Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ದೆಹಲಿ ಮೂಲದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಪಾದಲ್ಲಿ ಸೋನಿಯಾ (24) ಕೆಲಸ ಮಾಡುತ್ತಿದ್ದಳು. ಬೆಂಗಳೂರಿನ ಬಾಗಲಕುಂಟೆಯಲ್ಲಿ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಸೋನಿಯಾ ಮೂಲತಃ ದೆಹಲಿಯವಳು ಎಂದು ತಿಳಿದುಬಂದಿದೆ.ಸೋನಿಯಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಆತ್ಮಹತ್ಯೆಗೆ ಏನು ಕಾರಣ ಎನ್ನುವುದು ಕುರಿತಂತೆ ತನಿಖೆ ವೇಳೆ ತಿಳಿದುಬರಲಿದೆ.

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಒಂದು ಪ್ರಕಾರಣವನ್ನು ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಖುದ್ದು ಹಾಜರಾತಿಯನ್ನು ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್ 2 ರಂದು ನಿಗದಿಪಡಿಸಿ ಕೋರ್ಟ್ ಆದೇಶ ಹೊರಡಿಸಿತು. ಪೋಕ್ಸೋ ಪ್ರಕರಣಕ್ಕೆ ಸಂಬಂಧಸಿದಂತೆ ಮಧ್ಯಂತರ ಆದೇಶ ಇರುವುದರಿಂದ ವಿಚಾರಣೆ ಸ್ಥಗಿತವಾಗಿದೆ. ಪೋಕ್ಸೋ ಕೇಸ್ ಆಗಿರುವುದರಿಂದ ತುರ್ತು ವಿಚಾರಣೆ ಮಾಡಿ ಎಂದು ಮನವಿ ಮಾಡಿಕೊಳ್ಳಲಾಗಿತ್ತು. ಸರ್ಕಾರದ ಎಸ್ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿಕೊಂಡಿದ್ದರು. ಈ ವೇಳೆ ಡಿಸೆಂಬರ್ 2ರ ಮಧ್ಯಾಹ್ನ 2:30 ಕ್ಕೆ ವಿಚಾರಣೆ ನಿಗದಿ ಪಡಿಸಿ ಹೈಕೋರ್ಟ್ ಅದೇಶಿಸಿದೆ. ಅಲ್ಲದೇ ಬಿಎಸ್ ಯಡಿಯೂರಪ್ಪ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದ್ದ ಆದೇಶ ಕೂಡ ವಿಸ್ತರಣೆಯಾಗಿದೆ.

Read More

ದಕ್ಷಿಣಕನ್ನಡ : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಬಾಲಕಿಯ ಮೇಲೆ ಸಂಬಂಧಿಕ ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆಯಾಗುವುದಿಲ್ಲ ಎಂದಾಗ ಮನನೊಂದ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬ ಗ್ರಾಮದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬ ಗ್ರಾಮದಲ್ಲಿ ನವೆಂಬರ್ 20ರಂದು ವಿಷ ಸೇವಿಸಿ ಅಪ್ರಾಪ್ತೆ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇದೀಗ ಬಾಲಕಿ ಸಾವನ್ನಪ್ಪಿದ್ದಾಳೆ. ಸಂಬಂಧಿ ಪ್ರವೀಣ್ ಚಾರ್ಮಾಡಿ ಯನ್ನು ಅಪ್ರಾಪ್ತೆ ಬಾಲಕಿ ಪ್ರೀತಿಸುತ್ತಿದ್ದಳು. ಈ ವೇಳೆ ಮದುವೆಯಾಗುವುದಾಗಿ ಪ್ರವೀಣ್ ಆಕೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದ. ಬಳಿಕ ಮದುವೆ ಆಗುವುದಿಲ್ಲ ಅಂತ ಪ್ರವೀಣ್ ವಂಚನೆ ಎಸಗಿದ್ದಾನೆ. ಇದರಿಂದ ಮನನೊಂದು ಅಪ್ರಾಪ್ತ ಬಾಲಗೆ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.ಹಾಗಾಗಿ ಪ್ರವೀಣ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ.ಇತ್ತ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಪ್ರವೀಣ್ ತಲೆಮರಿಸಿಕೊಂಡಿದ್ದಾನೆ.

Read More

ಬೆಂಗಳೂರು : ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಂಪುಟ ಪುನಾರಚನೆ ಕುರಿತಂತೆ ಸುಳಿವು ನೀಡಿದ್ದರು. ಇದೇ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿದ್ದು, ಸಂಪುಟ ಪುನಾರಚನೆ ಕುರಿತಂತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಎಂದು ದೆಹಲಿಗೆ ತೆರಳುತ್ತಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಇವತ್ತು ದೆಹಲಿಗೆ ತೆರಳುತ್ತಿದ್ದಾರೆ. ಏಕೆಂದರೆ ನಾಳೆ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆ ಇದೆ. ವರ್ಕಿಂಗ್ ಕಮಿಟಿಗೆ ಸಾಮಾನ್ಯವಾಗಿ ಮುಖ್ಯಮಂತ್ರಿಗಳನ್ನು ಹಾಗೂ ಕೆಪಿಸಿಸಿ ಅಧ್ಯಕ್ಷರನ್ನ ಕರೆಯುತ್ತಾರೆ. ನಾನು ಕೂಡ ಅನೇಕ ಸಂದರ್ಭ ದಲ್ಲಿ ಹೋಗಿ ಭಾಗಿಯಾಗಿದ್ದೇನೆ ಅದಕ್ಕೆ ತೆರಳುತ್ತಿದ್ದಾರೆ. ಅದಾದ್ಮೇಲೆ ಅವರು ಏನಾದರೂ  ಹೈಕಮಾಂಡೊಂದಿಗೆ ಚರ್ಚೆ ಮಾಡಿ ಸಂಪುಟ ಪುನ ರಚನೆ ಕುರಿತು ಚರ್ಚೆ ಮಾಡುತ್ತಾರೋ ಎಂಬುದು ಗೊತ್ತಿಲ್ಲ. ಅದರ ಜೊತೆಗೆ ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಬೇಕು ಎನ್ನುವುದು ಕೂಗು ಕೇಳಿ ಬರುತ್ತಿದೆ. ಅಲ್ಲಲ್ಲಿ ಮಾತನಾಡುತ್ತಿರುವುದು ತಿಳಿಬಂದಿದೆ.ಹಾಗಾಗಿ ಈ ಎರಡು ವಿಚಾರದಲ್ಲಿ ಏನು ತೀರ್ಮಾನ ಮಾಡಿಕೊಂಡು ಬರುತ್ತಾರೆ ಎನ್ನುವುದು ಗೊತ್ತಿಲ್ಲ ಎಂದು ತಿಳಿಸಿದರು.

Read More

ರಾಮನಗರ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ರಾಮನಗರ ಜಿಲ್ಲೆಯ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ತಾಯಿ ಒಬ್ಬಳು ಕ್ರೂರವಾಗಿ ವರ್ತಿಸಿದ್ದು ಎರಡು ದಿನದ ಮಗುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಒತ್ತಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ರಾಮನಗರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಹೆತ್ತ ತಾಯಿ ಕ್ರೂರಿಯಾಗಿ ವರ್ತಿಸಿದ ಘಟನೆ ನಡೆದಿದೆ. ಹುಟ್ಟಿದ ಮಗುವನ್ನೇ ಟಾಯ್ಲೆಟ್ ಗೆ ಹಾಕಿ ಫ್ಲೆಶ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಈ ಒಂದು ಕೃತ್ಯ ನಡೆದಿದೆ. ಟಾಯ್ಲೆಟ್ ಪರಿಶೀಲನೆ ಮಾಡುವ ವೇಳೆ ಗಂಡು ಶಿಶು ಪತ್ತೆಯಾಗಿದೆ. ಎರಡು ದಿನದ ನವಜಾತ ಕಂಡು ಶಿಶು ಪತ್ತೆಯಾಗಿದೆ. ಪತ್ತೆಯಾದ ನವಜಾತ ಶಿಶುವಿನ ನೋಡಿ ಆಸ್ಪತ್ರೆಯ ಸಿಬ್ಬಂದಿಗಳೇ ಶಾಕ್ ಆಗಿದ್ದಾರೆ. ರಾಮನಗರ ಜಿಲ್ಲೆಯ ದನ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಆದರೆ ಈ ಒಂದು ನವಜಾತ ಶಿಶು ಯಾರದ್ದು, ಯಾರು ಈ…

Read More

ಮೈಸೂರು : HD ಕುಮಾರಸ್ವಾಮಿ ಒಂದು ವೇಳೆ ಗುಟುರು ಹಾಕಿಲ್ಲದಿದ್ದರೆ, ಶಾಸಕ ಜಿಟಿ ದೇವೇಗೌಡ ಜೈಲಿಗೆ ಹೋಗಬೇಕಾಗಿತ್ತು. ಜಿಟಿ ದೇವೇಗೌಡರನ್ನು ಅಂದು ಜೈಲಿಗೆ ಹೋಗೋದನ್ನು ತಪ್ಪಿಸಿದ್ದು HD ಕುಮಾರಸ್ವಾಮಿ ಎಂದು HD ರೇವಣ್ಣ ಹೇಳಿಕೆ ನೀಡಿದ್ದರು. ಆದರೆ ಇದಕ್ಕೆ ಜಿಟಿ ದೇವೇಗೌಡ ನಾನು, ನನ್ನ ಮಗ ಜೈಲಿಗೆ ಹೋಗುವಂತ ಅಪರಾಧ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಟಿ ದೇವೇಗೌಡಗೆ ಜೈಲಿಗೆ ಹೋಗುವ ಪರಿಸ್ಥಿತಿ ಬಂದಿತ್ತು ಎಂಬ ಎಚ್ ಡಿ ರೇವಣ್ಣ ಹೇಳಿಕೆಗೆ ರಾಜಕೀಯವಾಗಿ ನನ್ನ ವಿರುದ್ಧ ಯಾರೂ ಕೂಡ ದೂರು ನೀಡಿಲ್ಲ. ಏನು ಮಾತನಾಡಬಾರದು ಅಂತ ನಿರ್ಧಾರ ಮಾಡಿದ್ದೇನೆ ಆದರೆ ಪದೇ ಪದೇ ನನ್ನ ಹೆಸರನ್ನು ಏಕೆ ತೆಗೆದುಕೊಳ್ಳುತ್ತಿದ್ದಾರೆ? ಎಂದು ಜಿಟಿ ದೇವೇಗೌಡ ಎಚ್‌ಡಿ ರೇವಣ್ಣ ವಿರುದ್ಧ ಕಿಡಿಕಾರಿದರು. ಸಿದ್ದರಾಮಯ್ಯ ಸೇರಿ ಯಾರು ನನ್ನನ್ನು ಬಂಧಿಸುವಂತೆ ಹೇಳಿಲ್ಲ. ಯಾವುದಾದರೂ ಪ್ರಕರಣ ಇದ್ದರೆ ತಾನೆ ಬಂಧಿಸುವುದು? ಈ ರೀತಿ ಚಿಲ್ಲರೆ ಕೆಲಸ ನಮ್ಮ ಜಿಲ್ಲೆಯಲ್ಲಿ ಆಗಿಲ್ಲ ಸಿದ್ದರಾಮಯ್ಯ ಸೇಡು…

Read More

ಕೊಪ್ಪಳ : ವಿಜಯನಗರ ಜಿಲ್ಲೆಯ ಹಂಪಿ ಪ್ರವಾಸಕ್ಕೆ ಎಂದು ಕಲ್ಬುರ್ಗಿ ಜಿಲ್ಲೆಯ ಗುರುಮಿಟ್ಕಲ್ ನ ಶಾಲಾ ಮಕ್ಕಳಿದ್ದ KSRTC ಬಸ್ ಒಂದು ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲಾ ಮಕ್ಕಳು ಕೂಡ ಸೇಫ್ ಆಗಿದ್ದಾರೆ. ಕಲಬುರಗಿಯ ಗುರುಮಿಟ್ಕಲ್‌ನ ಶಾಲಾ ಮಕ್ಕಳಿದ್ದ ಸಾರಿಗೆ ಬಸ್‌ ಗಂಗಾವತಿಯ ಮರಳಿ ಸಮೀಪ ರಸ್ತೆ ಬದಿಯ ಹೊಲಕ್ಕೆ ಉರುಳಿದೆ. ಇಂದು ಬೆಳಗ್ಗೆ 4:30ರ ಸುಮಾರಿಗೆ ಘಟನೆ ನಡೆದಿದೆ. ಅದೃಷ್ಟವಶಾತ್, ಬಸ್‌ನಲ್ಲಿದ್ದ 60 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವ ವಿದ್ಯಾರ್ಥಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಶಾಲಾ ಮಕ್ಕಳು ಬುಧವಾರ ರಾತ್ರಿ ಪ್ರವಾಸ ಹೊರಟಿದ್ದರು. ಬೆಳಗ್ಗೆ ಮರಳಿ ಸಮೀಪ ಪೇಪರ್ ಸಾಗಿಸುವ ವಾಹನ ರಸ್ತೆ ಮಧ್ಯೆ ಎದುರಾಗಿದೆ. ಚಾಲಕ ಸದಾಶಿವಯ್ಯ ಸಂಭಾವ್ಯ ಅಪಘಾತ ತಪ್ಪಿಸಲು ಹೋಗಿದ್ದರಿಂದ ನಿಯಂತ್ರಣ ಕಳೆದುಕೊಂಡ ಬಸ್ ಅಪಘಾತಕ್ಕೀಡಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ಕಲಬುರ್ಗಿಯ ಸೆಂಟ್ರಲ್ ಜೈಲಿನ ಅಧೀಕ್ಷಕಿ ಅನಿತಾ ಎನ್ನುವವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳಿಸಿದ್ದಾನೆ. ಈ ನೆಲೆಯಲ್ಲಿ ಪೊಲೀಸರು ಕೇಂದ್ರ ಕಾರಾಗೃಹದ ಸುತ್ತಲೂ ಅಲರ್ಟ್ ಆಗಿದ್ದಾರೆ. ಅನಾಮದೇಯ ವ್ಯಕ್ತಿಯಿಂದ ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಬೆದರಿಕೆ ಸಂದೇಶ ಬಂದಿದೆ. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರಿಂದ ಅಲರ್ಟ್ ಆಗಿರುವ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚಿಸಿದ್ದಾರೆ. ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನೀತಾ ವಿರುದ್ಧ ಕೈದಿಗಳು ಮಂಗಳವಾರ ಪ್ರತಿಭಟನೆ ಮಾಡಿದ್ದರು. ಕಟ್ಟು ನಿಟ್ಟಿನ ರೂಲ್ಸ್ ವಿರುದ್ಧ ಕೇರಳಿದ ಕೈದಿಗಳಿಂದ ಬಂದ ಬೆದರಿಕೆ ಆಡಿಯೋನಾ? ಹತ್ಯೆಗೆ ಸಂಚು ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಕಳೆದ ಒಂದೂವರೆ ತಿಂಗಳಿನ ಹಿಂದೆಯಷ್ಟೇ ಅನಿತಾ ಅವರು ಕಲಬುರಗಿ ಸೆಂಟ್ರಲ್ ಜೈಲಿಗೆ ವರ್ಗಾವಣೆ ಆಗಿದ್ದರು. ಜೈಲಿನಲ್ಲಿ ಕಠಿಣ ನಿಯಮ ಜಾರಿಗೊಳಿಸಲು ಮುಂದಾಗಿದ್ದಕ್ಕೆ ಕೈದಿಗಳೇ ಬೆದರಿಕೆ ಸಂದೇಶ ಕಳುಹಿಸಿರುವ ಶಂಕೆ ವ್ಯಕ್ತವಾಗಿದೆ.

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದಂತಹ ಕೊಲೆಯಾಗಿದ್ದು, ಪ್ರೀತಿಸಿ ಮದುವೆಯಾಗಿದ್ದ ಯುವಕನನ್ನು, ಯುವತಿಯ ಮನೆಯ ಸುಮಾರು 20 ಜನರು ಯುವಕನ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಕೋಣನೂರು ಗ್ರಾಮದಲ್ಲಿ ನಡೆದಿದೆ. ಹೌದು ಕೊಲೆಯಾದ ಯುವಕನನ್ನು ಮಂಜುನಾಥ್ ಎಂದು ತಿಳಿದು ಬಂದಿದೆ.ಇನ್ನೂ ಯುವತಿ ರಕ್ಷಿತಾ ಮನೆಯವರು ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಕೂಡ ಕಳೆದ ಮೂರು ತಿಂಗಳ ಹಿಂದೆ ಇವರಿಬ್ಬರು ದೇವಸ್ಥಾನದಲ್ಲಿ ಕುಟುಂಬಸ್ಥರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಮಂಜುನಾಥ್ ಮೇಲೆ ಕೋಪಗೊಂಡಿದ್ದ ರಕ್ಷಿತಾ ಕುಟುಂಬ ಬುಧವಾರ ಮಧ್ಯಾಹ್ನ ಏಕಾಏಕಿ ಹಲ್ಲೆ ನಡೆಸಿದೆ. ಸುಮಾರು 20 ಮಂದಿ ಮಂಜುನಾಥ್ ಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್ ತಂದೆ ಚಂದ್ರಪ್ಪ ಹಾಗೂ ತಾಯಿ ಅನಸೂಯಮ್ಮಗೂ ಗಂಭೀರ ಗಾಯವಾಗಿದೆ .ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ರಹ್ಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬೆಂಗಳೂರು : ಕಿರುತೆರೆ ನಟಿ ನಟಿ ದೀಪಿಕಾ ದಾಸ್ ಅವರ ತಾಯಿಗೆ, ಹಣ ನೀಡದೆ ಹೋದರೆ ನಿಮ್ಮ ಮಗಳು ಮತ್ತು ಅಳಿಯನ ವಿರುದ್ಧ ಅಪಪ್ರಚಾರ ಮಾಡುತ್ತೇನೆ ಎಂದು ಫೋನ್ ಮಾಡಿ ಯಶವಂತ ಎನ್ನುವ ವ್ಯಕ್ತಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಕುರಿತಂತೆ ದೀಪಿಕಾ ದಾಸ್ ಅವರ ತಾಯಿ ಪದ್ಮಲತಾ ಅವರು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಹೌದು ಹಣ ನೀಡದೆ ಹೋದರೆ ಮಗಳು ಅಳಿಯನ ಘನತೆಯ ಬಗ್ಗೆ ಅಪಪ್ರಚಾರ ಮಾಡುದಾಗಿ ಯಶವಂತ್ ಎನ್ನುವ ವ್ಯಕ್ತಿ ಬೆದರಿಕೆ ಹಾಕಿದ್ದು, ಆತನ ವಿರುದ್ಧ ನಟಿ ದೀಪಿಕಾ ದಾಸ್ ತಾಯಿ ದೂರು ಸಲ್ಲಿಸಿದ್ದಾರೆ. ನಟಿ ದೀಪಿಕಾ ದಾಸ್ ತಾಯಿ ಪದ್ಮಲತಾಗೆ ಯಶವಂತ್ ಕರೆ ಮಾಡಿದ್ದ. ಹಣ ನೀಡದಿದ್ದರೆ ಅಳಿಯನ ವಿರುದ್ಧ ಅಪಪ್ರಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಮಗಳಿಗೆ ಏಕೆ ಮದುವೆ ಮಾಡಿದ್ದೀರಿ ದೀಪಕ್ ಮೋಸ ಮಾಡಿದ್ದಾನೆ. ದೀಪಕ್ ಕುಮಾರ್ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ ಎಂದು ಯಶವಂತ್ ದೀಪಿಕಾ ದಾಸ್ ತಾಯಿಗೆ ಕರೆ…

Read More