Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿದೆ. ಡಿಸೆಂಬರ್ 24ರ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದೆ. ಇದರ ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಎಸ್ ಪಿ ಕಾಣಿಸುತ್ತಿಲ್ಲ ಬಹುಶಹ ಸಿಎಂ ಸಿದ್ದರಾಮಯ್ಯ ಅವರೇ ಕಿಡ್ನ್ಯಾಪ್ ಮಾಡಿಸಿರಬಹುದು ಎಂದು ಆರೋಪಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಎಸ್.ಪಿ ವಿರುದ್ಧವೇ ದೂರು ಕೊಡುತ್ತೇನೆ. ಸಿಎಂ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಎಸ್ಪಿ ನಾಪತ್ತೆಯಾಗಿದ್ದಾರೆ. ಫೋನ್ ತೆಗಿತಿಲ್ಲ ಎಸ್ ಪಿ ಕಾಣೆಯಾಗಿದ್ದಾರೆ ಎಂದು ದೂರು ಕೊಡುತ್ತೇನೆ. ಸಿದ್ದರಾಮಯ್ಯ ಕಿಡ್ನಾಪ್ ಮಾಡಿಸಿದ್ದರು ಮಾಡಿರಬಹುದು ಮೈಸೂರಿನಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮಧ್ಯಾಹ್ನ 3 ಗಂಟೆ ಒಳಗೆ FIR ಹಾಕದಿದ್ದರೆ ಎಸ್ ಪಿ ವಿರುದ್ಧವೇ ದೂರು ನೀಡುತ್ತೇನೆ. ಲೋಕಾಯುಕ್ತ ಎಸ್ ಪಿ ಕಾಣೆಯಾಗಿದ್ದಾರೆ ಅಂತ ಅನಿಸುತ್ತಿದೆ. ಮಧ್ಯಾಹ್ನ 3 ಗಂಟೆ ವರೆಗೆ ಲೋಕಾಯುಕ್ತ ಕಚೇರಿಯಲ್ಲಿ…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ SIT ವಶದಲ್ಲಿ ಇದ್ದು, ಇಂದು ಸಂತ್ರಸ್ತ ಮಹಿಳೆ ಮುನಿರತ್ನ ವಿರುದ್ಧ ಮತ್ತೊಂದು ಸ್ಪೋಟಕ ವಾದಂತಹ ಆರೋಪ ಮಾಡಿದ್ದಾಳೆ. ಶಾಸಕ ಮುನಿರತ್ನ ನನ್ನ ಮೇಲೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಅತ್ಯಾಚಾರ ಆಗಿದ್ದಾರೆ ಎಂದು ಪೊಲೀಸರ ವಿಚಾರಣೆ ವೇಳೆ ಸಂತ್ರಸ್ತ ಮಹಿಳೆ ಸ್ಪೋಟಕವಾದ ಆರೋಪ ಮಾಡಿದ್ದಾಳೆ. ವಿಧಾನಸೌಧವನ್ನು ಹಿಂದಿನ ಹಿರಿಯ ರಾಜಕಾರಣಿಗಳು ದೇವಸ್ಥಾನಕ್ಕೆ ಹೋಲಿಸಿದ್ದಾರೆ. ಅಲ್ಲದೆ ನ್ಯಾಯ ದೇವತೆಗೆ ಹೋಲಿಸುತ್ತಾರೆ. ಆದರೆ ಇಂಥ ಒಂದು ಪವಿತ್ರವಾದಂತಹ ಸ್ಥಳದಲ್ಲಿ ಒಬ್ಬ ಶಾಸಕರು, ಒಬ್ಬ ಜನಪ್ರತಿನಿಧಿಗಳು ಮಹಿಳೆಯ ಮೇಲೆ ಇಂತಹ ನೀಚ ಕೃತ್ಯ ನಡೆದಿರುವುದು ಜನರ ಆಕ್ರೋಶಕ್ಕೆ ಇದೀಗ ಕಾರಣವಾಗಿದೆ. ಹೌದು ವಿಚಾರಣೆಯ ವೇಳೆ ಸ್ಪೋಟಕ ಹೇಳಿಕೆ ನೀಡಿರುವ ಸಂತ್ರಸ್ತೆ ಮಹಿಳೆ, ಪೊಲೀಸರ ಮುಂದೆ ಮಹಿಳೆ ಮಹತ್ವದ ಹೇಳಿಕೆ ನೀಡಿದ್ದಾಳೆ. ವಿಧಾನಸೌಧದ ಮೂರನೇ ಮಹಡಿ ಹಾಗೂ ವಿಕಾಸಸೌಧದ ಅವರ ಕಚೇರಿಯಲ್ಲೇ ಶಾಸಕ ಮುನಿರತ್ನ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ನಾಯಕರು ವಿಧಾನಸೌಧ ಒಳ ನುಗ್ಗಲು ಯತ್ನಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ನಟ, ರಾಜ್ಯಸಭಾ ಸಂಸದ ಜಗ್ಗೇಶ್ ಸಿದ್ದರಾಮಯ್ಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದ ರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿಗೆ ಒಳಗಾಗ್ತಿದೆ. ಮೋದಿ ಹತ್ತು ವರ್ಷ ರಾಷ್ಟ್ರವನ್ನು ಸ್ವಚ್ಛಗೊಳಿಸಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರದ ಗೌರವ ಹೆಚ್ಚಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ಕಪ್ಪು ಚುಕ್ಕೆ ಇರಲಿಲ್ಲ. ಬಹಳ ಕ್ಲೀನ್ ಹ್ಯಾಂಡ್ ಎಂದು ತಿಳಿದಿದ್ದೆ. ಆದರೆ, ಇವರು ಒಳಗೊಂದು ಹೊರಗೊಂದು ಎಂದು ಕಿಡಿ ಕಾರಿದರು. ನ್ಯಾಯಾಲಯ ನೀವು ಮಾಡಿದ್ದು ತಪ್ಪು ಎಂದಾದರೂ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿರುವುದು ಅನುಮಾನ ಹುಟ್ಟಿಸಿದೆ.ಇವರ ಸಂಗಡಿಗರು ಒಂದಲ್ಲಾ ಒಂದು ಕೇಸ್ ನಲ್ಲಿ ತನಿಖೆಗೆ ಒಳಗಾದವರು. ಅವರಿಂದ ಕೇಜ್ರಿವಾಲ್ ಸಿದ್ದರಾಮಯ್ಯಗೆ ಫೋನ್ ಮಾಡಿ ಹೇಳಿರಬಹುದು. ಜೈಲಿನಲ್ಲಿ ಇದ್ದರೂ ಸರ್ಕಾರ ನಡೆಸಬಹುದು ಎಂದು ಹೇಳಿರಬಹುದು ಎಂದರು.
ಬೆಂಗಳೂರು : ಯುವಕನೊಬ್ಬ ಯುವತಿಗೆ ಹಣ ಕೊಡುವಂತೆ ಹೆದರಿಸಿದ್ದು, ಒಂದು ವೇಳೆ ಕೊಡದಿದ್ದರೆ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಹೆದರಿಸಿದ್ದಲ್ಲದೆ, ಆಸಿಡ್ ಹಾಕಿ ಯಾರು ಮದುವೆಯಾಗದಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಯುವತಿಗೆ ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದವನ ವಿರುದ್ಧ ಇದೀಗ ಕೇಸ್ ದಾಖಲಾಗಿದೆ. ಹಣ ಕೊಡದಿದ್ದರೆ ಫೋಟೋ ವಿಡಿಯೋ ವೈರಲ್ ಮಾಡುತ್ತೇನೆ ಎಂದು ಹೆದರಿಸಿರುವ ತಿರುಮಲ ಎಂಬ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ವಿಡಿಯೋ ಫೋಟೋ ವೈರಲ್ ಮಾಡುವುದಾಗಿ ಯುವಕ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಬೇರೆಯವರನ್ನು ಮದುವೆಯಾಗದಂತೆ ಆಸಿಡ್ ಹಾಕುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ್ದ ಯುವಕ ತಿರುಮಲ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಯುವತಿಯ ದೂರಿನ ಅನ್ವಯ ತಿರುಮಲ ವಿರುದ್ಧ ಸೆಕ್ಷನ್ 78 (¡¡) 79,351(3) ಬಿಎನ್ಎಸ್ 2023ರ ಅಡಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಾಗ ಕಾಂಗ್ರೆಸ್ ಕಾರ್ಯಕರ್ತರು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಭಟಿಸಿದ್ದರು. ಈ ವಿಚಾರವಾಗಿ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಅಂದು ಅನುಮತಿ ಕೊಟ್ಟ ರಾಜ್ಯಪಾಲರಿಗೆ ಆಗ ಚಪ್ಪಲಿ ಹಾರ ಹಾಕಿದ್ದೀರಿ. ಈಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ತನಿಖೆಗೆ ಆದೇಶ ನೀಡಿದೆ. ಈಗ ಅವರಿಗೂ ಚಪ್ಪಲಿ ಹಾರ ಹಾಕುತ್ತೀರಾ? ಎಂದು ಆಕ್ರೋಶ ಹೊರಹಾಕಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಾಜೀನಾಮೆ ಕೊಟ್ಟರಾ? ಎಂದು ಕೇಳಿದ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನನ್ನ ಮೇಲಿನ ಪ್ರಕರಣಗಳಿಗೂ ನಿಮ್ಮ ಹಗರಣಕ್ಕೂ ವ್ಯತ್ಯಾಸ ಇದೆ. ನನ್ನ ಮೇಲಿನ ಆರೋಪಗಳ ಮಾತು ಆಮೇಲೆ. ನಿಮ್ಮ ವಿರುದ್ಧ ಹೈಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯಗಳಿಂದ ಆದೇಶಗಳು ಬಂದಿವೆ. ಅದಕ್ಕೇನು ಹೇಳುತ್ತೀರಿ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ಹೈಕೋರ್ಟ್ ನಲ್ಲಿ ವಾದ ಮಾಡುವಾಗ ವಕೀಲರು ಮೂಡಾ…
ಕೇರಳ: ಶಿರೂರಿನ ಭೂ ಕುಸಿತದಲ್ಲಿ ಮೃತಪತ್ತಿದ್ದ ಕೇರಳದ ಅರ್ಜುನ್ ದೇಹ ಹಾಗೂ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೇರಳದ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಭೂಕುಸಿತದಲ್ಲಿ ಕೇರಳ ಮೂಲದ ಅರ್ಜುನ್ ಲಾರಿ ರಸ್ತೆ ಪಕ್ಕದಲ್ಲಿದ್ದ ನದಿಗೆ ಬಿದ್ದಿದ್ದು ನಾಪತ್ತೆಯಾಗಿತ್ತು. ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಅವರು ಶೋಧಕಾರ್ಯವನ್ನು ಮುಂದುವರೆಸಲು ಸೂಚಿಸಿದ್ದರು ಎಂದು ತಿಳಿಸಿದರು. ಕಳೆದ 6 ದಿನಗಳಿಂದ ಸತತವಾಗಿ ಕಾರ್ಯಾಚರಣೆ ನಡೆಸಿದ ಬಳಿಕ ಇಂದು ಕೇರಳ ಮೂಲದ ಅರ್ಜುನ್ ಮೃತದೇಹ ಹಾಗೂ ಆತ ಚಲಾಯಿಸುತ್ತಿದ್ದ ಭಾರತ್ ಬೆಂಜ್ ಲಾರಿ ಪತ್ತೆಯಾಗಿದೆ. ಲಾರಿಯನ್ನು ಮೇಲೆತ್ತುವಾಗ ಚಾಲಕ ಅರ್ಜುನ ಮೃತದೇಹ ಎರಡು ತುಂಡಾಗಿದ್ದದ್ದು ಕಂಡು ಬಂದಿದೆ. ಅರ್ಜುನ್ ಮೃತದೇಹದ ಜೊತೆಗೆ ಇನ್ನೋರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಅದು ಯಾರದು ಎನ್ನುವುದು ಇನ್ನೂ ಖಚಿತವಾಗಿಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದಂತಹ ರಸ್ತೆ ಅಪಘಾತ ನಡೆದಿದ್ದು, ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯ ಅಪಘಾತ ಸಂಭವಿಸಿ ಮೂರು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಎಂಬ ಗ್ರಾಮದಲ್ಲಿ ನಡೆದಿದೆ. ಈ ಒಂದು ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಮೂರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ನಿತೀಶ್ (17) ನಿತಿನ್ (17) ವೈಭವ್ (16) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಟ್ಯೂಷನ್ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತಿಳುವಾಗ ಈ ಒಂದು ಅಪಘಾತ ಸಂಭವಿಸಿದೆ. ಬಿವಿಎಸ್ ಶಾಲೆಯಲ್ಲಿ ನಿತೀಶ್ ಮತ್ತು ನಿತಿನ್ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇನ್ನೂ ವೈಭವ್ ಗುಡ್ ಶೆಫರ್ಡ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ನಿವಾಸಿಗಳು ಎಂದು ತಿಳಿದುಬಂದಿದೆ.ಘಟನೆ ಕುರಿತಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಇಡಿ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಕಳೆದ ಎರಡು ದಿನಗಳ ಹಿಂದೆ ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಫ್ರಿಜ್ನಲ್ಲಿ ಮಹಾಲಕ್ಷ್ಮಿ ಮೃತ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿಯಾಗಿರುವಂತಹ ಮುಕ್ತಿ ರಂಜನ್ ರಾಯ್ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಮುಕ್ತಿ ರಂಜನ್ ರಾಯ್ ಬೆಂಗಳೂರು ಬಿಟ್ಟು ಪರಾರಿಯಾಗಿದ್ದ. ಆತ ಪಶ್ಚಿಮ ಬಂಗಾಳದಲ್ಲಿ ಇದ್ದಾನೆ ಎಂದು ಪೊಲೀಸರಿಗೆ ಮಾಹಿತಿ ದೊರಕಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಆತನನ್ನು ಬಂದಿಸಲು ಬೆಂಗಳೂರಿನಿಂದ ಒಂದು ತಂಡ ತೆರಳಿತ್ತು. ಇದೀಗ ಮಹಾಲಕ್ಷ್ಮಿ ಕೊಲೆ ಆರೋಪಿ ಆಗಿರುವಂತಹ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿದು ಬಂದಿದೆ. ಪ್ರಕರಣದ ಹಿನ್ನೆಲೆ? ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ…
ಹುಬ್ಬಳ್ಳಿ : ಇಂದು ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಹುಡುಗಿಗೆ ಚುಡಾಯಿಸಬೇಡ ಎಂದಿದ್ದಕ್ಕೆ ಯುವಕನೊಬ್ಬ ಮಹಿಳೆಗೆ ಚಾಕು ಇರಿತ ಪ್ರಕರಣಕ್ಕೆ ಸಬಂಧಿಸಿದಂತೆ ಆರೋಪಿಯನ್ನು ವಿಚಾರಿಸುವ ವೇಳೆ ಪೋಲೀಸರ ಮೇಲೆ ಆರೋಪಿ ಮಹೇಶ್ ಹಲ್ಲೆ ಮಾಡಿದ್ದಾನೆ.ಈ ವೇಳೆ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಇಂದು ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಹುಡುಗಿಗೆ ಚುಡಾಯಿಸಬೇಡ ಎಂದು ನೀಲಾ ಹಂಪಣ್ಣವರ ಮಹಿಳೆ ಮೇಲೆ ಮಹೇಶ್ ಎನ್ನುವ ವ್ಯಕ್ತಿ ಚಾಕು ಇರಿದಿದ್ದಾನೆ. ಈ ವೇಳೆ ಆರೋಪಿ ಮಹೇಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಹೇಶ್ ಪೋಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ತಕ್ಷಣ ತಮ್ಮನ್ನು ರಕ್ಷಣೆ ಮಾಡಿಕೊಳ್ಳಲು ಆರೋಪಿ ಮಹೇಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಮದುವೆಯಾಗುವಂತೆ ನೀಲಾ ಮಗಳಿಗೆ ಪೀಡಿಸುತ್ತಿದ್ದ ಅದಕ್ಕೆ ನೀಲಾ ಮಹೇಶ್ ಗೆ ಬುದ್ಧಿ ಹೇಳಿದ್ದಾರೆ. ಸದ್ಯ ಮಹೇಶ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಹಿನ್ನೆಲೆ? ಹುಬ್ಬಳ್ಳಿಯ ಲೋಹಿಯ ನಗರದಲ್ಲಿ ಮಹಿಳೆಗೆ ಚಾಕು ಹಿಡಿದಿರುವ ಘಟನೆ…
ಬೆಂಗಳೂರು : ರಾಜ್ಯದಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ಸಿ.ಟಿ ಸ್ಕ್ಯಾನ್ ಹಾಗೂ ಎಂ.ಆರ್ ಐ ಸೇವೆಗಳು ಸ್ಥಗಿತಗೊಂಡಿವೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆ ಮಾಧ್ಯಮಗಳಲ್ಲಿ ಬಂದಿರುವ ವರದಿ ನಿರಾಧಾರ ಎಂದಿದೆ. ರಾಜ್ಯದಲ್ಲಿ CT ಮತ್ತು MRI ಸೇವೆಗಳಿಗೆ ಅನುದಾನದ ಕೊರತೆಯಿದೆ ಎಂಬ ಮಾಧ್ಯಮ ವರದಿಗಳು ಆಧಾರರಹಿತವಾಗಿದೆ. CT ಮತ್ತು MRI ಸೇವೆಗಳಿಗೆ ಅಗತ್ಯವಿರುವ 63.49ಕೋಟಿ ಅನುದಾನ ಆರೋಗ್ಯ ಇಲಾಖೆಯ ಬಳಿ ಲಭ್ಯವಿದ್ದು ಯಾವುದೇ ರೀತಿಯ ಅನುದಾನದ ಕೊರತೆಯಾಗಿಲ್ಲ ಎಂದು ಇಲಾಖೆ ಸ್ಪಷ್ಟನೆ ನೀಡಿದೆ. ರಾಜ್ಯದಲ್ಲಿ ಒಟ್ಟು 3 ಸಂಸ್ಥೆಗಳು CT ಮತ್ತು MRI ಸೇವೆಗಳನ್ನು ಒಗದಿಸುತ್ತಿವೆ. ಅದರಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯು ಬಿಲ್ ಪಾವತಿಗಾಗಿ ನೀಡಿದ…