Author: kannadanewsnow05

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಹೈಕೋರ್ಟ್ ಇದೀಗ ಜಾಮೀನು ನೀಡಿದೆ. ಹೌದು ರೇಣುಕಾ ಸ್ವಾಮಿ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಇದೀಗ ಜಾಮೀನು ನೀಡಿದೆ. ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಇದೀಗ ಹೈಕೋರ್ಟ್ ಜಾಮೀನು ನೀಡಿದೆ.ಕಳೆದ ಆರು ತಿಂಗಳಿನಿಂದ ನಡೆದ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿದ್ದರು. ಇತ್ತೀಚಿಗೆ ಬೆನ್ನು ನೋವಿನ ಸಮಸ್ಯೆ ತಿಳಿಸಿ, ಬಳ್ಳಾರಿ ಜಿಲ್ಲೆ ಬಿಡುಗಡೆಯಾಗಿದ್ದರು. ಇತ್ತೀಚಿಗೆ ನಡೆದ ಒಂದು ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಎಸ್ ಎಸ್ ವಿಶ್ವಶಿತ್ ಶೆಟ್ಟಿ ಅವರು ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

Read More

ಹೈದ್ರಾಬಾದ್ : ಸಂಧ್ಯಾ ಥಿಯೇಟರ್ ಬಳಿ ಪುಷ್ಪ 2 ಸಿನಿಮಾ ವೀಕ್ಷಣೆ ಮಾಡಲು ಬಂದಿದ್ದ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಒಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈದರಾಬಾದ್ ನ ಚಿಕ್ಕಡಪಲ್ಲಿಯಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಸೋಮವಾರದವರೆಗೆ ಸ್ಪಂದಿಸದಂತೆ ಅರ್ಜಿ ಸಲ್ಲಿಸಲಾಗಿದೆ. ಸದ್ಯ ಪೋಲೀಸರು ಅಲ್ಲು ಅರ್ಜುನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯಕೀಯ ಪರೀಕ್ಷೆ ನಡೆಯಲಿದೆ ಬಳಿಕ ಅಲ್ಲಿಂದ ನೇರವಾಗಿ ಕೋರ್ಟಿಗೆ ಪೊಲೀಸರು ಅವರನ್ನು ಹಾಜರುಪಡಿಸಲಿದ್ದಾರೆ.

Read More

ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಪುಷ್ಪ -2 ಸಿನಿಮಾ ರಿಲೀಸ್ ಆದ ದಿನದಂದು ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತಕ್ಕೆ ಮಹಿಳೆಯೊಬ್ಬರು ಸಾವನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಆದರೆ ಅರೆಸ್ಟ್ ಮಾಡುವ ವೇಳೆ ಅಲ್ಲು ಅರ್ಜುನ್ ನಿವಾಸದಲ್ಲಿ ಭಾರಿ ಹೈಡ್ರಾಮ ನಡೆದಿದೆ. ಹೌದು ನಟ ಅಲ್ಲು ಅರ್ಜುನ್ ಬಂಧನದ ವೇಳೆ ಹೈಡ್ರಾಮಾ ನಡೆಯಿತು ಹೈದರಾಬಾದ್ ನಲ್ಲಿರುವ ಅಲ್ಲು ಅರ್ಜುನ್ ಮಾಸದಲ್ಲಿ ಭಾರಿ ಹೈಡ್ರಾಮಾ ನಡೆದಿದೆ ಈ ವೇಳೆ ಪೊಲೀಸರು ಬೆಡ್ರೂಮ್ನಲ್ಲಿಯೇ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ ಬೆಳಗ್ಗೆ 11:45ಕ್ಕೆ ಪೊಲೀಸರು ಅಲ್ಲು ಅರ್ಜುನ್ ನಿವಾಸಕ್ಕೆ ಬಂದಿದ್ದರು ಮಧ್ಯಾಹ್ನ 12 ಗಂಟೆಗೆ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ. ಚಿಕ್ಕಡಪಲ್ಲಿ ಠಾಣೆ ಪೋಲಿಸರು ನಟ ಅಲ್ಲು ಅರ್ಜುನ್ ಅವರನ್ನು ಸದ್ಯ ಅರೆಸ್ಟ್ ಮಾಡಿದ್ದಾರೆ.ಅವರ ವಿರುದ್ಧ ಜಾಮೀನು ರಹಿತ ಕೆಎಸ್ ಕೂಡ ದಾಖಲಾಗಿದೆ ಈ ಒಂದು ಪ್ರಕರಣದಲ್ಲಿ 5 ರಿಂದ 10 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.…

Read More

ಹೈದ್ರಾಬಾದ್ : ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಈಗಾಗಲೇ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ಡಿಸೆಂಬರ್ 4 ರ ರಾತ್ರಿ ದುರಂತ ಘಟನೆ ನಡೆದಿದ್ದು, 35 ವರ್ಷದ ಮಹಿಳೆ ಪ್ರಾಣ ಕಳೆದುಕೊಂಡಿದ್ದರು. ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ನಗರ ಪೊಲೀಸರು ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತ ಮಂಡಳಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 105 ಮತ್ತು 118 (1) ಅಡಿಯಲ್ಲಿ ಚಿಕ್ಕಡ್ಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಭಾಗವಾಗಿ, ಹೈದರಾಬಾದ್ ಪೊಲೀಸರು ಚಿತ್ರಮಂದಿರದ ಸಹ ಮಾಲೀಕ, ಹಿರಿಯ ವ್ಯವಸ್ಥಾಪಕ ಮತ್ತು ಕೆಳಗಿನ ಬಾಲ್ಕನಿ ಉಸ್ತುವಾರಿ ಎಂಬ ಮೂವರು ವ್ಯಕ್ತಿಗಳನ್ನು ಬಂಧಿಸುವ ಬಗ್ಗೆ ಈ ಹಿಂದೆ ಘೋಷಿಸಿದ್ದರು. ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ ಬಳಿಕ, ಅಲ್ಲು ಅರ್ಜುನ್ ಅವರನ್ನು ಉಸ್ಮಾನಿ ಆಸ್ಪತ್ರೆಗೆ ಪೊಲೀಸರು ಕರೆದು ತಂದಿದ್ದಾರೆ.…

Read More

ಬೆಳಗಾವಿ : ಅರ್ಹ ಬಿಪಿಎಲ್ ಕಾರ್ಡ್ಗಳ ರದ್ದು ಮಾಡಿರುವ ವಿಚಾರವಾಗಿ ವಿಪಕ್ಷ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿತ್ತು. ತಕ್ಷಣ ಅರ್ಹರ ಬೀಪಲ್ ಕಾರ್ಡ್ ರದ್ದು ಮಾಡದೇ, ಅನರ್ಹರು ಹೊಂದಿದ್ದ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿಷ್ಕರಣೆ ಮಾಡಿತು. ಈ ವಿಚಾರವಾಗಿ ವಿಧಾನಸಭೆಯಲ್ಲಿ ಸರ್ಕಾರ ಯಾವುದೇ ಅರ್ಹ ಬಿಪಿಎಲ್​ ಕುಟುಂಬದವರ ಪಡಿತರ ಚೀಟಿ ರದ್ದು ಪಡಿಸಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಹೆಚ್​. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್​ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ 2017ರಲ್ಲಿ ಮಾನದಂಡಗಳನ್ನು ರೂಪಿಸಲಾಗಿದೆ. ಇದರ ಅನ್ವಯ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ನೌಕರರು ಬಿಪಿಎಲ್ ಕಾರ್ಡ ಪಡೆಯುವಂತಿಲ್ಲ. ಇದರೊಂದಿಗೆ ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ,…

Read More

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರು, ಎಫ್-4 ಸಂತೇಕಡೂರು ಎಫ್-8 ಗಣಿದಾಳು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಡಿ.14 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಅದೇ ರೀತಿ ಹೊಳಲೂರು 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.14 ಮತ್ತು 15 ರಂದು* ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊಳಲೂರು,…

Read More

ಹೈದ್ರಾಬಾದ್ : ಹೈದರಾಬಾದ್ ಥಿಯೇಟರ್ ಒಂದರಲ್ಲಿ ಪುಷ್ಪಾ 2 ಸಿನೆಮಾ ವೀಕ್ಷಣೆಯ ವೇಳೆ ಕಾಲ್ತುಳಿತಕ್ಕೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಹೈದರಾಬಾದ್ನ ಚಿಕ್ಕಡಪಲ್ಲಿ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಹೌದು ನಟ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್​ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More

ಬೆಂಗಳೂರು : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಗ್ಯ ಇಲಾಖೆಯು ಕಾನೂನು ಹೋರಾಟಕ್ಕೆ ಮುಂದಾಗಿದೆ. ಹೈ ಕೋರ್ಟ್ ನಲ್ಲಿ ಆರೋಗ್ಯ ಇಲಾಖೆ ಕೇಸ್ ದಾಖಲಿಸಿದ್ದು, ಪಶ್ಚಿಮ ಬಂಗಾಳದ ಫಾರ್ಮ ಕಂಪನಿಯ ಮೇಲೆ ಇದೀಗ ಕೇಸ್ ದಾಖಲಿಸಿದೆ. ಹೌದು ಕಂಪನಿಯ ಮೇಲೆ ಆರೋಗ್ಯ ಇಲಾಖೆಯು ಪ್ರಕರಣ ದಾಖಲಿಸಿದೆ. ಬಾಣಂತಿಯರ ಸಾವು ಪ್ರಕರಣದ ತನಿಖೆಯ ವೇಳೆ ಐ ವಿ ಫ್ಲೋಯೆಡ್ ನಲ್ಲಿ ಆಘಾತಕಾರಿ ಅಂಶ ಬಯಲಾಗಿತ್ತು. 9 ಬ್ಯಾಚ್ ಔಷಧಿ ಹಾಗಾಗಿ ಕ್ವಾಲಿಟಿ ಇಲ್ಲ ಎಂದು ವರದಿ ಬಯಲಾಗಿದೆ. ವರದಿಯನ್ನು ಆಧರಿಸಿ ಇದೀಗ ಆರೋಗ್ಯ ಇಲಾಖೆ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿದ್ದ ಪಶ್ಚಿಮ ಬಂಗಾಳದ ಫಾರ್ಮಾಸ್ಯುಟಿಕಲ್ಸ್ ಔಷಧ ಕಂಪನಿ ವಿರುದ್ಧ ಆರೋಗ್ಯ ಇಲಾಖೆ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದೆ. ಫಾರ್ಮಾಸ್ಯುಟಿಕಲ್ಸ್ ಔಷಧ ಕಂಪನಿ ಒಟ್ಟು 192 ಬ್ಯಾಚ್ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿತ್ತು. ಇದರಲ್ಲಿ 22 ಬ್ಯಾಚ್​ಗಳು ಉಪಯೋಗಕ್ಕೆ ಯೋಗ್ಯವಲ್ಲ ಎಂದು ಕರ್ನಾಟಕ ಔಷಧ…

Read More

ಬೆಳಗಾವಿ : ಇತ್ತೀಚಿಗೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣ ಬಾರಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಹಸಿವಿನಿಂದ ನವಜಾತ ಶಿಶುವನ್ನು ಸಾವನ್ನಪ್ಪಿದೆ. ಇದರ ಬೆನ್ನಲ್ಲೇ ಬಾಣಂತಿ ಹಾಗೂ ಆಕೆಯ ಅತ್ತೆ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ನವಜಾತ ಶಿಶುವನ್ನು ಬಿಟ್ಟು ಪರಾರಿಯಾದ ತಾಯಿಯನ್ನು ಬಿಬಿಜಾನ್ ಸದ್ದಾಂ ಸಯ್ಯದ್ (28) ಸೇರಿದ್ದ ನವಜಾತ ಶಿಶು ಎಂದು ತಿಳಿದುಬಂದಿದೆ.ಕಳೆದ ಡಿಸೆಂಬರ್ ‌8 ರಂದು ಮಧ್ಯಾಹ್ನ ‌12ಕ್ಕೆ ಅತ್ತೆ ಜೊತೆಗೆ ಬಂದ ಗರ್ಭಿಣಿ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ರಾತ್ರಿ 9.30 ಕ್ಕೆ ಬೆಳಗಾವಿ ‌ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ಅವಧಿ ಪೂರ್ವ ಹೆರಿಗೆ ಹಿನ್ನೆಲೆಯಲ್ಲಿ ಮಗು ಒಂದೂವರೆ ಕೆಜಿ ತೂಕ ಇತ್ತು. ತೂಕ ಕಡಿಮೆ ಆಗಿರುವ ಕಾರಣಕ್ಕೆ ವೈದ್ಯರು ಮಗುವನ್ನು ‌ಎನ್‌ಐಸಿಯುಗೆ ದಾಖಲಿಸಿ‌ ಚಿಕಿತ್ಸೆ ನೀಡುತ್ತಿದ್ದರು. ಈ ಸಂದರ್ಭದಲ್ಲಿ ತಾಯಿಯದವಳು ಶಿಶು ಎನ್‌ಐಸಿಯುಗೆ ಶಿಫ್ಟ್ ‌ಮಾಡಿದ ಬಳಿಕ ಆರೈಕೆ…

Read More

ಬೆಳಗಾವಿ : ಇತ್ತೀಚಿಗೆ ಪಿಎಸ್ಐ ಹುದ್ದೆಗಳಿಗೆ ಪರೀಕ್ಷೆ ನಡೆದಿದ್ದು, ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ವಿಳಂಬವಾಗಿರುವ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಪಿಎಸ್ಐ ಆಯ್ಕೆಯಾದವರಿಗೆ ನೇಮಕಾತಿ ಪತ್ರ ವಿಳಂಬವಾಗಿರುವ ವಿಚಾರವಾಗಿ ಅಧಿವೇಶನದ ಬಳಿಕ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗುತ್ತದೆ ಎಂದು ತಿಳಿಸಿದರು. ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 565 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಹಗರಣ ನಡೆದಿತ್ತು. ಮರು ಪರೀಕ್ಷೆ ಮಾಡಿ ಈಗ ವೆರಿಫಿಕೇಶನ್ ಮಾಡಲಾಗುತ್ತಿದೆ.ಅಧಿವೇಶನದ ಬಳಿಕ ಆಯ್ಕೆಯಾದವರಿಗೆ ಆದೇಶ ಪತ್ರ ನೀಡುತ್ತೇವೆ. ಅಲ್ಲದೇ ಹೊಸದಾಗಿ ಇನ್ನು 402 ಪಿ.ಎಸ್.ಐ ನೇಮಕಾತಿಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Read More