Author: kannadanewsnow05

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿಯ ಫೋಟೋ ಪತ್ತೆಯಾಗಿದ್ದು, ಹಂತಕನನ್ನು ಒರಿಸ್ಸಾ ಮೂಲದ ಮಹಾಲಕ್ಷ್ಮಿಯ ಸಹೋದ್ಯೋಗಿ ಮುಕ್ತಿ ರಂಜನ್ ರಾಯ್ ಎಂದು ತಿಳಿದು ಬಂದಿದೆ. ಹೌದು ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಹೆಬ್ಬಗೋಡಿಯಲ್ಲಿ ನೆಲೆಸಿದ್ದನು. ತಮ್ಮನೊಂದಿಗೆ ಹೆಬ್ಬಗೋಡಿಯಲ್ಲಿ ವಾಸವಿದ್ದು ಪ್ರತಿನಿತ್ಯ ಮಲ್ಲೇಶ್ವರಂನ ಫ್ಯಾಶನ್ ಫ್ಯಾಕ್ಟರಿಯಲ್ಲಿ ಟೀಂ ಹೆಡ್‌ ಆಗಿ ಕೆಲಸ ಮಾಡುತ್ತಿದ್ದನು. ಈ ವೇಳೆ ಅದೇ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಲಕ್ಷ್ಮಿಯನ್ನ ರಂಜನ್ ಪ್ರೀತಿಸುತ್ತಿದ್ದನು. ಆದರೆ ಇಬ್ಬರ ಮಧ್ಯ ಅದೇನು ಮನಸ್ತಾಪ ಉಂಟಾಯಿತು ಗೊತ್ತಿಲ್ಲ. ಸೆಪ್ಟೆಂಬರ್ 1 ರಂದು ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್ ಇಬ್ಬರು ಕೆಲಸಕ್ಕೆ ಹಾಜರಾಗಿದ್ದಾರೆ. ಬಳಿಕ ಸೆಪ್ಟೆಂಬರ್ 2ರಿಂದ ಮಹಾಲಕ್ಷ್ಮಿ ವಾರದ ರಜೆ ತೆಗೆದುಕೊಂಡಿದ್ದಾಳೆ. ಸೆಪ್ಟೆಂಬರ್ 2ರಂದು ತಾಯಿಯನ್ನು ಭೇಟಿಯಾಗಲು ತಾಯಿಯ ಮನೆಗೆ ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದಾಳೆ. ಆದರೆ ಅಷ್ಟರಲ್ಲಿ ಆರೋಪಿ ಮುಕ್ತಿ…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಶೋಧ ಕಾರ್ಯದಲ್ಲಿ ನಾಪತ್ತೆಯಾಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಅದರಲ್ಲಿ ಕೇರಳ ಮೂಲದ ಲಾರಿ ಚಾಲಕನಾಗಿದ್ದ ಅರ್ಜುನ್ ಶವ ಸೇರಿದಂತೆ ಮತ್ತೋರ್ವರ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಅರ್ಜುನನ ಮೃತದೇಹ 2 ತುಂಡುಗಳಾಗಿವೆ. ಹೌದು ಕಳೆದ ಜುಲೈ 16 ರಂದು ಬೆಳಿಗ್ಗೆ 8.40ಕ್ಕೆ ಗುಡ್ಡ ಕುಸಿತವಾಗಿತ್ತು. ಘಟನೆಯಲ್ಲಿ 9 ಜನರು ನಾಪತ್ತೆಯಾಗಿದ್ದರು. ಇದೀಗ ಕೇರಳ ಮೂಲದ ಚಾಲಕ ಅರ್ಜುನ್ ಹಾಗೂ ಇನ್ನೊರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ಅಲ್ಲದೆ ಅರ್ಜುನ್ ಓಡಿಸುತ್ತಿದ್ದ ಲಾರಿ ಕೂಡ ಪತ್ತೆಯಾಗಿದೆ. ಸದ್ಯ ಅರ್ಜುನ್ ಮೃತದೇಹ ಭಾರತ ಬೆಂಜ್ ಲಾರಿಯಲ್ಲಿದೆ. ಮತ್ತೊಂದು ಶವ ಯಾರದ್ದು ಎಂದು ಇನ್ನಷ್ಟೇ ದೃಢಪಡಿಸಬೇಕಿದೆ. ಶಿರೂರು ಬಳಿ, ಗಂಗಾವಳಿ ನದಿಯಲ್ಲಿ ಆರು ದಿನಗಳಿಂದ ಶೋಧ ಕಾರ್ಯ ನಡೆಸಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಗ್ರಾಮದಲ್ಲಿ ಶೋಧಕಾರ್ಯ ನಡೆಸಲಾಗಿತ್ತು. ಬಾರ್ಜ್…

Read More

ಮಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದ್ದು, ರಾಜ್ಯಪಾಲರ ಆದೇಶ ಸರಿ ಎಂದು ತೀರ್ಪು ನೀಡದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಈ ಕುರಿತು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಸಲಹೆ ನೀಡಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಹಿಂದೆ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ನೀಡಿದ್ದರು. ಅಪಘಾತ ಮಾಡಿ ರೈಲ್ವೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಕೊಡಬೇಕು ಬೇಡವೋ ಎನ್ನುವುದು ಅವರಿಗೆ ಬಿಟ್ಟಿದ್ದು. ಆದರೆ ಇಂತಹ ಗಂಭೀರ ಆರೋಪ ಬಂದಾಗ ರಾಜೀನಾಮೆ ಕೊಡಬೇಕು ಹೈಕೋರ್ಟ್ ಸಹ ಮೇಲ್ನೋಟಕ್ಕೆ ಪುರಾವೆ ಇದೆ ಅಂತ ಹೇಳಿದ್ದಾರೆ ಎಂದು ಅವರು ತಿಳಿಸಿದರು. ಹಾಗಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆನಿಸುತ್ತಿದೆ. ರಾಜೀನಾಮೆ ಕೊಡುವುದು ಸಿದ್ದರಾಮಯ್ಯಗೆ ಬಿಟ್ಟದ್ದು. ಯಾವ ತನಿಖಾ ಸಮಿತಿ…

Read More

ಬೆಂಗಳೂರು : ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಇದರ ಬೆನ್ನಲ್ಲೇ ಇಂದು ಜನಪ್ರತಿನಿಧಿಗಳ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಇದರ ಬೆನ್ನೆಲ್ಲೆ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ ದೂರುದಾರ ಪರ ವಕೀಲ ವಸಂತ್ ಕುಮಾರ್ ಈ ಒಂದು ಹಗರಣದಲ್ಲಿ ಸಿದ್ದರಾಮಯ್ಯರನ್ನು ಅರೆಸ್ಟ್ ಕೂಡ ಮಾಡಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉತ್ತಮ ಆದೇಶ ಕೊಟ್ಟಿದೆ. ನಿನ್ನೆ ಹೈಕೋರ್ಟ್​ ಕೊಟ್ಟ ತೀರ್ಪಿನ ಆದೇಶದ ಪ್ರತಿಯನ್ನು ನೀಡಿದ್ದೆವು. ಖಾಸಗಿ ದೂರಿಗೆ ನ್ಯಾಯ ಸಿಕ್ಕಿದೆ. 3 ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಗೆ ಸೂಚನೆ ನೀಡಲಾಗಿದೆ. ಪ್ರಾಮಾಣಿಕವಾಗಿ ತನಿಖೆ ಆಗಬೇಕು ಅಂತಾ ಮನವಿ ಮಾಡುತ್ತೇವೆ ಎಂದಿದ್ದಾರೆ. ಸಿಎಂ ಸ್ಥಾನದಲ್ಲಿ ಮುಂದುವರೆದರೆ ಪ್ರಾಮಾಣಿಕ ತನಿಖೆಯಾಗಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ಎಫ್​ಐಆರ್​ ದಾಖಲಿಸಿ ತನಿಖೆ ಆಗಬೇಕು, ಅರೆಸ್ಟ್ ಕೂಡ ಮಾಡಬಹುದು. ಹೈಕೋರ್ಟ್​ನಲ್ಲಿ ದಾವೆ ಹೂಡುತ್ತೇವೆ. ಆಪಾದನೆ…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಶೋಧ ಕಾರ್ಯಾ ಎಲ್ಲಿ ನಾಪತ್ತೆಯಾಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಅದರಲ್ಲಿ ಕೇರಳ ಮೂಲದ ಲಾರಿ ಚಾಲಕನಾಗಿದ್ದ ಅರ್ಜುನ್ ಶವ ಸೇರಿದಂತೆ ಮತ್ತೋರ್ವರ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಹೌದು ಕೇರಳ ಮೂಲದ ಚಾಲಕ ಅರ್ಜುನ್ ಹಾಗೂ ಇನ್ನೊರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ಅಲ್ಲದೆ ಅರ್ಜುನ್ ಓಡಿಸುತ್ತಿದ್ದ ಲಾರಿ ಕೂಡ ಪತ್ತೆಯಾಗಿದೆ. ಸದ್ಯ ಅರ್ಜುನ್ ಮೃತದೇಹ ಭಾರತ ಬೆಂಜ್ ಲಾರಿಯಲ್ಲಿದೆ. ಮತ್ತೊಂದು ಶವ ಯಾರದ್ದು ಎಂದು ಇನ್ನಷ್ಟೇ ದೃಢಪಡಿಸಬೇಕಿದೆ. ಶಿರೂರು ಬಳಿ, ಗಂಗಾವಳಿ ನದಿಯಲ್ಲಿ ಆರು ದಿನಗಳಿಂದ ಶೋಧ ಕಾರ್ಯ ನಡೆಸಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಗ್ರಾಮದಲ್ಲಿ ಶೋಧಕಾರ್ಯ ನಡೆಸಲಾಗಿತ್ತು. ಬಾಂಜ್ ಮೂಲಕ ನದಿಯಲ್ಲಿ ಲಾರಿ ಹಾಗೂ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಗುಡ್ಡ ಕುಸಿತದ ರಭಸಕ್ಕೆ ಲಾರಿ ನದಿಗೆ ಬಿದ್ದು ನುಜ್ಜುಗುಜ್ಜಾಗಿದೆ. ಗಂಗಾವಳಿ ನದಿಯಿಂದ…

Read More

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್ಐಟಿ ವಶದಲ್ಲಿ ಇದ್ದಾರೆ. ಇದೀಗ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸದೆ ಕೋಟ್ಯಾಂತರ ರೂಪಾಯಿ ಬಿಲ್ ಎತ್ತಿರುವ ಆರೋಪ ಕೇಳಿ ಬಂದಿದೆ. ಹೌದು ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಅವರ ವಿರುದ್ಧ 500 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಕಾಮಗಾರಿ ನಡೆಸದೇ ಈ ಅವಧಿಯಲ್ಲಿ ಬಿಲ್ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿರುವ ಕಾರಣ ಬಿಬಿಎಂಪಿ ಕಂದಾಯ ವಿಶೇಷ ಮುನೀಶ್ ಮೌದ್ಗಿಲ್ ನೇತೃತ್ವದಲ್ಲಿ ಇದೀಗ ತನಿಖೆಗೆ ಸಮಿತಿ ರಚಿಸಿ ಆದೇಶಿಸಲಾಗಿದೆ. ಹಾಗಾಗಿ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ಆರ್​ಆರ್ ನಗರ ಕ್ಷೇತ್ರದಲ್ಲಿ 2020 ರಿಂದ 2022ರ ವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಪಾಲಿಕೆ ಆದೇಶ…

Read More

ಚಿಕ್ಕಮಗಳೂರು : ಸಾಮಾನ್ಯವಾಗಿ ನಾವು ಸರ್ಕಾರಿ ಕಚೇರಿಗಳಲ್ಲಿ ಇನ್ನಿತರೆ, ಸರ್ಕಾರಿ ಸಂಬಂಧ ಕೆಲಸಗಳಾಗಬೇಕೆದ್ದರೆ ಲಂಚ ಪಡೆದುಕೊಳ್ಳುವರನ್ನು ನೋಡಿದ್ದೇವೆ. ಆದರೆ ಚಿಕ್ಕಮಗಳೂರಿನಲ್ಲಿ ಪರೀಕ್ಷೆಗೆ ಕೂರಿಸಲು ವಿದ್ಯಾರ್ಥಿಗಳಿಂದ ಪ್ರಿನ್ಸಿಪಾಲ್ ಒಬ್ಬರು ಲಂಚ ತೆಗೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಕಡೂರು ತಾಲೂಕಿನ ಬೀರೂರು ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕೂರಿಸಲು ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಲೋಕಾ ಬಲೆಗೆ ಬಿದ್ದಿದ್ದಾರೆ. ಪ್ರಿನ್ಸಿಪಾಲ್ ಪ್ರವೀಣ್, ಎಫ್.ಡಿ.ಎ ಸದಾಶಿವಯ್ಯ ಎಂದು ತಿಳಿದುಬಂದಿದೆ. ಕಾಲೇಜಿನಲ್ಲಿ 8 ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕೂರಲು ಹಾಜರಾತಿ ಕೊರತೆಯಾಗಿದೆ. 8 ವಿದ್ಯಾರ್ಥಿಗಳ ಬಳಿಯೂ ಪ್ರಿನ್ಸಿಪಾಲ್ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಎಫ್ ಡಿ ಎ ಆದಂತಹ ಸದಾಶಿವಯ್ಯಗೆ ಈಗಾಗಲೇ ವಿದ್ಯಾರ್ಥಿಗಳು ಫೋನ್ ಪೇ ಮೂಲಕ 10,000 ಕಳುಹಿಸಿದ್ದರು.ಇಂದು ಪ್ರಿನ್ಸಿಪಾಲ್ ಪ್ರವೀಣ 4000 ನಗದು ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಇದೀಗ ಅವರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ಆದರೆ ಮುಡಾ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯ ಮೇಲೆ ನನಗೆ ನಂಬಿಕೆ ಇಲ್ಲ. ಹಾಗಾಗಿ ಸಿಬಿಐ ತನಿಖೆ ಆಗಬೇಕು ಎಂದು ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದರು.ಲೋಕಾಯುಕ್ತ ತನಿಖೆ ಬಗ್ಗೆ ದುರುದಾರನಿಗೆ ಅನುಮಾನ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ. ನಮ್ಮ ಹೋರಾಟಕ್ಕೆ ಇದು ಎರಡನೇ ಜಯ. ಹೈಕೋರ್ಟ್ ಅಲ್ಲಿ ಮೊದಲನೇ ಜಯ ಸಿಕ್ಕಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಎರಡನೇ ಜಯ ಸಿಕ್ಕಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ನಮಗೆ ನ್ಯಾಯ…

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ಈ ಒಂದು ಆದೇಶದ ಕುರಿತಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಾನು ಈಗ ಕೇರಳಕ್ಕೆ ಹೋಗುತ್ತಿದ್ದೇನೆ. ನನಗೆ ಇನ್ನೂ ಆದೇಶದ ಪ್ರತಿ ಸಿಕ್ಕಿಲ್ಲ ಆ ಒಂದು ಆದೇಶದ ಸಂಪೂರ್ಣ ಆದೇಶದ ಪ್ರತಿ ಸಿಕ್ಕರೆ ಪ್ರತಿಕ್ರಿಯೆ ನೀಡುತ್ತೇನೆ. ಕೋರ್ಟ್ ಆದೇಶದ ಪ್ರತಿ ಸಿಕ್ಕ ಮೇಲೆ ವಕೀಲರ ಜೊತೆ ಚರ್ಚಿಸುತ್ತೆನೆ. ವಕೀಲರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ.ನಾವು ತನಿಖೆ ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಯಾವುದೇ ರೀತಿ ಹೆದರುವುದಿಲ್ಲ ಎಂದರು. ಕಾನೂನಿನ ಜೊತೆ ಹೋರಾಟ ಮಾಡಲಿಕ್ಕೆ ತಯಾರಾಗಿದ್ದೇವೆ.ನಿನ್ನೆ ಈ ಮಾತು ಹೇಳಿದ್ದೇನೆ. ಇವತ್ತು ಕೂಡ ಹೇಳುತ್ತಿದ್ದೇನೆ. ನನಗೆ…

Read More

ಬೆಂಗಳೂರು : ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​​ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಮತ್ತೊಂದು ಚಾರ್ಜ್​ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿಗಳಾಗಿರುವ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಶಿವಮೊಗ್ಗ ಮಾದರಿಯ ಐಸಿಸ್ ಸಂಚು ಪ್ರಕರಣದಲ್ಲಿಯೂ ಸಹ ಆರೋಪಿತರ ಸಂಚಿರುವುದರ ಕುರಿತು ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಬೆಂಗಳೂರಿನ ಅಲ್-ಹಿಂದ್ ಐಸಿಸ್ ಮಾದರಿ ಪ್ರಕರಣದ ಆರೋಪಿಗಳಾಗಿರುವ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ ಈ ಹಿಂದೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಸಿತ್ತು. ಶಿವಮೊಗ್ಗ ಜಿಲ್ಲೆಯ ಮೂಲದವರಾಗಿದ್ದ ಆರೋಪಿಗಳು ಐಸಿಸ್‌ನ ವಿಚಾರಧಾರೆಗಳಿಂದ ಪ್ರೇರಿತರಾಗಿದ್ದು, ಮುಸ್ಲಿಂ ಯುವಕರನ್ನ ಐಸಿಸ್‌ನತ್ತ ಸೆಳೆಯುತ್ತಿದ್ದರು. 2022ರ ಸೆಪ್ಟೆಂಬರ್ 19ರಂದು ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ…

Read More