Author: kannadanewsnow05

ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯು ನೆಲೆಯಲ್ಲಿ ಏರ್ ಶೋ 2025 ನಡೆಯುತ್ತಿದ್ದು, ಈ ಒಂದು ಏರ್ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಇಂದು ಮತ್ತು ನಾಳೆ ಅವಕಾಶ ಕಲ್ಪಿಸಲಾಗಿದೆ. ಹೌದು ಯಲಹಂಕದ ಬಳಿ ಇರುವ ವಾಯು ನೆಲೆಯಲ್ಲಿ ನಡೆಯುತ್ತಿರುವ ಏರ್ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಅವಕಾಶ ಕಲ್ಪಿಸಲಾಗಿದೆ. ಈ ಒಂದು ಏರ್ ಶೋಗೆ ಟಿಕೆಟ್ ಪಡೆದುಕೊಂಡವರಿಗೆ ಮಾತ್ರ ಏರ್ ಶೋ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಹೆಬ್ರಿ ಹತ್ತರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು 15ನೇ ಏರ್ ಶೋ ಗೆ ಚಾಲನೆ ನೀಡಿದ್ದರು. ಸುಮಾರು 30 ರಾಷ್ಟ್ರಗಳ ರಕ್ಷಣಾ ಸಚಿವರು ಈ ಒಂದು ಏರ್ ಶೋದಲ್ಲಿ ಭಾಗಿಯಾಗಿದ್ದರು. ಇದೀಗ ಸಾರ್ವಜನಿಕರಿಗೆ ಕೂಡ ಏರ್ ಶೋ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

Read More

ಬೆಂಗಳೂರು : ಚಾಮರಾಜನಗರ ಜಿಲ್ಲಿಯ ಮಲೈಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದಾಗಿದ್ದು, ಚಾಮರಾಜನಗರದ ಬದಲಾಗಿ ಬೆಂಗಳೂರಿನಲ್ಲಿಯೇ ಇದೆ ಫೆಬ್ರವರಿ 20 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೌದು ಕಳೆದ ಹಲವು ದಿನಗಳಿಂದ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ದಿನಾಂಕಗಳನ್ನು ಮುಂದೂಡತ್ತಲೇ ಬಂದಿತ್ತು. ಈಗ ಸಿಎಂ ಸಿದ್ದರಾಮಯ್ಯ ಅವರ ಮಂಡಿ ನೋವು ಹಿನ್ನಲೆಯಲ್ಲಿ ಇದೀಗ ಫೆಬ್ರವರಿ 20ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ.

Read More

ಬೆಳಗಾವಿ : ಪರಸ್ತ್ರೀ ಜೊತೆಗೆ ಓಡಿ ಹೋಗಿದ್ದ ಪತಿಯು ಕೊನೆಗೂ ಸಿಗಿ ಬಿದ್ದಿದ್ದಾನೆ ಈ ವೇಳೆ ಪತ್ನಿಯಾಗು ಪರಸ್ತ್ರೀ ನಡುವೆ ಗಲಾಟೆ ನಡೆದು ರಸ್ತೆಯಲ್ಲಿಯೇ ಪರಸ್ಪರ ಜೊತೆ ಹಿಡಿದುಕೊಂಡು ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿಯ ಕೊಲ್ಲಾಪುರ ಸರ್ಕಲ್ ಬಳಿ ಈ ಒಂದು ಘಟನೆ ನಡೆದಿದೆ. ಬೆಳಗಾವಿಯಲ್ಲಿ ರಸ್ತೆಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು. ಬೆಳಗಾವಿ ನಗರದ ಕೊಲ್ಲಾಪುರ ಸರ್ಕಲ್ ನಲ್ಲಿ ಈ ಒಂದು ಘಟನೆ ನಡೆದಿದೆ.ಕೆಲವು ದಿನಗಳ ಹಿಂದೆ ಪರಸ್ತ್ರೀ ಜೊತೆಗೆ ಗ್ರಾಮ ಪಂಚಾಯಿತಿಯ ಸದಸ್ಯೆಯ ಪತಿ ಓಡಿ ಹೋಗಿದ್ದ. ಎರಡು ಮಕ್ಕಳನ್ನು ಬಿಟ್ಟು ಮಹಿಳೆಯ ಜೊತೆಗೆ ಬಸವರಾಜ ಸೀತಾಮಣಿ ಎನ್ನುವ ವ್ಯಕ್ತಿ ಓಡಿ ಹೋಗಿದ್ದ. ಮಾರಿಹಾಳದ ಮಾಸಾಬಿ ಸೈಯದ್ ಜೊತೆಗೆ ಬಸವರಾಜ್ ಓಡಿ ಹೋಗಿದ್ದ. ಗಂಡ ಹೊಡಿ ಹೋದ ಬಳಿಕ ವಾಣಿಶ್ರೀ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಮಕ್ಕಳನ್ನು ಕಟ್ಟಿಕೊಂಡು ಜೀವನ ಮಾಡಲು ವಾಣಿಶ್ರೀ ಹರಸಾಹಸ ಪಡುತ್ತಿದ್ದರು ಎರಡು ತಿಂಗಳು ಬಳಿಕ ಬೆಳಗಾವಿಗೆ ಬಂದು ಮಾಸಾಬಿ ಹಾಗೂ ಬಸವರಾಜ್ ವಾಸಿಸುತ್ತಿದ್ದರು. ನಿನ್ನೆ ರಾತ್ರಿ ವಾಣಿಶ್ರೀ ಕೈಗೆ…

Read More

ಬೀದರ್ : ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಬೀದರ್‌ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಜಿಲ್ಲೆಯ ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ಕಂಟೆಪ್ಪ ಜಿರ್ಗೆ (65) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಕಂಟೆಪ್ಪಾ ಅವರು ಸಂಬಂಧಿಕರೊಂದಿಗೆ ಭಾನುವಾರ ಕುಂಭಮೇಳಕ್ಕೆ ತೆರಳಿದ್ದರು.ಸೋಮವಾರ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ನಂತರ ಮರಳಿ ಉತ್ತರ ಪ್ರದೇಶದ ಕಾಶಿ ದೇವಸ್ಥಾನಕ್ಕೆ ತೆರಳಿದ್ದರು. ಆದರೆ ಬುಧವಾರ ಬೆಳಗ್ಗೆ 11 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರ ಅಂತ್ಯಕ್ರಿಯೆ ಗುರುವಾರ ಸ್ವಗ್ರಾಮ ಠಾಣಾಕುಶನೂರದಲ್ಲಿ ನಡೆಯಲಿದೆ.ನಿನ್ನೆ ಸಹ ತುಮಕೂರು ಜಿಲ್ಲೆಯ ಶಿರಾ ಮೂಲದ ವ್ಯಕ್ತಿ ಸಾವನ್ನಪ್ಪಿದ್ದರು. ಇತ್ತೀಚೆಗೆ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳ ದಲ್ಲಿ ಭಾಗವಹಿಸಿ ವಾಪಸ್ ಬರುವ ವೇಳೆ ರೈಲಿನಲ್ಲಿ ಹೃದಯಾಘಾತದಿಂದ ಬೆಳಗಾವಿಯ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿತ್ತು. ಅದೇ ರೀತಿ ಕಾಶಿಯಲ್ಲಿ ಸ್ನಾನ ಮಾಡುವ ವೇಳೆ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.ಇದೀಗ ಬೀದರ್…

Read More

ಬೆಂಗಳೂರು : ಮೊಬೈಲ್ ಜಾಸ್ತಿ ಬಳಸಬೇಡ ಓದಿನ ಕಡೆ ಗಮನಕೊಡು ಎಂದಿದ್ದಕ್ಕೆ ನೊಂದ SSLC ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಅಪಾರ್ಮೆಟ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾಡಗೋಡಿಯಲ್ಲಿ ನಡೆದಿದೆ. ಬೆಂಗಳೂರಿನ ಕಾಡಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸೆಟ್ಸ್ ಮಾರ್ಕ್ ಅಪಾರ್ಮೆಟ್ ನಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಈ ಒಂದು ಅಪಾರ್ಟ್ಮೆಂಟ್ ನಲ್ಲಿ ಉತ್ತರ ಪ್ರದೇಶ ಮೂಲದ ಕುಟುಂಬವೊಂದು ವಾಸವಾಗಿತ್ತು. ಅವರ 15 ವರ್ಷದ ಬಾಲಕಿ ಅವಂತಿಕಾ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು. ಅವಂತಿಕಾ ಹೆಚ್ಚು ಮೊಬೈಲ್ ಬಳಸುತ್ತಿದ್ದಳು, ಇದನ್ನು ಗಮನಿಸಿದ ತಾಯಿ ಜಾಸ್ತಿ ಮೊಬೈಲ್ ಬಳಸಬೇಡ ಓದಿನ ಕಡೆಗೆ ಗಮನ ಕೊಡು ಎಂದಿದ್ದರು ಅಷ್ಟೆ. ಅವಂತಿಕಾ ಅಪಾರ್ಮೆಂಟ್ ನ 20ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದು ಸ್ಥಳಕ್ಕೆ ಕಾಡುಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.

Read More

ನವದೆಹಲಿ : ಒಂದುವೇಳೆ ಸದ್ಯಕ್ಕೆ ಏನಾದರು ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ 343 ಸ್ಥಾನಗಳನ್ನು ಗೆಲ್ಲಲಿದೆ. ಹಾಗೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 188 ಸ್ಥಾನ ಪಡೆಯಲಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದ ನೇಷನ್ ಸಮೀಕ್ಷೆ ಹೇಳಿದೆ. ಹೌದು 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 292 ಸ್ಥಾನ ಗೆದ್ದಿತ್ತು. ಆದರೆ ಅಸಕ್ತ ದಿನದಲ್ಲಿ ಲೋಕಸಭೆ ಚುನಾವಣೆ ಏನಾದರೂ ನಡೆಸಿದರೆ 343 ಸ್ಥಾನಗಳನ್ನು ಎಂಡಿಎ ಮೈತ್ರಿಕೂಟ ಗೆಲ್ಲಲಿದೆ ಅಲ್ಲದೆ ಕಾಂಗ್ರೆಸ್ 188 ಸ್ಥಾನಕ್ಕೆ ಕುಸಿಯಲಿದೆ ಎಂದುಇಂಡಿಯಾ ಟುಡೇ ಮೂಡ್ ಆಫ್ ದ ನೇಷನ್ ಸಮೀಕ್ಷೆ ತಿಳಿಸಿದೆ. ಈಗ ಚುನಾವಣೆ ನಡೆದರೆ ಭರ್ಜರಿ 343 ಸ್ಥಾನ ಗೆಲ್ಲಲಿದೆ. ಅಂದರೆ ಅದರ ಸ್ಥಾನಬಲ 51 ಸ್ಥಾನ ಹೆಚ್ಚಾಗಲಿದೆ. ಬಿಜೆಪಿ ಬಲ 240ರಿಂದ 281ಕ್ಕೆ ಏರಲಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ 232 ಸ್ಥಾನ ಗೆದ್ದಿದ್ದ ಇಂಡಿಯಾ ಕೂಟದ ಬಲ 188ಕ್ಕೆ ಇಳಿಯಲಿದೆ. ಅದೇ ರಿತಿ…

Read More

ವಿಜಯಪುರ : ರಾಜ್ಯ ಬಿಜೆಪಿಯಲ್ಲಿ ಒಳಜಗಳ ಹಾಗೂ ಭಿನ್ನಾಭಿಪ್ರಾಯ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಶಿಸ್ತು ಸಮಿತಿಯು ಶಾಸಕ ಯತ್ನಾಳ್ ಅವರಿಗೆ 72 ಗಂಟೆಗಳಲ್ಲಿ ಉತ್ತರಿಸುವಂತೆ ಶೋಕಾಸ್ ನೋಟಿಸ್ ನೀಡಿತ್ತು. ಈ ಒಂದು ನೋಟಿಸ್ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಒಂದು ವೇಳೆ ನೋಟಿಸ್‌ ಬಂದರೂ ನಾನು ಅದಕ್ಕೆ ಉತ್ತರ ನೀಡುವುದಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ಬಂದಿರುವ ಕುರಿತಾಗಿ ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್‌ ನೀಡಿಲ್ಲ. ಅಷ್ಟಕ್ಕೂ, ಇಂತಹ ನೂರಾರು ನೋಟಿಸ್‌ಗಳು ನನಗೆ ಬರುತ್ತವೆ. ಅವುಗಳಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಇದಕ್ಕೆಲ್ಲ ಹೆದರುವ ಮಗ ನಾನಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಸಂಬಂಧ ಶಾಸಕ ಯತ್ನಾಳರಿಗೆ ಬಿಜೆಪಿ ಕೇಂದ್ರ ಶಿಸ್ತು…

Read More

ನವದೆಹಲಿ: ಚುನಾವಣೆ ಗೆಲ್ಲಲು ರಾಜಕೀಯ ಪಕ್ಷಗಳು ಇತ್ತೀಚಿನ ದಿನಗಳಲ್ಲಿ ಪ್ರಮುಖ ಆಸ್ತವಾಗಿ ಬಳಕೆ ಮಾಡುತ್ತಿರುವ ಉಚಿತ ಕೊಡುಗೆಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇಂಥ ಯೋಜನೆಗಳಿಂದಾಗಿ ಜನರಿಗೆ ಕೆಲಸ ಮಾಡಲು ಮನಸ್ಸೇ ಇಲ್ಲದಂತಾ ಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಹೌದು ಒಂದು ಕಡೆ ರಾಜ್ಯದಲ್ಲಿ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸದಸ್ಯ ಪ್ರಶಂಸೆ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದರೆ ಇನ್ನೊಂದು ಕಡೆ ಸುಪ್ರೀಂ ಕೋರ್ಟ್ ರಾಜಕೀಯ ಪಕ್ಷಗಳಿಗೆ ತರಾಟೆ ತೆಗೆದುಕೊಂಡಿದೆ. ಅಲ್ಲದೆ ಹೀಗೆ ಮಾಡುವುದರಿಂದ. ಜನರನ್ನು ಮುಖ್ಯ ವಾಹಿನಿಗೆ ತಂದು ರಾಷ್ಟ್ರಾಭಿವೃದ್ಧಿಗೆ ಕೊಡುಗೆ ನೀಡಲು ಸಶಕ್ತರಾಗಿಸುವ ಬದಲು, ಪರಾವಲಂಬಿಗಳನ್ನಾಗಿ ಮಾಡುತ್ತಿಲ್ಲವೇ? ಎಂದು ಸರ್ಕಾರಗಳನ್ನು ಖಾರವಾಗಿ ಪ್ರಶ್ನಿಸಿದೆ. ಸುಪ್ರೀಂ ಕೋರ್ಟ್ ಹೇಳಿದ್ದೇನು? “ದುರದೃಷ್ಟವಶಾತ್, ಈ ಉಚಿತಗಳಿಂದಾಗಿ … ಜನರು ಕೆಲಸ ಮಾಡಲು ಸಿದ್ಧರಿಲ್ಲ. ಅವರು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ಅವರು ಯಾವುದೇ ಕೆಲಸ ಮಾಡದೆ ಹಣವನ್ನು ಪಡೆಯುತ್ತಿದ್ದಾರೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು.ಮನೆಯಿಲ್ಲದ ಜನರನ್ನು ಸಮಾಜದ ಮುಖ್ಯವಾಹಿನಿಗೆ ಸೇರಿಸಬೇಕು…

Read More

ಕೊಡಗು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಕಳೆದ ಹಲವು ದಿನಗಳಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದೀಗ ಕೊಡಗಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ನೊಂದು ಮಹಿಳೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆಯ ಶನಿವಾರ ಸಂತೆಯಲ್ಲಿ ನಡೆದಿದೆ. ಹೌದು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಹಸೀನಾ ಎನ್ನುವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಶನಿವಾರ ಸಂತೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಫೈನಾನ್ಸ್ ಸಂಸ್ಥೆಗಳ ಏಜೆನ್ಸಿಗಳ ವಿರುದ್ಧ ಕುಟುಂಬಸ್ಥರು ಕಿರುಕುಳದ ಕುರಿತು ಆರೋಪಿಸಿದ್ದಾರೆ. ಹಸೀನಾ ಕೆಲವು ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲ ಮರುಪಾವತಿಸದಕ್ಕೆ ಹಸಿನಾಗಿ ಕರೆ ಮಾಡಿ ಸಿಬ್ಬಂದಿಗಳು ಬೆದರಿಕೆ ಹಾಕಿದ್ದರು ಎಂದು ಫೈನಾನ್ಸ್ ಏಜೆಂಟರ ವಿರುದ್ಧ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಘಟನೆ ಕುರಿತು ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಇಂದು ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಸಂಬಂಧ ರಾಜ್ಯಪಾಲರು ಸುಗ್ರೀವಾಜ್ಞೆ ಜಾರಿಗೆ…

Read More

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಕರಡು ಪ್ರತಿಯನ್ನು ಇತ್ತೀಚಿಗೆ ರಾಜ್ಯಪಾಲರಿಗೆ ಕಳುಹಿಸಿದ್ದು, ಇದೀಗ ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಈ ಒಂದು ಸುಗ್ರೀವಾಜ್ಞೆ ಪ್ರತಿಗೆ ಅಂಕಿತ ಹಾಕುವ ಮೂಲಕ ಸುಗ್ರೀವಾಜ್ಞೆ ಜಾರಿಗೆ ಅನುಮೋದನೆ ನೀಡಿದ್ದಾರೆ. ಹೌದು ಹಲವು ಸಲಹೆಗಳನ್ನು ನೀಡಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ ರಾಜ್ಯಪಾಲರು, ಈ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಆಗಿದ್ದು ಈ ಒಂದು ಸುಗ್ರೀವಾಜ್ಞೆಗೆ ರಾಜ್ಯಪಾಲರು ಇದೀಗ ಅಂಕಿತ ಹಾಕಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಮಾಲೀಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.

Read More