Subscribe to Updates
Get the latest creative news from FooBar about art, design and business.
Author: kannadanewsnow05
ಶ್ರೀನಗರ : ನಿನ್ನೆ ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಪಾರ್ಥಿವ ಶರೀರ ದೆಹಲಿಗೆ ಆಗಮಿಸಿದ್ದು, ಪಾರ್ಥಿವ ಶರೀರದ ಎದುರು ಅವರ ಪತ್ನಿ ರೋಧಿಸಿದ್ದಾರೆ. ಏಪ್ರಿಲ್ 16 ರಂದು ಮದುವೆಯಾಗಿ ಹನಿಮೂನ್ ಗೆಂದು ಅವರು ಕಾಶ್ಮೀರಕ್ಕೆ ತೆರಳಿದಾಗ ಈ ಒಂದು ಘೋರವಾದ ದುರಂತ ಸಂಭವಿಸಿದೆ. ಉಗ್ರರು ಗುಂಡಿನ ದಾಳಿ ನಡೆಸುವ ಮುನ್ನ ವಿನಯ್ ಗುಂಡಿನ ದಾಳಿಗೆ ಯಾವ ಸ್ಥಳದಲ್ಲಿ ಸಾವನಪ್ಪಿದ್ದರು ಅದೇ ಸ್ಥಳದಲ್ಲಿ ವಿನಯ್ ತಮ್ಮ ಪತ್ನಿ ಹಿಮಾಂಶು ಅವರನ್ನು ತಬ್ಬಿಕೊಂಡು ಎತ್ತಿಕೊಂಡು ವಿಡಿಯೋ ಮಾಡಿದ್ದರು ಎನ್ನಲಾಗುತ್ತಿದೆ. ಇದೀಗ ವಿನಯ್ ಅವರು ಮಾಡಿದ ಕೊನೆಯ ವಿಡಿಯೋ ವೈರಲ್ ಆಗಿದೆ. ಪತ್ನಿಯನ್ನು ಎತ್ತಿಕೊಂಡು ತಬ್ಬಿಕೊಂಡು ವಿಡಿಯೋ ಮಾಡಿದ್ದು ನೋಡುಗರ ಕರಳು ಕಿವುಚುವಂತಿದೆ. ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಹಾಗೂ ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಮೃತಪಟ್ಟಿದ್ದಾರೆ. ಕನ್ನಡಿಗರ ಮೃತದೇಹವನ್ನು ಜಮ್ಮು-ಕಾಶ್ಮೀರದಿಂದ ಬೆಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ…
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಿನ್ನೆ ಉಗ್ರರ ಗುಂಡಿನ ದಾಳಿ ನಡೆದಿತ್ತು. ಅದರ ಬೆನ್ನಲ್ಲೇ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗ್ರಹಮಂತ್ರಿ ಅಮಿತ್ ಶಾ, ಸೇರಿದಂತೆ ಹಲವು ಅಧಿಕಾರಿಗಳು ಹಾಗು ಸಚಿವರೊಂದಿಗೆ ಸೇರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಿದರು. ಈ ಒಂದು ಸಭೆಯಲ್ಲಿ ಭಾರತ ಪಾಕಿಸ್ತಾನಕ್ಕೆ ರಾಜತಾಂತ್ರಿಕ ತಿರುಗೇಟು ನೀಡಿದ್ದು ತಕ್ಷಣವೇ ಅಟಾರಿ ಮತ್ತು ವಾಘಾ ಗಡಿ ಬಂದ್ ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಹೌದು ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಈ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪಾಕಿಸ್ತಾನದ ಪ್ರಜೆಗಳಿಗೆ ವೀಸಾ ನೀಡದಿರಲು ಭಾರತ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಭಾರತದಿಂದ ಇದೀಗ ರಾಜತಾಂತ್ರಿಕ ತಿರುಗೇಟು ನೀಡಿದ್ದು ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ. ಅದೇ ರೀತಿಯಾಗಿ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿ ಗಡಿಪಾರು ಮಾಡಲು ಮೋದಿ ನೇತೃತ್ವದ ಸಭೆ ನಿರ್ಧರಿಸಿದೆ.…
‘ಭೂಮಿಯ ಮೇಲಿನ ಸ್ವರ್ಗದಂತಿದ್ದ ಕಾಶ್ಮೀರ ನಕವಾಗ್ತಿದೆ’ : ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಬಾಲಿವುಡ್ ನಟ ಸಲ್ಮಾನ್ ಖಾನ್
ಮುಂಬೈ : ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಹೇಯ ಕೃತ್ಯದಿಂದ 28 ಜನರ ಪ್ರಾಣ ಹೋಗಿದ್ದು, ದೇಶಾದ್ಯಂತ ಶೋಕದ ವಾತಾವರಣ ನಿರ್ಮಾಣ ಆಗಿದೆ. ಉಗ್ರರ ದಾಳಿಯನ್ನು ಸೆಲೆಬ್ರಿಟಿಗಳು ಕೂಡ ಖಂಡಿಸಿದ್ದಾರೆ. ನಿನ್ನೆ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಎಲ್ಲರಲ್ಲೂ ಆತಂಕ ಮೂಡಿದೆ. ಭೂಮಿ ಮೇಲಿನ ಸ್ವರ್ಗದ ರೀತಿ ಇರುವ ಕಾಶ್ಮೀರವನ್ನು ನೋಡಲು ತೆರಳಿದ್ದ ಪ್ರವಾಸಿಗರನ್ನೇ ಗುರಿಯಾಗಿಸಿ ಉಗ್ರರು ದಾಳಿ ಮಾಡಿದ್ದಾರೆ. ಈ ಬಗ್ಗೆ ಸಲ್ಮಾನ್ ಖಾನ್ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ X ನಲ್ಲಿ ಖಂಡನೆ ವ್ಯಕ್ತಪಡಿಸಿದ ಅವರು, ಕಾಶ್ಮೀರ, ಭೂಮಿಯ ಮೇಲಿನ ಸ್ವರ್ಗ ನರಕವಾಗಿ ಬದಲಾಗುತ್ತಿದೆ. ಅಮಾಯಕರನ್ನು ಗುರಿಯಾಗಿಸಲಾಗುತ್ತಿದೆ, ನನ್ನ ಹೃದಯವು ಅವರ ಕುಟುಂಬಗಳಿಗೆ ಮಿಡಿಯುತ್ತಿದೆ. ‘ಏಕ್ ಭೀ ಮುಗ್ಧ ಕೋ ಮರ್ನಾ ಪುರಿ ಕೈನಾಥ ಕೋ ಮರ್ನೆ ಕೆ ಬರಾಬರ್ ಹೈ’ (ಓರ್ವ ಅಮಾಯಕನನ್ನು ಕೊಲ್ಲುವುದು ಎಂದರೆ ಇಡೀ ಜಗತ್ತನ್ನು ಕೊಂದಂತೆ) ಎಂದು ಬರೆದುಕೊಂಡಿದ್ದಾರೆ. https://twitter.com/BeingSalmanKhan/status/1914981209525846083?t=Top2uWS6_iyLxMjtSCjNWw&s=19
ಜಮ್ಮು ಕಾಶ್ಮೀರ : ನಿನ್ನೆ ತಾನೆ ಕಾಶ್ಮೀರದ ಫಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಭೀಕರವಾದ ಗುಂಡಿನ ದಾಳಿ ನಡೆಸಿ 30ಕ್ಕೂ ಹೆಚ್ಚು ಪ್ರವಾಸಿಗರನ್ನು ಹತ್ಯೆ ಮಾಡಿದ್ದರು. ಈ ದಾಳಿಯನ್ನು TRF ಉಗ್ರ ಸಂಘಟನೆ ಹೊತ್ತುಕೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಭಾರತೀಯ ಸೇನೆ ಅಲರ್ಟ್ ಆಗಿದ್ದು ಭಾರತೀಯ ಸೇನೆ ಸಿಆರ್ಪಿಎಫ್ ಹಾಗೂ ಪೊಲೀಸರು TRF ಕಮಾಂಡರ್ ಅನ್ನು ಸುತ್ತುವರಿದಿದ್ದಾರೆ. ಹೌದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ತಂಗ್ ಮಾರ್ಗ್ ನಲ್ಲಿ ಟಿ ಆರ್ ಎಫ್ ಭಯೋತ್ಪಾದಕ ಸಂಘಟನೆ ಹಾಗೂ ಭಾರತೀಯ ಸೇನೆ ಸಿಆರ್ಪಿಎಫ್ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಗುಂಡಿನ ಚಕಮಕಿ ನಡೆದಿದೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ತಂಗ್ ಮಾರ್ಗ್ ನಲ್ಲಿ ಪೊಲೀಸರು, ಸೇನೆ CRPF ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ TRF ಕಮಾಂಡರ್ ನನ್ನು ಇದೀಗ ಸೇನೆ ಸುತ್ತುವರೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಬೆಂಗಳೂರು : ನಿನ್ನೆ ಜಮ್ಮು ಕಾಶ್ಮೀರದಲ್ಲಿ ಪಹಾಲ್ಗಾಮ್ ನಲ್ಲಿ ನಡೆದಂತಹ ಉಗ್ರರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಇಬ್ಬರು ಪ್ರವಾಸಿಗರು ಸಾವನಪ್ಪಿದ್ದಾರೆ. ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಅವರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದರು. ಇದೀಗ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಹೌದು ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮಂಜುನಾಥ್ ಮತ್ತ್ತು ಭರತ್ ಭೂಷಣ ರನ್ನು ಉಗ್ರರು ಕಾಶ್ಮೀರದಲ್ಲಿ ಭೀಕರವಾಗಿ ಕೊಲೆ ಮಾಡಿದ್ದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಗೆ ಪ್ರವಾಸಕ್ಕೆ ತೆರಳಿದ್ದಾಗ ಇಬ್ಬರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಹತ್ಯೆಯಾದ ಮಂಜುನಾಥ್ ಮತ್ತು ಭರತ್ ಭೂಷಣ ಕುಟುಂಬಸ್ಥರಿಗೆ ಇದೀಗ ರಾಜ್ಯ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.
ಹಾವೇರಿ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆಯಾದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಇದೀಗ 2028ಕ್ಕೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎನ್ನುವ ಮೂಲಕ ಹೊಸ ಪಕ್ಷ ರಚಿಸುವ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗಿದೆ. ನಗರದಲ್ಲಿ ಕ್ರಾಂತಿವೀರ ಯುವ ಬ್ರಿಗೇಡ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣದ ಅನ್ಯಾಯದ ವಿರುದ್ಧ ನ್ಯಾಯ ಜಾಥಾದಲ್ಲಿ ಪಾಲ್ಗೊಂಡಿದ್ದ ಅವರು, ಹೊಸ ಪಕ್ಷ ಆರಂಭದ ಸುಳಿವು ನೀಡಿದರು. ಜನರು ಹಣ ಪಡೆದು ಮತ ಹಾಕುವುದನ್ನು ನಿಲ್ಲಿಸಬೇಕು. ಹಿಂದೂಗಳ ಪರ ಹೋರಾಡುವ ವ್ಯಕ್ತಿಗೆ ಪಕ್ಷ-ಜಾತಿ ಭೇದ ಮರೆತು ಮತ ಹಾಕಬೇಕು. ಈ ರೀತಿ ಜನರು ಮತ ಹಾಕಿದರೆ, 2028ರಲ್ಲಿ ನಮ್ಮದು ಹಾಗೂ ಕೆ.ಇ. ಕಾಂತೇಶ ಅವರ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಗುಣಗಳನ್ನು ಹೊಂದಿರುವ ವ್ಯಕ್ತಿಯೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಇದೆ ಸಂದರ್ಭದಲ್ಲಿ ತಿಳಿಸಿದರು.…
ಬೀದರ್ : ಬೀದರ್ ನಲ್ಲಿ ಭೀಕರವಾದ ಹತ್ಯೆ ನಡೆದಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಯುವಕನೊರ್ವನನ್ನು ಬರ್ಬರವಾಗಿ ಕೊಂದಿರುವ ಘಟನೆ ಮಂಗಳವಾರ ರಾತ್ರಿ ಕಮಲನಗರ ತಾಲ್ಲೂಕಿನ ಚಾಂಡೇಶ್ವರ್ ಗ್ರಾಮದ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ಗಂಗಶೆಟ್ಟಿ (26) ಎಂದು ತಿಳಿದುಬಂದಿದೆ.ಮಂಗಳವಾರ ರಾತ್ರಿ ಚಾಂಡೇಶ್ವರ್ ಗ್ರಾಮದ ಹೊರವಲಯದಲ್ಲಿ ಗಂಗಶೆಟ್ಟಿ ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಯಾವ ಕಾರಣಕ್ಕೆ ಗಂಗಶೆಟ್ಟಿಯನ್ನು ಕೊಲೆ ಮಾಡಲಾಯಿತು ಎಂಬುವುದು ಇನ್ನು ತಿಳಿದು ಬಂದಿಲ್ಲ ಎನ್ನಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಕಮಲನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ನವದೆಹಲಿ : ಜಮ್ಮು ಕಾಶ್ಮೀರದಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಭೀಕರವಾದ ಗುಂಡಿನ ದಾಳಿ ನಡೆಸಿದ್ದಾರೆ. ಈ ಒಂದು ಗುಂಡಿನ ದಾಳಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು ಕರ್ನಾಟಕ ಮೂಲದ ಇಬ್ಬರು ಪ್ರವಾಸಿಗರು ಸಹ ಸಾವನಪ್ಪಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಹೌದು ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂ ಕೋರ್ಟ್ ಅಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲಿನ ದಾಳಿ ಕುರಿತಂತೆ ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಇನ್ನು ಈ ಒಂದು ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಹಾಗೂ ಬೆಂಗಳೂರು ಮೂಲದ ಭರತ್ ಭೂಷಣ್ ಅವರು ಬಲಿಯಾಗಿದ್ದಾರೆ. ಇದೀಗ ರಾಜ್ಯ ಸರ್ಕಾರ ಮೃತ ದೇಹಗಳನ್ನು ರಾಜ್ಯಕ್ಕೆ ತರುವ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು ನಾಳೆ ಮಂಜುನಾಥ್ ಮೃತದೇಹ ಬೆಂಗಳೂರಿಗೆ ಆಗಮಿಸಲಿದೆ.…
ಶಿವಮೊಗ್ಗ : ಉಗ್ರರ ಗುಂಡಿನ ದಾಳಿಯಲ್ಲಿ ಬಲಿಯಾದ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರ ಮೃತದೇಹವನ್ನು ನಾಳೆ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಲಿದೆ. ಬಳಿಕ ರಸ್ತೆಯ ಮೂಲಕ ಶಿವಮೊಗ್ಗಕ್ಕೆ ತರಳಾಗುತ್ತೆ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಶಾಸಕ ಚನ್ನಬಸಪ್ಪ ಹೇಳಿಕೆ ನೀಡಿದರು. ಅಂತಿಮ ದರ್ಶನಕ್ಕೆ ಇಡೀ ಶಿವಮೊಗ್ಗದ ಜನರು ಬರುವ ನಿರೀಕ್ಷೆ ಇದೆ. ವರ್ತಕರ ಎಲ್ಲರು ಅಂಗಡಿ ಮುಂಗಟ್ಟು ಮುಚ್ಚುವ ತೀರ್ಮಾನ ಮಾಡಿದ್ದಾರೆ. ಭಯೋತ್ಪಾದನೆ ಸರ್ವ ನಾಶವಾಗಬೇಕೆಂದು ತೀರ್ಮಾನ ಮಾಡಿದ್ದಾರೆ. ಸ್ವಯಂ ಪ್ರೇರಿತರಾಗಿ ಬಂದ್ ಮಾಡಲು ಜನರು ತೀರ್ಮಾನಿಸಿದ್ದಾರೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು. ಮನೆಯ ಮುಂದೆ ಧಾರ್ಮಿಕ ವಿಧಿ ವಿಧಾನ ನಡೆಸಿದ ಬಳಿಕ ಮೆರವಣಿಗೆ ಮೂಲಕ ರೋಟರಿ ಚಿತಾಗಾರಕ್ಕೆ ತೆರಳಿ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 12 ಗಂಟೆ ಬಳಿಕ ಮೆರವಣಿಗೆ ಆರಂಭವಾಗಲಿದೆ. ಮಂಜುನಾಥ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ರಸ್ತೆಯ ಮೂಲಕ ಮೃತದೇಹವನ್ನು ಶಿವಮೊಗ್ಗಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು : ಪುಲ್ವಾಮಾ ದಾಳಿ ನಂತರ ಇಲ್ಲಿಯವರೆಗೆ ಇಂತಹ ದುರ್ಘಟನೆಗಳು ನಡೆದಿರಲಿಲ್ಲ. ಹಿಂದೂಗಳನ್ನು ಗುರಿ ಮಾಡಿದ್ದಾರೆ. ದಾಳಿ ವೇಳೆ ನೀನು ಹಿಂದೂ ಅದಕ್ಕಾಗಿ ಕೊಲ್ಲುತ್ತಿದ್ದೇವೆ ಎಂದು ಭಯೋತ್ಪಾದಕರು ಹೇಳಿಕೊಂಡಿರುವುದು ನಿಜಕ್ಕೂ ಆತಂಕಕಾರಿ ವಿಚಾರ. ಇದು ಹೊಸದಲ್ಲ ಅನ್ನಿಸುತ್ತದೆ. ದಾಳಿ ಮಾಡುವಾಗ ಅನೇಕ ಸಂದರ್ಭದಲ್ಲಿ ಆ ಮಾತುಗಳನ್ನು ಹೇಳಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬಹಳ ಶಕ್ತಿಯುತ, ಪರಿಣಾಮಕಾರಿಯಾದ ಮಿಲಿಟರಿ ಇಂಟೆಲಿಜೆನ್ಸ್ ಇದ್ದರೂ ಸಹ ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ ಹೇಗಾಯ್ತು ಎಂಬುದು ಅತಿದೊಡ್ಡ ಪ್ರಶ್ನೆಯಾಗಿದೆ.ಅನೇಕ ಸಂದರ್ಭಗಳಲ್ಲಿ ಮಿಲಿಟರಿ ಇಂಟಲಿಜೆನ್ಸ್ ಒಳ್ಳೆಯ ಕೆಲಸ ಮಾಡಿದೆ. ಯಾಕೆ ಇಂಟಲಿಜೆನ್ಸ್ ಫೆಲ್ಯೂರ್ ಆಯ್ತು?. ಟೆರರಿಸ್ಟ್ಗಳು ಎಲ್ಲಿಂದ, ಹೇಗೆ ಬಂದ್ರು ಎಂಬುದು ಅತಿದೊಡ್ಡ ಪ್ರಶ್ನೆ ಎಂದರು. ಕೃತ್ಯಕ್ಕೆ ಸ್ಥಳೀಯರ ಸಹಕಾರ ಇದ್ದುಕೊಂಡೇ ಆಗಿರಲಿ ಅಥವಾ ಸ್ಥಳೀಯರ ಸಹಕಾರ ಇಲ್ಲದೆಯೂ ಆಗಿರಲಿ. ನಮ್ಮ ಫೋರ್ಸ್ ಒಳಗಡೆ ಯಾರಾದರೂ ಸಹಕಾರ ಮಾಡಿದವರು ಇದ್ದರು ಸಹ ಅದನ್ನೆಲ್ಲ ಪತ್ತೆಹಚ್ಚಿ, ನಿರ್ದಾಕ್ಷಿಣ್ಯವಾಗಿ ಕ್ರಮ…














