Author: kannadanewsnow05

ಬೆಂಗಳೂರು : ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಣಿಪಾಲ್ ಆಸ್ಪತ್ರೆಯಲ್ಲಿ ಪೊಲೀಸರು ರಿಕ್ಕಿ ರೈ ಹೇಳಿಕೆಯನ್ನು ಪಡೆದಿದ್ದಾರೆ. ರಾಮನಗರ ಡಿವೈಎಸ್ಪಿ ಶ್ರೀನಿವಾಸ್ ಅವರು ರಿಕ್ಕಿ ರೈ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಘಟನೆಯ ಬಗ್ಗೆ ರಿಕ್ಕಿ ರೈ ಸಂಪೂರ್ಣವಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಯಾರ ಮೇಲೆ ಅವಮಾನವಿದೆ ಅಂತಲೂ ಕೂಡ ರಿಕ್ಕಿ ರೈ ಹೇಳಿದ್ದಾರೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಿರುವ ಆರೋಪಿಗಳೆ ಅಟ್ಯಾಕ್ ಮಾಡಿಸಿದ್ದಾಗಿ ರಿಕ್ಕಿ ರೈ ಹೇಳಿದ್ದಾರೆ. ರಾಕೇಶ್ ಮಲ್ಲಿ, ಅನುರಾಧ, ನಿತೀಶ್, ವೈದ್ಯನಾಥನ್ ಹೆಸರು ಪ್ರಸ್ತಾಪಿಸಿದ್ದಾರೆ ಆಸ್ತಿ ವಿಚಾರವಾಗಿ ಗುಂಡಿನ ದಾಳಿ ನಡೆಸಿರುವುದಾಗಿ ರಿಕ್ಕಿ ರೈ ಆರೋಪಿಸಿದ್ದಾರೆ. ನಾನು ರಷ್ಯಾದಲ್ಲಿದ್ದೆ. ಜಮೀನು ವಿವಾದ ಸಂಬಂಧ ನ್ಯಾಯಾಲಯದಲ್ಲಿ ಕೇಸ್ ಇತ್ತು. ಹೀಗಾಗಿ ನಾನು ರಷ್ಯಾದಿಂದ ಬೆಂಗಳೂರಿಗೆ ಬಂದಿದ್ದೆ. ನಾನು ಬೆಂಗಳೂರಿಗೆ ಬಂದಾಗ ಸದಾಶಿವ ನಗರ ಮತ್ತು ಬಿಡದಿಯಲ್ಲಿ ಇರುತ್ತೇನೆ. ಬಿಡದಿಯಿಂದ ಸದಾಶಿವ ನಗರಕ್ಕೆ ಹೋಗುವಾಗ ಗುಂಡಿನ ದಾಳಿ ನಡೆದಿದೆ ಗಾಯಗೊಂಡಿದ್ದ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಆರ್ ಪುರಂ ನ ಬಸವೇಶ್ವರನಗರದ ಗಾಯತ್ರಿ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಕೊಲೆಯಾದ ಕರವೇ ಕಾರ್ಯಕರ್ತೆ ಮಂಗಳಮುಖಿ ತನುಶ್ರೀ (40) ಭೀಕರವಾಗಿ ಕೊಲೆಯಾಗಿದ್ದಾರೆ. ಮೂರು ತಿಂಗಳ ಹಿಂದೆ ಜಗನ್ನಾಥ್ ಎನ್ನುವವರ ಜೊತೆ ಮಂಗಳಮುಖಿ ತನುಶ್ರೀ ವಿವಾಹವಾಗಿದ್ದು, ಕಳೆದ ಮೂರು ದಿನಗಳ ಹಿಂದೆಯೇ ತನುಶ್ರೀ ಭೀಕರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ತನುಶ್ರೀ ಕೊಲೆಯಾದ ಬಳಿಕ ಪತಿ ಜಗನ್ನಾಥ್ ಮತ್ತು ಮನೆ ಕೆಲಸದಾಕೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದ್ದು, ಕೊಲೆಯಾದ ತನುಶ್ರೀ ಸಂಗಮ ಎನ್‌ಜಿಒ ಸಹ ನಡೆಸುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Read More

ಮಂಗಳೂರು : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗುಂಡೇಟಿನಿಂದ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ದೂರವಾಣಿ ಕರೆ ಮಾಡಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಗ್ಯ ವಿಚಾರಿಸಿದರು ಎಂದು ಹೇಳಲಾಗಿತ್ತು. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಯೇ ಇಲ್ಲ. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡೋಕೆ ಹೇಳಿದ್ದೇನೆ. ಆರೋಪಿಗಳು ವಿರುದ್ಧ ಮುಲಾಜಿಲ್ಲದೆ ಕ್ರಮ ಆಗಲಿ ಎಂದು ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.ಈ ದಾಳಿಯಲ್ಲಿ ಗುಂಡು ತಗುಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗಾಯಗೊಂಡಿದ್ದರು. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.…

Read More

ಬೆಳಗಾವಿ : ರಾಜ್ಯದ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಇಂದು ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ಬೆಳಗಾವಿಯ ಟಿಳಕವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪೌರಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಕಾಯಂಗೊಳಿಸಿ 17 ಸಂಬಳ ಕೊಟ್ಟಿದ್ದು ನಮ್ಮ ಸರ್ಕಾರ. ಕಸ ರವಾನೆ ಮಾಡುವ ಲಾರಿ ಚಾಲಕರನ್ನು ಕೂಡ ಖಾಯಂಗೊಳಿಸುತ್ತೇವೆ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ STP ಪ್ಲಾಂಟ್ ಗೆ ಜಮೀನು ಸ್ವಾಧೀನ ಆಗಿದೆ.ಸರ್ಕಾರ ನ್ಯಾಯಾಲಯದಲ್ಲಿ ಹಣವನ್ನು ಡೆಪಾಸಿಟ್ ಮಾಡಿದೆ.ಹೆಚ್ಚಿನ ಪರಿಹಾರ ನೀಡಿ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದರು. ಹೆಸರು ಹೇಳುತ್ತಿದ್ದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಎದ್ದು ನಿಂತು ಮಾತನಾಡಲು ಮುಂದಾದರು.ಈ ವೇಳೆ ಸಿಎಂ ಸಿದ್ದರಾಮಯ್ಯ ನಾನು ಮಾತನಾಡುತ್ತೇನೆ ಕುಳಿತುಕೊಳ್ಳಮ್ಮ ಎಂದರು. ಸಚಿವೆ ಹೆಬ್ಬಾಳ್ಕರ್ ನನ್ನ ಗಮನಕ್ಕೆ ತಂದಿದ್ದು ಫೈಲ್ ನೋಡುತ್ತೇನೆ. ನೋಡದೆ ಆಶ್ವಾಸನೆ ಕೊಡಬಾರ.ದು ನನಗೆ ಎಲ್ಲಾ ಶಾಸಕರು ಆತ್ಮೀಯರು ನಾನು ರಾಜ್ಯದ ಮುಖ್ಯಮಂತ್ರಿ ಸ್ಮಾರ್ಟ್ ಸಿಟಿ…

Read More

ಕಲಬುರ್ಗಿ : ಲಿವಿಂಗ್ ಟೂಗೆದರ್ ಸಂಬಂಧಕ್ಕೆ ಕುಟುಂಬಸ್ಥರು ವಿರೋಧ ಮಾಡಿದ್ದಕ್ಕೆ ಯುವಕನೊಬ್ಬ ಮನನೊಂದು ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ನಗರದ ನಾಗನಹಳ್ಳಿ ರೇಲ್ವೆ ಹಳಿ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ ಶಿವಕುಮಾರ್ (28) ಎಂದು ತಿಳಿದುಬಂದಿದೆ. ಶಿವಕುಮಾರ್ ಮತ್ತು ಆ ಮಹಿಳೆ ಲಿವಿಂಗ್ ಟೂಗೆದರ್ ಸಂಬಂಧದಲ್ಲಿದ್ದರು. ಆದರೆ, ಈ ಸಂಬಂಧಕ್ಕೆ ಶಿವಕುಮಾರ್‌ನ ಕುಟುಂಬದವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ವಿರೋಧದಿಂದ ಮನನೊಂದ ಶಿವಕುಮಾರ್ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದನೆಂದು ತಿಳಿದುಬಂದಿದೆ. ಶಿವಕುಮಾರ್ ಆತ್ಮಹತ್ಯೆಗು ಮುನ್ನ ಮಹಿಳೆಗೆ ಕರೆ ಮಾಡಿದ್ದ. ಈ ಕರೆಯನ್ನು ಸ್ವೀಕರಿಸಿದ ಮಹಿಳೆ, ಶಿವಕುಮಾರ್‌ನನ್ನು ರಕ್ಷಿಸಲು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾಳೆ. ಆದರೆ, ರೈಲ್ವೆ ಹಳಿಯಲ್ಲಿ ರಕ್ಷಣೆಗೆ ಮುಂದಾದಾಗ ಮಹಿಳೆ ಕೂಡ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.ತಕ್ಷಣ ಆಕೆಯನ್ನು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಾಡಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು : ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಅವ್ಯವಹಾರ ಆರೋಪ ಕುರಿತಂತೆ ಬಿಜೆಪಿ ಶಾಸಕರಾದಂತಹ ಎಸ್ ಆರ್ ವಿಶ್ವನಾಥ್ ಅವರು ಲೋಕಾಯುಕ್ತ ಎಸ್ ಪಿ ಅವರಿಗೆ ಇಂದು ಸಲ್ಲಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನರ್ಹರಿಗೆ ಟೆಂಡರ್ ಕೊಡುತ್ತಿದೆ. ಹೀಗಾಗಿ ಇವತ್ತು ಲೋಕಾಯುಕ್ತ ಎಸ್ಪಿಗೆ ದೂರು ಕೊಟ್ಟಿದ್ದೇನೆ. ರಾಜ್ಯಪಾಲರಿಗೆ ಅನುಮತಿ ಕೇಳುತ್ತೇವೆ ಅಂತ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹೇಳಿಕೆ ನೀಡಿದರು. ಈ ಹಿಂದೆ ಅಶ್ವಥ್ ನಾರಾಯಣ ಅವರು ಕೂಡ ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಇದೇ ವಿಚಾರವಾಗಿ ಇಂದು ಲೋಕಾಯುಕ್ತ ಎಸ್ ಪಿಗೆ ದೂರು ಸಲ್ಲಿಸಿದ್ದಾರೆ.

Read More

ಬೆಂಗಳೂರು : ಸಾಮಾನ್ಯವಾಗಿ ಕೌಟುಂಬಿಕ ಕಲಹದಲ್ಲಿ ಯಾರಾದರೂ ಬೇಸತ್ತು ಎಲ್ಲಾದರೂ ಹೋಗಿ ಸಾಯಿ ಎಂದರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತೆ ಆಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಹೌದು ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಿಂದ ಮೃತಳ ಇಬ್ಬರು ಸಹೋದರರು ಮತ್ತು ಅತ್ತಿಗೆಯನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ತಿರಸ್ಕರಿಸಿದ ನ್ಯಾಯಮೂರ್ತಿ ಜಿ.ಬಸವರಾಜು ಅವರ ಪೀಠ ಈ ಅಭಿಪ್ರಾಯ ವ್ಯಕ್ತಡಿಸಿದೆ. ಪ್ರಕರಣವೇನು? ಹಾವೇರಿಯ ಹಿರೇಕೆರೂರು ತಾಲೂಕಲ್ಲಿ ಮೃತ ಸುಧಾ, ಆಕೆಯ ಪತಿ ನಾಗರಾಜು ಹಾಗೂ ಪ್ರಕರಣದ ಆರೋಪಿಗಳು ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. 2014ರ ಜ.8ರಂದು ಬೆಳಗ್ಗೆ 8 ಗಂಟೆಗೆ ಮನೆ ಮುಂದೆ ಕಸ ಹೊಡೆಯುತ್ತಿದ್ದ ಸುಧಾ ಅವರನ್ನು ಉದ್ದೇಶಿಸಿ ಮನೆ ಖಾಲಿ ಮಾಡುವಂತೆ ಆರೋಪಿಗಳು ಹೇಳಿದ್ದರು. ಇದರಿಂದ ಕೆರಳಿದ್ದ ಸುಧಾ, ಈ ಮನೆ ತನ್ನ ಗಂಡನ ತಾತನಿಗೆ ಸೇರಿದೆ. ಮನೆ ಖಾಲಿ ಮಾಡಿದರೆ ನಾವು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದರು. ಆಗ ಆರೋಪಿಗಳು…

Read More

ಬಾಗಲಕೋಟೆ : ತನ್ನ ಸಹೋದರಿಗೆ ಚುಡಾಯಿಸಿದನೆಂದು ಯುವಕನೋರ್ವನಿಗೆ ಅಪ್ರಾಪ್ತ ಬಾಲಕನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ನವನಗರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕ ಮೊಹಮ್ಮದ್‌ ಆಸೀಫ್‌ ನದಾಫ್‌ ಎಂಬ ಯುವಕನಿಗೆ ಚಾಕು ಇರಿದು ಗಾಯಗೋಳಿಸಿದ್ದಾನೆ. ಆಸೀಫ್‌ ಅಪ್ರಾಪ್ತನ ಸಹೋದರಿ ಸೈಕಲ್‌ ಅಡ್ಡಗಟ್ಟಿ ಚುಡಾಯಿಸಿದ್ದ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಆರಂಭದಲ್ಲಿ ಜಗಳ ನಡೆದಿತ್ತು. ಕಿತ್ತಾಟದ ವಿಚಾರ ತಿಳಿದು ಮುಸ್ಲಿಮ್‌ ಸಮಾಜದ ಹಿರಿಯರು ಇಬ್ಬರನ್ನು ಸಂಧಾನ ಮಾತುಕತೆಗೆ ಕರೆದಿದ್ದರು. ಸಂಧಾನ ಮಾತುಕತೆ ವೇಳೆ ಆಸೀಫ್‌ ಹಾಗೂ ಅಪ್ರಾಪ್ತ ಬಾಲಕನ ಮಧ್ಯೆ ಮತ್ತೆ ಜಗಳ ಶುರುವಾಗಿದೆ. ಜಗಳ ಜೋರಾಗುತ್ತಿದ್ದಂತೆ ಬಾಲಕ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಆಸೀಫ್‌ ತಲೆ, ಮೂಗು,ಕೆನ್ನೆಯ ಭಾಗಗಳಲ್ಲಿ ಚಾಕು ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಆಸೀಫ್‌ನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ನವನಗರ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿರುವ 16,500 ಸರಕಾರಿ ಶಾಲೆಗಳಿಗೆ ಮಕ್ಕಳ ಊಟಕ್ಕಾಗಿ ಹೊಸ ಅಡುಗೆ ಪಾತ್ರೆ ವಿತರಣೆ ಮಾಡಲಾಗುತ್ತೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದ 16,500 ಸರಕಾರಿ ಶಾಲೆಗಳಿಗೆ ಹಳೆಯ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ. ಹಾಗಾಗಿ ಶೀಘ್ರದಲ್ಲಿಯೇ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಹೇಳಿದರು. ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಟಿವಿಗಳ ಬಳಕೆಯನ್ನು ಹೆಚ್ಚಿಸಲು ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಮಾರು 46,000 ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ. ಇದರಿಂದ ಮಕ್ಕಳು ಸ್ಮಾರ್ಟ್ ಕ್ಲಾಸ್ ಗಳ ಸದುಪಯೋಗ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕಂಟೆನರ್ ಬಿದ್ದು 4 ವರ್ಷದ ಬಾಲಕಿ ಹಾಗು ಆಕೆಯ ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರವಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೈಕ್ ಮೇಲೆ ಕಂಟೇನರ್ ಬಿದ್ದು ತಂದೆ ಮಗಳು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ತಂದೆ ವೆಂಕಟೇಶ ಹಾಗೂ ಮಗಳು ದೀಕ್ಷಿತ (4) ಸಾವನ್ನಪ್ಪಿದ್ದಾರೆ. ಮೃತ ವೆಂಕಟೇಶ್ ಪತ್ನಿ ರೂಪ ಅವರ ಸ್ಥಿತಿ ಚಿಂತಾ ಜನಕವಾಗಿದೆ. ಮೃತರು ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಮಂಡಳಿಯಿಂದ ನಾಯನ ಹಳ್ಳಿಗೆ ಹೊರಟಿದಾಗ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಲ್ಲದೇ ಕಂಟೆನರ್ ಕೆಳಗಡೆ ಮತ್ತಿಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಶಾ ಫೌಂಡೇಶನ್ ಗೆ ಹೋಗಿ ವಾಪಸ್ ಬರುವಾಗ ಈ ಘೋರವಾದ ದುರಂತ ಸಂಭವಿಸಿದೆ.

Read More