Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆ ಇದೀಗ ಭಾರಿ ರಣಕಣದಿಂದ ಕೂಡಿದ್ದು, ಒಂದು ಕಡೆ ಮೈತ್ರಿ ಪಕ್ಷದ ಪರವಾಗಿ ಸಿಪಿ ಯೋಗೇಶ್ವರ್ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇನ್ನೊಂದು ಕಡೆ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಯಾರೇ ಸ್ಪರ್ಧಿಸಿದರು, ಕಾಂಗ್ರೆಸ್ ನಿಂದ ನಾನೆ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇಂದು ಪಟ್ಟಣದ ಟಿಪ್ಪು ಮೈದಾನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ದಾಖಲೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಉಪಚುನಾವಣೆ ಟಿಕೆಟ್ ವಿಚಾರವಾಗಿ ನಾನು ಈ ವೇದಿಕೆ ಮೇಲೆ ಮಾತನಾಡುವುದಿಲ್ಲ. ಇಲ್ಲಿ ನಾನೇ ಅಭ್ಯರ್ಥಿ. ನಾನು ಅಧ್ಯಕ್ಷನಾಗಿ ಯಾರಿಗೆ ಟಿಕೆಟ್ ನೀಡುತ್ತೇನೋ ಅವರಿಗೆ ಬೆಂಬಲ ನೀಡಿ ಎಂದರು. ನಾನು ನಿಮ್ಮ ಸೇವಕನಾಗಿ ಬಂದಿದ್ದೇನೆ. ನಿಮ್ಮ ಮೇಲೆ ಅಧಿಕಾರ ಚಲಾಯಿಸಲು ಬಂದಿಲ್ಲ. ನಿಮ್ಮ ಮನೆಗೆ ಅವಕಾಶ ಬಂದಿದೆ, ಯಾಮಾರಬೇಡಿ. ಚನ್ನಪಟ್ಟಣದ ಜನರಿಗೆ ಒಳ್ಳೆಯದಾಗಬೇಕು. ಈ ಜನರ ಋಣ ತೀರಿಸಬೇಕು. ಈ ಕ್ಷೇತ್ರದ ಜನರ ಜತೆಗಿನ ಸಂಬಂಧ ಗಟ್ಟಿ…
ಬೆಂಗಳೂರು : ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ಇಡೀ ದೇಶದಲ್ಲಿ ಪ್ರಸಿದ್ಧವಾಗಿದೆ. ಯಾರೇ ಆ ಒಂದು ಪ್ರಸಾದ ತಂದು ಕೊಟ್ಟರೂ ಸಹ ಪ್ರತಿಯೊಬ್ಬರೂ ಕಣ್ಣಿಗೆ ಒತ್ತಿಕೊಂಡು ತಿನ್ನುವಂತಹ ಒಂದು ಸಂಪ್ರದಾಯ, ಪದ್ಧತಿ ಇದೆ. ಆದರೆ ಈ ಒಂದು ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು ಬಳಸುತ್ತಿರುವ ವಿಚಾರ ಕೇಳಿ ಇಡೀ ದೇಶದ ಜನತೆ ಬೆಚ್ಚಿ ಬಿದ್ದಿದೆ. ಇದೀಗ ತಿರುಪತಿ ಲಡ್ಡುವನ್ನು ರಾಜ್ಯದ ದೇವಸ್ಥಾನಗಳಲ್ಲಿ ಬಳಸದಿರಲು ಅಖಿಲ ಕರ್ನಾಟಕ ಅರ್ಚಕರ ಸಂಘವು ತೀರ್ಮಾನಿಸಿದೆ. ಹೌದು ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು, ಮೀನಿನೆಣ್ಣೆ ಸೇರಿದಂತೆ ಇನ್ನಿತರ ಕಲಬೆರಕೆ ಪದಾರ್ಥಗಳನ್ನು ಬಳಸಲಾಗಿದೆ ಎನ್ನುವ ವಿಚಾರದಿಂದ ಎಲ್ಲರೂ ಶಾಕ್ ಆಗಿದ್ದಾರೆ. ಈ ಗೊಂದಲದ ಬೆನ್ನಲ್ಲೇ ರಾಜ್ಯದ ಅರ್ಚಕರೆಲ್ಲ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ.ಇನ್ನು ಮುಂದೆ ತಿರುಪತಿ ಲಡ್ಡು ಪ್ರಸಾದವನ್ನು ಇಲ್ಲಿನ ದೇವಸ್ಥಾನಗಳಲ್ಲಿ ಬಳಸದಿರಲು ಅಖಿಲ ಕರ್ನಾಟಕ ಅರ್ಚಕರ ಸಂಘ ತೀರ್ಮಾನಿಸಿದೆ. ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ನಡೆದಿಲ್ಲ ಎನ್ನುವ ಬಗ್ಗೆ ಸ್ಪಷ್ಟತೆ ಸಿಗುವರೆಗೂ ಪ್ರಸಾದವನ್ನು ನಾವು ಯಾರೂ ಬಳಸುವುದಿಲ್ಲ…
ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯಲ್ಲಿ ರಿಲ್ಸ್ ಗಳನ್ನು ನಾವು ನೋಡುತ್ತಿರುತ್ತೇವೆ. ಅದರಲ್ಲೂ ಅತಿ ಹೆಚ್ಚು ಲೈಕ್ಸ್, ಕಮೆಂಟ್ಸ್ ಪಡೆಯೋ ಒಂದು ಆಸೆಗೆ ಬಿದ್ದು, ಎಷ್ಟೋ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಬೆಂಗಳೂರಿನ ಮಾರತ ಹಳ್ಳಿಯಲ್ಲಿ ಕೆರೆಯಲ್ಲಿ ರಿಲ್ಸ್ ಮಾಡುವ ಹುಚ್ಚಿಗೆ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ನಡೆದಿದೆ. ಹೌದು ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನೀರಿನ ರಭಸಕ್ಕೆ ನೀರು ಪಾಲಾಗಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಪಣತ್ತೂರು ಕೆರೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ರೀಲ್ಸ್ ಮಾಡುವುದಕ್ಕೆ ಮೂವರು ಸ್ನೇಹಿತರು ಕೆರೆಯ ಬಳಿ ಆಗಮಿಸಿದ್ದರು. ಈ ವೇಳೆ ಇಬ್ಬರು ಕೆರೆಯಲ್ಲಿ ಈಜಾಡುತ್ತಿದ್ದರು. ಓರ್ವ ಸ್ನೇಹಿತ ವಿಡಿಯೋ ಮಾಡುತ್ತಿದ್ದ. ಈಜಾಡುತ್ತಿದ್ದ ಇಬ್ಬರ ಪೈಕಿ ಓರ್ವ ಯುವಕ ನೀರು ಪಾಲಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಅನೇಕ ದುರಂತಗಳು ಸಂಭವಿಸುತ್ತವೆ. ಆದರೂ ಅಧಿಕಾರಿಗಳು ಇದು ಯಾವುದಕ್ಕೂ ಕೂಡ ತಲೆಕೆಡಿಸಿಕೊಳ್ಳುವುದಿಲ್ಲ ಇದೀಗ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದೆ. ಹೌದು ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದೆ. ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಇದೀಗ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಸದ್ಯ ಕಠಿಣ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಸಿರುವ ಆರೋಪದ ವಿವಾದದ ಬೆನ್ನಲ್ಲೆ ಇದೀಗ ಕರ್ನಾಟಕದ ಬ್ರಾಂಡ್ ಆಗಿರುವಂತಹ ನಂದಿನಿ ತುಪ್ಪಕ್ಕೆ ಎಲ್ಲೆಡೆ ಬೇಡಿಕೆ ಹೆಚ್ಚಾಗುತ್ತಿದ್ದು, ಅಲ್ಲದೆ TTD ಲಡ್ಡು ತಯಾರಿಕೆಗೆ ಮತ್ತಷ್ಟು ತುಪ್ಪ ಪೂರೈಸುವಂತೆ ಇಮೇಲ್ ಮೂಲಕ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. ಹೌದು ಈ ಕುರಿತು ಕೆಎಂಎಫ್ ಎಂಡಿ ಜಗದೀಶ್ ರವರು ಪ್ರತಿಕ್ರಿಯೆ ನೀಡಿ, ರಾಜ್ಯದ ಮುಜರಾಯಿ ದೇಗುಲಗಳಿಗೆ ನಂದಿನಿ ತುಪ್ಪ ಪೂರೈಕೆಗೆ ಸಿದ್ಧತೆ ನಡೆಯುತ್ತಿದೆ. ಜೊತೆಗೆ ಬೇರೆ ರಾಜ್ಯಗಳಿಂದಲೂ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಪ್ರತಿದಿನ 15 ಲಕ್ಷ ಲೀಟರ್ ಹಾಲಿನಿಂದ ತುಪ್ಪ ತಯಾರಿಸಲು ಸಿದ್ಧತೆ ನಡೆಯುತ್ತಿದೆ. ಟಿಟಿಡಿಗೆ ತೆರಳುವ ನಂದಿನಿ ತುಪ್ಪದ ವಾಹನಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತೆ ಎಂದರು. ಅಲ್ಲದೆ ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ವಾಹನಗಳಿಗೆ GPS ಟ್ರ್ಯಾಕ್, ಎಲೆಕ್ಟ್ರಿಕ್ ಡೋರ್ ವ್ಯವಸ್ಥೆ ಮಾಡಿಸಲಾಗುತ್ತಿದೆ. ಲ್ಯಾಬ್ ಟೆಸ್ಟ್ ಮಾಡಿದ ಬಳಿಕ ನಂದಿನಿ ತುಪ್ಪ ಪೂರೈಸಲಾಗುತ್ತೆ. ಈ ಹಿಂದೆ ಇದ್ದ ಸರ್ಕಾರದಲ್ಲಿ ಟಿಟಿಡಿಗೆ ತುಪ್ಪ ಪೂರೈಕೆ…
ಬೆಂಗಳೂರು : ಬೆಂಗಳೂರಿನಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳಿಸಿದ ದೆಹಲಿಯ ಶ್ರದ್ಧಾ ವಾಕರ್ ಮಾದರಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಶಿವಾಜಿನಗರದಲ್ ಇರುವ ಬೌರಿಂಗ್ ಆಸ್ಪತ್ರೆಯಲ್ಲಿ ಹತ್ಯೆಗೆ ಒಳಗಾದ ಮಹಾಲಕ್ಷ್ಮಿಯ ಮರಣೋತ್ತರ ಪರೀಕ್ಷೆ ಅಂತ್ಯವಾಗಿದೆ. ಹೌದು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಮಹಾಲಕ್ಷ್ಮಿ ಮರಣೋತ್ತರ ಪರೀಕ್ಷೆ ಅಂತ್ಯವಾಗಿದ್ದು, ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ಮಹಾಲಕ್ಷ್ಮಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಇದೀಗ ಮರಣೋತ್ತರ ಪರೀಕ್ಷೆ ಅಂತ್ಯವಾದ ಬಳಿಕ ದೇಹದ ಪೀಸ್ ಗಳನ್ನು ಕುಟುಂಬಸ್ಥರಿಗೆ ಆಸ್ಪತ್ರೆಯ ವೈದ್ಯರು ಹಸ್ತಾಂತರಿಸಿದ್ದಾರೆ. ಸದ್ಯ ದೇಹದ ಪೀಸ್ ಗಳನ್ನು ಕುಟುಂಬಸ್ಥರು ಚಿತಾಗಾರಕ್ಕೆ ತೆಗೆದುಕೊಂಡು ಹೋಗುತ್ತಿದ್ದು, ಲಾಲ್ ಬಾಗಿನ ಚಿತಾಗಾರದಲ್ಲಿ ಮಹಾಲಕ್ಷ್ಮಿಯ ಅಂತ್ಯ ಸಂಸ್ಕಾರವು ಕುಟುಂಬಸ್ಥರಿಂದಲೇ ನೆರವೇರಲಿದೆ ಎಂದು ಬಲಮೂಲಗಳಿಂದ ತಿಳಿದುಬಂದಿದೆ.
ಚಿಕ್ಕಮಗಳೂರು : ಸದ್ಯ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಕ್ಕಳು, ಮಹಿಳೆಯರು, ಅಷ್ಟೆ ಯಾಕೆ ವೃದ್ಧೆ ಎನ್ನದೆ ಎಲ್ಲರ ಮೇಲು ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಇದೀಗ ಚಿಕ್ಕಮಗಳೂರಿನ ಕಡೂರು ಪಟ್ಟಣದಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿಗೆ ಸಲೂನ್ ಮಾಲೀಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹೌದು ಕಡೂರು ಪಟ್ಟಣದಲ್ಲಿ ತಾಯಿಯೊಬ್ಬರು ತನ್ನ 8 ವರ್ಷದ ಮಗಳನ್ನು ಕಟಿಂಗ್ ಶಾಪ್ ಗೆ ಕರೆದುಕೊಂಡು ಬಂದಿರುತ್ತಾರೆ. ಈ ವೇಳೆ ಕಟಿಂಗ್ ಶಾಪಿನ ಮಾಲೀಕರಿಗೆ ಮನೆಗೆ ಬೇಗ ಹಾಕಿಲ್ಲ ಹೋಗಿ ಬರುತ್ತೇನೆ ಎಂದು ಹೇಳಿ ಮನೆಗೆ ತೆರಳುತ್ತಾರೆ. ಈ ವೇಳೆ ಕಟಿಂಗ್ ಶಾಪ್ ಬಾಗಿಲು ಮುಚ್ಚಿ ಮಾಲೀಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ತಾಯಿಯು ಮರಳಿ ಬರುವಷ್ಟರಲ್ಲಿ ಕಟ್ಟಿಂಗ್ ಶಾಪ್ ವ್ಯಕ್ತಿ ಸಲೂನ್ ಬಾಗಿಲು ಹಾಕಿಕೊಂಡು ಮಗುವಿನ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.ಈ ವೇಳೆ ಮಗು ಕಿರುಚಿ ಕೊಂಡಿದ್ದು ಸ್ಥಳಕ್ಕೆ ಬಂದ ತಾಯಿ ಕೂಡ ಕಿರುಚಾಡಿದ್ದಾಳೆ. ಈ ವೇಳೆ ಸಲೂನ್…
ಬೀದರ್ : ಇತ್ತೀಚಿಗೆ ಅನೈತಿಕ ಸಂಬಂಧಗಳಿಂದ ಅದೆಷ್ಟೋ ಸಂಸಾರಗಳು ನುಚ್ಚುನೂರಾಗುತ್ತಿವೆ, ಅಲ್ಲದೆ ಎಷ್ಟೋ ಪ್ರಕರಣಗಳಲ್ಲಿ ಜೀವಗಳು ಹೋಗಿವೆ. ಇದೀಗ ಬೀದರ್ ನಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು, ಹೆಂಡತಿಯೊಂದಿಗೆ ಯುವಕ ಏಕಾಂತದಲ್ಲಿ ಇದ್ದದ್ದನ್ನು ನೋಡಿ ರೊಚ್ಚಿಗೆದ್ದ ಪತಿ ಯುವಕನ ಮರ್ಮಾಂಗವನ್ನೇ ಕಟ್ ಮಾಡಿರುವ ಘಟನೆ ನಡೆದಿದೆ. ಹೌದು ವ್ಯಕ್ತಿಯಿಂದ ಹಲ್ಲೆಗೆ ಒಳಗಾದ ಯುವಕನನ್ನು ಸುನಿಲ್ ಎಂದು ಗುರುತಿಸಲಾಗಿದ್ದು, ನಿನ್ನೆ ರಾತ್ರಿ ಆಂಟಿ ನೋಡಲು ಮನೆ ಬಳಿ ತೆರಳಿದ್ದಾಗ ಸುನಿಲ್ ಲಾಕ್ ಆಗಿದ್ದ. ಈ ವೇಳೆ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ ಪತಿ, ಆತನ ಮರ್ಮಾಂಗವನ್ನೇ ಕಟ್ ಮಾಡಿ, ಯುವಕನ ಅನೈತಿಕ ಸಂಬಂಧಕ್ಕೆ ಅಂತ್ಯ ಹಾಡಿದ್ದಾನೆ. ಈ ವೇಳೆ ತಕ್ಷಣ ಯುವಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೂ ಯುವಕನ ಮರ್ಮಾಂಗವನ್ನು ಕಟ್ ಮಾಡಿದಂತಹ ಮಹಿಳೆ ಪತಿ ವಿರುದ್ದ ಮುನ್ನಾಏಖೇಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಆರೆಸ್ಟ್ ಮಾಡಲಾಗಿದೆ.
ಬೆಂಗಳೂರು : ನಿನ್ನೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ದೆಹಲಿಯ ಶ್ರದ್ಧಾ ವಾಕರ್ ಹತ್ಯೆಯ ಮಾದರಿಯಲ್ಲಿ ಬೆಂಗಳೂರಲ್ಲಿ ಕೂಡ ಮಹಿಳೆಯ ಭೀಕರ ಕೊಲೆ ನಡೆದಿದೆ. ಇದೀಗ ಬೆಂಗಳೂರಿನ ನಗರದ ವೈಯಾಲಿಕಾವಲ್ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 30ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್ನಲ್ಲಿ ತುಂಬಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯ ಪತಿ ಹೇಮಂತ್ ಪತ್ನಿ ಸಾವಿಗೆ ಆಕೆ ಕೆಲಸ ಮಾಡುತ್ತಿದ್ದ ನಾಲ್ವರು ಸಹೋದ್ಯೋಗಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೌದು ಮುಕ್ತ, ಶಶಿಧರ್ ಮತ್ತು ಸುನೀಲ್ ಮೃತ ಮಹಾಲಕ್ಷ್ಮಿಯ ಸಹೋದ್ಯೋಗಿಗಳು. ಉತ್ತರಾಖಂಡ್ ಮೂಲದ ಅಶ್ರಫ್ ಮಹಾಲಕ್ಷ್ಮಿ ಜೊತೆ ಸಲುಗೆಯಿಂದ ಇದ್ದನು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಹಾಲಕ್ಷ್ಮಿ ತಾನು ಕೆಲಸ ಮಾಡುವ ಕಂಪನಿಯಲ್ಲಿ ಜಗಳ ಮಾಡಿಕೊಂಡಿದ್ದಳು ಎಂದು ಮಾಹಿತಿ ನೀಡಿದ್ದಾರೆ. ಮಹಾಲಕ್ಷ್ಮೀ ಸ್ನೇಹಿತ ಅಶ್ರಫ್ ಮೇಲೆ ನನಗೆ ಅನುಮಾನ ಇದೆ. ಈ ಹಿಂದೆ ನಾನು ನೆಲಮಂಗಲದಲ್ಲಿ ಅಶ್ರಫ್ ವಿರುದ್ಧ ದೂರು ಕೊಟ್ಟಿದ್ದೆ. ಅಶ್ರಫ್ ಉತ್ತರಾಖಂಡ್ ಮೂಲದವನು. ಒಂದು ದಿನ ಮಹಾಲಕ್ಷ್ಮೀ ಮೊಬೈಲ್ ಚೆಕ್ ಮಾಡಿದಾಗ…
ಚಿಕ್ಕಬಳ್ಳಾಪುರ : ಓವರ್ ಟೇಕ್ ಮಾಡಲು ಹೋಗಿ ಅತಿ ವೇಗದ ಚಾಲನೆಯಿಂದಾಗಿ ಲಾರಿಗೆ, ಟಾಟಾ ಸುಮೋ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಸೇಟ್ ದಿನ್ನೇ ಬಳಿ ನಡೆದಿದೆ. ಈ ಒಂದು ಭೀಕರ ಅಪಘಾತದಲ್ಲಿ ಮೃತ ಪಟ್ಟವರನ್ನು ರಾಜಿಯಾ ಶಾಹಿನ್ (50) ಮೆಹಿಮುದಲ್ (45) ಹಾಗೂ ಮೊಲಾನಾ ಶಾಹಿನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬಿಹಾರ ಮೂಲದವರು ಎಂದು ತಿಳಿದುಬಂದಿದ್ದು, ಕೋಲಾರದಲ್ಲಿ ವಾಸವಿದ್ದರು ಎಂದು ಹೇಳಲಾಗುತ್ತಿದೆ. ಮೃತ ವ್ಯಕ್ತಿಗಳು ಹಾಗೂ ಅವರ ಕುಟುಂಬ ಕೋಲಾರದ ದರ್ಗಾದಲ್ಲಿ ಕೆಲಸ ಮಾಡುತ್ತಿದ್ದರು. ಟಾಟಾ ಸುಮೋದಲ್ಲಿ ಕೋಲಾರದಿಂದ ಆಂಧ್ರದ ಪೆನುಗೊಂಡ ದರ್ಗಾಗೆ ಹೋಗುವಾಗ ಅಪಘಾತ ನಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಹಾಗೂ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.