Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರು ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಾಕಷ್ಟು ಸ್ಟಾರ್ ಕಲಾವಿದರು ಗೈರಾಗಿದ್ದರು. ಇದು ಡಿಕೆ ಶಿವಕುಮಾರ್ ಸಿಟ್ಟಿಗೆ ಕಾರಣವಾಗಿತ್ತು. ಇದೇ ಸಂದರ್ಭದಲ್ಲಿ ಅವರು ಮೇಕೆದಾಟು ಹೋರಾಟ, ಕನ್ನಡ ಪರ ಹೋರಾಟದಲ್ಲೂ ಕಲಾವಿದರು ಪಾಲ್ಗೊಳ್ಳಲ್ಲ ಎಂದು ಗರಂ ಆಗಿ ಹೇಳಿದ್ದರು. ಅಲ್ಲದೆ ಎಲ್ಲರ ನಟ್ಟು ಬೋಲ್ಟ್ ಸರಿ ಮಾಡ್ತೀನಿ ಎಂದಿದ್ದರು. ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ನಟಿ ರಮ್ಯಾ ಅವರು ಇದೀಗ ಸಮರ್ಥನೆ ಮಾಡಿಕೊಂಡಿದ್ದಾರೆ. ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು.ನನಗನಿಸುವ ಪ್ರಕಾರ ಸಾಹೇಬ್ರು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ನೀವು ಡಾ. ರಾಜ್ ಕುಮಾರ್ ಅವರನ್ನೇ ನೋಡಿ. ಕನ್ನಡ ಪರ ಹೋರಾಟ ಅಂದಾಗ ಮುಂಚೂಣಿಯಲ್ಲಿರುತ್ತಿದ್ದರು. ಅದೇ ರೀತಿ ಈಗಿನ ನಟರು ಇರಬೇಕು ಎಂದು ಹೇಳಿರಬಹುದು ಅದು ನಮ್ಮ ಕರ್ತವ್ಯ ಎಂದು ತಿಳಿಸಿದರು. ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು, ನಮಗೆ ಒಂದು ಜವಾಬ್ದಾರಿ ಇರುತ್ತದೆ ಎಂದು ಓರ್ವ ನಟಿಯಾಗಿ ನಾನು ಭಾವಿಸುತ್ತೇನೆ. ನಮ್ಮ ಭಾಷೆ, ಜಾಗ, ಸಂಸ್ಕೃತಿಗೆ…
ವಿಜಯನಗರ : ವಿಜಯನಗರದಲ್ಲಿ ಘೋರವಾದಂತಹ ದುರಂತ ಒಂದು ಸಂಭವಿಸಿದ್ದು, ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹೊಸಕೇರಿಯಲ್ಲಿ ನಡೆದಿದೆ. ಮೃತ ಬಾಲಕರನ್ನು ವೀರೇಶ್ (12) ಹಾಗು ವಿನಯ್ (12) ಎಂದು ತಿಳಿದುಬಂದಿದೆ. ಇಂದು ಅವರು ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಶವಗಳನ್ನು ಹೊರ ತೆಗೆಯಲಾಗಿದೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಿನ್ನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸೆಕ್ಯೂರಿಟಿ ಗಾರ್ಡ್ ನನ್ನು ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಕೊಲೆಗೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ಕಾರ್ತಿಕ್ ಎನ್ನುವ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಒಡಿಶಾ ಮೂಲದ ಗಣೇಶ್ (32) ಎನ್ನುವ ಸೆಕ್ಯೂರಿಟಿ ಗಾರ್ಡ್ ನನ್ನು ಚಾಕು ಇರಿದು ಭೀಕರವಾಗಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಬ್ಯಾಟರಾಯನ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದು ಇದೀಗ ಆರೋಪಿನ ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.
ಕಲಬುರ್ಗಿ : ಇತ್ತೀಚಿಗೆ ಹೆಂಡತಿಯರ ಕಾಟಕ್ಕೆ ಗಂಡಂದಿರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇಡೀ ದೇಶದಾದ್ಯಂತ ಭಾರಿ ಸುದ್ದಿಯಾಗಿತ್ತು.ಇದೀಗ ಕಲ್ಬುರ್ಗಿಯಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ನಗರದ ಮಹದೇವನಗರದಲ್ಲಿ ನಡೆದಿದೆ. ಹೌದು ಮನೇಯಲ್ಲಿ ನೇಣು ಬಿಗಿದುಕೊಂಡು ರಾಕೇಶ್ (30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾತೆತ್ತಿದರೆ ಪತ್ನಿ ಕಂಪ್ಲೇಂಟ್ ಕೊಡುತ್ತೇನೆ ಎಂದು ಕಿರುಕುಳ ನೀಡಿದ್ದಾಳೆ ಎಂದು ಆರೋಪಿಸಲಾಗಿದೆ. ಕಲಬುರ್ಗಿ ಮಹದೇವನಗರದಲ್ಲಿ ಈ ಒಂದು ಘಟನೆ ನಡೆದಿದೆ. 6 ತಿಂಗಳ ಹಿಂದೆ ರಾಕೇಶ್ ಹಾಗೂ ಮೇಘನಾ ಮದುವೆಯಾಗಿತ್ತು. ಮನೆ ಕೆಲಸ ಸೇರಿ ಸಣ್ಣ ಸಣ್ಣ ವಿಚಾರಕ್ಕೆ ಮೇಘನಾ ಕಿರಿಕ್ ಮಾಡುತ್ತಿದ್ದಳು. ಮನೆ ಒರೆಸುವ, ಮನೆ ಕೆಲಸ ಮಾಡಲು ಕಾಟ ನೀಡಲಾಗುತ್ತಿತ್ತು.ಮನೆ ಕೆಲಸ ಮಾಡದಿದ್ದರೆ ಪೊಲೀಸರಿಗೆ ಕಂಪ್ಲೇಂಟ್ ಕೊಡುತ್ತೇನೆ ಎಂದು ಪತ್ನಿ ಹೆದರಿಸುತ್ತಿದ್ದಳು. ಒಂದು ವೇಳೆ ಮಾತು ಕೇಳದಿದ್ದರೆ ಪೊಲೀಸರಿಗೆ ದೂರು…
ಬೆಂಗಳೂರು : ಮೈಸೂರು ಕೆ. ಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿನ ಷರತ್ತಿನಲ್ಲಿನ ಸಡಿಲಿಕೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಾರ್ಚ್ 10 ರಂದು ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತು. ಈ ವೇಳೆ ಭವಾನಿ ರೇವಣ್ಣ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಾಗ ಈ ನ್ಯಾಯಾಲಯವು ವಿಧಿಸಿರುವ ಷರತ್ತಿನಿಂದಾಗಿ ಭವಾನಿ ಅವರು ಮಂಡ್ಯ ಅಥವಾ ಮೈಸೂರಿಗೆ ಪ್ರಯಾಣಿಸಲಾಗುತ್ತಿಲ್ಲ. ತುರ್ತಿನ ಪರಿಸ್ಥಿತಿ ಇರುವುದರಿಂದ ಅರ್ಜಿ ವಿಚಾರಣೆ ನಡೆಸಬೇಕುಎಂದು ಮನವಿ ಮಾಡಿದರು. ಈ ವೇಳೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಕಾಲಾವಕಾಶ ನೀಡಿದೆ.ಇದನ್ನು ಆಲಿಸಿದ ಪೀಠವು ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ, ಮಾರ್ಚ್ 10ರಂದು ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ವಿಚಾರಣೆ ಮುಂದೂಡಿತು.2024ರ ಜೂನ್ 7ರಂದು ಆರು ಷರತ್ತುಗಳನ್ನು ವಿಧಿಸಿ ಹೈಕೋರ್ಟ್, ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಜಭವನ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಅಲ್ಲಿಯೇ ನಿಯೋಜನೆಗೊಂಡಿದ್ದ ಪೊಲೀಸರು ತಕ್ಷಣ ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದುಕೊಂಡು ಬಸ್ಸಿನಲ್ಲಿ ಕರೆದೋಯ್ದ ಘಟನೆ ನಡೆಯಿತು. ಹೌದು ಬೆಂಗಳೂರಲ್ಲಿ ರಾಜಭವನ ಮುತ್ತಿಗೆಗೆ ವಾಟಾಳ್ ನಾಗರಾಜ್ ಯತ್ನಿಸಿದ್ದು, ಸದ್ಯ ವಾಟಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದು ಬಸ್ ನಲ್ಲಿ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಕನ್ನಡಿಗರ ಮೇಲೆ ಶಿವಸೇನೆ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದರು.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ 16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಯಾಂಡಲ್ ವುಡ್ ತಾರೆಯರೇ ಭಾಗವಹಿಸದಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತೀಚಿಗೆ ನಟಿ ರಶ್ಮಿಕ ಮಂದಣ್ಣ ವಿರುದ್ಧ ಕರವೇ ಅಧ್ಯಕ್ಷ ನಾರಾಯಣಗೌಡ ವಾಗ್ದಾಳಿ ನಡೆಸಿದ್ದರು. ಇದೀಗ ಶಾಸಕ ರವಿ ಗಣಿಗ ಅವರು ಕೂಡ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಶ್ಮಿಕಾ ಮಂದಣ್ಣ ಅವರಿಗೆ ಕಳೆದ ಬಾರಿ ಶಾಸಕರೊಬ್ಬರು ಹೋಗಿ ಚಿತ್ರೋತ್ಸವಕ್ಕೆ ಆಹ್ವಾನ ನೀಡಿದರೆ ನಾನು ಹೈದರಾಬಾದ್ ನಲ್ಲಿ ಇದ್ದೇನೆ. ನನಗೆ ಬರಲು ಟೈಂ ಇಲ್ಲ ಎಂದಿದ್ದಾರೆ. ಕನ್ನಡದವರೇ ಆಗಿ ಕನ್ನಡ ಸಿನಿಮಾ ಕಾರ್ಯಕ್ರಮಕ್ಕೆ ಈ ರೀತಿ ಹೇಳಿದರೆ ಇಂತವರಿಗೆ ಬುದ್ಧಿಕಲಿಸುವುದು ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘CCL’ ಆಡೋಕೆ ಆಗುತ್ತೆ, ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ಆಗಲ್ವಾ? ಇವರಿಗೆ ಸಿಸಿಎಲ್ ಕ್ರಿಕೆಟ್ ಆಡಲು ಹೋಗಲು ಆಗುತ್ತೆ, ಇಲ್ಲಿನ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲು ಆಗಲ್ಲ. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇದೆ. ಸದ್ಯಕ್ಕೆ ಸಿಸಿ ಎಲ್ ಕ್ರಿಕೆಟ್ ನಿಲ್ಲಿಸಿ ಎಂದು ಫಿಲ್ಮ್…
ಬೆಂಗಳೂರು : ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲಿ ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು.ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ… ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು. ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ ವೇಳೆ ಸಹೋದರ ಹಾಗು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹಾಜರಿದ್ದರು.
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ ಬಿಜೆಪಿ ಡಿಕೆ ಶಿವಕುಮಾರ್ ಅವರು, ಕರ್ನಾಟಕದ ಪರ ಧ್ವನಿ ಎತ್ತದ ಚಿತ್ರರಂಗದ ಕೆಲವು ನಟ ನಟಿಯರ ನಟ್ಟು ಬೋಟ್ ಟೈಟ್ ಮಾಡಬೇಕಾಗಿದೆ ಎಂದು ಹೇಳಿಕೆ ನೀಡಿದರು ಇದೇ ವಿಚಾರವಾಗಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೌದು ಚಿತ್ರತಂಗದವರ ನಟ್ಟು ಬೋಲ್ ಟೈಟ್ ಮಾಡಲೇಬೇಕು ಎಂದು ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಚಿತ್ರನಟರ ನಟ್ಟು ಬೋಲ್ಟ್ ಟೈಟ್ ಮಾಡಬೇಕೆಂಬ ಹೇಳಿಕೆ ವಿಚಾರವಾಗಿ ಕನ್ನಡ ಚಿತ್ರರಂಗದ ಕೆಲ ವಿಧಾನದಲ್ಲಿ ಧಿಮಾಕು ಹೆಚ್ಚಾಗಿದೆ ಅಂತವರಿಗೆ ಸರ್ಕಾರ ನಟ್ಟು ಬೋಲ್ಟ್ ಟೈಟ್ ಮಾಡಲೇಬೇಕು ಯಾರು ಕರೆಕ್ಟ್ ಇರುತ್ತಾರೋ ಅವರಿಗೆ ಅದು ಎಫೆಕ್ಟ್ ಆಗುವುದಿಲ್ಲ. ಡಿಸಿಎಂ ಡಿಕೆ ಶಿವಕುಮಾರ್ ಯಾವುದನ್ನು ಸುಮ್ಮನೆ ಹೇಳುವುದಿಲ್ಲ. ಏನಾದರೂ ಡಿಕೆ ಶಿವಕುಮಾರ್ ಹೇಳಿದ್ದಾರೆ ಅಂದರೆ ಅದು 100 ಪರ್ಸೆಂಟ್ ಸರಿ ಇರುತ್ತದೆ ಎಂದರು. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ ಸುಮ್ಮನೆ ಧರಣಿ ಮಾಡುತ್ತಾರೆ. ಡಿಸಿಎಂ ಡಿಕೆ…
GOOD NEWS : ಯಜಮಾನಿಯರಿಗೆ ಸಿಹಿಸುದ್ದಿ : 2 ತಿಂಗಳ ‘ಗೃಹಲಕ್ಷ್ಮಿ’ ಬಾಕಿ ಹಣ ಶೀಘ್ರ ಖಾತೆಗೆ : ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಕಳೆದ ಎರಡು ತಿಂಗಳಿನಿಂದ ಗ್ರಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬಂದಿಲ್ಲ ಎಂದು ರಾಜ್ಯದ ಮಹಿಳೆಯರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಇದೇ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಶೀಘ್ರ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ಹಾಕುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ವಿಳಂಬ ಆಗಿರುವ ಕುರಿತು ಹಣ ಹಾಕೋದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದೆ. ಬಾಕಿ ಇರುವ ಎರಡು ತಿಂಗಳ ಹಣವನ್ನು ಈಗ ಬ್ಯಾಂಕ್ ಖಾತೆಗೆ ಹಾಕುತ್ತೇವೆ. ಯಾವುದೇ ಫಿಲ್ಟರ್ ನಾವು ಮಾಡುತ್ತಿಲ್ಲ ಎಲ್ಲರಿಗೂ ಕೂಡ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ ಗ್ಯಾರಂಟಿಗಳನ್ನು ಮುಂದುವರಿಸುತ್ತೇವೆ.ಯಾವುದೇ ಕಾರಣಕ್ಕೂ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.














