Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಚಾಮುಂಡೇಶ್ವರಿ ದೇಗುಲದ ಸೀರೆ ಕಳ್ಳತನ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೃಷ್ಣರಾಜ ಪೊಲೀಸ್ ಠಾಣೆಗೆ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿಯಾಗಿರುವ ರೂಪ ದೂರು ಸಲ್ಲಿಸಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ರೂಪ ಅವರ ವಿರುದ್ಧ ಚಾಮುಂಡೇಶ್ವರಿ ಬೆಟ್ಟದಲ್ಲಿ ಸೀರೆ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಇದೀಗ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ನೀಡಿದ್ದಾರೆ. ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ನಿನ್ನೆ ರಾತ್ರಿ ಕೆಆರ್ ಠಾಣೆಗೆ ರೂಪ ಅವರು ದೂರು ನೀಡಿದ್ದಾರೆ. ಪ್ರಕರಣ ಹಿನ್ನೆಲೆ? ಮೈಸೂರು ದಸರಾ ವೇಳೆ ಸಾವಿರಾರು ಭಕ್ತರು ತಾಯಿ ಚಾಮುಂಡೇಶ್ವರಿಗೆ ಭಕ್ತಿಯಿಂದ ಸೀರೆಗಳನ್ನು ಸಮರ್ಪಿಸುತ್ತಾರೆ. ಇದರಲ್ಲಿ ಬಹುತೇಕ ರೇಷ್ಮೆ ಸೀರೆಗಳು ಇರುತ್ತವೆ. ಹೀಗೆ ಭಕ್ತಿಯಿಂದ ಸಮರ್ಪಿತವಾದ ಸೀರೆಗಳನ್ನು ಅಕ್ರಮವಾಗಿ ಕಾರಿನಲ್ಲಿ ಸಾಗಿಸಿ ಕಾಳಸಂತೆಯಲ್ಲಿ ಅರ್ಧಬೆಲೆ ಮಾರಾಟ ಮಾಡುವ ಗಂಭೀರ ಆರೋಪ ರೂಪಾ ವಿರುದ್ಧ ಕೇಳಿಬಂದಿದೆ. ಈ…
ಬೆಂಗಳೂರು : ಗ್ರಾಮೀಣ ಭಾಗದ ಪತ್ರಕರ್ತರಿಗೆ ಅನುಕೂಲವಾಗಲೆಂದು ಬಸ್ ಪಾಸ್ ಜಾರಿ ಸಂಬಂಧ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಹಿನ್ನೆಲೆಯಲ್ಲಿ, ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಗ್ರಾಮೀಣ ಬಸ್ ಪಾಸ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಣೆ ಮಾಡಿದ್ದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸತತ ಸಭೆಗಳು ಆಗಿದ್ದು, ತಾಲೂಕು ಮಟ್ಟದಲ್ಲಿರುವ ಪತ್ರಕರ್ತರಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕ್ರಮ ಕೈಗೊಂಡಿದೆ. ಹಾಗಾಗಿ ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ಕೊಡಿಸಲಾಗುವುದು ಎಂದಿದ್ದಾರೆ. ಅರ್ಜಿ ಸಲ್ಲಿಕೆ ಹೇಗೆ? ಬಸ್ ಪಾಸ್ ಗಾಗಿ ಪತ್ರಕರ್ತರು ವಾರ್ತಾ ಇಲಾಖೆಗೆ ಅರ್ಜಿ ಸಲ್ಲಿಸಬೇಕಿಲ್ಲ. ಬಸ್ ಪಾಸ್ಗಾಗಿಯೇ ಸ್ಟಾ ವೇರ್ ಅಭಿವೃದ್ಧಿಪಡಿಸಲಾಗಿದೆ. ಸೇವಾ ಸಿಂಧುವಿನಲ್ಲಿ ನಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲವೇ ಅರ್ಜಿ ಸಲ್ಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ.…
ಬೆಂಗಳೂರು : ನನ್ನ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಬೇಡಿ ಎಂದು ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ಧಾರೆ. ನನ್ನೆಲ್ಲಾ ನೆಚ್ಚಿನ ಕಾರ್ಯಕರ್ತ ಬಂಧುಗಳಲ್ಲಿ ನನ್ನ ಮನವಿ.ಡಿಸೆಂಬರ್ 16ರಂದು ನನ್ನ ಜನ್ಮದಿನ. ಪ್ರತೀ ವರ್ಷ ನೀವೆಲ್ಲ ಬಹಳ ಅರ್ಥಪೂರ್ಣವಾಗಿ ನನ್ನ ಹುಟ್ಟುಹಬ್ಬ ಆಚರಿಸುತ್ತಾ ನನ್ನ ಬದುಕಿಗೆ ಸಾರ್ಥಕತೆ ತಂದು ಕೊಟ್ಟಿದ್ದೀರಿ. ರಾಜಕೀಯವಾಗಿ ನನ್ನ ಯಶಸ್ಸಿಗೆ ಮೂಲ ಆಧಾರಸ್ತಂಭವೇ ತಾವುಗಳು. ಆ ಕೃತಜ್ಞತಾ ಭಾವದಿಂದ ನಿಮ್ಮಲ್ಲಿ ನನ್ನದೊಂದು ವಿನಮ್ರ ಕಳಕಳಿಯ ಮನವಿ. ಸಂಸತ್ ಅಧಿವೇಶನ ನಡೆಯುತ್ತಿದೆ. ಹೀಗಾಗಿ ನಾನು ನವದೆಹಲಿಯಲ್ಲಿಯೇ ಉಳಿಯಬೇಕಾಗಿದೆ. ಅಲ್ಲದೆ; ಬೆಳಗಾವಿ ಸುವರ್ಣಸೌಧದಲ್ಲಿ ಕಲಾಪವೂ ಸಾಗಿದೆ. ಇಂಥಹ ಸನ್ನಿವೇಶದಲ್ಲಿ ವಿಜೃಂಭಣೆಯ ಹುಟ್ಟುಹಬ್ಬ ಬೇಡ ಎನ್ನುವುದು ನನ್ನ ಅಭಿಪ್ರಾಯ.ತಾವುಗಳು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಅಷ್ಟು ಸಾಕು ನನಗೆ. ಸಾಧ್ಯವಾದರೆ ಸಮಾಜಕ್ಕೆ, ದುರ್ಬಲ ಜನರಿಗೆ ಏನಾದರೂ ಸಹಾಯ ಮಾಡಿ. ಜನಸೇವೆ ಜಾತ್ಯತೀತ ಜನತಾದಳ ಪಕ್ಷದ ಮೂಲತತ್ತ್ವ. ಅದೇ ನನಗೆ ತಾವು ಕೊಡುವ ಉಡುಗೋರೆ. ಎಂದು ಮನವಿ ಮಾಡಿದ್ಧಾರೆ.…
ತುಮಕೂರು : ಕೆಮ್ಮಿನ ಔಷಧ ಎಂದು ಭಾವಿಸಿ ಕೀಟನಾಶಕ ಸೇವಿಸಿ ರೈತನೊಬ್ಬ ಸಾವಿಗೀಡಾಗಿರುವ ಘಟನೆ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಸಂಭವಿಸಿದೆ. ಚೊಟ್ನರ್ ನಿಂಗಪ್ಪ (65) ಮೃತಪಟ್ಟವರು. ರಾತ್ರಿ ಕೆಮ್ಮು ಬಂದಿದ್ದು, ಕೆಮ್ಮಿನ ಔಷಧ ಎಂದುಕೊಂಡು ಗಿಡಕ್ಕೆ ಸಿಂಪಡಿಸಲು ತಂದಿದ್ದ ಕೀಟನಾಶಕವನ್ನು ಸೇವಿಸಿದರು. ಬಳಿಕ ಅವರಿಗೆ ಅದು ಔಷಧವಲ್ಲ ಕೀಟನಾಶಕ ಎಂದು ತಿಳಿದಿದೆ ಕೊಡಲೇ ಮಕ್ಕಳಿಗೆ ಕೀಟನಾಶಕ ಸೇವಿಸಿದ್ದರ ಕುರಿತು ತಿಳಿಸಿದ್ದಾರೆ. ತಕ್ಷಣ ಮಕ್ಕಳು ನಿಂಗಪ್ಪ ಅವರು ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಚಿಕಿತ್ಸೆ ಫಲಿಸಿದೆ ಅವರು ಸಾವನ್ನಪ್ಪಿದ್ದಾರೆ.
ಬೆಂಗಳೂರು : ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಬಾಲಾಪರಾಧಿಗಳು ಇದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 5000ಕ್ಕೂ ಹೆಚ್ಚು ಬಾಲಾಪರಾಧಿಗಳ ಮೇಲೆ ಪ್ರಕರಣ ದಾಖಲಾಗಿವೆ.ಈ ಪೈಕಿ ಬೆಂಗಳೂರು ನಗರದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ವಿಧಾನಪರಿಷತ್ ಸದಸ್ಯ ಎಸ್ ವಿ ಸಂಕನೂರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉತ್ತರ ನೀಡಿದೆ. ಬಾಲಾಪರಾಧಿಗಳ ವಿಚಾರಣೆಯು ಕಾಲಮಿತಿ ಒಳಗಾಗಿ ನಡೆಯದೆ ಇರುವುದರಿಂದ ಬಾಲ ಮಂದಿರಗಳು ಭರ್ತಿ ಆಗುತ್ತಿವೆ ಎಂಬ ಆರೋಪವೂ ಕೇಳಿ ಬಂದಿದೆ. ಸದ್ಯ ರಾಜ್ಯದಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳ ರಕ್ಷಣೆಗಾಗಿ 1 ವಿಶೇಷ ಗೃಹ, 17 ವೀಕ್ಷಣಾಲಯ, 1 ಪ್ಲೇಸ್ ಆಫ್ ಸೇಫ್ಟಿ ಒಳಗೊಂಡು 19 ಸಂಸ್ಥೆಗಳು ಕಾರ್ಯನಿರ್ವಹಣೆ ಮಾಡುತ್ತಿವೆ.ಈ 19 ಸಂಸ್ಥೆಗಳಲ್ಲಿ 600 ಮಕ್ಕಳಿಗೆ ರಕ್ಷಣೆ ಕಲ್ಪಿಸಲು ಅವಕಾಶ ಇದೆ. ಇನ್ನು ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳ ಪುನರ್ವಸತಿಗಾಗಿ ವಿಜಯಪುರ ಹೊರತಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ…
ಮಡಿಕೇರಿ : ಅಳಿಯನೊಬ್ಬ ತನ್ನ ಅತ್ತೆಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಗಲು ಯತ್ನಿಸಿದ್ದಾನೆ. ಈ ವೇಳೆ ಮಾಹಿತಿ ಪಡೆದ ಪೊಲೀಸರು ಸೀನಿಮಿಯ ರೀತಿಯಲ್ಲಿ ಅರೆಸ್ಟ್ ಮಾಡಿರುವ ಘಟನೆ ಮಡಿಕೇರಿ ಜಿಲ್ಲೆಯ ನಾಪೋಕ್ಲು ಸಮೀಪದ ಅಯ್ಯಂಗೆರಿ ಗ್ರಾಮದಲ್ಲಿ ನಡೆದಿದೆ. ಹೌದು ವೈಯಕ್ತಿಕ ವಿಷಯಕ್ಕೆ ಈ ಒಂದು ಹಲ್ಲೆ ನಡೆದಿದೆ ಎಂದು ಮೆಲ್ನೋಟಲ್ಲೆ ತಿಳಿದುಬಂದಿದೆ.ಹಲ್ಲೆ ನಡೆಸಿದ ಆರೋಪಿಯನ್ನು ಮಡಿಕೇರಿ ನಿವಾಸಿ ಹ್ಯಾರಿಸ್ ಎಂದು ಗುರುತಿಸಲಾಗಿದೆ. ಆರೋಪಿ ಅಯ್ಯಂಗೇರಿ ಗ್ರಾಮದಲ್ಲಿದ್ದ ಅತ್ತೆ ಮನೆಗೆ ತೆರಳಿ, ಮನೆಯ ಮುಂಭಾಗದ ಬಾಗಿಲಿನ ಚಿಲಕ ಹಾಕಿ, ಹಿಂಬದಿ ಬಾಗಿಲನ್ನು ಒಡೆದು ಒಳ ನುಗ್ಗಿದ್ದಾನೆ. ಬಳಿಕ ಇಬ್ಬರು ಮಹಿಳೆಯರ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ದಾಳಿಯಿಂದ ಆರೋಪಿಯ ಅತ್ತೆ ಐಸಮ್ಮ ಮತ್ತು ಸಂಬಂಧಿ ಕದೀಜ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೃತ್ಯ ಎಸಗಿ ಆರೋಪಿ ಆಟೋದಲ್ಲಿ ಪರಾರಿಯಾಗಲು ಯತ್ನಿಸಿದ್ದು, ಮಾಹಿತಿ ತಿಳಿದ ನಾಪೋಕ್ಲು ಪೊಲೀಸರು ಬೆನ್ನಟ್ಟಿ ಹುದ್ದೂರು ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ. ಈ…
ಕಲಬುರ್ಗಿ : ಇತ್ತೀಚಿಗೆ ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ತಲೆಗೆ ಪೆಟ್ಟು ತಿಂದು, ಕೋಮ ಸ್ಥಿತಿಗೆ ತಲುಪಿದ್ದ ಯುವತಿಯೊಬ್ಬಳು ಸಾವನಪ್ಪಿರುವ ಘಟನೆ ನಿನ್ನೆ ರಾಯಚೂರಿನಲ್ಲಿ ನಡೆದಿತ್ತು. ಇದೀಗ ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಬೀದಿ ನಾಯಿಗಳಿಂದ 7ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಒಂದೇ ದಿನ ಬೀದಿ ನಾಯಿ ದಾಳಿಯಿಂದ 7ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿವೆ. ಬೀದಿ ನಾಯಿಗಳಿಂದ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ತಕ್ಷಣ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಹಾಗೂ ಪೋಷಕರು ಇದೀಗ ಆಗ್ರಹಿಸುತ್ತಿದ್ದಾರೆ.
ಬೆಂಗಳೂರು : ವಕ್ಫ್ ಆಸ್ತಿ ಕಬ್ಬಳಿಕೆಯ ಬಗ್ಗೆ ಮೌನವಾಗಿರುವಂತೆ ಬಿವೈ ವಿಜಯೇಂದ್ರ 150 ಕೋಟಿ ರೂಪಾಯಿ ಆಮಿಷ ಒದ್ದಿದ್ದರು. ಹಲೋ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿವೈ ವಿಜಯೇಂದ್ರ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದರು ಈ ಒಂದು ಆರೋಪಕ್ಕೆ ಇದೀಗ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದು, ಮುಡಾ ಕೇಸ್ ನಲ್ಲಿ ಹೈಕೋರ್ಟ್ ತೀರ್ಪಿನಿಂದ ಮುಖಭಂಗಕ್ಕೀಡಾದ ನಿಮಗೆ ಇನ್ನೊಬ್ಬರ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ. ಮಾನ್ಯ ಸಿದ್ದರಾಮಯ್ಯ ನವರೇ, ಸಿಬಿಐ, ಇಡಿ ತನಿಖೆಗಳಿಗೆ ಬೆಚ್ಚಿಬಿದ್ದಿರುವ ನೀವು ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಘಟಾನುಘಟಿ ಹಿರಿಯ ವಕೀಲರನ್ನು ದೆಹಲಿಯಿಂದ ಕರೆಸಿಕೊಂಡು ಕಾನೂನು ರಕ್ಷಣೆ ಪಡೆಯಲು ವ್ಯರ್ಥ ಪ್ರಯತ್ನ ನಡೆಸಿದಿರಿ, ಉಚ್ಛ ನ್ಯಾಯಾಲಯದ ತೀರ್ಪಿನಿಂದ ಮುಖಭಂಗಕ್ಕೀಡಾದ ನಿಮಗೆ ಇನ್ನೊಬ್ಬರ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಯಾವ ನೈತಿಕತೆ ಇದೆ? ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹರಣ ಸೇರಿದಂತೆ ಹತ್ತು ಹಲವು ಭ್ರಷ್ಟಾಚಾರದ ಆರೋಪಗಳು ನಿಮ್ಮ ಹಾಗೂ…
ಬೆಂಗಳೂರು : ಆಹಾರ ಸುರಕ್ಷತೆ ಗುಣಮಟ್ಟ & ಔಷಧ ನಿಯಂತ್ರಣ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಿ ಹೊಸ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಿದೆ. ರಾಜ್ಯ ಸರ್ಕಾರವು ಆಹಾರ ಸರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೆ ಮುಖ್ಯಸ್ಥರಾಗಿ ನೇಮಕವಾಗಿದ್ದು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮುಖ್ಯಸ್ಥರಾಗಿ ನೇಮಕರಾಗಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರ ನಿಯಂತ್ರಣದಲ್ಲಿಯೇ ಕೆಲಸ ನಿರ್ವಹಿಸಲಿದ್ದು, ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ ಸೂಚಿಸಿದೆ.ಈ ಮೂಲಕ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಎರಡು ಇಲಾಖೆಗಳು ವಿಲೀನವಾಗುವ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎರಡು ಇಲಾಖೆಯ ಅಡಿಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು.…
ಬೆಂಗಳೂರು : ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಇಂದು ನಡೆದಿದ್ದು, ನಿನ್ನೇನೆ ಫಲಿತಾಂಶ ಕೂಡ ಪ್ರಕಟವಾಗಿದೆ. ಮತ್ತೊಮ್ಮೆ ಸಾರಾ ಗೋವಿಂದು ಬಳಕ್ಕೆ ಚುನಾವಣೆಯಲ್ಲಿ ಜಯ ದೊರಕಿದೆ. ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ನರಸಿಂಹಲು ಆಯ್ಕೆ ಆಗಿದ್ದಾರೆ. ಇನ್ನೂ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿ ಕೆವಿ ವೆಂಕಟೇಶ್ ಆಯ್ಕೆ ಆಗಿದ್ದಾರೆ. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಸಾರಾ ಗೋವಿಂದು ಬಳಗದವರಾಗಿದ್ದು, ಮತ್ತೊಮ್ಮೆ ಇದೇ ಬಳಗಕ್ಕೆ ವಾಣಿಜ್ಯ ಮಂಡಳಿಯ ಚುಕ್ಕಾಣಿ ದೊರೆತಿದೆ.ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ಒಟ್ಟು 128 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅದರಲ್ಲಿ 24 ಮಂದಿ ಅವಿರೋಧವಾಗಿ ಆಗಿಬಿಟ್ಟಿದ್ದರು. ವಾಣಿಜ್ಯ ಮಂಡಳಿಯಲ್ಲಿ ಒಟ್ಟು 1,409 ಮತದಾರರಿದ್ದು ಇದರಲ್ಲಿ ಅತಿ ಹೆಚ್ಚು ಮತ ನಿರ್ಮಾಪಕ ವಲಯದಿಂದಲೇ ಇದೆ. ಅಧ್ಯಕ್ಷ ಸ್ಥಾನಕ್ಕೆ ನರಸಿಂಹಲು ಎಂ, ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ವಲಯ ಸಫೈರ್ ವೆಂಕಟೇಶ್, ನಿರ್ಮಾಪಕ ವಲಯ ಕಾರ್ಯದರ್ಶಿ ಸ್ಥಾನಕ್ಕೆ ಪ್ರವೀಣ್ ಕುಮಾರ್, ವಿತರಕ ವಲಯದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್ ಸಿ…














