Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಇದನ್ನು ಮಾಡುತ್ತಿದ್ದೀರಾ ಎಂದು ಕೇಳಿದಾಗ, “ನಾವು ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ವೇದಿಕೆ ಸಿದ್ಧ ಮಾಡಬೇಕಲ್ಲವೇ. ಶೀಘ್ರದಲ್ಲಿ ಚುನಾವಣೆ ನಡೆಯಲಿರುವುದಂತೂ ನಿಜ. ಅದನ್ನು ನಿಲ್ಲಿಸಲು ಆಗುವುದಿಲ್ಲ.ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಈ ಸಮಾವೇಶ ಹಾಸನಕ್ಕೆ ಸೀಮಿತವೇ ಅಥವಾ ರಾಜ್ಯಾದ್ಯಂತ ಮಾಡುತ್ತೀರಾ ಎಂದು ಕೇಳಿದಾಗ, “ನಾವು ರಾಜ್ಯಾದ್ಯಂತ ತಲುಪಬೇಕು. ಹಾಸನ ಕಾರ್ಯಕ್ರಮ ನಂತರ ಬೆಳಗಾವಿಯಲ್ಲಿ ದೊಡ್ಡ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ನಾಳೆ ಸಭೆ ಮಾಡಿ ನಂತರ ಹೆಚ್ಚಿನ ಮಾಹಿತಿ ನೀಡುತ್ತೇವೆ” ಎಂದು ತಿಳಿಸಿದರು. ಯಾವುದೇ ಸ್ಥಾನ ಖಾಲಿ ಇಲ್ಲ: ಫೆಬ್ರವರಿಯಲ್ಲಿ ಸಂಪುಟ ವಿಸ್ತರಣೆ ಆಗುವುದೇ ಎಂದು ಕೇಳಿದಾಗ, “ನಾನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಹೊರತು, ಮುಖ್ಯಮಂತ್ರಿಯಲ್ಲ. ಸಧ್ಯಕ್ಕೆ ಈ ಬಗ್ಗೆ ಚರ್ಚೆ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸಧ್ಯದಲ್ಲೇ ಅಧಿವೇಶನವಿದೆ. ಒಂದು…
ಕೋಲಾರ : ಜಿಲ್ಲೆಯಲ್ಲಿ ಇಂದು ಫೆಂಗಲ್ ಚಂಡಮಾರುತದ ಕಾರಣ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಆದೇಶಿಸಿದ್ದು ಇಂದು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶದಲ್ಲಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲೂ ರಜೆ ಘೋಷಣೆ ಅದೇ ರೀತಿಯಾಗಿ ಫೆಂಗನ್ ಚಂಡಮಾರುತದ ಕಾರಣದಿಂದ ತುಂತುರು ಮಳೆಯ ಜೊತೆಗೆ ಚಳಿಗಾಳಿ ಬೀಸುವ ಕಾರಣದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದು, ಅದರಲ್ಲಿ ಇಂದು ಫೆಂಗಲ್ ಚಂಡಮಾರುತದ…
ಬೆಳಗಾವಿ : ವಕ್ಫ್ ವಿಚಾರಕ್ಕೆ ಬಿಜೆಪಿಯ ಒಂದು ತಂಡ ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಇದರ ಮಧ್ಯ ಶಾಸಕ ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಎರಡೂ ಬಣಗಳ ಬಡಿದಾಟ ತೀವ್ರ ತಾರಕಕ್ಕೆ ಏರಿದೆ. ಇದೀಗ ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ವಕ್ಫ್ ವಿರುದ್ಧ ಹೋರಾಟ ತೀವ್ರಗೊಳಿಸಬೇಕಾದರೆ ಮೊದಲು ಹಿಂದುಗಳಾಗಬೇಕು. ಒಕ್ಕಲಿಗ, ಲಿಂಗಾಯತ ಅಂತ ಹೋದ್ರೆ 30% ಇರೋ ಮುಸ್ಲಿಂರು ನಿಮ್ಮನ್ನು ಹೊಡೆದು ಹಾಕ್ತಾರೆ ಎಂದು ತಿಳಿಸಿದರು. ಒಂದುವರೆ ವರ್ಷದಿಂದ ಸರ್ಕಾರ ತಾಲಿಮಾನ ರೀತಿ ನಡೆದುಕೊಳ್ಳುತ್ತಿದೆ. ಹಿಂದೂಗಳ ಮಾರಣ ಹೋಮ ಜೊತೆಗೆ ಭೂಮಿಕ ಕಬಳಿಗೆ ಆಗುತ್ತಿದೆ. ಜಮೀರ್ ಅಹ್ಮದ್ ಖಾನ್ ನಾಲ್ಕುವರೆ ಅಡಿ ಇದ್ದಾನೆ.ಅಲ್ಲಾನ ಆಸ್ತಿ ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳುತ್ತಾನೆ. ಜಮೀರ್ ನಿಮ್ಮ ಅಲ್ಲಾಗೂ ನಮ್ಮ ಭಾರತಕ್ಕೂ ಏನು ಸಂಬಂಧವಿದೆ? ಅರಬ್ನಳ್ಳಿ ಹುಟ್ಟಿರುವ ಅಲ್ಲಗೆ ಭಾರತದ ಜೊತೆಗೆ ಏನು ಸಂಬಂಧ? ಜಮೀರ್ ಅಹ್ಮದ್ ನಿಮ್ಮ ಧರ್ಮಕ್ಕೂ ಭಾರತಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದರು.…
ಉಡುಪಿ : ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯ ಗುಮ್ಮಲ ಡ್ಯಾಂನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯ ಗ್ರಾಮದಲ್ಲಿ ಈಜುಲು ಹೋದ ಇಬ್ಬರು ಬಾಲಕರು ನೀರು ಪಾಲಾಗಿ ಮುಳುಗಿ ಸಾವನ್ನಪ್ಪಿದ್ದರೆ. ಮೃತರನ್ನು ಶ್ರೀಶ (13) ಹಾಗೂ ಜಯಂತ್ (19) ಎಂದು ತಿಳಿದು ಬಂದಿದೆ.ರಜೆ ಹಿನ್ನೆಲೆಯಲ್ಲಿ ಗೆಳೆಯರ ಜೊತೆಗೆ ಇಬ್ಬರು ಈಜಲು ಹೋಗಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಬೆಂಗಳೂರು : ಹಳೆಯ ನಂಬರ್ ಪ್ಲೇಟ್ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಕರ್ನಾಟಕ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೌದು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಡಿಸೆಂಬರ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಸಿದೆ. HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರಂದು ಕೊನೆಯ ದಿನವಾಗಿತ್ತು. ಇದೀಗ ಸಾರಿಗೆ ಇಲಾಖೆಯಿಂದ ವರ್ಷಾಂತ್ಯದ ವರೆಗೆ ಗಡಗು ವಿಸ್ತರಿಸಲಾಗಿದೆ. ರಾಜ್ಯದಲ್ಲಿ ಸುಮಾರು 2 ಕೋಟಿ ಅಷ್ಟು ಹಳೆಯ ವಾಹನಗಳು ಇವೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಾಗಿತ್ತು. ಆದರೆ 55 ಲಕ್ಷ ವಾಹನಗಳು ಮಾತ್ರ HSRP ನಂಬರ್ ಪ್ಲೇಟ್ ಅಳವಡಿಸಿವೆ. ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್ಎಸ್ಆರ್ಪಿ…
ಬಳ್ಳಾರಿ : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿಶ್ವ ವಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ನೀಡಿದ್ದರಿಂದ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ವಿಚಾರವಾಗಿ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದು, ಈ ಹಿಂದೆ ಓವೈಸಿ ನಾವು ಮುಸ್ಲಿಮರು ಏನೆಂದು ತೋರಿಸುತ್ತೇವೆ ಅಂತ ಹೇಳಿದಾಗ ಕೇಸ್ ಹಾಕಲಿಲ್ಲ. ಸ್ವಾಮಿಜಿ ವಿರುದ್ಧ ಕೇಸ್ ಹಾಕುತ್ತೀರಾ? ಓವೈಸಿ ಅಂತವರೆಲ್ಲ ನಿಮ್ಮ ಬ್ರದರ್ಸ್ ಸ್ವಾಮೀಜಿ ನಿಮ್ಮ ವಿರೋಧಿಗಳು ಎಂದು ವಾಗ್ದಾಳಿ ನಡೆಸಿದರು. ಆಟೋದಲ್ಲಿ ಕುಕ್ಕರ್ ಬಾಂಬ್ ಇಟ್ಟವನಿಗೆ ನಾನು ಬ್ರದರ್ ಅಂದಿಲ್ಲ. ಕುಮಾರಸ್ವಾಮಿಗೆ ಕರಿಯ ಅಂದ್ರು. ಅದಕ್ಕೆ ಯಾಕೆ ಕೇಸ್ ಹಾಕಿಲ್ಲ ಸಚಿವ ಜಮೀರ್ ಅಹ್ಮದ್ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ವಿಧಾನಸೌಧದಲ್ಲಿ ಪಾಕಿಸ್ತಾನದಿಂದ ಘೋಷಣೆ ಕೂಗಿದರು. ಪಾಕಿಸ್ತಾನ ಜಿಂದಾಬಾದ್ ಕೂಗಿದವರ ಮೇಲು ಸರ್ಕಾರ ಕೇಸ್ ಹಾಕಿಲ್ಲ. ಸ್ವಾಮೀಜಿಗೆ ಕ್ಯಾನ್ಸರ್ ಇದೆ ಕೇಸ್ ಹಾಕಿ ಚಿತ್ರಹಿಂಸೆ ಕೊಡುತ್ತಿದ್ದೀರಾ? ಚುನಾವಣೆ ಬಂದಾಗ ಕಾಂಗ್ರೆಸ್ನವರು ಸ್ವಾಮೀಜಿಯ ಕಾಲು ಹಿಡಿದಿಲ್ವಾ? ಈ ಹಿಂದೆ ಅಕ್ಬರೋದ್ದೀನ್ ಓವೈಸಿ ಪ್ರಚೋದನಾಕಾರಿ…
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಪ್ರೀತಿ, ಮದುವೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಒಂದು ಹೆಸರಿನಲ್ಲಿ ಯುವಕ ಮತ್ತು ಯುವತಿರು ಇಬ್ಬರು ಕೂಡ ಮೋಸ ಹೋಗುತ್ತಿದ್ದಾರೆ ಇದೀಗ ಬೆಂಗಳೂರಿನಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ಯುವತಿಯ ಜೊತೆಗೆ ಪ್ರೀತಿಸುವ ನಾಟಕವಾಡಿದ್ದು, ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ನಿರಂತರವಾಗಿ ಒಂದುವರೆ ವರ್ಷ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಇದೀಗ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಅತ್ಯಾಚಾರ ಎಸಗಿರುವ ಆರೋಪಿಯನ್ನು ಬೆಂಗಳೂರಿನ ತಾವರೆಕೆರೆ ಬಳಿಯ ಹೊಸಪಾಳ್ಯದ ಯುವಕ ಶ್ರೀಕಾಂತ ಎಂದು ಗುರುತಿಸಲಾಗಿದ್ದು, ಆಕೆ, ನೆಲಮಂಗಲದ ಬಳಿಯ ಮಧ್ಯಮ ಕುಟುಂಬದ ಯುವತಿ. ಇನ್ಸ್ಟಾಗ್ರಾಮ್ ಮೂಲಕ ಯುವತಿಯನ್ನು ಪರಿಚಯ ಮಾಡಿಕೊಂಡು ಸ್ನೇಹ ಸಂಪಾದಿಸಿದ್ದಾನೆ. ಚಾಟಿಂಗ್ ಮಾಡುತ್ತಾ ಬಣ್ಣದ ಮಾತನಾಡಿ ಪ್ರೀತಿಯ ಬುಟ್ಟಿಗೆ ಬೀಳಿಸಿಕೊಂಡಿದ್ದಾನೆ. ನಂತರ ಬೆಂಗಳೂರಿನಲ್ಲಿ ಪಾರ್ಕ್, ಸಿನಿಮಾ ಎಂದೆಲ್ಲಾ ಸುತ್ತಾಡಿದ ನಂತರ ಯುವತಿಗೆ ಮದುವೆ ಮಾಡಿಕೊಳ್ಳುವ ಭರವಸೆ ನೀಡಿದ್ದಾನೆ. ಬಳಿಕ ಯುವತಿಗೆ ಅದು ಇದು ಹೇಳಿ ನೆಲಮಂಗಲದ…
ಬೆಂಗಳೂರು : ಇದೆ ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶ ಹಮ್ಮಿಕೊಂಡಿದ್ದು, ಈ ಒಂದು ವಿಚಾರವಾಗಿ ಡಿಡಿಸಿಎಂ ಸೆಂಬ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಹಾಸನ ಸಮಾವೇಶಕ್ಕೆ ಯಾವುದೇ ಗೊಂದಲವಿಲ್ಲ. ಪಕ್ಷದ ವೇದಿಕೆಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದ್ದು, ನನ್ನ ನೇತೃತ್ವದಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಜಿಲ್ಲಾ ಮಂತ್ರಿಗಳು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಎಲೆಕ್ಷನ್ ಮುಗಿದ ಮಾತ್ರಕ್ಕೆ ಮರಿಯೋದು ಅಲ್ಲ. ಮುಂಬರುವ ಚುನಾವಣೆಯ ಬಗ್ಗೆಯೂ ಯೋಚನೆ ಮಾಡಬೇಕು. ಹೀಗಾಗಿ ಡಿಸೆಂಬರ್ 5ರಂದು ಹಾಸನದಲ್ಲಿ ಸಮಾವೇಶ ಮಾಡಲಿದ್ದೇವೆ. ಯಾರು ನಮಗೆ ಬೆಂಬಲ ಕೊಡುತ್ತಾರೋ ಅವರಿಗೆ ಬೆಂಬಲ ಕೊಡುತ್ತೇವೆ. ಹಾಸನ ಮೈಸೂರು ಚಾಮರಾಜನಗರ ಉಸ್ತುವಾರಿ ಮಂತ್ರಿಗಳಿಗೆ ಜವಾಬ್ದಾರಿ ನೀಡಿದ್ದು ಎಲ್ಲರೂ ಸಹ ಈ ಸಮಾವೇಶಕ್ಕೆ ಬಂದು ಯಶಸ್ವಿ ಮಾಡಬೇಕು ಎಂದು ತಿಳಿಸಿದರು. ಪಕ್ಷ ಸಂಘಟನೆ ಮಾಡುವಾಗ ದೃಷ್ಟಿಯಿಂದ ಸಮಾವೇಶ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಪ್ರತಿ ವಿಭಾಗವಾರು ಸಮಾವೇಶಕ್ಕೆ ತೀರ್ಮಾನ ಮಾಡಿದ್ದೇವೆ ಎಲ್ಲೆಲ್ಲಿ…
ನವದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಧ್ಯಕ್ಷರಾಗಿ ಜಯ್ ಶಾ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ನವೆಂಬರ್ 20ರಿಂದ ಐಸಿಸಿ ಅಧ್ಯಕ್ಷರಾಗಿದ್ದ ಗ್ರೇಗ್ ಬಾರ್ಕ್ಲೆ ಉತ್ತರಾಧಿಕಾರಿಯಾಗಿ ಬಿಸಿಸಿಐನ ಮಾಜಿ ಕಾರ್ಯದರ್ಶಿ ಜಯ್ ಶಾ ಕಾರ್ಯನಿರ್ವಹಿಸಲಿದ್ದಾರೆ. ಅಧ್ಯಕ್ಷರಾದ ಬಳಿಕ ವಿವಿಧ ಮಾದರಿಗಳ ಸಹ ಅಸ್ತಿತ್ವ ಹಾಗೂ ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ವೇಗ ನೀಡಬೇಕಾದ ಸಂಕೀರ್ಣ ಘಟ್ಟದಲ್ಲಿದ್ದೇವೆ. ಕ್ರಿಕೆಟ್ ಜಾಗತಿಕವಾಗಿ ಭಾರಿ ಪ್ರಭಾವಶಾಲಿಯಾಗಿದ್ದು, ನಾನು ಈ ಅವಕಾಶವನ್ನು ಬಳಸಿಕೊಂಡು ಕ್ರಿಕೆಟ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಐಸಿಸಿ ತಂಡ ಹಾಗೂ ಸದಸ್ಯ ರಾಷ್ಟ್ರಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಅವರು ತಿಳಿಸಿದರು. ಐಸಿಸಿ ಮುಖ್ಯಸ್ಥನ ಪಾತ್ರದಿಂದ ನಾನು ಗೌರವಕ್ಕೊಳಗಾಗಿದ್ದೇನೆ. ಐಸಿಸಿ ನಿರ್ದೇಶಕರು ಹಾಗೂ ಸದಸ್ಯರ ಬೆಂಬಲ ಮತ್ತು ವಿಶ್ವಾಸಕ್ಕೆ ನಾನು ಆಭಾರಿಯಾಗಿದ್ದೇನೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಸೇರ್ಪಡೆಗೆ ಪ್ರಯತ್ನ ಹಾಗೂ ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ಆದ್ಯತೆ ನೀಡುವುದರತ್ತ ಗಮನ ಹರಿಸಲಾಗುವುದು ಎಂದು ಅವರು ಹೇಳಿದ್ದಾರೆ.36 ವರ್ಷ…
ಉತ್ತರಕನ್ನಡ : ಒಂದೆಡೆ ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದ್ದು ತಮಿಳುನಾಡು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಈ ಒಂದು ಚಂಡಮಾರುತದ ಪರಿಣಾಮದಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇನ್ನೊಂದೆಡೆ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಇದೀಗ ಭೂಕಂಪನದ ಅನುಭವವಾಗಿದೆ. ಹೌದು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿ ಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಳ್ಳಿ ಕಸಗೆ, ಬಂಡಳದಲ್ಲಿ ಭೂಮಿ ಕಂಪಿಸಿದೆ. 2 ತಾಲೂಕುಗಳ ಹಲವು ಪ್ರದೇಶಗಳಲ್ಲಿ 3 ಸೆಕೆಂಡ್ ಗಳ ವರೆಗೆ ಭೂಮಿ ಕಂಪಿಸಿದ ಅನುಭವ ಆಗಿದೆ.













