Author: kannadanewsnow05

ಬೆಂಗಳೂರು : ಚನ್ನಪಟ್ಟಣ ಕ್ಷೇತ್ರಕ್ಕೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಇಂದು ಬೃಹತ್ ಮೆರವಣಿಗೆ ಮೂಲಕ ಜನಪಟ್ಟಣ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಇತ್ತ ಎನ್‌ಡಿಎ ಮೈತ್ರಿ ಪಕ್ಷದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆ ಚನ್ನಪಟ್ಟಣಕ್ಕೆ ಯಾವ ಅಭ್ಯರ್ಥಿ ನಿಲ್ಲಿಸಬೇಕೆಂಬ ಗೊಂದಲದಲ್ಲಿ ಇದ್ದಾರೆ. ಇದೀಗ ಸಾರಾ ಮಹೇಶ್ ಅವರು ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಸಾರಾ ಮಹೇಶ್ ಅವರು, HD ಕುಮಾರಸ್ವಾಮಿ ಕೇಂದ್ರದ ಜವಾಬ್ದಾರಿ ಹೊತ್ತಿರುವುದರಿಂದ ಪಕ್ಷದ ಸಂಘಟನೆ ಜವಾಬ್ದಾರಿ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ತೊಡಗಿಸಿಕೊಂಡಿದ್ದಾರೆ. ಆದರೆ ಪ್ರಾರಂಭದಿಂದಲೂ ನಾನು ಅಭ್ಯರ್ಥಿಯಲ್ಲ ನಾವು NDA ಅಭ್ಯರ್ಥಿ ಗೆಲ್ಲಿಸುವುದು ನಮ್ಮ ಗುರಿ ಎಂದು ಎಲ್ಲ ಸಭೆ ಸಮಾರಂಭಗಳಲ್ಲಿ ಕುಮಾರಸ್ವಾಮಿವೂ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈಗ ನಮ್ಮೆಲ್ಲರ ಪಕ್ಷದ ಇವತ್ತಿನ ಕಾರ್ಯಕರ್ತರ, ಮುಖಂಡರ, ಒತ್ತಾಯ ಇರುವಂತದ್ದು ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿರುವುದರಿಂದ ನಿಖಿಲ್ ಕುಮಾರಸ್ವಾಮಿಗೆ…

Read More

ರಾಮನಗರ : ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಇಂದು ಬೃಹತ್ ಮೆರವಣಿಗೆಯೊಂದಿಗೆ ಚನ್ನಪಟ್ಟಣ ತಾಲೂಕು ಕಚೇರಿಗೆ ನಾಮಪತ್ರ ಸಲ್ಲಿಸಲು ತೆರಳಿದ್ದಾ. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದು, ಬಿಜೆಪಿಯವರ ಭ್ರಷ್ಟಾಚಾರದ ಹಿಸ್ಟರಿ ತೆಗೆದರೆ ಅವರಿಗೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೂ ಬರಕ್ಕಾಗಲ್ಲ ಎಂದು ವಾಗ್ದಾಳಿ ನಡೆಸಿದರು. ಸಿ ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೂ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚನ್ನಪಟ್ಟಣದಲ್ಲಿ ಅಜೆಂಡಾ ಶುರು ಮಾಡಿದೆ ಬಿಜೆಪಿ ಮತ್ತು ಜೆಡಿಎಸ್ ನವರು. ಯೋಗೇಶ್ವರ್ ಅವರನ್ನು ನಾವು ಗೆದ್ದೇ ಗೆಲ್ಲಿಸುತ್ತೇವೆ. ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದರು ಎಂದು ಅವರು ತಿಳಿಸಿದರು. ಆದರೆ ಅವರನ್ನ MLC ಸ್ಥಾನಕ್ಕೆ ರಾಜೀನಾಮೆ ಕೊಡಕ್ಕೆ ಕಳಿಸಿದ್ದು ಯಾರು? ಈ ಬಗ್ಗೆ ತನಿಖೆ ಮಾಡಿ. ನಾನು ಅವರನ್ನು ಸಂಪರ್ಕಿಸಿ ಇಲ್ಲ ಅವರು ನಿನ್ನೆನೇ ನಮ್ಮ ಮನೆಗೆ ಬಂದು ಭೇಟಿಯಾಗಿ ಚರ್ಚೆ ಮಾಡಿದ್ದು. ಹಾಗಾಗಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದು ಯಾರು ಎಂದು ತನಿಖೆ ಮಾಡಿಸಿ ಎಂದು ಮಾಧ್ಯಮಗಳಿಗೆ…

Read More

ರಾಮನಗರ : ರಾತ್ರಿಯ ವೇಳೆ ಮಫ್ತಿಯಲ್ಲಿ ಇದ್ದಂತಹ ಪಿಎಸ್ಐ ಮೇಲೆ ಪಾನಮತ್ತರಾಗಿದ್ದ ಯುವಕರು ಬಿಯರ್ ಬಾಟಲ್ ನಿಂದ ಭುಜಕ್ಕೆ ಹೊಡೆದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ರಾಮನಗರದ ರಾಯರದೊಡ್ಡಿಯಲ್ಲಿನ ಸುಪ್ರಿತ್ ವೈನ್ಸ್ ಬಳಿ ನಡೆದಿದೆ. ಹೌದು ನಿನ್ನೆ ರಾತ್ರಿ ಐಜೂರು ಪೊಲೀಸ್ ಠಾಣೆ ಪ್ರಭಾರ ಪಿಎಸ್‌ಐ ದುರುಗಪ್ಪ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಈ ವೇಳೆ ರಾಯರದೊಡ್ಡಿ ನಿವಾಸಿ ಕಿರಣ್ ಕುಮಾರ್‌, ಪಾದರಹಳ್ಳಿ ವಾಸಿ ಶ್ರೀಕಾಂತ ಹಾಗೂ ಚೇತನ್ ಅಲಿಯಾಸ್ ಕುಂತಿ PSI ದುರುಗಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣವೊಂದರ ಆರೋಪಿ ಮತ್ತು ಮಾಲು ಪತ್ತೆ ಮಾಡುವ ಸಲುವಾಗಿ ಮಫ್ತಿಯಲ್ಲಿ ಪಿಎಸ್ ಐ ದುರುಗುಪ್ಪರವರು ಪೇದೆಗಳಾದ ಚನ್ನಬಸಪ್ಪ ಮತ್ತು ಶಿವರಾಜ ಅವರೊಂದಿಗೆ ರಾಯರದೊಡ್ಡಿಗೆ ತೆರಳಿದ್ದಾರೆ.ದುರುಗುಪ್ಪ ಸುಪ್ರೀತಾ ವೈನ್ಸ್ ಮುಂಭಾಗ ಆರೋಪಿ ಮತ್ತು ಮಾಲಿನ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾಗ ಪಾನಮತ್ತರಾಗಿದ್ದ ಮೂವರು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಪಿಎಸ್ಐ ದುರ್ಗಪ್ಪ ಅವರು ನಾನು ಪೊಲೀಸ್…

Read More

ದಕ್ಷಿಣಕನ್ನಡ : ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಗೆ ತೀವ್ರ ಮುಖಭಂಗವಾಗಿದೆ. ಹೌದು ಇಂದು ಬೆಳಿಗ್ಗೆಯಿಂದ ಮತ ಎಣಿಕೆ ಪ್ರಾರಂಭವಾಗಿದ್ದು ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ ಕಿಶೋರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಂದಾಜು 3654 ಮತಗಳನ್ನು ಬಿಜೆಪಿಯ ಕಿಶೋರ್ ಕುಮಾರ್ ಪಡೆದಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಅಕ್ಟೊಬರ್ 21 ರಂದು ಈ ಒಂದು ಪರಿಷತ್ ಉಪ ಚುನಾವಣೆ ನಡೆದಿತ್ತು. ಕೋಟಾ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ಒಂದು ಸ್ಥಾನ ತೆರವಾಗಿತ್ತು. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಭರ್ಜರಿ ಜಯ ಸಿಕ್ಕಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು BMTC ಬಸ್ ಕಂಡಕ್ಟರ್ ಗೆ ಕಲ್ಲಿನಿಂದ ಹೊಡೆದು ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಒಂದು ಘಟನೆ ನಡೆದಿದೆ.ಕಳೆದ ಒಂದು ತಿಂಗಳಲ್ಲಿ ಬಿ ಎಂ ಟಿ ಸಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸುವ ಮೂಲಕ ಇದು 3ನೇ ಘಟನೆ ಯಾಗಿದೆ. ಹೌದು ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಕೊಲೆಗೆ ಯತ್ನ ನಡೆದಿದ್ದು, ಪ್ರಯಾಣಿಕನೊಬ್ಬ ಕಂಡಕ್ಟರ್ ತಲೆಗೆ ಕಲ್ಲಿನಿಂದ ಹೊಡೆಡಿದ್ದಾನೆ.ಅಕ್ಟೋಬರ್ 18 ರಂದು ಟಿನ್ ಫ್ಯಾಕ್ಟರಿ ಬಳಿ ಈ ಒಂದು ಘಟನೆ ನಡೆದಿದೆ. ಕಂಡಕ್ಟರ್ ಹಾಗೂ ಪ್ರಯಾಣಿಕ ನಡುವೆ ಸಣ್ಣ ಗಲಾಟೆ ಆಗಿತ್ತು ಇದರಿಂದ ಕೋಪಗೊಂಡ ಪ್ರಯಾಣಿಕ ಕಲ್ಲಿನಿಂದ ಹೊಡೆದು ಕೊಲೆಗೆ ಎತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಇದೀಗ ಕಲ್ಲಿನಿಂದ ಹೊಡೆಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಇದೀಗ ಸೆರೆಯಾಗಿದೆ.

Read More

ಹಾಸನ : ಹಾಸನದ ಹಾಸನಂಬ ದೇಗುಲದ ಗರ್ಭಗುಡಿ ಇದೀಗ ಓಪನ್ ಆಗಿದೆ. ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ದೇಗುಲದ ಪ್ರಧಾನ ಅರ್ಚಕರು ಹಾಸನಾಂಬ ದೇಗುಲದ ಬಾಗಿಲನ್ನು ತೆರೆದರು. ಇಂದಿನಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೆ ನಡೆಯಲಿದೆ. ನಾಳೆಯಿಂದ ನವೆಂಬರ್ 2ರವರೆಗೆ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ,ಸಚಿವ ಕೆ ಎನ್ ರಾಜಣ್ಣ, ಹಾಸನ ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಓಪನ್ ಮಾಡಲಾಯಿತು. ವಿಶೇಷ ಹೂವಿನ ಅಲಂಕಾರದಿಂದ ದೇವಸ್ಥಾನ ಕಂಗೊಳಿಸುತ್ತಿದೆ.

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ರದ್ದು ಕೋರಿ ಇಡಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಹೈ ಕೋರ್ಟ್ ಮಾಜಿ ಸಚಿವ ಬಿ ನಾಗೇಂದ್ರ ಗೆ ನೋಟಿಸ್ ನೀಡಿದೆ. ಹೌದು ಮಾಜಿ ಸಚಿವ ಬಿ.ನಾಗೇಂದ್ರಗೆ ಹೈಕೋರ್ಟಿನಿಂದ ನೋಟಿಸ್ ಜಾರಿಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿತ್ತು. ಈ ಒಂದು ಜಾಮೀನು ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ.15 ರಂದು ವಿಚಾರಣೆ ನಿಗದಿಪಡಿಸಿ ವಿಚಾರಣೆ ಮುಂದೂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಬಿ. ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ. ಈ ಹಿಂದೆ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದ್ದು, ಜಾಮೀನು ರದ್ದು ಕೋರಿ ಇಡಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು.

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಆರೋಗ್ಯ ಯೋಜನೆಗೆ ಕ್ಷಣಗಣನೆ ಆರಂಭವಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಒಂದು ದೂರದೃಷ್ಟಿಯ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೀಗ ‘ಗೃಹ ಆರೋಗ್ಯ’ ಹೆಸರಲ್ಲಿ ಯೋಜನೆಯನ್ನ ಅನುಷ್ಠಾನಕ್ಕೆ ತರುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದು, ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗಿ, ಜನವರಿ ತಿಂಗಳಿನಲ್ಲಿ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅಸಾಂಕ್ರಾಮಿ ರೋಗಗಳ ನಿಯಂತ್ರಣ ಹಾಗೂ ನಿರ್ವಹಣೆಯ ಮಹತ್ವಾಕಾಂಕ್ಷೆಯೊಂದಿಗೆ “ಗೃಹ ಆರೋಗ್ಯ” ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದೇನೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್‌ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ ಅಸಾಂಕ್ರಾಮಿಕ ರೋಗಗಳನ್ನ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಬಾಬುಸಾ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಿಯಮ ಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತೆ. ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ‌ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಸಿಎಂ ಸೂಚನೆ ನೀಡಿದರು. ಘಟನಾ ಸ್ಥಳ ಪರಿಶೀಲನೆ ಬಳಿಕ‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಸಚಿವ…

Read More

ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ. ಅಲ್ಲದೆ ಮುಂದಿನ 9 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ.ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ. ಸಾಮಾನ್ಯ ಸರತಿ ಸಾಲು, ವಿಐಪಿ ಪಾಸ್ ಹೊಂದಿರುವ ಭಕ್ತರು ಮತ್ತು ವಿಐಪಿಗಳ ವಾಹನಗಳಿಗೆ ಪ್ರವೇಶ ಮತ್ತು ನಿರ್ಗಮನ ಜಿಲ್ಲಾಡಳಿತ ವ್ಯವಸ್ಥಿತಗೊಳಿಸಿದೆ. ಎಲ್ಲಾ ಭಕ್ತರಿಗೆ ಲಡ್ಡು ಮತ್ತು ಪ್ರಸಾದವನ್ನು ವಿತರಿಸಲು ದೇವಾಲಯದ ಪಕ್ಕದಲ್ಲಿ 24 ಕೌಂಟರ್‌ಗಳನ್ನು ಸ್ಥಾಪಿಸಿದೆ. ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಸಿದ್ದಗಂಗಾ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಗಮಿಸಲಿದ್ದಾರೆ. ಒಟ್ಟು 11 ದಿನದಲ್ಲಿ 9 ದಿನ ಮಾತ್ರ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದಿನದ 24 ಗಂಟೆಗಳ…

Read More