Subscribe to Updates
Get the latest creative news from FooBar about art, design and business.
Author: kannadanewsnow05
ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿರುವಂತಹ ಶ್ರೀ ಕೃಷ್ಣದೇವರಾಯ ಸಮಾಧಿಯ ಮೇಲೆ ಮಾಂಸ ಶುದ್ಧೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಮಾಂಸ ಶುದ್ಧೀಕರಣ ಮಾಡಿದ ಮೂವರ ವಿರುದ್ಧ FIR ದಾಖಲಾಗಿದೆ. ಆನೆಗೊಂದಿ ಗ್ರಾಮದ ಹನುಮಂತ ಹಾಗು ಇನ್ನಿಬ್ಬರ ವಿರುದ್ಧ ಕೊಪ್ಪಳ ಜಿಲ್ಲೆಯ ಗಂಗಾವತಿ ಗ್ರಾಮಾಂತರ ಠಾಣೆಯಲ್ಲಿ ಮೂವರ ವಿರುದ್ಧ FIR ದಾಖಲಾಗಿದೆ. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಸ್ಪಂದಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು.ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ತಿಳಿವಳಿಕೆ ಇಲ್ಲದೆ ಕೆಲವು ಮಂದಿ ಈ ತಪ್ಪನ್ನು ಎಸಗಿರುವುದು ತಿಳಿದುಬಂದಿದೆ. ಐತಿಹಾಸಿಕ ತಾಣದ ಬಳಿ ಈ ರೀತಿ ಮಾಂಸ ಕಟ್ ಮಾಡುವುದು ಅಕ್ಷಮ್ಯ ಅಪರಾಧವಾಗಿದ್ದು, ಅಲ್ಲಿನ ಸ್ಥಳೀಯರಿಗೆ ತಿಳುವಳಿಕೆ ಹೇಳಿ ಎಚ್ಚರಿಕೆ ನೀಡಲಾಗಿದೆ. ಬಳಿಕ ಹಂಪಿ ಸ್ಮಾರಕಗಳ ಬಳಿಯಲ್ಲಿ…
ವಿಜಯಪುರ : ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳ ರಕ್ಷಣೆ ಮಾಡಲು ಆಗುತ್ತಿಲ್ಲ. ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದರು. ಇದು ಹಿಂದೂ ವಿರೋಧಿ ಸರಕಾರ. ಈ ಸರ್ಕಾರವನ್ನು ಎದುರಿಸುವ ಸಾಮರ್ಥ್ಯ ಬಿಜೆಪಿ ರಾಜ್ಯಾಧ್ಯಕ್ಷನಿಗೆ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ವಿಫಲರಾಗಿದ್ದಾರೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿ ವೈ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬದಲಾವಣೆ ಕುರಿತಂತೆ ವಿಜಯಪುರ ನಗರ ಉಚ್ಚಾಟಿತ ಬಿಜೆಪಿ ಶಾಸಕ ಯತ್ನಾಳ್ ಮಾತನಾಡಿ, ಪಕ್ಷದಲ್ಲಿ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ನಾನು ಪಕ್ಷದಿಂದ ಉಚ್ಚಾಟನೆಯಾದ ಬಳಿಕ ಯಾರ ಸಂಪರ್ಕದಲ್ಲೂ ಇಲ್ಲ. ಹಳ್ಳಿ ಹಳ್ಳಿಗಳಲ್ಲೂ ನನಗೆ ಉತ್ತಮ ಬೆಂಬಲ ಸಿಗುತ್ತಿದೆ. ಹಿಂದುತ್ವ ಉಳಿಯಲು ನಿರ್ಣಯ ಮಾಡಬೇಕು ಎಂದು ಹೇಳುತ್ತಿದ್ದಾರೆ. ಮೂರು ರಾಜಕೀಯ ಪಕ್ಷಗಳ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ವಿಜಯದಶಮಿ ವರೆಗೂ ನಾನು ರಾಜ್ಯ ಪ್ರವಾಸ ಮಾಡುತ್ತೇನೆ. ನಾಳೆ ಹಾವೇರಿಯಲ್ಲಿ ಕೆ ಎಸ್ ಈಶ್ವರಪ್ಪ ನಾನು…
ಬೆಂಗಳೂರು : ಜಾತಿ ಗಣತಿ ವರದಿಯಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಿದೆ ಎಂದು ಇತ್ತೀಚಿಗೆ ವರದಿ ಬಹಿರಂಗವಾಗಿತ್ತು. ಇನ್ನು ಈ ಒಂದು ವರದಿಯಲ್ಲಿ ಮುಸ್ಲಿಮರು ಹೆಚ್ಚಾಗಿದ್ದಾರೆ ಎಂದು ಲೇಖವಾಗಿದ್ದು ಹಾಗಾದರೆ ಮುಸ್ಲಿಮರು ರಾಜ್ಯದಲ್ಲಿ ಅಲ್ಪಸಂಖ್ಯಾತರು ಹೇಗೆ ಆಗುತ್ತಾರೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ ಸಂಪುಟದ ಸಚಿವರಿಗೆ ಸಮಾಧಾನ ಪಡಿಸಲು ಆಗಿಲ್ಲ. ಜಾತಿಗಣತಿ ವರದಿಯ ಬಗ್ಗೆ ನಿಮ್ಮ ಶಾಸಕರನ್ನು ಒಪ್ಪಿಸಲಾಗಿಲ್ಲ. ಇನ್ನು ರಾಜ್ಯದ ಜನರಿಗೆ ಹೇಗೆ ಒಪ್ಪಿಸುತ್ತೀರಿ? ಮೊದಲು ನಿಮ್ಮ ಸಚಿವರು ಹಾಗೂ ಶಾಸಕರನ್ನು ಜಾತಿಗಣತಿ ವರದಿ ಬಗ್ಗೆ ಸಮಾಧಾನಪಡಿಸಿ. ಸದಸ್ಯ ಕಾರ್ಯದರ್ಶಿಯೇ ಜಾತಿಗಣತಿ ಸಮೀಕ್ಷೆಗೆ ಸಹಿ ಹಾಕಿಲ್ಲ. ಇನ್ನು ಅದಕ್ಕೆ ಹೇಗೆ ಮಾನ್ಯತೆ ಸಿಗುತ್ತದೆ? ಎಂದು ಪ್ರಶ್ನಿಸಿದರು. ಕೆಲ ಸಮುದಾಯಗಳ ಸಂಖ್ಯೆ ಹೆಚ್ಚಾಗಿದೆ. ಇನ್ನು ಕೆಲವರದ್ದು ಕಡಿಮೆ ಆಗಿದೆ. ಇದನ್ನು ಹೇಗೆ ಸರಿಪಡಿಸುತ್ತೀರಿ? ಜಾತಿಗಣತಿ ಸಮೀಕ್ಷೆ ಸರಿಯಾಗಿ ಆಗಿಲ್ಲ. ರಾಜ್ಯದ ನಂಬರ್ ಒನ್ ಜನಸಂಖ್ಯೆ ಮುಸ್ಲಿಂ…
ಬೆಳಗಾವಿ : ಬೆಳಗಾವಿಯಲ್ಲಿ ಹಾಡಹಗಲೇ ಭೀಕರವಾದ ಕೊಲೆಯಾಗಿದ್ದು, ಅಪಾರ್ಟ್ಮೆಂಟ್ಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆಗೈದ ಘಟನೆ ಜಿಲ್ಲೆಯ ಗಣೇಶಪುರದ ಲಕ್ಷ್ಮಿ ನಗರದಲ್ಲಿ ನಿನ್ನ ಸಂಜೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ಲಕ್ಷ್ಮಿ ನಗರದ ನಿವಾಸಿ ಅಂಜನಾ ಅಜೀತ ದಡ್ಡೀಕರ್(53) ಎಂದು ತಿಳಿದುಬಂದಿದೆ. ಅಪಾರ್ಟ್ಮೆಂಟ್ ಮನೆಯಲ್ಲಿ ಗಂಡ-ಹೆಂಡತಿ ಮಾತ್ರ ವಾಸವಾಗಿದ್ದರು. ಪತಿ ಅಜಿತ್ ಆಟೋ ರಿಕ್ಷಾ ನಡೆಸುತ್ತಿದ್ದಾರೆ. ಕೆಲಸ ಮುಗಿಸಿ ಸಂಜೆ ಮನೆಗೆ ಬಂದಾಗ ಪತ್ನಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ನಿರಂಜನರಾಜೇ ಅರಸ್, ಕ್ಯಾಂಪ್ ಪೊಲೀಸ್ ಠಾಣೆ ಸಿಪಿಐ ಅಲ್ತಾಫ್ ಮುಲ್ಲಾ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಆಗಮಿಸಿ ಪರಿಶೀಲಿಸಿದ್ದಾರೆ. ಬೆಳಗಾವಿ ಕ್ಯಾಂಪ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಲ್ಲಿ ನಡೆಯಿತು. ಸರ್ಕಾರದ ಪರವಾಗಿ ಸಿದ್ದಾರ್ಥ್ ಲೂಥ್ರಾ ವಾದಿಸಿದರೆ, ನಟ ದರ್ಶನ್ ಪರವಾಗಿ ಅಭಿಷೇಕ್ ಮನುಸಿಘವಿ ವಾದಿಸಿದರು. ವಾದ ಪ್ರತಿವಾದ ಬಳಿಕ ವಿಚಾರಣೆ ನಡೆಸಿದ ನ್ಯಾ. ಜೆಬಿ ಪರ್ದಿವಾಲಾ ಹಾಗು ನ್ಯಾ. ಮಹದೇವನ್ ದ್ವಿಸದಸ್ಯ ಪೀಠವು, ಅರ್ಜಿಯ ವಿಚಾರಣೆಯನ್ನು ಮೇ 14ಕ್ಕೆ ಮಂದೂಡಿ ಆದೇಶಿಸಿತು. ವಿಚಾರಣೆ ಆರಂಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಕೀಲ ಸಿದ್ಧಾರ್ಥ ಲೂಥ್ರಾ ಅವರು ವಾದ ಮಂಡಿಸಿದರು.ಈ ವೇಳೆ ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿದೆಯಾ? ಎಂದು ಜಡ್ಜ್ ಪ್ರಶ್ನಿಸಿದರು. ಹೌದು ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿದೆ ಎಂದು ಸಿದ್ಧಾರ್ಥ ಲೂಥ್ರಾ ಅವರು ಜಡ್ಜ್ ಅವರಿಗೆ ತಿಳಿಸಿದರು. ಆರೋಪಿ ಏನು ರಾಜಕಾರಣಿಯಾ? ಎಂದು ಮರು ಪ್ರಶ್ನಿಸಿದರು. ರಾಜಕಾರಣಿ ಅಲ್ಲ ಜನಪ್ರಿಯ ನಟ ಎಂದು ಸಿದ್ಧಾರ್ಥ ಲೂಥ್ರಾ ಅವರು ತಿಳಿಸಿದರು. ನಂತರ ಪಟ್ಟಣಗೆರೆ…
ಬೆಂಗಳೂರು : ಸಿಇಟಿ ಪರೀಕ್ಷೆಯ ವೇಳೆ ಶಿವಮೊಗ್ಗ ಬೀದರ್ ಹಾಗೂ ಧಾರವಾಡದಲ್ಲಿ ಅಭ್ಯರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಹಲವು ಕಡೆ ಬ್ರಾಹ್ಮಣ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಹಿಜಾಬ್ ಕಿಡಿ ಸ್ಫೋಟವಾಗಿದೆ. ಹೌದು ಅಲಿಯಾ ಅಸ್ಸಾದಿ ಎಂಬ ಯುವತಿಯು ಟ್ವೀಟ್ ನಲ್ಲಿ ಬ್ರಾಹ್ಮಣ ವಿದ್ಯಾರ್ಥಿಗೆ ಉಚಿತ ಇಂಜಿನಿಯರ್ ಸೀಟ್ ನೀಡುತ್ತೀರಿ, ನಮ್ಮನ್ನು ಇದುವರೆಗೂ ಪರೀಕ್ಷೆ ಬರೆದಿದ್ದೀರೋ ಇಲ್ಲವೋ ಎಂದು ಸೌಜನ್ಯಕ್ಕಾದರೂ ಕೇಳಿಲ್ಲ, ಇದು ನಮ್ಮ ವ್ಯವಸ್ಥೆ ಎಂದು ತಿಳಿಸಿದ್ದಾಳೆ. ಮತ್ಯಾಕೆ ತಾರತಮ್ಯ, ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ. ಇಲ್ಲಿ ಜನಿವಾರವನ್ನು ತಡೆದ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡ್ತಾರೆ ಹಿಜಾಬಿಗಳಿಗೆ ಕಾಲೇಜು ಗೇಟ್ ಬಂದ್ ಮಾಡಿದ ಅಧಿಕಾರಿಗೆ ಯಾವ ಶಿಕ್ಷೆಯೂ ಇಲ್ಲ.ಜನಿವಾರ ಹಾಕಿದ ಕಾರಣಕ್ಕೆ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಮಕ್ಕಳ ನೋವು ಒಂದೇ…
ವಿಜಯನಗರ : ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ, ಪ್ರಿಯಕರನೊಬ್ಬ ಯುವತಿಗೆ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯ ಎದುರುಗಡೆ ನಡೆದಿದೆ. ಹಲ್ಲೆಗೆ ಒಳಗಾದ ಯುವತಿಯನ್ನು ಭಾರತಿ ಶಾವಿ(26) ಎಂದು ತಿಳಿದುಬಂದಿದೆ. ಇನ್ನು ವಿಜಯಭಾಸ್ಕರ್(26) ಹಲ್ಲೆ ಮಾಡಿದ ಪ್ರೇಮಿ ಎನ್ನಲಾಗಿದೆ. ಕಳೆದ 10 ವರ್ಷಗಳಿಂದ ಯುವತಿ ಭಾರತಿ ಹೊಸಪೇಟೆಯಲ್ಲಿ ತಂದೆ-ತಾಯಿ ಜೊತೆ ವಾಸವಿದ್ದಳು. 5 ವರ್ಷಗಳ ಹಿಂದೆ ಯುವಕನ ಜೊತೆ ಫೇಸ್ಬುಕ್ನಲ್ಲಿ ಪರಿಚಯ ಆಗಿ ಇಬ್ಬರಿಗೂ ಲವ್ ಆಗಿತ್ತು. ಆ ಬಳಿಕ ಯುವತಿ ಆಂಧ್ರದ ಸ್ವಗ್ರಾಮಕ್ಕೆ ಹೋದಾಗಲೆಲ್ಲಾ ತೀರಾ ಸಲುಗೆಯಿಂದ ಇರ್ತಿದ್ರು. ಇತ್ತೀಚೆಗೆ ಯುವತಿ ಯುವಕನಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ. ಅಂತರ ಕಾಯ್ದುಕೊಂಡಿದ್ದಲ್ಲದೇ ಭಾರತಿ, ವಿಜಯಭಾಸ್ಕರ ಪ್ರೀತಿ ನಿರಾಕರಿಸಿದ್ದಳು. ಯುವತಿಯು ಮದುವೆಗೆ ನಿರಾಕರಿಸಿದಕ್ಕೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದಿಂದ ಹೊಸಪೇಟೆ ನಗರಕ್ಕೆ ಆಗಮಿಸಿದ ಯುವಕ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ತಕ್ಷಣ ಯುವತಿಯನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಹೊಸಪೇಟೆ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : IPL ಆರಂಭ ಅದಾಗಿನಿಂದಲೂ ಬೆಟ್ಟಿಂಗ್ ದಂಧೆ ಜೋರಾಗಿರುತ್ತೆ. ಈ ಒಂದು ಬೆಟ್ಟಿಂಗ್ ಗೆ ಎಷ್ಟೋ ಜನ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅಲ್ಲದೇ ಅದೆಷ್ಟೋ ಜನ ಪ್ರಾಣವನ್ನು ಸಹ ಕಳೆದುಕೊಂಡಿದ್ದಾರೆ. ಇದೀಗ ಬೆಳಗಾವಿಯಲ್ಲೂ ಅಂತದ್ದೆ ಘಟನೆ ನಡೆದಿದ್ದು, ಆನ್ಲೈನ್ ಬೆಟ್ಟಿಂಗ್ ಗೆ ಸಿಕ್ಕಾಪಟ್ಟೆ ಸಾಲ ಮಾಡಿದ್ದ ಯುವಕ ಸಾಲಗಾರರ ಕಿರುಕುಳ ತಾಳದೆ ನೇಣಿಗೆ ಶರಣಾಗಿರುವ ಘಟನೆ ವರದಿಯಾಗಿದೆ. ಹೌದು ಆನ್ಲೈನ್ ಬೆಟ್ಟಿಂಗ್ ಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಅನಿಲ್ ರಾಮು ಜಾಧವ್ (34) ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ರಾಮು ಹಲವು ದಿನಗಳಿಂದ ಆನ್ಲೈನ್ ಬೆಟಿಂಗ್ ಚಟಕ್ಕೆ ಬಿದ್ದಿದ್ದ ಎನ್ನಲಾಗಿದೆ. ಬೆಟ್ಟಿಂಗ್ ಗಾಗಿ ರಾಮು ಸಾಕಷ್ಟು ಹಣ ಸುರಿದು ಎಲ್ಲಾ ಕಡೆಗೂ ಸಾಲವನ್ನೂ ಮಾಡಿಕೊಂಡಿದ್ದ. ಸಾಲದ ಸುಳಿಯಲ್ಲಿ ಸಿಲುಕಿದ್ದ ಅನಿಲ್ ಗೆ ಸಾಲಗಾರರ ಕಿರುಕುಳ ಹೆಚ್ಚಾಗಿತ್ತು. ಸಾಲ ತೀರಿಸುವ ದಾರಿ ಕಾಣದೇ ಅನಿಲ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಕುರಿತಂತೆ ಚಿಕ್ಕೋಡಿ…
ಬೆಂಗಳೂರು : ಬೆಂಗಳೂರಿನಲ್ಲಿ ಭಾರತೀಯ ಸಶಸ್ತ್ರ ಮೀಸಲು ಪಡೆಯ ಅಧಿಕಾರಿ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವಿಂಗ್ ಕಮಾಂಡರ್ ಬೋಸ್ ನೇ ಯುವಕರ ಮೇಲೆ ಹಲ್ಲೆ ಮಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಬಯಲಾಗಿದೆ. ಹೌದು ಬೆಂಗಳೂರಲ್ಲಿ ಏರ್ ಫೋರ್ಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಯುವಕರ ಮೇಲೆಮೇ ಏರ್ ಫೋರ್ಸ್ ಅಧಿಕಾರಿ ಹಲ್ಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ವಿಂಗ್ ಕಮಾಂಡರ್ ಯುವಕರ ಮೇಲೇನೆ ಹಲ್ಲೆ ಮಾಡಿದ್ದಾರೆ ಎಂಬ ಸತ್ಯ ಸಿಸಿಟಿವಿಯಿಂದ ಬಯಲಾಗಿದೆ. ಗಲಾಟೆ ವೇಳೆ ಯೋಧನೇ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದ್ದು, ಗಲಾಟೆ ವೇಳೆ ಸ್ಥಳೀಯರು ಎಷ್ಟೇ ಪ್ರಯತ್ನಿಸಿದರು ಬಿಡದೆ ಬೋಸ್ ಯುವಕರ ಮೇಲೆ ಹಲ್ಲೆ ಮಾಡಿದ್ದಾನೆ. ಬೈಕ್ ಸವಾರನ ಮೇಲೆ ವಿಂಗ್ ಕಮಾಂಡರ್ ಹಲ್ಲೆ ನಡೆಸಿದ. ಯುವಕನ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವಕನ ಮೇಲೆ ಹಲ್ಲೆ ನಡೆಸಿ ವಿಂಗಕಮಾಂಡರ್…
ಬೆಂಗಳೂರು : ನಿನ್ನೆ ನಿವೃತ್ತ ಐಜಿ ಮತ್ತು ಡಿಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶಿಸಿದ್ದಾರೆ. ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿರುವುದಾಗಿ ಹೇಳಿದ್ದಾರೆ.ಅಂದಹಾಗೇ ನಿನ್ನೆ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ಅವರ ಮನೆಯಲ್ಲಿ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿತ್ತು. ತನಿಖೆ ನಡೆಸಿದಂತ ಪೊಲೀಸರಿಗೆ ಸ್ಥಳದಲ್ಲಿ ಖಾರದಪುಡಿ ಡಬ್ಬಿ, ಚಾಕು ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ಪತ್ನಿ ಪಲ್ಲವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇಂದು ಓಂ ಪ್ರಕಾಶ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.














