Author: kannadanewsnow05

ಬೆಳಗಾವಿ : ಸ್ನೇಹಿತೆಯ ಮನೆಗೆ ಊಟಕ್ಕೆ ತೆರಳಿದ್ದ ಒಂದೇ ಒಂದು ಕಾರಣಕ್ಕೆ, ಯುವಕ ಮತ್ತು ಆತನ ಪ್ರಿಯತಮೆ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಪ್ರಿಯತಮೆಯ ಜೊತೆಗೆ ಬಂದಿದ್ದ ಮೂವರು ಯುವಕನ ಮೇಲೆ ಗುಂಡಿನ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಗಾವಿಯ ಆಂಜನೇಯ ನಗರದಲ್ಲಿ ನಡೆದಿದೆ. ಹೌದು ಗುಂಡು ತಗುಲಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನನ್ನು ಪ್ರಣಿತ್ (31) ಎಂದು ತಿಳಿದುಬಂದಿದೆ. ಈತ ಬೆಳಗಾವಿ ನಗರದ ಟಿಳಕವಾಡಿಯ ದ್ವಾರಕಾನಗರದ ನಿವಾಸಿ ಎನ್ನಲಾಗಿದೆ. ನಿನ್ನೆ ಈತ ಸ್ನೇಹಿತೆ ಸ್ಮಿತಾ ಮನೆಗೆ ಊಟಕ್ಕೆ ಹೋಗಿದ್ದಾನೆ. ಇನ್ನೇನು ಊಟ ಮಾಡಬೇಕು ಅಂದುಕೊಳ್ಳುವಷ್ಟರಲ್ಲಿ ಪ್ರಣಿತ್ ಮಾಜಿ ಗರ್ಲ್ ಫ್ರೆಂಡ್ ಸ್ಮಿತಾಳ ಮನೆಗೆ ಬಂದಿದ್ದಾಳೆ. ಸಹಜವಾಗಿ ತಾನು ಪ್ರೀತಿಸುವ ಹುಡುಗ ಬೇರೆ ಹೆಣ್ಣಿನೊಂದಿಗೆ ಕಂಡಾಗ ಯಾರಿಗೆ ಆಗಲಿ ಕೋಪ ಬರುತ್ತದೆ. ಇದೇ ರೀತಿ ಕೂಡ ಪ್ರಣಿತ್  ಗರ್ಲ್ ಫ್ರೆಂಡ್ ಗು ಆಗಿದ್ದು, ಗಂಡ ಸತ್ತ ಸ್ಮಿತಾ ಒಬ್ಬಳೆ ಇದ್ದು ಆಕೆ ಮನೆಗೆ ಪ್ರಣಿತ್ ಯಾಕೆ ಬಂದಾ…

Read More

ಮಂಡ್ಯ : ಈ ಹಿಂದೆ ಅಬಕಾರಿ ಇಲಾಖೆಯ ಸಚಿವ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಇದೀಗ ಮಂಡ್ಯ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಗಾಗಿ ಅರ್ಜಿ ಸಲ್ಲಿಸಿದವರ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅರ್ಜಿದಾರರು ಲೋಕಾಯುಕ್ತಕ್ಕೆ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದ್ದಾರೆ. ಹೌದು ಮಂಡ್ಯದ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಸಿ ಎಲ್-7 ಲೆಸೆನ್ಸ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಲಕ್ಷ್ಮಮ್ಮ ಎಂಬುವರ ಹೆಸರಿನಲ್ಲಿ ಬಾರ್ ಲೈಸೆನ್ಸ್ ಗೆ ಅರ್ಜಿ ಹಾಕಲಾಗಿತ್ತು. ಮಂಡ್ಯದ ಜಿಲ್ಲೆಯ ಮದ್ದೂರು ತಾಲೂಕಿನ ಚಂದುಪುರ ಗ್ರಾಮದಲ್ಲಿ ಬಾರ್ ಹಾಗೂ ರೆಸ್ಟೋರೆಂಟ್ ಗೆ ಅನುಮತಿ ಪಡೆಯಲು ಅರ್ಜಿ ಸಲ್ಲಿಸಲಾಗಿತ್ತು. ಮೊದಲು ಆನ್ಲೈನ್ ನಲ್ಲಿ ಲಕ್ಷ್ಮಮ್ಮ ಅವರ ಮಗ ಪುನೀತ್ ಅರ್ಜಿ ಸಲ್ಲಿಸಿದ್ದರು. ಆಮೇಲೆ ಅರ್ಜಿಯನ್ನು ರಿಜೆಕ್ಟ್…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಲ್ಲಿಯವರೆಗು ಸಾಕಷ್ಟು ತನಿಖೆಯ ಪ್ರಗತಿ ಕಂಡಿದೆ. ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು ಹಾಗೂ ಇಡಿ ಅಧಿಕಾರಿಗಳು ಕೂಡ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದು, ಎಲ್ಲವೂ ಆದ ಬಳಿಕ ಕೇಸ್ ಇನ್ನು ಕೋರ್ಟ್ ನಲ್ಲಿ ಇದೆ. ಇದರ ಮಧ್ಯ ಇದೀಗ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ಭೂಮಾಲಿಕ ದೇವರಾಜಯ್ಯ ಅಣ್ಣನ ಮಗಳು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ವಿರುದ್ಧ ಕೋರ್ಟ್ ನಲ್ಲಿ ದಾವೆ ಹೊಡಿದ್ದಾರೆ. ಹೌದು ಸಿಎಂ, ಪತ್ನಿ ಪಾರ್ವತಿ ಬಾಮೈದ ಸೇರಿ 12 ಜನರ ವಿರುದ್ಧ ಮೈಸೂರಿನ JMFC ಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ಭೂಮಿ ಮಾರಿದ ದೇವರಾಜಯ್ಯ ಸಂಬಂಧಿಕರಿಂದ ಭೂಮಿ ಪಡೆದುಕೊಂಡು, ಸಿಎಂ ಬಾಮೈದ ಮಲ್ಲಿಕಾರ್ಜುನ್ ಗೆ ಭೂಮಿ ಮಾರಿದ್ದ. ದೇವರಾಜು ಮೋಸ ಮಾಡಿದ್ದಾರೆ ಎಂದು ದೇವರಾಜ್ ಸಂಬಂಧಿಕರು ಆರೋಪಿಸಿದ್ದಾರೆ. ದೇವರಾಜು ಆರೋಪಿಸಿ ಸಂಬಂಧಿಕರು ಇದೀಗ ದಾವೇ ಹೂಡಿದ್ದಾರೆ.ದೇವರಾಜು ಅಣ್ಣನ ಮೈಲಾರಯ್ಯನ ಮಗಳು ಜಮುನಾ ಎನ್ನುವವರು…

Read More

ಬೆಂಗಳೂರು : ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಹಾಗಾಗಿ 5 ಗ್ಯಾರಂಟಿ ಯೋಜನೆಗಳಲ್ಲಿ ಯಾವುದಾದರು ಎರಡು ನಿಲ್ಲಿಸಿ ಎಂದು ಶಾಸಕ ಗವಿಯಪ್ಪ ಹೇಳಿಕೆ ನೀಡಿದ್ದರು. ಈ ಒಂದು ಹೇಳಿಕೆಯನ್ನ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಹೇಳಿಕೆ ನೀಡಿದ್ದು, ನಾನು ಕೂಡ ಅನುದಾನ ಕೇಳುತ್ತೇನೆ ಅದರಲ್ಲಿ ತಪ್ಪೇನಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದೆರಡು ಗ್ಯಾರಂಟಿ ನಿಲ್ಲಿಸಬೇಕು ಎಂದು ಗವಿಯಪ್ಪ ಹೇಳಿಕೆ ವಿಚಾರವಾಗಿ ಅವರವರ ಅಭಿಪ್ರಾಯ ಹೇಳುತ್ತಾರೆ. ಗ್ಯಾರಂಟಿ ಬಗ್ಗೆ ರಾಜ್ಯ ಸರ್ಕಾರ ಪಕ್ಷ ನಿರ್ಧಾರ ತೆಗೆದುಕೊಂಡಿದೆ. ಗ್ಯಾರೆಂಟಿ ಯೋಜನೆಗಳ ಬಗ್ಗೆ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದ್ದು, ಗ್ಯಾರಂಟಿ ಯೋಜನೆ ನಂಬಿಕೊಂಡೆ ಜನ ನಮಗೆ ಮತ ಹಾಕಿದ್ದಾರೆ. ಶಾಸಕರು ಅನುದಾನ ಕೇಳಲಿ ಅದರಲ್ಲಿ ತಪ್ಪಿಲ್ಲ. ಈಗ ನಾನು ಕೂಡ ಅನುದಾನವನ್ನು ಕೇಳುತ್ತೇನೆ ಅದು ತಪ್ಪಾ? ಅನೇಕ ಕಾರ್ಯಕ್ರಮಗಳನ್ನು ಇಂದಿನ ಸರ್ಕಾರ ಬಿಟ್ಟು ಹೋಗಿತ್ತು. ಅನುದಾನಕ್ಕೆ ಯಾವುದೇ ತೊಂದರೆ ಆಗಲ್ಲ ಈಗಾಗಲೇ ಬ್ಯಾಲೆನ್ಸ್ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ…

Read More

ಬಳ್ಳಾರಿ : ಕಳೆದ ಎರಡು ದಿನಗಳ ಹಿಂದೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಒಬ್ಬರು ಸಾವನ್ನಪ್ಪಿದ್ದರು. ಇದೀಗ ಇಂದು ಕೂಡ ಬಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ರಕ್ತಸ್ರಾವವಾಗಿ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಳೆದ ಒಂದು ತಿಂಗಳಿನಲ್ಲಿ ಬಳ್ಳಾರಿಯಲ್ಲಿ ಇದು ಐದನೇ ಪ್ರಕರಣವಾಗಿದೆ. ಹೌದು ವೈದ್ಯರ ನಿರ್ಲಕ್ಷದಿಂದ ಬಾಣಂತಿ ಮಹಾಲಕ್ಷ್ಮಿ (20) ಸಾವನನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಭಾನುವಾರ ಬಿಮ್ಸ್ ಆಸ್ಪತ್ರೆಗೆ ಮಹಾಲಕ್ಷ್ಮಿ ಹೆರಿಗೆಗೆ ದಾಖಲಾಗಿದ್ದಳು. ಹೆರಿಗೆ ಬಳಿಕ ರಕ್ತಸ್ರಾವಾಗಿ ಬಾಣಂತಿಯ ಮಹಾಲಕ್ಷ್ಮಿ ಸಾವನ್ನಪ್ಪಿದ್ದಾಳೆ. ಭಾನುವಾರ ಬಿಮ್ಸ್ ಆಸ್ಪತ್ರೆಯಲ್ಲಿ ಮಹಾಲಕ್ಷ್ಮಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಮಹಾಲಕ್ಷ್ಮಿ ಮೂಲತಃ ಕೂಡ್ಲಿಗಿ ತಾಲೂಕಿನ ಸಿ ಎಸ್ ಪುರ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಮಹಾಲಕ್ಷ್ಮಿ ಆಸ್ಪತ್ರೆಗೆ ಬರುವ ವೇಳೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೆಮ್ಮು ಇತರೆ ಕಾಯಿಲೆಯಿಂದ ಇಂದು ಮಹಾಲಕ್ಷ್ಮಿ ಮೃತಪಟ್ಟಿದ್ದಾಳೆ ಎಂದು ಬಾಣಂತಿ ಸಾವಿನ ಬಗ್ಗೆ ಭೀಮ್ಸ್ ನಿರ್ದೇಶಕ ಡಾಕ್ಟರ್ ಗಂಗಾಧರ ಗೌಡ ಸ್ಪಷ್ಟನೆ ನೀಡಿದರು. ಆಸ್ಪತ್ರೆಯ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.…

Read More

ಬೆಂಗಳೂರು : ಬಿಬಿಎಂಪಿ ಪಶ್ಚಿಮ ವಲಯ ಕಲ್ಯಾಣ ವಿಭಾಗದಲ್ಲಿ ಬಹುಕೋಟಿ ಹಗರಣ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಬಿಬಿಎಂಪಿ ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ಅಲ್ಲದೆ ಹಲವು ದಾಖಲೆಗಳನ್ನು ಇದೀಗ ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಬಿಬಿಎಂಪಿ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ಮನೆ ಹಾಗೂ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ದೇವಯ್ಯ ಪಾರ್ಕ್ ಬಳಿಯ ಲಲಿತಾ ನಿವಾಸ ಹಾಗೂ ವೈಯ್ಯಾಲಿಕಾವಲಿನಲ್ಲಿರುವ ಸತ್ಯಮೂರ್ತಿ ನಿವಾಸದಲ್ಲಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಿಬಿಎಂಪಿ ಪಶ್ಚಿಮ ವಲಯ ಕಲ್ಯಾಣ ವಿಭಾಗದಲ್ಲಿ ಬಹುಕೋಟಿ ಹಗರಣ ಆರೋಪದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಕಲ್ಯಾಣ ಕಾರ್ಯಕ್ರಮ ಅನುಷ್ಠಾನದಲ್ಲಿ ಈ ಒಂದು ಹಗರಣ ನಡೆದಿತ್ತು. ಫಲಾನುಭವಿಗಳ ಹಣವನ್ನು ಸೊಸೈಟಿ ಗಳಿಗೆ ವರ್ಗಾಯಿಸಿ ವಂಚನೆ ಎಸಗಿರುವ ಆರೋಪ ಕೇಳಿ ಬಂದಿತ್ತು. ಡಿವೈಎಸ್ಪಿ ಸುನಿಲ್ ವೈ ನಾಯಕ್ ನೇತೃತ್ವದಲ್ಲಿ 8 ತಂಡಗಳಾಗಿ ದಾಳಿ…

Read More

ಮೈಸೂರು : ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಚಾಮೆಗೌಡನ ಹುಂಡಿ ಎಂಬ ಗ್ರಾಮದಲ್ಲಿ ಕಳೆದ 2021 ಏಪ್ರಿಲ್ 28ರಂದು ವ್ಯಕ್ತಿ ಒಬ್ಬ ತನ್ನ ತುಂಬು ಗರ್ಭಿಣಿ ಹೆಂಡತಿ ಸೇರಿದಂತೆ ಐವರನ್ನು ಭೀಕರವಾಗಿ ಕೊಲೆ ಮಾಡಿದ್ದ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೈಸೂರು ಜಿಲ್ಲಾ ಸತ್ರ ನ್ಯಾಯಾಲಯವು ಆರೋಪಿ ಮಣಿಕಂಠಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಹೌದು ಕೊಲೆ ಅಪರಾಧಿ ಮಣಿಕಂಠಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ಇದೀಗ ತೀರ್ಪು ನೀಡಿದೆ. ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಳರವರ ತೀರ್ಪು ನೀಡಿದ್ದಾರೆ. ಮಣಿಕಂಠ ಸ್ವಾಮಿ (35) ಎನ್ನುವ ಅಪರಾಧಿಗೆ ಮರಣ ದಂಡನೆ ಹಾಗೂ 10,000 ದಂಡ ವಿಧಿಸಿ ತೀರ್ಪು ಹೊರಡಿಸಿದ್ದಾರೆ. ತುಂಬು ಗರ್ಭಿಣಿ ಪತ್ನಿ ಸೇರಿದಂತೆ ಮಣಿಕಂಠ ಐವರನ್ನು ಕೊಲೆ ಮಾಡಿದ್ದ. ಗರ್ಭಿಣಿಯಾಗಿದ್ದ ಪತ್ನಿ ಗಂಗೆ, ತಾಯಿ ಕೆಂಪಂಜ್ಜಮ್ಮ, ಒಂದೂವರೆ ವರ್ಷದ ರೋಹಿತ್ ಹಾಗೂ 4 ವರ್ಷದ ಸಾಮ್ರಾಟನನ್ನು ಮಣಿಕಂಠ ಕೊಲೆ ಮಾಡಿದ್ದ. ಹೆಂಡತಿಯ ಬಗ್ಗೆ ಅನುಮಾನ ಪಟ್ಟು ಮಣಿಕಂಠ…

Read More

ಬೆಂಗಳೂರು : ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿರುವ ಉದ್ಯಮಿಗಳಿಗೆ ಹಾಗೂ ಬಿಲ್ಡರ್ ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಉದ್ಯಮಿ ಮತ್ತು ಬಿಲ್ಡರ್ ಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಹೌದು ಬೆಂಗಳೂರಿನಲ್ಲಿ ಉದ್ಯಮಿಗಳಿಗೆ ಐಟಿ ಶಾಕ್ ನೀಡಿದ್ದು, 25 ಹೆಚ್ಚು ಕಡೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಉದ್ಯಮಿಗಳು ಬಿಲ್ಡರ್ ಗಳ ಮನೆ ಹಾಗೂ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು RTI ಕಾರ್ಯಕರ್ತ ಗಂಗರಾಜು ಅವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಗಂಗರಾಜು ಅವರು ಬೆಂಗಳೂರಿನಲ್ಲಿರುವ ಜಾರಿ ನಿರ್ದೇಶನಾಲಯ ಕಛೇರಿಗೆ ದಾಖಲೆಗಳೊಂದಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗುವ ಮುನ್ನ ನಿನ್ನೆ ಮಧ್ಯಾಹ್ನ ಇಡಿ ಅಧಿಕಾರಿಗಳು ಕರೆ ಮಾಡಿ ವಿಚಾರಣೆಗೆ ಬರಲು ಹೇಳಿದ್ದರು. ಈ ಹಿಂದೆ ಬಂದಾಗ ಕೆಲ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಿದ್ದೆ. ಅಂದು ಹೇಳಿಕೆಯನ್ನು ದಾಖಲಿಸಿರಲಿಲ್ಲ. ಇವತ್ತು ನನ್ನ ಹೇಳಿಕೆಯನ್ನು ಅಧಿಕಾರಿಗಳು ದಾಖಲಿಸಬಹುದು. ಮುಡಾ ಅಕ್ರಮದ ದಾಖಲೆಗಳನ್ನು ತೆಗೆದುಕೊಂಡು ಬಂದಿದ್ದೇನೆ. ಕೇವಲ ಸಿಎಂ ಸಿದ್ದರಾಮಯ್ಯ ಪಡೆದಿದ್ದ ಸೈಟ್ ಗಳು ಮಾತ್ರ ಅಲ್ಲ ಮುಡಾದಲ್ಲಿ ನಡೆದ 5000 ಕೋಟಿ ಅಕ್ರಮದ ತನಿಖೆ ಕೂಡ ಆಗಬೇಕು. ಆ ನಿಟ್ಟಿನಲ್ಲಿ ನನ್ನ ಬಳಿ ಇರುವ ಎಲ್ಲಾ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡುತ್ತೇನೆ ಎಂದರು.ಸಚಿವ ಭೈರತಿ ಸುರೇಶ್ ಹಿಂದಿನ ಆಯುಕ್ತರಿಗೆ ಸರ್ಚ್ ವಾರಂಟ್ ಕುರಿತು ಮಾಹಿತಿ ಸೋರಿಕೆಯಾಗಿದೆ.ಜಿ ಟಿ ದಿನೇಶ್ ಕುಮಾರ್ ನಟೇಶ್ ಗೆ ಮಾಹಿತಿ…

Read More

ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ನೇತೃತ್ವದ ಬಿಜೆಪಿಯು 230 ಕ್ಕೂ ಅಧಿಕ ಸ್ಥಾನಗಳನ್ನು ಪಡೆದು ದಾಖಲೆ ನಿರ್ಮಿಸಿದೆ. ಫಲಿತಾಂಶ ಬಂದ ಬಳಿಕ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿ ನೇಮಕವಾಗುತ್ತಾರೆ ಎಂದೇ ಹೇಳಲಾಗಿತ್ತು. ಆದರೆ ಇದೀಗ ಬಿಜೆಪಿ ಮತ್ತು ಶಿವಸೇನೆಯ ಶಿಂಧೆ ಬಣದ ನಡುವೆ ಸಿಎಂ ಕುರ್ಚಿಗಾಗಿ ಹಗ್ಗಜಗಾಟ ನಡೆಯುತ್ತಿದೆ. ಹೌದು ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಆಯ್ಕೆ ಇನ್ನೂ ಬಗೆಹರಿದಿಲ್ಲ. ಸಿಎಂ ಕುರ್ಚಿಗೆ ಬಿಜೆಪಿ ಮತ್ತು ಶಿವಸೇನೆಯ ಶಿಂಧೆ ಬಣದ ನಡುವೆ ಹಗ್ಗ ಜಗ್ಗಾಟ ಮುಂದುವರೆದಿದೆ. ಫಲಿತಾಂಶ ಮತ್ತು 4 ದಿನಗಳಾದರೂ ಸಹ ಸಿಎಂ ಆಯ್ಕೆ ಕಗ್ಗಂಟು ಇನ್ನೂವರೆಗೂ ಬಗೆಹರಿದಿಲ್ಲ. ಸಿಎಂ ಸ್ಥಾನವನ್ನು ಶಿವಸೇನೆಗೆ ಬಿಟ್ಟುಕೊಡಲು ಬಿಜೆಪಿ ಇದುವರೆಗೂ ಮನಸ್ಸು ಮಾಡಿಲ್ಲ. ಇನ್ನು ಮುಖ್ಯಮಂತ್ರಿ ಸ್ಥಾನ ತನಗೆ ಬೇಕು ಎಂದು ಶಿವಸೇನೆಯ ಶಿಂಧೆ ಬಣ ಪಟ್ಟು ಹಿಡಿದುಕೊಂಡಿದೆ. ಬಿಹಾರ ಮಾದರಿಯಲ್ಲಿ ಸಿಎಂ ಆಯ್ಕೆ ಇರಲಿ ಎಂದು ಶಿವಸೇನೆ ಬಣ ಹೇಳುತ್ತಿದೆ. ಬಿಹಾರ್ ಮಾದರಿಯ ಸಿಎಂ…

Read More