Author: kannadanewsnow05

ಬೆಳಗಾವಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಬಿವೈ ವಿಜಯೇಂದ್ರ ನಡುವಿನ ಬಡಿದಾಟ ಇದೀಗ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ರಾಜ್ಯಾಧ್ಯಕ್ಷ ನಾಯಕತ್ವವನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಯತ್ನಾಳ್ ಅವರಿಗೆ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದು, ಹೈಕಮಾಂಡ್ಗೆ ಯಾವ ರೀತಿ ಉತ್ತರ ನೀಡಬೇಕು ನೀಡುತ್ತೇವೆ ಆದರೆ ಪಾಪ ವಿಜಯೇಂದ್ರ ಇನ್ನೂ ಸಣ್ಣ ಹುಡುಗ ಕೂಡಲೇ ಸ್ಥಾನವನ್ನು ಬಿಡಲಿ ಎಂದು ಸಲಹೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈ ಕಮಾಂಡ್ ಗೆ ಸಮರ್ಥವಾದ ಉತ್ತರ ಕೊಡುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ವಿಜಯೇಂದ್ರ ಅವರು ಪಾಪ ಸಣ್ಣ ಹುಡುಗ ಅವನು ರಾಜ್ಯಾಧ್ಯಕ್ಷ ಸ್ಥಾನ ತ್ಯಾಗ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ. ಅವನಿಗೆ ರಾಜಕಾರಣ ಗೊತ್ತಿಲ್ಲ. ಬಿ.ಎಸ್ ಯಡಿಯೂರಪ್ಪ ಹುಟ್ಟು ಹೋರಾಟಗಾರ ಅವರಿಗೆ ಎಲ್ಲವೂ ಗೊತ್ತಿದೆ. ಆದರೆ ವಿಜಯೇಂದ್ರ ಸಣ್ಣ ಹುಡುಗ ಮುಂದೆ ಭವಿಷ್ಯದಲ್ಲಿ ಅವರು ರಾಜ್ಯಾಧ್ಯಕ್ಷ ಆಗಲಿ ಎಂದು ಸಲಹೆ…

Read More

ಬೆಂಗಳೂರು : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ FIR ದಾಖಲಾಗಿತ್ತು. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿ ಎಂದು ಪೊಲೀಸರು ಎರಡು ದಿನಗಳ ಹಿಂದೆ ನೋಟಿಸ್ ನೀಡಿದ್ದರು. ಈ ವಿಚಾರವಾಗಿ ಚಂದ್ರಶೇಖರನಾಥ ಸ್ವಾಮೀಜಿಯವರು ನಾನು ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಹುಷಾರಿಲ್ಲ ಎಲ್ಲಿಗೂ ಹೋಗುವುದಕ್ಕೆ ಆಗುತ್ತಿಲ್ಲ. ಹೀಗಾಗಿ ನಾನು ಇಂದು ವಿಚಾರಣೆಗೆ ಹಾಜರಾಗುವುದಿಲ್ಲ. ಮಠದವರೆಗೂ ಬಂದು ಪೊಲೀಸರು ನೋಟಿಸ್ ನೀಡಿದ್ದರು. ಪೊಲೀಸರು ಮಠಕ್ಕೆ ಬಂದರೆ ಹೇಳಿಕೆ ಕೊಡುತ್ತೇನೆ ಎಂದು ಅವರು ತಿಳಿಸಿದರು. ಎಂತೆಂತಹ ವಿಷಯಗಳಲ್ಲಿ ಏನು ಮಾಡಲ್ಲ. ಆದರೆ ನನ್ನ ವಿಚಾರಕ್ಕೆ ಕೇಸ್ ಹಾಕಿದ್ದಾರೆ ಎಂದು ಪೊಲೀಸ್ ಇಲಾಖೆಯ ವಿರುದ್ಧ ಚಂದ್ರಶೇಖರನಾಥ ಸ್ವಾಮೀಜಿ ಅಸಮಾಧಾನ ಹೊರಹಾಕಿದರು. ಎಚ್ ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದವರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ. ವಿಧಾನಸೌಧದಲ್ಲಿ ಪಾರ್ಕ್…

Read More

ತುಮಕೂರು : ಇಂದು ನಸುಕಿನ ಜಾವ 4 ಗಂಟೆಗೆ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿತ್ತು. ಇದೀಗ ಮತ್ತೊಂದು ಅಪಘಾತ ನಡೆದಿದ್ದು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು ಹೇಮಾವತಿ ನಾಲೆಗೆ ಉರುಳಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕಲ್ಲಹಳ್ಳ ಬಳಿ ನಡೆದಿದೆ. ಹೌದು ನಿಯಂತ್ರಣ ತಪ್ಪಿ ಹೇಮಾವತಿಗೆ ನದಿ ನಾಲೆಗೆ ಕೆಎಸ್ಆರ್ಟಿಸಿ ಬಸ್ ಒಂದು ಉರುಳಿದೆ. ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದಂತ ಗಾಯಗಳಾಗಿವೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಕಲ್ಲಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ತುಮಕೂರಿನಿಂದ ಕುಣಿಗಲ್ ಕಡೆಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಹೇಮಾವತಿ ನದಿ ನಾಲೆಗೆ ಬಸ್ ನುಗ್ಗಿದೆ. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕುಣಿಗಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಪರಿಶೀಲನೆ…

Read More

ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಹೈದರಾಬಾದ್ ನಲ್ಲಿ ಒಮ್ಮೆಲೆ ಮೂರು ಪೂರಿ ತಿನ್ನಲು ಹೋಗಿ ಗಂಟಲಲ್ಲಿ ಸಿಲುಕಿ ಬಾಲಕನೊಬ್ಬ ಸಾವನ್ನಪ್ಪಿದ್ದ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ನವೀನ್ ನಾರಾಯಣ್ ಬೆಳಗಾವ್ಕರ್ (13) ಎನ್ನುವ ಬಾಲಕ ಮೃತ ದುರ್ದೇವಿ ಎಂದು ತಿಳಿದುಬಂದಿದೆ. ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನವೀನ್ ನಾರಾಯಣ್ ಬೆಳಗಾಂವ್ಕರ್ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಬಲೂನ್ ಊದುವಾಗ ಒಮ್ಮೆಲೇ ಗಂಟಲಲ್ಲಿ ಸಿಲುಕಿ ದುರಂತ ಸಂಭವಿಸಿದೆ. ಉಸಿರು ತೆಗೆದುಕೊತ್ತಿರುವಾಗಲೇ ಗಂಟಲಲ್ಲಿ ಬಲೂನ್ ಸಿಲುಕಿದೆ. ಉಸಿರುಗಟ್ಟಿ ನಾರಾಯಣ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಬಾಯಲ್ಲಿ ಊದುವಾಗ…

Read More

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರರ ನಡುವೆ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಒಂದು ನೋಟಿಸ್ ಗೆ ಶಾಸಕ ತಾಳವರು ಟ್ವೀಟ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ, ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಪ್ರಸ್ತುತಪಡಿಸುತ್ತೇನೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ರಾಜವಂಶದ ರಾಜಕೀಯಕ್ಕೆ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ತಮ್ಮ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲರಿಗೆ ನೋಟಿಸ್ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ…

Read More

ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳ ಬೆಳಗ್ಗೆ ಘೋರ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರವಾದ ಗಾಯಗಳಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಬೆಳಿಗ್ಗೆ ಎದ್ದು ಮನೆಯಲ್ಲಿ ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ ಬಾಗಿಲು ಪೀಸ್ ಪೀಸ್ ಆಗಿವೆ. ಗಾಯಾಳುಗಳಿಗೆ ಕೂಡಲೇ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪಾಸ್ ಪೋರ್ಟ್ ನೆಪದಲ್ಲಿ ಯುವತಿ ಒಬ್ಬಳಿಗೆ ಕಾನ್ಸ್ಟೇಬಲ್ ಒಬ್ಬ ಮನೆಗೆ ಬಂದು ಒಂದೇ ಒಂದು ಬಾರಿ ತಬ್ಬಿಕೋ, ಯಾರಿಗೂ ಹೇಳಲ್ಲ ಎಂದು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಯುವತಿಯ ದೂರಿನ ಮೇರೆಗೆ ಇದೀಗ ಕಾನ್ಸ್ಟೇಬಲ್ ಕಿರಣನ್ನು ಅಮಾನತುಗೊಳಿಸಿ ಪಶ್ಚಿಮ ವಿಭಾಗದ ಡಿಸಿಪಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಬಾಪೂಜಿ ನಗರದ ಯುವತಿ ಒಬ್ಬಳು ಪಾಸ್ ಪೋರ್ಟ್ ಗಾಗಿ ಇತ್ತೀಚಿಗೆ ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಕಾನ್ಸ್ಟೇಬಲ್ ಕಿರಣ್ ಡಾಕುಮೆಂಟ್ಸ್ ವೆರಿಫಿಕೇಶನ್ ನೆಪದಲ್ಲಿ ಎರಡು ಮೂರು ಬಾರಿ ಯುವತಿಯ ಮನೆಗೆ ತೆರಳಿದ್ದಾನೆ. ಈ ವೇಳೆ ಯುವತಿಯೊಂದಿಗೆ ಕಿರಣ್ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿಯು ದೂರಿನಲ್ಲಿ ಆರೋಪಿಸಿದ್ದಾಳೆ. ನಿನ್ನೆ ಕೂಡ ಕಿರಣ್ ಯುವತಿಯ ಮನೆಗೆ ಬಂದಿದ್ದಾನೆ. ಈ ವೇಳೆ ನಿನ್ನ ಅಣ್ಣ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆ. ನನಗೆ ಸಹಕರಿಸದಿದ್ದರೆ ಪಾಸ್ಪೋರ್ಟ್ ಕ್ಯಾನ್ಸಲ್ ಮಾಡುವುದಾಗಿ ಹೇಳಿ ಒಂದೇ ಒಂದು ಬಾರಿ ತಬ್ಬಿಕೋ ಯಾರಿಗೂ ಹೇಳಲ್ಲ ಎಂದು ಹೇಳಿದ್ದಾನೆ.ಯುವತಿ ಒಪ್ಪದಿದ್ದಾಗ ತಾನೇ ಹೋಗಿ…

Read More

ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಹರ್ಷವರ್ಧನ್ ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ಟ್ವಿಟ್ ನಲ್ಲಿ ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು.ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ. ಘಟನೆ ಹಿನ್ನೆಲೆ? ಹಾಸನ ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು…

Read More

ತಮಿಳುನಾಡು : ತಮಿಳುನಾಡಿನಲ್ಲಿ ಫೆಂಗಲ್ ಸೈಕ್ಲೋನ್ ನಿಂದ ಜನರು ಬೆಚ್ಚಿ ಬಿದ್ದಿದ್ದು ಇದುವರೆಗೂ ಈ ಒಂದು ಚಂಡಮಾರುತದ ಪರಿಣಾಮದಿಂದಾಗಿ ಒಟ್ಟು 11 ಜನರು ಸಾವನ್ನಪ್ಪಿದ್ದರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೌದು ತಮಿಳುನಾಡಿನಲ್ಲಿ ಫೆಂಗಲ್ ಆರ್ಭಟಕ್ಕೆ 11 ಜನರು ಬಲಿಯಾಗಿದ್ದಾರೆ. ಫೆಂಗಲ್ ಸೈಕ್ಲೋನ್ ಆರ್ಭಟಕ್ಕೆ ಇದುವರೆಗೂ 11 ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ ಫೆಂಗಲ್ ಅಬ್ಬರಿಸುತ್ತಿದ್ದು, ಮನೆಯ ಮೇಲೆ ಗುಡ್ಡ ಕುಸಿದು ದಂಪತಿ ಸೇರಿದಂತೆ, ಐವರು ಮಕ್ಕಳು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ರಾಜಕುಮಾರ್ ಹಾಗೂ ಮೀನಾ ದಂಪತಿ ಸೇರಿದಂತೆ ಐವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮನೆಯ ಮೇಲೆ ಬೆಟ್ಟ ಕುಸಿದು ಮಣ್ಣಿನ ಆಡಿ 7 ಜನರು ಸಿಲುಕಿದ್ದರು. ನವೆಂಬರ್ 30ರಂದು ಕರೆಂಟ್ ಶಾಕ್ ನಿಂದ ನಾಲ್ವರು ಮೃತಪಟ್ಟಿದ್ದರು. ಫೆಂಗಲ್ ಸೈಕ್ಲೋನ್ ಆರ್ಭಟಕ್ಕೆ ತಮಿಳುನಾಡಿನ ಜನ ಇದೀಗ ಅಕ್ಷರಶಃ ಬೆಚ್ಚಿಬಿದ್ದಿದೆ.

Read More

ಮಂಡ್ಯ : ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲು ಬಿರಿದ್ದು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಇದೀಗ ಮಂಡ್ಯ ಹಾಗೂ ಚಾಮರಾಜನಗರದಲ್ಲೂ ಕೂಡ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೌದು ಮಂಡ್ಯ ಜಿಲ್ಲೆಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಚಾಮರಾಜನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೂ ಕೂಡ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪ ನಾಗರಾಜ್ ಕಡ ಆದೇಶ ಹೊರಡಿಸಿದ್ದಾರೆ. ಫೆಂಗಲ್ ಪರಿಣಾಮದಿಂದ ಮಳೆಯಾಗುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಫಂಗಲ್ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಉಳಿದ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು…

Read More