Author: kannadanewsnow05

ರಾಯಚೂರು : ಬಳ್ಳಾರಿ, ಬೆಳಗಾವಿ ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಇದರ ಬೆನ್ನಲ್ಲೇ ಇದೀಗ ರಾಯಚೂರಿನಲ್ಲೂ ಕೂಡ ಇಂದು ಮತ್ತೋರ್ವ ಬಾಣಂತಿ ಸಾವನಪ್ಪಿದ್ದಾಳೆ. ರಾಯಚೂರು ಜಿಲ್ಲೆಯ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಶ್ವರಿ (32) ಎನ್ನುವ ಬಾಣಂತಿ ಸಾವನ್ನಪ್ಪಿದ್ದಾರೆ. ಹೌದು ರಾಯಚೂರು ಜಿಲ್ಲೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದ್ದು, ಮೂರು ತಿಂಗಳ ಅವಧಿಯಲ್ಲಿ ಒಟ್ಟು 10 ಬಾಣಂತಿಯರ ಸಾವಾಗಿದೆ. ಗಾರಲದಿನ್ನಿ ಗ್ರಾಮದಲ್ಲಿ ಬಾಣಂತಿ ಈಶ್ವರಿ ಸಾವನ್ನಪ್ಪಿದ್ದಾಳೆ. ಜ್ವರದಿಂದ ಈಶ್ವರಿ ಬಳಲುತ್ತಿದ್ದು ಇದೀಗ ಸಾವನ್ನಪ್ಪಿದ್ದಾರೆ ಡಿಸೆಂಬರ್ 8 ರಂದು ಈಶ್ವರಿಗೆ ನಾರ್ಮಲ್ ಹೆರಿಗೆ ಆಗಿತ್ತು. ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಶ್ವರಿಗೆ ಹೆರಿಗೆ ಆಗಿತ್ತು. ಹೆರಿಗೆಯ ನಂತರ ಮನೆಗೆ ಬಂದ ಬಳಿಕ ತೀವ್ರ ರಕ್ತಸ್ರಾವ ಹಾಗೂ ತೀವ್ರ ಜ್ವರದಿಂದ ಈಶ್ವರಿ ಬಳಲುತ್ತಿದ್ದರು. ಇದರಿಂದ ತೀವ್ರವಾಗಿ ನೋವು ಅನುಭವಿಸಿ ಸಾವನಪ್ಪಿದ್ದಾರೆ. ಮಟಮಾರಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಇದೀಗ ಆರೋಪ ಕೇಳಿ ಬಂದಿದೆ.ಸರಿಯಾದ ಚಿಕಿತ್ಸೆ ನೀಡದ ಹಾಗೂ ಸ್ಪಂದಿಸದ ಆರೋಪ ಕೇಳಿ…

Read More

ಶಿವಮೊಗ್ಗ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿತ್ತು. ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು, ರಾಜಕ್ಕೆ ಭೇಟಿ ನೀಡಿ ಬಣ ಬಡಿದಾಟ ತಣ್ಣಗಾಗಿಸಿದ್ದರು. ಇದೀಗ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಕೂಗು ಎದ್ದಿದ್ದು, ಬಿಜೆಪಿಯ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಜನವರಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೌದು ಈ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಿ ಎಂದು ಹೇಳಿದ್ದೇನೆ. ಕಳೆದ 30 ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಓಬಿಸಿ ಸಮುದಾಯಕ್ಕೆ ಆದ್ಯತೆ ನೀಡಿದರೆ ನನ್ನ ಪರಿಗಣಿಸಿ ಎಂದಿದ್ದೇನೆ. ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗಬಹುದೆಂಬ ನಿರೀಕ್ಷೆ ಇದೆ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ತಿಳಿಸಿದರು. ಪಕ್ಷದಲ್ಲಿನ ಭಿನ್ನಮತದ ಬಗ್ಗೆ ವರಿಷ್ಠರು ಗಮನಹರಿಸಿದ್ದಾರೆ ವೇಗವಾಗಿ ಪಕ್ಷದ ಹೈಕಮಾಂಡ್ ತೀಕ್ಷಣವಾದಂತಹ ನಿರ್ಧಾರ…

Read More

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಘಟನೆ ಸಂಭವಿಸಿದ್ದು ಸೊಸೆಯ ಮೇಲೆ ಪಾಪಿ ಮಾವನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನು ವಿರೋಧಿಸಿದ್ದಕ್ಕೆ ಸಲಕೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಜುಲಮಗೇರ ಎಂಬಲ್ಲಿ ನಡೆದಿದೆ. ಹೌದು ಸಲಕೆಯಿಂದ ಹೊಡೆದು ಸೊಸೆಯನ್ನೇ ಮಾವ ಕೊಲೆ ಮಾಡಿದ್ದಾನೆ. ರಾಯಚೂರಿನ ಜುಲಮಗೆರದಲ್ಲಿ ಈ ಒಂದು ಘಟನೆ ನಡೆದಿದೆ. ಸೊಸೆ ದುಳ್ಳಮ್ಮನನ್ನು (27) ಮಾವ ರಾಮಲಿಂಗಯ್ಯ ಹತ್ಯೆಗೈದಿದ್ದಾನೆ. ಸೊಸೆ ಮೇಲೆ ಅತ್ಯಾಚಾರಕ್ಕೆ ರಾಮಲಿಂಗಯ್ಯ ಮುಂದಾಗಿದ್ದನೆ. ಈ ವೇಳೆ ವಿರೋಧ ಮಾಡಿದ್ದಕ್ಕೆ ಸೊಸೆಯನ್ನೇ ಮಾವ ಹತ್ಯೆಗೈದಿದ್ದಾನೆ. ಈ ಹಿಂದೆಯೂ ಕೂಡ ಎರಡು ಮೂರು ಬಾರಿ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಗ್ರಾಮದ ಹಿರಿಯರು ಸೇರಿ ರಾಮಾಯಲಿಂಗಯ್ಯಗೆ ಬುದ್ಧಿ ಕೂಡ ಹೇಳಿದ್ದರು. ಕೊಲೆ ಮಾಡಿ ಸದ್ಯ ಪರಾರಿಯಾಗಿರುವ ರಾಮಲಿಂಗಯ್ಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಘಟನೆ ಕುರಿತಂತೆ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಕಳೆದ ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅವರು ಹೃದಯಘಾತದಿಂದ ನಿಧನ ಹೊಂದಿದ್ದರು. ಇದೀಗ ಅವರ ಆಸ್ತಿಯನ್ನು ಎಸ್ ಎಂ ಕೃಷ್ಣ ಮೊಮ್ಮಗ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಳಿಯ ರಾದ ಅಮರ್ತ್ಯ ಹೆಗಡೆ ಅವರು ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ. ಹೌದು ಇಂದು ಎಸ್.ಎಂ ಕೃಷ್ಣ ಅವರ ಅಸ್ಥಿಯನ್ನುಮೊಮ್ಮಗ ಅಮರ್ತ್ಯ ಹೆಗಡೆ ವಿಸರ್ಜನೆ ಮಾಡಿದರು. ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಅಸ್ಥಿ ವಿಸರ್ಜನೆ ಮಾಡಿದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಅಸ್ತಿ ವಿಸರ್ಜನೆ ಮಾಡಿದರು. ಕಳೆದ ಡಿಸೆಂಬರ್ 10 ರಂದು ಎಸ ಎಂ ಕೃಷ್ಣ ಅವರು ಬೆಂಗಳೂರು ನಗರದ ಸದಾಶಿವನಾಗರದಲ್ಲಿ ತಡರಾತ್ರಿ ತೀವ್ರ ಹೃದಯಘಾತದಿಂದ ಸಾವನ್ನಪ್ಪಿದರು. ಇವರ ಒಂದು ಸಾವಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ಪಕ್ಷದ ನಾಯಕರು ತೀವ್ರ ಸಂತಾಪ ಸೂಚಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೂಡ ಎಸ್ಎಂ ಕೃಷ್ಣ ಅವರ ಅಗಲಿಕೆಗೆ…

Read More

ಹುಬ್ಬಳ್ಳಿ : ಸಮಾಜವನ್ನು ರಕ್ಷಣೆ ಮಾಡಬೇಕಾಗಿದ್ದ ಆರಕ್ಷಕರಿಂದಲೇ ಇದೀಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಲೈಂಗಿಕ ಕಿರುಕುಳ ನಡೆಯುತ್ತಿರುವುದು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಇದೀಗ ಹಳೆ ಹುಬ್ಬಳ್ಳಿ ಠಾಣೆಯ ಪಿಎಸ್ಐ ಸುರೇಶ್ ಎನ್ನುವವನಿಂದ ಮಹಿಳಾ ಕಾನ್ಸ್ಟೇಬಲ್ ಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹೌದು ಇನ್ಸ್ಪೆಕ್ಟರ್ ನಿಂದಲೇ ಮಹಿಳಾ ಕಾನ್ಸ್ಟೇಬಲ್ ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹಳೆ ಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳುರು ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದ್ದು, ಇನ್ಸ್ಪೆಕ್ಟರ್ ಸುರೇಶ್ ವಿರುದ್ಧ ಮಹಿಳಾ ಕಾನ್ಸ್ಟೇಬಲ್ ಗಳಿಂದ ಗಂಭೀರ ಆರೋಪ ಕೇಳಿ ಬಂದಿದೆ. ರಾತ್ರಿಯಾದರೆ ಮಹಿಳಾ ಸಿಬ್ಬಂದಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದಾನೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಖಾತೆ ಸಚಿವ ಡಾ. ಜಿ ಪರಮೇಶ್ವರ್ ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ಇದೀಗ ಸಿಬ್ಬಂದಿಗಳು ಪತ್ರ ಬರೆದಿದ್ದಾರೆ. ಇನ್ಸ್ಪೆಕ್ಟರ್ ಕಿರುಕುಳಕ್ಕೆ ಬೇಸತ್ತು ಮಹಿಳಾ ಸಿಬ್ಬಂದಿಗಳು ಪತ್ರ ಬರೆದಿದ್ದಾರೆ. ಪಿಐ…

Read More

ಬೆಳಗಾವಿ : ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಮ್ಯಾಶ್ರೀ ಎಂದು ತಿಳಿದುಬಂದಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಮೊದಲ ಮದುವೆಯಾಗಿತ್ತು. ಬಳಿಕ ಪಾತಿಯಿಂದ ದೂರವಾಗಿ ಕಳೆದ ಮೂರು ತಿಂಗಳಿಂದ ಮತ್ತೊಂದು ಯುವಕನನ್ನು ವರಿಸಿದ್ದಳು. ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆಯಾಗಿದ್ದಳು. ಆದರೆ ಮದುವೆಯಾಗಿ ಮೂರು ತಿಂಗಳಲ್ಲಿ ರಮ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಪತಿ ಬಸವರಾಜ ಕೂಡ ಆತ್ನಹತ್ಯೆಗೆ ಯತ್ನಿಸಿದ್ದಾರೆ. ಭಯಗೊಂಡು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಪಟ್ಟಿದ್ದಾರೆ. ಕೊಡಲಿ ಅವರನ್ನು ಹಾರೂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಕೆಪಿಎಸ್‌ಸಿ ನಡೆಸಿರುವ PDO ನೇಮಕಾತಿ ಪರೀಕ್ಷೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನವೆಂಬರ್ 17ರಂದು ಪರೀಕ್ಷೆ ನಡೆದಿತ್ತು. ಈ ಒಂದು ನೇಮಕಾತಿ ಪರೀಕ್ಷೆಯ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಕುರಿತು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಅಭ್ಯರ್ಥಿಗಳು ಭಾರಿ ಪ್ರತಿಭಟನೆ ಮತ್ತು ಹೋರಾಟ ನಡೆಸಿದ್ದರು. ಇದೀಗ ಮೇಲ್ವಿಚಾರಕರಿಗೆ ಪ್ರಶ್ನೆ ಪತ್ರಿಕೆ ತಡವಾಗಿ ತಲುಪಿದ ಹಿನ್ನೆಲೆಯ ಕುರಿತಂತೆ ಮತ್ತೊಂದು ವಿಡಿಯೋ ಇದೀಗ ವೈರಲಾಗಿದೆ. ತುಮಕೂರಿನ ಕೇಂದ್ರದಲ್ಲಿ ಬ್ಲ್ಯೂಟೂತ್ ಬಳಸಿ ಎಕ್ಸಾಂ ಬರೆಯುತ್ತಿದ್ದ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಬೆನ್ನಲ್ಲೇ ಪಿಡಿಒ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂಬ ಆರೋಪಗಳು ಸಹ ಕೇಳಿ ಬಂದಿದ್ದವು. ಈ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದರು. ಕೆಲ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಬೇರೆ ವಿದ್ಯಾರ್ಥಿಗಳನ್ನು ಪ್ರಚೋದಿಸಿದ, ಪ್ರತಿಭಟನೆ ಮಾಡಿದ 12 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪ್ರಶ್ನೆ ಪತ್ರಿಕೆ ನೀಡುವಲ್ಲಿ ವಿಳಂಬ ಸಹ ಆಗಿಲ್ಲ.…

Read More

ಮಂಗಳೂರು : ವಕ್ಫ್ ಭೂ ಕಬಳಿಕೆಗೆ ಸಂಬಂಧಿಸಿದಂತೆ ಮೌನವಾಗಿರಲು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಣಿಪ್ಪಾಡಿ ಇದೀಗ ಸ್ಫೋಟಕ ವಾದಂತಹ ಹೇಳಿಕೆಯನ್ನು ನೀಡಿದ್ದು, ಈ ವಿಚಾರವಾಗಿ ಬಿಜೆಪಿ ಆಗಲಿ ಬಿವೈ ವಿಜಯೇಂದ್ರ ಯಾವುದೇ ಆಮೀಷ ಒಡ್ಡಿಲ್ಲ. ಬದಲಾಗಿ ಕಾಂಗ್ರೆಸ್ ನಾಯಕರೇ ನನಗೆ ಆಮಿಷ ಒಡ್ಡಿದ್ದರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಾಡಿರುವಂತಹ ಆರೋಪ ಶೇಕಡ 90% ಸುಳ್ಳು. ಬಿವೈ ವಿಜಯೇಂದ್ರ ನನ್ನ ಮನೆಗೆ ಯಾವತ್ತೂ ಬಂದಿಲ್ಲ. ನಾನು ವರದಿ ಸಲ್ಲಿಕೆ ಮಾಡುವಾಗ ಬಿವೈ ವಿಜಯೇಂದ್ರ ಇರಲೇ ಇಲ್ಲ. ನಾನು ಬಿಜೆಪಿಯವರ ಮೇಲೆ ಕಿಡಿ ಕಾರಿದ್ದಂತು ನಿಜ. ಸಿಬಿಐ ತನಿಖೆಗೆ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಕೊಡಲಿ. 1.60 ಲಕ್ಷ ಹೆಕ್ಟರ್ ಆಸ್ತಿ ವಕ್ಫ್ ಗೆ ಸೇರಿದ್ದು ಎಂದು ನೋಟಿಸ್ ನೀಡಿದ್ದಾರೆ. ಆದರೆ ವಕ್ಫ್ ಬೋರ್ಡ್ ಆಸ್ತಿ ಇರುವುದು 54 ಸಾವಿರ ಹೆಕ್ಟರ್. 27 ರಿಂದ 28 ಸಾವಿರ ಹೆಕ್ಟೇರ್ ಜಮೀನು…

Read More

ಬೆಂಗಳೂರು : ರಾಜ್ಯದ ಪ್ರಮುಖ 5 ಗ್ಯಾರಂಟಿ ಯೋಜನೆಗಳ್ಳಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣ ಕೂಡಿಟ್ಟು, ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅತ್ತೆ ಹಾಗೂ ಸೊಸೆ ಬೋರ್ವೆಲ್ ಕೊರೆಸಿರುವುದು ಇದೀಗ ಭಾರಿ ಸದ್ದು ಮಾಡುತ್ತಿದೆ. ಈ ಒಂದು ವಿಚಾರ ಸಿಎಂ ಸಿದ್ದರಾಮಯ್ಯ ಅವರಿಗೂ ತಲುಪಿದ್ದು, ಗೃಹಲಕ್ಷ್ಮಿ ಹಣದಿಂದ ಅತ್ತೆ ಸೊಸೆ ಜಗಳವಾಡುತ್ತಾರೆ ಎಂದು ಟೀಕಿಸಿದ್ದ ಬಿಜೆಪಿಗೆ ತಪರಾಕಿ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿರುಗೇಟು ನೀಡಿದ್ದಾರೆ. ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು.ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ. ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ…

Read More

ಉಡುಪಿ : ಉಡುಪಿಯಲ್ಲಿ ಮರಳು ಮಾಫಿಯಾಗೆ ಇದೀಗ ಮತ್ತೊಂದು ಜೀವ ಬಲಿಯಾಗಿದೆ ಮರಳು ತುಂಬಿದ್ದ ಟಿಪ್ಪರ್ ಒಂದು ವೇಗವಾಗಿ ಚಲಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬಡಗು ಬೆಟ್ಟು ವಿನ ಶಾಂತಿನಗರದಲ್ಲಿ ನಡೆದಿದೆ. ಹೌದು ಮರಳು ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ದುರ್ಮರಣ ಹೊಂದಿದ್ದಾನೆ. ಉಡುಪಿ ಬಡಗುಬೆಟ್ಟು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಉಡುಪಿಯ ಶಾಂತಿನಗರದಲ್ಲಿ ದಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಜನಾರ್ಧನ್ ದುರ್ಮರಣ ಹೊಂದಿದ್ದಾನೆ. ಇನ್ನು ಬೈಕ್ ಓಡಿಸುತ್ತಿದ್ದ ಸಂತೋಷ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಾರಿ ಹರಿದ ದೃಶ್ಯ ಇದೀಗ ಸಿಸಿ ಕ್ಯಾಮೆರಾದಲ್ಲಿ ಸೆರಿಯಾಗಿದೆ ಬೈಕ್ ಸವಾರ ಸಂತೋಷ್ಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದ್ದು, ಟಿಪ್ಪರ್ ಮಾಲಿಕ ಹಾಗೂ ಚಾಲಕನ ವಿರುದ್ಧ FIR ದಾಖಲಾಗಿದೆ.

Read More