Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ರಾಜ್ಯ ಸೇರಿದಂತೆ ಇಡೀ ದೇಶದಲ್ಲಿ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದಾರೆ. ಬೆಂಗಳೂರು ನಗರ ಕೂಡ ಇದೀಗ ಮಹಿಳೆಯರಿಗೆ ಸೇಫ್ ಅಲ್ಲ ಎನ್ನುವಂತಿದೆ. ಇದೀಗ ರಾಜಧಾನಿ ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿಯೇ ಯುವತಿಗೆ ಕಾಮುಕನೊಬ್ಬ ಕೆಟ್ಟದಾಗಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಮತ್ತೆ ಹೆಚ್ಚಾದ ಕಾಮುಕರ ಉಪಟಳ. ಕತ್ತಲಲ್ಲಿ ಹೋಗುತ್ತಿದ್ದ ಯುವತಿಗೆ ಬ್ಯಾಡ್ ಆಗಿ ಮೈಮುಟ್ಟಿ ಕಿರುಕುಳ ನೀಡಿದ್ದಾನೆ. ಬೈಕ್ ಸವಾರನಿಂದ ನಡು ಬೀದಿಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನವೆಂಬರ್ 11 ರ ರಾತ್ರಿ ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪುಂಡನ ನೀತಿ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಇದೀಗ ಸೆರೆಯಾಗಿದೆ. ಘಟನೆ ನಡೆದ ಕೂಡಲೇ ಯುವತಿ ರಾಮಮೂರ್ತಿ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಕಾಮುಕ ಅರುಣ್ ಎನ್ನುವ ಆರೋಪಿಯನ್ನು ಕೂಡಲೆ ಅರೆಸ್ಟ್ ಮಾಡಿ ಪ್ರಕರಣವನ್ನು…
ಬೆಂಗಳೂರು : ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಬಿಹಾರ್ ಮೂಲದ ಚಾದರ್ ಗ್ಯಾಂಗ್ ಎಂದೆ ಖ್ಯಾತಿ ಪಡೆದಿದ್ದ ಸುಮಾರು 8 ಜನರ ಖದೀಮರ ಗ್ಯಾಂಗನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಇದೀಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ರಾಜಧಾನಿಯಲ್ಲಿ ಬಿಡು ಬಿಟ್ಟಿದ ಚಾದರ್ ಗ್ಯಾಂಗ್ ಅರೆಸ್ಟ್ ಆಗಿದೆ. ಬಿಹಾರ್ ಮೂಲದ ಚಾದರ್ ಗ್ಯಾಂಗ್ ಅನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಸುಮಾರು 8 ಜನರನ್ನು ಬೈಯಪ್ಪನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನವೆಂಬರ್ 21ರ ಮುಂಜಾನೆಯೇ ಮೊಬೈಲ್ ಅಂಗಡಿ ಒಂದನ್ನು ಖದೀಮರು ದೋಚಿದ್ದರು.ಬೈಯ್ಯಪನಹಳ್ಳಿಯ ಠಾಣಾ ವ್ಯಾಪ್ತಿಯ ಮೊಬೈಲ್ ಶಾಪ್ ನಲ್ಲಿ ಕಳ್ಳತನ ಮಾಡಿದ್ದರು. ಸುಮಾರು ಮುಂಜಾನೆ 5ಗಂಟೆಗೆ ಮೊಬೈಲ್ ಶಾಪ್ ಗೆ ನುಗ್ಗಿ 1.50 ಸಾವಿರ ನಗದು ಹಣ, 28 ಲಕ್ಷ ಮೌಲ್ಯದ ಸುಮಾರು 80 ಮೊಬೈಲ್ ಗಳನ್ನು ಸೇರಿದಂತೆ ಅನೇಕ ವಸ್ತುಗಳನ್ನು ಕಳ್ಳತನ ಮಾಡಿದ್ದರು. ಮೊಬೈಲ್ ಶಾಪ್ ಕಳ್ಳತನ ಕುರಿತಂತೆ ಮೊಬೈಲ್ ಮಾಲೀಕರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ಗ್ಯಾಂಗ್…
ಬೆಂಗಳೂರು : ಸಿಲಿಕಾನ್ ಸಿಟಿ ಎಂದರೆ ನೆನಪಾಗೋದು ಬರಿ ಟ್ರಾಫಿಕ್. ಆದರೆ ಸಿಲಿಕಾನ್ ಸಿಟಿಯ ಟ್ರಾಫಿಕ್ಗೆ ಇರುವ ಒಂದೇ ಒಂದು ಪರಿಹಾರವೆಂದರೆ ಅದು ನಮ್ಮ ಮೆಟ್ರೋ. ಇದೀಗ BMRCL ಬೆಂಗಳೂರು ಜನರಿಗೆ ಗುಡ್ ನ್ಯೂಸ್ ನೀಡಿದ್ದು, ಮುಂದಿನ ವರ್ಷದೊಳಗೆ 21 ಹೊಸ ರೈಲುಗಳು ಸೇರ್ಪಡೆಯಾಗಲಿದೆ. ಇನ್ನೂ ಹೊಸ ರೈಲುಗಳು ಕಾರ್ಯನಿರ್ವಹಿಸಲು ಪ್ರಾರಂಭಿಸಿದ ಬಳಿಕ ಪ್ರತಿ 3 ನಿಮಿಷಕ್ಕೆ ಒಂದರಂತೆ ರೈಲು ಸಂಚಾರ ಮಾಡಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ನಮ್ಮ ಮೆಟ್ರೋದಲ್ಲಿ ಈಗಾಗಲೇ 57 ಮೆಟ್ರೋ ರೈಲು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ ಪ್ರತಿನಿತ್ಯ 55 ರೈಲುಗಳು ಸಾರ್ವಜನಿಕ ಸೇವೆ ನೀಡುತ್ತಿದ್ದು, ಇನ್ನೂಳಿದ ಎರಡು ರೈಲುಗಳನ್ನು ತುರ್ತುಪರಿಸ್ಥಿತಿಗಾಗಿ ಉಳಿಸಿಕೊಳ್ಳಲಾಗಿದೆ. ಹಸಿರು ಮತ್ತು ನೇರಳೆ ಮೆಟ್ರೋ ಮಾರ್ಗದ ಟೆಂಡರ್ ಪ್ರಕ್ರಿಯೆ ಸಮಯದಲ್ಲಿ ಒಟ್ಟು 78 ರೈಲುಗಳನ್ನು ಒದಗಿಸುವಂತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಒಪ್ಪಂದದನ್ವಯ ಮುಂದಿನ ವರ್ಷದೊಳಗೆ 21 ಹೊಸ ರೈಲುಗಳು ನಮ್ಮ ಮೆಟ್ರೋಕ್ಕೆ ಸೇರ್ಪಡೆಯಾಗಲಿದೆ. ಅಲ್ಲದೇ ನಮ್ಮ ಮೆಟ್ರೋ ರೈಲು ಈಗಾಗಲೇ ಸರಿಸುಮಾರು 76 ಕಿ.ಮೀ. ಸೇವೆಯನ್ನು ನೀಡುತ್ತದೆ.…
ಹಾಸನ : ತನ್ನ ತಂದೆಯನ್ನು ಕೊಂದಿದ್ದಾನೆ ಎಂದು ಹದಿಮೂರು ವರ್ಷಗಳ ಸೇಡನ್ನು ಇಟ್ಟುಕೊಂಡು ವ್ಯಕ್ತಿ ಒಬ್ಬ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಯನ್ನು ಭೀಕರವಾಗಿ ಕೊಚ್ಚಿ, ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದಡದಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ತಂದೆಯನ್ನು ಕೊಂದು ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಯನ್ನು ವ್ಯಕ್ತಿಯೊಬ್ಬ ಭೀಕರವಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದಡದಹಳ್ಳಿಯಲ್ಲಿ ಘಟನೆ ನಡೆದಿದೆ.2011ರಲ್ಲಿ ಲಕ್ಕಪ್ಪ ಕೊಲೆ ಪ್ರಕರಣದಲ್ಲಿ ನಿರ್ವಾಣಪ್ಪ (77) ಎನ್ನುವ ಆರೋಪಿ ಜೈಲು ಸೇರಿದ್ದ. ಇತ್ತೀಚಿಗೆ ನಿರ್ವಾಣಪ್ಪ ಜೈಲಿನಿಂದ ಬಿಡುಗಡೆ ಆಗಿದ್ದ. ನಿನ್ನೆ ನಿರ್ವಾಣಪ್ಪನನ್ನು ಲಕ್ಕಪ್ಪನ ಪುತ್ರ ಮೂರ್ತಿ ಎನ್ನುವವನು ಕೊಚ್ಚಿ ಕೊಲೆ ಮಾಡಿದ್ದಾನೆ. ತಂದೆಯ ಹತ್ಯೆಯ ಸೇಡಿಗಾಗಿ 13 ವರ್ಷಗಳ ಬಳಿಕ ಆರೋಪಿಯನ್ನು ಕೊಲೆ ಮಾಡಿದ್ದಾನೆ. ಹತ್ಯೆಯ ಕುರಿತಂತೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಬೆಳಗಾವಿಯಿಂದ ಮೈಸೂರಿಗೆ ಪ್ರವಾಸಕ್ಕೆ ಎಂದು ಆಗಮಿಸಿದ್ದ, ಕೆ ಎಸ್ ಆರ್ ಟಿ ಸಿ ಬಸ್ ಒಂದು ನಿನ್ನೆ ಮೈಸೂರಿನಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಪರಿಣಾಮ 11 ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರದ ಶಾಂತಿನಿಕೇತನ ಶಾಲೆಯ ಮಕ್ಕಳು ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸ್ ತೆರಳುವಾಗ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ಮಕ್ಕಳನ್ನು ಕೆ.ಆರ್.ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಅಜಾಗರೂಕತೆಯಿಂದ ಡಿವೈಡರ್ಗೆ ಡಿಕ್ಕಿಯಾಗಿ ಬಸ್ ಮಗುಚಿ ಬಿದ್ದಿದೆ. ಬಸ್ನಲ್ಲಿದ್ದ 36 ಮಕ್ಕಳ ಪೈಕಿ 11 ಮಕ್ಕಳು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.
Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಡಿ.11 ರವರೆಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ ಬೆಂಗಳೂರು ನಗರದಲ್ಲಿ ಡಿಸೆಂಬರ್ 11ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ ಡಿಸೆಂಬರ್ 11 ರವರೆಗೆ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರದಲ್ಲಿ ಮೋಡ ಕವಿದ ವಾತಾವರಣವಿದೆ. ಡಿಸೆಂಬರ್ 3ರಿಂದ 11ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯು ಭಾರ ಕುಸಿತದ ಪರಿಣಾಮ, ಚೆನ್ನೈ, ನಾಗಪಟ್ಟಣ ಸೇರಿದಂತೆ ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಿದೆ. ತಮಿಳುನಾಡು, ಪುದುಚೇರಿ ಮತ್ತು ಆಂಧ್ರದಲ್ಲಿ ತೀವ್ರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ವೇಗವಾಗಿ ಬಂದಂತಹ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ಚಲಿಸುತ್ತಿದ್ದ ಇಬ್ಬರೂ ಸವಾರರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬಳಿ ನೆರಗನಹಳ್ಳಿ ಗೇಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಹೌದು ದೇವನಹಳ್ಳಿ ಬಳಿಯ ನೇರಗನಹಳ್ಳಿ ಗೇಟ್ ಬಳಿ ಬೈಕ್ ಮೇಲೆ ವೆಂಕಟೇಶ್ ಮತ್ತು ಮಹೇಶ್ ಎನ್ನುವ ಸವಾರರು ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದಂತಹ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನುಜ್ಗುಜ್ಜಾಗಿದ್ದು ಸ್ಥಳದಲ್ಲೇ ಬೈಕ್ ಸವಾರರಾದ ವೆಂಕಟೇಶ ಹಾಗೂ ಮಹೇಶ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಬೈಕ್ ಸಂಪೂರ್ಣವಾಗಿ ನುಜ್ಗುಜ್ಜಾಗಿದೆ. ಅಪಘಾತದ ನಂತರ ಕಾರನ್ನು ಅಲ್ಲಿಯೇ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಅಪಘಾತ ಕುರಿತು ಪ್ರಕರಣ…
ಬೆಂಗಳೂರು : ಅನರ್ಹರು ಬಿಪಿಎಲ್ ಕಾರ್ಡುಗಳನ್ನು ಪಡೆದಿದ್ದರಿಂದ ರಾಜ್ಯ ಸರ್ಕಾರ ಈ ಒಂದು ಬಿಪಿಎಲ್ ಕಾರ್ಡ್ ಪರಿಷ್ಕರಣೆಯಲ್ಲಿ ಅರ್ಹ ಫಲಾನುಭವಿಗಳ ಕಾರ್ಡುಗಳನ್ನು ಕೂಡ ರದ್ದು ಮಾಡಿತ್ತು. ಇದೀಗ ಸರ್ಕಾರ ಒಂದು ವಾರದಲ್ಲಿ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ಗಳನ್ನು ವಿತರಿಸುವ ಕಾರ್ಯ ಭರದಿಂದ ಸಾಗಿದ್ದು, ಡಿಸೆಂಬರ್ ನಿಂದ ಬಿಪಿಎಲ್ ಕಾರ್ಡ್ ದಾರರಿಗೆ ರೇಷನ್ ಸಿಗಲಿದೆ. ಇನ್ನು ಬಿಪಿಎಲ್ ಕಾರ್ಡ್ ಮರು ಸ್ಥಾಪನೆಗೆ ಈ ಹಿಂದೆ ನವೆಂಬರ್ 25 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ, ಎಪಿಎಲ್ ನಿಂದ ಬಿಪಿಎಲ್ಗೆ ಬದಲಾಯಿಸಲು ಅಧಿಕಾರಿಗಳಿಗೆ ಸಾಕಷ್ಟು ಕಾಲಾವಕಾಶ ಅಗತ್ಯವಿರುವ ಕಾರಣ ನವೆಂಬರ್ 28ರವರೆಗೆ ಅವಕಾಶ ನೀಡಲಾಗದೆ. ಈಗಾಗಲೇ ರಾಜ್ಯದಲ್ಲಿ ಶೇ 90 ರಷ್ಟು ಕಾರ್ಡ್ಗಳನ್ನು ಎಪಿಎಲ್ನಿಂದ ಬಿಪಿಎಲ್ ಮರುಸ್ಥಾಪನೆ ಮಾಡಲಾಗಿದೆ. ರಾಜಧಾನಿಯಲ್ಲಿ ಶೇ 95 ರಷ್ಟು ಬಿಪಿಎಲ್ ಕಾರ್ಡ್ ಮರುಸ್ಥಾಪನೆಯಾಗಿದೆ. ಉಳಿದ ಕಾರ್ಡ್ ಸರಿಪಡಿಸಲು ಇನ್ನೆರಡು ದಿನ ಕಾಲವಕಾಶ ಇದೆ. ರದ್ದಾದ ಎಲ್ಲ ಬಿಪಿಎಲ್ ಕಾರ್ಡ್ಗಳ ಮರು ಪರಶೀಲನೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಅಮಾನತಿನಲ್ಲಿಟ್ಟಿರುವ ಪಡಿತರ ಚೀಟಿಗಳ ಮರುಸ್ಥಾಪನೆ…
ಕಲಬುರ್ಗಿ : ಕಲ್ಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ 1ದಿನದ ನವಜಾತ ಶಿಶು ಒಂದು ನಾವು ನರ್ಸ್ ಎಂದು ಹೇಳಿ ಖತರ್ನಾಕ್ ಕಳ್ಳಿಯರು ಮಗುವನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲ್ಬುರ್ಗಿ ನಗರದ ಪೊಲೀಸರು ಕೇವಲ 48 ಗಂಟೆಗಳಲ್ಲಿ ನವಜಾತ ಶಿಶುವನ್ನು ಪತ್ತೆ ಹಚ್ಚಿ ತಾಯಿಯ ಮಡಿಲಿಗೆ ಸೇರಿಸಿದ್ದಾರೆ. ಹೌದು ಕಿಡ್ನಾಪಾದ 48 ಗಂಟೆಗಳಲ್ಲಿ ಶಿಶುವನ್ನು ಪತ್ತೆಹಚ್ಚಿದ ಪೊಲೀಸರು ನವಜಾತ ಶಿಶುವನ್ನು ರಕ್ಷಿಸಿ ತಾಯಿಗೆ ಹಸ್ತಾಂತರಿಸಿದ್ದಾರೆ. ಕಲ್ಬುರ್ಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪರಿಂದ ಇದೀಗ ನವಜಾತ ಶಿಶುವನ್ನು ತಾಯಿಗೆ ಹಸ್ತಾಂತರಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಚಿತ್ತಾಪುರ ಮೂಲದ ಕಸ್ತೂರಿ ಎನ್ನುವ ಮಹಿಳೆ ಜಿಮ್ಸ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ಈ ವೇಳೆ ನರ್ಸ್ ಅಂತ ಹೇಳಿ ಮಗುವಿಗೆ ಬ್ಲಡ್ ಚೆಕ್ ಅಪ್ ಮಾಡಬೇಕು ಎಂದು ಸಂಬಂಧಿಕರಿಂದ ಮಗುವನ್ನು ಪಡೆದು, ಬುರ್ಖಾ ಧರಿಸಿ ಮಗುವನ್ನು ಇಬ್ಬರು ಕಳ್ಳಿಯರು ಕಿಡ್ನ್ಯಾಪ್ ಮಾಡಿದ್ದರು. ಬಳಿಕ ಮಗುವನ್ನು ಖೈರಾನ್ ಎನ್ನುವವರಿಗೆ ಮಗುನು ಮಾರಾಟ ಮಾಡಿದ್ದರು. ಸಿಸಿಟಿವಿ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಇನ್ನೂ ಕೋರ್ಟ್ ನಲ್ಲಿದೆ. ಇದರ ಮಧ್ಯ ರಾಜ್ಯ ಭೋವಿ ನಿಗಮದಲ್ಲಿ ಕೂಡ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ನಿಗಮದಲ್ಲಿ ನಡೆದಂತಹ ಅಕ್ರಮ ಹಗರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಹಾಗೂ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗಳಿಸಿದ್ದು, ಇದೀಗ ಹಗರಣದ ಕಿಂಗ್ ಪಿನ್ ಗಳನ್ನು ಸಿಐಡಿ ಮತ್ತು ಎಸ್ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಹೌದು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ಮುಂದುವರೆಸಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ), ಆ ನಿಗಮದಿಂದ ಇತ್ತೀಚಿಗೆ ಆತ್ಮ ಹತ್ಯೆ ಮಾಡಿಕೊಂಡ ಉದ್ಯಮಿಗೆ ಸೇರಿದ್ದು ಎನ್ನಲಾದ ಕಂಪನಿ ಸೇರಿ ಒಟ್ಟು 5 ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂಪಾಯಿ ವರ್ಗಾವಣೆಯಾಗಿ ರುವುದನ್ನು ಪತ್ತೆ ಹಚ್ಚಿದೆ. ಇದೇ ಹಗರಣ ಸಂಬಂಧ ಸಿಐಡಿ ತನಿಖೆ ಎದುರಿಸಿದ್ದ ಉದ್ಯಮಿ ಜೀವಾ ಅವರು, 5 ದಿನಗಳ…











