Author: kannadanewsnow05

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರರ ನಡುವೆ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದೆ. ಹೌದು ಬಿಜೆಪಿ ಶಾಸಕ ಬಸನಗೌಡ ಪಾಟೀಲರಿಗೆ ನೋಟಿಸ್ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಹತ್ತು ದಿನದ ಒಳಗೆ ಉತ್ತರ ನೀಡುವಂತೆ ಯತ್ನಾಳಗೆ ನೋಟಿಸ್ ನೀಡಿದೆ. ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. 10 ದಿನದೊಳಗೆ ಕಾರಣ ಕೊಡಿ ಎಂದು ಯತ್ನಾಳ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಬಿವೈ ವಿಜಯೇಂದ್ರ ಆಪ್ತರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕಾರ್ಯಕರ್ತರು ಯತ್ನಾಳ್ ನಿಂದ ಏನು ಉಪಯೋಗ…

Read More

ಬೆಂಗಳೂರು : ಬೆಂಗಳೂರಿನ ಜನತೆಗೆ BMRCL ಸಿಹಿ ಸುದ್ದಿಯೊಂದನ್ನು ನೀಡಿದ್ದು, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇನ್ನು ಮುಂದೆ 5G ಇಂಟರ್ನೆಟ್ ಸಿಗಲಿದೆ. ಮೆಟ್ರೋ ಪ್ರಯಾಣದ ವೇಳೆ ಸಾರ್ವಜನಿಕರಿಗೆ 5ಜಿ ಮೊಬೈಲ್ ನೆಟ್‌ವರ್ಕ್ ಸೌಲಭ್ಯ ಒದಗಿಸುವುದು ಹಾಗೂ ತನ್ನ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ‘ನಮ್ಮ ಮೆಟ್ರೋ’ ಪಿಲ್ಲರ್ ಗಳಲ್ಲಿ ನೆಟ್ವರ್ಕ್ ಸೆಲ್ ಅಳವಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಮುಂದಾಗಿದೆ. ಹೌದು ಮೆಟ್ರೋ ಸಂಚಾರದ ವೇಳೆ ಪ್ರಯಾಣಿಕರಿಗೆ ಕೆಲವೆಡೆ ಕಚೇರಿ ಕೆಲಸ ಮಾಡಲು. ಮಾತನಾಡಲು ಸಾಧ್ಯವಾಗುತ್ತಿಲ್ಲ, ಈ ಹಿನ್ನೆಲೆಯಲ್ಲಿ ನೆಟ್ವರ್ಕ್ ಸಮಸ್ಯೆ ಪರಿಹರಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ಜತೆಗೆ ನೆಟ್‌ವರ್ಕ್ ಸಲ್ ಗಳ ಅಳವಡಿಕೆ ಮೂಲಕವೂ ಟೆಲಿಕಾಂ ಕಂಪನಿಗಳಿಂದ ಬಾಡಿಗೆ ಪಡೆದು ಆದಾಯ ಗಳಿಸಿಕೊಳ್ಳಲು ಮುಂದಾಗಿದೆ. ವೈಟ್‌ ಫೀಲ್ಡ್‌ ಮೆಟ್ರೋ ನಿಲ್ದಾಣದಿಂದ ಪ್ರಾರಂಭವಾಗಿ ಚಲ್ಲಘಟ್ಟ ಟರ್ಮಿನಲ್‌ವರೆಗೆ (43.49ಕಿ.ಮೀ.) ಹಾಗೂ ಉತ್ತರ-ದಕ್ಷಿಣಕಾರಿಡಾರ್ ಮಾದಾವರದಲ್ಲಿಪ್ರಾ ರಂಭವಾಗಿ ಸಿಲ್ಕ್ ಇನ್‌ಸ್ಟಿಟ್ಯೂಟ್‌ವರೆಗೆ (33.5 ಕಿ.ಮೀ.) ಮತ್ತು ಎಲೆಕ್ಟ್ರಾನಿಕ್ ಸಿಟಿ ಮಾರ್ಗ ಆರ್.ವಿ.ರಸ್ತೆ – ಬೊಮ್ಮನಹಳ್ಳಿ ಹಾಗೂ ಗೊಟ್ಟಿಗೆರೆ-ನಾಗವಾರ ಮಾರ್ಗದಲ್ಲಿ ಪಿಲ್ಲರ್…

Read More

ಬೆಂಗಳೂರು : ತಮಿಳುನಾಡಿನಲ್ಲಿ ಫಂಗಲ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡು ಅಷ್ಟೇ ಅಲ್ಲದೆ ಕರ್ನಾಟಕಕ್ಕೂ ಅದರ ಎಫೆಕ್ಟ್ ಬೀರಿದೆ. ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಜಟಿಜಿಟಿ ಮಳೆ ಹಾಗೂ ಚಳಿಯಿಂದ ಜನರು ನಡುಗುತ್ತಿದ್ದಾರೆ. ಆದರೆ BREAKING : ‘ಫಂಗಲ್’ ಎಫೆಕ್ಟ್ : ಇಂದು ಬೆಂಗಳೂರಿನಲ್ಲಿ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಬೆಂಗಳೂರು ನಗರ ಶಾಲಾ ಕಾಲೇಜುಗಳಿಗೆ ಯಾವುದೇ ರೀತಿಯಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಹೌದು ಬೆಂಗಳೂರಿನ ನಗರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಎಂದಿನಂತೆ ಸ್ಕೂಲ್ ಹಾಗೂ ಕಾಲೇಜ್ಗಳು ಓಪನ್ ಆಗಲಿವೆ. ಆದರೆ ಪೋಷಕರು ಎಚ್ಚರಿಕೆಯಿಂದ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಬೇಕು. ಎಚ್ಚರಿಕೆಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಸೂಚನೆ ನೀಡಲಾಗಿದೆ. ಹಾಗಾಗಿ ಮಳೆಯಲ್ಲಿಯೇ ಶಾಲಾ ಮಕ್ಕಳು ಕೊಡೆ ಹಿಡಿದುಕೊಂಡು ಶಾಲೆಗೆ ತೆರಳುತ್ತಿದ್ದಾರೆ.ನಿನ್ನೆ ರಾತ್ರಿಯಿಂದ ನಿರಂತರವಾಗಿ ಬೆಂಗಳೂರು ನಗರದಾದ್ಯಂತ ಜಟಿಜಿಟಿ ಮಳೆ ಆಗುತ್ತದೆ ಚಳಿ ಮತ್ತು ಮಳೆಗೆ ರಾಜಧಾನಿಯ ಜನ ಇದೀಗ ನಡುಗುತ್ತಿದ್ದು, ತತ್ತರಿಸಿದ್ದಾರೆ. ಇದೇ ವೇಳೆ ಫಂಗಲ್ ಚಂಡಮಾರುತ…

Read More

ಹಾಸನ : ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ನಿನ್ನೆ ಮೈಸೂರಿನಲ್ಲಿ ಐಜಿಪಿಯವರನ್ನು ಭೇಟಿಯಾಗಿ ಹಾಸನ ಡಿವೈಎಸ್ಪಿಯಾಗಿ ವರ್ಗಾವಣೆಯಾಗಿದ್ದ ಕಾರಣ, ವರದಿ ಮಾಡಿಕೊಳ್ಳಲು ಜಿಲ್ಲಾ ಪೊಲೀಸ್ ಕಚೇರಿಗೆ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನ ತಾಲ್ಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿಯಲ್ಲಿ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಕಾರು ಅಪಘಾತದಲ್ಲಿ ಗಾಯಗೊಂಡಿದ್ದಂತ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವ ಸ್ಥಿತಿಯಲ್ಲೂ ಅವರು ಇರಲಿಲ್ಲ. ಇದರ ನಡುವೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದರು. ಕ್ಷಣ ಕ್ಷಣಕ್ಕೆ ಅವರ ಸ್ಥಿತಿ ಗಂಭೀರಗೊಂಡಿತ್ತು. ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

Read More

ತುಮಕೂರು : ತುಮಕೂರಿನಲ್ಲಿ ಬೆಳ್ಳಂಬೆಳ್ಳಿಗ್ಗೆ ಭೇಕರವಾದಂತಹ ಅಪಘಾತ ಸಂಭವಿಸಿದ್ದು, ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಒಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು  ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಬೆಳಗ್ಗಿನ ಜಾವ 4.30ರ ವೇಳೆಗೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನೆಲ್ಲ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಒಂದು ಖಾಸಗಿ ಬಸ್ ನಲ್ಲಿ 29 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ. ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು,…

Read More

ಬೆಂಗಳೂರು : ಬೆಂಗಳೂರಿನಲ್ಲಿ ಒಂದು ವಿಚಿತ್ರವಾದಂತ ಘಟನೆ ನಡೆದಿದ್ದು, ಬೆಕ್ಕಿನ ಮರಿ ಒಂದು ಕೇವಲ ಮೂತ್ರ ಮಾಡಿದ್ದಕ್ಕೆ ವ್ಯಕ್ತಿ ಒಬ್ಬ ಕಾಲಿನಿಂದ ಒದ್ದು ಗಾಯಗೊಳಿಸಿದ್ದಾನೆ. ಇದೀಗ ಬೆಕ್ಕಿನ ಮರಿಗೆ ಒದ್ದವನ ವಿರುದ್ಧ ವ್ಯಕ್ತಿ ಒಬ್ಬರು ಮೈಕೋ ಲೇಔಟ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಹೌದು ಈ ಒಂದು ಘಟನೆ ನಡೆದಿದ್ದು, ಬೆಂಗಳೂರಿನ ಬಿಟಿಎಂ ಲೆಔಟ್ ನಲ್ಲಿ ನಡೆದಿದ್ದು, ಮೊಹಮ್ಮದ್ ಅಫ್ತಾಬ್ ನೀಡಿರುವ ದೂರಿನ ಮೇರೆಗೆ ಮನೀಶ್ ರತ್ನಾಕ‌ರ್ ಎನ್ನುವವರ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆ ಕಾಯ್ದೆ ಸೆಕ್ಷನ್‌ 325ರಡಿ ಎಫ್‌ಐಆ‌ರ್ ದಾಖಲಾಗಿದೆ. ದೂರುದಾರ ಮೊಹಮ್ಮದ್ ಅಫ್ತಾಬ್ ಹಾಗೂ ಆರೋಪಿ ಮನೀಶ್ ರತ್ನಾಕ‌ರ್ ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ಒಂದೇ ಮನೆಯಲ್ಲಿ ವಾಸವಿದ್ದರು. ನವೆಂಬ‌ರ್ 26ರಂದು ಮನೀಶ್ ರತ್ನಾಕ‌ರ್ ಮನೆಯಲ್ಲಿದ್ದಾಗ ಬೆಕ್ಕು ಮನೆಯಲ್ಲಿ ಮೂತ್ರ ವಿಸರ್ಜನೆ ಮಾಡಿದೆ. ಇದರಿಂದ ಸಿಟ್ಟಿಗೆದ್ದ ಮನೀಶ್‌, ಬೆಕ್ಕಿಗೆ ಕಾಲಿನಿಂದ ಒದ್ದು ಗಾಯಗೊಳಿಸಿದ್ದಾರೆ. ಬಳಿಕ ಮೊಹಮ್ಮದ್ ಅಫ್ತಾಬ್‌ಗೆ ಕರೆ ಮಾಡಿ, ಬೆಕ್ಕು ಮನೆಯಲ್ಲಿ…

Read More

ಮೈಸೂರು : ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾಗಿದೆ. ಈ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಇದೀಗ ಇಂದು ಮೈಸೂರಿನ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಹೌದು ಮೈಸೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆಯಾಗಿದ್ದು, ಫೆಂಗಲ್ ಚಂಡಮಾರುತದಿಂದ ಜಡಿ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸೂಚನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಈಗಾಗಲೇ ನಿನ್ನೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

Read More

ನಾಗ್ಪುರ : ಜನನ ಪ್ರಮಾಣ 2.1 ಕ್ಕಿಂತ ಕಡಿಮೆಯಾದರೆ ಸಮಾಜದ ಅಳಿವು ಸಂಭವಿಸಬಹುದು. ಹಾಗಾಗಿ ಪ್ರತಿಯೊಬ್ಬ ದಂಪತಿಗಳು ಮೂರು ಮಕ್ಕಳನ್ನು ಹೆರಬೇಕು ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು ಇದೀಗ ಭಾರಿ ವೈರಲ್ ಆಗಿದೆ. ನಾಗ್ಪುರದಲ್ಲಿ ನಡೆದ ‘ಕಥಲೆ ಕುಲ್ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ಸಮಾಜದ ಜನಸಂಖ್ಯೆಯು 2.1 ಕ್ಕಿಂತ ಕಡಿಮೆಯಾದರೆ, ಆ ಸಮಾಜವು ಭೂಮಿಯಿಂದ ಕಣ್ಮರೆಯಾಗುತ್ತದೆ ಎಂದು ಆಧುನಿಕ ಜನಸಂಖ್ಯಾ ವಿಜ್ಞಾನವೇ ಹೇಳುತ್ತದೆ. ಈಗಾಗಲೇ ಈ ರೀತಿಯಲ್ಲಿ ಅನೇಕ ಭಾಷೆಗಳು ಮತ್ತು ಸಮಾಜಗಳು ಅಸ್ತಿತ್ವವನ್ನು ಕಳೆದುಕೊಂಡಿವೆ. ಹಾಗಾಗಿ ಜನಸಂಖ್ಯೆಯು 2.1 ಕ್ಕಿಂತ ಕಡಿಮೆ ಇರಬಾರದು ಎಂದು ಹೇಳಿದ್ದಾರೆ. ಅನೇಕ ಬಿಜೆಪಿ ನಾಯಕರು ಜನಸಂಖ್ಯಾ ನಿಯಂತ್ರಣದ ಬಗ್ಗೆ ಧ್ವನಿ ಎತ್ತಿರುವ ಸಮಯದಲ್ಲೇ ಮೋಹನ್ ಭಾಗವತ್ ಅವರು ಈ ಹೇಳಿಕೆ ನೀಡಿದ್ದು, ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಕೆಲವು ತಿಂಗಳ ಹಿಂದೆ ರಾಜಸ್ಥಾನದ ಬಿಜೆಪಿ ಶಾಸಕ ಬಾಲ್ಮುಕುಂಡಾಚಾರ್ಯ ಜನಸಂಖ್ಯಾ ನಿಯಂತ್ರಣ ಮಸೂದೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದೀಗ ಮೋಹನ್ ಭಾಗವತ್​…

Read More

ಬೆಂಗಳೂರು : ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾಗಿದೆ. ಈ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಸಂಬಂಧ ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಹಾಗೂ ಕರಾವಳಿ ಜಿಲ್ಲೆಗಳಾದಂತ ಉಡುಪಿ, ದಕ್ಷಿಣ ಕನ್ನಡದಲ್ಲಿಯೂ ಭಾರೀ ಮಳೆಯಾಗಲಿದೆ. ಸಾರ್ವಜನಿಕರು ಎಚ್ಚರಿಕೆಯವಹಿಸುವಂತೆ ತಿಳಿಸಿ, ಯೆಲ್ಲೋ ಅಲರ್ಟ್ ನೀಡಿದ್ದಾರೆ. ಇಂದು ಕೊಡಗು, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ,…

Read More

ಹಾವೇರಿ : ಹಾವೇರಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮನೆ ಮುಂದೆ ಆಟವಾಡುತ್ತಿದ್ದ 12 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಣಕ್ಕೆ ಯತ್ನಿಸಿದ್ದು, ಅದೃಷ್ಟವಶಾತ್ ಬಾಲಕ ತನ್ನ ಸಮಯ ಪ್ರಜ್ಞೆಯಿಂದ ಕಿಡ್ನಾಪರಿಂದ ಬಚಾವ್ ಆಗಿರುವ ಘಟನೆ ಹಾವೇರಿ ನಗರದ ಪುರದ ಓಣಿಯಲ್ಲಿ ನಡೆದಿದೆ. ಅಪಹರಣಕ್ಕೊಳಗಾಗಿದ್ದ ಬಾಲಕನನ್ನು ಮೊಹ್ಮದ್ ಅಯಾನ್(12) ಎಂದು ತಿಳಿದುಬಂದಿದೆ. ಹಾವೇರಿ ನಗರದ ಪುರದ ಓಣಿ ನಿವಾಸಿ ಮೊಹಮ್ಮದ್ ಅಯಾನ್ ನಿನ್ನೆ ಸಂಜೆ ಸುಮಾರು 7 ಗಂಟೆಗೆ ಎಂದಿನಂತೆ ಹೊರಗಡೆ ಬಂದಿದ್ದ. ಈ ವೇಳೆ ಮಾರುತಿ ಇಕೋ ವ್ಯಾನ್ ನಲ್ಲಿ ಮಾಸ್ಕ್ ಧರಿಸಿದ್ದ ಅಪಹರಿಸಲು ಬಂದ ನಾಲ್ವರು ಆಗುಂತಕರು. ಬಾಲಕನ್ನು ಹಿಡಿದು ವ್ಯಾನ್‌ಗೆ ತಳ್ಳಿದ್ದಾರೆ. ಓಣಿಯಿಂದ ಕಿಡ್ನಾಪ್ ಮಾಡಿದ ಬಳಿಕ ಅಲ್ಲಿಂದ ಅಕ್ಕಿಪೇಟೆಗೆ ಕರೆತಂದಿರುವ ದುರುಳರು. ಈ ವೇಳೆ ಅಲ್ಲಿಂದ ಬಿಡಿಸಿಕೊಳ್ಳಲು ಯತ್ನಿಸಿದ ಬಾಲಕನ ಮುಖದ ಭಾಗ, ಗಲ್ಲ ಹಾಗೂ ಬೆನ್ನಿಗೆ ಹಲ್ಲೆ ಮಾಡಿದ್ದಾರೆ. ಅಷ್ಟರಲ್ಲಿ ಅಪಹರಣಕಾರರಿಗೆ ತುರ್ತು ವಿಸರ್ಜನೆ ಹಿನ್ನೆಲೆ ಮಧ್ಯೆ ವ್ಯಾನ್ ನಿಲ್ಲಿಸಿ ಕೆಳಗಿಳಿದಿದ್ದಾರೆ. ಗಾಡಿ ನಿಲ್ಲಿಸಿ ಡೂರ್…

Read More