Author: kannadanewsnow05

ಮೈಸೂರು : ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನ ಎಷ್ಟೇ ಅಭಿವೃದ್ಧಿಯಾಗಿದ್ದರು, ಜನರು ಎಷ್ಟೇ ಮುಂದುವರೆದಿದ್ದರೂ ಸಹ ಹಳ್ಳಿಯ ಪ್ರದೇಶಗಳಲ್ಲಿ ಇನ್ನೂ ಮೂಢನಂಬಿಕೆ, ಅನಿಷ್ಟ ಪದ್ಧತಿಗಳನ್ನು ಆಚರಿಸುವುದನ್ನು ನಾವು ಕಾಣುತ್ತೇವೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚೆನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ. ಹೌದು ಸ್ವಾಮಿ (48) ಬಹಿಷ್ಕಾರಕ್ಕೆ ಮನನೊಂದು ಸಾವಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಗ್ರಾಮ ಪಂಚಾಯತಿ ಚುನಾವಣೆ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ವಾಮಿ ಹಾಗೂ ಕುಟುಂಬದ ಮೇಲೆ ಸಮುದಾಯದ ಹಾಗೂ ಗ್ರಾಮದ ಮುಖಂಡರು ಬಹಿಷ್ಕಾರ ಹೇರಿದ್ದರು. ಒಂದು ಲಕ್ಷ ದಂಡ ಕಟ್ಟಿದರೆ ಬಹಿಷ್ಕಾರ ತೆರವುಗೊಳಿಸುವುದಾಗಿ ಷರತ್ತು ವಿಧಿಸಿದ್ದರು. ಹೀಗಾಗಿ ಸ್ವಾಮಿ ಕುಟುಂಬದ ಜೊತೆ ಗ್ರಾಮಸ್ಥರ ಸಂಪರ್ಕ ಕಡಿದು ಹೋಗಿತ್ತು. ತನ್ನ ಮೇಲಿರುವ ಬಹಿಷ್ಕಾರ ತರವುಗೊಳಿಸಿ ಎಂದು ಅನೇಕ ಬಾರಿ ಸ್ವಾಮಿ ಗ್ರಾಮದ ಹಿರಿಯರಲ್ಲಿ ಮನವಿ ಮಾಡಿದರು ಸಹ ಯಾವುದೇ…

Read More

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು, ಇದೀಗ ಎಸ್ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನಿಂದ ತಮ್ಮ ಕಚೇರಿಗೆ ಕರೆದೋಯ್ದಿದ್ದಾರೆ. ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕೋರ್ಟ್ ಮುನಿರತ್ನ ಅವರನ್ನು ಅಕ್ಟೋಬರ್ 5ರ ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಮೂರು ಪೋಲಿಸ್ ವಾಹನಗಳಲ್ಲಿ ಬಂದಿದ್ದ ಎಸ್ಐಟಿ ಅಧಿಕಾರಿಗಳ ತಂಡ ಮೊದಲು ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಬಳಿಕ ಜಾಮೀನು ಪಡೆದುಕೊಂಡು ಬಿಡುಗಡೆಯಾಗಿದ್ದರು. ಈ ವೇಳೆ ಬಿಡುಗಡೆಯಾದ ತಕ್ಷಣ ಪೊಲೀಸರು ಅವರನ್ನು ಮತ್ತೆ ಬಂಧಿಸಿದ್ದರು. ಬಳಿಕ ರಾಜ್ಯ ಸರ್ಕಾರ ಮುನಿರತ್ನ ಪ್ರಕರಣದ ಕುರಿತು ಎಸ್ಐಟಿ ತನಿಖೆಗೆ ಆದೇಶ ಹೊರಡಿಸಿತ್ತು. ಇದೀಗ ಬಾಡಿ ವಾರೆಂಟ್ ಮೇಲೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಶಾಸಕ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದು ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿಲ್ಲ ಎಂದು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಸೈಟು ಹಂಚಿಕೆ ಹಗರಣ ಸಂಬಂಧ ನಾನು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿಜ. ಹಾಗೆಂದು ಯಾರ ರಾಜೀನಾಮೆಗೂ ನಾನು ಆಗ್ರಹಿಸಿಲ್ಲ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೂ ಒತ್ತಾಯಿಸಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಂದು ಕೂಡ ನಾನು ಸಿದ್ದರಾಮಯ್ಯ ರಾಜೀನಾಮೆ ಕೇಳಿಲ್ಲ. ಈಗಲೂ ಕೇಳುವುದಿಲ್ಲ. ದೇಶದ ಕಾನೂನು ಎಲ್ಲರಿಗೂ ರಕ್ಷಣೆ ಕೊಡುತ್ತದೆ. ಹಾಗೆಂದು ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ನ್ಯಾಯಾಲಯ ಹಾಗೂ ಕಾನೂನು ಆ ಬಗ್ಗೆ ನಿರ್ಧಾರ…

Read More

ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿದೆ ಆ ಮೂಲಕ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು ಒಂದು ವೇಳೆ ತನಿಖೆಯಲ್ಲಿ ತಪ್ಪು ಕೊಂಡು ಬಂದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ಹೋರಾಟಕ್ಕೆ ಅರ್ಥವಿಲ್ಲ. ಹೈಕೋರ್ಟ್‌ ತನಿಖೆಗೆ ಆದೇಶ ನೀಡಿದೆ ಅಷ್ಟೇ. ತನಿಖೆಯಾಗಲಿ. ತ‍ಪ್ಪು ಕಂಡುಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅವರು ನಗರದಲ್ಲಿ ಪ್ರತಿಕ್ರಿಯೆ ನೀಡಿದರು. ಆದರೆ ಕಾಂಗ್ರೆಸ್‌ ಹೈ ಕಮಾಂಡ್‌ ಹಾಗೂ ರಾಜ್ಯದ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.ಕಾನೂನು ಹೋರಾಟ ಮಾಡುತ್ತೇವೆ.ಮುಡಾ ಪ್ರಕರಣ ತನಿಖೆ ಸಮಗ್ರವಾಗಿ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಬೆಂಗಳೂರಿನ ಯಲಹಂಕದಲ್ಲಿ ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ 370 ಮೆಗಾ ವ್ಯಾಟ್ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಾನು ರಾಜೀನಾಮೆ ಕೊಡಬೇಕ? ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ನಾನು ಫೈಟ್ ಮಾಡುತ್ತೇನೆ ಎಂದು ಅವರು ಮತ್ತೊಮ್ಮೆ ಸ್ಪಷ್ಟಣೆ ನೀಡಿದರು. ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ.ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂದು ಬಹಳ ಜನ ಕಾಯುತ್ತಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ತಿಳಿಸಿದರು. ನಾನು ಹೋರಾಟದ ಹಿನ್ನೆಲೆಯಿಂದ ಬಂದಿರುವಂತಹವನು.ಸುಳ್ಳು ಆರೋಪಗಳಿಗೆ…

Read More

ಬೆಂಗಳೂರು : ಬೆಂಗಳೂರಿನ ವೈಯ್ಯಾಲಿಕಾವಲ್ ಮಹಾಲಕ್ಷ್ಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸ್ಫೋಟಕ ವಾದಂತಹ ಮಾಹಿತಿ ಸಿಕ್ಕಿದ್ದು ಈ ಒಂದು ಕೊಲೆಯು ಕೇವಲ ಒಬ್ಬನಿಂದ ನಡೆದಿಲ್ಲ. ಇದರ ಹಿಂದೆ ಹಲವರ ಪಾತ್ರ ಇದೆ ಎಂದು ಪೊಲೀಸರ ಪರಿಶೀಲನೆ ವೇಳೆ ತಿಳಿದುಬಂದಿದೆ. ಹೌದು ವೈಯ್ಯಾಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಸುಮಾರು 50 ತುಂಡುಗಳಾಗಿ ಮೃತದೇಹವನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿ ಇರಿಸಲಾಗಿತ್ತು. ಕೊಲೆಯ ಹಿಂದೆ ಮಹಾಲಕ್ಷ್ಮಿ ಜೊತೆಗೆ ಸಲುಗೆಯಿಂದ ಇದ್ದ ಅಶ್ರಫ್ ನ ಮೇಲೆ ಶಂಕೆ ವ್ಯಕ್ತಪಡಿಸಲಾಗಿತ್ತು. ಆದರೆ ಇದೀಗ ಮತ್ತೊಂದು ಸ್ಫೋಟಕ ವಾದಂತಹ ಮಾಹಿತಿ ಬಹಿರಂಗವಾಗಿದೆ. ಮಹಾಲಕ್ಷ್ಮಿ ಕೊಲೆಯಾದ ಘಟನಾ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುವ ವೇಳೆ ಹಲವರ ಫಿಂಗರ್ ಪ್ರಿಂಟ್ ಇದೀಗ ಲಭ್ಯವಾಗಿದೆ. ಹಾಗಾಗಿ ಈ ಒಂದು ಕೊಲೆಯ ಹಿಂದೆ ಕೇವಲ ಒಬ್ಬ ವ್ಯಕ್ತಿಯದಲ್ಲದೆ ಹಲವು ವ್ಯಕ್ತಿಗಳ ಪಾತ್ರ ಇರುವುದು ತನಿಖೆಯ ವೇಳೆ ತಿಳಿದು ಬಂದಿದೆ.ಈಗಾಗಲೇ ಜಾರ್ಖಂಡ್ ಮೂಲದ ಒಬ್ಬ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರು…

Read More

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಾರಕ್ಕೆ 6 ದಿನ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ 1 ರಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆಅವರಲ್ಲಿರುವ ಅಪೌಷ್ಟಿಕತೆ ನಿವಾರಿಸಲು, ರಕ್ತ ಹೀನತೆ ತಡೆಗಟ್ಟಲು, ಬಹು ಪೋಷಕಾಂಶಗಳ ನ್ಯೂನತೆಯನ್ನು ಹೋಗಲಾಡಿಸಲು, ಆರೋಗ್ಯಕರ ದೈಹಿಕ, ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸಲು, ನಿರಂತರ ಕಲಿಕೆಯನ್ನು ಪ್ರೋತ್ಸಾಹಿಸಲು ಮತ್ತು ಶಾಲಾ ತರಗತಿ ದಾಖಲಾತಿಯನ್ನು ಹೆಚ್ಚಿಸಲು ಮಧ್ಯಾಹ್ನ ಬಿಸಿಯೂಟ ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವನ್ನು ಒದಗಿಸಲಾಗುತ್ತಿದೆ. ಪೂರಕ ಪೌಷ್ಟಿಕ ಆಹಾರವಾಗಿ ಬಿಸಿಹಾಲು, ಮೊಟ್ಟೆ ಬಾಳೆಹಣು/ಶೇಂಗಾ ಚಿಕ್ಕಿಯನ್ನು ಹಾಗೂ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಮುನ್ನಡೆಸಿಕೊಂಡು ಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಜೀಂ ಪ್ರೇಮ್ ಜಿ ಪೌಂಡೇಶನ್ ರವರ…

Read More

ಬೆಂಗಳೂರು : ಬೆಂಗಳೂರಿನ IISC ಕ್ಯಾಂಪಸ್ ಹೊರಗೆ ಪ್ಯಾಲೇಸ್ಥಿನ ಧ್ವಜ ಪ್ರದರ್ಶನ ಮಾಡಲಾಗಿದೆ. PUCL ಸುದ್ದಿಗೋಷ್ಠಿಯ ವೇಳೆ ಧ್ವಜ ಪ್ರದರ್ಶನ ಮಾಡಲಾಯಿತು. PUCL (ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್) ಸಂಸ್ಥೆ ಸುದ್ದಿಗೋಷ್ಠಿ ನಡೆಸುತ್ತಿತ್ತು. ಈ ವೇಳೆ ಪ್ಯಾಲಿಸ್ಥಿನ್ ಧ್ವಜ ನೋಡುತ್ತಿದ್ದಂತೆ ಪೊಲೀಸರು ಸುದ್ದಿಗೋಷ್ಠಿಯನ್ನು ತಡೆದಿದ್ದಾರೆ. ಧ್ವಜವನ್ನು ವಶಕ್ಕೆ ಪಡೆದ ನಂತರ ಸುದ್ದಿಗೋಷ್ಠಿಗೆ ಅನುಮತಿ ನೀಡಿದ್ದಾರೆ. IISC ಕ್ಯಾಂಪಸ್ ನಲ್ಲಿ ನಿನ್ನೆ ಇಸ್ರೇಲ್ ಭಾರತ ವ್ಯಾಪಾರ ಶೃಂಗಸಭೆ ನಡೆಸಿತ್ತು. ಈ ಒಂದು ಸಭೆಗೆ PUCL ವಿದ್ಯಾರ್ಥಿ ಸಂಘಟನೆಯಿಂದ ವಿರೋಧ ವ್ಯಕ್ತಪಡಿಸಲಾಗಿತ್ತು. IISC ಕ್ಯಾಂಪಸ್ ಒಳಗೆ ಒಂದು ಕಡೆ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದರೆ. PUCL ಸಂಸ್ಥೆಯಿಂದ ಸುದ್ದಿಗೋಷ್ಠಿ ನಡೆಸಲಾಗುತ್ತಿತ್ತು.ಸುದ್ದಿಗೋಷ್ಠಿಯ ವೇಳೆ ಭಾರತ ಪ್ಯಾಲೆಸ್ಥಿನ್ ಬಾವುಟ ಒಟ್ಟಿಗೆ ಪ್ರದರ್ಶನ ಮಾಡಲಾಯಿತು. ಈ ವೇಳೆ ಪ್ಯಾಲೇಸ್ಥಿನ ಬಾವುಟ ಹಾರಿಸಿದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಪೊಲೀಸರು ಮತ್ತು ಸರ್ಕಾರದ ವಿರುದ್ಧ PUCL ಸದಸ್ಯರು ಕಿಡಿ ಕಾರಿದ್ದಾರೆ.

Read More

ಬೆಂಗಳೂರು :ಬೆಂಗಳೂರಿನ ಅಬಕಾರಿ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ‌.ಎಸ್ ಪಾಟೀಲ್ ವಾರಂಟ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆಯಾಗಿವೆ. ಹೌದು ಅ ಬಕಾರಿ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ದಾಳಿ ಮಾಡಿದ್ದು, ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಖುದ್ದು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ. ಬಿ‌.ಎಸ್ ಪಾಟೀಲ್ ಅವರು ಸರ್ಚ್ ವಾರಂಟ್‌ಗಳನ್ನು ಹೊರಡಿಸಿದ್ದರು. ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಖುದ್ದು ಪರಿಶೀಲನೆಗೆ ವಾರೆಂಟ್ ಹೊರಡಿಸಲಾಗಿತ್ತು. ಅದರಂತೆ ಸಂಜೆ ವೇಳೆ ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಗಳಲ್ಲೇ ಗಾಂಜಾ ಮತ್ತು ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆಯಾಗಿವೆ. ಯಶವಂತಪುರ, ಬ್ಯಾಟರಾಯನಪುರ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆಗಳು ನಡೆದು ಜಗಳಗಳು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಿದೆ.ಇದೀಗ ಬೆಂಗಳೂರಿನ ಹನುಮಂತನಗರದಲ್ಲಿ ಕಾರ್ಮಿಕರ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹೌದು ಬೆಂಗಳೂರಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕಾರ್ಮಿಕನ ಬರ್ಬರ ಕೊಲೆ ಮಾಡಲಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಅಜಿತ್ (30) ಎನ್ನುವ ವ್ಯಕ್ತಿಯ ಭೀಕರ ಹತ್ಯೆ ನಡೆದಿದೆ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ ಅಜಿತ್ ನ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಹನುಮಂತನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More