗಳು ಜಾರಿಯಾದರೆ, ಬೆಂಗಳೂರು ಒಡೆದುಹೋಗುತ್ತದೆ. ಪರಭಾಷಿಕರಿಗೆ ಹೆಚ್ಚಿನ ಆದ್ಯತೆ ಸಿಗುತ್ತದೆ ಎಂಬಿತ್ಯಾದಿ ಆರೋಪಗಳನ್ನು ಮಾಡುತ್ತಿರುವ ವಿಪಕ್ಷದ ಸದಸ್ಯರು ಇದನ್ನು ವಿರೋಧಿಸುತ್ತಲೇ ಬಂದಿದ್ದಾರೆ.
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಮದ್ಯಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೇಮಹದೇಶ್ವರ ಬೆಟ್ಟದಲ್ಲಿ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು… *ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು. *ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು. *ಹಿಂದಿನ ಸಭೆಯ ನಿರ್ಣಯದಂತೆ…
ರಾಯಚೂರು : ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾ ಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸಂತಾಪ ಸೂಚಿಸಿದ್ದಾರೆ. ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಕ್ಕೆ ಮಠದಿಂದ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹೌದು ಇಂದು ಪರಿಹಾರ ಘೋಷಿಸಿ ಪಹಲ್ಗಾಮ್ ದಾಳಿಯ ಕುರಿತು ಮಾತನಾಡಿದ ಶ್ರೀಗಳು ನಮ್ಮ ಮಹಿಳೆಯರನ್ನ ರಕ್ಷಣೆ ಮಾಡಬೇಕು. ನಮ್ಮ ಧರ್ಮ, ದೇವಸ್ಥಾನ, ಮಠಮಾನ್ಯ ಶ್ರದ್ಧಾಕೇಂದ್ರಗಳನ್ನ ರಕ್ಷಣೆ ಮಾಡಬೇಕು. ನಿದ್ರಾವಸ್ಥೆಯಿಂದ ಎಚ್ಚೆತ್ತು ಮೇಲ್ಬರಬೇಕು. ಕಾಶ್ಮೀರದಲ್ಲಿ ನಡೆದ ಘಟನೆ ಎಲ್ಲಾದರೂ ನಡೆಯಬಹುದು. ಯಾರೂ ಎಚ್ಚರ ತಪ್ಪಿ ಇರಬಾರದು ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು. ನಾವೆಲ್ಲಾ ಭಾರತೀಯರು ಶಾಂತಿ ಪ್ರಿಯರು. ನಮ್ಮ ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲಾ ಸಮುದಾಯದವರು ಒಂದೇ ತಾಯಿ ಮಕ್ಕಳು. ನಾವೆಲ್ಲರೂ ಒಂದೇ ನಮ್ಮಲ್ಲಿ ಬೇಧ ಭಾವನೆ ಇಲ್ಲ. ಆದರೆ ಬೇರೆ ದೇಶದವರು, ಉಗ್ರರು ಬಂದು ನಮ್ಮಲ್ಲಿ ಒಡೆದಾಳುವ ನೀತಿ…
ಬೆಂಗಳೂರು : ಕ್ರಿಮಿನಲ್ ಹಿನ್ನೆಲೆ ಉಳ್ಳವರು ಆಗಿದ್ದರೆ ಅಥವಾ ಕ್ರಿಮಿನಲ್ ಅಪರಾಧ ಆರೋಪವನ್ನು ಹೊತ್ತಿರುವವರು ಸರ್ಕಾರಿ ನೌಕರಿಗೆ ಅಡ್ಡಿಯಾದರೆ, ಸರ್ಕಾರಿ ಸೇವೆಯಿಂದ ತೆಗೆಯಲು ಅಡ್ಡಿ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ (ಎಸ್ಡಿಎ) ಸೇವೆ ಸಲ್ಲಿಸಿ, ಶಿಕ್ಷೆಗೊಳಗಾಗಿದ್ದ ನಂಜೇಗೌಡ ಎಂಬವರನ್ನು ಸೇವೆಯಿಂದ ವಜಾಗೊಳಿಸಿರುವ ಸರ್ಕಾರದ ಕ್ರಮವನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ್ ಅವರಿದ್ದ ವಿಭಾಗೀಯ ಪೀಠ ಎತ್ತಿ ಹಿಡಿದಿದೆ. ಪ್ರಕರಣದ ಹಿನ್ನೆಲೆ? ಅರ್ಜಿದಾರ ನಂಜೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ಎಸ್ಡಿಎ ಆಗಿ ಸೇವೆ ಸಲ್ಲಿಸುತ್ತಿದ್ದಾಗ 2001ರಲ್ಲಿ ಹಲ್ಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದರು. ಪ್ರಕರಣ ಸಂಬಂಧ 2011ರಲ್ಲಿ ಮಾಗಡಿಯ ವಿಚಾರಣಾ ನ್ಯಾಯಾಲಯ ಆರೋಪಿಗೆ ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ಆದೇಶದ ಅನ್ವಯ 2023ರ ನವೆಂಬರ್…













