Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಬೀದರ್ ಸುಚಿವೃತ ಕುಲಕರಣಿ ಎನ್ನುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯುವ ವೇಳೆ ಜನಿವಾರ ತೆಗೆಸಿದ್ದು, ಇನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಕೂಡ ಅಂತ ಜನಿವಾರ ಘಟನೆ ನಡೆದಿದೆ. ಇವೆರಡು ಘಟನೆಗಳು ಇದೀಗ ಬ್ರಾಹ್ಮಣ ಸಮಾಜದವರನ್ನು ಕೆರಳಿಸಿದ್ದು, ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೆ ವಿಚಾರವಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದು, ಸಿಇಟಿ ಪರೀಕ್ಷಾ ವೇಳೆ ಕೆಲವು ನಿಯಮ ಪಾಲಿಸಬೇಕು. ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಇರುತ್ತದೆ. ಅದನ್ನು ಪಾಲಿಸಬೇಕು ಆದರೆ ಜನಿವಾರ ತಗಿಯಬೇಕೆಂಬ ನಿಯಮ ಇಲ್ಲ ಜನಿವಾರ ಹಾಕಬಾರದು ಎಂದು ನಾವು ಸೂಚನೆ ಕೊಟ್ಟಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದಾರೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಯ ಮುನ್ನ ಏನು ನಿಯಮ ಇರುತ್ತದೆ ಅಭ್ಯರ್ಥಿಗಳು ಅವೆಲ್ಲ ನಿಯಮಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿರುತ್ತೇವೆ. ಆದರೆ ಜನಿವಾರ ತೆಗೆಯಬೇಕು ಲಿಂಗದಕಾಯಿ ತೆಗೆಯಬೇಕು ಎಂಬ ನಿಯಮ ಎಲ್ಲಿಯೂ…
ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು…
ಕಲಬುರ್ಗಿ : ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಕೈಗೊಂಡಿದ್ದು, ಇಂದು ಕಲ್ಬುರ್ಗಿಯಲ್ಲಿ ಜನಾಕ್ರೋಶ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಚಲನೆ ನೀಡಿದರು. ಇದೆ ವೇಳೆ ಎನ್ ರವಿಕುಮಾರ್ ಅವರು ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಚಿವರ ನೇತೃತ್ವದಲ್ಲಿ ಮರಳು ಮಾಫಿಯಾ ನಡೆಯುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಮರಳು ಮಾಫಿಯ ನಡೆಯುತ್ತಿದೆ. ಚಿತ್ತಾಪುರದಲ್ಲಿ ದೊಡ್ಡ ಮಟ್ಟದ ಮರಳು ಮಾಫಿಯ ನಡೆಯುತ್ತಿದೆ. ಅಲ್ಲಿ ಸರ್ಕಾರಿ ಸಂಸ್ಥೆಗೆ ಮರಳುಗಾರಿಕೆ ಅನುಮತಿ ನೀಡಿತ್ತು. ಆದರೆ ಅಕ್ರಮವನ್ನು ದಾರಿಗೆ ನಡೆಯುತ್ತಿದೆ. ಅಕ್ರಮ ಮರಳುಗಾರಿಕೆ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಕಾಂಗ್ರೆಸ್ನವರು ಧಿಕ್ಕಾರ ಕೂಗಿದರೆ ನಾವೇನು ಓಡಿ ಹೋಗಲ್ಲ. ನಮ್ಮ ಹೋರಾಟವನ್ನು ಧಾರ್ಮಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಐಟಿವಿಟಿ ಯುವರ್ ಪ್ರಿಯಾಂಕ್ ಖರ್ಗೆ ವಿತಂಡ ವಾದ ಮಾಡದೆ ಈ ಭಾಗದ ಸಂಪತ್ತು ಉಳಿಸುವ ಕೆಲಸ ಮಾಡಲಿ ಎಂದು ಕಲ್ಬುರ್ಗಿಯಲ್ಲಿ ಬಿಜೆಪಿ ಎಂಎಲ್ಸಿ…
ಪಾಟ್ನಾ : ಪಾಟ್ನಾದಲ್ಲಿ ಭಾರಿ ವಿಮಾನ ದುರಂತ ಒಂದು ತಪ್ಪಿದ್ದು, ವಿಮಾನ ಲ್ಯಾಂಡಿಂಗ್ ವೇಳೆ ಅಪರಿಚಿತ ಲೇಸರ್ ಲೈಟ್ ಎಂದು ಪೈಲೆಟ್ ಗೊಂದಲಕ್ಕೆ ಒಳಗಾಗಿದ್ದಾರೆ. ಲ್ಯಾಂಡಿಂಗ್ ವೇಳೆ ವಿಮಾನವು ಬ್ಯಾಲೆನ್ಸ್ ಕಳೆದುಕೊಂಡಿದೆ. ಆದರೆ ಅದೃಷ್ಟವಶಾತ್ ಪೈಲೆಟ್ ಸಮಯ ಪ್ರಜ್ಞೆಯಿಂದ ಸರಿಯಾದ ಸಮಯಕ್ಕೆ ಹಾಗೂ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದ್ದು ಭಾರಿ ದುರಂತ ಒಂದು ತಪ್ಪಿದೆ. ಹೌದು ಇಂದು ಪಾಟ್ನಾದಲ್ಲಿ ಈ ಒಂದು ವಿಮಾನ ದುರಂತ ತಪ್ಪಿದೆ. ಫ್ಲೈಟ್ ಲ್ಯಾಡಿಂಗ್ ವೇಳೆ ಲೇಸರ್ ಲೈಟ್ ನಿಂದ ತೊಂದರೆ ಉಂಟಾಗಿದ್ದು, ಲೇಸರ್ ಲೈಟ್ ನಿಂದ ಪೈಲೆಟ್ ಗೊಂದಲಕ್ಕೆ ಒಳಗಾಗಿದ್ದಾರೆ. ಲ್ಯಾಂಡಿಂಗ್ ವೇಳೆ ವಿಮಾನ ಬ್ಯಾಲೆನ್ಸ್ ಕಳೆದುಕೊಂಡಿದೆ ಸಮಸ್ಯೆಯ ನಡುವೆಯೂ ಕೂಡ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದೆ. ಘಟನೆಯನ್ನು ಡಿಜಿಸಿಎ ತನಿಖೆಗೆ ಆದೇಶಿಸಿದ್ದಾರೆ.ಬಿಹಾರದ ಪಾಟ್ನಾ ಪೊಲೀಸರಿಂದ ಅಪರಿಚಿತ ವ್ಯಕ್ತಿಗಾಗಿ ಶೋಧ ಕೈಗೊಂಡಿದ್ದಾರೆ.
ಬೆಂಗಳೂರು : ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರವನ್ನು ಅಧಿಕಾರಿಗಳು ತೆಗೆಸಿದ ಪ್ರಕರಣ ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೆ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಕ್ಯಾಬಿನೆಟ್ ಮೀಟಿಂಗ್ ನಲಿದ್ದೆ. ಹಾಗಾಗಿ ಈ ಘಟನೆ ಕುರಿತು ಇಂದು ಬೆಳಿಗ್ಗೆ ನನಗೆ ಮಾಹಿತಿ ಬಂದಿದೆ.ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ.…
ಬೆಂಗಳೂರು : ಬೆಂಗಳೂರು ನಗರದ ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಆರೋಪಿ ಕಾರ್ತಿಕ್ನನ್ನು ಶಿವಾಜಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ಏಪ್ರಿಲ್ 13 ರಂದು ಊಟ ಮುಗಿಸಿ ಎರಡನೇ ಮಹಡಿಗೆ ಮಲಗಲು ಓರ್ವ ಮಹಿಳೆ ತೆರಳುತ್ತಿದ್ದರು. ಈ ವೇಳೆ ಎದುರು ಮನೆಯಲ್ಲಿ ವಾಸವಾಗಿರುವ ಆರೋಪಿ ಕಾರ್ತಿಕ್ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ. ಇದನ್ನು ಪ್ರಶ್ನೆ ಮಾಡಿದ ಮಹಿಳೆ ಪತಿ ಮೇಲೆ ಮತ್ತು ಜಗಳ ಬಿಡಿಸಲು ಬಂದವರ ಮೇಲೂ ಆರೋಪಿ ಅಟ್ಯಾಕ್ ಮಾಡಿದ್ದ. ಎರಡನೇ ಮಹಡಿಯಿಂದ ಹಾಲೋ ಬ್ಲಾಕ್, ಹೂವಿನ ಪಾಟ್ ಕೆಳ ಮಹಡಿಯಲ್ಲಿದ್ದವರ ಮೇಲೆ ಎಸೆದಿದ್ದ. ಘಟನೆಯಲ್ಲಿ ಏಳು ಜನರಿಗೆ ಗಾಯವಾಗಿತ್ತು.ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಶಿವಾಜಿ ನಗರ ಪೊಲೀಸರು ಆರೋಪಿ ಕಾರ್ತಿಕ್ನನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ. ವಿಚಾರಣೆ ವೇಳೆ ನಾನು ಮೂತ್ರವಿಸರ್ಜನೆ ಮಾಡುತ್ತಿದೆ. ಆ ಸಮಯದಲ್ಲಿ ಮಹಿಳೆ ಬಂದಿದ್ದಾಳೆ. ಈ ವೇಳೆ ಗಲಾಟೆಯಾಗಿದೆ ಎಂದು…
ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯವಾದ ಘಟನೆ ಒಂದು ನಡೆದಿದ್ದು, ಪ್ರಿಯತಮನಿಂದ ಅಪ್ರಾಪ್ತೆಗೆ ಜನಿಸಿದ ಮಗು ಕಸದ ಬುಟ್ಟಿಯಲ್ಲಿ ಪತ್ತೆಯಾಗಿದೆ. ಈ ಒಂದು ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು, ಆತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. 21 ವರ್ಷ ಯುವಕನಿಂದ ಅಪ್ರಾಪ್ತೆ ಬಾಲಕಿ ಗರ್ಭಿಣಿಯಾಗಿದ್ದಾಳೆ. ನೆರೆಮನೆಯವರ ಸಹಾಯದಿಂದಲೇ ಮನೆಯಲ್ಲಿಯೇ ರಾತ್ರಿ ಬಾಲಕಿಗೆ ಹೆರಿಗೆ ಆಗಿದೆ. ಹೆರಿಗೆ ನಂತರ ಪೊರೆ ತೆರೆಯದ ಕಾರಣ ಮಗು ಸಾವನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ. ನಂತರ ಪ್ಲಾಸ್ಟಿಕ್ ಕವರ್ನಲ್ಲಿ ಹಾಕಿ ಕಸದ ಗಾಡಿಗೆ ಮಗುವನ್ನು ಡಂಪ್ ಮಾಡಿದ್ದಾರೆ. ಪಕ್ಕದ ಮನೆ ಅವರ ಕೈಗೆ ಕೊಟ್ಟು ಕಸದ ಲಾರಿಗೆ ಮಗುವನ್ನು ಎಸೆದಿದ್ದಾರೆ. ಯಲಹಂಕದ ಬಳಿ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಪ್ರತ್ಯಕ್ಷ ದರ್ಶಿಗಳ ಪ್ರಕಾರ ಮಗು ಸಾವನಪ್ಪಿತ್ತು. ಪೇಪರ್ ಆಯುವವರು ಬ್ಯಾಕ್ ಅತಿದಾಗ ಮಗು ಕೆಳಗಡೆ ಬಿದ್ದಿದೆ ತಕ್ಷಣ ಅವರು ಹೆದರಿ ಅಲ್ಲಿಂದ ಓಡಿ ಹೋಗಿದ್ದಾರೆ…
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಿನ್ನೆ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಯ ಜನಿವಾರವನ್ನು ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿ, ಯಾರು ಈ ರೀತಿ ನಡೆದುಕೊಂಡಿದ್ದಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈ ರೀತಿ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅಲ್ಲದೆ ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಹಾಗಾಗಿ ಸಂಬಂಧಪಟ್ಟ ಇಲಾಖೆ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುತ್ತದೆ. ನನ್ನ ಇಲಾಖೆ ಇಲ್ಲ ಅಂದರು ಕೂಡ ಸಂಬಂಧಪಟ್ಟ ಇಲಾಖೆಗೆ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಆಗುವುದರಿಂದ ಕಠಿಣವಾದ ಕ್ರಮ ತೆಗೆದುಕೊಳ್ಳುವ ಸೂಚನೆ ನೀಡಿದ್ದೇನೆ. ಈ ರೀತಿ ಮಾಡೋದು ಸರಿಯಲ್ಲ. ಇಂತಹ ವಿಷಯಗಳು ಬಹಳ ಸೂಕ್ತವಾದ ವಿಚಾರಗಳು ಇರುತ್ತವೆ. ಯಾವುದೇ ಜಾತಿ ಧರ್ಮಕ್ಕೆ ಆಗಲಿ ಗೌರವ ಕೊಡಬೇಕು. ನಮ್ಮ ಸರ್ಕಾರದಲ್ಲಿ ಈ ರೀತಿ ಆಗುತ್ತೆ ಎಂದರೆ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಲ್ಲಿ ಯುವತಿ ಹಾಗು ಮಹಿಳೆ ಜೊತೆಗೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಕಾಮುಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಪುಲಕೇಶಿ ನಗರದಲ್ಲಿ ಅಪರಿಚಿತ ಯುವತಿಯ ಜತೆ ಅನುಚಿತವಾಗಿ ವರ್ತಿಸಿದ ಆಟೋ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಅಪರಿಚಿತ ಯುವತಿ ತನ್ನ ಸ್ನೇಹಿತನ ಜತೆ ಅಂಗಡಿ ಮುಂದೆ ನಿಂತಿದ್ದಳು. ಈ ವೇಳೆ ಆಟೋ ಚಾಲಕ ಮಣಿ ಎಂಬಾತ ಫೋನ್ ನಂಬರ್ ಕೇಳಿದ್ದಲ್ಲದೇ, ಯುವತಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಘಟನೆಯಿಂದ ಬೇಸತ್ತ ಯುವತಿ ಪುಲಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ಮಣಿಯನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಇತ್ತೀಚೆಗೆ ನಗರದ ಸುದ್ದಗುಂಟೆ ಪಾಳ್ಯದಲ್ಲಿ ಯುವಕನೊಬ್ಬ ಯುವತಿಗೆ ಕಿರುಕುಳ ನೀಡಿ ಪರಾರಿಯಾಗಿದ್ದ ಘಟನೆ ಸಾಕಷ್ಟು ಚರ್ಚೆ ಆಗಿತ್ತು. 10 ದಿನಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಇದೀಗ ಮತ್ತೊಂದು ಘಟನೆ ನಡೆದಿದೆ. ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಯುವಕನ…
ಬೆಳಗಾವಿ : ಹೆಚ್ಚು ಕುಡಿತದ ಚಟಕ್ಕೆ ಬಿದ್ದಿದ್ದ ತಮ್ಮನನ್ನು ಅಣ್ಣ ಪ್ರಶ್ನಿಸಿದ್ದಾನೆ. ಇದೇ ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದು ಗಲಾಟೆ ವಿಕೋಪಕ್ಕೆ ತಿರುಗಿ ಅಣ್ಣ ಮಾರಕಾಸ್ತ್ರದಿಂದ ತಮ್ಮನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಎಸ್ ಧಾಗೇರಾ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಮಾರಕಾಸ್ತ್ರದಿಂದ ಕೊಚ್ಚಿ ಲಕ್ಷ್ಮಣ ಬರಮ ಬಾಳೆಕುಂದ್ರಿ (28) ಭೀಕರ ಕೊಲೆಯಾಗಿದೆ. ಕೊಲೆ ಮಾಡಿದ ಅಣ್ಣ ಮಾರುತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಷ್ಟಪಟ್ಟು ದುಡಿದು ಅಣ್ಣತಮ್ಮಂದಿರು ಹೊಸದಾಗಿ ಮನೆ ಕಟ್ಟಿದ್ದರು. ತಂದೆ ಇಲ್ಲದೆ ಇಬ್ಬರು ಸಹೋದರರು ತಾಯಿಯ ಆರೈಕೆಯಲ್ಲಿ ಬೆಳೆದಿದ್ದರು. ಮನೆ ಕಟ್ಟಿ ಮದುವೆ ಮಾಡಿಕೊಡುವ ಪ್ಲಾನ್ ನಲ್ಲಿ ಇದ್ದರು. ತಮ್ಮ ಲಕ್ಷ್ಮಣ್ ಹೆಚ್ಚು ಕುಡಿಯುತ್ತಿದ್ದದ್ದನ್ನು ಅಣ್ಣ ಮಾರುತಿ ಪ್ರಶ್ನಿಸಿದ್ದಾನೆ. ಇಬ್ಬರ ನಡುವೆ ಇದೆ ವಿಚಾರಕ್ಕೆ ಗಲಾಟೆ ಆಗಿ ಸಹೋದರ ಮಾರುತಿ ತಮ್ಮನನ್ನೇ ಕೊಲೆ ಮಾಡಿದ್ದಾನೆ. ಎರಡು ದಿನದ ಹಿಂದೆ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ…














