Author: kannadanewsnow05

ಬೆಂಗಳೂರು : ಮಲ್ಲೇಶ್ವರಂನ ಆಟದ ಮೈದಾನದಲ್ಲಿ ಗೇಟ್ ಬಿದ್ದು ದುರಂತದಲ್ಲಿ ಸಾವಿಗಿಡಾದ ನಿರಂಜನ್ ಪೊಷಕರಿಗೆ ಇಂದು ಒಟ್ಟು 10 ಲಕ್ಷ ಪರಿಹಾರದ ಚೆಕ್ ವಿತರಿಸಲಾಯಿತು.. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಗೂಡಿ ಬಾಲಕನ ಮನೆಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ನಿರಂಜನ್ ತಂದೆ ತಾಯಿಗೆ ಸಾಂತ್ವಾನ ಹೇಳಿ ಪರಿಹಾರದ ಚೆಕ್ ವಿತರಿಸಿದರು. ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ ಹಾಗೂ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ಪರಿಹಾರದ ಚೆಕ್ ವಿತರಿಸಲಾಯಿತು.ಪೊಷಕರಿಗೆ ಸಾಂತ್ವಾನ ಹೇಳಿದ ಸಚಿವ ದಿನೇಶ್ ಗುಂಡೂರಾವ್ ಬಾಲಕನ ಸಹೋದರಿಯ ವಿದ್ಯಾಭ್ಯಾಸದ ಸಂಪೂರ್ಣ ಹೊಣೆಯನ್ನ ಆರ್. ಗುಂಡೂರಾವ್ ಫೌಂಡೇಶನ್ ವಹಿಸಿಕೊಳ್ಳಲಿದೆ ಎಂದು ಇದೇ ವೇಳೆ ತಿಳಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಕರಣ ಕುರಿತು ಈಗಾಗಲೇ ಎಂಜಿನಿಯರ್ ಶ್ರೀನಿವಾಸ್ ಅವರನ್ನ ಅಮಾನತ್ತು ಮಾಡಲಾಗಿದೆ. ಘಟನೆ ಆದ ತಕ್ಷಣ ಸ್ಥಳಕ್ಕೆ ಶಾಸಕರು ಭೇಟಿ‌ ನೀಡಿ ಸ್ಪಂದಿಸಿದ್ದಾರೆ.‌ಇಂದು ನಾನು…

Read More

ಯಾದಗಿರಿ : ಇತ್ತೀಚಿಗೆ ಯಾದಗಿರಿಯಲ್ಲಿ ನಡೆದಂತಹ ಗಣೇಶ ವಿಸರ್ಜನೆಯ ಶೋಭಾಯಾತ್ರೆಯ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ..ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು ಎನ್ನಲಾಗಿದೆ. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಅವರು ಈ ಒಂದು ಹೇಳಿಕೆ ನೀಡಿದ್ದರು. ಹಾಗಾಗಿ ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಹಾಪುರ ಪಿಎಸ್‌ಐ…

Read More

ಬೆಂಗಳೂರು : ಸರ್ಕಾರದ ವಿವಿಧ ಹುದ್ದೆಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳಲ್ಲಿ ಚಾಲ್ತಿಯಲ್ಲಿರುವ ಹಾಗೂ ಮುಂಬರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ಮಾರ್ಪಾಡುಗಳನ್ನು ತರುವ ಮೂಲಕ ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸಲು ಹಾಗೂ ಅಭ್ಯರ್ಥಿಗಳಲ್ಲಿ ಉಂಟಾಗುತ್ತಿರುವ ಗೊಂದಲಗಳನ್ನು ನಿವಾರಿಸಲು ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅನುಚ್ಛೇದ-371-ಜೆ ಅನುಷ್ಟಾನ ಕುರಿತಾದ ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕೋರಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸರ್ಕಾರದ ವತಿಯಿಂದ ವಿವಿಧ ನೇಮಕಾತಿಗಳ ಹಂತ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳ ಮೂಲಕ ಸರ್ಕಾರದ ವಿವಿಧ ಹುದ್ದೆಗಳಿಗೆ ನಡೆಯುತ್ತಿರುವ ಆಯ್ಕೆ ವಿಧಾನಗಳಲ್ಲಿ ಬಹಳಷ್ಟು ಸುಧಾರಣೆಗಳನ್ನು ತರುವ ಅವಶ್ಯಕತೆಯಿದೆ ಎಂಬ ಸಲಹೆಗಳನ್ನು ಒಳಗೊಂಡ ಪತ್ರವನ್ನು ಮುಖ್ಯಮಂತ್ರಿಗಳಿಗೆ ನೀಡಿದರು. ನೇಮಕಾತಿ ಪ್ರಾಧಿಕಾರಗಳು ನೇಮಕಾತಿ ಪ್ರಕ್ರಿಯೆಯನ್ನು ಒಂದು…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿ ಆಗಿರುವ ನಟಿ ಪವಿತ್ರ ಗೌಡ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಜಡ್ಜ್ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿದರು. ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎಂದು ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆದಂದು ಪಟ್ಟಣಗೆರೆ ಶೆಡ್ನಲ್ಲಿ ನಟ ದರ್ಶನ್ ಸೇರಿದಂತೆ ಆತನ ಸಹಚರರು ಸೇರಿ ರೇಣುಕಾ ಸ್ವಾಮಿಯನ್ನು ಭೀಕರವಾಗಿ ಕೊಂದಿದ್ದರು. ಈ ಒಂದು ಕೊಲೆಯಲ್ಲಿ ಪವಿತ್ರ ಗೌಡ ಸೇರಿದಂತೆ ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಬಟ್ಟೆಯ ಮೇಲೆ ರೇಣುಕಾ ಸ್ವಾಮಿಯ ರಕ್ತದ ಕಲೆ ಹಾಗೂ ಪವಿತ್ರ ಗೌಡ ಚಪ್ಪಲಿಯಲ್ಲೂ ರೇಣುಕಾ ಸ್ವಾಮಿಯ ರಕ್ತದ ಕಲೆಗಳು ಪತ್ತೆಯಾಗಿವೆ ಎಂದು ಪೊಲೀಸರು ಉಲ್ಲೇಖಿಸಿ ಕೋರ್ಟಿಗೆ ಸಲ್ಲಿಸಿದರು. ಬಳಿಕ ನಟ ದರ್ಶನ್,…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ಕೊಲೆ ಆರೋಪಿ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಅಲ್ಲಿ ಅವರಿಗೆ ರಾಜಾತಿಥ್ಯ ನೀಡಿದ ವಿಚಾರವಾಗಿ ನಂತರ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಇದೀಗ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಹಣದ ಆಸೆಗೆ ಜೈಲಾಧಿಕಾರಿಗಳೇ ಈ ಒಂದು ರಾಜಾತಿಥ್ಯ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ನಟ ದರ್ಶನ್ ಹಾಗೂ ರೌಡಿಶೀಟರ್ ನಾಗ ಸೇರಿದಂತೆ ಹಲವು ರೌಡಿಶೀಟರ್ ಗಳು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುರ್ಚಿಯ ಮೇಲೆ ಕುಳಿತುಕೊಂಡು ಕಾಫಿ ಕುಡಿಯುತ್ತಾ, ಒಂದು ಕೈಯಲ್ಲಿ ಸಿಗರೇಟ್ ಸೇದುತ್ತಾ ಕುಳಿತಿದ್ದ ಫೋಟೋ ಭಾರಿ ವೈರಲ್ ಆಗಿತ್ತು. ಈ ಕುರಿತು ಜೈಲಲ್ಲೇ 3 ಪ್ರಕರಣ ದಾಖಲಾಗಿದ್ದವು.ಈ ಒಂದು ಘಟನೆಯ ಬಳಿಕ ನಟ ದರ್ಶನ್ ಸೇರಿದಂತೆ ಎಲ್ಲಾ ರೌಡಿಶೀಟರ್ ಗಳನ್ನು ಬೇರೆ ಬೇರೆ ಜಿಲ್ಲಾ ಕೇಂದ್ರ ಕಾರಾಗೃಹಗಳಿಗೆ ಶಿಫ್ಟ್ ಮಾಡಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಕೆಲ ಅಧಿಕಾರಿ…

Read More

ಹುಬ್ಬಳ್ಳಿ : ಕಳೆದ ಕೆಲವು ತಿಂಗಳ ಹಿಂದೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ್ ಹಾಗೂ ಅಂಜಲಿ ಅಂಬಿಗರ ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಿತ್ತು. ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಹುಡುಗಿಗೆ ಚುಡಾಯಿಸಬೇಡ ಎಂದು ಮಹಿಳೆಯೊಬ್ಬರು ಯುವಕನಿಗೆ ಬುದ್ಧಿ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕ ಮಹಿಳೆಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಲೋಹಿಯ ನಗರದಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯ ಲೋಹಿಯ ನಗರದಲ್ಲಿ ಮಹಿಳೆಗೆ ಚಾಕು ಹಿಡಿದಿರುವ ಘಟನೆ ನಡೆದಿದೆ. ನೀಲಾ ಹಡಪದ ಎನ್ನುವ ಮಹಿಳೆಗೆ ಮಹೇಶ ವ್ಯಕ್ತಿ ಚಾಕು ಇರಿದು ಪರಾರಿಯಾಗಿದ್ದಾನೆ. ಹುಡುಗಿ ಚುಡಾಯಿಸಿದ್ದಕ್ಕೆ ನೀಲಾ ಮಹೇಶ್ ಗೆ ಬುದ್ಧಿ ಹೇಳಿದರು. ಬುದ್ಧಿ ಹೇಳಿದ್ದಕ್ಕೆ ಆಕ್ರೋಶಗೊಂಡು ನೀಲಾಗೆ ಮಹೇಶ್ ಚಾಕು ಇರದಿದ್ದಾನೆ. ಮಹೇಶ್ ನೀಲಾ ಹಡಪದಿಗೆ ಚಾಕು ಇರಿದು ಪರಾರಿ ಆಗಿದ್ದಾನೆ. ಕೂಡಲೇ ಪೊಲೀಸರು ಆರೋಪಿ ಮಹೇಶನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಗಾಯಾಳು ನೆಲಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ…

Read More

ಬೆಂಗಳೂರು : ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಗಳ ವಿಳಂಬದ ಕುರಿತು, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ಸೂಚಿಸಲಾಯಿತು. ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲಾಷ್‌ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಸಭೆಗೆ ವಿವರಿಸಲಾಯಿತು. ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಎತ್ತಿ ಹಿಡಿದು, ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಚಗೊಳಿಸಿತ್ತು. ಇದರ ಬೆನ್ನಲ್ಲೇ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಆದೇಶ ನೀಡಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ, ಮುಡಾ ಹಗರಣದಲ್ಲಿ ಯಾವ ಬ್ಲ್ಯಾಕ್ ಮಾರ್ಕ್ ಇಲ್ಲ ಸಿದ್ದರಾಮಯ್ಯ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಡಾ ಹಗರಣದಲ್ಲಿ ಅಧಿಕಾರಿಗಳು ತಪ್ಪು ಮಾಡಿರಬಹುದು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಕೋರ್ಟ್ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆದ ಮೇಲೆ ಎಲ್ಲಾ ಗೊತ್ತಾಗುತ್ತದೆ ಎಂದರು. ಮುಡಾ ಪ್ರಕರಣದಲ್ಲಿ ಯಾವ ಬ್ಲಾಕ್ ಮಾರ್ಕ್ ಕೂಡ ಆಗಿಲ್ಲ. ಯಾವ ಬ್ಲ್ಯಾಕ್ ಮಾರ್ಕ್ ಸಹ ಆಗಿಲ್ಲ ಮಾರ್ಕೆ ಆಗಿಲ್ಲ ಬ್ಲಾಕ್ ಮಾರ್ಕ್ ಎಲ್ಲಿಂದ ಬರುತ್ತೆ?…

Read More

ಉತ್ತರಕನ್ನಡ : ಇದೇ ಸಪ್ಟೆಂಬರ್ 22 ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಉದ್ಯಮಿ ವಿನಾಯಕರನ್ನು ಬೆಳ್ಳಂ ಬೆಳಿಗ್ಗೆ ಅವರ ಮನೆಯಲ್ಲೇ ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಒಂದು ಕೊಲೆಗೆ ಸಂಬಂಧಪಟ್ಟಂತೆ ಕೊಲೆಗೆ ಸುಪಾರಿ ನೀಡಿದ್ದ ಮತ್ತೊಬ್ಬ ಉದ್ಯಮಿ ಇದೀಗ ಗೋವಾದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಸೆಪ್ಟೆಂಬರ್ 22ರಂದು ಕಾರವಾರದಲ್ಲಿ ವಿನಾಯಕ್ ಹತ್ಯೆ ನಡೆದಿತ್ತು. ಗುರುಪ್ರಸಾದ್ ರಾಣೆ ಈ ಒಂದು ಕೊಲೆಗೆ ಸುಪಾರಿ ಕೊಟ್ಟಿದ್ದರು ಎಂದು ಹಂತಕರು ಪೋಲೀಸರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದರು. ಹಂತಕರ ಹೇಳಿಕೆಯ ಮೇಲೆ ಬಳಿಕ ಗೋವಾ ಮೂಲದ ಉದ್ಯಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಯಾವಾಗ ಹಂತಕರು ಗುರುಪ್ರಸಾದ್ ರಾಣೆ ಅವರ ಹೆಸರು ಹೇಳಿದರೊ, ಇದೀಗ ಇಂದು ಗುರುಪ್ರಸಾದ ರಾಣೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉದ್ಯಮಿ ವಿನಾಯಕ್ ಹತ್ಯೆಗೆ ಸುಪಾರಿ ಕೊಟ್ಟ ಗುರುಪ್ರಸಾದ ರಾಣೆ ಗೋವಾದ ಮಾಂಡೋವಿ ನದಿಯಲ್ಲಿ ಇದೀಗ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರ ಪ್ರಾಸಿಕ್ಯೂಷನ್​ ಪ್ರಶ್ನಿಸಿ​ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ಹೈಕೋರ್ಟ್​ ವಜಾ ಮಾಡಿದೆ.ಇದರ ಬೆನ್ನಲ್ಲೆ ಇಂದು ಜನಪ್ರತಿನಿಧಿಗಳ ಕೋರ್ಟ್​ ಸಹ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಹಾಗಾಗಿ ಈ ಒಂದು ಹಗರಣದಲ್ಲಿ ಸಿದ್ದರಾಮಯ್ಯ ನಾಳೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ,ಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ.ತಕ್ಷಣ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ. ಯಾವುದೇ ತನಿಖೆಗೆ ಸಿದ್ಧ ಎಂದು ಸಿಎಂ ಹೇಳಿದ್ದಾರೆ. ಈಗ ಸಿದ್ದರಾಮಯ್ಯ ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ. ಭಂಡತನ ಬಿಟ್ಟು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯದ ಸಿಎಂ ಸಿದ್ದರಾಮಯ್ಯ ಇಂದು ಬೆತ್ತಲಾಗಿದ್ದಾರೆ. ಬಿಜೆಪಿ…

Read More