Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್ಗೆ ಐಟಿ ಸಂಕಷ್ಟ ಎದುರಾಗಿದೆ. ಹೈ ಸೆಕ್ಯುರಿಟಿ ಸೆಲ್ನಿಂದ ಜೈಲು ಅಧೀಕ್ಷಕರ ಕಚೇರಿಗೆ ದರ್ಶನ್ ಕರೆತಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಲೆಕ್ಕ ಪರಿಶೋಧಕರು, ಜೈಲು ಅಧೀಕ್ಷಕಿ ಲತಾ ಸಮ್ಮುಖದಲ್ಲಿ ದರ್ಶನ್ ವಿಚಾರಣೆ ನಡೆಸಿದ್ದು, ಇದೀಗ ವಿಚಾರಣೆ ಅಂತ್ಯವಾಗಿದೆ. ಸತತ 7 ಗಂಟೆಗಳ ಕಾಲ ನಟ ದರ್ಶನ್ ಐಟಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದ್ದಾರೆ. ಈ ವೇಳೆ ಐಟಿ ಅಧಿಕಾರಿಗಳು ನಟ ದರ್ಶನ್ ಅವರಿಗೆ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಕ್ಷಾಂತರ ರೂಪಾಯಿ ಡೀಲ್ ಮಾಡಿಕೊಂಡಿರುವ ಕುರಿತು ಪ್ರಶ್ನೆ ಕೇಳಿದ್ದಾರೆ. ಇದೀಗ ಐಟಿ ಅಧಿಕಾರಿಗಳ ವಿಚಾರಣೆ ಅಂತ್ಯವಾಗಿದ್ದು, ಬಳ್ಳಾರಿ ಜೈಲಿನಿಂದ ಎರಡು ಕಾರಿನಲ್ಲಿ ಐವರು ಅಧಿಕಾರಿಗಳು ತೆರಳಿದ್ದಾರೆ. ಬಳ್ಳಾರಿ ಜೈಲಲ್ಲಿ ದರ್ಶನ್ ವಿಚಾರಣೆ ನಡೆಯುತ್ತಿರುವ ಈ ಸಮಯದಲ್ಲೇ ದರ್ಶನ್ಗೆ 40 ಲಕ್ಷ ಹಣ ನೀಡಿದ್ದ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಉಪ ಮೇಯರ್ ಮೋಹನ್ ರಾಜ್ಗೂ ಐಟಿ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಏರಿಯಾನ್ ಟೆಕ್ನಾಲಜಿ ಕಂಪನಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದಲ್ಲಿ ಏರಿಯಾನ್ ಟೆಕ್ನಾಲಜಿ ಕಂಪನಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಟೊಯೋಟಾ ಸೇರಿದಂತೆ ವಿವಿಧ ಕಂಪನಿಗಳ ಬಿಡಿ ಭಾಗಗಳನ್ನು ಇಲ್ಲಿ ತಯಾರಿಸಲಾಗುತ್ತಿತ್ತು. 3d ಡೆಕೋರೇಷನ್, ಹೈಡ್ರೋಗ್ರಾಫಿಕ್ ಪೇಂಟಿಂಗ್ ಸಹ ಕಂಪನಿಯಲ್ಲಿ ಮಾಡಲಾಗುತ್ತಿತ್ತು. ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ವಾಹನಗಳಿಂದ ಸದ್ಯ ಬೆಂಕಿ ನಂದಿಸುವ ಕಾರ್ಯಚರಣೆ ನಡೆಯುತ್ತಿದ್ದು, ಘಟನೆ ಕುರಿತಂತೆ ಬೊಮ್ಮಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದು ಇಡೀ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಗುರುತು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಕಾಂಗ್ರೆಸ್ ಪಕ್ಷದಲ್ಲಿ ಅಂತಕಲಹ ನಡೆಯುತ್ತಿದೆ ಎಂಬ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ ಅವರು,ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ನಲ್ಲಿ ಅಂತಃಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖಗೊಳ್ಳುತ್ತಲಿರುವ ಪಕ್ಷಗಳ ಹೆಸರಲ್ಲಿ ಗೊಂದಲ ಮಾಡಿಕೊಂಡು, ಬಿಜೆಪಿ ಬದಲಿಗೆ ಕಾಂಗ್ರೆಸ್ ಎಂದು ತಿಳಿದುಕೊಂಡು ಈ ಅಭಿಪ್ರಾಯ ವ್ಯಕ್ತಪಡಿಸಿರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ @BJP4Karnataka ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ – ಪ್ರತ್ಯಾರೋಪ,…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈ ಕೋರ್ಟ್ ತೀರ್ಪು ಪ್ರಕಟಿಸಿತ್ತು. ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಪಾಲಿಟಿಕಲ್ ಜಡ್ಜ್ಮೆಂಟ್ ಆಗಿದ್ದು ಸಿಎಂ ಸಿದ್ಧರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೆ ನೀಡಿದರು. ಈ ವಿಚಾರವಾಗಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಇತರೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದಾಗ ಕೂಡಲೆ ಸುದ್ದಿಗೋಷ್ಠಿ ನಡೆಸಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಜಮೀರ್ ಅಹ್ಮದ್ ಹೇಳಿಕೆಗೆ ಇತರೆ ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ಅಸಮಾಧಾನ ಹೊರಹಾಕುತ್ತಿದ್ದಂತೆ ಜಮೀರ್ ಅಹ್ಮದ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನ್ಯಾಯಾಲಯದ ಬಗ್ಗೆ ನನಗೆ ಗೌರವ ಇದೆ. ನಾನು ಬಾಯಿ ತಪ್ಪಿ ಅಂದಿರಬಹುದು ಅಷ್ಟೇ ಕೋರ್ಟ್ ತೀರ್ಪಿನ ಬಗ್ಗೆ ಜಮೀರ್ ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಸ್ಪಷ್ಟನೆ ನೀಡಿದರು. ನಿನ್ನೆ ಹೈಕೋರ್ಟ್ ನಲ್ಲಿ ಜಡ್ಜ್ಮೆಂಟ್ ಬಂದಿತ್ತು. ನಮ್ಮ ಪ್ರಾಸಿಕ್ಯೂಷನ್ ಅನುಮತಿ ರದ್ದು ಮಾಡಿ ಅಂತ ಕೇಳಿದ್ವಿ. ಅದನ್ನ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರಾಜನ ಮೇಲೆ ಭಂಗ ಬೀರಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದವರ ಬದಲಾವಣೆ ಆಗಲಿದೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ನುಡಿದಿದ್ದರು. ಮುಡಾ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯಗೆ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ಶ್ರೀಗಳ ಭವಿಷ್ಯ ನಿಜವಾಗುತ್ತಾ ಎನ್ನುವ ಆತಂಕ ಎಲ್ಲರಲ್ಲಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಪ್ರಾಕೃತಿಕ ಸ್ಥಿತಿಗತಿ ಮತ್ತು ಸರ್ಕಾರದ ಬಗ್ಗೆ ಅವರು ಭವಿಷ್ಯ ಹೇಳಿದ್ದಾರೆ. ಮಳೆಯಿಂದ ಜಾಸ್ತಿ ತೊಂದರೆ ಇದೆ. ಪ್ರಾಕೃತಿಕ ದೋಷ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಎಲ್ಲಾ ಕಡೆ ತೊಂದರೆ ಆಗುತ್ತದೆ. ಐದು ಕಡೆಯೂ ತೊಂದರೆ ಇದೆ. ಇನ್ನೂ ಒಂದು ವಿಚಾರ, ಆಕಾಶದಿಂದ ಕೂಡ ದೊಡ್ಡ ಸುದ್ದಿ ಬರಬಹುದು ಎಂದು ಅವರು ಹೇಳಿದ್ದರು. ಜನ ಇದ್ದಂಗೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತದೆ ಎಂದಿದ್ದೆ. ಗುಡ್ಡ ಹೋಗುತ್ತದೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಅನೇಕ ಪ್ರದೇಶಗಳು ಮುಳುಗುತ್ತವೆ…
BREAKING : ಹಾಸನ : ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು!
ಹಾಸನ : ಮಧ್ಯಾಹ್ನ ನೀಡುವ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪರಿಣಾಮ ಸರ್ಕಾರಿ ಪ್ರೌಢಶಾಲೆಯ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ರಾಗಿಮರೂರು ಸರ್ಕಾರಿ ಪ್ರೌಢ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ಅಸ್ವಸ್ಥರಾಗಿದ್ದಾರೆ. ತಾಲೂಕಿನ ಕೋಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹಲ್ಲಿ ಬಿದ್ದು ಕಳುಹಿಸಿತಗೊಂಡ ಆಹಾರವನ್ನು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಾಂತಿಯಿಂದ ಬಳಲುತ್ತಿದ್ದವರನ್ನು ಶಿಕ್ಷಕರು ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ.ಸುರಕ್ಷತಾ ಕ್ರಮ ವಹಿಸಿದ ಶಾಲಾ ಶಿಕ್ಷಕರ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಘಟನೆ ಕುರಿತಂತೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಇಂದು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಇನ್ನು ಇದೇ ವಿಚಾರವಾಗಿ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರು, ಭ್ರಷ್ಟಾಚಾರದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ತಮಗೆ ಬೇಕಾದವರನ್ನು ಲೋಕಾಯುಕ್ತ ಎಡಿಜಿಪಿಯನ್ನಾಗಿ ನೇಪಿಸಿಕೊಂಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಭಯಭೀತರಾಗಿದ್ದಾರೆ. ಭಯದಿಂದಲೇ ಕಾಂಗ್ರೆಸ್ ಪಕ್ಷ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ಆರೋಪ ಇಲ್ಲದವರಿಗೆ ಸನ್ಮಾನಿಸುತ್ತೇವೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನೀವೇ ದೊಡ್ಡ ಭ್ರಷ್ಟಾಚಾರಿಗಳು ನೀವು ಏನು ಮಾತನಾಡುತ್ತೀರಿ ಅಂತ ಸಿಎಂಗೆ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರೇ 70 ಲಕ್ಷ ರೂಪಾಯಿ ಮೌಲ್ಯದ ವಾಚ್ ಏನಾಯ್ತು? ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಏನಾಯ್ತು? ನೀವೇ ಮಾಡಿದ ರೀಡೂ ವಿಷಯದಲ್ಲಿ ಕೆಂಪಣ್ಣ ವರದಿ ಏನಾಯಿತು? ಈಗ…
ಪಂಜಾಬ್ : ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರ ಆರೋಗ್ಯದಲ್ಲಿ ಇದೀಗ ಏರುಪೇರು ಉಂಟಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ನಿನ್ನೆ ರಾತ್ರಿ ಅವರಿಗೆ ಅನಾರೋಗ್ಯ ಕಂಡುಬಂದಿದ್ದು, ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿತ್ತು. ಇದೀಗ ಈ ಒಂದು ಆದೇಶದ ಪ್ರತಿ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಅವರ ಕೈಗೆ ತಲುಪಿದೆ. ಹಾಗಾಗಿ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗುತ್ತಾ ಎಂದು ಕಾದು ನೋಡಬೇಕಾಗಿದೆ. ಕೋರ್ಟ್ ನಿಂದ ಆದೇಶ ಪ್ರತಿಯನ್ನು ಲೋಕಾಯುಕ್ತ ಎಸ್ ಪಿ ಉದೇಶ ಇದೀಗ ಪಡೆದುಕೊಂಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಂದು ಆದೇಶದ ಪ್ರತಿ ಪಡೆದಿದ್ದಾರೆ.ಹಾಗಾಗಿ ಶೀಘ್ರವೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುತ್ತಾ ಎಂದು ಕಾದು ನೋಡಬೇಕು.
ದಾವಣಗೆರೆ : ಆಟವಾಡುತ್ತಾ ಆಯತಪ್ಪಿ ನೀರಿನ ತೊಟ್ಟಿಯಲ್ಲಿ ಬಿದ್ದು ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕರೂರು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಮೃತ ಬಾಲಕನನ್ನು ದಾವಣಗೆರೆ ತಾಲೂಕಿನ ಕರೂರು ಗ್ರಾಮದ ಸೈಯದ್ ಆಜಾನ್ ಎಂದು ಹೇಳಲಾಗುತ್ತಿದ್ದು, ವಿನೋಬನಗರದ ನಿವಾಸಿ ಸೈಯದ್ ಶಹಬಾದ್ ಇಕ್ಬಾಲ್ ಅವರ ಪುತ್ರ ಎಂದು ತಿಳಿಬಂದಿದೆ. ನಿನ್ನೆ ಕುಟುಂಬದವರೊಂದಿಗೆ ಮದುವೆಗೆ ಸೈಯದ್ ಶಹಬಾದ್ ಇಕ್ಬಾಲ್ ಕರೂರು ಗ್ರಾಮಕ್ಕೆ ಬಂದಿದ್ದರು. ಈ ವೇಳೆ ರಾತ್ರಿ ಬಾಲಕ ಆಟವಡುತ್ತಾ ಹೋಗಿ ಕಾರ್ಖಾನೆ ಸಲುವಾಗಿ ನಿರ್ಮಾಣ ಮಾಡಿದ್ದ ನೀರಿನ ಸಣ್ಣ ತೊಟ್ಟಿಯಲ್ಲಿ ಆಕಸ್ಮಿಕವಾಗಿ ಬಿದ್ದಿದ್ದಾನೆ. ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸಾವು ಕಂಡಿದ್ದಾನೆ. ಬಾಲಕನ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಗಾಂಧಿಗನರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,